ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಮುಕ್ರಂಪಾಡಿ: ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆ

Posted by Vidyamaana on 2024-05-11 20:03:17 |

Share: | | | | |


ಮುಕ್ರಂಪಾಡಿ: ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆ

ಪುತ್ತೂರು: ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆಯು ಅಧ್ಯಕ್ಷರಾದ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು.

ಕಾಲೇಜಿಗೆ ಈ ಬಾರಿ ಪಿಯು ಪರೀಕ್ಷೆಯಲ್ಲಿ ಶೇ. ೧೦೦ ಪಲಿತಾಂಶ ಬಂದಿದ್ದು ಇದಕ್ಕಾಗಿ ಶಿಕ್ಷಕ ವೃಂದವನ್ನು , ಅಭಿವೃದ್ದಿ ಸಮಿತಿಯವರನ್ನು ಶಾಸಕರು ಅಭಿನಂದಿಸಿದರು. ಕಾಲೇಜಿನಲ್ಲಿ ಮೂಲಭೂತ ಸೌಕರ್ಯದ ಕೊರತೆ ಇರುವ ಬಗ್ಗೆ ಪ್ರಾಂಶುಪಾಲರು ಶಾಸಕರ ಗಮನಕ್ಕೆ ತಂದರು.

ಮೇ 12: ಮೈಸೂರಲ್ಲಿ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ 11ನೇ ಶಾಖೆ ಉದ್ಘಾಟನೆ

Posted by Vidyamaana on 2024-05-11 22:08:40 |

Share: | | | | |


ಮೇ 12: ಮೈಸೂರಲ್ಲಿ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ 11ನೇ ಶಾಖೆ ಉದ್ಘಾಟನೆ

ಮೈಸೂರು: ಸುಲ್ತಾನ್ ಗೋಲ್ಡ್ ಅಂಡ್ ಡೈಮಂಡ್ ಸಂಸ್ಥೆಯು ತನ್ನ 11ನೇ ಶಾಖೆಯನ್ನು ನಗರದ ಮೀನಾ ಬಜಾರ್ ವೃತ್ತದ ಸಮೀಪ ಸಂತ ಫಿಲೋಮಿನಾ ಚರ್ಚ್ ರಸ್ತೆಯಲ್ಲಿ ತೆರೆಯುತ್ತಿದ್ದು, ಮೇ 12ರಂದು ಬಾಲಿವುಡ್ ನಟಿ ರವೀನಾ ಟಂಡನ್ ಅವರು ಮಳಿಗೆ ಉದ್ಘಾಟಿಸಲಿದ್ದಾರೆ.

ಶಾಸಕರಾದ ತನ್ನೀರ್ ಸೇರ್, ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ಸಂತ ಫಿಲೋಮಿನಾ ಚರ್ಚ್‌ನ ಧರ್ಮದರ್ಶಿ ಸ್ಪ್ಯಾನಿ ಅಡಾ, ಮಿಸ್ ಇಂಡಿಯಾ ಯುನಿವರ್ಸ್ ಖ್ಯಾತಿಯ ಡಾ.ಹೇಮಾಮಾಲಿನಿ ಲಕ್ಷ್ಮಣ್, ವೆಲ್ವಿನ್ ಇಂಡಸ್ಟ್ರೀಸ್‌ನ ಗೌರ್ ನಾಜ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ನೂತನ ಮಳಿಗೆಯ ಉದ್ಘಾಟನೆಯ ಅಂಗವಾಗಿ ಮೇ 31ರವರೆಗೆ ಪ್ರತಿದಿನ

ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು

Posted by Vidyamaana on 2023-06-09 02:59:27 |

Share: | | | | |


ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು

ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ. ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್ (23) ಮೃತ ದುರ್ದೈವಿ.

ಕಾರ್ತಿಕ್ ಬೈಲೂರಿನಿಂದ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಕಾರ್ತಿಕ್ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ. ಮೃತದೇಹವನ್ನು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಕಟೀಲು ದೇವಳದ ಮುಂಭಾಗ ಹೊತ್ತಿ ಉರಿದ ಬಸ್

Posted by Vidyamaana on 2023-05-17 10:52:40 |

Share: | | | | |


ಕಟೀಲು ದೇವಳದ ಮುಂಭಾಗ ಹೊತ್ತಿ ಉರಿದ ಬಸ್

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಳದ ಮುಂಭಾಗದಲ್ಲಿ  ಬಸ್ ಹೊತ್ತಿ ಉರಿದ ಘಟನೆ ಬುಧವಾರ ಮಧ್ಯಾಹ್ನ ವರದಿಯಾಗಿದೆ.

ಬೆಂಕಿಗೆ ಆಹುತಿಯಾದ ಬಸ್ ಎಂಆರ್‌ಪಿಯಲ್ ಗೆ ಸೇರಿದ್ದು ಎನ್ನಲಾಗಿದೆ. ಇದು ಕಟೀಲು ದೇವಸ್ಥಾನದ ಮುಂಭಾಗವಾಗಿ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಬಸ್ಸಿನಲ್ಲಿ ನಡೆದ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.


ಅಹ್ಮದಾಬಾದ್‌ನಲ್ಲಿ ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

Posted by Vidyamaana on 2024-05-07 11:48:08 |

Share: | | | | |


ಅಹ್ಮದಾಬಾದ್‌ನಲ್ಲಿ ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 3ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಗಾಂಧಿನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಹಮದಾಬಾದ್ನಲ್ಲಿ ಮತದಾನ ಮಾಡಿದರು

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ನಿಂದ ೨೦೨೨-೨೩ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ

Posted by Vidyamaana on 2022-12-15 10:02:15 |

Share: | | | | |


ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ನಿಂದ ೨೦೨೨-೨೩ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ

    ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಲೋಕಸೇವೆಯ ಮೂಲಕ ರಾಷ್ಟç ನಿರ್ಮಾಣದ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಅನುಭವವನ್ನು ನೀಡುವುದು ಹಾಗೂ ಇದರೊಂದಿಗೆ ರಾಷ್ಟ್ರಪ್ರೇಮ ಮತ್ತು ಸೇವಾ ಭಾವನೆಗಳನ್ನು ಬೆಳೆಸುವ ಗುರಿಯನ್ನು ಅದು ಹೊಂದಿದೆ. ವಿದ್ಯಾರ್ಥಿಗಳ ಬದುಕಿಗೊಂದು ಸ್ಪಷ್ಟ ಸ್ವರೂಪವನ್ನು ನೀಡುವ ಜೊತೆಗೆ ವಿದ್ಯಾರ್ಥಿಗಳ ವ್ಯಕ್ತಿತ್ವವು ಎನ್ಎಸ್ಎಸ್ನಿಂದ ಅಭಿವೃದ್ಧಿಯಾಗುತ್ತದೆ ಎಂದು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರಿಪ್ರಸಾದ್ ಎಸ್ ಹೇಳಿದರು.


ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ೨೦೨೨-೨೩ರ ಕಾರ್ಯಾಚಟುವಟಿಕೆಗಳಿಗೆ ಚಾಲನೆ ನೀಡಿ, ಯಶಸ್ವಿ ಜೀವನಕ್ಕೆ ದಾರಿದೀಪವಾಗಿ ರಾಷ್ಟ್ರೀಯ ಸೇವಾ ಯೋಜನೆ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು.


ವಿದ್ಯಾರ್ಥಿಗಳು ಹೇಗೆ ತಮ್ಮ ಜೀವನವನ್ನು ರೂಪಿಸಬೇಕೆಂದು ಬದುಕಲು ಕಲಿಸುವ ಗರಡಿಮನೆಯಾಗಿ ಇಂದು ಎನ್ಎಸ್ಎಸ್ ಕಾರ್ಯ ನಿರ್ವಹಿಸುತ್ತಿದೆ. ಎನ್ಎಸ್ಎಸ್ ಘಟಕಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ನಾಯಕತ್ವಗುಣ, ಸಾಮಾಜಿಕ ಪ್ರಜ್ಞೆಯನ್ನು ಬೆಳೆಸುವ ಮೂಲಕ ಉತ್ತಮ ಪ್ರಜೆಯನ್ನು ರೂಪಿಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ ಎಂದರು.


ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಎ.ಪಿ. ಮಾತನಾಡಿ, ಕಲಿಕಾ ಸಮಯದಲ್ಲಿ ವಿದ್ಯಾರ್ಥಿಯು ಪಠ್ಯೇತರ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಕೊಂಡು ಅಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ಆತನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎನ್ನುವುದಕ್ಕೆ ಜೀವಂತ ನಿದರ್ಶನವೇ ಎನ್.ಎಸ್.ಎಸ್. ನನಗಲ್ಲ ನಿನಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಸೇವೆಯ ಮೂಲಕ ಶಿಕ್ಷಣ - ಶಿಕ್ಷಣದ ಮೂಲಕ ಸೇವೆ ಎಂಬ ಮೂಲಮಂತ್ರವನ್ನು ಎನ್.ಎಸ್.ಎಸ್. ಹೊಂದಿದೆ ಎಂದ ಅವರು ಎನ್ಎಸ್ಎಸ್ ಘಟಕದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಸೂಚಿಸಿದರು.


ಇದೇ ವೇಳೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ `ಸೇವಾಬಿಂಬ ಬಿತ್ತಿಪತ್ರಿಕೆಯ ಈ ಶೈಕ್ಷಣಿಕ ವರ್ಷದ ಮೊದಲ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಲಕ್ಷ್ಮೀಕಾಂತ ಎ ಪ್ರಾಸ್ತವಿಕವಾಗಿ ಮಾತನಾಡಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ಧ್ಯೇಯ ಹಾಗೂ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.


ನಂತರ ಎನ್.ಎಸ್.ಎಸ್ ಸ್ವಯಂಸೇವಕರಿಗೆ "ಎನ್.ಎಸ್.ಎಸ್ ಸ್ವಯಂಸೇವಕರ ಕರ್ತವ್ಯಗಳು ಮತ್ತು ಅವಕಾಶಗಳು" ಎಂಬ ವಿಷಯದ ಕುರಿತು ವಿಶೇಷ ಕಾರ್ಯಾಗಾರ ನಡೆಯಿತು. ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಹರಿಪ್ರಸಾದ್ ಎಸ್ ಹಾಗೂ ಬಿಕಾಂ ವಿದ್ಯಾರ್ಥಿ ಸಾರ್ಥಕ್ ಟಿ ಕಾರ್ಯಾಗಾರ ನಡೆಸಿದರು. ಎನ್ಎಸ್ಎಸ್ ಸ್ವಯಂಸೇವಕರಾದ ಅಭಿಜಿತ್ ವಿಭಾಸ್ ಸ್ವಾಗತಿಸಿ, ಎನ್ಎಸ್ಎಸ್ ಘಟಕದ ನಾಯಕಿ ವೃಂದಾ ಭಂಡಾರಿ ವಂದಿಸಿದರು. ಕಾರ್ಯಕ್ರಮವನ್ನು ಸ್ವಯಂಸೇವಕರಾದ ನವನೀತ್ ಡಿ.ಕೆ ಹಾಗೂ ನೇಮಿಕಾ ಸಾಂತ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಬೋಧಕ- ಬೋಧಕೇತರ ಸಿಬ್ಬಂದಿಗಳು ಹಾಗೂ ಎನ್ಎಸ್ಎಸ್ ಸ್ವಯಂಸೇವಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Recent News


Leave a Comment: