Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23
ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”
ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.
ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.
ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.
ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!
ಡಾ. ಶಿವರಾಮ ಭಟ್ ಗುರು:
ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ. ಶಿವರಾಮ ಭಟ್ ಎಂದು ನಂಬಿದ್ದರು.
ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!
ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.
Posted by Vidyamaana on 2023-10-29 15:35:36 |
ಪುತ್ತೂರು : ಪ್ರಯಾಣಿಕರ ಓವರ್ ಲೋಡ್ಗೆ ಭಯಗೊಂಡು ಕೆಎಸ್ಆರ್ ಟಿಸಿ ಬಸ್ ಓಡಿಸಲು ನಿರಾಕರಿಸಿದ ಚಾಲಕ ಘಟನೆ ಕಡಬದಿಂದ ಪುತ್ತೂರಿಗೆ ತೆರಳುವ ಬಸ್ ನಲ್ಲಿ ನಡೆದಿದೆ.
ಬಸ್ ಅಲಂಕಾರ್ ತಲುಪಿದಾಗ 130 ಮಂದಿ ಬಸ್ ಹತ್ತಿದ್ದರು. ಇದು ವಾಹನದ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಾಗಿತ್ತು. ಅರ್ಧದಷ್ಟು ಪ್ರಯಾಣಿಕರು ಇಳಿಯಬೇಕು ಇಲ್ಲದಿದ್ದರೆ ಬಸ್ ಓಡಿಸಲು ಹೋಗುವುದಿಲ್ಲ ಎಂದು ಚಾಲಕ ಹೇಳಿದರು.
ಇತ್ತೀಚೆಗೆ ಕಡಬದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ ಹೋಗುವ ಬೆಳಗ್ಗಿನ ಸಂಚಾರಿಸುವ ಒಂದು ಬಸ್ಸನ್ನು ನಿಲ್ಲಿಸಲಾಗಿತ್ತು. ಈ ಹಿನ್ನಲೆ ಬೆಳಗ್ಗಿನ ಆರಂಭದ ಬಸ್ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಓವರ್ ಲೋಡ್
ಆಗುತ್ತಿತ್ತು. ಇದರಿಂದ ಇತ್ತೀಚೆಗೆ ಬಸ್ ನ ಟಯರ್ ಬ್ಲಾಸ್ಟ್ ಆದ ಘಟನೆ ನಡೆದಿತ್ತು. ಹೀಗಾಗಿ ಬಸ್ ಚಾಲಕನಿಗೆ 5,000 ದಂಡ ಕೂಡ ವಿಧಿಸಲಾಗಿತ್ತು. ಇತ್ತ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಈ ಮಾರ್ಗದಲ್ಲಿ ಹೆಚ್ಚುವರಿ ಬಸ್ ಹಾಕುವಂತೆ ಜನರು ವಿನಂತಿಸಿದರು ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಪ್ರಯಾಣಿಕರ ಆರೋಪ.
ಕಡಬದಿಂದ ಶಾಂತಿಮುಗೇರು ಮಾರ್ಗವಾಗಿ 7.30 ಕ್ಕೆ ಬಸ್ಸು ಹೊರಟರೆ ಮತ್ತೆ 8.40 ರ ನಂತರವೇ ಕಡಬದಿಂದ ಈ ಮಾರ್ಗವಾಗಿ ಬಸ್ ತೆರಳುತ್ತದೆ. ಪರಿಣಾಮ 7.30 ರ ಬಸ್ಸು ಆಲಂಕಾರು ತಲುಪುವಾಗ ಜನರಿಂದ ತುಂಬಿಹೋಗಿರುತ್ತದೆ. ಇನ್ನು ಈ ಬಸ್ಸಿನಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಿವಿಧ ಸರ್ಕಾರಿ ಉದ್ಯೋಗಿಗಳು ಸೇರಿದಂತೆ ಇತರ ಪ್ರಯಾಣಿಕರೆಂದು ಸುಮಾರು 150 ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಾರೆ. ಹೀಗಾಗಿ ಚಾಲಕ ಅಪಾಯ ಸಂಭವಿಸಬಹುದು ಎಂದು ಬಸ್ ಟಯರ್ ದುರ್ಬಲವಾಗಿದೆ ನಾನು ಇನ್ನು ಮುಂದೆ ಬಸ್ಸು ಓಡಿಸುವುದಿಲ್ಲ ನಿಲ್ಲಿಸಲಾಯಿತು.
ಬಳಿಕ ಪ್ರಯಾಣಿಕ ಒಬ್ಬ ಡಿಪೋಗೆ ಕರೆ ಮಾಡಿ ವಿಷಯ ತಿಳಿಸಿದ ಬಳಿಕ ಚಾಲಕ ಬಸ್ ಓಡಿಸಲು ಮುಂದಾದ . ಆದರೆ ಕಡಬದಿಂದ ಶಾಂತಿಮುಗೇರು ಮಾರ್ಗವಾಗಿ ಹೋಗುವ ಬಸ್ಸಿನ ಸೇವೆಯನ್ನು ಕಡಿತಗೊಳಿಸಿರುವುದೇ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದಕ್ಕೆ ಕಾರಣ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
Posted by Vidyamaana on 2024-02-25 08:33:25 |
ಕರ್ನಾಟಕ ಮೂಲದ ನಟಿ ಪ್ರಿಯಾಮಣಿ ಇತ್ತೀಚೆಗಷ್ಟೆ ಐಶಾರಾಮಿ ಕಾರೊಂದನ್ನು ಖರೀದಿ ಮಾಡಿದ್ದಾರೆ
ಕನ್ನಡತಿ ನಟಿ ಪ್ರಿಯಾಮಣಿ, ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಪ್ರತಿಭಾವಂತ ನಟಿ ಈಗಲೂ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.ಬರೋಬ್ಬರಿ ಎರಡು ದಶಕಕ್ಕೂ ಹೆಚ್ಚು ಸಮಯದಿಂದ ನಟನೆಯಲ್ಲಿ ತೊಡಗಿಸಿಕೊಂಡಿರುವ ಪ್ರಿಯಾಮಣಿ, ಈಗಲೂ ಸಾಲು-ಸಾಲು ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.ಇತ್ತೀಚೆಗಷ್ಟೆ ಪ್ರಿಯಾಮಣಿ ಐಶಾರಾಮಿ ಕಾರೊಂದನ್ನು ಖರೀದಿ ಮಾಡಿದ್ದಾರೆ. ಮರ್ಸಿಡೀಸ್ ಬೆಂಜ್ ನ ಜಿಎಲ್ಸಿ ಕಾರನ್ನು ಪ್ರಿಯಾಮಣಿ ಖರೀದಿ ಮಾಡಿದ್ದಾರೆ.
ತಮ್ಮ ಪತಿ ಮುಸ್ತಾಫಾ ರಾಜಾ, ಅತ್ತೆಯೊಟ್ಟಿಗೆ ಮರ್ಸಿಡೀಜ್ ಬೆಂಜ್ ಶೋರೂಂಗೆ ಬಂದು ಮೆಚ್ಚಿನ ಕಾರನ್ನು ಖರೀದಿ ಮಾಡಿದ್ದಾರೆ ಪ್ರಿಯಾಮಣಿಅರಿಶಿಣ-ಕುಂಕುಮವಿಟ್ಟು, ತೆಂಗಿನ ಕಾಯಿ ಒಡೆದು, ಹಾರ ಹಾಕಿ ಕಾರಿಗೆ ಪೂಜೆ ಮಾಡಿ ಕಾರನ್ನು ಕೊಂಡೊಯ್ದಿದ್ದಾರೆ ಪ್ರಿಯಾಮಣಿ.
ಪ್ರಿಯಾಮಣಿ ಕಾರು ಖರೀದಿ ಮಾಡಿರುವ ಚಿತ್ರಗಳನ್ನು ಮರ್ಸಿಡೀಜ್ ಬೆಂಜ್ ಇಂಡಿಯಾ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ.ಅಂದಹಾಗೆ ಪ್ರಿಯಾಮಣಿ ಖರೀದಿ ಮಾಡಿರುವ ಐಶಾರಾಮಿ ಮರ್ಸಿಡೀಜ್ ಬೆಂಜ್ ಜಿಎಲ್ಸಿ ಕಾರಿನ ಬೆಲೆ ಬೆಂಗಳೂರಿನಲ್ಲಿ 90.15 ಲಕ್ಷದಿಂದ ಒಂದು ಕೋಟಿ ಆಗುತ್ತದೆ.
Posted by Vidyamaana on 2024-04-03 20:41:13 |
ನೆಲ್ಯಾಡಿ : ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಏ.3 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ.
Posted by Vidyamaana on 2024-03-12 12:31:42 |
ಮಂಗಳೂರು, ಮಾರ್ಚ್ 12: ಲೋಕಸಭೆ ಚುನಾವಣೆಯಲ್ಲಿ (Lok Sabha Election) ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ಗೆ (Nalin Kumar Kateel) ಬಿಜೆಪಿ (BJP) ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ವರದಿಗಳಾಗಿವೆ. ಆ ಕುರಿತು ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಸಂಸದರು, ಭಾವುಕರಾರದರು. ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಅವರ ಆಯ್ಕೆಯನ್ನು ಸ್ವಾಗತಿಸುತ್ತೇನೆ ಎಂದರು.ಪಕ್ಷವು ನಿಂತ ನೀರಾಗಬಾರದು: ನಳಿನ್
ಪಕ್ಷವು ನಿಂತ ನೀರಾಗಬಾರದು. ಹೊಸಬರು ಬರುತ್ತಾ ಇರಬೇಕು. ಚಲಾವಣೆ ಆಗುತ್ತಾ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು ಎಂದು ನಳಿನ್ ಹೇಳಿದರು.
ಪಕ್ಷ ಹೇಳಿದ ಕೆಲಸ ಮಾಡುತ್ತೇವೆ: ಕಟೀಲ್
ನಾವು ಪಕ್ಷ ಏನೇ ಹೇಳಿದರೂ ಮಾಡುತ್ತೇವೆ. ಪಕ್ಷದವರು ನಮ್ಮ ಬಳಿ ಗುಡಿಸು ಎಂದರೆ ಗುಡಿಸುತ್ತೇವೆ. ಒರೆಸು ಎಂದು ಹೇಳಿದರೆ ಒರೆಸುತ್ತೇವೆ. ನಮಗೆ ಅಧಿಕಾರವೇ ಪ್ರಾಮುಖ್ಯ ಅಲ್ಲ. ಏನು ಬದಲಾವಣೆ ಮಾಡಬೇಕೋ ಅದನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ. ಸಾಮಾಜಿಕ ಜಾಲತಾಣಗಳ ಚರ್ಚೆ ಬಗ್ಗೆ ನಾನು ಹೆಚ್ಚು ತಲೆಕಡಿಸಿಕೊಳ್ಳುವುದಿಲ್ಲ. ನಾವು ಕಾರ್ಯವನ್ನು ನಂಬಿರುವಂಥವರು. ಕಾರ್ಯಕರ್ತರ ಆಧಾರದಲ್ಲಿ ಬೆಳೆದವರು ಎಂದು ಹೇಳಿದರು.ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿರುವುದನ್ನು ರಾತ್ರಿ ನೋಡಿದೆ. ರಾಷ್ಟ್ರೀಯ ನಾಯಕರು ಯಾವ ತೀರ್ಮಾನ ತಗೊಂಡರೂ ಅದು ಪಾರ್ಟಿಯ ತೀರ್ಮಾನ. ಆ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ನನಗೂ ಮೂರು ಬಾರಿ ಅವಕಾಶ ನೀಡಿದ್ದಾರೆ. ಹದಿನೈದು ವರ್ಷ ಕೆಲಸ ಮಾಡಿದ್ದೇನೆ. ಪಕ್ಷ ಈ ಬಗ್ಗೆ ನಿರ್ಧಾರ ಮಾಡುತ್ತದೆ. ನಮ್ಮ ಪಾರ್ಟಿಯಲ್ಲಿ ತುಳಿಯುವ ಕೆಲಸ ಆಗಲ್ಲ. ಅದರ ಬದಲಿಗೆ ಬೆಳೆಸುವ ಕೆಲಸ ಕಾರ್ಯ ಆಗುತ್ತದೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಬಂದವನು. ಸಂಘದ ಕಾರ್ಯಕ್ಕೋಸ್ಕರ ಬಂದಿದ್ದು. ಬಿಜೆಪಿ ಕೆಲಸ ಮಾಡು ಎಂದಾಗ ಮಾಡಿದೆ. ಲೋಕಸಭೆ ಚುನಾವಣೆಗೆ ನಿಲ್ಲು ಎಂದರು, ಸ್ಪರ್ಧಿಸಿದೆ. ಆ ಬಳಿಕ ರಾಜ್ಯಾಧ್ಯಕ್ಷನೂ ಆದೆ. ಯಾವ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತ ರಾಜ್ಯಾಧ್ಯಕ್ಷ ಆಗುತ್ತಾರೆ ಎಂದು ನಳಿನ್ ಪ್ರಶ್ನಿಸಿದರು.ಬಿಜೆಪಿಯಲ್ಲಿ ಯಾರನ್ನೂ ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ ನನಗೆ ನ್ಯಾಯ ಸಿಕ್ಕಿದೆ. ಅವಕಾಶ ಸಿಕ್ಕಿಲ್ಲ ಅಂದಾಗ ಅನ್ಯಾಯ ಆಗಿದೆ ಎಂದು ಹೇಳುವ ಹಕ್ಕು ನಮಗಿಲ್ಲ. ಎಲ್ಲರನ್ನೂ ಪಾರ್ಟಿ ಬೆಳೆಸಿದೆ. ಟಿಕೆಟ್ ಸಿಕ್ಕಿಲ್ಲ ಎಂದ ಕೂಡಲೇ ಅಂಥವರನ್ನು ಕೈಬಿಟ್ಟಿದೆ ಎಂದು ಅರ್ಥ ಅಲ್ಲ. ಮುಂದಕ್ಕೆ ಬಹಳಷ್ಟು ಅವಕಾಶ ಸಿಗಬಹುದು. ಪಕ್ಷದ ಕೆಲಸ ಮಾಡೋದಕ್ಕೂ ಜನ ಬೇಕಲ್ಲ. ಈ ಬಗ್ಗೆ ಯೋಚನೆ ಮಾಡಿಕೊಂಡೇ ರಾಷ್ಟ್ರೀಯ ನಾಯಕರು ಪಟ್ಟಿ ಘೋಷಣೆ ಮಾಡುತ್ತಾರೆ. ನಾವು ಸಂಘಟನೆ ಕಾರ್ಯ ಮಾಡುವವರು, ಹೀಗಾಗಿ ಯಾವುದೇ ಅಸಮಾಧಾನ ಇಲ್ಲ ಎಂದು ಕಟೀಲ್ ಹೇಳಿದರು
Posted by Vidyamaana on 2024-01-12 06:20:00 |
ನವದೆಹಲಿ (ಜ.12): ಭಾರತದ ಸತ್ಯ ನಾದೆಳ್ಳೆ ಮುಖ್ಯ ವ್ಯವಸ್ಥಾಪಕ ಅಧಿಕಾರಿಯಾಗಿ ಮೈಕ್ರೋಸಾಫ್ಟ್ನ ಅಧಿಕಾರ ವಹಿಸಿಕೊಂಡ ಬಳಿಕ ಮೈಕ್ರೋಸಾಫ್ಟ್ ಕಂಪನಿಯ ಚಹರೆಯೇ ಬದಲಾಗಿದೆ ಎನ್ನುವ ಸೂಚನೆಗಳು ಸಿಗುತ್ತಿವೆ. ಗುರುವಾರ ವಿಶ್ವದ ಅತ್ಯಂತ ಮೌಲ್ಯಯುತ ಕಂಪನಿಗಳ ಪೈಕಿ ಮೈಕ್ರೋಸಾಫ್ಟ್, ಐಫೋನ್ ಮೇಕರ್ ಕಂಪನಿಯಾಗಿರುವ ಆಪಲ್ಅನ್ನು ಹಿಂದಿಕ್ಕಿದೆ.2024ರಲ್ಲಿ ಆಪಲ್ ಉತ್ಪನ್ನಗಳಿಗೆ ಬೇಡಿಕೆ ಕುಸಿಯಲಿರುವ ಅಂದಾಜಿನಲ್ಲಿ ಈ ವಾರ ಅಮೆರಿಕದ ಷೇರು ಮಾರುಕಟ್ಟೆಯಲ್ಲಿ ಆಪಲ್ ಕಂಪನಿಯ ಷೇರುಗಳು ಕುಸಿಯಲಾರಂಭಿಸಿದೆ. ಇನ್ನೊಂದೆಡೆ ಮೈಕ್ರೋಸಾಫ್ಟ್ ಷೇರು ಬೆಲೆಯಲ್ಲಿ ಏರಿಕೆಯಾಗಿದ್ದು, ಗುರುವಾರ ವಿಶ್ವದ ಅತ್ಯಂತ ಮೌಲ್ಯಯುತ ಕಂಪನಿ ಎನ್ನುವ ಶ್ರೇಯ ಸಂಪಾದಿಸಿದೆ. ವಾಷಿಂಗ್ಟನ್ ಮೂಲಕ ಮೈಕ್ರೋಸಾಫ್ಟ್ ಕಂಪನಿಯ ಷೇರು ಬೆಲೆಗಳಲ್ಲಿ ಶೇ. 1.6ರಷ್ಟು ಏರಿಕೆ ಆಗಿದ್ದರಿಂದ ಈ ಕಂಪನಿಯ ಮಾರುಕಟ್ಟೆ ಮೌಲ್ಯ 2.875 ಟ್ರಿಲಿಯನ್ ಯುಎಸ್ ಡಾಲರ್ ದಾಟಿತು. ಅರ್ಟಿಫಿಶಿಯಲ್ ಇಂಟಲಿಜೆನ್ಸ್ ಮೂಲಕ ಹಣ ಸಂಪಾದಿಸುವ ಕಂಪನಿಗಳ ರೇಸ್ನಲ್ಲಿ ಮೈಕ್ರೋಸಾಫ್ಟ್ ಮುಂದಿದೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಕಂಪನಿಯ ಷೇರುಗಳಲ್ಲಿ ಏರಿಕೆಯಾಗಿದೆ.ಇನ್ನು ಆಪಲ್ ಕಂಪನಿಯ ಷೇರುಗಳು ಶೇ. 0.9ರಷ್ಟು ಕುಸಿದು ಅದರ ಮಾರುಕಟ್ಟೆ ಮೌಲ್ಯ 2.871 ಟ್ರಿಲಿಯನ್ ಯುಎಸ್ ಡಾಲರ್ ಎನಿಸಿಕೊಂಡಿತು. 2021ರ ಬಳಿಕ ಇದೇ ಮೊದಲ ಬಾರಿಗೆ ಮಾರುಕಟ್ಟೆ ಮೌಲ್ಯದಲ್ಲಿ ಆಪಲ್ ಕಂಪನಿ ಮೈಕ್ರೋಸಾಫ್ಟ್ಗಿಂತ ಕೆಳಗೆ ಇಳಿದಿದೆ. ಜನವರಿಯಲ್ಲಿ ಈವರೆಗೆ ಕ್ಯಾಲಿಫೋರ್ನಿಯಾ ಮೂಲದ ಆಪಲ್ ಕಂಪನಿಯ ಷೇರುಗಳು ಶೇ. 3.3ರಷ್ಟು ಕುಸಿದಿದ್ದರೆ, ಮೈಕ್ರೋಸಾಫ್ಟ್ ಕಂಪನಿಯ ಷೇರುಗಳು ಶೇ. 1.8ರಷ್ಟು ಏರಿಕೆ ಕಂಡಿದೆ.
"ಮೈಕ್ರೋಸಾಫ್ಟ್ ವೇಗವಾಗಿ ಬೆಳೆಯುತ್ತಿರುವ ಕಾರಣ ಮೈಕ್ರೋಸಾಫ್ಟ್ ಆಪಲ್ ಅನ್ನು ಹಿಂದಿಕ್ಕುವುದು ಅನಿವಾರ್ಯವಾಗಿತ್ತು ಮತ್ತು ಈಗಾಗಲೇ AI ಕ್ರಾಂತಿಯಿಂದ ಹೆಚ್ಚಿನ ಪ್ರಯೋಜನವನ್ನು ಹೊಂದಿದೆ" ಎಂದು ಗಿಲ್ ಲೂರಿಯಾದ ವಿಶ್ಲೇಷಕ ಡಿ.ಎ. ಡೇವಿಡ್ಸನ್ ಹೇಳಿದ್ದಾರೆ.ಆಪಲ್ ಕಂಪನಿಯ ಪಾಲಿಗೆ ಅತಿದೊಡ್ಡ ಲಾಭ ಬರುವುದು ಐಫೋನ್ ಮಾರಾಟದಿಂದ. ಆದರೆ, ಇತ್ತೀಚಿನ ದಿನಗಳಲ್ಲಿ ಐಫೋನ್ ಮಾರಾಟ ಕಡಿಮೆಯಾಗಬಹುದು ಎನ್ನುವ ಅಂದಾಜು ಬಂದಿರುವ ಕಾರಣ ಆಪಲ್ ಷೇರುಗಳು ಕುಸಿತ ಕಂಡಿವೆ. ಅದರಲ್ಲೂ ಚೀನಾದಂಥ ಪ್ರಮುಖ ಮಾರುಕಟ್ಟೆಯಲ್ಲಿ ಆಪಲ್ ಮಾರಾಟ ಇನ್ನಷ್ಟು ಕುಸಿತವಾಗಿದೆ.ಮುಂದಿನ ದಿನಗಳಲ್ಲಿ ಆಪಲ್ ಮಾರುಕಟ್ಟೆ ಮೌಲ್ಯದ ಕುಸಿತಕ್ಕೆ ಚೀನಾ ಕಾರಣವಾಗಲಿದೆ. ಚೀನಾ ಹಾಗೂ ಅಮೆರಿಕ ನಡುವಿನ ಕೆಟ್ಟ ಸಂಬಂಧ ಆಪಲ್ನ ಮೇಲೆ ಇನ್ನಷ್ಟು ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷದ ಡಿಸೆಂಬರ್ 14 ರಂದು ಆಪಲ್ ಕಂಪನಿಯ ಮಾರುಕಟ್ಟೆ ಮೌಲ್ಯ 3.081 ಟ್ರಿಲಿಯನ್ ಯುಎಸ್ ಡಾಲರ್ ಆಗಿತ್ತು. ಒಂದೇ ವರ್ಷದಲ್ಲಿ ಆಪಲ್ ಶೇ. 48ರಷ್ಟು ಮೌಲ್ಯ ಏರಿಸಿಕೊಂಡಿತ್ತು.2018 ಹಾಗೂ ತೀರಾ ಇತ್ತೀಚೆಗೆ 2021ರಲ್ಲಿ ಆಪಲ್ ಕಂಪನಿಯಲ್ಲಿ ಹಿಂದಿಕ್ಕಿ ಮೈಕ್ರೋಸಾಫ್ಟ್ ವಿಶ್ವದ ಅತ್ಯಂತ ಮೌಲ್ಯಯುತ ಕಂಪನಿ ಎನಿಸಿಕೊಂಡಿತ್ತು. ಆದರೆ, ಪ್ರಸ್ತುತ ವಾಲ್ ಸ್ಟ್ರೀಟ್ ಮೈಕ್ರೋಸಾಫ್ಟ್ ಬಗ್ಗೆ ಧನಾತ್ಕವಾಗಿದ್ದಾರೆ. ಶೇ. 90ರಷ್ಟು ಬ್ರೋಕರೇಜ್ಗಳು ಮೈಕ್ರೋಸಾಫ್ಟ್ ಕಂಪನಿಯ ಷೇರುಗಳನ್ನು ಖರೀದಿ ಮಾಡಿ ಎನ್ನುವ ಸಲಹೆ ನೀಡಿದ್ದಾರೆ.
Posted by Vidyamaana on 2023-08-29 01:48:42 |
ಮಂಗಳೂರು; ಕೆರೆಯಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಉಳ್ಳಾಲದ ತಲಪಾಡಿಯಲ್ಲಿ ನಡೆದಿದೆ.ದುರ್ಗಿಪಳ್ಳ ನಿವಾಸಿ ಹರೀಶ ಯಾನೆ ಹರಿ ಪ್ರಸಾದ್ ಆಚಾರ್ಯ (36) ದುರ್ದೈವಿ.ಅವಿವಾಹಿತರಾಗಿದ್ದ ಹರಿಪ್ರಸಾದ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ವಿಪರೀತ ಕುಡಿತ ಚಟ ಹೊಂದಿದ್ದರಂತೆ.ಕಳೆದ ನಾಲ್ಕು ದಿವಸಗಳಿಂದ ಮನೆಗೂ ಹೋಗಿರಲಿಲ್ಲ ಎನ್ನಲಾಗಿದೆ.ಹರಿಪ್ರಸಾದ್ ಯುವರಾಜ್ ಯಾನೆ ಮುನ್ನ ಲೋಹಿತ್, ನವೀನ್ ದೇವಾಡಿಗ, ನಿತೇಶ್ ಉಚ್ಚಿಲ್ ಎಂಬವರೊಂದಿಗೆ ಸಮೀಪದ ಖಾಸಗಿ ಲೇ ಔಟ್ ನಲ್ಲಿರುವ ಕೆರೆಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ಅಕಸ್ಮತ್ ಆಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ