ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

Posted by Vidyamaana on 2023-07-18 01:50:33 |

Share: | | | | |


ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ.


ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಇಂದು(ಜುಲೈ 18) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.


ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ ಕೊಟ್ಟಾಯಂನ ಸಿಎಮ್ಎಸ್ ಕಾಲೇಜು ಮತ್ತು ಚಂಗನಾಸ್ಸೆರಿಯ ಸೇಂಟ್ ಬರ್ಚ್ಮನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್ಎಲ್ಬಿ ಪದವಿ ಪೂರೈಸಿದ್ದರು.


ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967 ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ್ದರು. ಹೀಗೆ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯದತ್ತ ಆಕರ್ಷಿತರಾದ ಉಮ್ಮನ್ ಚಾಂಡಿ ಅವರು ಕಾಂಗ್ರೆಸ್ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ್ದರು.

ಸೈಕಲ್ ಓಡಿಸುವ ಮೂಲಕ ಫೇಮಸ್ ಆಗಿದ್ದ ಮೂವರು ಪುಟ್ಟ ಬಾಲಕಿಯರು ಭೂಕುಸಿತಕ್ಕೆ ಬಲಿ: ವಿಡಿಯೊ ಜೊತೆ ಭಾವುಕ ಪೋಸ್ಟ್ ಹಂಚಿಕೊಂಡ ಶಿಕ್ಷಕಿ ಶಾಲಿನಿ

Posted by Vidyamaana on 2024-08-01 16:26:39 |

Share: | | | | |


ಸೈಕಲ್ ಓಡಿಸುವ ಮೂಲಕ ಫೇಮಸ್ ಆಗಿದ್ದ ಮೂವರು ಪುಟ್ಟ ಬಾಲಕಿಯರು ಭೂಕುಸಿತಕ್ಕೆ ಬಲಿ: ವಿಡಿಯೊ ಜೊತೆ ಭಾವುಕ ಪೋಸ್ಟ್ ಹಂಚಿಕೊಂಡ ಶಿಕ್ಷಕಿ ಶಾಲಿನಿ

ಇದು ವರ್ಷದ ಹಿಂದೆ ವಯನಾಡಿನ ಮುಂಡಕ್ಕೈನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋದಲ್ಲಿ ಶಿಕ್ಷಕಿ, ತನ್ನ ಶಾಲಾ ಮಕ್ಕಳಿಗೆ ಸೈಕಲ್‌ ಕಲಿಸುತ್ತಿದ್ದರು. ಈಗ ಮತ್ತೆ ಅದೇ ಸ್ಥಳ ವೈರಲ್‌ ಆಗಿದೆ. ಆದ್ರೆ ಸ್ಥಳದಲ್ಲಿ ಈಗ ದುಃಖ ಮಡುಗಟ್ಟಿದೆ.

ಇಷ್ಟು ದಿನ ಮಕ್ಕಳ ಸಂತೋಷ, ನಗುವಿನಿಂದ ಕೂಡಿದ್ದ ಶಾಲೆ ಮೈದಾನ ಕೆಸರು ಗದ್ದೆಯಾಗಿದೆ.

ಹಳೆ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಹಂಚಿಕೊಂಡ ಶಾಲಿನಿ ತಂಕಚನ್, ತಮ್ಮ ದುಃಖವನ್ನು ತೋಡಿಕೊಂಡಿದ್ದಾರೆ. 4ನೇ ತರಗತಿಯ ಶಿಕ್ಷಕಿಯಾಗಿದ್ದ ಶಾಲಿನಿ ತಂಕಚನ್, ಈ ವಿಡಿಯೋ ಪೋಸ್ಟ್‌ ಮಾಡಿ ನನ್ನ ಪ್ರೀತಿ ಪಾತ್ರರು ಹೋದ್ರು ಅಂತ ಬರೆದಿದ್ದಾರೆ. ಸೈಕಲ್‌ ಓಡಿಸುತ್ತಿದ್ದ ಮೂವರು ಸೇರಿದಂತೆ ಭೂಕುಸಿತದಲ್ಲಿ ಒಂಭತ್ತು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ.

ಮಾತ್ರೆ ಪ್ಯಾಕೆಟ್ ಮೇಲೆ ಕೆಂಪು ಲೈನ್‌ ಏಕೆ? ಇದರ ಅರ್ಥ ಏನು? ನಿಮಗೆ ಗೊತ್ತಾ

Posted by Vidyamaana on 2024-03-13 17:14:47 |

Share: | | | | |


ಮಾತ್ರೆ ಪ್ಯಾಕೆಟ್ ಮೇಲೆ ಕೆಂಪು ಲೈನ್‌ ಏಕೆ? ಇದರ ಅರ್ಥ ಏನು? ನಿಮಗೆ ಗೊತ್ತಾ

ಸಾಮಾನ್ಯವಾಗಿ, ಅನೇಕ ಜನರು ಅನಾರೋಗ್ಯಕ್ಕೆ ಒಳಗಾದಾಗ, ಅವರು ವೈದ್ಯರ ಬಳಿಗೆ ಹೋಗದೆ ನೇರವಾಗಿ ಮೆಡಿಕಲ್ ಸ್ಟೋರ್‌ಗೆ ಹೋಗಿ ಮಾತ್ರೆಗಳನ್ನು ಖರೀದಿಸುತ್ತಾರೆ. ಕೆಲವೊಮ್ಮೆ ಔಷಧಿಯನ್ನು ವೈದ್ಯರಿಗೆ ತೋರಿಸಿದ ನಂತರ ತೆಗೆದುಕೊಳ್ಳಲಾಗುತ್ತದೆ.ನೀವು ನೇರವಾಗಿ ಮೆಡಿಕಲ್ ಸ್ಟೋರ್‌ಗೆ ಹೋಗಿ ನಿಮ್ಮ ಸಮಸ್ಯೆಯನ್ನು ಗುಣಪಡಿಸುವ ಔಷಧಿಯನ್ನು ಪಡೆದರೂ, ಕೆಲವೊಮ್ಮೆ ನೀವು ಗಂಭೀರ ಅಡ್ಡಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ. ನೋವು ನಿವಾರಕಗಳು, ಆಯಂಟಿಬಯೋಟಿಕ್‌ಗಳು ಮುಂತಾದ ತಕ್ಷಣದ ನೋವು ನಿವಾರಕ ಮಾತ್ರೆಗಳನ್ನು ಖರೀದಿಸುವಾಗ ಮಾತ್ರೆ ಪ್ಯಾಕೆಟ್‌ನಲ್ಲಿ ಕೆಂಪು ಗೆರೆಗಳನ್ನು ನೀವು ಗಮನಿಸಿರಬಹುದು. ಆದರೆ ಈ ಕೆಂಪು ರೇಖೆ ಏಕೆ ಇರುತ್ತದೆ ಎಂದು ನೀವೂ ಎಂದಾದರೂ ಯೋಚಿಸಿದ್ದೀರಾ..? ಹಾಗಾದರೆ ಇಲ್ಲಿ ತಿಳಿಯಿರಿ..


ಮಾತ್ರೆ ಪ್ಯಾಕೆಟ್‌ನಲ್ಲಿರುವ ಕೆಂಪು ರೇಖೆಯ ಅರ್ಥವೇನು?

ವಾಸ್ತವವಾಗಿ, ಮಾತ್ರೆ ಪ್ಯಾಕೆಟ್‌ನಲ್ಲಿ ಕೆಂಪು ರೇಖೆ ಎಂದರೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾತ್ರೆ ಮಾರಾಟ ಮಾಡಬೇಡಿ ಅಥವಾ ವೈದ್ಯರ ಸಲಹೆಯಿಲ್ಲದೆ ಬಳಸಬೇಡಿ. ಆದ್ದರಿಂದ, ಪ್ರತಿಜೀವಕಗಳ ದುರುಪಯೋಗವನ್ನು ತಡೆಗಟ್ಟಲು, ಔಷಧಿಗಳ ಮೇಲೆ ಕೆಂಪು ರೇಖೆಯನ್ನು ನೀಡಲಾಗುತ್ತದೆ. ಆರೋಗ್ಯ ಸಚಿವಾಲಯವು ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದೆ.ಔಷಧಿಗಳು, ವಿಶೇಷವಾಗಿ ಪ್ಯಾಕೇಜಿಂಗ್‌ನಲ್ಲಿ ಕೆಂಪು ಲಂಬ ರೇಖೆಯನ್ನು ಹೊಂದಿರುವ ಪ್ರತಿಜೀವಕಗಳನ್ನು ಅರ್ಹ ವೈದ್ಯರನ್ನು ಸಂಪರ್ಕಿಸದೆ ಎಂದಿಗೂ ಸೇವಿಸಬಾರದು. ಜಾಗೃತರಾಗಿರಿ, ಸುರಕ್ಷಿತವಾಗಿರಿಕೆಂಪು ರೇಖೆಯ ಹೊರತಾಗಿ, ಔಷಧದ ಮೇಲೆ ಅನೇಕ ಉಪಯುಕ್ತ ವಿಷಯಗಳನ್ನು ಬರೆಯಲಾಗಿದೆ. ಅವರ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ಕೆಲವು ಔಷಧಿಗಳ ಪ್ಯಾಕೆಟ್ ಮೇಲೆ Rx ಎಂದು ಬರೆಯಲಾಗಿದೆ. ಅಂದರೆ ವೈದ್ಯರ ಸಲಹೆಯಂತೆ ಔಷಧಿಗಳನ್ನು ತೆಗೆದುಕೊಳ್ಳಬೇಕು. ಕೆಲವು ಔಷಧಿಗಳ ಪ್ಯಾಕೆಟ್ ಮೇಲೆ XRx ಎಂದು ಬರೆಯಲಾಗಿದೆ. ಇದರರ್ಥ ಔಷಧಿಯನ್ನು ವೈದ್ಯರು ಮಾತ್ರ ಸೂಚಿಸಬಹುದು. ವೈದ್ಯರು ಈ ಔಷಧಿಯನ್ನು ನೇರವಾಗಿ ರೋಗಿಗೆ ನೀಡಬಹುದು. ವೈದ್ಯರು ಬರೆದ ಪ್ರಿಸ್ಕ್ರಿಪ್ಷನ್ ಇದ್ದರೂ, ರೋಗಿಯು ಅದನ್ನು ಯಾವುದೇ ಮೆಡಿಕಲ್ ಸ್ಟೋರ್‌ನಿಂದ ಖರೀದಿಸಲು ಸಾಧ್ಯವಿಲ್ಲ.

ಪ್ರೀತಿಸುವಂತೆ ವಿವಾಹಿತೆಗೆ ಜೈಲಿನಿಂದಲೇ ಪಾಗಲ್‌ ಪ್ರೇಮಿ ಬ್ಲ್ಯಾಕ್‌ಮೇಲ್‌

Posted by Vidyamaana on 2023-09-11 19:33:40 |

Share: | | | | |


ಪ್ರೀತಿಸುವಂತೆ ವಿವಾಹಿತೆಗೆ ಜೈಲಿನಿಂದಲೇ ಪಾಗಲ್‌ ಪ್ರೇಮಿ ಬ್ಲ್ಯಾಕ್‌ಮೇಲ್‌

ಬೆಂಗಳೂರು: ಜೈಲಿನಿಂದಲೇ ಫೋನ್‌ ಮಾಡಿ ವಿವಾಹಿತೆಗೆ ಪ್ರೀತಿಸುವಂತೆ (Love Case) ಪ್ರೇಮಿಯೊಬ್ಬ ಕೊಲೆ ಬೆದರಿಕೆ (Blackmailing) ಹಾಕಿರುವ ಘಟನೆ ವರದಿ ಆಗಿದೆ. ಅಕ್ರಮಗಳ ಅಡ್ಡೆಯಾಗಿರುವ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿಗಳಿಗೆ ಸಲೀಸಾಗಿ ಮೊಬೈಲ್ ಸಿಗುತ್ತಿದೆ.ಶ್ರೀನಿವಾಸ ಎಂಬಾತ ಜೈಲು ಸೇರಿದ್ದರೂ, ಅಲ್ಲಿಂದಲೇ ಅಮಲಾ ಎಂಬಾಕೆಗೆ ಕೊಲೆ ಬೆದರಿಕೆ (Blackmail Case) ಹಾಕುತ್ತಿದ್ದಾನೆ.


ಜೈಲಿಗೆ ಕಳಿಸಿದ್ದೀಯಾ ಈಗ ನನ್ನ ನೋಡಲು ಜೈಲಿಗೆ ಬಾ, ಬರದಿದ್ದರೆ ಹೊರಗೆ ಬಂದು ಹತ್ಯೆ ಮಾಡುವುದಾಗಿ ಅಮಲಾಗೆ ಧಮ್ಕಿ ಹಾಕಿದ್ದಾನೆ. ಜೈಲಿನಲ್ಲಿ ತನ್ನೊಟ್ಟಿಗೆ ಇರುವಂತೆ ಹೇಳುತ್ತಿದ್ದಾನೆ ಎಂದು ಸಂತ್ರಸ್ಥೆ ಆರೋಪಿ ಶ್ರೀನಿವಾಸ ವಿರುದ್ಧ ಮತ್ತೊಮ್ಮೆ ದೂರು ನೀಡಿದ್ದಾರೆ.ಬ್ಯಾಟರಾಯನಪುರ ನಿವಾಸಿಯಾದ ಅಮಲಾ ಮದುವೆಯಾಗಿ ಪತಿಯಿಂದ ದೂರವಾಗಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಈ ಶ್ರೀನಿವಾಸ ಅಮಲಾಳನ್ನು ಮೋಹಿಸಿದ್ದ. ಆಕೆ ಹಿಂದೆ ಬಿದ್ದು ಪ್ರೀತಿಸು ಇಲ್ಲದಿದ್ದರೆ ಆಯಸಿಡ್ ಹಾಕುವೆ, ಚಾಕುವಿನಿಂದ ಚುಚ್ಚಿ ಕೊಲೆ ಮಾಡುವುದಾಗಿ ಆವಾಜ್ ಹಾಕುತ್ತಿದ್ದ.


ಆತನ ಹುಚ್ಚುತನಕ್ಕೆ ಮನಸೋತು ಅಮಲಾ ಶ್ರೀನಿವಾಸ್ ಪ್ರೀತಿಗೆ ಸಮ್ಮತಿಸಿದ್ದರು. ಕೆಲಕಾಲ ಇಬ್ಬರು ಪ್ರೀತಿಯ ಗುಂಗಲ್ಲಿ ತೇಲಾಡಿದ್ದರು. ಈ ನಡುವೆ ಅಮಲಾ ಮದುವೆ ವಿಚಾರ ಪ್ರಸ್ತಾಪ ಮಾಡಿದಾಗ ಶ್ರೀನಿವಾಸ ಉಲ್ಟಾ ಹೊಡೆಡಿದ್ದ. ನಿನ್ನನ್ನು ಮದುವೆ ಆಗಲ್ಲ, ಜತೆಯಲ್ಲೇ ಇರು ಸಾಕು ಎಂದಿದ್ದ. ಅಲ್ಲದೇ ಇದೇ ವಿಚಾರಕ್ಕೆ ಶ್ರೀನಿವಾಸ ಮತ್ತು ಆತನ ತಾಯಿ ಸೇರಿ ಅಮಲಾ ಮೇಲೆ ಹಲ್ಲೆ ನಡೆಸಿದ್ದರು.ಹೀಗಾಗಿ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಅಮಲಾ ಈ ಸಂಬಂಧ ದೂರು ದಾಖಲಿಸಿದ್ದರು. ಆರೋಪಿ ಶ್ರೀನಿವಾಸನನ್ನು ಬಂಧಿಸಿ ಜೈಲಿಗಟ್ಟಿದ್ದರು. ಜೈಲು ಸೇರಿದರೂ ಬುದ್ಧಿ ಕಲಿಯದ ಶ್ರೀನಿವಾಸ, ಅಲ್ಲಿಂದಲೇ ಅಮಲಾಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾನೆ. ಹೀಗಾಗಿ ಸಂತ್ರಸ್ಥೆ ಮಹಿಳೆ ಶ್ರೀನಿವಾಸ್‌ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.

ಸುಳ್ಯ : ಬೊಳ್ಳಾಜೆಯಲ್ಲಿ ತೆಂಗಿನ ಮರದಿಂದ ಬಿದ್ದು ಹರೀಶ್ ಮೃತ್ಯು

Posted by Vidyamaana on 2023-04-11 08:02:40 |

Share: | | | | |


ಸುಳ್ಯ : ಬೊಳ್ಳಾಜೆಯಲ್ಲಿ ತೆಂಗಿನ ಮರದಿಂದ ಬಿದ್ದು ಹರೀಶ್  ಮೃತ್ಯು

 ಸುಳ್ಯ :ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯ ಯುವಕನೋರ್ವ  ಬೊಳ್ಳಾಜೆ ಎಂಬಲ್ಲಿ ತೆಂಗಿನ ಕಾಯಿ ತೆಗೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ. 

ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆ ದಿ|ಕುಂಞ ಎಂಬವರ  ಪುತ್ರ ಹರೀಶ (29) ಎಂಬವರೇ ಮೃತ ವ್ಯಕ್ತಿ.

    ಹರೀಶ್ ಇಂದು ಬೆಳಿಗ್ಗೆ ನೆಲ್ಲೂರು ಕೆಮ್ರಾಜೆಯ ಬೊಳ್ಳಾಜೆ ಬಳಿಯ ಕಂದೂರು ಸಚಿನ್‌ ಕೆ ಎಸ್ ಎಂಬವರ ಜಾಗದಲ್ಲಿ ತೆಂಗಿನ ತೆಗೆಯಲು ಈ ಜಾಗವನ್ನು ನೋಡಿಕೊಳ್ಳುತ್ತಿದ್ದ ಮನಮೋಹನ ಕೆ ಎಂಬವರು ತೆಂಗಿನ ಕಾಯಿ ತೆಗೆಯಲು ಇಬ್ಬರನ್ನು ಕರೆಸಿಕೊಂಡಿದ್ದರೆನ್ನಲಾಗಿದೆ. ಮಧ್ಯಾಹ್ನದ ಸುಮಾರಿಗೆ ಹರೀಶರವರು ತೆಂಗಿನ ಮರದಿಂದ ಕಾಯಿ ಕಿತ್ತು ಇಳಿಯುತ್ತಿದ್ದಾಗ ಸ್ಮೃತಿ ತಪ್ಪಿ ಕೆಳಗೆ ಬಿದ್ದರೆನ್ನಲಾಗಿದೆ.

ಕೂಡಲೇ ಅಲ್ಲಿ ಇದ್ದವರು ಅಸ್ಪತ್ರೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರೆನ್ನಲಾಗಿದೆ‌. 

ಮೃತರು ಪತ್ನಿ  ಎರಡು ಮಕ್ಕಳು ತಾಯಿ ಮತ್ತು ಸಹೋದರ ಸತೀಶ ಹಾಗೂ ಬಂದು ಮಿತ್ರರನ್ನು ಅಗಲಿದ್ದಾರೆ.

Shocking : ಆವರಣದಲ್ಲೇ ಹೆತ್ತ ತಾಯಿಗೆ ಬೆಂಕಿ ಹಚ್ಚಿದ ಮಗ : ಇಲ್ಲಿದೆ ಭಯಾನಕ ವಿಡಿಯೋ

Posted by Vidyamaana on 2024-07-17 13:26:01 |

Share: | | | | |


Shocking : ಆವರಣದಲ್ಲೇ ಹೆತ್ತ ತಾಯಿಗೆ ಬೆಂಕಿ ಹಚ್ಚಿದ ಮಗ : ಇಲ್ಲಿದೆ ಭಯಾನಕ ವಿಡಿಯೋ

ಅಲಿಗಢ: ಪೊಲೀಸ್ ಠಾಣೆ ಆವರಣದಲ್ಲಿಯೇ ಯುವಕನೊಬ್ಬ ತನ್ನ ತಾಯಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ತನ್ನ ಸಂಬಂಧಿಕರೊಂದಿಗಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತನ್ನ ತಾಯಿ ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಯುವಕ ಚಿತ್ರಿಸಲು ಪ್ರಯತ್ನಿಸಿದನು.

ಯುವಕ ತನ್ನ ತಾಯಿಗೆ ಬೆಂಕಿ ಹಚ್ಚುವಾಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾನೆ. ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಯುವಕನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಖೈರ್ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಸಂಬಂಧಿಕರೊಂದಿಗೆ ಆಸ್ತಿ ವಿವಾದದಿಂದಾಗಿ ಮಹಿಳೆ ಮತ್ತು ಆಕೆಯ ಮಗ ಪೊಲೀಸ್ ಠಾಣೆಯನ್ನು ತಲುಪಿದ್ದಾರೆ. ಸ್ವಲ್ಪ ಸಮಯದ ನಂತರ, ಮಹಿಳೆ ಮತ್ತು ಆಕೆಯ ಮಗ ಪೊಲೀಸ್ ಠಾಣೆಯಿಂದ ಹೊರಬಂದು ಆವರಣದೊಳಗಿನ ನಿರ್ಜನ ಸ್ಥಳಕ್ಕೆ ತೆರಳಿದರು. ಮಹಿಳೆ ತನ್ನ ದೇಹದಾದ್ಯಂತ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಪೊಲೀಸರಿಗೆ ಬೆದರಿಕೆ ಹಾಕಲು ಪ್ರಾರಂಭಿಸಿದಳು

Recent News


Leave a Comment: