Posted by vidyamaana on 2024-07-24 10:52:54 |
ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.
ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
Posted by Vidyamaana on 2024-06-21 22:57:59 |
ಪುತ್ತೂರು: ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ಮಹಲ್ ನ ಫ್ಯಾನ್ಸಿ ಅಂಗಡಿಯೊಂದರಲ್ಲಿ ಶುಕ್ರವಾರ ರಾತ್ರಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ.
ಪೃಥ್ವಿ ಮಹಲ್ ನಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
Posted by Vidyamaana on 2024-06-15 20:09:54 |
ಪುತ್ತೂರು:- ಶೈಕ್ಷಣಿಕ ಅಭಿವೃದ್ಧಿಗಾಗಿ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುವ ಇ ಫೌಂಡೇಶನ್ ಇಂಡಿಯಾ (ರಿ.) ವತಿಯಿಂದ ಸ್ಕೂಲ್ ಚಲೋ ಕಾರ್ಯಕ್ರಮವು ಸಂಸ್ಥೆಯ ಕಾರುಣ್ಯ ಕಛೇರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಯಮಿಗಳಾದ ಯುನಿಟಿ ಶಮೀರ್ ಹಾಜಿ ಇವರು ಸಾಂಕೇತಿಕವಾಗಿ ಪುಸ್ತಕ ಹಾಗೂ ಬ್ಯಾಗ್ ಗಳನ್ನು ವಿತರಿಸುವುದರೊಂದಿಗೆ ಉದ್ಘಾಟಿಸಿದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಇಮ್ತಿಯಾಝ್ ಪಾರ್ಲೆ ಇವರು ಶಿಕ್ಷಣಕ್ಕೆ ಇ ಫ್ರೆಂಡ್ಸ್ ಪುತ್ತೂರು ನೀಡುತ್ತಿರುವ ಕೊಡುಗೆ ಮತ್ತು ಶೈಕ್ಷಣಿಕ ಪ್ರಗತಿ ಸಾಮುದಾಯಿಕ ಅನಿವಾರ್ಯ ಕೂಡ ಆಗಿದೆ ಎಂದು ತಿಳಿಸಿದರು.
Posted by Vidyamaana on 2024-04-18 20:45:03 |
ಧಾರವಾಢ: ಸಂಸದ ಪ್ರಹ್ಲಾದ್ ಜೋಷಿ ವಿರುದ್ಧ ಸಮರ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಗದಗ ಜಿಲ್ಲೆಯ ಬಾಳೆಹೊಸೂರ-ಶಿರಹಟ್ಟಿಯ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸಾಮೀಜಿ ನಾಮಪತ್ರ ಸಲ್ಲಿಸಿದ್ದು, ₹ 9.75 ಕೋಟಿ ಆಸ್ತಿ ಘೋಷಿಸಿದ್ದಾರೆ.
ಧಾರವಾಡ ಕ್ಷೇತ್ರದ ಲೋಕಸಭೆ ಚುನಾವಣೆಗೆ ಇಂದು ಐವರು ಆರು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಶಿರಹಟ್ಟಿಯ ದಿಂಗಾಗಲೇಶ್ವರ ಸ್ವಾಮೀಜಿ ಎರಡು ಪ್ರತಿ ನಾಮಪತ್ರ ಸಲ್ಲಿಸಿದ್ದಾರೆ.
Posted by Vidyamaana on 2024-05-15 21:52:07 |
ಸುಬ್ರಹ್ಮಣ್ಯ: ಭಾರೀ ಮಳೆಯಿಂದಾಗಿ ಮರ ಬಿದ್ದು ತೋಟಕ್ಕೆ ತೆರಳಿದ್ದ ವೃದ್ಧೆ ಸಾವನ್ನಪ್ಪಿರುವ ದುರ್ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದ ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ (65) ಮೃತ ದುರ್ದೈವಿಯಾಗಿದ್ದಾರೆ.
Posted by Vidyamaana on 2024-05-01 13:12:24 |
(Advertisement)
ಸುರತ್ಕಲ್: ರಾಜ್ಯದಲ್ಲೇ ಪ್ರಥಮ ಎಂಬಂತೆ ತಮ್ಮ ಸದಸ್ಯರಿಗೆ ಭರಪೂರ ಬಹುಮಾನ, ನೂರಾರು ಉಡುಗೊರೆಗಳೊಂದಿಗೆ ಸಾವಿರಾರು ಸದಸ್ಯರನ್ನು ಹೊಂದಿರುವ ಸ್ಕೀಮ್ ಆಗಿದೆ "ಡ್ರೀಮ್ ಡೀಲ್".
ಡ್ರೀಮ್ ಡೀಲ್ ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಮಂಗಳೂರು, ಬೆಳ್ತಂಗಡಿ, ಮಡಿಕೇರಿ, ಮೈಸೂರು, ಉತ್ತರಕನ್ನಡ, ಚಿಕ್ಕಮಂಗಳೂರು, ಉಡುಪಿ, ಬೆಂಗಳೂರು ಜಿಲ್ಲೆಗಳಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ಆರು ಮನೆಗಳು, ಆರು ಕಾರು, ಬೈಕು, ಆಕ್ಟಿವಾ, ಚಿನ್ನದ ಆಭರಣಗಳು, ಡೈಮಂಡ್ ಆಭರಣಗಳು, ನಗದು, ಟೂರ್ ಪ್ಯಾಕೇಜ್ ಹೀಗೆ ಲಕ್ಷಾಂತರ ರೂ.ಮೌಲ್ಯದ ಬಹುಮಾನಗಳ ಸುರಿಮಳೆ ಸುರಿಯುವ ಒಂದು ವಿಭಿನ್ನ ಸ್ಕೀಮ್ ಯೋಜನೆಯಾಗಿದೆ ಡ್ರೀಮ್ ಡೀಲ್.
ಡ್ರೀಮ್ ಡೀಲ್ನಲ್ಲಿ 20ತಿಂಗಳವರೆಗೆ ಪ್ರತಿ ತಿಂಗಳು 1ಸಾವಿರ ರೂ.ಯಂತೆ ಪಾವತಿಸಬೇಕು. ಬಹುಮಾನ ಲಭಿಸದೇ ಇರುವ ಸದಸ್ಯರಿಗೆ, ಅವರ ಉಳಿತಾಯದ ಮೌಲ್ಯಕ್ಕೆ ಸಮಾನವಾದ ಅಥವಾ ಮೊತ್ತಕ್ಕಿಂತ ಹೆಚ್ಚಿನ ಮೌಲ್ಯದ ಬ್ರಾಂಡ್ ಮತ್ತು ಉತ್ತಮ ಗುಣಮಟ್ಟದ ವಸ್ತುಗಳನ್ನು ಆಯ್ಕೆ ಮಾಡಲು ಅವಕಾಶವನ್ನು ಹೊಂದಿರುತ್ತಾರೆ.
Posted by Vidyamaana on 2023-08-23 04:24:23 |
ವಿಜಯನಗರ; ಹಲವರು ಯುವಕರನ್ನು ನಂಬಿಸಿ ಮದುವೆಯಾಗಿದ್ದಲ್ಲದೆ, ಅವರಿಂದಲೇ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಎಂಬಾಕೆ ಬಂಧಿತ ಮಹಿಳೆ ಎಂದು ತಿಳಿದುಬಂದಿದೆ.
ಹೊಸಪೇಟೆ ತಾಲೂಕಿನಲ್ಲಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್ 19ರಂದು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮದುವೆಯಾಗುವುದು ನಂಬಿಸಿ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಈಕೆಯ ಮೇಲಿದ್ದು ಪೊಲೀಸರು ಬಂಧಿಸಿದ್ದಾರೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ. ಈ ಹಿಂದೆ ಉಡುಪಿಯಲ್ಲಿ ಇದೇ ರೀತಿ ಹಲವರಿಗೆ ಮೋಸ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಮುಂದುವರಿದಿದೆ ಎಂದವರು ತಿಳಿಸಿದ್ದಾರೆ.