2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


ಉಡುಪಿ: ವಾರದ ಬಳಿಕ ಪತ್ತೆಯಾಯ್ತು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ

Posted by Vidyamaana on 2023-07-30 07:59:14 |

Share: | | | | |


ಉಡುಪಿ: ವಾರದ ಬಳಿಕ ಪತ್ತೆಯಾಯ್ತು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ

ಕುಂದಾಪುರ: ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.

ಜುಲೈ 23ರಂದು ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು 23 ವರ್ಷದ ಶರತ್ ಕುಮಾರ್ ಸ್ನೇಹಿತನೊಂದಿಗೆ ಹೋಗಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಜಾರಿ ನೀರಿಗೆ ಬಿದ್ದಿದ್ದರು.


ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸಿದ್ದವು. ಆದರೆ ತೀವ್ರ ಮಳೆ ಮತ್ತು ನೀರಿನ ರಭಸದ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿತ್ತು. ಇದೀಗ ವಾರದ ಬಳಿಕ ಜುಲೈ 30ರಂದು ಬಿದ್ದ ಜಾಗದಿಂದ ಹತ್ತು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.


ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್‌ಡಿಆರ್‌ಎಫ್‌), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಶರತ್‌ ಅವರ ಸ್ನೇಹಿತರು, ಸಂಬಂಧಿಕರು ಪ್ರತೀ ದಿನ ಹಗಲಿಡೀ ನಿರಂತರ ಹುಡುಕಾಟ ನಡೆಸಿದ್ದರು. ಈಶ್ವರ್ ಮಲ್ಪೆ, ಜ್ಯೋತಿರಾಜ್ ತಂಡವೂ ಹುಡುಕಾಟ ನಡೆಸಿತ್ತುಶರತ್‌ ಪತ್ತೆಗಾಗಿ ಜಲಪಾತ ಹರಿದು ಬರುವ ಬೇರೆ ಬೇರೆ ಕಡೆಗಳಲ್ಲಿ ಸಾಗರ ಬಾರಕೂರು ಅವರ ನೇತೃತ್ವದಲ್ಲಿ ಡ್ರೋನ್‌ ಕೆಮರಾದ ಮೂಲಕ ಹುಡುಕುವ ಪ್ರಯತ್ನ ಮಾಡಲಾಗಿತ್ತು

ಬಂಟ್ವಾಳ: ವಿದ್ಯಾರ್ಥಿ ಸುಮಂತ್ ಬಾವಿಗೆ ಹಾರಿ ಆತ್ಮಹತ್ಯೆ

Posted by Vidyamaana on 2024-08-21 03:36:31 |

Share: | | | | |


ಬಂಟ್ವಾಳ: ವಿದ್ಯಾರ್ಥಿ ಸುಮಂತ್ ಬಾವಿಗೆ ಹಾರಿ ಆತ್ಮಹತ್ಯೆ

ಬಂಟ್ವಾಳ: ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನ ಕಟ್ಟೆಯ ಕೋಕಲ ಎಂಬಲ್ಲಿ ಮಂಗಳವಾರ ನಡೆದಿದೆ.

ಕೋಕಲ ನಿವಾಸಿ ಸಾಯಿಶಾಂತಿ ಎಂಬವರ ಪುತ್ರ ಸುಮಂತ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಉಜಿರೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಈತ ಮಂಗಳವಾರ ಮುಂಜಾನೆ 5ರ ವೇಳೆಗೆ ಮನೆ ಸಮೀಪದ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

BREAKING : ಪೋಕೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

Posted by Vidyamaana on 2024-06-13 17:16:18 |

Share: | | | | |


BREAKING : ಪೋಕೋ ಪ್ರಕರಣದಲ್ಲಿ ಬಿಎಸ್‌ವೈಗೆ ಬಂಧನದ ಭೀತಿ : ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇದೀಗ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಬೆಂಗಳೂರಿನ ಒಂದನೇ ತ್ವರಿತಗತಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್​ ತಿಂಗಳಲ್ಲಿ ಎಫ್​ಐಆರ್ ದಾಖಲಾಗಿತ್ತು.

ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

Posted by Vidyamaana on 2023-10-12 01:26:40 |

Share: | | | | |


ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

ಬೆಂಗಳೂರು: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್‌) ಸೆಲ್‌ ಬ್ರಾಡ್‌ ಕಾಸ್ಟಿಂಗ್‌ ಮೂಲಕ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್‌ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್‌ ಶಬ್ದದೊಂದಿಗೆ ಸಂದೇಶ ಫ್ಲಾಶ್‌ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.

ಸಂದೇಶದಲ್ಲಿ ಏನಿರಲಿದೆ?

ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಸೆಲ್‌ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್‌ ಮೂಲಕ ಕಳುಹಿಸಿದ ಸ್ಯಾಂಪಲ್‌ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ. ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್‌ – ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.


ಪ್ರಯೋಜನ ಏನು?

ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್‌ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್‌ ಬಳಕೆದಾರರಿಗೆ ಈ ಫ್ಲಾಶ್‌ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ.


ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ. 12ರಂದು ರಾಜ್ಯದಲ್ಲಿ ನಡೆಯಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.

– ರಾಜಕುಮಾರ್‌, ಸಹಾಯಕ ನಿರ್ದೇಶಕ (ಟೆಕ್ನಾಲಜಿ), ದೂರಸಂಪರ್ಕ ಇಲಾಖೆ.

ಹಿಂ.ಜಾ.ವೇ ಮಾಜಿ ಅಧ್ಯಕ್ಷ ರಮೇಶ್ ರೈ ಡಿಂಬ್ರಿ ಕಾಂಗ್ರೆಸ್ ಸೇರ್ಪಡೆ.

Posted by Vidyamaana on 2023-06-03 07:47:23 |

Share: | | | | |


ಹಿಂ.ಜಾ.ವೇ ಮಾಜಿ ಅಧ್ಯಕ್ಷ ರಮೇಶ್ ರೈ ಡಿಂಬ್ರಿ ಕಾಂಗ್ರೆಸ್ ಸೇರ್ಪಡೆ.

ಪುತ್ತೂರು : ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ, ಆರ್ಯಾಪು ಗ್ರಾ.ಪಂ. ಮಾಜಿ ಸದಸ್ಯರೂ ಆಗಿದ್ದ ರಮೇಶ್ ರೈ ಡಿಂಬ್ರಿ ಅವರು ಬಿಜೆಪಿ ತೊರೆದು ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಜೂ.3 ರಂದು ಪುರಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು.

ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಸಂಚಾಲಕರಾಗಿ, ಅಧ್ಯಕ್ಷರಾಗಿ 12 ವರ್ಷ ಕಾರ್ಯ ನಿರ್ವಹಿಸಿದ್ದ ರಮೇಶ್ ರೈ ಅವರು ಬಳಿಕ ಆರ್ಯಾಪು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದರು.

ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಪುತ್ತೂರು ಯುವ ಬಂಟರ ಸಂಘದ ಉಪಾಧ್ಯಕ್ಷರಾಗಿ, ಕೋಶಾಧಿಕಾರಿಯಾಗಿ, ಅಧ್ಯಕ್ಷರಾಗಿ, ಬಂಟರ ಸಂಘದ ನಿರ್ದೇಶಕರಾಗಿ, ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವ ರಮೇಶ್ ರೈ ಪ್ರಸ್ತುತ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

Posted by Vidyamaana on 2024-03-07 09:09:19 |

Share: | | | | |


ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

ಗಳೂರು(ಮಾ.07): ರಾಜ್ಯದಲ್ಲಿ  ಮಾರಾಟ ಆ್ಯಸಿಡ್ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ  ಆ್ಯಸಿಡ್  ದಾಳಿ ಮಾಡಿದ್ದ.ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್‌, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ ಸಂಸ್ಥೆಯ ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕಿ ಡಾ.ಪ್ರಭಾ ಎಸ್‌.ಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Recent News


Leave a Comment: