ಹೊಸ ಕ್ರಿಮಿನಲ್ ಕಾನೂನು ಜು.1ರಿಂದ ಜಾರಿ; ಯಾವ ಕಾನೂನು? ಏನು ಬದಲಾವಣೆ?

ಸುದ್ದಿಗಳು News

Posted by vidyamaana on 2024-07-01 08:03:28 |

Share: | | | | |


ಹೊಸ ಕ್ರಿಮಿನಲ್ ಕಾನೂನು ಜು.1ರಿಂದ ಜಾರಿ; ಯಾವ ಕಾನೂನು? ಏನು ಬದಲಾವಣೆ?

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳನ್ನು (New Criminal Laws) ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೆ ಒಳಪಡಿಸಲಾಗಿದೆ.

ಹೊಸ ಕ್ರಿಮಿನಲ್ ಕಾನೂನುಗಳು ಯಾವವು?

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಜುಲೈ 1ರಿಂದ ಜಾರಿಗೆ ಬರಲಿವೆ. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ.

ಭಯೋತ್ಪಾದಕರ ಆಸ್ತಿ ಮುಟ್ಟುಗೋಲು

ಭಯೋತ್ಪಾದನೆಯನ್ನು ಮೊದಲ ಬಾರಿಗೆ ಭಾರತೀಯ ನ್ಯಾಯ ಸಂಹಿತೆಯಲ್ಲಿ ಸೆಕ್ಷನ್ 113 (1) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ವ್ಯಾಖ್ಯಾನಿಸಲಾಗಿದೆ. ಭಾರತದಲ್ಲಿ ಅಥವಾ ಯಾವುದೇ ವಿದೇಶದಲ್ಲಿ ಭಾರತದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಯಾವುದೇ ಕೃತ್ಯವನ್ನು ಎಸಗುವ ವ್ಯಕ್ತಿಯನ್ನು ಈ ಕಾನೂನಿನಲ್ಲಿ ಭಯೋತ್ಪಾದಕ ಎಂದು ವ್ಯಾಖ್ಯಾನಿಸಲಾಗುತ್ತದೆ. ಸಾಮಾನ್ಯ ಸಾರ್ವಜನಿಕರನ್ನು ಅಥವಾ ಅದರ ಒಂದು ಭಾಗವನ್ನು ಬೆದರಿಸಲು ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಭಯೋತ್ಪಾದಕರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವೂ ಈ ಕಾನೂನಿನ ಅಡಿಯಲ್ಲಿ ಇದೆ. ಭಯೋತ್ಪಾದನೆಗೆ ಸಂಬಂಧಿಸಿದ ಕೃತ್ಯಗಳನ್ನು ಮರಣದಂಡನೆ ಅಥವಾ ಪೆರೋಲ್ ಇಲ್ಲದೆ ಜೀವಾವಧಿ ಶಿಕ್ಷೆಗೆ ಒಳಪಡಿಸಲಾಗಿದೆ. ‘ಆಸ್ತಿಗೆ ಹಾನಿ, ಅಥವಾ ಕರೆನ್ಸಿಯ ತಯಾರಿಕೆ ಅಥವಾ ಕಳ್ಳಸಾಗಣೆಯನ್ನು ಇದು ಒಳಗೊಂಡಿದೆ.

ದೇಶದ್ರೋಹ ಎಂಬುದು ರದ್ದು

ಭಾರತೀಯ ದಂಡ ಸಂಹಿತೆ1860ರ ದೇಶದ್ರೋಹದ ನಿಬಂಧನೆಗಳನ್ನು ರದ್ದುಗೊಳಿಸಲಾಗಿದೆ. ಇದನ್ನು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152ಕ್ಕೆ ಬದಲಾಯಿಸಲಾಗಿದೆ. ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕಾರ್ಯಗಳ ಮೇಲೆ ಕೇಂದ್ರೀಕರಿಸುವ ವಿಭಾಗಗಳನ್ನು ಪರಿಚಯಿಸಲಾಗಿದೆ.

ಅತ್ಯಾಚಾರ ಮಾಡಿದರೆ ಮರಣ ದಂಡನೆ

ಭಾರತೀಯ ನ್ಯಾಯ ಸಂಹಿತೆ ಲೈಂಗಿಕ ಅಪರಾಧಗಳನ್ನು ಪರಿಹರಿಸಲು ಮಹಿಳೆ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು ಎಂಬ ಅಧ್ಯಾಯವನ್ನು ಪರಿಚಯಿಸಿದೆ. ಇದಲ್ಲದೆ, ಸಂಹಿತೆ 18 ವರ್ಷದೊಳಗಿನ ಬಾಲಕಿಯರ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ಮಾರ್ಪಾಡುಗಳನ್ನು ಶಿಫಾರಸು ಮಾಡುತ್ತಿದೆ.

ಅಪ್ರಾಪ್ತ ವಯಸ್ಸಿನ ಮಹಿಳೆಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ)ಗೆ ಅನುಗುಣವಾಗಿ ಮಾಡಲಾಗಿದೆ. 18 ವರ್ಷದೊಳಗಿನ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಗೆ ಅವಕಾಶ ಕಲ್ಪಿಸಲಾಗಿದೆ.

ಅತ್ಯಾಚಾರ ಎಸಗುವವರಿಗೆ ಕಾನೂನಿನ ಪ್ರಕಾರ 10 ವರ್ಷಗಳಿಗಿಂತ ಕಡಿಮೆಯಿಲ್ಲದ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇದು ಜೀವಾವಧಿಯವರೆಗೆ ಜೈಲು ಶಿಕ್ಷೆಗೆ ವಿಸ್ತರಿಸಬಹುದು ಮತ್ತು ದಂಡಕ್ಕೆ ಸಹ ಹೊಣೆಗಾರರಾಗಬೇಕಾಗುತ್ತದೆ.

ಸಾಮೂಹಿಕ ಅತ್ಯಾಚಾರಕ್ಕೆ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಇದಲ್ಲದೆ ಮದುವೆ, ಉದ್ಯೋಗ, ಬಡ್ತಿಯ ನೆಪದಲ್ಲಿ ಅಥವಾ ಯಾವುದೇ ಆಮಿಷದ ಮೂಲಕ ಮಹಿಳೆಯರ ಲೈಂಗಿಕ ಶೋಷಣೆಯನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ.

ಮೊದಲ ಬಾರಿಗೆ ಸಂಘಟಿತ ಅಪರಾಧದ ವ್ಯಾಖ್ಯಾನ

ಸಂಘಟಿತ ಅಪರಾಧಕ್ಕೆ ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸಲಾಗಿದೆ ಮತ್ತು ಭಾರತೀಯ ನ್ಯಾಯ ಸಂಹಿತಾ 111 (1) ಅಡಿಯಲ್ಲಿ ಪದವನ್ನು ಮೊದಲ ಬಾರಿಗೆ ವ್ಯಾಖ್ಯಾನಿಸಲಾಗಿದೆ. ಈ ವ್ಯಾಖ್ಯಾನವು ಸಶಸ್ತ್ರ ದಂಗೆ, ವಿಧ್ವಂಸಕ ಕಾರ್ಯಾಚರಣೆಗಳು, ಪ್ರತ್ಯೇಕತಾವಾದಿ ಚಟುವಟಿಕೆಗಳು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಒಳಗೊಂಡಿದೆ. ಶಿಕ್ಷೆಯು ವಿವಿಧ ಅಪರಾಧಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ, ದಂಡ ಅಥವಾ ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಒಳಗೊಂಡಿರುತ್ತದೆ.

ಗುಂಪು ಹತ್ಯೆಗೆ ಶಿಕ್ಷೆಯ ಹೆಚ್ಚಳ

ಮೊದಲ ಬಾರಿಗೆ ಮೂಲ ಮಸೂದೆಯು ಗುಂಪು ಹತ್ಯೆ ಮತ್ತು ದ್ವೇಷದ ಅಪರಾಧಗಳನ್ನು ಪ್ರತ್ಯೇಕ ರೀತಿಯ ಕೊಲೆಗಳೆಂದು ವರ್ಗೀಕರಿಸಿದೆ. ಈ ಕಾಯಿದೆಯು ಗುಂಪು ಹತ್ಯೆಯಂತಹ ಅಪರಾಧಗಳಿಗೆ ಗರಿಷ್ಠ ಮರಣದಂಡನೆಯನ್ನು ನೀಡಲು ಬಯಸುತ್ತದೆ.

ದೇಶ ವಿರೋಧಿ ಕೃತ್ಯಗಳಿಗೆ ಜೀವಾವಧಿ ಶಿಕ್ಷೆ

ಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳಿಗೆ ಸಂಬಂಧಿಸಿದ ಕೃತ್ಯಗಳ ಸಂದರ್ಭದಲ್ಲಿ ಕಾನೂನುಗಳು ಕಠಿಣ ಶಿಕ್ಷೆಯನ್ನು ಒದಗಿಸುತ್ತವೆ.

ಯಾರಾದರೂ ಉದ್ದೇಶಪೂರ್ವಕವಾಗಿ ಪದಗಳಲ್ಲಿ ಮಾತನಾಡುವ ಅಥವಾ ಬರೆಯುವ ಅಥವಾ ಚಿಹ್ನೆಗಳ ಮೂಲಕ, ಅಥವಾ ಗೋಚರ ಪ್ರಾತಿನಿಧ್ಯದಿಂದ,ಚಿಹ್ನೆಗಳ ಮೂಲಕ, ಅಥವಾ ಗೋಚರ ಪ್ರಾತಿನಿಧ್ಯದಿಂದ, ಅಥವಾ ವಿದ್ಯುನ್ಮಾನ ಸಂವಹನದ ಮೂಲಕ ಅಥವಾ ಹಣಕಾಸಿನ ಅರ್ಥದ ಬಳಕೆಯಿಂದ ಅಥವಾ ಬೇರೆ ಬೇರೆ ಅಥವಾ ಸಶಸ್ತ್ರ ದಂಗೆ ಅಥವಾ ವಿಧ್ವಂಸಕವನ್ನು ಪ್ರಚೋದಿಸಲು ಪ್ರಯತ್ನಿಸಿದರೆ ಕಠಿಣ ಶಿಕ್ಷೆ ಕಾದಿದೆ. ಅಕ್ರಮ ಚಟುವಟಿಕೆಗಳು, ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಪ್ರೋತ್ಸಾಹಿಸುವುದು ಅಥವಾ ಭಾರತದ ಸಾರ್ವಭೌಮತ್ವ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಅಥವಾ ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅಥವಾ ಎಸಗಿದರೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಮತ್ತು ದಂಡಕ್ಕೆ ಗುರಿಯಾಗಬಹುದು.ತ್ವರಿತ ವಿಚಾರಣೆ ಮತ್ತು ನ್ಯಾಯ

ಹೊಸ ಕಾನೂನುಗಳ ಪ್ರಕಾರ 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಬೇಕಾಗುತ್ತದೆ ಮತ್ತು ಪರಿಸ್ಥಿತಿಯನ್ನು ನೋಡಿ ನ್ಯಾಯಾಲಯವು ಇನ್ನೂ 90 ದಿನಗಳವರೆಗೆ ಅನುಮತಿ ನೀಡಬಹುದು. ತನಿಖೆಯನ್ನು 180 ದಿನಗಳಲ್ಲಿ ಮುಗಿಸಿ ವಿಚಾರಣೆಗೆ ಕಳುಹಿಸಬೇಕು.

ಇದಲ್ಲದೆ, ಪೊಲೀಸರು 90 ದಿನಗಳಲ್ಲಿ ಪ್ರಕರಣದ ಸ್ಥಿತಿಯನ್ನು ಅಪ್‌ಡೇಟ್‌ ಮಾಡಬೇಕಾಗುತ್ತದೆ. ವಿಚಾರಣೆಯ ಅನಂತರ 30 ದಿನಗಳಲ್ಲಿ ತೀರ್ಪು ನೀಡಬೇಕಾಗುತ್ತದೆ. ಒಂದು ವಾರದೊಳಗೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು.ಮೂರು ವರ್ಷಕ್ಕಿಂತ ಕಡಿಮೆ ಜೈಲು ಶಿಕ್ಷೆಗೆ ಒಳಪಡುವ ಪ್ರಕರಣಗಳಿಗೆ ಸಾಮಾನ್ಯ ವಿಚಾರಣೆ ಸಾಕಾಗುತ್ತದೆ. ಇದರಿಂದ ಸೆಷನ್ ಕೋರ್ಟ್‌ಗಳಲ್ಲಿನ ಪ್ರಕರಣಗಳು ಶೇ. 40ರಷ್ಟು ಕಡಿಮೆಯಾಗಲಿವೆ. ಶೂನ್ಯ ಎಫ್‌ಐಆರ್ ದಾಖಲಿಸುವ ಪದ್ಧತಿಯನ್ನು ಸಾಂಸ್ಥಿಕಗೊಳಿಸಲಾಗಿದೆ. ಎಲ್ಲೇ ಘಟನೆ ನಡೆದರೂ ಎಲ್ಲಿ ಬೇಕಾದರೂ ಎಫ್‌ಐಆರ್‌ ದಾಖಲಿಸಬಹುದು.

ಸಂತ್ರಸ್ತರ ಮಾಹಿತಿ ಹಕ್ಕನ್ನು ಬಲಪಡಿಸಲಾಗಿದೆ. ಎಫ್‌ಐಆರ್‌ನ ಉಚಿತ ಪ್ರತಿಯನ್ನು ಪಡೆಯುವ ಹಕ್ಕು ಬಲಿಪಶುವಿಗೆ ಇದೆ. 90 ದಿನಗಳಲ್ಲಿ ತನಿಖೆಯ ಸ್ಥಿತಿಯನ್ನು ಸಂತ್ರಸ್ತರಿಗೆ ತಿಳಿಸಲು ಅವಕಾಶವಿದೆ. ಹೊಸ ಸಂಹಿತೆಯು ಕ್ರಿಮಿನಲ್ ಪ್ರಕರಣಗಳಲ್ಲಿ ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುತ್ತದೆ.

ಇತರ ನಿಬಂಧನೆಗಳು

ಹೊಸ ಕಾನೂನಿನ ಪ್ರಕಾರ ಆರ್ಥಿಕ ಅಪರಾಧಗಳನ್ನು ಹೊರತುಪಡಿಸಿ ಘೋರ ಅಪರಾಧಿಗಳಿಗೆ ಮಾತ್ರ ಕೈಕೋಳವನ್ನು ಬಳಸಲಾಗುವುದು. ಅಂಗವೈಕಲ್ಯ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗುವ ಅಪರಾಧ ಕಾರ್ಯಗಳಿಗೆ ಕಠಿಣ ದಂಡವನ್ನು ಪರಿಚಯಿಸಲಾಗಿದೆ.

ಶಿಕ್ಷೆ ಮನ್ನಾಗೊಳಿಸಲು ಕಾನೂನುಗಳಲ್ಲಿ ಹೊಸ ನಿಬಂಧನೆಯನ್ನು ಮಾಡಲಾಗಿದೆ. ಮರಣದಂಡನೆಗಳನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬಹುದು. ಏಳು ವರ್ಷಗಳ ಒಳಗಿನ ಸೆರೆವಾಸ ಮತ್ತು ಜೀವಾವಧಿ ಶಿಕ್ಷೆಯನ್ನು ಮಾತ್ರ ಕ್ಷಮಿಸಬಹುದು

 Share: | | | | |


ಅಡಿಕೆ ರಬ್ಬರ್‌ಗೆ ಹಳದಿ ಚುಕ್ಕೆ ರೋಗ

Posted by Vidyamaana on 2023-07-18 12:31:41 |

Share: | | | | |


ಅಡಿಕೆ ರಬ್ಬರ್‌ಗೆ ಹಳದಿ ಚುಕ್ಕೆ ರೋಗ

ಪುತ್ತೂರು: ದ ಕ ಜಿಲ್ಲೆಯಲ್ಲಿ ಅಡಿಕೆಗೆ ಮತ್ತು ರಬ್ಬರ್‌ಗೆ ಎಲೆ ಚುಕ್ಕಿ ರೋಗ ಬಂದಿದ್ದು ಇದು ಕೃಷಿಕರ ಆತಂಕಕ್ಕೆ ಕಾರಣವಾಗಿದ್ದು ಈ ರೋಗಕ್ಕೆ ಕಾರಣ ಏನೆಂಬುದನ್ನು ಪತ್ತೆ ಮಾಡಬೇಕು ಮತ್ತು ಕೃಷಿಕರಿಗೆ ಸೂಕ್ತ ಪರಿಹಾರವನ್ನು ನೀಡಬೇಕಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸರಕಾರವನ್ನು ಆಗ್ರಹಿಸಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಶಾಸಕರು ಮಳೆಗಾಲ ಆರಂಭದಲ್ಲೇ ಹಳದಿ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದರಿಂದ ಈ ರೋಗ ಎಲ್ಲಾ ಕಡೆಗಳಲ್ಲೂ ಹರಡುವ ಸಾಧ್ಯತೆ ಇದೆ. ಅಡಿಕೆಗೆ ಒಂದಲ್ಲ ಒಂದು ರೋಗ ಬರುತ್ತಲೇ ಇದ್ದು ಇದು ಕೃಷಿಕರ ಆತಂಕಕ್ಕೂ ಕಾರಣವಾಗಿದೆ. ಹಳದಿ ಎಲೆ ಚುಕ್ಕಿ ರೋಗದಿಂದ ಅಡಿಕೆ ಹಾಗೂ ರಬ್ಬರ್ ಗಿಡಗಳು ಸತ್ತು ಹೋದಲ್ಲಿ ಕೃಷಿಕರಿಗೆ ನಷ್ಟವಾಗಲಿದ್ದು ಇದಕ್ಕೆ ಸರಕಾರ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಮನವಿ ಮಾಡಿದರು. ವಿಟ್ಲದಲ್ಲಿರುವ ಸಿಪಿಸಿಆರ್‌ಐ ಎಂಬ ಸಂಸ್ಥೆ ಅಡಿಕೆ ವಿಚಾರದಲ್ಲಿ ಸಂಶೋಧನೆ ಮಾಡುವ ಕೇಂದ್ರ ಸರಕಾರದ ಒಂದು ಸಂಸ್ಥೆಯಾಗಿದ್ದು ಈ ಸಂಸ್ಥೆ ಅಡಿಕೆ ಕೃಷಿಕರ ಪರವಾಗಿ ಯಾವುದೇ ಕೆಲಸವನ್ನು ಮಾಡುತ್ತಿಲ್ಲ , ಅಡಿಕೆಗೆ ಬಂದಿರುವ ರೋಗದ ಕುರಿತು  ಸಂಶೋಧನೆ ಮಾಡಿ ಅದಕ್ಕೆ ಪರಿಹಾರ ಕಂಡುಕೊಳ್ಳುವಂತೆ ಸಂಸ್ಥೆಗೆ ಸೂಚನೆ ನೀಡಬೇಕು ಎಂದು ಶಾಸಕರು ಸರಕಾರದ ಗಮನಕ್ಕೆ ತಂದರು.

ಗಾಯಾಳು ಕೃಷಿಕರಿಗೆ ಮಾಶಾಸನ ಕೊಡಿ:

ದ ಕ ಜಿಲ್ಲೆಯಲ್ಲಿ ಸಾವಿರಾರು ಕೃಷಿಕರು ಅಡಿಕೆ ಮರ, ತೆಂಗಿನ ಮರ ಮತ್ತು ಮರಗಳಿಂದ ಬಿದ್ದು ಗಂಬೀರ ಸ್ವರೂಪದ ಗಾಯಗಳಾಗಿದೆ, ಚಿಕಿತ್ಸೆಗೂ ಸ್ಪಂದನೆ ನೀಡಲು ಸಾಧ್ಯವಾಗದೆ ಅಥವಾ ಚಿಕಿತ್ಸೆ ನೀಡಿದರೂ ಗುಣಮುಖರಾಗದೆ ಮಲಗಿದ್ದಲ್ಲೇ ಇದ್ದು ಅಂಥಹ ಕೃಷಿಕರಿಗೆ ಸರಕಾರ ತಿಂಗಳಿಗೆ ಕನಿಷ್ಟ 5೦೦೦ ಮಾಶಾಸನವನ್ನು ನೀಡಬೇಕು. ಮಲಗಿದ್ದಲ್ಲೇ ಇರುವ ಇಂಥಹ ಕೃಷಿಕರಿಗೆ ನಿತ್ಯ ಊಟಕ್ಕೆ, ಔಷಧಿ ಖರ್ಚಿಗೆ ಹಣವಿಲ್ಲದೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ ಇಂತವರು ರಾಜ್ಯದಲ್ಲಿ ಸುಮಾರು ೨೫ ಸಾವಿರಕ್ಕೂ ಮಿಕ್ಕಿ ಇರಬಹುದು ಅವರೆಲ್ಲರಿಗೂ ಮಾನವೀಯತೆ ನೆಲೆಯಲ್ಲಿ ಸರಕಾರ ಮಾಶಾಸನವನ್ನು ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ಎಸ್ ಪಿ ಕಚೇರಿ ಸ್ಥಳಾಂತರ ಮಾಡಿ:

ಮಂಗಳೂರಿನಲ್ಲಿ ಕಾರ್ಯಚರಿಸುತ್ತಿರುವ ಜಿಲ್ಲಾ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡಬೇಕು. ಸ್ಥಳಾಂತರಕ್ಕಾಗಿ ಕೆಲವೊಂದು ಪ್ರಕ್ರಿಯೆಗಳು ಈಗಾಗಲೇ ನಡೆದಿದ್ದು ಅದನ್ನು ಮುಂದಿನ ಬಜೆಟ್‌ನೊಳಗೆ ಕಾರ್ಯರೂಪಕ್ಕೆ ತರಬೇಕು ಎಂದು ಶಾಸಕರು ಆಗ್ರಹಿಸಿದರು. ಮಂಗಳೂರಿನಲ್ಲಿ ಕಮಿಷನರೇಟ್ ವ್ಯಾಪ್ತಿ ಇರುವ ಕಾರಣ ಗ್ರಾಮಾಂತರ ಭಾಗವಾದ ಪುತ್ತೂರಿಗೆ ಎಸ್ ಪಿ ಕಚೇರಿಯನ್ನು ಶಿಫ್ಟ್ ಮಾಡಬೇಕಾದ ಅವಶ್ಯಕತೆ ಇದ್ದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ಇದು ಸಹಕಾರಿಯಾಗಲಿದೆ ಎಂದು ಶಾಸಕರು ಸರಕಾರಕ್ಕೆ ಮನವಿ ಮಾಡಿದರು.


ಪುತ್ತೂರಿನಲ್ಲಿ ಸುಸಜ್ಜಿತ ಸರಕಾರಿ ಆಸ್ಪತ್ರೆಯಿಲ್ಲದ ಕಾರಣ ಬಡವರಿಗೆ ತುಂಬಾ ತೊಂದರೆಯಾಗಿದೆ ಈ ಕಾರಣಕ್ಕೆ ಪುತ್ತೂರಿಗೆ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದ್ದು ಈಗಾಗಲೇ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವ ಕುರಿತು ಸರಕಾರದ ಹಂತದಲ್ಲಿ ಮಾತುಕತೆಗಳನ್ನು ನಡೆಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜಿಗೆ ಅನುದಾನವನ್ನು ಕಾಯ್ದಿರುಸುವಂತೆ ಸರಕಾರಕ್ಕೆ ಮನವಿ ಮಾಡಿದರು.

ದ ಕ ಜಿಲ್ಲೆಗೆ ಬಜೆಟ್‌ನಲ್ಲಿ ಏನೂ ಸಿಗುತ್ತಿಲ್ಲ


ಕಳೆದ ೧೫ ವರ್ಷಗಳಿಂದ ಬಜೆಟ್‌ನಲ್ಲಿ ದ ಕ ಜಿಲ್ಲೆಗೆ ಏನೂ ವಿಶೇಷ ಅನುದಾನಗಳು ಸಿಗುತ್ತಿಲ್ಲ. ಮಂಗಳಾ ಕಾರಿಡಾರ್ ಯೋಜನೆಯನ್ನು ಅನುಷ್ಠಾನಗೊಳಿಸಬೇಕಿದೆ. ಇದಕ್ಕೆ ೧೦೦೦ ಕೋಟಿ ಅನುದಾನ ಬೇಕಿದ್ದು ಪ್ರತೀ ವರ್ಷ ತಲಾ ೨೦೦ ಕೋಟಿಯಂತೆ ನೀಡಿದರೆ ಈ ಯೋಜನೆಯನ್ನು ಸಾಕಾರಗೊಳಿಸಬಹುದಾಗಿದೆ. ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ, ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಆಗಾಗಿ ದ ಕ ಜಿಲ್ಲೆಗೆ ವಿಶೇಷ ಒತ್ತು ನೀಡುವಂತೆ ಮನವಿ ಮಾಡಿದರು.

ಮಾತಾಡದೆ ಇಷ್ಟು ಕಾರುಬಾರು ಮಾಡುತ್ತೀರಿ

ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಎಂದು ಶಾಸಕರು ಸಭಾಧ್ಯಕ್ಷರಲ್ಲಿ ಹೇಳಿದಾದ “ ನೀವು ಮಾತನಾಡದೆ ಇಷ್ಟೊಂದು ಕಾರುಬಾರು ಮಾಡುತ್ತೀರಿ ಇನ್ನು ಮಾತಾಡಿದ್ರೆ ಏನು ಮಾಡಬಹುದು. ನಾವಿಬ್ಬರೂ ಒಂದೇ ಕಡೆಯಿಂದ ಬಂದವರು ನೀವಲ್ಲಿ ಕುಳಿತುಕೊಂಡಿದ್ದೀರಿ , ಉಳಿದವರು ಆ ಬದಿಯಲ್ಲಿ ವಿರೋಧ ಪಕ್ಷದಲ್ಲಿ ಕೂತಿದ್ದಾರೆ ಎಂದು ಶಾಸಕರು ಹೇಳಿದರು.

ಅಡಿಕೆಗೆ ವಿರೋಧ ಮಾಡಿದವರು ದ್ವನಿ ಸೇರಿಸ್ತಾ ಇದ್ದಾರೆ

ಕಳೆದ ಬಾರಿ ಬಿಜೆಪಿ ಅದಿಕಾರದಲ್ಲಿದ್ದಾಗ ಬಿಜೆಪಿಯವರು ಅಡಿಕೆಗೆ ವಿರೋಧ ಮಾಡುತ್ತಿದ್ದವರು ಈಗ ಅಡಿಕೆ ಬೆಳೆಗಾರರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮಾತಿನಲ್ಲೇ ಏಟು ನೀಡಿದ್ದಾರೆ. ನಾವು ವಿರೋಧ ಮಾಡಿಲ್ಲ ಯಾರು ವಿರೋಧ ಮಾಡಿದವರು ಎಂದು ಅರಗಜ್ಞಾನೇಂದ್ರ ಅವರು ಮರು ಪ್ರಶ್ನಿಸಿದಾಗ ನೀವು ಏನು ಮಾಡಿದ್ದೀರಿ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಶಾಸಕರು ಮರುತ್ತರ ನೀಡಿದರು.

ಮಂದಿನ ೨೫ ವರ್ಷ ಬಿಜೆಪಿಗೆ ವಿರೋಧ ಪಕ್ಷದ ಸ್ಥಾನ

ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಚುನಾವಣಾ ಸಮಯದಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿದಾಗ ನನಗೆ ಒಂದು ರಈತಿಯ ಭಯ ಇತ್ತು. ಗೆದ್ದ ಬಳಿಕವೂ ಈ ಭಯ ಇತ್ತು. ಈ ಯೋಜನೆಗಳನ್ನು ಹೇಗೆ ಸರಕಾರ ಕೊಡಬಹುದು ಎಂಬ ಆತಂಕವೂ ಇತ್ತು ಆದರೆ ಬಜೆಟ್‌ನಲ್ಲಿ ಇದಕ್ಕೆ ಅನುದಾನ ಇಟ್ಟ ಬಳಿಕ ನನಗೆ ಧೈರ್ಯ ಬಂತು. ಗ್ಯಾರಂಟಿ ಯೋಜನೆಯನ್ನು ರಾಜ್ಯದ ಜನತೆ ಸ್ವೀಕರಿಸಿದ್ದಾರೆ ಈ ಕಾರಣಕ್ಕೆ ಮುಂದಿನ ೨೫ ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುತ್ತದೆ ಬಿಜೆಪಿ ವಿರೋಧ ಪಕ್ಷದಲ್ಲೇ ಕೂರಬೇಕಾದ ಸ್ಥಿತಿ ಬರಲಿದೆ ಎಂದು ಶಾಸಕರು ಹೇಳಿದರು.

ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಿಮಿತ್ತ ಪುತ್ತೂರಿನ ಈ ಏರಿಯಾಗಳಲ್ಲಿ ಕೆಲವು ಗ್ರಾಮಗಳಲ್ಲಿ ಇಂದು ಇಡೀ ದಿನ ಕರೆಂಟ್ ಇಲ್ಲ

Posted by Vidyamaana on 2024-01-04 07:10:05 |

Share: | | | | |


ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಿಮಿತ್ತ ಪುತ್ತೂರಿನ ಈ ಏರಿಯಾಗಳಲ್ಲಿ  ಕೆಲವು ಗ್ರಾಮಗಳಲ್ಲಿ ಇಂದು  ಇಡೀ ದಿನ ಕರೆಂಟ್ ಇಲ್ಲ

ಪುತ್ತೂರು: ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್, ಉಪ್ಪಿನಂಗಡಿ ವಾಟರ್ ಸಪ್ಪೆ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು 110/11 ಕೆವಿ ಕರಾಯ ವಿದ್ಯುತ್‌ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಫೀಡರ್‌ನಲ್ಲಿ ಜ.4 ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 5:30ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11ಕೆ ವಿ ಪುತ್ತೂರು ವಲಯ ಮತ್ತು 10/11ಕೆವಿ ಕರಾಯ ವಿದ್ಯುತ್‌ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಹಾರಾಡಿ, ಪಡೀಲು, ಬೊಳುವಾರು, ಮಯೂರ ಬಳಿ, ಕೊಂಬೆಟ್ಟು, ಕೋರ್ಟ್ ರೋಡ್, ಮಿನಿ ವಿಧಾನ ಸೌಧ, ತಾಲೂಕು ಪಂಚಾಯತ್, ಪರ್ಲಡ್ಕ, ಬೈಪಾಸ್ ರಸ್ತೆ, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಪುತ್ತೂರು ಜಾತ್ರೋತ್ಸವಕ್ಕೆ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡ ಬಯಸುವವರಿಂದ ಅರ್ಜಿ ಆಹ್ವಾನ

Posted by Vidyamaana on 2024-03-22 08:14:00 |

Share: | | | | |


ಪುತ್ತೂರು ಜಾತ್ರೋತ್ಸವಕ್ಕೆ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡ ಬಯಸುವವರಿಂದ ಅರ್ಜಿ ಆಹ್ವಾನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಎ.10 ರಿಂದ 20 ರ ತನಕ ನಡೆಯಲಿದ್ದು, ಈ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಚಿತವಾಗಿ ಸೇವಾ ರೂಪದಲ್ಲಿ ನಡೆಸಲು ಇಚ್ಚಿಸುವವರು ದೇವಳದ ಕಚೇರಿಗೆ ಅರ್ಜಿ ನೀಡುವಂತೆ ತಿಳಿಸಲಾಗಿದೆ.ಅರ್ಜಿಯಲ್ಲಿ ಸಂಸ್ಥೆಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಕಾರ್ಯಕ್ರಮದ ವಿವರ, ತಂಡದಲ್ಲಿ ಭಾಗವಹಿಸುವ ಸದಸ್ಯರ ಸಂಖ್ಯೆಯನ್ನು ನಮೂದಿಸಬೇಕು. ತಂಡಗಳು ನೀಡುವ ಕಾರ್ಯಕ್ರಮ ಭಾರತೀಯ ಸಂಸ್ಕೃತಿಯದ್ದಾಗಿದ್ದು, ಪಾಶ್ಚಾತ್ಯ ಶೈಲಿಗೆ ಅವಕಾಶವಿರುವುದಿಲ್ಲ. ಆಸಕ್ತರು ಮಾ.25ರ ಒಳಗೆ ಅರ್ಜಿಯನ್ನು ದೇವಳದ ಕಚೇರಿಗೆ ನೀಡುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ 9448732414 ಅನ್ನು ಸಂಪರ್ಕಿಸುವುದು. ಸ್ವೀಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ತಂಡಗಳಿಗೆ ಮಾತ್ರ ಅವಕಾಶ ನೀಡಲಾಗುವುದೆಂದು ದೇವಳದ ಕಾರ್ಯನಿರ್ವಾಹಣಾಧಿಕಾರಿ ಕೆ.ವಿ.ಶ್ರೀನಿವಾಸ ಅವರು ತಿಳಿಸಿದ್ದಾರೆ.

ಕುರಿಯ ಓಟಿತ್ತಿಮ್ಮಾರಿನಲ್ಲಿ ಪರಿಶಿಷ್ಟ ಜಾತಿ ಕಾಲನಿ ಅಭಿವೃದ್ಧಿಗೆ ಅನುದಾನ ಬಿಡುಗಡೆ

Posted by Vidyamaana on 2024-01-14 12:59:09 |

Share: | | | | |


ಕುರಿಯ ಓಟಿತ್ತಿಮ್ಮಾರಿನಲ್ಲಿ ಪರಿಶಿಷ್ಟ ಜಾತಿ ಕಾಲನಿ ಅಭಿವೃದ್ಧಿಗೆ ಅನುದಾನ ಬಿಡುಗಡೆ


ವರದಿ : ನಿಝರ್ ಅಜ್ಜಿಕಟ್ಟೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಕುರಿಯ ಗ್ರಾಮದ ಓಟಿತ್ತಿಮ್ಮಾರು ಎಂಬಲ್ಲಿಯ ಪರಿಶಿಷ್ಟ ಜಾತಿ ಕಾಲೋನಿಗೆ ಶಾಸಕ ಅಶೋಕ್ ಕುಮಾರ್ ರೈ 5 ಲಕ್ಷ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದ್ದು, ಈ ಕಾಮಗಾರಿಯ ಗುದ್ದಲಿ ಪೂಜೆ ಜ.10ರಂದು ನಡೆಯಿತು 

ಗುದ್ದಲಿ ಪೂಜೆಯನ್ನು ಈ ಭಾಗದ ಹಿರಿಯರಾದ ರಾಮಕೃಷ್ಣ ಭಟ್ ಮತ್ತು ಮುಹಮ್ಮದ್  (ಮೋನು) ನೇರವೇರೆಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಬೂಡಿಯಾರ್ ಪುರುಷೋತ್ತಮ ರೈ ಕುರಿಯ ಗ್ರಾಮ ಪಂಚಾಯತ್  ಸದಸ್ಯರಾದ ಯಾಕೂಬ್, ನಾಗೇಶ ಎಂ ಹಾಗೂ ಬಸೀರ್ ಕರೆಜ್ಜ, ನೌಷಾದ್, ಸೇಲಿಂ ಕೊಟ್ರಾಸ್, ಕೊರಗ, ಶೀನಪ್ಪ ಗೌಡ, ನೆಬಿಸ, ಸೇಲಿನ, ಜುಬೈದ, ಕುಸುಮ, ಸುಂದರಿ, ಜಾನಕಿ ಮೊದಲಾದವರು ಉಪಸ್ಥಿತರಿದ್ದರು.

ಸೆ 24 ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞದ ಮಹಾಜಪ ಶತರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮ

Posted by Vidyamaana on 2023-09-23 14:33:09 |

Share: | | | | |


ಸೆ 24 ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞದ ಮಹಾಜಪ ಶತರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಸೆ.9ರಿಂದ ಸೀಮೆ, ಪರವೂರಿನಾದ್ಯ೦ತ ಮನೆ ಮನೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞದ ಮಹಾಜಪ ಯಜ್ಞ ಮತ್ತು ಶತರುದ್ರಾಭಿಷೇಕ ಹಾಗು ಧಾರ್ಮಿಕ ಕಾರ್ಯಕ್ರಮ ಸೆ.24ರಂದು ಬೆಳಿಗ್ಗೆ ಗಂಟೆ 9ರಿಂದ ಶ್ರೀ ಮಹಾಲಿಂಗೇಶ್ವರ


ದೇವಸ್ಥಾನದಲ್ಲಿ ಜರುಗಲಿದೆ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್‌ ಮುಳಿಯ ತಿಳಿಸಿದ್ದಾರೆ.


ಅಂದು ಬೆಳಿಗ್ಗೆ ಮಹಾಜಪ ಮತ್ತು ಸಂಖ್ಯೆ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.ದೇವಳದಲ್ಲಿ ಪ್ರತ್ಯೇಕವಾಗಿ ತೆರೆಯಲಾದ 1 ಸೇವಾ ಕೌಂಟರ್‌ನಲ್ಲಿ ಜಪಯಜ್ಞದಲ್ಲಿ ಸ್ವಯಂ ಭಾಗಿಗಳಾದ ಭಕ್ತರು ಮತ್ತು ತಂಡಗಳು ಕಾರ್ಡ್‌ಗಳನ್ನು ದಾಖಲಿಸಿ ಜಪಯಜ್ಞಕ್ಕೆ ಬಳಸಿದ ನಾಣ್ಯಗಳ ಮೊತ್ತವನ್ನು ತಿಳಿಸಿ ಸೇವಾ ರಶೀದಿ ಪಡೆಯಬೇಕು.ದೇವಳದ ರಾಜಗೋಪುರದಲ್ಲಿ ಜಪಯಜ್ಞ ಧಾರ್ಮಿಕ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಅಲ್ಲಿ ವೈದಿಕರುಗಳಿಗೆ ಅಭಿಮುಖವಾಗಿ ಭಕ್ತರು ಕುಳಿತು 108 ಗುಣಕಗಳಲ್ಲಿ ಜಪಮಾಡುವುದು. ಕನಿಷ್ಟ 108 ಜಪಯಜ್ಞ ಪೂರ್ಣಗೊಳಿಸಿದ ಭಕ್ತರು ಸರತಿ ಸಾಲಿನಲ್ಲಿ ದೇವಳಕ್ಕೆ ಪ್ರವೇಶಿಸಿ ಪ್ರದಕ್ಷಿಣೆ ಬ0ದು ಒಳಾಂಗಣದಲ್ಲಿ ಸೂಚಿಸಿದ ಸಮರ್ಪಣೆ ಮಂಟಪದಲ್ಲಿ ಜಪಯಜ್ಞ ನಾಣ್ಯಗಳನ್ನು ಸಮರ್ಪಣೆ ಮಾಡಿ ಶ್ರೀ ದೇವರ ದರ್ಶನ ಪಡೆಯಬೇಕೆಂದು ಅವರು ಹೇಳಿದರು.


ಜಪಯಜ್ಞ ಪ್ರಸಾದ ವಿತರಣೆ: ಜಪಯಜ್ಞದ ಪ್ರಸಾದ ಕೌಂಟರ್ ಅನ್ನು ದೇವಳದ ಒಳಾಂಗಣದ ಗೋಪುರದಲ್ಲಿ ವ್ಯವಸ್ಥೆ ಮಡಲಾಗಿದ್ದು, ಪ್ರಸಾದ ಸ್ವೀಕರಿಸಿದವರು ದೇವಳದ ಎದುರು ಗದ್ದೆಯಲ್ಲಿರುವ ಸಾರ್ವಜನಿಕ ಗಣೇಶೋತ್ಸವ ಪೆಂಡಾಲ್‌ನಲ್ಲಿ ಭಕ್ತರಿಗೆ ಅನ್ನಪ್ರಸಾದ ವಿತರಣೆ ನಡೆಯಲಿದೆ ಎಂದು ಕೇಶವಪ್ರಸಾದ್‌ ಮುಳಿಯ ತಿಳಿಸಿದ್ದಾರೆ.

ಕಾರವಾರ ; ಜ್ಯೋತಿಷಿ ಸಲಹೆ, ಮೊದಲ ಬಾರಿಗೆ ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ

Posted by Vidyamaana on 2023-10-07 18:44:40 |

Share: | | | | |


ಕಾರವಾರ ; ಜ್ಯೋತಿಷಿ ಸಲಹೆ,  ಮೊದಲ ಬಾರಿಗೆ ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದ ಮುಸ್ಲಿಂ ಕುಟುಂಬ

ಕಾರವಾರ: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪಿತೃಕಾರ್ಯ ನೆರವೇರಿಸಲಾಗುತ್ತದೆ. ಆದರೆ ಮುಸ್ಲಿಂ ಕುಟುಂಬವೊಂದು ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದೆ. ಧಾರವಾಡ ಧಾನೇಶ್ವರಿ ನಗರದ ಶಂಸಾದ್ ಎಂಬುವರು ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನವನ್ನು ಇಲ್ಲಿನ ಪಿತೃಶಾಲೆಯಲ್ಲಿ ಪೂರೈಸಿದರು.


ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ಈ ಬಗ್ಗೆ ಪ್ರತಿಕ್ರಿಯಿಸಿರುವ ಶಂಸಾದ್​, ನಾವು ಮೊದಲಿನಿಂದಲೂ ಕುಂಡಲೀ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಬಳಿ ಹೋಗಿದ್ದೆವು. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳ್ಗೆ ಸಿಗಲಿ ಎಂಬ ಉದ್ದೇಶದಿಂದ ಈ ಪಿತೃ ಕಾರ್ಯ ಮಾಡಿಸಿದ್ದೇವೆ ಎಂದು ತಿಳಿಸಿದ್ದಾರೆ.


ಜ್ಯೋತಿಷಿಗಳ ಮಾರ್ಗದರ್ಶನದಂತೆ ಗೋಕರ್ಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ನಾಗರಾಜ ಭಟ್ ಗುರ್ಲಿಂಗ್ ಹಾಗೂ ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಗೋಕರ್ಣದಲ್ಲಿ ಕ್ರಿಶ್ಚಿಯನ್ ಸಮುದಾಯದವರು, ವಿದೇಶಿಗರು ಇಂತಹ ಪಿತೃ ಕಾರ್ಯ ನೆರವೇರಿಸಿದ ಅನೇಕ ಉದಾಹರಣೆಗಳಿವೆ. ಆದರೆ ಮುಸ್ಲಿಂ ಕುಟುಂಬವೊಂದು ಪಿತೃಕಾರ್ಯ ನೆರವೇರಿಸಿದ್ದು, ಇದೇ ಮೊದಲು ಎಂದು ಹೇಳಲಾಗಿದೆ.



Leave a Comment: