Posted by vidyamaana on 2024-07-24 10:52:54 |
ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.
ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
Posted by Vidyamaana on 2024-03-01 12:20:35 |
ಬೆಂಗಳೂರು : ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್ ಲೀಸ್ಗೆ ಪಡೆದಿದ್ದರು. ಮೂರು ತಿಂಗಳು ಕಳೆಯುತ್ತಿದ್ದಂತೆ ಅವ್ರಿಗೆ ಕಾದಿತ್ತು ಮುಂದೆ ಶಾಕ್. ಬಾಗಿಲಿಗೆ ಬಂದ ಬ್ಯಾಂಕಿ ನೋಟಿಸ್ ನೋಡಿ ಶಾಕ್ ಆಗಿದ್ರು.ಏಕಾಏಕಿ ಬ್ಯಾಂಕಿನವರು ಮನೆಗೆ ಬೀಗ ಜಡಿದಿದ್ದು, ಪ್ಲಾಟ್ ಲೀಸ್ಗೆ ಪಡೆದವರು ಅತ್ತ ಇರಲು ಮನೆ ಇಲ್ಲದೆ, ಇತ್ತ ಕೊಟ್ಟ ಹಣವು ಇಲ್ಲದ ಬೀದಿ ಪಾಲಾಗಿದ್ದಾರೆ.. ಅಷ್ಟಕ್ಕೂ ಈ ಘಟನೆ ನಡೆದಿದಾದ್ರು ಎಲ್ಲಿ ಅಂತೀರಾ ನೋಡಿ ಈ ರಿಪೋರ್ಟ್ ನಲ್ಲಿ..
ಹೀಗೆ ಫೋಟೋದಲ್ಲಿ ಪೋಸ್ ಕೋಡುತ್ತಿರುವ ಇವ್ರು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ನಿವಾಸಿಗಳಾದ ಅಜಿತ್ ಕುಮಾರ್ ಮತ್ತು ಸುಜತಾ. ವಂಚನೆಯನ್ನೆ ಕಾಯಕ ಮಾಡಿಕೊಂಡಿರುವ ಇವ್ರು ಆನೇಕಲ್ ಪೊಲೀಸರ ಅತಿಥಿಯಾಗಿದ್ದಾರೆ. ಹೌದು ಚಂದಾಪುರ ರಸ್ತೆಯಲ್ಲಿನ ಯುಬಿಎಚ್ಸಿ ಅಪಾರ್ಟ್ಮೆಂಟ್ನಲ್ಲಿನ ತಮ್ಮ ಎರಡು ಪ್ಲಾಟ್ಗಳ ಮೇಲೆ ಬರೋಬ್ಬರಿ ಐವತ್ತು ಲಕ್ಷ ಲೋನ್ ಪಡೆದ ಅಸಾಮಿಗಳು ಅದೇ ಪ್ಲಾಟ್ ಗಳನ್ನು ಲೀಜ್ಗೆ ನೀಡಿ ಲಕ್ಷ ಲಕ್ಷ ವಸೂಲಿ ಮಾಡಿದ್ದಾರೆ. ಬಳಿಕ ಬ್ಯಾಂಕ್ ಲೋನ್ ಕಟ್ಟದೇ ಎಸ್ಕೇಪ್ ಆಗಿದ್ದಾರೆ. ಮೂರ್ನಾಲ್ಕು ನೋಟಿಸ್ ಕೊಟ್ಟ ಬ್ಯಾಂಕಿನವರು ಪ್ಲಾಟ್ ವಾಸಿಗಳನ್ನು ಉಟ್ಟಬಟ್ಟೆಯಲ್ಲಿ ಹೊರ ಹಾಕಿ ಬೀಗ ಜಡಿದಿದ್ದಾರೆ.ಇನ್ನೂ ರಿಯಲ್ ಎಸ್ಟೇಟ್ ಹೆಸರಲ್ಲಿ ರೀಲ್ ಬಿಟ್ಟು ಯಾಮಾರಿಸುವ ಅಜಿತ್ ಮತ್ತು ಸುಜತಾ ದಂಪತಿ ತಾವು ರಿಯಲ್ ಎಸ್ಟೇಟ್ ನಲ್ಲಿ ಒಳ್ಳೆಯ ಬಿಸಿನೆಸ್ ಮಾಡುತ್ತಿದ್ದೆವೆ. ತಮ್ಮದು ಸಾಕಷ್ಟು ಪ್ಲಾಟ್, ವಿಲ್ಲಾ ಮತ್ತು ನಿವೇಶನಗಳಿದ್ದು, ಕಡಿಮೆ ಬೆಲೆಗೆ ಲೀಜ್ ಮತ್ತು ಮಾರಾಟ ಮಾಡುತ್ತೆವೆ ಎಂದು ಜಾಹಿರಾತು ನೀಡುತ್ತಾರೆ. ಇವರ ಬಿಲ್ಡ್ ಅಪ್ ಕಂಡು ಇಂದು ಪ್ಲಾಟ್ ಲೀಜ್ ಪಡೆದವರು ಅಕ್ಷರಶಃ ಹಣ ಮತ್ತು ಮನೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಇನ್ನೂ ಸಾಕಷ್ಟು ಮಂದಿಗೆ ಅಜಿತ್ ದಂಪತಿ ಮಕ್ಮಲ್ ಟೋಪಿ ಹಾಕಿದ್ದು, ನಮಗೆ ನ್ಯಾಯ ಕೊಡಿಸಿ ಎಂದು ವಂಚನೆಗಳೊಗಾದ ಗ್ರಾಹಕರು ಆನೇಕಲ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಇನ್ನೂ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಂಚಕ ದಂಪತಿಯನ್ನ ಬಂಧಿಸಿ ಜೈಲಿಗೆ ಕಳುಹಿಸಿದ್ದು, ಲಕ್ಷಾಂತರ ರೂಪಾಯಿ ಹಣ ನೀಡಿ ಮನೆ ಲೀಸ್ಗೆ ಪಡೆದಿದ್ದ ಗ್ರಾಹಕರು ಅತ್ತ ನೀಡಿದ ಹಣವೂ ಕೈ ಸೇರದೆ ಇತ್ತ ಇರಲು ಮನೆಯು ಸಹ ಇಲ್ಲದೆ ಬೀದಿಗೆ ಬೀಳುವಂತಾಗಿದ್ದು ಮಾತ್ರ ವಿಪರ್ಯಾಸ ಸಂಗತಿ.
Posted by Vidyamaana on 2024-02-01 20:29:37 |
ಉಡುಪಿ : ಕಾಡುಬೆಟ್ಟುನಿವಾಸಿ, ಸಾಂಪ್ರದಾಯಿಕ ಹುಲಿವೇಷಧಾರಿ, ಹುಲಿಕುಣಿತದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಕಾಡುಬೆಟ್ಟು ಅಶೋಕ್ ರಾಜ್ ಅವರು ನಿಧನರಾದರು.ಹಲವು ದಿನಗಳಿಂದ ಅನಾರೋಗ್ಯದಿಂದಿದ್ದ ಅಶೋಕ್ ರಾಜ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ 36 ವರ್ಷಗಳಿಂದ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಉಡುಪಿಯಲ್ಲಿ ಸಾಂಪ್ರದಾಯಿಕ ಹುಲಿವೇಷ ಧರಿಸಿದ್ದ ಅವರು 28 ವರ್ಷಗಳಿಂದ ಹುಲಿವೇಷ ತಂಡ ರಚಿಸಿದ್ದರು. ಉಭಯ ಜಿಲ್ಲೆಗಳಲ್ಲಿ ತಂಡವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು.
ಮೃತರು ಪತ್ನಿ ಸುಷ್ಮರಾಜ್ ಸಹಿತ ಇಬ್ಬರು ಪುತ್ರಿಯರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.
Posted by Vidyamaana on 2023-11-05 12:16:41 |
ನವದೆಹಲಿ: ವೇಗವಾಗಿ ಬಂದ ದೆಹಲಿ ಸಾರಿಗೆ ಸಂಸ್ಥೆಯ (DTC) ಬಸ್ವೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿ ಸಾಗುತ್ತಿದ್ದ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
VIDEO ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಬೈಕ್ಗೆ ಡಿಕ್ಕಿ ಹೊಡೆದ ವಿಡಿಯೋ ನೋಡಲು ಕ್ಲಿಕ್ ಮಾಡಿ
ಅಪಘಾತ ದೆಹಲಿಯ ರೋಹಿಣಿ ನಗರ ಪ್ರದೇಶದಲ್ಲಿ ವರದಿಯಾಗಿದೆ.ಅಪಘಾತದ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಸ್ ಅತಿವೇಗವಾಗಿ ಚಲಿಸುತ್ತಿದ್ದ ಕಾರಣ, ಚಾಲಕ ನಿಯಂತ್ರಣ ಕಳೆದುಕೊಂಡು ಸ್ಥಳದಲ್ಲಿದ್ದ ಕಾರು ಮತ್ತು ಬೈಕ್ಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ರಸ್ತೆ ಬದಿ ನಿಂತಿದ್ದ ದ್ವಿಚಕ್ರ ವಾಹನಗಳು ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ.
ಅಪಘಾತದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದೆ,
Posted by Vidyamaana on 2024-03-10 20:33:46 |
ಪುತ್ತೂರು ಮಾ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಸ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ.
ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕ್ ಸೈಡ್ ಕೋಡುವ ಸಂದರ್ಭ ಕಾರು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.ಗಂಭೀರ ಗಾಯಗೊಂಡ ದಂಪತಿಯನ್ನ ಸರ್ಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಾಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.
Posted by Vidyamaana on 2023-08-08 11:28:41 |
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಡಗಳ (ದೌರ್ಜನ್ಯ ತಡೆ) ಕಾಯಿದೆಯಡಿ ದಾಖಲಾಗುತ್ತಿರುವ ಸುಳ್ಳು ಕ್ರಿಮಿನಲ್ ಪ್ರಕರಣಗಳು ನ್ಯಾಯಾಂಗ ವ್ಯವಸ್ಥೆಗೆ ಅಡ್ಡಿ ಪಡಿಸುತ್ತಿವೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.ಅಲ್ಲದೇ, ಈ ರೀತಿಯ ಪ್ರಕರಣಗಳು ನ್ಯಾಯಾಂಗ ಕ್ಷೇತ್ರದ ಅಮೂಲ್ಯ ಸಮಯ ವ್ಯರ್ಥ ಮಾಡುತ್ತಿವೆ ಎಂದು ತಿಳಿಸಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಕಾಯಿದೆಯಡಿ ದಾಖಲಾಗಿದ್ದನ್ನು ಪ್ರಶ್ನಿಸಿ ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತ ಪಡಿಸಿದೆ. ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯಿದೆ ಅಡಿ ಸುಳ್ಳು ಪ್ರಕರಣಗಳು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಲಿದ್ದು, ನಿಯಂತ್ರಿಸುವಲ್ಲಿ ವಿಫಲವಾದಲ್ಲಿ ಇಡೀ ಅಪರಾಧ ನ್ಯಾಯ ವ್ಯವಸ್ಥೆಗೆ ದೊಡ್ಡ ಹೊರೆಯಾಗಬಹುದು ಎಂದು ತಿಳಿಸಿದೆ.
ಜತೆಗೆ, ಈ ಸಂಬಂಧ ಪ್ರಕರಣದಲ್ಲಿ ಸಿಲುಕುವವರಿಗೆ ಕಿರುಕುಳ ಮುಂದುವರೆಯಲಿದೆ ಮತ್ತು ನ್ಯಾಯ ತಪ್ಪಿದಂತಾಗಬಹುದು ಎಂದು ಪೀಠ ಅಭಿಪ್ರಾಯ ವ್ಯಕ್ತ ಪಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವರ್ಗಗಳಜನತೆಯ ಮೇಲಿನ ದೌರ್ಜನ್ಯಗಳನ್ನು ತಡೆಯುವ ಉದ್ದೇಶದಿಂದ ಕಾಯಿದೆ ಜಾರಿ ಮಾಡಲಾಗಿದೆ. ಆದರೆ, ಈ ಕಾಯಿದೆ ಉಲ್ಲಂಘನೆ ಮಾಡಿರುವುದಕ್ಕೆ ಪ್ರಸ್ತುತದ ಪ್ರಕರಣ ಒಂದು ಉತ್ತಮ ನಿರ್ದಶನವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.
ಅಲ್ಲದೇ, ಈ ರೀತಿಯ ಪ್ರಕರಣಗಳಿಂದ ನಿಜವಾಗಿಯೂ ಸಮಸ್ಯೆಗೆ ಸಿಲುಕಿರುವವರು ನ್ಯಾಯಕ್ಕಾಗಿ ಕಾಯುತ್ತಿರುವ ಸಂದರ್ಭದಲ್ಲಿ ಸುಳ್ಳು ಪ್ರಕರಣವನ್ನು ವಿಚಾರಣೆಗೊಳಪಡಿಸುವುದು ಒಂದು ರೀತಿಯ ಅಪಹಾಸ್ಯದಂತಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಜತೆಗೆ, ದೂರುದಾರರ ತಂದೆ ಅರ್ಜಿದಾರರಿಗೆ ತಮ್ಮ ಜಮೀನನ್ನು ಮಾರಾಟ ಮಾಡಿದ್ದಾರೆ. ಅಲ್ಲದೇ, ಆ ಆಸ್ತಿಯನ್ನು ಅರ್ಜಿದಾರರು ಕಳೆದ 50 ವರ್ಷಗಳಿಂದ ತಮ್ಮಲ್ಲಿ ಉಳಿಸಿಕೊಂಡಿರುವ ಸಂಬಂಧ ಸರ್ಕಾರದಲ್ಲಿ ದಾಖಲೆಗಳಿವೆ. ಹಾಗೆ, ಅರ್ಜಿದಾರರು ಜಮೀನನ್ನು ಖರೀದಿ ಮಾಡಿದ್ದಾರೆ ವಿನಃ ಅತಿಕ್ರಮ ಮಾಡಿಲ್ಲ ಎಂಬ ಅಂಶ ದಾಖಲೆಗಳಲ್ಲಿ ಎತ್ತಿ ತೋರಿಸುತ್ತಿದೆ, ಆದರೂ ಈಅಂಶವನ್ನು ಪರಿಗಣಿಸದೇ ದೂರು ನೀಡಲಾಗಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸುತ್ತಿರುವುದಾಗಿ ಪೀಠ ತಿಳಿಸಿದೆ.
ಪ್ರಕರಣದ ಹಿನ್ನೆಲೆ : ರಸಿಕ್ ಲಾಲ್ ಮತ್ತು ಪುರುಷೋತ್ತಮ್ ಎಂಬುವರ ವಿರುದ್ಧ ತಮ್ಮ ಮನೆಯ ನೆರೆಹೊರೆಯವರು ಮನೆ ಒತ್ತುವರಿ ಮತ್ತು ನಿರಂತರ ಕಿರುಕುಳ ನೀಡಲಾಗುತ್ತಿದೆ. ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಖಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಐಪಿಸಿಯ ವಿವಿಧ ಸೆಕ್ಷನ್ಗಳು ಸೇರಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯಿದೆಯ ಸೆಕ್ಷನ್ಗಳನ್ನು ಸೇರ್ಪಡೆ ಮಾಡಿದ್ದರು. ಪ್ರಕರಣ ಸಂಬಂಧ ರಾಮಮೂರ್ತಿ ನಗರದ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು.
Posted by Vidyamaana on 2023-10-18 16:55:00 |
ಪುತ್ತೂರು: ಪ್ರಸ್ತುತ ರಾಜ್ಯ ಸರಕಾರ ಸುಲಿಗೆಕೋರ ಸರಕಾರವಾಗಿದ್ದು, ಬಿಜೆಪಿ ನಿರಂತರ ಹೋರಾಟ, ಜನಾಂದೋಲನದ ಮೂಲಕ ಜನರನ್ನು ಎಬ್ಬಿಸಲಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.
ಅವರು ಮಂಗಳವಾರ ಕಾಂಗ್ರೆಸ್ ಎಟಿಎಂ ಸರಕಾರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿ ಆಡಳಿತ ಸೌಧದ ಬಳಿ ಇರುವ ಅಮರ್ ಜವಾನ್ ಸ್ಮಾರಕದ ಬಳಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಒಂದೆಡೆ ಮಳೆ ಇಲ್ಲದೆ ಬರ ಪರಿಸ್ಥಿತಿ ಉಂಟಾಗಿದೆ. ಇನ್ನೊಂದೆಡೆ ಕರ್ನಾಟಕ ಸರಕಾರದ ಸೂಟ್ ಕೇಸ್ ಭರಪೂರ ಭರ್ತಿಯಾಗಿದೆ ಎಂದು ಲೇವಡಿ ಮಾಡಿದ ಅವರು, ರಾಜ್ಯಾದ್ಯಂತ ಜನಸಾಮಾನ್ಯರು ಬೀದಿಗೆ ಇಳಿದು ಹೋರಾಟ ಮಾಡುವ ಪರಿಸ್ಥಿತಿ ಉಂಟಾಗಿದೆ. ಈ ಮೂಲಕ ಮುಂದಿನ ನಾಲ್ಕು ವರ್ಷಗಳ ಕಾಂಗ್ರೆಸ್ ಆಡಳಿತ ಹೇಗಿರಬಹುದು ಎಂಬುದನ್ನು ಊಹೆ ಮಾಡಲು ಸಾಧ್ಯವಿಲ್ಲ. ಸರಕಾರದ ಪರಿಸ್ಥಿತಿ ಎಲ್ಲಿಗೆ ಮುಟ್ಟಿದೆ ಎಂದರೆ ಮೈಸೂರು ದಸರಾದಲ್ಲಿ ಸಂಗೀತ ಕಾರ್ಯಕ್ರಮ ನೀಡಲು ಬಂದ ಕಲಾವಿದನಿಂದ 60 ಶೇ. ಕಮಿಷನ್ ಪಡೆಯುವ ಮಟ್ಟಿಗೆ ಬಂದಿದೆ. ಬಿಜೆಪಿ ಸರಕಾರದ ಸಂದರ್ಭ 40 ಶೇ. ಕಮಿಷನ್ ಸರಕಾರ ಎಂದು ಆರೋಪ ಮಾಡಿರುವ ಪ್ರಸ್ತುತ ಸರಕಾರ ಸೋನಿಯಾ ಗಾಂಧಿಗೆ ಕಪ್ಪ ಕಾಣಿಕೆ ನೀಡುವ ಸಲುವಾಗಿ 40 ಶೇ. ಇದ್ದದ್ದು 80 ಶೇ. ಕಮಿಷನ್ ಆಗಿದೆ. ಇದಕ್ಕೆ ಕಂಟ್ರಾಕ್ಟ್ ದಾರರ ಮನೆಯಲ್ಲಿ ಸಿಕ್ಕಿರುವ ಕೋಟ್ಯಾಂತರ ರೂಪಾಯಿಗಳು ಸಾಕ್ಷಿ ಎಂದು ತಿಳಿಸಿದರು.
ಇಂದು ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಪರಿಣಾಮ ರೈತರು ನೆಮ್ಮದಿಯಿಂದ ಇಲ್ಲದಂತಾಗಿದೆ. ತಮಿಳುನಾಡಿಗೆ ಕದ್ದುಮುಚ್ಚಿನ ನೀರು ಬಿಡುವ ಹುನ್ನಾರದ ಮೂಲಕ ತಮಿಳುನಾಡಿನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ರೈತರು, ರೈತರ ಮಕ್ಕಳಿಗಾಗಿ ಇರುವ ಕೇಂದ್ರ ಸರಕಾರದ ಯೋಜನೆಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಸರಕಾರದ ಬಳಿ ದುಡ್ಡಿಲ್ಲದಿದ್ದರೆ ನಮ್ಮಲ್ಲಿ ತಿಳಿಸಲಿ, ಭಿಕ್ಷೆ ಬೇಡಿಯಾದರೂ ನಾವು ಹಣ ನೀಡುತ್ತೇವೆ ಎಂದು ಖಾರವಾಗಿ ಹೇಳಿದ ಅವರು, ಜನರಿಗೆ ಮಂಕುಬೂದಿ ಎರಚಿ ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನೂ ಮಾಡುತ್ತಿದೆ. ತಕ್ಷಣ ರಾಜ್ಯ ಸರಕಾರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ಬಿಜೆಪಿ ಮುಖಂಡ ವಿಶ್ವೇಶ್ವರ ಭಟ್ ಬಂಗಾರಡ್ಕ ಮಾತನಾಡಿ, ಕೇವಲ ಟೇಪು ಕತ್ತರಿಸುವುದು ಮತ್ತು ಭಾಷಣಕ್ಕೆ ಮಾತ್ರ ಕಾಂಗ್ರೆಸ್ ನ ಪ್ರಮುಖರು ಸೀಮಿತವಾಗಿದ್ದಾರೆ. ಮತ್ತೆ ಅನುದಾನ ಎಲ್ಲಿಂದ ತರುವುದು ಎಂದು ಪ್ರಶ್ನಿಸಿದ ಅವರು, ಸರಕಾರದ ದುಷ್ಟ ಬುದ್ಧಿಯನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಬಿಜೆಪಿಯಿಂದ ಆಗಲಿ ಎಂದರು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ.ಜಗನ್ನಿವಾಸ ರಾವ್, ಅಪ್ಪಯ್ಯ ಮಣಿಯಾಣಿ, ಪುರುಷೋತ್ತಮ ಮುಂಗ್ಲಿಮನೆ, ಆರ್.ಸಿ.ನಾರಾಯಣ್, ಹರಿಪ್ರಸಾದ್ ಯಾದವ್, ನಿತೇಶ್ ಕುಮಾರ್ ಶಾಂತಿವನ, ಜಯಶ್ರೀ ಎಸ್. ಶೆಟ್ಟಿ,.ವಿದ್ಯಾ ಆರ್.ಗೌರಿ, ಜಿಪಂ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿದ ಮನವಿಯನ್ನು ಸಹಾಯಕ ಆಯುಕ್ತರ ಮೂಲಕ ಸರಕಾರಕ್ಕೆ ಸಲ್ಲಿಸಿದರು.