ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ನಿಧನ

ಸುದ್ದಿಗಳು News

Posted by vidyamaana on 2024-07-08 11:07:30 | Last Updated by Vidyamaana on 2024-07-08 11:07:30

Share: | | | | |


ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ನಿಧನ

ಮಂಗಳೂರು(ಇಟ್ಟಿಕುಳಂ): ಉಳ್ಳಾಲ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಜಳ್ ನಿಧನರಾಗಿದ್ದಾರೆ. ಕಣ್ಣೂರಿನ ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿಯಾಗಿದ್ದ ಇವರು ಕೂರ ತಂಜಳ್ ಎಂದೇ ಪ್ರಸಿದ್ದರಾಗಿದ್ದರು. ಅಲ್ಪಕಾಲದಿಂದ ಅನಾರೋಗ್ಯದಿಂದಿದ್ದ ಅವರು ಇಂದು ಬೆಳಿಗ್ಗೆ ನಿಧರಾಗಿದ್ದಾರೆ.

ಮೃತರು ಪತ್ನಿ ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಇಂದು ರಾತ್ರಿ 9

ಗಂಟೆ ವೇಳೆಗೆ ಕೂರ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ. ಸುಲ್ತಾನುಲ್ ಉಲಮಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ಇಂದು ಸಂಜೆ 5 ಗಂಟೆಗೆ ಕೂರ ಮಸೀದಿಯಲ್ಲಿ ನಡೆಯಲಿರುವ ಜನಾಝಾನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಪುತ್ತೂರು : ಕೆಮ್ಮಾಯಿ ಬಳಿ ಬೈಕ್ ಅಪಘಾತ

Posted by Vidyamaana on 2023-07-23 15:25:03 |

Share: | | | | |


ಪುತ್ತೂರು : ಕೆಮ್ಮಾಯಿ ಬಳಿ ಬೈಕ್ ಅಪಘಾತ

ಪುತ್ತೂರು : ಬೈಕ್ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.


ಸೇಡಿಯಾಪು ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಮೃತ ಬೈಕ್ ಸವಾರ.ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ಬೈಕ್ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.


ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಪುರುಷರಕಟ್ಟೆ: ಕೆ ಎಸ್‌ ಆರ್ ಟಿ ಸಿ- ಬೈಕ್ ಡಿಕ್ಕಿ ಬೈಕ್‌ ಸವಾರ ಮೋಕ್ಷಿತ್ ಗೌಡ ಮೃತ್ಯು

Posted by Vidyamaana on 2024-05-15 09:52:02 |

Share: | | | | |


ಪುರುಷರಕಟ್ಟೆ: ಕೆ ಎಸ್‌ ಆರ್ ಟಿ ಸಿ- ಬೈಕ್ ಡಿಕ್ಕಿ  ಬೈಕ್‌ ಸವಾರ ಮೋಕ್ಷಿತ್ ಗೌಡ ಮೃತ್ಯು

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 15ರಂದು ನಡೆದಿದೆ. 

ಪಂಚೆ ಧರಿಸಿ, ಹ್ಯುಬ್ಲೋಟ್ ವಾಚ್ ಕಟ್ಟಿಕೊಂಡವರು ರಾಜ್ಯದಲ್ಲಿ ಬೇರೆ ಯಾರಿದ್ದಾರೆ..? ಸಿದ್ದರಾಮಯ್ಯ ಬಗ್ಗೆ ಬಿಜೆಪಿ ಟೀಕೆ

Posted by Vidyamaana on 2023-09-10 21:47:53 |

Share: | | | | |


ಪಂಚೆ ಧರಿಸಿ, ಹ್ಯುಬ್ಲೋಟ್ ವಾಚ್ ಕಟ್ಟಿಕೊಂಡವರು ರಾಜ್ಯದಲ್ಲಿ ಬೇರೆ ಯಾರಿದ್ದಾರೆ..? ಸಿದ್ದರಾಮಯ್ಯ ಬಗ್ಗೆ ಬಿಜೆಪಿ ಟೀಕೆ

ಬೆಂಗಳೂರು : ಒಂದೆಡೆ ಬಿ.ಕೆ.​ಹ​ರಿ​ಪ್ರ​ಸಾದ್‌ ನಿರಂತರ ಟೀಕೆ ಮಾಡುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ಮೌನವಾಗಿದ್ದಾರೆ. ಅವರೆಲ್ಲಿಯೂ ನನ್ನ ಹೆಸರು ಹೇಳಿ ಟೀಕೆ ಮಾಡಿಲ್ಲ. ಹೀಗಾಗಿ ಅವರ ಹೇಳಿ​ಕೆಗೆ ನಾನು ಪ್ರತಿಕ್ರಿಯೆ ನೀಡಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಈ ರೀತಿಯ ಹೇಳಿಕೆಯನ್ನೇ ಮುಂದಿಟ್ಟು ರಾಜ್ಯ ಬಿಜೆಪಿ ಟೀಕೆ ಮಾಡಿದೆ.


ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, ರಾಜ್ಯದ ಕಾಂಗ್ರೆಸ್  ಸರ್ಕಾರದಲ್ಲಿ ಒಳಜಗಳ ನಿರಂತರವಾಗಿದೆ. "ಅಹಿಂದ" ಹೆಸರಿನಲ್ಲಿ ಕೇವಲ ಒಂದೆರೆಡು ಸಮುದಾಯದವರನ್ನಷ್ಟೇ ಓಲೈಸುತ್ತಾ, ಉಳಿದೆಲ್ಲಾ ಸಮುದಾಯಗಳಿಗೂ ಅನ್ಯಾಯವೆಸಗುವ ಸಿದ್ದರಾಮಯ್ಯ ಅವರ ನೈಜ ರಾಜಕಾರಣವನ್ನು ಅವರದೇ ಪಕ್ಷದ ನಾಯಕರು ಬಹಿರಂಗಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಆಡಳಿತ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ಹರಿಪ್ರಸಾದ್‌ರಿಂದ ಹೊರಬಂದ ಸತ್ಯಗಳೇ ಸಾಕ್ಷಿ ಎಂದು ಹೇಳಿದೆ.



"ಜಟ್ಟಿ ಜಾರಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ" ಎಂಬ ಗಾದೆ ಮಾತಿದೆ. ಅದು ನಿಮಗೆ ಸರಿಯಾಗಿ ಹೊಂದುತ್ತದೆ ಸಿದ್ದರಾಮಯ್ಯ ಅವರೇ. ಹರಿಪ್ರಸಾದ್ ನನ್ನ ಹೆಸರೇ ಹೇಳಿಲ್ಲ ಎಂದು ಉದ್ಧಟತನದ ಹೇಳಿಕೆ ನೀಡುತ್ತೀರಿ. ಹಾಗಾದರೆ, ಪಂಚೆ ಧರಿಸಿ, ದುಬಾರಿ ಹ್ಯುಬ್ಲೋಟ್ ವಾಚ್ ಕಟ್ಟಿಕೊಂಡವರು ರಾಜ್ಯದಲ್ಲಿ ಬೇರೆ ಯಾರಾದರೂ ಇದ್ದಾರಾ..? ಕೊರಟಗೆರೆಯಲ್ಲಿ ಪರಮೇಶ್ವರ್‌ ಅವರನ್ನು ಸೋಲಿಸಿದ್ದು ಯಾರು ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಎಂಬ ಉತ್ತರವನ್ನು ಕೊರಟಗೆರೆಯ ಚಿಕ್ಕ ಬಾಲಕನೂ ನೀಡುತ್ತಾನೆ.


ದೇವರಾಜ ಅರಸು ಬಳಸುತ್ತಿದ್ದ ಕಾರಿನಲ್ಲಿ ಜಾಲಿ ರೈಡ್‌ಗೆ ಹೋಗಿದ್ದು ರಾಹುಲ್ ಗಾಂಧಿಯವರಾ..? ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವವರು ನೀವೇ ತಾನೇ..? ವಂದಿಮಾಗದರು, ಆಸ್ಥಾನ ಕಲಾವಿದರಿಂದ ಸ್ವಯಂಘೋಷಿತ ಸ"ಮಜಾವಾದಿ" ಎಂಬ ಬಿರುದು ಪಡೆದವರು ನೀವೇ ತಾನೇ..? ಬಿ.ಕೆ. ಹರಿಪ್ರಸಾದ್‌ರವರು ಸಿದ್ದರಾಮಯ್ಯರವರನ್ನೇ ಉದ್ದೇಶಿಸಿ ಮಾತನಾಡಿದ್ದು ಎಂಬುದಕ್ಕೆ ಇನ್ನೆಷ್ಟು ಸಾಕ್ಷಿ ಬೇಕು ಎಂದು ಪ್ರಶ್ನಿಸಿದೆ

ಯುವ ಕ್ರಿಕೆಟಿಗ ಮಂಜು ನಾಯ್ಕಾಪು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!!! ಎದೆ ಮೇಲೆ ಬ್ಯಾಟ್ ಇಟ್ಟು ಚಿತೆಗೆ ಅಗ್ನಿಸ್ಪರ್ಶ!!

Posted by Vidyamaana on 2024-06-09 11:35:00 |

Share: | | | | |


ಯುವ ಕ್ರಿಕೆಟಿಗ ಮಂಜು ನಾಯ್ಕಾಪು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!!! ಎದೆ ಮೇಲೆ ಬ್ಯಾಟ್ ಇಟ್ಟು ಚಿತೆಗೆ ಅಗ್ನಿಸ್ಪರ್ಶ!!

ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಉತ್ತಮ ಕ್ರಿಕೆಟ್ ಆಟಗಾರ ಎಂದೇ ಗುರುತಿಸಿಕೊಂಡಿದ್ದ, ಕುಂಬ್ಳೆಯ ನಾಯ್ಕಾಪು ನಿವಾಸಿ ಮಂಜು (24 ವ.) ಶನಿವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಕಂಡುಬಂದಿದ್ದಾರೆ.

ದುಬಾರಿ ವಿಮಾನ ಖರೀದಿಸಿ ಬಾಲಿವುಡ್‌ಗೆ ತಮ್ಮ ಖದರ್ ತೋರಿದ ದಕ್ಷಿಣದ ಭಾರತದ ನಟಿ

Posted by Vidyamaana on 2023-10-09 16:37:03 |

Share: | | | | |


ದುಬಾರಿ ವಿಮಾನ ಖರೀದಿಸಿ ಬಾಲಿವುಡ್‌ಗೆ ತಮ್ಮ ಖದರ್ ತೋರಿದ ದಕ್ಷಿಣದ ಭಾರತದ ನಟಿ

ದಕ್ಷಿಣ ಭಾರತದ ಪ್ರಮುಖ ನಟಿಯರಲ್ಲಿ ನಯನತಾರಾ ಕೂಡಾ ಒಬ್ಬರು. ಇವರನ್ನು ಅಭಿಮಾನಿಗಳು ಲೇಡಿ ಸೂಪರ್‌ ಸ್ಟಾರ್ ಅಂತಲೂ ಕರೆಯುತ್ತಾರೆ. ಇತ್ತೀಚೆಗೆ ಇವರು ಪ್ರೈವೇಟ್ ಜೆಟ್ ಖರೀದಿಸಿದ್ದಾರೆ ಎನ್ನಲಾಗಿದೆ. ಬಾಲುವುಡ್‌ನಲ್ಲಿಯೇ ಕಲವೇ ಮಂದಿ ಮಾತ್ರ ಪ್ರೈವೇಟ್ ಜೆಟ್ ಹೊಂದಿದ್ದಾರೆ. ಇದೀಗ ದಕ್ಷಿಣ ಭಾರತದಲ್ಲಿ ಪ್ರೈವೇಟ್ ಜೆಟ್ ಖರೀದಿಸಿ ನಯನ್ ಸುದ್ದಿಯಾಗಿದ್ದಾರೆ.


ಇತ್ತೀಚೆಗೆ ಅವರು ಬಾಲಿವುಡ್ ನಟ ಶಾರುಖ್ ಖಾನ್ ಅವರ ಜವಾನ್ ಚಿತ್ರದಲ್ಲಿ ನಟಿಸಿ ಮಿಂಚಿದ್ದರು. ಈ ಸಿನಿಮಾ ಅದ್ದೂರಿ ಯಶಸ್ಸನ್ನು ಕಂಡಿದೆ. ಈಗ ಬಾಲಿವುಡ್‌ನಲ್ಲೂ ಸಖತ್ ಸದ್ದು ಮಾಡುತ್ತಿರುವ ಅವರು, ದಕ್ಷಿಣದಲ್ಲಿ ದುಬಾರಿ ನಟಿಯೂ ಹೌದು. ಹಾಗಾಗಿ ತಮ್ಮ ಸ್ಟಾರ್‌ಡಂಗೆ ತಕ್ಕಂತೆ ಪ್ರೈವೇಟ್ ಜೆಟ್ ಖರೀದಿಸಿದ್ದಾರೆ ಎಂದು ಚರ್ಚಿಸಲಾಗುತ್ತಿದೆ. ಸದ್ಯ ಖರೀದಿಸಿರುವ ಖಾಸಗಿ ಜೆಟ್‌ನ ಮೌಲ್ಯ 50 ಕೋಟಿ ರೂ. ಎಂದು ತಿಳಿದುಬಂದಿದೆ.ಮಾಹಿತಿಯ ಪ್ರಕಾರ ಬಾಲಿವುಡ್ ನಟಿಯರಾದ ಶಿಲ್ಪಾ ಶೆಟ್ಟಿ, ಪ್ರಿಯಾಂಕಾ ಚೋಪ್ರಾ ಮತ್ತು ಮಾಧುರಿ ದೀಕ್ಷಿತ್ ಸೇರಿದಂತೆ ಇತರ ಕೆಲವೇ ನಟಿಯರು ಖಾಸಗಿ ಜೆಟ್‌ಗಳನ್ನು ಹೊಂದಿದ್ದಾರೆ. ಈಗ ಆ ಬಾಲಿವುಡ್ ನಟಿಯರ ಸಾಲಿಗೆ ನಯನತಾರಾ ಅವರು ಸೇರಿಕೊಂಡಿದ್ದಾರೆ. ಜೊತೆಗೆ ನಯನತಾರಾ ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಖಾಸಗಿ ಜೆಟ್ ಅನ್ನು ಹೊಂದಿರುವ ಏಕೈಕ ನಟಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.ಪ್ರೈವೇಟ್ ಜೆಟ್‌ ಅನ್ನು ನಯನತಾರಾ-ವಿಘ್ನೇಶ್ ಶಿವನ್ ದಂಪತಿ ಖರೀದಿಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ, ವಿಘ್ನೇಶ್ ಶಿವನ್ ಮತ್ತು ನಯನತಾರಾ ಬಿಳಿ-ನೀಲಿ ಜೆಟ್‌ನಿಂದ ಹೊರಬರುವ ಚಿತ್ರಗಳು ಮತ್ತು ವೀಡಿಯೊ ವೈರಲ್ ಆಗಿವೆ. ಜೆಟ್‌ ಒಳಭಾಗವು ಸಂಪೂರ್ಣವಾಗಿ ಐಷಾರಾಮಿಯಾಗಿ ಕಾಣುತ್ತಿದ್ದು, ಕ್ಯಾಬಿನ್ ಒಳಗೆ ಒರಗಿಕೊಳ್ಳುವ ಮತ್ತು ಮಸಾಜ್ ಸೌಲಭ್ಯಗಳೊಂದಿಗೆ ಐಷಾರಾಮಿ ಆಸನಗಳಿವೆ.ಇವುಗಳ ಹೊರತಾಗಿ ಹೆಚ್ಚುವರಿ ಪ್ರಯಾಣಿಕರು ಬಂದರೆ ಅವರಿಗೂ ಆಸನದ ವ್ಯವಸ್ಥೆ ಮಾಡಬಹುದು. ಶೌಚಾಲಯ ಮತ್ತು ಕೈ ತೊಳೆಯುವ ಬೇಸಿನ್‌ಗಳನ್ನು ಪ್ರತ್ಯೇಕವಾಗಿ ಒದಗಿಸಲಾಗಿದೆ. ವಿಶ್ರಾಂತಿಗಾಗಿ ಮಲಗುವ ಕೋಣೆ ಕೂಡ ಇದೆ. ಇವಿಷ್ಟೆ ಅಲ್ಲದೇ ಪ್ರಯಾಣದ ವೇಳೆ ವಿಮಾನದಲ್ಲಿ ಅವರಿಗೆ ಸೇವೆ ಒದಗಿಸಲು ಗಗನ ಸಖಿಯರನ್ನು ಕೂಡ ನೇಮಿಸಿಕೊಳ್ಳಬಹುದಂತೆ.


ಜವಾನ್ ಯಶಸ್ಸಿನ ಖುಷಿಯಲ್ಲಿ ನಯನತಾರಾ: ಸದ್ಯ ನಟಿ ನಯನತಾರಾ ಜವಾನ್ ಹಿಟ್ ಖುಷಿಯಲ್ಲಿದ್ದಾರೆ. ಬಾಲಿವುಡ್‌ನ ಪ್ರಮುಖ ನಟ ಶಾರುಖ್ ಖಾನ್ ಅವರೊಂದಿಗೆ ಜವಾನ್ ಚಿತ್ರದಲ್ಲಿ ನಟಿಸುವ ಮೂಲಕ ಹಿಂದಿ ಚಿತ್ರರಂಗದಲ್ಲೂ ಕಮಾಲ್ ಮಾಡಿದ್ದಾರೆ. ಜವಾನ್ ಸಿನಿಮಾ ಇದುವರೆಗೆ ರೂ. 1000 ಕೋಟಿ ಗಳಿಸಿದೆ ಎನ್ನಲಾಗಿದೆ.ನಟಿ ನಯನತಾರಾ ಹುಟ್ಟಿದ್ದು ಕೇರಳದಲ್ಲಾದರೂ ಅವರನ್ನು ಚಿತ್ರರಂಗದಲ್ಲಿ ಉತ್ತುಂಗಕ್ಕೇರಿಸಿದವರು ತಮಿಳು ಅಭಿಮಾನಿಗಳು. ಅದರ ನಂತರ, ಅವರು ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ನಟಿಸಿ ಮಿಂಚಿದ್ದಾರೆ. ನಮ್ಮ ರಿಯಲ್ ಸ್ಟಾರ್ ಉಪೇಂದ್ರ ಅವರೊಂದಿಗೆ ಸೂಪರ್ ಸಿನಿಮಾ ಮಾಡಿ ಸ್ಯಾಂಡಲ್‌ವುಡ್‌ನಲ್ಲೂ ಗುರ್ತಿಸಿಕೊಂಡಿರುವ ಅವರು, ಸದ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಸಿನಿಮಾಗಳನ್ನು ಕಡಿಮೆ ಮಾಡಿದ್ದಾರೆ.ಐಷಾರಾಮಿ ಕಾರುಗಳ ಒಡತಿ: ನಟಿ ನಯನತಾರಾ 1.76 ಕೋಟಿ ರೂ. ಮೌಲ್ಯದ ಬಿಎಂಡಬ್ಲ್ಯು 7 ಸಿರೀಸ್ ಕಾರು ಹೊಂದಿದ್ದಾರೆ. ಹಾಗೆಯೇ 1 ಕೋಟಿ ರೂ. ಮೌಲ್ಯದ ಮರ್ಸಿಡಿಸ್ ಜಿಎಲ್‌ಎಸ್ 350 ಟಿ ಮತ್ತು ಬಿಎಂಡಬ್ಲ್ಯು 5 ಸಿರೀಸ್ ಸೇರಿದಂತೆ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಸದ್ಯ, ನಟಿ ನಯನತಾರಾ ತಮ್ಮ ಪತಿ ವಿಘ್ನೇಶ್ ಶಿವನ್ ಅವರೊಂದಿಗೆ 50 ಕೋಟಿ ರೂ. ಮೌಲ್ಯದ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿದೆ

ಮರದಿಂದ ಬಿದ್ದು ನೈತಾಡಿ ನಿವಾಸಿ ಖಲಂದ‌ರ್ ಮೃತ್ಯು

Posted by Vidyamaana on 2024-06-05 19:03:54 |

Share: | | | | |


ಮರದಿಂದ ಬಿದ್ದು ನೈತಾಡಿ ನಿವಾಸಿ ಖಲಂದ‌ರ್ ಮೃತ್ಯು

ಪುತ್ತೂರು: ಮೂಲತಃ ನೈತಾಡಿಯವರಾಗಿದ್ದು, ಪ್ರಸ್ತುತ ಕೆಮ್ಮಿಂಜೆಯಲ್ಲಿ ವಾಸವಿರುವ ಖಲಂದ‌ರ್ ಎಂಬವರು ಮರದಿಂದ ಬಿದ್ದು ಜೂನ್ 05 ರಂದು ನಿಧಾನರಾದರು



Leave a Comment: