Posted by vidyamaana on 2024-07-03 10:25:40 |
ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.
ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.
Posted by Vidyamaana on 2023-11-02 11:08:25 |
ಧಾರವಾಡ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಟ್ರಸ್ಟ್ (ಎಸ್ಕೆಡಿಆರ್ಪಿಡಿ) ಯೋಜನಾ ಕಚೇರಿಯಲ್ಲಿ ಕೋಟ್ಯಾಂತರ ನಗದು ಕಳ್ಳತನ ನಡೆದಿರುವ ಘಟನೆ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಾಪೂರದಲ್ಲಿ ನಡೆದಿದೆ. ವಿಜಯದಶಮಿ ದಿನದಂದು ನಡೆದ ಈ ಪ್ರಕರಣವನ್ನು ಇದೀಗ ಪೊಲೀಸರು ಭೇದಿಸಿದ್ದು, ಒಟ್ಟು 10 ಜನರನ್ನು ಬಂಧಿಸಲಾಗಿದೆ.ಈ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಸೇರಿದಂತೆ ಒಟ್ಟು 10 ಜನರನ್ನು ಬಂಧಿಸಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಹೇಳಿದ್ದಾರೆ.
ಇಲ್ಲಿಯ ವಿದ್ಯಾಗಿರಿಯ ಪೊಲೀಸ್ ಠಾಣೆಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಕೆಡಿಆರ್ಡಿಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರು (23), ನವಲಗುಂದದ ಕಳ್ಳಿಮಠ ಓಣಿಯ ಬಸವರಾಜ ಶೇಖಪ್ಪ ಬಾಬಜಿ (34), ಮಹಾಂತೇಶ ಲಕ್ಷ್ಮಣ ಹಿರಗಣ್ಣವರ (27) ಹಾಗೂ ನವಲಗುಂದದ ಜಿಲಾನಿ ಬವರಸಾಬ ಜಮಾದಾರ (25), ಪರಶುರಾಮ ಹನುಮಂತಪ್ಪ ನೀಲಪ್ಪಗೌಡ್ರ (34), ಭೋವಿ ಓಣಿಯ ರಂಗಪ್ಪ ನಾಗಪ್ಪ ಗುಡಾರದ (31), ಮಂಜುನಾಥ ಯಮನಪ್ಪ ಭೋವಿ(22), ಕುಂಬಾರ ಓಣಿಯ ಕಿರಣ ಶರಣಪ್ಪ ಕುಂಬಾರ,ಆರ್ಮಿ ಕಾಲನಿಯ ರಜಾಕ ಅಹ್ಮದ ಅಲ್ಲಾವುದ್ದೀನ ಮುಲ್ಲಾನವರ (31), ವಿದ್ಯಾರ್ಥಿ ಆಗಿರುವ ವಿರೇಶ ಸಿದ್ದಪ್ಪ ಚವಡಿ (20) ಬಂಧಿತರು. ಈ ಆರೋಪಿಗಳಿಂದ ಈವರೆಗೆ 79,89,870 ರೂ. ನಗದು, ಕೃತ್ಯಕ್ಕೆ ಬಳಸಿದ ಸ್ವಿಪ್ಟ ಡಿಸೈರ್ ಕಾರು, ಎರಡು ದ್ವಿಚಕ್ರ ವಾಹನ, ನಾಲ್ಕು ಮೊಬೆÊಲ್ ಸೇರಿದಂತೆ ಒಟ್ಟು 85,89,870 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಎಸ್ಕೆಡಿಆರ್ಪಿಡಿ ವತಿಯಿಂದ ದಿನನಿತ್ಯ ಸಂಗ್ರಹಿಸುತ್ತಿದ್ದ ಹಣವನ್ನು ಬ್ಯಾಂಕ್ಗೆ ಜಮೆ ಮಾಡಲಾಗುತ್ತದೆ. ಆದರೆ ವಿಜಯದಶಮಿ ಪ್ರಯುಕ್ತ ರಜೆ ಹಿನ್ನಲೆಯಲ್ಲಿ ಕಚೇರಿಯಲ್ಲಿಯೇ 1,24,48,087 ರೂ. ನಗದು ಹಣವನ್ನು ಇರಿಸಲಾಗಿತ್ತು. ಕಚೇರಿಯ ಭದ್ರತಾ ಕೊಠಡಿಯ ಭದ್ರತಾ ಲಾಕರ್ಗಳಲ್ಲಿ ಇರಿಸಲಾಗಿದ್ದ ಈ ಹಣವನ್ನು ಆಯುಧಗಳಿಂದ ಮೀಟಿ ಅದರಲ್ಲಿದ್ದ ಹಣವನ್ನು ಕಳವು ಮಾಡಲಾಗಿತ್ತು. ಈ ಕುರಿತಂತೆ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಅ.24 ರಂದು ದೂರು ದಾಖಲಾಗಿತ್ತು.
Posted by Vidyamaana on 2023-06-16 06:46:10 |
ಪುತ್ತೂರು: ಪುತ್ತೂರಿನ ಡ್ರೆಸ್ ಮಳಿಗೆಗಳ ಪೈಕಿ ಪ್ರಸಿದ್ಧಿಯನ್ನು ಪಡೆದುಕೊಂಡಿರುವ ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್ ಜೂನ್ 16ರಿಂದ ನಡೆಯಲಿದೆ.
ಅತೀ ಕಡಿಮೆ ಬೆಲೆಗೆ ಡ್ರೆಸ್ ಗಳ ಮಾರಾಟ ಇಲ್ಲಿ ನಡೆಯಲಿದ್ದು, ಗ್ರಾಹಕರ ನಿರೀಕ್ಷೆಯಂತೆಯೇ ಶುಕ್ರವಾರದಿಂದ ಈ ಸೇಲ್ ಗೆ ಚಾಲನೆ ನೀಡಲಾಗಿದೆ.
ಪುತ್ತೂರು ಕೋಟಿ – ಚೆನ್ನಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂಭಾಗದ ಶಾಲಿಮಾರ್ ಬಿಲ್ಡಿಂಗ್ ನ ಎದುರುಗಡೆ ಮಿನ್ಹಾ ಫ್ಯಾಬ್ರಿಕ್ ಸ್ಪಾಟ್ ಕಾರ್ಯಾಚರಿಸುತ್ತಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Posted by Vidyamaana on 2023-08-23 08:34:02 |
ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರನ ಮೇಲೆ ಪೂರ್ವಯೋಜನೆಯಂತೆ ಚಂದ್ರನ ಮೇಲೆ ಲ್ಯಾಂಡರ್ ಅನ್ನು ಇಳಿಸುತ್ತದೆ ಎಂದು ಇಸ್ರೋ ಅಧ್ಯಕ್ಷ ಸೋಮನಾಥ್ ಹೇಳಿದ್ದಾರೆ.ಆಗಸ್ಟ್ 27ರಂದು ಚಂದ್ರನ ಮೇಲೆ ವಿಕ್ರಮ್ ಲ್ಯಾಂಡ್ ಆಗಲಿದೆ ಎಂಬ ಪ್ರಶ್ನೆ ಕುರಿತು ಈ ಮೇಲಿನಂತೆ ಸ್ಪಷ್ಟನೆ ನೀಡಿದ್ದಾರೆ.ಮೊದಲು ಯೋಜಿಸಿದಂತೆ ಆಗಸ್ಟ್ 23ರ ಸಂಜೆ 6.04 ನಿಮಿಷಕ್ಕೆ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕಾಲಿಡಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸೋಮನಾಥ್ ತಿಳಿಸಿದ್ದಾರೆ.
ಚಂದ್ರಯಾನದ ಎಲ್ಲ ವ್ಯವಸ್ಥೆಗಳು ಸಮರ್ಪಕವಾಗಿದೆ. ಸಿಸ್ಟಮ್ಗಳು ನಿಯಮಿತ ತಪಾಸಣೆಗೆ ಒಳಗಾಗುತ್ತಿವೆ. ಸುಗಮ ನೌಕಾಯಾನ ಮುಂದುವರಿಯುತ್ತಿದೆ. ಮಿಷನ್ ಆಪರೇಷನ್ಸ್ ಕಾಂಪ್ಲೆಕ್ಸ್ (MOX) ಉತ್ಸಾಹದಿಂದ ಮುಂದುವರಿಯುತ್ತಿದೆ ಎಂದು ಹೇಳಿದ್ದಾರೆ. ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದೆ. ಕೊನೆಯ ಗಳಿಗೆಯಲ್ಲಿ ಯಾವುದೇ ಸಮಸ್ಯೆ ಉಂಟಾದರೆ, ಪ್ಲಾನ್ ಬಿ ಕೈಗೊಳ್ಳುವ (ಆ.27ರ ಲ್ಯಾಂಡಿಂಗ್) ಸಾಧ್ಯತೆ ಇದೆ. ಮೂನ್ ಲ್ಯಾಂಡರ್ ತನ್ನ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ (LPDC) ದೊಂದಿಗೆ ಲ್ಯಾಂಡಿಂಗ್ ಸೈಟ್ನ ಚಿತ್ರಗಳನ್ನು ಸೆರೆಹಿಡಿಯುತ್ತಿದೆ.ಮೂನ್ ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಅಂಡ್ ಅವಾಯಿಡೆನ್ಸ್ ಕ್ಯಾಮೆರಾ (LHDAC) ಎಂಬ ಮತ್ತೊಂದು ಕ್ಯಾಮೆರಾವನ್ನು ಸಹ ಹೊಂದಿದೆ. ಈ ಕ್ಯಾಮರಾ ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದ ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ.
Posted by Vidyamaana on 2023-04-30 01:38:50 |
ಬೆಂಗಳೂರು :200 ಕೋಟಿಗೂ ಅಧಿಕ ಬಳಕೆದಾರರನ್ನು ಹೊಂದಿರುವ ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಇದೀಗ ಹೊಸ ಫೀಚರ್ ಅನ್ನು ಹೊರತಂದಿದೆ. ಒಂದೇ ವಾಟ್ಸಪ್ ಖಾತೆಯನ್ನು ಇದೀಗ ಹೊಸ ತಂತ್ರಜ್ಞಾನದಂತೆ ಒಂದಕ್ಕಿಂತಲೂ ಅಧಿಕ ಫೋನ್ ಗಳಲ್ಲಿ ಲಾಗ್ ಇನ್ ಮಾಡಲು ಅನುಮತಿ ನೀಡಿದೆ.
ಈ ಬಗ್ಗೆ ಮೆಟಾ ಸಿಇಒ ಮಾರ್ಕ್ ಜುಕರ್ಬರ್ಗ್ ಫೇಸ್ಬುಕ್ ಹಾಗೂ ಇನ್ ಸ್ಟಾಗ್ರಾಮ್ ಗಳಲ್ಲಿ ಮಾಹಿತಿ ನೀಡಿದ್ದಾರೆ. ಇನ್ನು ಮುಂದೆ ನೀವು 4 ಫೋನ್ ಗಳಲ್ಲಿ ವಾಟ್ಸಪ್ನ ಒಂದೇ ಖಾತೆಯನ್ನು ಲಾಗ್ ಇನ್ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ ವಾಟ್ಸಪ್ ನ ಒಂದು ಖಾತೆಯನ್ನು ನಾವು ಒಂದು ಫೋನ್ ಹಾಗೂ ಒಂದು ಡೆಸ್ಕ್ ಟಾಪ್ ಸಾಧನಗಳಲ್ಲಷ್ಟೇ ಬಳಸಲು ಸಾಧ್ಯವಾಗುತ್ತಿತ್ತು. ಈ ಮಿತಿ ಇದೀಗ ವಿಸ್ತರಣೆಯಾಗಿದ್ದು, ಒಂದೇ ಖಾತೆಯನ್ನು 4 ಫೋನ್ ಗಳಲ್ಲಿ ಬಳಸಲು ಸಾಧ್ಯವಾಗುತ್ತಿದೆ. ಈ ಫೀಚರ್ ಮುಂದಿನ ವಾರಗಳಲ್ಲಿ ಎಲ್ಲಾ ಬಳಕೆದಾರರಿಗೂ ಲಭ್ಯವಾಗಲಿದೆ ಎಂದು ವಾಟ್ಸಪ್ ತಿಳಿಸಿದೆ.
ವಾಟ್ಸಪ್ ನ ಈ ಹೊಸ ಫೀಚರ್ ಇದೀಗ ಬಳಕೆದಾರರು ತಮ್ಮ ಖಾತೆಗಳನ್ನು ಇತರ ಫೋನ್ ಹಾಗೂ ಸಾಧನಗಳಲ್ಲಿ ಸಿಂಕ್ ಮಾಡಲು ಸಾಧ್ಯವಾಗಲಿದೆ. ಇದು ನಿಮ್ಮ ಫೋನ್ ಸ್ವಿಚ್ ಆಫ್ ಅಥವಾ ಹಾಳಾಗಿದ್ದಾಗ ಇತರರ ಫೋನ್ ನಲ್ಲಿ ನಿಮ್ಮ ಖಾತೆಯನ್ನು ಪರಿಶೀಲಿಸಲು ಅಥವಾ ಬಳಸಲು ಸಹಕಾರಿಯಾಗಲಿದೆ. ಎಂಡ್ ಟು ಎಂಡ್ ಎನ್ಕ್ರಿಪ್ಶನ್ ನ ರಕ್ಷಣೆಯನ್ನು ಉಳಿಸಿಕೊಂಡು ಬೇರೆ ಬೇರೆ ಸಾಧನಗಳಲ್ಲಿ ಸಂದೇಶಗಳನ್ನು ಸಿಂಕ್ ಮಾಡಲು ವಾಟ್ಸಪ್ ನ ಹೊಸ ತಂತ್ರಜ್ಞಾನದ ಅಭಿವೃದ್ಧಿಯಿಂದ ಇದು ಸಾಧ್ಯವಾಗಿದೆ.
Posted by Vidyamaana on 2023-08-08 15:56:46 |
ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಗಳ ನಿರ್ಲಕ್ಷ್ಯಕ್ಕೆ ಒಂದುವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಗಮಿಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಸಾವನ್ನಪ್ಪಿದ ತಂದೆಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿಲು ಸಲಹೆ ನೀಡಿದ್ದಾರೆ.
ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಗಳ 1.5 ತಿಂಗಳು ಹೆಣ್ಣು ಮಗು ಅಂಶಿಕಾ ಸಾವನ್ನಪ್ಪಿದ ಮಗು.
ನೆರಿಯ ಅಕ್ಕ ಲೀಲಾವತಿ ಮನೆಯಲ್ಲಿದ್ದಕೊಂಡು ಮಗುವನ್ನು ಆರೈಕೆ ಮಾಡಿಕೊಂಡಿದ್ದ ಸವಿತಾ. ಆಗಸ್ಟ್ 8 ರಂದು(ಇಂದು) ಕಫ ಅಗಿತ್ತು ಎಂದು ಮಧ್ಯಾಹ್ನ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದರು. ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡದ ಬಳಿಕ ಮಗು ಸಾವನ್ನಪ್ಪಿದೆ ಎಂದು ಮನೆಮಂದಿ ಆರೋಪ ಮಾಡುತ್ತಿದ್ದಾರೆ.
Posted by Vidyamaana on 2024-05-30 16:54:25 |
ನೆಲ್ಯಾಡಿ : ಬೆಂಗಳೂರಿನ ನೆಲಮಂಗಲದಲ್ಲಿ ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ನೆಲ್ಯಾಡಿ ಎಂಜಿರ ಪರಕ್ಕಳದ ಯುವಕ ಮೃತಪಟ್ಟ ಬಗ್ಗೆ ವರದಿಯಾಗಿದೆ.
ನೆಲ್ಯಾಡಿ ಎಂಜಿರ ಪರಕ್ಕಳ ನಿವಾಸಿ ಸ್ಕೇರಿಯಾ ಎಂಬವರ ಪುತ್ರ, ನರ್ಸಿಂಗ್ ವಿದ್ಯಾರ್ಥಿ ಥೋಮಸ್ ಮೃತ ಯುವಕ.