Posted by vidyamaana on 2024-07-05 07:31:37 |
ಮಂಗಳೂರು: ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ನಡೆಸಿದ ಆರೋಪದಲ್ಲಿ ಮಂಗಳೂರು ಪೊಲೀಸರು 10 ಮಂದಿಯನ್ನು ಸೆರೆಹಿಡಿದಿದ್ದಾರೆ. ಇವರಲ್ಲಿ ಉದ್ಯಮಿಯ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ನೀರಮಾರ್ಗ ಗ್ರಾಮ ನಿವಾಸಿ ವಸಂತಕುಮಾರ್ (42) ಒಳಗೊಂಡಿದ್ದಾನೆ.
ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಬಂಧಿತರನ್ನು ನೀರಮಾರ್ಗದ ವಸಂತಕುಮಾರ್ (42), ನೀರಮಾರ್ಗದ ರಮೇಶ್ (42), ಬಂಟ್ವಾಳದ ಬಾಲಕೃಷ್ಣ ರೇಮಂಡ್ ಡಿಸೋಜಾ (47) ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ (48), ತ್ರಿಶೂರಿನ ಜಾಕೀರ್ ಹುಸೇನ್ (56), ತ್ರಿಶೂರ್ನಿಂದ ವಿನೋಜ್ (38), ತ್ರಿಶೂರ್ನಿಂದ ಸಜೀಶ್ ಎಂಎಂ (32), ತಿರುವನಂತಪುರದಿಂದ ಬಿಜು ಜಿ (41), ತ್ರಿಶೂರ್ನಿಂದ ಸತೀಶ್ ಬಾಬು (44), ಮತ್ತು ಶಿಜೋ ದೇವಸಿ (38) ಇದರಲ್ಲಿ 7 ಮಂದಿ ಕೇರಳ ಮೂಲದವರಾಗಿದ್ದಾರೆ.
ಮಂಗಳೂರು ನಗರದ ಉಳಾಯಿಬೆಟ್ಟು ಪೆರ್ಮಂಕಿ ನಿವಾಸಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರು ಜೂನ್ 21ರಂದು ಸಂಜೆ ಸುಮಾರು 7.45ಕ್ಕೆ ಮನೆಯಲ್ಲಿದ್ದ ವೇಳೆ ಸುಮಾರು 10ರಿಂದ 12 ಮಂದಿ ಆರೋಪಿಗಳು ಆಗಮಿಸಿ, ಚೂರಿಯಿಂದ ಪದ್ಮನಾಭ ಕೋಟ್ಯಾನ್ ಮೇಲೆ ಹಲ್ಲೆ ನಡೆಸಿ, ನಂತರ, ಅವರ ಪತ್ನಿ ಮತ್ತು ಮಗನನ್ನು ಕಟ್ಟಿಹಾಕಿ, ನಗದು, ಹಣ, ಒಡವೆ ಸೇರಿ ಬೆಲೆಬಾಳುವ ಸೊತ್ತುಗಳನ್ನು ದರೋಡೆ ಮಾಡಿದ್ದರು.
ಘಟನೆಯಲ್ಲಿ ವಸಂತಕುಮಾರ್, ಉದ್ಯಮಿಯ ವ್ಯವಹಾರ ಮತ್ತು ಮನೆಯ ಮಾಹಿತಿಯನ್ನು ಇನ್ನೋರ್ವ ಆರೋಪಿ ರಮೇಶ್ ಪೂಜಾರಿಗೆ ನೀಡಿದ್ದು, ಆರೋಪಿ ರಮೇಶ್ ಪೂಜಾರಿ ಮತ್ತು ರೇಮಂಡ್ ಡಿಸೋಜಾ ಇನ್ನೋರ್ವ ಆರೋಪಿ ಬಾಲಕೃಷ್ಣ ಶೆಟ್ಟಿಗೆ ಉದ್ಯಮಿಯ ಮನೆಯ ಹಾಗೂ ವ್ಯವಹಾರದ ಮಾಹಿತಿ ನೀಡಿದ್ದಾರೆ. ಅದರಂತೆ ಬಾಲಕೃಷ್ಣ ಶೆಟ್ಟಿ ತನ್ನ ಸ್ನೇಹಿತ ಕೇರಳದ ವ್ಯಕ್ತಿಯೊಂದಿಗೆ ದರೋಡೆ ನಡೆಸಲು ಸಂಚು ರೂಪಿಸಿ,ಮನೆಯ ಮಾಹಿತಿಯನ್ನು ನೀಡಿ, ಆರೋಪಿಗಳನ್ನು ಮಂಗಳೂರಿಗೆ ಕರೆಯಿಸಿಕೊಂಡು ದರೋಡೆ ನಡೆಸಿದ್ದಾಗಿ ತಿಳಿದುಬಂದಿದೆ ಎಂದು ಕಮೀಷನರ್ ಹೇಳಿದ್ದಾರೆ.ಕೃತ್ಯದಲ್ಲಿ 15ಕ್ಕೂ ಅಧಿಕ ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ಕಂಡುಬಂದಿದೆ. ಆರೋಪಿಗಳ ಪೈಕಿ ಬಿಜು ಹಾಗೂ ಸತೀಶ್ ಬಾಬು ಎರಡು ತಂಡ ಗಳನ್ನು ಮಂಗಳೂರಿಗೆ ಕಳಿಸಿ, ದರೋಡೆಗೆ ಸಂಚು ರೂಪಿಸಿ ದರೋಡೆ ಕೃತ್ಯ ನಡೆಸಿದ್ದಾರೆ.
ಮೊದಲೇ ಕೇಸ್ ಇತ್ತು
ಆರೋಪಿಗಳ ಪೈಕಿ ವಸಂತ ಕುಮಾರ್ ವಿರುದ್ಧ 2011ನೇ ಇಸವಿಯಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಾಗಿದ್ದರೆ, ಜಾಕೀರ್ ಎಂಬಾತನ ವಿರುದ್ಧ ಕೇರಳದಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸತೀಶ್ ಬಾಬು ವಿರುದ್ಧ ತ್ರಿಶೂರ್ ಜಿಲ್ಲೆಯಲ್ಲಿ ಶಾಜಿ ಎಂಬಾತನ ಕೊಲೆ ಪ್ರಕರಣ ದಾಖಲಾಗಿದೆ. ಬಿಜು ವಿರುದ್ಧ ಅಬಕಾರಿ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿವೆ.
ಜೂನ್ 21ರಂದು ಎಂಟರಿಂದ ಒಂಬತ್ತು ಮಂದಿ ಮುಸುಕುಧಾರಿಗಳು ಮನೆಗೆ ನುಗ್ಗಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ರವರನ್ನು ಕಟ್ಟಿ ಹಾಕಿ ಥಳಿಸಿದ್ದು ಹಾಗೂ ಪತ್ನಿ, ಮಕ್ಕಳನ್ನು ಬೆದರಿಸಿ 9 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಮನೆಯ ವಾಹನದಲ್ಲೇ ಅಲ್ಪ ದೂರದ ವರೆಗೆ ಪ್ರಯಾಣಿಸಿ ನಂತರ ಅವರ ವಾಹನವನ್ನು ಮಧ್ಯದಲ್ಲೇ ಬಿಟ್ಟು ಇನ್ನೋವಾದಲ್ಲಿ ಪರಾರಿಯಾಗಿದರು. ನಾಲ್ವರು ಸ್ಥಳೀಯ ಆರೋಪಿಗಳಾದ ವಸಂತ್, ರಮೇಶ್, ರೇಮಂಡ್ ಮತ್ತು ಬಾಲಕೃಷ್ಣ ದರೋಡೆಗೆ ಯೋಜನೆ ರೂಪಿಸಿದ್ದರು. ಬಾಲಕೃಷ್ಣ ನಂತರ ಜಾನ್ ಬಾಸ್ಕೋ ನೇತೃತ್ವದ ಕೇರಳ ತಂಡದೊಂದಿಗೆ ಸಂಪರ್ಕ ಹೊಂದಿದ್ದರು.
ಎಂಟು ತಿಂಗಳ ಹಿಂದೆಯೇ ಯೋಜನೆ ರೂಪಿಸಲಾಗಿತ್ತು. ಕೇರಳದ ತಂಡ ಮಂಗಳೂರಿಗೆ ಭೇಟಿ ನೀಡಿದ್ದು, ದರೋಡೆಗೆ ಪ್ರದೇಶದ ಸ್ಕೆಚ್ ಮತ್ತು ನಕ್ಷೆಯನ್ನು ಸಿದ್ಧಪಡಿಸುವಂತೆ ರಮೇಶ್ ಮತ್ತು ವಸಂತ್ ಅವರನ್ನು ಕೇಳಿದ್ದರು ಅದರಂತೆಯೇ ಗುತ್ತಿಗೆದಾರನ ಬಳಿ 100 ರಿಂದ 300 ಕೋಟಿ ರೂ.ಗೂ ಹೆಚ್ಚು ಹಣವಿದೆ ಎಂದು ಸ್ಥಳೀಯ ಆರೋಪಿಗಳು ಕೇರಳ ತಂಡಕ್ಕೆ ತಿಳಿಸಿದ್ದು ಲೂಟಿಹೊಡೆಯಲು ಎಲ್ಲಾ ರೀತಿಯ ಸ್ಕೆಚ್ ತಯಾರಿಸಿದ್ದರು.
ಈ ಪ್ರಕರಣದಲ್ಲಿ ಇನ್ನೂ 4-5 ಮಂದಿಯನ್ನು ಬಂಧಿಸಬೇಕಿದ್ದು 100ರಿಂದ 300 ಕೋಟಿ ಲೂಟಿ ಮಾಡಬಹುದೆಂದು ನಂಬಿಸಿ ಮಾಸ್ಟರ್ ಬೆಡ್ರೂಮ್ನ ಟೈಲ್ಸ್ ತೆಗೆಯಲು 20ಕ್ಕೂ ಹೆಚ್ಚು ಗೋಣಿ ಚೀಲಗಳು ಮತ್ತು ಸಲಕರಣೆಗಳನ್ನು ತಂದಿದ್ದರು. ಒಂದೇ ಒಂದು ಸುಳಿವೇ ಇಲ್ಲದ ಕುರುಡು ಪ್ರಕರಣವಾಗಿರುವುದರಿಂದ ಆರೋಪಿಗಳ ಪತ್ತೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದರು. ಕಳೆದ 15 ದಿನಗಳಿಂದ ಈ ಪ್ರಕರಣವನ್ನು ಭೇದಿಸಲು ಅವಿರತವಾಗಿ ಶ್ರಮಿಸಿದ ಡಿಸಿಪಿ, ಎಸಿಪಿ ಮತ್ತು ಸಿಸಿಬಿ ಸಿಬ್ಬಂದಿಯನ್ನು ನಾನು ಅಭಿನಂದಿಸುತ್ತೇನೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Posted by Vidyamaana on 2023-05-27 11:36:45 |
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದೆ. ಮುಸ್ಲಿಂ ಯುವತಿಯ ಜೊತೆ ಸ್ನೇಹ ಬೆಳೆಸಿದ ಆರೋಪದಲ್ಲಿ ಅಜಿತ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದ ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದ್ದು, ಯುವತಿಯ ಮನೆಯಲ್ಲೇ ಅಜಿತ್ ಸಿಕ್ಕಿಬಿದ್ದಿದ್ದ. ಯುವತಿಯ ಮನೆಯ ಕಬೋರ್ಡ್ನಲ್ಲಿ ಅವಿತು ಕುಳಿತಿದ್ದ ಎಂಬ ವಿಚಾರ ಬಯಲಾಗಿದೆ.
ಅಜಿತ್ ಕಬೋರ್ಡ್ನಲ್ಲಿ ಅವಿತು ಕುಳಿತಿರುವುದು ಎನ್ನಲಾದ ವಿಡಿಯೋ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಯುವತಿಯ ಮನೆಯಲ್ಲಿ ಸಿಕ್ಕಿಬಿದ್ದ ಅಜಿತ್ ಮೇಲೆ ಯುವಕರ ಗುಂಪು ಹಲ್ಲೆ ಮಾಡಿತ್ತು. ಅನ್ಯಕೋಮಿನ ಯುವತಿಯೊಂದಿಗೆ ಸ್ನೇಹ ಮಾಡಿದ್ದಕ್ಕೆ ತನ್ನ ಮೇಲೆ ನಡು ರಸ್ತೆಯಲ್ಲಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿದ್ದ.
ಈ ಮಧ್ಯೆ ಅಜಿತ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಅಜಿತ್ಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Posted by Vidyamaana on 2024-01-13 04:46:08 |
ಕೊಚ್ಚಿ : ಕೇರಳದ ಎರ್ನಾಕುಲಂ ಕಾಲಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ವ್ಲಾಗರ್ ರನ್ನು ಬಂಧಿಸಿದ್ದಾರೆ.ಕುನ್ನತ್ತುನಾಡು ಮೂಲದ ಸ್ವಾತಿ ಕೃಷ್ಣ (28) ಬಂಧಿತ ಆರೋಪಿಯಾಗಿದ್ದು ಅಬಕಾರಿ ವಿಶೇಷ ತಂಡ ಬಂಧಿಸಿದೆ.ಆಕೆಯಿಂದ 2.78 ಗ್ರಾಂ ಎಂಡಿಎಂಎ ಹಾಗೂ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕಾಲಡಿ ಅಬಕಾರಿ ನಿರೀಕ್ಷಕ ಸಿಜೋ ವರ್ಗೀಸ್ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ.ಪೊಲೀಸರ ಪ್ರಕಾರ ಸ್ವಾತಿ ಕೃಷ್ಣ ಕಾಲೇಜು ವಿದ್ಯಾರ್ಥಿಗಳಿಗೆ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದಳು. ಕಳೆದ ಕೆಲ ದಿನಗಳಿಂದ ಅಬಕಾರಿ ಇಲಾಖೆ ನಿಗಾದಲ್ಲಿದ್ದಳು.
Posted by Vidyamaana on 2023-10-04 15:32:43 |
ನವದೆಹಲಿ: ಆನ್ಲೈನ್ ಸುದ್ದಿತಾಣ ನ್ಯೂಸ್ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಅವರನ್ನು 7 ದಿನಗಳ ಕಾಲ ಪೊಲೀಸರ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಸಂಸ್ಥೆಯ ಎಚ್ ಆರ್ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸುದ್ದಿತಾಣವು ಚೀನಾ ಪರ ಪ್ರಚಾರಾಂದೋಲನ ನಡೆಸಲು ಹಣ ಪಡೆದಿದೆ ಎಂಬ ಆರೋಪದ ಅಡಿಯಲ್ಲಿ ಅದರ ವಿರುದ್ಧ ಅಕ್ರಮ ಚಟುವಟಿಕೆಗಳ (ನಿಯಂತ್ರಣ) ಕಾಯ್ದೆಯ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
Posted by Vidyamaana on 2023-10-11 08:38:40 |
ಭಾರತೀಯ ಸಂಸ್ಕೃತಿ ಪ್ರತೀಕ ಬೆಳಕಿನ ಹಬ್ಬ ದೀಪಾವಳಿ (Diwali) ಸಮೀಪಿಸುತ್ತಿದೆ. ಮನೆಗಳಲ್ಲಿ ದೀಪಗಳನ್ನು ಬೆಳಗಿ, ಪಟಾಕಿ ಸಿಡಿಸಿ ಸಂಭ್ರಮಿಸಲು ಎಲ್ಲರೂ ಕಾಯುತ್ತಿದ್ದಾರೆ. ಪಟಾಕಿ ಹಬ್ಬ ಬಂತೆಂದರೆ ಸಾಕು, ಪರಿಸರ ಕಾಳಜಿ ಕೂಗೂ ಕೇಳಿಬರುತ್ತೆ. ವಾಯುಮಾಲಿನ್ಯ ಸಮಸ್ಯೆ ಕಾರಣ ಹಾನಿಕಾರಕ ಪಟಾಕಿಗಳ ಬದಲಿಗೆ ಪರಿಸರಕ್ಕೆ ಪೂರಕವಾದ ಪಟಾಕಿಗಳನ್ನು ಸಿಡಿಸುವಂತೆ ಸರ್ಕಾರಗಳು ಪ್ರತಿ ವರ್ಷ ಜಾಗೃತಿ ಮೂಡಿಸುತ್ತಲೇ ಇವೆ. ಈ ಅಭಿಯಾನಕ್ಕೆ ಅನೇಕ ಸಂಘಟನೆಗಳು ಸಹ ಕೈಜೋಡಿಸಿವೆ.
ವಾಯುಮಾಲಿನ್ಯದ ಕೇಂದ್ರ ಸ್ಥಾನವಾದ ದೆಹಲಿಯಲ್ಲಿ ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಜೈಲು ಗ್ಯಾರಂಟಿ. ಅಂತೆಯೇ ಅನೇಕ ರಾಜ್ಯಗಳಲ್ಲಿ ಸಂಪೂರ್ಣ ನಿರ್ಬಂಧ ವಿಧಿಸದಿದ್ದರೂ, ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು (Green Crackers) ಸಿಡಿಸುವಂತೆ ಸಲಹೆ ನೀಡಲಾಗಿದೆ. ಆ ನಿಟ್ಟಿನಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನೂ ನಡೆಸಲಾಗುತ್ತಿದೆ.ಹಾಗಾದರೆ ಏನಿದು ಹಸಿರು ಪಟಾಕಿ? ಮಾರುಕಟ್ಟೆಗಳಲ್ಲಿ ಅತ್ಯಾಕರ್ಷಕ ಪ್ಯಾಕೆಟ್ಗಳ ಮೂಲಕ ಗ್ರಾಹಕರನ್ನು ಸೆಳೆಯುವ ಪರಿಸರಕ್ಕೆ ಹಾನಿಕಾರವಾದ ಪಟಾಕಿಗಳ ನಡುವೆ ಹಸಿರು ಪಟಾಕಿಗಳನ್ನು ಗುರುತಿಸಿ ಖರೀದಿಸುವುದಾದರೂ ಹೇಗೆ?
ಸಾಮಾನ್ಯ ಪಟಾಕಿ ಹಾಗೂ ಹಸಿರು ಪಟಾಕಿಗೆ ಇರುವ ವ್ಯತ್ಯಾಸವೇನು?
ಒಂದರ್ಥದಲ್ಲಿ ಹೇಳುವುದಾದರೆ, ಹಸಿರು ಪಟಾಕಿ ಹಾಗೂ ಸಾಮಾನ್ಯ ಪಟಾಕಿ ಎರಡು ಕೂಡ ಮಾಲಿನ್ಯ ಉಂಟು ಮಾಡುತ್ತವೆ. ಆದರೆ ಸಾಮಾನ್ಯ ಪಟಾಕಿಗಳಿಗೆ ಹೋಲಿಸಿದರೆ ಹಸಿರು ಪಟಾಕಿಗಳು ಶೇಕಡಾ 30 ರಷ್ಟು ಕಡಿಮೆ ವಾಯು ಮಾಲಿನ್ಯಕಾರಕವನ್ನು ಹೊರಸೂಸುತ್ತದೆ. ಹಸಿರು ಪಟಾಕಿಗಳು ಮಾಲಿನ್ಯಕಾರಕ ಹೊಗೆ ಹೊರಸೂಸುವುದನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ, ಧೂಳನ್ನು ಹೀರಿಕೊಳ್ಳುತ್ತದೆ. ಅಲ್ಲದೇ ಬೇರಿಯಮ್ ನೈಟ್ರೇಟ್ನಂತಹ ಅಪಾಯಕಾರಿ ಅಂಶಗಳನ್ನು ಹೊಂದಿರುವುದಿಲ್ಲ. ಸಾಮಾನ್ಯ ಪಟಾಕಿಗಳಲ್ಲಿನ ವಿಷಕಾರಿ ಲೋಹಗಳನ್ನು ಕಡಿಮೆ ಅಪಾಯಕಾರಿ ಸಂಯುಕ್ತಗಳೊಂದಿಗೆ ಬದಲಾಯಿಸಲಾಗುತ್ತದೆ. ಸಾಮಾನ್ಯ ಪಟಾಕಿಗಳಂತೆ ಅಧಿಕ ಶಬ್ದ ಹಾಗೂ ಹೊಗೆ ಸೂಸುವ ಬದಲಾಗಿ ನೀರಿನ ಆವಿಯನ್ನು ಮಾತ್ರ ಬಿಡುಗಡೆ ಮಾಡುತ್ತದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಪ್ರಕಾರ, ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಕಳಪೆಯಾಗಿರುವ ನಗರಗಳು ಮತ್ತು ಪಟ್ಟಣಗಳಲ್ಲಿ ಮಾತ್ರ ಹಸಿರು ಪಟಾಕಿಗಳನ್ನು ಅನುಮತಿಸಲಾಗಿದೆ.
ಹಸಿರು ಪಟಾಕಿ ಎಲ್ಲಿ ಸಿಗುತ್ತೆ? ಗುರುತಿಸುವುದು ಹೇಗೆ?
ಹಸಿರು ಪಟಾಕಿಗಳ ಉತ್ಪಾದನೆಗೆ ಸಂಬಂಧಿಸಿದಂತೆ ಸರ್ಕಾರ ದೇಶದ 230 ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಹಸಿರು ಪಟಾಕಿಗಳ ಲಭ್ಯತೆ ಹಾಗೂ ಅವುಗಳನ್ನು ಗುರುತಿಸುವ ಬಗ್ಗೆ ಜನರಲ್ಲಿ ಗೊಂದಲ ಇದೆ. ಹಸಿರು ಪಟಾಕಿಗಳನ್ನು ಮಾರಾಟ ಮಾಡಲು ಸರ್ಕಾರ ಸಂಬಂಧಪಟ್ಟ ಇಲಾಖೆಗಳಿಂದ ಅಧಿಕೃತ ಪರವಾನಗಿ ಪಡೆದಿರುವ ಮಳಿಗೆಗಳಿಗಷ್ಟೇ ಮಾರಾಟಕ್ಕೆ ಅನುಮತಿ ನೀಡಿರುತ್ತದೆ.
ಗ್ರಾಹಕರು ತಾವು ಖರೀದಿಸುವ ಪಟಾಕಿಗಳು ಹಸಿರು ಪಟಾಕಿ ಹೌದೆ? ಅಥವಾ ಇಲ್ಲವೇ? ಎಂಬುದನ್ನು ತಿಳಿದುಕೊಳ್ಳಲು, ಪಟಾಕಿ ಪ್ಯಾಕ್ ಮೇಲಿನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬೇಕು. ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿ (CSIR), ರಾಷ್ಟ್ರೀಯ ಪರಿಸರ ಮತ್ತು ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ಹಾಗೂ ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆಯ ವಿಶಿಷ್ಟ ಹಸಿರು ಲೋಗೋ ಮೂಲಕ ಸಹ ಹಸಿರು ಪಟಾಕಿಗಳನ್ನು ಗುರುತಿಸಬಹುದಾಗಿದೆ. SWAS, SAFAL ಮತ್ತು STAR ಎಂಬ ಮೂರು ವರ್ಗದಲ್ಲಿ ಹಸಿರು ಪಟಾಕಿಗಳು ಸಿಗುತ್ತವೆ. ಇವನ್ನು CSIR ಅಭಿವೃದ್ಧಿಪಡಿಸಿದೆ.CSIR NEERI ಗ್ರೀನ್ ಕ್ಯೂಆರ್ ಕೋಡ್ ಅಪ್ಲಿಕೇಶನ್
ಹಸಿರು ಪಟಾಕಿಗಳು ಹೂ ಕುಂಡ, ಸುರುಸುರು ಬತ್ತಿ ರೀತಿ ಇರುತ್ತವೆ. ನಕಲಿ ಉತ್ಪನ್ನಗಳ ಮಾರಾಟ ತಪ್ಪಿಸಲು ಹಸಿರು ಪಟಾಕಿಗಳ ಮೇಲೆ ಕ್ಯೂಆರ್ ಕೋಡ್ ವ್ಯವಸ್ಥೆ ಇರುತ್ತದೆ. ಹಸಿರು ಪಟಾಕಿಗಳು ಶೆಲ್ ಗಾತ್ರಕ್ಕಿಂತಲೂ ಕಡಿಮೆ ಗಾತ್ರದಲ್ಲಿ ಮಾಡಲಾಗಿರುತ್ತದೆ. ಬೀದಿ ಬದಿ ವ್ಯಾಪಾರಿಗಳಿಂದ ಹಸಿರು ಪಟಾಕಿಗಳನ್ನು ಖರೀದಿಸಬಾರದು. ಪರವಾನಗಿ ಹೊಂದಿರುವ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು. ಗೂಗಲ್ ಪ್ಲೇಸ್ಟೋರ್ನಿಂದ CSIR NEERI ಗ್ರೀನ್ ಕ್ಯೂಆರ್ ಕೋಡ್ ಅಪ್ಲಿಕೇಶನ್ ಬಳಸಿ ಸ್ಕ್ಯಾನರ್ ಅನ್ನು ಡೌನ್ಲೋಡ್ ಮಾಡಿ ಅದರ ಮೂಲಕ ಗ್ರಾಹಕರು ಹಸಿರು ಪಟಾಕಿಗಳನ್ನು ಗುರುತಿಸಬಹುದು.ಹಸಿರು ಪಟಾಕಿ ಸಿಡಿಸುವವರು ಈ ಅಂಶಗಳನ್ನು ಗಮನದಲ್ಲಿಡಿ
ಹಸಿರು ಪಟಾಕಿಗಳನ್ನು ಸುಡುವಾಗ ಪಟಾಕಿ ಹಾಗೂ ನಿಮ್ಮ ನಡುವಿನ ಅಂತರ ಹೆಚ್ಚಿರಬೇಕು. ಕೈಯನ್ನು ನೇರವಾಗಿ ಇರಿಸಿ ಪಟಾಕಿಗೆ ಕಿಡಿ ತಾಗಿಸಬೇಕು. ಪಟಾಕಿಗಳನ್ನು ಸಿಡಿಸುವಾಗ ಬೂಟುಗಳನ್ನು ಧರಿಸುವುದು ಉತ್ತಮ. ಆಟದ ಮೈದಾನಗಳಂತಹ ತೆರೆದ ಸ್ಥಳಗಳಲ್ಲಿ ಪಟಾಕಿಗಳನ್ನು ಸಿಡಿಸುವುದು ಒಳಿತು. ಹಸಿರು ಪಟಾಕಿಗಳನ್ನು ಬೆಳಗಿಸುವ ಸಂದರ್ಭದಲ್ಲಿ ಒಂದೆರಡು ಬಕೆಟ್ಗಳಷ್ಟು ನೀರನ್ನು ಹತ್ತಿರದಲ್ಲಿ ಇಟ್ಟುಕೊಳ್ಳಬೇಕು. ಪಟಾಕಿ ಸಿಡಿಸುವವರು ಉದ್ದವಾದ, ಸಡಿಲವಾದ ಸಿಂಥೆಟಿಕ್ ಬಟ್ಟೆಗಳನ್ನು ಧರಿಸಬಾರದು.
Posted by Vidyamaana on 2023-04-27 07:37:52 |
ಪುತ್ತೂರು: ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದು ಭೂಮಿಯಿಲ್ಲದ ಬಡವನನ್ನು ಭೂಮಿಯ ಒಡೆಯನನ್ನಾಗಿ ಮಾಡಿದ್ದು ಕಾಂಗ್ರೆಸ್ನ ಇಂದಿರಾಗಾಂಧಿ ಅದೇ ರೀತಿ ಕರ್ನಾಟಕದಲ್ಲಿ ಕೃಷಿಗೆ ಉಚಿತ ವಿದ್ಯುತ್ ನೀಡುವ ಮೂಲಕ ಕೃಷಿಕರ ಬದುಕನ್ನು ಹಸನಾಗಿಸಿದ್ದೂ ಕಾಂಗ್ರೆಸ್ ಸರಕಾರವೇ ಆಗಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.
Posted by Vidyamaana on 2023-10-03 21:31:18 |
ವಿಟ್ಲ: ಭಾಗಿಯಾಗಿದ್ದ ಅಕ್ಷಯ್ ರಜಪೂತ್ ಗೆ ಗಡಿಪಾರು ನೋಟಿಸ್ ನೀಡಲಾಗಿದೆ.
ಕಲ್ಲಡ್ಕ ಬಾಳ್ತಿಲ ನಿವಾಸಿ ಅಕ್ಷಯ್ ರಜಪೂತ್ ಹಿಂದೂ ಜಾಗರಣಾ ವೇದಿಕೆಯ ಜವಾಬ್ದಾರಿಯನ್ನು ಹೊಂದಿದ್ದು ಇದೀಗ ಗಡಿಪಾರು ನೋಟೀಸ್ ನೀಡಿದ್ದಾರೆ.
ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!
ಗಡಿಪಾರು ನೋಟೀಸ್ ನಲ್ಲಿ ಏನಿದೆ ..?
ವಿಟ್ಲ ಠಾಣಾ ವ್ಯಾಪ್ತಿಯ ಯುವಕರನ್ನು ಸೇರಿಸಿಕೊಂಡು ಗುಂಪುಗಾರಿಕೆ ನಡೆಸುವುದು, ಹಲ್ಲೆ, ದೊಂಬಿ, ಮತೀಯ ಗಲಭೆಗಳನ್ನು ಸೃಷ್ಟಿಸಲು ಜೀವಬೆದರಿಕೆ ಹಾಕುವುದು, ನೈತಿಕ ಪೊಲೀಸ್ ಗಿರಿಯಂತಹ ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದ್ದು ವಿಟ್ಲ ಪರಿಸರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹಲವು ಬಾರಿ ಠಾಣೆಗೆ ಕರೆದು ಕಾನೂನು ತಿಳುವಳಿಕೆ ನೀಡಿದರೂ ಸಹ ತನ್ನ ಚಾಳಿ ಬಿಡದಿದ್ದು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟಾಗುವ ಸಾಧ್ಯತೆ ಇರುವುದರಿಂದ ಈತನನ್ನು ಗಡಿಪಾರು ಮಾಡಿ ಎಂದು ಬಂಟ್ವಾಳ ಠಾಣೆಯ ಪೊಲೀಸ್ ಉಪ ಅಧೀಕ್ಷರಕರು ಪ್ರಸ್ತಾವನೆ ಸಲ್ಲಿಸಿದರಿಂದ ದಿನಾಂಕ 9.10.2023 ರಂದು ಸಹಾಯಕ ಆಯುಕ್ತರ ನ್ಯಾಯಾಲಯ ಮಂಗಳೂರು ಉಪವಿಭಾಗ ಇಲ್ಲಿಗೆ ಹಾಜರಾಗುವಂತೆ ಅಕ್ಷಯ್ ರಜಪೂತ್ಗೆ ನೋಟೀಸ್ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.