ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಸುದ್ದಿಗಳು News

Posted by vidyamaana on 2024-07-23 21:30:52 |

Share: | | | | |


ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.

Additional Image

ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು. 

Additional Image


Additional Image

ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.

 Share: | | | | |


ಈದಲ್ ಫಿತ್ರ್: ಗುರಿ ಸಾಧಿಸಿದವರ ಸಂಭ್ರಮ ಸಹಜೀವಿಗಳೊಂದಿಗೆ ಸದಾಚಾರದ ಪ್ರತಿಜ್ಞೆ

Posted by Vidyamaana on 2024-04-09 20:20:16 |

Share: | | | | |


ಈದಲ್ ಫಿತ್ರ್: ಗುರಿ ಸಾಧಿಸಿದವರ ಸಂಭ್ರಮ ಸಹಜೀವಿಗಳೊಂದಿಗೆ ಸದಾಚಾರದ ಪ್ರತಿಜ್ಞೆ

ತನ್ನೆಲ್ಲಾ ಸ್ವಾತಂತ್ರ್ಯಗಳನ್ನು ಸ್ವಯಂ ಪ್ರೇರಿತನಾಗಿ ತಡೆದು ಸೃಷ್ಟಿಕರ್ತನಿಗೆ ಸಂಪೂರ್ಣ ಶರಣಾಗತಿ ಸಲ್ಲಿಸುವ ವ್ರತಾಚರಣೆಯ ಮೂಲಕ ದೈಹಿಕ ಮತ್ತು ಆತ್ಮೀಯ ಪರಿಶುದ್ಧಿಯನ್ನು ಪಡೆದ ಮನುಷ್ಯನಿಗೆ ತನ್ನ ಸಂತೋಷವನ್ನು ಪ್ರಕಟಪಡಿಸಲು ಅಲ್ಲಾಹನು ನಿಗದಿಪಡಿಸಿದ ಪವಿತ್ರ ದಿನವಾಗಿದೆ ಈದ್. ಇದು ಸ್ರಷ್ಟಿಯನ್ನು  ಸ್ರಷ್ಟಿಕರ್ತನೆಡೆಗೆ ಮತ್ತಷ್ಟು ನಿಕಟಗೊಳಿಸುವ ಗುರಿ ಸಾಧಿಸಿದವರ ಹಬ್ಬವಾಗಿದೆ.

   ಅಲ್ಲಾಹು ಅಕ್ಬರ್.... ವಲಿಲ್ಲಾಹಿಲ್ ಹಮ್ದ್ -ತಕ್ಬೀರ್ ಮೊಳಗಿಸುತ್ತಾ ಗುರಿಸಾಧಿಸಿದ ಸಂತೋಷವನ್ನು ಪ್ರಕಟಿಸುತ್ತಾ ತನ್ನ ಸಹಜೀವಿಗಳೊಂದಿಗೆ ಸೇರಿ ಸದಾಚಾರದ ಪ್ರತಿಜ್ಞೆಗೈಯ್ಯುತ್ತಾನೆ.

      ಹಬ್ಬಗಳಿಗೆ ಅರಬಿ ಭಾಷೆಯಲ್ಲಿ ಈದ್ ಎನ್ನಲಾಗುತ್ತಿದ್ದು ಒಳಿತು ಮತ್ತು ಔದಾರ್ಯಗಳು ಎಂಬ ಅರ್ಥದ ಜೊತೆಗೆ ಸಂಭ್ರಮ ಸಡಗರದೊಂದಿಗೆ ಪುನರಾವರ್ತನೆಯಾಗುವ ಹಬ್ಬ ಎಂಬ ವಿವರಣೆಯೂ ಇದೆ.

     ರಂಝಾನ್ ಉಪವಾಸದ ಮುಕ್ತಾಯದ ವೇಳೆ ಬರುವ ಈದುಲ್ ಫಿತ್ರ್ ಹಬ್ಬವು ಮನುಷ್ಯನ ಆತ್ಮದ ರೋಗಗಳಾದ ಮದ, ಮೋಹ, ಅಹಂಕಾರ,ಲೋಭಾದಿಗಳನ್ನು ಮೆಟ್ಟಿನಿಂತು ವಿಶೇಷ ತರಬೇತಿ ಪಡೆದು ಶುದ್ಧ ಪ್ರಕೃತಿಗೆ ಮರಳುವ ಸ್ಥಿತಿಯನ್ನುಂಟುಮಾಡುತ್ತದೆ. 

ಆ ಮೂಲಕ ಮನುಷ್ಯನು ತನ್ನನ್ನು ಹೊಸ ಬದುಕಿಗೆ ತೆರೆದುಕೊಳ್ಳುತ್ತಾನೆ. 

   ರಂಝಾನ್ ತಿಂಗಳ ಕೊನೆಯ ಸೂರ್ಯಾಸ್ತಮಾನದೊಂದಿಗೆ ಪ್ರಾರಂಭಿಸಿ ಆ ದಿನ ಸೂರ್ಯಾಸ್ತದವರೆಗೆ ಮುಂದುವರೆದು ಈ ದಿನದಲ್ಲಿ ವಿಶೇಷ ಸ್ನಾನ ಮಾಡಿ ಸೂರ್ಯೋದಯದ ಬಳಿಕ ವಿಶೇಷ ನಮಾಜಿಗೆ ಸಿದ್ದರಾಗುತ್ತಾರೆ. ಸೂರ್ಯನುದಯಿಸಿ ಸುಮಾರು 20 ನಿಮಿಷಗಳ ನಂತರ ನಮಾಝಿನ ಸಮಯವಾಗಲಿದ್ದು ಮಧ್ಯಾಹ್ನದೊಂದಿಗೆ ಕೊನೆಗೊಳ್ಳುತ್ತದೆ.ಪುರುಷರು ಮಸೀದಿಯಲ್ಲಿ ಸಾಮೂಹಿಕವಾಗಿಯೂ ಸ್ತ್ರೀಯರು ಮನೆಗಳಲ್ಲಿಯೂ ಇದನ್ನು ನಿರ್ವಹಿಸುತ್ತಾರೆ. ದಾನ ಧರ್ಮಗಳಿಗೂ ಸತ್ಕಾರ್ಯಗಳಿಗೂ ಕುಟುಂಬ ಸಂಬಂಧವನ್ನು ಸದೃಢಗೊಳಿಸುವುದಕ್ಕೂ ಈ ಹಬ್ಬವು ಬಹಳ ಉಪಕಾರಿ. ಫಿತ್ರ್ ಝಕಾತ್ ಎಂಬ ಕಡ್ಡಾಯ ದಾನವು ಆ ದಿನದ ಪ್ರಮುಖ ಆರಾಧನೆಗಳಲ್ಲೊಂದಾಗಿದೆ.

   

ಶಾಸಕರ ಇಂದಿನ ಕಾರ್ಯಕ್ರಮ ಜು 25

Posted by Vidyamaana on 2023-07-24 23:14:15 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 25


ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 25 ರಂದು.

ಬೆಳಿಗ್ಗೆ 10 ಗಂಟೆಗೆ ರೈ ಎಜುಕೇಶನಲ್ ಟ್ರಸ್ಟ್ ನಲ್ಲಿ ಕೆಎಸ್ಆರ್ಟಿಸಿ ಚಾಲಕ ತರಬೇತಿ ಹುದ್ದೆ ಕಾರ್ಯಾಗಾರ


11 ಗಂಟೆಗೆ ಸಾಮೆತ್ತಡ್ಕ ಸರಕಾರಿ ಶಾಲೆಯಲ್ಲಿ ಕೊಠಡಿ ಉದ್ಘಾಟನೆ


12 ಗಂಟೆಗೆ ಸರಕಾರಿ ನೌಕರರ ಸಂಘದ ಮಹಾಸಭೆ ,ಸನ್ಮಾನ


12.30 ಕ್ಕೆ ಎಂ ಆರ್ ಪಿ ಎಲ್ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ

ಅಡ್ಕಸ್ಥಳ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ

Posted by Vidyamaana on 2023-09-26 13:02:56 |

Share: | | | | |


ಅಡ್ಕಸ್ಥಳ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ

ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ ಚಾಲಕ ಮೃತ ಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ.


ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫಾ ( 43) ಎಂದು ಗುರುತಿಸಲಾಗಿದೆ. ಬಸ್ ನ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಬಸ್ಸು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡ ಮುಸ್ತಫಾ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.


ಪಿಕಪ್ ವ್ಯಾನ್ ನಲ್ಲಿದ್ದ ಇನ್ನೋರ್ವ ಗಾಯಗೊಂಡಿದ್ದು, ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಆಶೀರ್ವಾದ ಲಕ್ಕೀ ಸ್ಕೀಂ ನ ಎರಡನೇ ಇನ್ನಿಂಗ್ಸ್ ಇನ್ನಷ್ಟು ಕಲರ್ ಫುಲ್

Posted by Vidyamaana on 2024-08-26 22:16:06 |

Share: | | | | |


ಆಶೀರ್ವಾದ ಲಕ್ಕೀ ಸ್ಕೀಂ ನ ಎರಡನೇ ಇನ್ನಿಂಗ್ಸ್ ಇನ್ನಷ್ಟು ಕಲರ್ ಫುಲ್


ಗಣ್ಯರಿಂದ ಲೋಗೋ, ಮೊಬೈಲ್ ಆಪ್ ಬಿಡುಗಡೆ – ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ನಾನು ತಿನ್ನುವ ಅನ್ನದ ಬಟ್ಟಲು ನೀವು - ದೇವದಾಸ್ ಕಾಪಿಕಾಡ್

ಜಗತ್ತಿನ ದುಬಾರಿ ವಸ್ತು ನಂಬಿಕೆ -ವಾಲ್ಟರ್ ನಂದಳಿಕೆ

ಎಲ್ಲಾ ಕಡೆ ಸಂಸ್ಥೆ ಬೆಳಗಲಿ - ರವಿ ರಾಮಕುಂಜ

ಮಂಡಬೆಚ್ಚಿ ಮಾಲ್ಪೊಡ್ಚಿ...! ಸ್ಕೀಂಗ್ ಸೇರಿಯರ ಆಪುಜ...!? - ಬೇಬಿ ಆತ್ಮೀ

ಪುತ್ತೂರು: ದರ್ಬೆ ಮೊದಿನ್ ಕಾಂಪ್ಲೆಕ್ಸ್‌ನಲ್ಲಿ ವ್ಯವಹರಿಸುತ್ತಿರುವ ಆಶೀರ್ವಾದ ಎಂಟರ್‌ಪ್ರೈಸಸ್‌ ಲಕ್ಷ್ಮೀ ಸ್ಟೀಂನ 2ನೇ ಸೀಝನ್ ಶುಭಾರಂಭ, ಸಂಸ್ಥೆಯ ಲೋಗೋ ಅನಾವರಣ, ಮೊಬೈಲ್ ಆ್ಯಪ್ ಬಿಡುಗಡೆ ಹಾಗೂ 163 ಶಾಲಾ ಮಕ್ಕಳಿಗೆ ಬ್ಯಾಗ್‌ ವಿತರಣಾ ಕಾರ್ಯಕ್ರಮ ಬೈಪಾಸ್‌ ರಸ್ತೆಯಲ್ಲಿರುವ ಅಶ್ಮಿ ಕಂಪರ್ಟ್‌ನಲ್ಲಿ ಆ. 25ರಂದು ನಡೆಯಿತು. ಅತಿಥಿಗಳಾದ ದೇವದಾಸ್ ಕಾಪಿಕಾಡ್ ಸಂಸ್ಥೆಯ ಲೋಗೋ ಬಿಡುಗಡೆಗೊಳಿಸಿದರು. ವಾಲ್ಟರ್ ನಂದಳಿಕೆಯವರು ಸಂಸ್ಥೆಯ ಬ್ರೋಚರ್‌ ಬಿಡುಗಡೆ ಮಾಡಿದರು. ರವಿರಾಮಕುಂಜ ಸಂಸ್ಥೆಯ ಮೊಬೈಲ್ ಆ್ಯಪ್ ಬಿಡುಗಡೆಗೊಳಿಸಿದರು. 

ನಾನು ತಿನ್ನುವ ಅನ್ನದ ಬಟ್ಟಲು ನೀವು-ದೇವದಾಸ್ ಕಾಪಿಕಾಡ್: 

ತುಳು ಚಿತ್ರರಂಗದ ನಿರ್ಮಾಪಕರು ಹಾಗೂ ಹಿರಿಯ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್‌ ಕಾಪಿಕಾಡ್‌ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಬಳಿಕ 2ನೇ ಸೀಝನ್ ಮತ್ತು ಸಂಸ್ಥೆಯ ಲೋಗೋ ಅನಾವರಣ ಮಾಡಿ ಮಾತನಾಡಿ, ನಿಮ್ಮ ಸಂಸ್ಥೆಯ ಪಾಲುದಾರರಲ್ಲಿ ಒಗ್ಗಟ್ಟು ಇದೆ. ತುಂಬಾ ಖುಷಿಯಾಯಿತು. ನಿಮಗೆಲ್ಲರಿಗೂ ಉಪಕಾರ ಮಾಡಲು ಈ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ. ಇವತ್ತು ಪ್ರತೀ ಮನೆಗೂ ಆಧಾರಸ್ತಂಭವಾಗಿ ನಿಲ್ಲುವ ಸಂಸ್ಥೆಯಾಗಿ ಆಶೀರ್ವಾದ ಬೆಳೆದಿದೆ. ನಿಮ್ಮಲ್ಲಿ ನಂಬಿಕೆಯ ನಗು ಇದೆ. ಎಂದರು. ನಿಮ್ಮ ಆಶೀರ್ವಾದದಿಂದ ನಾನು ಮೇಲೆ ಬಂದಿದ್ದೇನೆ. ನಾನು ತಿನ್ನುವ ಅನ್ನದ ಬಟ್ಟಲು ನೀವು ಎಂದ ಅವರು ಪ್ರತೀ ಊರಲ್ಲಿ ಆಶೀರ್ವಾದ ಸಂಸ್ಥೆ ಹುಟ್ಟಲಿ ಅಲ್ಲದೆ ಅಂತರಾಷ್ಟ್ರೀಯ ಮಟ್ಟಕ್ಕೂ ವಿಸ್ತರಿಸಲಿ ಎಂದು ಹೇಳಿ ಹಾರೈಸಿದರು.

ಜಗತ್ತಿನ ದುಬಾರಿ ವಸ್ತು ನಂಬಿಕೆ-ವಾಲ್ಟರ್ ನಂದಳಿಕೆ: 

ಸಂಸ್ಥೆಯ ಬ್ರೋಚರ್‌ ಬಿಡುಗಡೆ ಮಾಡಿದ ಡೈಸಿ ವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ ಜಗತ್ತಿನಲ್ಲಿ ದುಬಾರಿ ವಸ್ತು ಎಂದರೆ ನಂಬಿಕೆ, ನಂಬಿಕೆಗೆ ಅರ್ಹವಾದ ಮಕ್ಕಳಿಗೆ ಬ್ಯಾಗ್ ನೀಡಿ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಇದು ಹೆಮ್ಮೆಯ ವಿಷಯ ಎಂದರು. ನಿಮ್ಮ ಮಕ್ಕಳು ಕಲಿಕೆಯಲ್ಲಿ ಹಿಂದೆ ಇದ್ದು ಉಳಿದ ಚಟುವಟಿಕೆಗಳಲ್ಲಿ ಪ್ರತಿಭಾವಂತರಾಗಿದ್ದರೆ ಅವರಿಗೆ ಪ್ರೋತ್ಸಾಹ ನೀಡಿ ಮಕ್ಕಳ ಕನಸನ್ನು ಕೇಳಿ. ಮಕ್ಕಳಿಗೆ ಆಸ್ತಿ ಮಾಡಬೇಡಿ. ಮಕ್ಕಳನ್ನು ಸಮಾಜದ ಆಸ್ತಿ ಮಾಡಿ ಎಂದರು. ಮಕ್ಕಳ ಅಂಕಗಳೇ ಎಲ್ಲವೂ ಅಲ್ಲ, ಅದು ಸರ್ಟಿಫಿಕೇಟ್ ಮಾತ್ರ ಎಂದು ಪೋಷಕರಿಗೆ ತಿಳಿಸಿದರು.

ಎಲ್ಲಾ ಕಡೆ ಸಂಸ್ಥೆ ಬೆಳಗಲಿ ರವಿ ರಾಮಕುಂಜ: 


ಪತ್ರಕರ್ತೆಯ ಮೃತದೇಹ ಕೆರೆಯಲ್ಲಿ ಪತ್ತೆ

Posted by Vidyamaana on 2024-08-29 06:24:03 |

Share: | | | | |


ಪತ್ರಕರ್ತೆಯ ಮೃತದೇಹ ಕೆರೆಯಲ್ಲಿ ಪತ್ತೆ

ಬಾಂಗ್ಲಾದೇಶದ ಪತ್ರಕರ್ತೆ ಸಾರಾ ರಹನುಮಾ ಅವರ ಮೃತದೇಹ ಬುಧವಾರ ಢಾಕಾದ ಹತಿರ್ಜೀಲ್ ಕೆರೆಯಲ್ಲಿ ಪತ್ತೆಯಾಗಿದೆ.33 ವರ್ಷದ ಸಾರಾ ಬಂಗಾಳಿ ಭಾಷೆಯ ಸುದ್ದಿವಾಹಿನಿಯ ನ್ಯೂಸ್‍ರೂಂ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ತಿಂಗಳಿಗೆ 8,500ರೂ ಪಡೆಯಲು ಪೋಸ್ಟ್ ಆಫೀಸ್ ಮುಂದೆ ಸಾಲುಗಟ್ಟಿ ಮಹಿಳೆಯರು

Posted by Vidyamaana on 2024-05-29 16:19:09 |

Share: | | | | |


ತಿಂಗಳಿಗೆ 8,500ರೂ ಪಡೆಯಲು ಪೋಸ್ಟ್ ಆಫೀಸ್ ಮುಂದೆ ಸಾಲುಗಟ್ಟಿ ಮಹಿಳೆಯರು

ಬೆಂಗಳೂರು : ಅಧಿಕಾರಕ್ಕೆ ಬಂದರೆ ರಕ್ಷಣಾ ಸೇವೆಗಳ ನೇಮಕಾತಿಯ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸಿ, ಪ್ರತಿ ತಿಂಗಳು ಪ್ರತಿ ಮಹಿಳೆಯ ಖಾತೆಗೆ 8,500 ರೂ.ಗಳನ್ನು ಜಮಾ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ಬಿಹಾರದಲ್ಲಿ ಮಹಾಘಟಬಂಧನ್ ಅಭ್ಯರ್ಥಿಗಳ ಪರವಾಗಿ ಬ್ಯಾಕ್ ಟು ಬ್ಯಾಕ್ ಚುನಾವಣಾ ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ಇಂಡಿಯಾ ಮೈತ್ರಿ ಕೂಟದ ಪರವಾಗಿ ಸ್ಪಷ್ಟ ಅಲೆ ಇರುವುದರಿಂದ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಾಗುವುದಿಲ್ಲ ಎಂದು ಪ್ರತಿಪಾದಿಸಿದರು.

Recent News


Leave a Comment: