ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಇಂದು ಮಹತ್ವಾಕಾಂಕ್ಷಿ ವಿಶ್ವಕರ್ಮ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ; ಏನಿದು ಸ್ಕೀಮ್.? ಯಾರಿಗೆ ಲಾಭ.? ಡಿಟೈಲ್ಸ್ ಇಲ್ಲಿದೆ

Posted by Vidyamaana on 2023-09-17 08:19:37 |

Share: | | | | |


ಇಂದು ಮಹತ್ವಾಕಾಂಕ್ಷಿ ವಿಶ್ವಕರ್ಮ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ; ಏನಿದು ಸ್ಕೀಮ್.? ಯಾರಿಗೆ ಲಾಭ.? ಡಿಟೈಲ್ಸ್ ಇಲ್ಲಿದೆ

ನವದೆಹಲಿ : ದೇಶದ ಬಡ ಮತ್ತು ಮಧ್ಯಮ ವರ್ಗದ ಜನರ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಗಾಗಿ ಕೇಂದ್ರ ಸರ್ಕಾರ ಮತ್ತೊಂದು ಯೋಜನೆಯನ್ನ ತರಲಿದೆ. ಆಗಸ್ಟ್ 15ರಂದು ಭಾರತದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವ್ರು ಕೆಂಪು ಕೋಟೆಯಲ್ಲಿ ಘೋಷಿಸಿದ ವಿಶ್ವಕರ್ಮ ಯೋಜನೆಗೆ ಇಂದು (ಸೆಪ್ಟೆಂಬರ್ 17) ಚಾಲನೆ ನೀಡಲಿದ್ದಾರೆ.ಇಂದು ವಿಶ್ವಕರ್ಮ ಜಯಂತಿಯಿದ್ದು, ಇದೇ ದಿನ ಕೇಂದ್ರ ಸರ್ಕಾರ ಈ ಹೊಸ ಯೋಜನೆ ತರುತ್ತಿದೆ. ಅಂದ್ಹಾಗೆ, ಇಂದು ಪ್ರಧಾನಿ ನರೇಂದ್ರ ಮೋದಿ ಜನ್ಮದಿನವು ಕೂಡ ಅನ್ನೋದು ಗಮನಾರ್ಹ.

Read more...

ವಿಶ್ವಕರ್ಮ ಮಹೋತ್ಸವ ವೈಭವದ ವಿಶ್ವಕರ್ಮ ವಾಹನ ಮೆರವಣಿಗೆ

https://vidyamaana.com/news/vishwakarma-mahotsava-grand-Vishwakarma-vehicle-procession

30 ಲಕ್ಷ ಕುಟುಂಬಗಳಿಗೆ ಲಾಭ.

ವಿಶ್ವಕರ್ಮ ಯೋಜನೆ ಆನ್‌ಲೈನ್‌ನಲ್ಲಿ ಅರ್ಜಿ : ವಿಶ್ವಕರ್ಮ ಯೋಜನೆ ಮೂಲಕ ಕೇಂದ್ರ ಸರ್ಕಾರ ಸಾಂಪ್ರದಾಯಿಕ ಕರಕುಶಲ ವಸ್ತುಗಳನ್ನ ಉತ್ತೇಜಿಸಲು ಆರ್ಥಿಕ ನೆರವು ನೀಡುತ್ತದೆ. ಸರಳ ಷರತ್ತುಗಳೊಂದಿಗೆ ಅರ್ಹ ಕರಕುಶಲಕರ್ಮಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಕೇಂದ್ರದ ಪ್ರಕಾರ ವಿಶ್ವಕರ್ಮ ಯೋಜನೆಯಿಂದ ಸುಮಾರು 30 ಲಕ್ಷ ಕುಟುಂಬಗಳು ಪ್ರಯೋಜನ ಪಡೆಯಲಿವೆ.2 ಲಕ್ಷದವರೆಗಿನ ಸಾಲ.!

ವಿಶ್ವಕರ್ಮ ಯೋಜನೆ ಪ್ರಯೋಜನಗಳು : ಪ್ರಮಾಣಪತ್ರ ಮತ್ತು ಗುರುತಿನ ಚೀಟಿಗಳ ಆಧಾರದ ಮೇಲೆ, ಆಯಾ ವರ್ಗಗಳಿಂದ ವಿಶ್ವಕರ್ಮ ಯೋಜನೆಗೆ ಅರ್ಹ ವ್ಯಕ್ತಿಗಳನ್ನ ಗುರುತಿಸಲಾಗುತ್ತದೆ. ಮೊದಲ ಕಂತಿನಲ್ಲಿ ಶೇ.5ರ ಸಬ್ಸಿಡಿ ಬಡ್ಡಿಯೊಂದಿಗೆ 1 ಲಕ್ಷ ರೂಪಾಯಿ ಸಾಲದ ನೆರವು ಮಂಜೂರು ಮಾಡಲಾಗುವುದು. ಬಳಿಕ ಎರಡನೇ ಕಂತಿನಲ್ಲಿ 2 ಲಕ್ಷ ರೂಪಾಯಿ ಸಾಲ ನೀಡಲಾಗುತ್ತದೆ. ಕುಶಲಕರ್ಮಿಗಳು ತಮ್ಮ ಕೌಶಲ್ಯ, ಟೂಲ್ಕಿಟ್ ಪ್ರೋತ್ಸಾಹ, ಡಿಜಿಟಲ್ ವಹಿವಾಟು ಮತ್ತು ಮಾರ್ಕೆಟಿಂಗ್ ನವೀಕರಿಸಲು ಈ ಸಾಲಗಳನ್ನ ಮಂಜೂರು ಮಾಡಲಾಗಿದೆ.


ದಿನಕ್ಕೆ 500 ರೂಪಾಯಿಯೊಂದಿಗೆ ತರಬೇತಿ..!

ವಿಶ್ವಕರ್ಮ ಯೋಜನೆ ಮೂಲಕ ಎರಡು ರೀತಿಯ ಕೌಶಲ್ಯ ಕಾರ್ಯಕ್ರಮಗಳಿವೆ. ಬೇಸಿಕ್ ಮತ್ತು ಅಡ್ವಾನ್ಸ್ಡ್ ಇವೆ. ತರಬೇತಿ ಪಡೆಯುತ್ತಿರುವಾಗ ಫಲಾನುಭವಿಗಳಿಗೆ ಕೇಂದ್ರವು ದಿನಕ್ಕೆ 500 ರೂಪಾಯಿ ಸ್ಟೈಫಂಡ್ ನೀಡುತ್ತದೆ. ಇದು ಸುಧಾರಿತ ಉಪಕರಣಗಳನ್ನ ಖರೀದಿಸಲು ಹಣಕಾಸಿನ ನೆರವು ನೀಡುತ್ತದೆ.


ಅಗತ್ಯ ದಾಖಲೆಗಳು.!

ಆಧಾರ್ ಕಾರ್ಡ್, ಗುರುತಿನ ಚೀಟಿ, ವಿಳಾಸ ದಾಖಲೆ, ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಪಾಸ್‌ಬುಕ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಅಗತ್ಯವಿದೆ.


ವಿಶ್ವಕರ್ಮ ಯೋಜನೆ ಅರ್ಹತೆ.!

ಬಡಿಗೇರರು, ದೋಣಿ ತಯಾರಕರು, ಆಯುಧ ತಯಾರಕರು, ಕಮ್ಮಾರರು, ಕಬ್ಬಿಣದ ಉಪಕರಣ ತಯಾರಕರು, ಬೀಗದ ಕೆಲಸಗಾರರು, ಅಕ್ಕಸಾಲಿಗರು, ಕುಂಬಾರರು (ಮಡಕೆ ತಯಾರಕರು), ವಿಗ್ರಹ ತಯಾರಕರು (ಮೂರ್ತಿಕರ್, ಕಲ್ಲು ಕೆತ್ತುವವರು, ಕಲ್ಲು ಒಡೆಯುವವರು), ಚರ್ಮಕಾರರು (ಶೂ ತಯಾರಕರು), ಮೇಸ್ತ್ರಿಗಳು, ಬುಟ್ಟಿ/ ಚಾಪೆ/ಬ್ರೂಮ್ ತಯಾರಕರು/ಲಿನಿನ್ ತಯಾರಕರು, ಸಾಂಪ್ರದಾಯಿಕ ಆಟಿಕೆ ತಯಾರಕರು, ಕ್ಷೌರಿಕರು, ಹೂವಿನ ಹಾರ ತಯಾರಕರು, ಟ್ಯಾನರ್‌ಗಳು, ಟೈಲರ್ಗಳು, ಮೀನು ಬಲೆ ತಯಾರಕರು ಅರ್ಹರು.


ವಿಶ್ವಕರ್ಮ ಯೋಜನೆಗೆ ಮೋದಿ ಚಾಲನೆ : ಇತ್ತೀಚೆಗಷ್ಟೇ ಕೇಂದ್ರ ಕ್ಯಾಬಿನೆಟ್ ಕೂಡ ಈ ಯೋಜನೆಗೆ ಒಪ್ಪಿಗೆ ಸೂಚಿಸಿದ್ದು, ಕೇಂದ್ರದಿಂದ 15 ಸಾವಿರ ಕೋಟಿ ಮಂಜೂರು ಮಾಡಿದೆ. ಸಾಂಪ್ರದಾಯಿಕ ಕರಕುಶಲ ಕೌಶಲ್ಯಗಳನ್ನ ಉತ್ತೇಜಿಸುವ ಗುರಿಯನ್ನ ಕೇಂದ್ರ ಸರ್ಕಾರ ಹೊಂದಿದೆ. ಅದಕ್ಕಾಗಿಯೇ ಈ ಯೋಜನೆಯನ್ನ ಪರಿಚಯಿಸಲಾಗುತ್ತಿದೆ. ವಿಶ್ವಕರ್ಮ ಜಯಂತಿಯಂದು ಪ್ರಧಾನಿ ಮೋದಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. 70 ಕ್ಷೇತ್ರಗಳ 70 ಸಚಿವರು ಇದರಲ್ಲಿ ಭಾಗವಹಿಸಲಿದ್ದಾರೆ.

ನಿಧನ : ಭಾಗೀರಥಿ ರೈ

Posted by Vidyamaana on 2024-07-17 14:33:50 |

Share: | | | | |


ನಿಧನ : ಭಾಗೀರಥಿ ರೈ

ಬಡಗನ್ನೂರು : ಬಡಗನ್ನೂರು ಗ್ರಾಮದ ಕೆಳಗಿನ ಪೇರಾಲು ನಿವಾಸಿ ಕಿನ್ನಿಮಜಲುಗುತ್ತು ಭಾಗೀರಥಿ ರೈ (90) ಜು.17 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಉಡುಪಿ ಹತ್ಯೆ ಪ್ರಕರಣ: ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ

Posted by Vidyamaana on 2023-11-16 17:52:07 |

Share: | | | | |


ಉಡುಪಿ ಹತ್ಯೆ ಪ್ರಕರಣ: ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ

ಉಡುಪಿ:  ಮಾತ್ರವಲ್ಲ ಇಡೀ ರಾಜ್ಯವೇ ಬೆಚ್ಚಿಬೀಳಿಸಿದ ಘಟನೆಯೇ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ, ನೇಜಾರು ಕುಟುಂಬದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ರೋಚಕ ಮಾಹಿತಿಗಳು ಹೊರಬಿದ್ದಿವೆ. ಇದರ ಬೆನ್ನಲ್ಲೇ ಆರೋಪಿಯನ್ನು ಸ್ಥಳ ಮಹಜರು ಮಾಡಲು ಹತ್ಯೆಗೈದ ಮನೆಗೆ ಕರೆತಂದಿದ್ದಾರೆ. ಬೆಳಗ್ಗೆಯಿಂದಲೇ ಘಟನಾ ಸ್ಥಳದಲ್ಲಿ ಜನ ಜಮಾಯಿಸಿದ್ದು, 11.30 ಗಂಟೆಗೆ ಆರೋಪಿಯನ್ನು ಸ್ಥಳ ಮಹಜರು ಸ್ಥಳಕ್ಕೆ ಬರುವುದಾಗಿ ಹೇಳಲಾಗಿತ್ತು. ಆದರೆ ಸಂಜೆ 4.30 ಕ್ಕೆ ಆರೋಪಿಯನ್ನು ಕರೆತರಲಾಗಿತ್ತು. ಈ ಎಲ್ಲಾ ಪ್ರಕ್ರಿಯೆ ನಡೆಯುವ ಸಂದರ್ಭ ಹಸೀನಾ ಅವರ ಪತಿ ಕುಸಿದು ಬಿದ್ದಿರುವ ಘಟನೆ ಕೂಡಾ ನಡೆಯಿತು. ಬೆಳಗ್ಗಿನಿಂದಲೇ ಜನ ಆರೋಪಿಯನ್ನು ನೋಡಲು ನಿಂತಿದ್ದರು.


ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್‌ ಚೌಗಲೆ ವಿಚಾರಣೆಯ ಸಂದರ್ಭ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್‌ ತಿಳಿಸಿದ್ದಾರೆ.


ಈ ಹತ್ಯೆ ಪ್ರಕರಣದ ತನಿಖೆಸಂಬಂಧಿಸಿದಂತೆ ಆರೋಪಿಯನ್ನು ಸ್ಥಳ ಮಹಜರು ಮಾಡಲು ಕರೆತಂದ ಸಂದರ್ಭ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ಆರೋಪಿ ಪ್ರವೀಣ್‌ ಚೌಗಲೆಯನ್ನು ಪೊಲೀಸರು ಬಿಗಿ ಬಂದೋ ಬಸ್ತ್ ನಲ್ಲಿ ಕಪ್ಪು ವಸ್ತ್ರದಲ್ಲಿ ಮುಖ ಕಾಣದಂತೆ ಹತ್ಯೆಗೈದ ಮನೆಗೆ ಕರೆತಂದಿದ್ದಾರೆ. ಪೊಲೀಸರು ಆರೋಪಿಯನ್ನು ಮಹಜರು ಮಾಡಲು ಕರೆತಂದ ಸಂದರ್ಭ ಆತನನ್ನು ನೋಡಲು ಜನರು ಕಿಕ್ಕಿರಿದು ತುಂಬಿದ್ದರು. ಘಟನಾ ಸ್ಥಳದಲ್ಲಿ ಸುಮಾರು 400 ಕ್ಕೂ ಅಧಿಕ ಜನ ಸೇರಿದ್ದರು.




ಆರೋಪಿಯನ್ನು ಮನೆಗೆ ಕರೆದೊಯ್ಯುತ್ತಿದ್ದ ಸಂದರ್ಭ ಕೆಲವರು ಬ್ಯಾರಿಕೇಡ್ ದಾಟಿ ಆರೋಪಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಈ ಸಂದರ್ಭ ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ.ಈ ಸಂದರ್ಭ ಸ್ಥಳೀಯರು ಪೊಲೀಸ್ ಸಿಬ್ಬಂದಿಗಳಲ್ಲಿ ಬೇಡಿಕೆಯಿಟ್ಟಿದ್ದು, ಕೇವಲ ಎರಡು ನಿಮಿಷಗಳ ಕಾಲ ಆರೋಪಿಯನ್ನು ತಮಗೆ ಒಪ್ಪಿಸುವಂತೆ ಮನವಿ ಮಾಡಿದ್ದಾರೆ. ಇದಲ್ಲದೆ, ಈ ಕೃತ್ಯ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ ಕ್ಷಿಪ್ರ ನ್ಯಾಯ ಒದಗಿಸುವಂತೆ ಪ್ರತಿಭಟನೆ ಕೂಡ ನಡೆಸಿದ್ದಾರೆ.

ಫೆ 20 : ಎಸ್‍.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾರ್ಯಕರ್ತರ ಸಮಾವೇಶ

Posted by Vidyamaana on 2024-02-19 21:35:05 |

Share: | | | | |


ಫೆ 20 : ಎಸ್‍.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾರ್ಯಕರ್ತರ ಸಮಾವೇಶ

ಪುತ್ತೂರು: ಎಸ್‍.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾರ್ಯಕರ್ತರ ಸಮಾವೇಶ ಫೆ.20 ರಂದು ಸಂಜೆ 7 ಗಂಟೆಗೆ ಪುತ್ತೂರು ಲಯನ್ಸ್ ಕ್ಲಬ್‍ ಸಭಾಂಗಣದಲ್ಲಿ ನಡೆಯಲಿದೆ ಎಂದು ಎಸ್‌. ಡಿ. ಪಿ. ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಬ್ರಾಹಿಂ ಸಾಗ‌ರ್ ತಿಳಿಸಿದ್ದಾರೆ.


ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸಕ್ತ ದೇಶದಲ್ಲಿ ಸಂವಿಧಾನ ವಿರೋಧಿ ಆಡಳಿತದಿಂದಾಗಿ ಪ್ರಜಾಪ್ರಭುತ್ವವು ಅಪಾಯದತ್ತ ಸಾಗುತ್ತಿರುವುದಲ್ಲದೆ ಪ್ರಸಕ್ತ ರಾಜ್ಯ ಸರಕಾರವು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಸಮಾಜದಲ್ಲಿ ತಾರತಮ್ಯ ನೀತಿಯನ್ನು ಅನುಸರಿಸುತ್ತಾ ಬರುತ್ತಿದ್ದು ಪಕ್ಷದ ಕಾರ್ಯಕರ್ತರನ್ನು ಹಾಗೂ ದೇಶದ ಬಹು ಸಮಾಜವನ್ನು ಎಚ್ಚರಗೊಳಿಸುವ ನಿಟ್ಟಿನಲ್ಲಿ ಈ ಸಮಾವೇಶ ನಡೆಯಲಿದೆ ಎಂದು ತಿಳಿಸಿದ ಅವರು, ಸೋಶಿಯಲ್ ಡೆಮಾಕ್ರಟಿಕ್ ಪಕ್ಷ ಕಾರ್ಯಕರ್ತರಿಗೆ ದೇಶದ ಪ್ರಸಕ್ತ ರಾಜಕೀಯತೆಯನ್ನು ತಿಳಿಸುವ ಕಾರ್ಯ ಮಾಡಲಿದೆ. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಪರಂಗಿಪೇಟೆ,  ರಾಜ್ಯ ಮತ್ತು ಜಿಲ್ಲಾ ಮುಖಂಡರುಗಳು ಸಮಾವೇಶದಲ್ಲಿ ಬಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವೂ ನಡೆಯಲಿದೆ ಎಂದು ಹೇಳಿದರು.


ದ.ಕ.ಜಿಲ್ಲೆ ಸೇರಿದಂತೆ ದೇಶದ 60 ಕಡೆಗಳಲ್ಲಿ ಪಕ್ಷದಿಂದ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಫೆ.27 ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಕಾಣಬೇಕು.


ಎಸ್‌. ಡಿ. ಪಿ. ಐ. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ ಮಾತನಾಡಿ, ಹಸಿವು ಮುಕ್ತ ಮತ್ತು ಭಯ ಮುಕ್ತ ರಾಷ್ಟ್ರ ಎಂಬ ಘೋಷಣೆಯೊಂದಿಗೆ ಪಕ್ಷವು ಎಲ್ಲಾ ಜಾತಿ ಧರ್ಮಗಳಲ್ಲಿ ಏಕತೆಯನ್ನು ಮೂಡಿಸುವ ಕೆಲಸ ಮಾಡುತ್ತಿದೆ. ಈ ದೇಶ ಬರೀ ಹಿಂದೂ ದೇಶವೆಂಬ ಕಲ್ಪನೆಯಲ್ಲಿ ಆಡಳಿತ ನಡೆಯುತ್ತಿರುವಾಗ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೇವಲ ಒಂದು ಜಾತಿ, ಧರ್ಮವನ್ನು ಸೀಮಿತವಾಗದೆ ಬಸವಣ್ಣ, ಅಂಬೆಡ್ಕ‌ರ್, ನಾರಾಯಣ ಗುರುಗಳ ಕಲ್ಪಣೆಯನ್ನು ಮುಂದಿಟ್ಟು ದೇಶದಲ್ಲಿ ಸೌಹಾರ್ದತೆಯನ್ನು ಕಂಡುಕೊಳ್ಳಬೇಕು ಎಂದರು.


ಪತ್ರಿಕಾಗೋಷ್ಟಿಯಲ್ಲಿ ಎಸ್‌. ಡಿ. ಪಿ. ಐ. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಉಸ್ಮಾನ್ ಎ.ಕೆ ಉಪಸ್ಥಿತರಿದ್ದರು.

ಪುತ್ತೂರಿನಲ್ಲಿ ಯುವತಿಯ ಕೊಲೆ ಪ್ರಕರಣ

Posted by Vidyamaana on 2023-08-24 13:18:04 |

Share: | | | | |


ಪುತ್ತೂರಿನಲ್ಲಿ ಯುವತಿಯ ಕೊಲೆ ಪ್ರಕರಣ

ಪುತ್ತೂರು: ಪುತ್ತೂರಿನಲ್ಲಿ ಯುವತಿಯೋರ್ವಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಕೃತ್ಯ ನಡೆದ ಒಂದೂವರೆಗಂಟೆಯೊಳಗೆ ಬಂಧಿಸಿರುವುದು ಶ್ಲಾಘನೀಯವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಪ್ರತಿಕ್ರಿಯಿಸಿದ್ದಾರೆ.

ಪುತ್ತೂರು ನಗರದಲ್ಲಿ ಹಾಡುಹಗಲೇ ನಡೆಯಬಾರದ ಘಟನೆ ನಡೆದಿರುವುದು ಅತ್ಯಂತ ದುಖದ ವಿಚಾರವಾಗಿದೆ. ಇಂಥಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚರದಿಂದ ಇರಬೇಕಾಗುತ್ತದೆ. ತಮ್ಮ ಮಗಳನ್ನು ಕಳೆದುಕೊಂಡ ಕುಟುಂಬಕ್ಕೆ ನಾನು ಸಾಂತ್ವನವನ್ನು ಹೇಳುತ್ತಿದ್ದೇನೆ. ಪುತ್ತೂರು ಸೇರಿದಂತೆ ಜಿಲ್ಲೆಯ ಯಾವುದೇ ಭಾಗದಲ್ಲಿ ಅಪರಾಧ ಚಟವಟಿಕೆ ನಡೆಯದಂತೆ ಪೊಲೀಸ್ ಇಲಾಖೆ ಸದಾ ಎಚ್ಚರದಿಂದ ಇದ್ದರೂ ಈ ಕೃತ್ಯ ನಡೆದಿದೆ. ಆರೋಪಿಯನ್ನು ಬಂಧಿಸುವಲ್ಲಿ ಮುತುವರ್ಜಿವಹಿಸಿದ ಜಿಲ್ಲಾ ಎಸ್ ಪಿ ಸಿ ಬಿ ರಿಷ್ಯಂತ್ ಹಾಗೂ ಡಿವೈಎಸ್‌ಪಿ ಗಾಣಾ ಪಿ ಕುಮಾರ್ ಹಾಗೂ ಪೊಲೀಸ್ ಇಲಾಖೆಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ ಎಂದು ಶಾಸಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳ ಯಶಸ್ವಿಗೆ ಸಹಕರಿಸಿದವರಿಗೆ ಅಭಿನಂದನೆ - ಸನ್ಮಾನ

Posted by Vidyamaana on 2024-02-12 07:37:54 |

Share: | | | | |


ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳ ಯಶಸ್ವಿಗೆ ಸಹಕರಿಸಿದವರಿಗೆ ಅಭಿನಂದನೆ - ಸನ್ಮಾನ

ಪುತ್ತೂರು : ಇತಿಹಾಸ ಪ್ರಸಿದ್ಧ 31ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಅತ್ಯಂತ ಯಶಸ್ವಿಗೊಳ್ಳಲು ಸಹಕರಿಸಿದ ಎಲ್ಲಾ ಸದಸ್ಯರಿಗೆ, ತನು ಮನ ಧನ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಾಗೂ ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಪದಾಧಿಕಾರಿಗಳಾಗಿದ್ದು ಇತ್ತೀಚೆಗೆ ವಿವಿಧ ಹುದ್ದೆಗಳನ್ನು ಪಡೆದವರನ್ನು ಸನ್ಮಾನಿಸುವ ಕಾರ್ಯಕ್ರಮವು ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ರವರ ನೇತೃತ್ವದಲ್ಲಿ ಫೆ. 10 ರಂದು ದರ್ಬೆಯಲ್ಲಿ ನಡೆಯಿತು.


ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಅವರು ಮಾತನಾಡಿ, ಪುತ್ತೂರಿನಲ್ಲಿ ಈ ಹಿಂದೆ ನಡೆದ ಪಿಲಿರಂಗ್, ಕಬಡ್ಡಿ ಸ್ಪರ್ಧೆ ಹಾಗೂ 31ನೇ ವರ್ಷದ ಜೋಡುಕರೆ ಕಂಬಳವು ಅತ್ಯಂತ ಯಶಸ್ವಿಗೊಂಡು ಎಲ್ಲಾ ಕಡೆ ಹೆಸರುಗಳಿಸಿದೆ ಇದಕ್ಕೆ ಕಾರಣೀ ಭೂತರಾದ ಹಾಗೂ ಹಗಲು ರಾತ್ರಿ ಎನ್ನದೆ ಶ್ರಮವಹಿಸಿದ ಎಲ್ಲಾ ಸದಸ್ಯರಿಗೆ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು. ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಪದಾಧಿಕಾರಿಗಳಾಗಿದ್ದು, ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ನೇಮಕಗೊಂಡ ನಿರಂಜನ ರೈ ಮಠಂತಬೆಟ್ಟು,ಕೃಷ್ಣಪ್ರಸಾದ್ ಆಳ್ವ, ಆರ್ಯಾಪು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಸುರೇಂದ್ರ ರೈ ಬಳ್ಳ ಮಜಲು ನಿರ್ದೇಶಕರಾಗಿ ಆಯ್ಕೆಗೊಂಡ ರಂಜಿತ್ ಬಂಗೇರ, ಪುತ್ತೂರು ನಗರಸಭಾ ಸದಸ್ಯರಾಗಿ ಆಯ್ಕೆಗೊಂಡ ದಿನೇಶ್ ಶೇವಿರೆ ಪುತ್ತೂರು ಕೋಟಿ ಚೆನ್ನಯ ಕಂಬಳವು ಅತ್ಯಂತ ಯಶಸ್ವಿಯಾಗಿ ನೆರವೇರಲು ಅದರ ನೇತೃತ್ವವನ್ನು ವಹಿಸಿಕೊಂಡ ಚಂದ್ರಹಾಸ ಶೆಟ್ಟಿ ಹಾಗೂ ಅವರ ಟೀಮ್‌ಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಪುತ್ತೂರಿನ ಮಾಜಿ ಶಾಸಕರಾದ ಶಕುಂತಳಾ ಟಿ ಶೆಟ್ಟಿ ಅವರು ಶಾಲು ಹೊದಿಸಿ ಸನ್ಮಾನಿಸಿದರು.ಬಳಿಕ ಮಾತನಾಡಿದ ಅವರು ಪುತ್ತೂರು ಕಂಬಳವನ್ನು ನಡೆಸಿಕೊಂಡು ಬಂದ ವಿನಯ್ ಕುಮಾರ್ ಸೊರಕೆ ಅವರು ಉಡುಪಿಯಲ್ಲಿ ಎಂ.ಪಿ. ಆದರೂ ನಾನು ಕಾಂಗ್ರೆಸ್ಸಿಗೆ ಬಂದು ಎಂಎಲ್‌ಎ ಆದೆ. ಅಶೋಕ್ ರೈ ರವರು ಪುತ್ತೂರು ಕಂಬಳಕ್ಕೆ ಸೇರಿಕೊಂಡ ಬಳಿಕ ಶಾಸಕರಾದರು ಅದೇ ರೀತಿ ಕಂಬಳದಲ್ಲಿ ತೊಡಗಿಸಿಕೊಂಡರವರಿಗೆ ಒಂದಲ್ಲ ಒಂದು ರೀತಿಯಲ್ಲಿ ಸ್ಥಾನಮಾನ ದೊರಕುತ್ತಲೇ ಬರಲಿದೆ ಎಂದು ಹೇಳಿದರು. ಸನ್ಮಾನ ಕಾರ್ಯಕ್ರಮದ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ.ವಿ.ಖಜಾಂಜಿ ಪಂಜಿಗುಡ್ಡೆ ಈಶ್ವರಭಟ್ ಉಪಾಧ್ಯಕ್ಷ ಶಿವರಾಮ ಆಳ್ವ ಬಳ್ಳಮಜಲು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೊರ್ಮಂಡ ಉಪಸಿತರಿದ್ದರು.

Recent News


Leave a Comment: