ಮಂಗಳೂರಿನಲ್ಲಿ ಚಡ್ಡಿಗ್ಯಾಂಗ್ ಹಾವಳಿ - ಕೋಡಿಕಲ್ ನಲ್ಲಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿದ ಕಳ್ಳತನಕ್ಕೆ ಯತ್ನಿಸಿದ ಕಳ್ಳರು

ಸುದ್ದಿಗಳು News

Posted by vidyamaana on 2024-07-08 08:23:43 |

Share: | | | | |


ಮಂಗಳೂರಿನಲ್ಲಿ ಚಡ್ಡಿಗ್ಯಾಂಗ್ ಹಾವಳಿ - ಕೋಡಿಕಲ್ ನಲ್ಲಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿದ ಕಳ್ಳತನಕ್ಕೆ ಯತ್ನಿಸಿದ ಕಳ್ಳರು

 ಮಂಗಳೂರು : ಮಂಗಳೂರಿನಲ್ಲಿ ಒಂದೆಡೆ ಮುಂಗಾರು ಮಳೆ ಅಬ್ಬರವಿದ್ದರೆ ಇನ್ನೊಂದೆಡೆ ಕಳ್ಳರ ಭಯ ಪ್ರಾರಂಭವಾಗಿದ್ದು, ಕಳ್ಳತನಕ್ಕೆ ಹೆಸರು ಮಾಡಿರುವ ಚೆಡ್ಡಿ ಗ್ಯಾಂಗ್ ನಗರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೆ ಕೋಡಿಕಲ್ ನಲ್ಲಿ ನಿನ್ನೆ ರಾತ್ರಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿ ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.ಈ ಕೃತ್ಯವನ್ನು ಹೊರ ರಾಜ್ಯದ ಚಡ್ಡಿ ಗ್ಯಾಂಗ್ ನಡೆಸಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಳ್ಳರು ಮನೆಯ ಕಿಟಕಿ ಕತ್ತರಿಸುವುದಕ್ಕೂ ಮುನ್ನ ಕೋಡಿಕಲ್ ಪರಿಸರದಲ್ಲಿ ಅಡ್ಡಾಡುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಐವರಿದ್ದ ಕಳ್ಳರ ತಂಡ ಮೆಲ್ಲನೆ ಹೆಜ್ಜೆ ಇಡುತ್ತಾ ಕೈಯಲ್ಲಿ ಟಾರ್ಚ್ ಬೆಳಕು ಹರಿಸಿ ಕಳವಿಗೆ ಮನೆ ಹುಡುಕುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ‌. ಚಡ್ಡಿ ಹಾಕಿದ್ದ ಕಳ್ಳರ ಗ್ಯಾಂಗ್ ಸದಸ್ಯರು ಬರುತ್ತಿದ್ದಾಗಲೇ ನಾಯಿಗಳು ಜೋರಾಗಿ ಬೊಗಳಿದ್ದು ಅವುಗಳತ್ತ ಕಳ್ಳರು ಕಲ್ಲೆಸೆದು ಓಡಿಸಿದ್ದಾರೆ.

ಕಿಟಕಿ ಕತ್ತರಿಸಿ ಒಂದು ಮನೆಯ ಒಳಗೆ ನುಗ್ಗಿದ್ದ ಕಳ್ಳರು ಬೆಲೆಬಾಳುವ ವಸ್ತುಗಳಿಗಾಗಿ ಜಾಲಾಡಿದ್ದಾರೆ. ಆದರೆ ಅವರಿಗೆ ಚಿಲ್ಲರೆ ನಗದು ಬಿಟ್ಟರೆ ಯಾವುದೇ ವಸ್ತುಗಳು ಸಿಕ್ಕಿಲ್ಲ. ವಿಶೇಷ ಅಂದ್ರೆ, ಮನೆಮಂದಿ ಮಲಗಿದ್ದಾಗಲೇ ಕಳ್ಳರು ನುಗ್ಗಿ ಹುಡುಕಾಟ ಮುಗಿಸಿ ಸದ್ದಿಲ್ಲದೆ ಹೊರಕ್ಕೆ ತೆರಳಿದ್ದಾರೆ. ಮನೆಯವರಿಗೆ ಬೆಳಗಾದಾಗಲೇ ಕಳವು ಕೃತ್ಯ ತಿಳಿದುಬಂದಿತ್ತು.

 Share: | | | | |


ವೈದ್ಯರೂ ಪತ್ತೆಹಚ್ಚಲಾಗದ ಸ್ಲೋ ಪಾಯ್ಸನ್​ ಕೊಟ್ಟು ಪತಿ ಅತ್ತೆ ಮಾವ ಸೇರಿ ಐವರನ್ನು ಕೊಂದಿದ್ದಳು ಸೊಸೆ: ಆ ವಿಷ ಯಾವುದು?

Posted by Vidyamaana on 2023-10-22 08:15:37 |

Share: | | | | |


ವೈದ್ಯರೂ ಪತ್ತೆಹಚ್ಚಲಾಗದ ಸ್ಲೋ ಪಾಯ್ಸನ್​ ಕೊಟ್ಟು ಪತಿ ಅತ್ತೆ ಮಾವ ಸೇರಿ ಐವರನ್ನು ಕೊಂದಿದ್ದಳು ಸೊಸೆ: ಆ ವಿಷ ಯಾವುದು?

ನಾಗಪುರ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಒಂದೇ ಕುಟುಂಬದ ಐವರು ತಿಂಗಳೊಳಗೆ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಅ.18 ರಂದು ಸೊಸೆ ಮತ್ತು ಸಂಬಂಧಿ ಮಹಿಳೆಯ ಬಂಧನವಾಗಿತ್ತು. ಇವರಿಬ್ಬರು ಕಳೆದ ಒಂದು ತಿಂಗಳಿಂದ ಎಲ್ಲರಿಗೂ ಆಹಾರದಲ್ಲಿ ಸ್ಲೋ ಪಾಯ್ಸನ್ ನೀಡುತ್ತಿದ್ದುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.ಗೂಗಲ್​ನಲ್ಲಿ ಅತಿ ಭಯಂಕರ ವಿಷದ ಬಗ್ಗೆ ಸರ್ಚ್​ ಮಾಡಿ, ತೆಲಂಗಾಣದಿಂದ ತರಿಸಿಕೊಂಡು ಚಾಲಾಕಿತನ ಮೆರೆದ ಸೊಸೆ ಈಗ ಜೈಲುಪಾಲಾಗಿದ್ದಾಳೆ.

ಇದರ ಪೂರ್ಣ ವಿವರ ಇಲ್ಲಿದೆ….

ಸಂಘಮಿತ್ರ ಕುಂಬಾರೆ (22), ರೋಜಾ ರಾಮಟೆಕೆ (36) ಆರೋಪಿಗಳು. ಮೃತರನ್ನು ಸಂಘಮಿತ್ರ ಪತಿ ರೋಷನ್ ಕುಂಬಾರೆ, ಶಂಕರ ಕುಂಬಾರೆ (ಮಾವ), ವಿಜಯ (ಅತ್ತೆ), ಕೋಮಲ್ (ಅತ್ತಿಗೆ) ಮತ್ತು ವರ್ಷಾ ಉರಾಡೆ (ಅತ್ತೆಯ ಸಹೋದರಿ) ಸೆ.26ರಿಂದ ಅ.15ರ ನಡುವೆ ಮೃತಪಟ್ಟಿದ್ದರು.

ಕೊಲ್ಲಲು ಕಾರಣ:

ಅಕೋಲಾದ ಸಂಘಮಿತ್ರ ಮನೆಯವರ ವಿರೋಧದ ನಡುವೆ ಡಿಸೆಂಬರ್​ 2022 ರಲ್ಲಿ ರೋಷನ್ ನನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಮದುವೆಯ ನಂತರ ರೋಷನ್ ಥಳಿಸಲು ಆರಂಭಿಸಿದ್ದ. ಆತನ ಕುಟುಂಬಸ್ಥರೂ ಕೆಟ್ಟದಾಗಿ ನಡೆಸಿಕೊಂಡರು. ಆಕೆ ತಂದೆಗೆ ವಿಷಯ ತಿಳಿದಾಗ ಆತ ಏಪ್ರಿಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ತನ್ನ ತವರಿಗೆ ಹೋಗಬೇಕೆಂದು ಒತ್ತಾಯಿಸಿದರೂ ಪತಿ ಮತ್ತು ಅತ್ತೆ ಇದಕ್ಕೆ ಅನುಮತಿಸಲಿಲ್ಲ. ಇದರಿಂದ ಆಕೆ ಚಿಂತತೆಗೀಡಾದಳು.

ಈ ವಿಷ ವೈದ್ಯಕೀಯ ಪರೀಕ್ಷೆಯಲ್ಲೂ ಪತ್ತೆಯಾಗದು!:

ಆಸ್ತಿ ವಿಚಾರವಾಗಿ ಸಂಬಂಧಿ ರೋಜಾ ಹಾಗೂ ಸಂಗಮಿತ್ರಾ ಅತ್ತೆ ವಿಜಯಾ ನಡುವೆ ಜಗಳ ನಡೆಯುತ್ತಿತ್ತು. ಇದನ್ನು ಅರಿತಿದ್ದ ಸಂಘಮಿತ್ರಾ ರೋಜಾಗೆ ತನ್ನ ಅತ್ತೆಯನ್ನು ಕೊಲ್ಲಲು ಬಯಸಿರುವುದಾಗಿ ಹೇಳಿದಾಗ ಆಕೆ ಕೈಜೋಡಿಸುತ್ತಾಳೆ. ಇಬ್ಬರೂ ಸೇರಿ ಗೂಗಲ್ ನಲ್ಲಿ ಜನರನ್ನು ಕೊಲ್ಲಲು ಇರುವ ಮಾರ್ಗಗಳನ್ನು ಹುಡುಕುತ್ತಾರೆ. ಆಗ ಥಾಲಿಯಮ್ ವಿಷದ ಬಗ್ಗೆ ತಿಳಿದುಕೊಳ್ಳುತ್ತಾರೆ. ಇದರ ಸೇವನೆಯಿಂದ ವ್ಯಕ್ತಿಯು ಕ್ರಮೇಣ ಅನಾರೋಗ್ಯಕ್ಕೆ ಒಳಗಾಗಿ ಸಾಯುತ್ತಾನೆ. ವೈದ್ಯಕೀಯ ಪರೀಕ್ಷೆಯಲ್ಲಿ ಮಾನವ ದೇಹದಲ್ಲಿ ಥಾಲಿಯಮ್ ಅನ್ನು ಕಂಡುಹಿಡಿಯುವುದು ಕಷ್ಟ. ಹೀಗಾಗಿ ಸಿಕ್ಕಿಬೀಳುವುದಿಲ್ಲ ಎಂಬುದನ್ನು ಮನಗಾಣುತ್ತಾರೆ. ಬಳಿಕ ತೆಲಂಗಾಣದಿಂದ ವಿಷ ಖರೀದಿಸಿ ಸೆ.20 ರಂದು ಮೊದಲು ರೋಷನ್ ತಂದೆ ಶಂಕರ್ ಮತ್ತು ಆತನ ತಾಯಿ ವಿಜಯಾಗೆ ಆಹಾರದಲ್ಲಿ ಬೆರೆಸಿ ನೀಡುತ್ತಾರೆ. ಅವರ ಆರೋಗ್ಯ ಹದಗೆಟ್ಟು ಸೆ.26ಮತ್ತು 27 ರಂದು ಮೃತಪಡುತ್ತಾರೆ. ನಂತರ ಅ.8 ರಂದು ಕೋಮಲ್, ಅ.14 ರಂದು ವರ್ಷ ಮತ್ತು ಅ.15 ರಂದು ರೋಷನ್ ಕೂಡ ಸಾವನ್ನಪ್ಪುತ್ತಾರೆ.


ತುಟಿ ಕಪ್ಪಾಗಿದ್ದರೂ ವಿಷ ಪತ್ತೆಯಾಗಿರಲಿಲ್ಲ:

ಸತ್ತವರೆಲ್ಲರೂ ಒಂದೇ ರೀತಿಯ ರೋಗಲಕ್ಷಣಗಳನ್ನು ಹೊಂದಿದ್ದರು. ಪ್ರತಿಯೊಬ್ಬರಿಗೂ ದೇಹದಲ್ಲಿ ಜುಮ್ಮೆನಿಸುವಿಕೆ, ಕೆಳ ಬೆನ್ನು ಮತ್ತು ತಲೆಯಲ್ಲಿ ತೀವ್ರವಾದ ನೋವು ಇತ್ತು. ತುಟಿಗಳು ಕಪ್ಪು ಬಣ್ಣಕ್ಕೆ ತಿರುಗಿದ್ದವು. ಆದರೆ ವಿಷ ಪತ್ತೆಯಾಗಿರಲಿಲ್ಲ ಎಂದು ವೈದ್ಯರು ತಿಳಿಸಿದ್ದರು. ಇದರ ನಂತರ, ಪೊಲೀಸರಿಗೆ ಆರೋಗ್ಯದಿಂದ ಇದ್ದ ಸಂಘಮಿತ್ರಾ ಬಗ್ಗೆ ಅನುಮಾನ ಬಂದಿತ್ತು. ಆಕೆಯನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಸಂಪೂರ್ಣ ಸತ್ಯ ಹೊರಬಂದಿದೆ. ರೋಜಾ ಪಾತ್ರವನ್ನೂ ಸಂಘಮಿತ್ರ ಬಹಿರಂಗಪಡಿಸಿದ್ದಾಳೆ. ಘಟನೆಯಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಸೊಸೆ ನೀಡಿದ ಸ್ಲೋಪಾಯ್ಸನ್​ಗೆ ಒಂದಿಡೀ ಕುಟುಂಬ ಅವಸಾನ ಕಂಡಿದೆ. ಆಕೆ ಜೈಲು ಸೇರಿದ್ದಾಳೆ.

ಕಾಮೋತ್ತೇಜಕ ಮಾತ್ರೆ ತಿಂದ ಭೂಪ ಹೆಂಡತಿಯ ಪ್ರಾಣವನ್ನೇ ಕಿತ್ತುಕೊಂಡ!

Posted by Vidyamaana on 2024-02-13 20:43:06 |

Share: | | | | |


ಕಾಮೋತ್ತೇಜಕ ಮಾತ್ರೆ ತಿಂದ ಭೂಪ ಹೆಂಡತಿಯ ಪ್ರಾಣವನ್ನೇ ಕಿತ್ತುಕೊಂಡ!

ಲಕ್ನೋ: ಮದುವೆಯಾಗಿ ಏಳೇ ದಿನದಲ್ಲಿ ನವವಧುವೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿರುವುದು ವರದಿಯಾಗಿದೆ.


ಘಟನೆ ಹಿನ್ನೆಲೆ: ಫೆ.3 ರಂದು(ಶುಕ್ರವಾರ) ಯುವತಿಯ ವಿವಾಹ ಉರೈ ಮೂಲದ ವ್ಯಕ್ತಿಯೊಂದಿಗೆ ಆಗಿತ್ತು. ಯುವತಿಯ ಪೋಷಕರು ಅದಾಗಲೇ ಮೃತಪಟ್ಟಿದ್ದು, ಸಹೋದರ ಮುಂದೆ ನಿಂತು ಅದ್ಧೂರಿಯಾಗಿ ವಿವಾಹ ಮಾಡಿಸಿಕೊಟ್ಟಿದ್ದರು. ಫೆ.4 ರಂದು (ಶನಿವಾರ) ಯುವತಿ ಎಲ್ಲಾ ಶಾಸ್ತ್ರದ ಬಳಿಕ ಗಂಡನ ಮನೆಗೆ ಬಂದಿದ್ದಳು.

ಮದುವೆಯ ಮೊದಲ ರಾತ್ರಿ ಪತಿ ಕಾಮೋತ್ತೇಜಕ ಮಾತ್ರೆಗಳನ್ನು(ವರ್ಧನೆ ಮಾತ್ರೆ) ಸೇವಿಸಿ ಪತ್ನಿ ಜೊತೆ ರಾಕ್ಷಸನಂತೆ ಸಂಭೋಗವನ್ನು ನಡೆಸಿದ್ದಾನೆ. ಪರಿಣಾಮ ಪತ್ನಿಯ ಖಾಸಗಿ ಅಂಗಕ್ಕೆ ತೀವ್ರವಾದ ಗಾಯಗಳಾಗಿವೆ.

ಪತ್ನಿ ಕಾನ್ಪುರದಲ್ಲಿ ಮದುವೆ ಸಮಾರಂಭವೊಂದಕ್ಕೆ ತೆರಳಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಲೈಂಗಿಕ ಉತ್ತೇಜನ ಮಾತ್ರೆಯನ್ನು ಸೇವಿಸಿ ಸಂಭೋಗ ನಡೆಸಿದ ಪರಿಣಾಮ ಮಹಿಳೆಯ ಖಾಸಗಿ ಅಂಗದಲ್ಲಿ ತೀವ್ರತರದ ಗಾಯಗಳಾಗಿದ್ದು, ಇದರಿಂದ ಸೋಂಕು ತಗುಲಿದೆ. ಫೆ.10 ರಂದು ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.ಮಹಿಳೆಯ ಸ್ಥಿತಿ ಹದಗೆಟ್ಟ ನಂತರ ಮಹಿಳೆಯನ್ನು ಸ್ತ್ರೀರೋಗತಜ್ಞರ ಬಳಿಗೆ ಕರೆದೊಯ್ಯಲಾಗಿದ್ದು,ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗುವಷ್ಟು ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.


ಪತಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳೆಯ ಸಹೋದರ ಪೊಲೀಸರಿಗೆ ಲಿಖಿತ ದೂರನ್ನು ಸಲ್ಲಿಸಿದ್ದಾರೆ. ಆರೋಪಿ ಪತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಪತಿ ಹಾಗೂ ಆತನ ಮನೆಯವರು ಊರು ಬಿಟ್ಟು ಹೋಗಿದ್ದಾರೆ ಎಂದು ವರದಿ ತಿಳಿಸಿದೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ದಾಖಲು ಹೆಚ್ಚಳ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ

Posted by Vidyamaana on 2023-10-28 16:29:10 |

Share: | | | | |


ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ದಾಖಲು ಹೆಚ್ಚಳ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಗಳನ್ನು ದಾಖಲಿಸಲಾಗುತ್ತಿದ್ದು, ಹಿಂದೂ ಕಾರ್ಯಕರ್ತರ ಮೇಲೆ ಕೂಡಾ ಕೇಸ್ ಹಾಕಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.


ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ನಳೀನ್ ಕುಮಾರ್ ಕಟೀಲ್, ಜನಪ್ರತಿನಿಧಿಗಳ ಮೇಲೆ ಕೂಡಾ ಕೇಸ್ ಹಾಕಿ ಅವರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಹೇಳಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಪರ ಧ್ವನಿ ಎತ್ತಿದ ಶಾಸಕರ ಮೇಲೆ ಕೇಸ್ ಹಾಕಲಾಗಿದ್ದು, ಪೊಲೀಸ್ ಇಲಾಖೆಯ ಮೂಲಕ ಸರ್ಕಾರ ಎಫ್ ಐ ಆರ್ ದಾಖಲಿಸಿದೆ ಎಂದು ನಳೀನ್ ಕುಮಾರ್ ಕಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಶಾಸಕ ಹರೀಶ್ ಪೂಂಜಾ ಮೇಲೆ ಒಂದೇ ತಿಂಗಳಿನಲ್ಲಿ ಎರಡನೇ ಎಫ್‌ಐ ಆರ್ ದಾಖಲಿಸಲಾಗಿದ್ದು, ಸಿಎಂ ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ಗಳನ್ನು ದಾಖಲಿಸುತ್ತಿರುವುದು ಹೆಚ್ಚಾಗುತ್ತಿದ್ದು,ರಾಷ್ಟ್ರ ವಿರೋಧಿಗಳ ಮೇಲೆ ಒಂದೂ ಕೇಸ್ ದಾಖಲಾಗುತ್ತಿಲ್ಲ ಎಂದು ಕಟೀಲ್  ಟೀಕಿಸಿದಾರೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಪ್ರಧಾನ ಅರ್ಚಕ ಎಡಕ್ಕಾನ ಗಣಪತಿ ಭಟ್ ನಿಧನ

Posted by Vidyamaana on 2024-01-14 06:19:26 |

Share: | | | | |


ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಪ್ರಧಾನ ಅರ್ಚಕ ಎಡಕ್ಕಾನ ಗಣಪತಿ ಭಟ್ ನಿಧನ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಮಾಜಿ ಅರ್ಚಕ, ಸುಳ್ಯ ತಾಲೂಕಿನ ಕಲ್ಮಡ್ಕ ಎಡಕ್ಕಾನ ಗಣಪತಿ ಭಟ್ (79) ನಿಧನರಾದರು.ಮೂಲತ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಎಡಕ್ಕಾನ ನಿವಾಸಿಯಾಗಿರುವ ಗಣಪತಿ ಭಟ್ ಅವರು ಹಲವು ವರ್ಷಗಳ ಕಾಲ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿರುವ ಅಯ್ಯಪ್ಪ ಗುಡಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಇತ್ತಿಚೆಗೆ ಅಲ್ಪಕಾಲದ ಅಸೌಖ್ಯದಿಂದ ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.


ಮೃತರು ಪತ್ನಿ ಲಕ್ಷ್ಮೀ ಭಟ್, ಪುತ್ರ ಉದ್ಯಮಿ ರಾಜಾರಾಮ್ ಭಟ್ ಎಡಕ್ಕಾನ, ಪುತ್ರಿಯರಾದ ಸಂಧ್ಯಾ ಗಣಪತಿ ಭಟ್ ಹಾಗೂ ಗೀತಾ ಗಣಪತಿ ಭಟ್ ರನ್ನು ಅಗಲಿದ್ದಾರೆ.

ಶಾಸಕರ ಇಂದಿನ ಕಾರ್ಯಕ್ರಮ ಜು 01

Posted by Vidyamaana on 2023-06-30 23:09:08 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 01

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಜುಲೈ 01 ರಂದು...

 ಬೆಳಿಗ್ಗೆ 10 ಗಂಟೆಗೆ ಸರ್ವೆ ವಲಯ ಕಾರ್ಯಕರ್ತರ ಸಭೆ

12.30 ತಾಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ದಿನಾಚರಣೆ

ಮದ್ಯಾಹ್ನ 3 ಗಂಟೆ ನರಿಮೊಗರು ವಲಯ ಕಾರ್ಯಕರ್ತರ ಸಭೆ

ಸಂಜೆ 5 ಕುರಿಯದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಅರುಣ್ ಕುಮಾರ್ ಪುತ್ತಿಲರಿಗೆ ಬಿಜೆಪಿ ಪಕ್ಷದ ಹುದ್ದೆ, ಜವಾಬ್ದಾರಿ ಜಿಲ್ಲೆ, ರಾಜ್ಯದ ಪ್ರಮುಖರ ನಿರ್ಧಾರಕ್ಕೆ ಬಿಟ್ಟ ವಿಚಾರ– ಸಾಜ ರಾಧಾಕೃಷ್ಣ ಆಳ್ವ

Posted by Vidyamaana on 2024-02-07 10:43:01 |

Share: | | | | |


ಅರುಣ್ ಕುಮಾರ್ ಪುತ್ತಿಲರಿಗೆ ಬಿಜೆಪಿ ಪಕ್ಷದ ಹುದ್ದೆ, ಜವಾಬ್ದಾರಿ ಜಿಲ್ಲೆ, ರಾಜ್ಯದ ಪ್ರಮುಖರ ನಿರ್ಧಾರಕ್ಕೆ ಬಿಟ್ಟ ವಿಚಾರ– ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು : ಅರುಣ್ ಕುಮಾರ್ ಪುತ್ತಿಲರಿಗೆ ಪಕ್ಷದ ಹುದ್ದೆ, ಜವಾಬ್ದಾರಿ ನೀಡುವ ನಿರ್ಧಾರ ಜಿಲ್ಲೆ ಮತ್ತು ರಾಜ್ಯಕ್ಕೆ ಬಿಟ್ಟಿದ್ದು, ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿಯವರು ಈಗಾಗಲೇ ನಮ್ಮಲ್ಲಿ ಅಭಿಪ್ರಾಯ ಸಂಗ್ರಹಿಸಿ ಹೋಗಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರು ತಿಳಿಸಿದ್ದಾರೆ.


ಪುತ್ತಿಲ ಪರಿವಾರದಿಂದ ಫೆ.5 ರಂದು ನಡೆದ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ, ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನ ಕೊಡುವುದು ಸೇರಿದಂತೆ ಮೂರು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು.


ಈ ಕುರಿತು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಪ್ರತಿಕ್ರಿಯೆ ನೀಡಿದ್ದು, ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷಕ್ಕೆ ಸೇರ್ಪಡೆಯಾಗುವುದು ಮತ್ತು ಅವರಿಗೆ ಪಕ್ಷದ ಅಧ್ಯಕ್ಷ ಸ್ಥಾನ ಸೇರಿದಂತೆ ಯಾವುದೇ ಹುದ್ದೆ, ಜವಾಬ್ದಾರಿ ನೀಡುವ ವಿಚಾರ ನಮ್ಮ ತೀರ್ಮಾನವಲ್ಲ, ಅದು ಜಿಲ್ಲೆ ಮತ್ತು ರಾಜ್ಯದ ಪ್ರಮುಖರ ನಿರ್ಧಾರಕ್ಕೆ ಬಿಟ್ಟ ವಿಚಾರ. ಇತ್ತೀಚೆಗೆ ರಾಜ್ಯ ಸಂಘಟನಾ ಕಾರ್ಯದರ್ಶಿ ಅವರು ಪುತ್ತೂರಿನಲ್ಲಿ ಬಿಜೆಪಿಯ ಕಾರ್ಯನಿರ್ವಹಣಾ ತಂಡದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಸಂಗ್ರಹಿತ ಅಭಿಪ್ರಾಯವನ್ನು ರಾಜ್ಯಕ್ಕೆ ತಿಳಿಸಿದ್ದಾರೆ.


ಮುಂದಿನ ತೀರ್ಮಾನ ಎನಿದ್ದರೂ ಜಿಲ್ಲೆ ಮತ್ತು ರಾಜ್ಯದ ಪ್ರಮುಖರಿಗೆ ಬಿಟ್ಟ ವಿಚಾರ ಎಂದು ಅವರು ತಿಳಿಸಿದ್ದಾರೆ.



Leave a Comment: