ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ನಾನು ಭ್ರಷ್ಟನಲ್ಲ ಇಲ್ಲಿ ಲಂಚ ಸ್ವೀಕರಿಸುವುದಿಲ್ಲ

Posted by Vidyamaana on 2023-11-09 19:40:40 |

Share: | | | | |


ನಾನು ಭ್ರಷ್ಟನಲ್ಲ ಇಲ್ಲಿ ಲಂಚ ಸ್ವೀಕರಿಸುವುದಿಲ್ಲ

ಹಾಸನ, ನ 09: ‘ನಾನು ಭ್ರಷ್ಟನಲ್ಲ, ಇಲ್ಲಿ ಲಂಚ ಸ್ವೀಕರಿಸುವುದಿಲ್ಲ’ ಎಂದು ಹಾಸನ ಬಿಇಒ ಕಚೇರಿ ಅಧೀಕ್ಷಕರೊಬ್ಬರು ತಮ್ಮ ಮೇಜಿನ ಮೇಲೆ ಹಾಕಿರುವ ಫಲಕದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 


ಹಾಸನ ನಗರದ ಬಿಇಒ ಕಚೇರಿಯ ಅಧೀಕ್ಷರಾಗಿರುವ ಡಿ.ಎಸ್.ಲೋಕೇಶ್‌ ಅವರೇ ಈ ಫಲಕ ಹಾಕಿಕೊಂಡಿರುವ ಅಧಿಕಾರಿ.


ಈ ಹಿಂದೆ ಲೋಕೇಶ್‌ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಸನ ಸಂಸದರಾಗಿದ್ದ ಅವಧಿಯಲ್ಲಿ ಅವರ ಕಚೇರಿಯ ಆಪ್ತ ಕಾರ್ಯದರ್ಶಿಯಾಗಿದ್ದರು. ಆ ಬಳಿಕ ಹಾಸನ ಕ್ಷೇತ್ರದ ಶಾಸಕರಾಗಿದ್ದ ಪ್ರೀತಂ ಜೆ.ಗೌಡರ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚಿಗೆ ಬಿಇಒ ಕಚೇರಿ ಅಧೀಕ್ಷಕರಾಗಿ ಲೋಕೇಶ್‌ ಅವರು ಬಡ್ತಿ ಹೊಂದಿದ್ದಾರೆ. 


ಸದ್ಯ ಲೋಕೇಶ್‌ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉಪ್ಪಿನಂಗಡಿ ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ

Posted by Vidyamaana on 2023-08-14 15:37:15 |

Share: | | | | |


ಉಪ್ಪಿನಂಗಡಿ ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ

ಪುತ್ತೂರು:  ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಆಗುತ್ತಿರುವ ಅಭಿವೃದ್ದಿ ಮತ್ತು ಜನಪರ ಯೋಜನೆಗಳನ್ನು ಮನಗಂಡು ಇಂದು ಅನೇಕ ಮಂದಿ ಬಿಜೆಪಿಗರು ಕಾಂಗ್ರೆಸ್ ಸೇರುತ್ತಿದ್ದಾರೆ. ಇಂದು ಉಪ್ಪಿನಂಗಡಿಯಲ್ಲಿ ನಡೆದ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ವೇಳೆ ಬಿಜೆಪಿ ಬೆಂಬಲಿತರು ಕಾಂಗ್ರೆಸ್‌ಗೆ ಸೇರಿದ್ದು ಅತ್ಯಂತ ಸಂತೋಷದ ವಿಚಾರವಾಗಿದ್ದು ಇದರಿಂದ ಬಿಜೆಪಿ ತೆಕ್ಕೆಯಲ್ಲಿದ್ದ ಉಪ್ಪಿನಂಗಡಿ ಗ್ರಾಪಂ ಇಂದು ಕಾಂಗ್ರೆಸ್ ತೆಕ್ಕೆಗೆ ಬಂದಿದೆ. ಮುಂದೆ ಉಪ್ಪಿನಂಗಡಿ ಗ್ರಾಪಂ ನ ಪ್ರತೀ ವಾರ್ಡಿನಲ್ಲಿ ಅಭಿವೃದ್ದಿ ಕೆಲಸಗಳು ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.

ಜನರ ಸೇವೆ ಮಾಡಬೇಕೆಂಬ ಉದ್ದೇಶದಿಂದ ಬಿಜೆಪಿ ಬೆಂಬಲಿತರು ಇಂದು ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ವಾರ್ಡನ್ನು ಅಭಿವೃದ್ದಿ ಮಾಡಿಲ್ಲ ಇದೇ ಕಾರಣಕ್ಕೆ ಜನ ಇಂದು ಕಾಂಗ್ರೆಸ್‌ಗೆ ತಂಢೋಪತಂಡವಾಗಿ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳು ಇಂದು ಜನರ ಮನಸ್ಸನ್ನು ತಲುಪಿದೆ. ಮುಂದೆ ಅನೇಕ ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ಗ್ರಾಪಂ ಸದಸ್ಯರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಅವರನ್ನು ಪಕ್ಷಕ್ಕೆ ಸೇರಿಸುವ ಕೆಲಸ ನಿರಂತರವಾಗಿ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಎರಡು ಗ್ರಾಪಂ ಆಡಳಿತವನ್ನು ಕಾಂಗ್ರೆಸ್ ಬಿಜೆಪಿಯಿಂದ ಕಸಿದುಕೊಂಡಿದೆ. ಆರ್ಯಾಪು ಗ್ರಾಪಂ ನ ನಿಕಟಪೂರ್ವ ಉಪಾಧ್ಯಕ್ಷರು ಸಹಿತ ಇಬ್ಬರು ಇಂದು ಕಾಂಗ್ರೆಸ್ ಸೇರಿಕೊಂಡಿದ್ದಾರೆ . ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ , ಸಿದ್ದರಾಮಯ್ಯ ಸರಕಾರದ ಬಡವರ ಪರ ಯೋಜನೆಗಳು ಜನರನ್ನು ಕಾಂಗ್ರೆಸ್‌ನತ್ತ ಆಕರ್ಷಿಸುವಂತೆ ಮಾಡಿದೆ ಎಂದು ಶಾಸಕರು ಹೇಳಿದರು.

ಪಕ್ಷಕ್ಕೆ ಸೇರ್ಪಡೆಯಾದವರನ್ನು ಅತ್ಯಂತ ಗೌರವಾದರಗಳಿಂದ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದು ಹೇಳಿದ ಶಾಸಕರು ಇಂದು ನನಗೆ ಅತ್ಯಂತ ಸಂತೋಷ ದಿನವಾಗಿದೆ ಎಂದು ಹೇಳಿದರು. ಉಪ್ಪಿನಂಗಡಿ ಗ್ರಾಪಂ ನಲ್ಲಿ ಮುಂದಿನ ದಿನಗಳಲ್ಲಿ ಪ್ರತೀ ವಾರ್ಡಿನಲ್ಲಿ ಅಭಿವೃದ್ದಿ ಕೆಲಸಗಳು ನಡೆಯಲಿದೆ. ಬಡವರ ಕೆಲಸಗಳು ಆಗಲಿದೆ ಇದರಲ್ಲಿ ಯಾವುದೇ ಅನುಮಾನವೇ ಬೇಡ. ಪಕ್ಷಕ್ಕೆ ಇನ್ನಷ್ಟು ಮಂದಿಯನ್ನು ಸೇರ್ಪಡೆಗೊಳಿಸುವ ಮೂಲಕ ನಾವು ಪಕ್ಷವನ್ನು ಬಲಪಡಿಸುವ ಕೆಲಸವನ್ನು ಮಾಡಿ ಕ್ಷೇತ್ರದ ಪ್ರತೀ ಮನೆಗೂ ಕಾಂಗ್ರೆಸ್‌ನ ಯೋಜನೆಗಳು ದೊರಕುವಂತೆ ಮಾಡಬೇಕು ಎಂದು ಹೇಳಿದರು.ಪಕ್ಷೇತರ ಸದಸ್ಯರಾದ ಸಣ್ಣಣ್ಣ ಮಡಿವಾಳ, ನಾಲ್ವರು ಎಸ್‌ಡಿಎಪಿಐ ಸದಸ್ಯರಾದ ರಶೀದ್, ಸೌಧ, ಮೈಶಿದಿ ಮತ್ತು ನೆಬಿಸಾ ರವರು ಕಾಂಗ್ರೆಸ್ ಬೆಂಬಲಿತರಿಗೆ ಬೆಂಬಲ ನೀಡಿದರು. ನೂತನ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಪಕ್ಷೇತರ ಸದಸ್ಯರನ್ನು ಶಾಸಕರು ಶಾಲು ಹೊದಿಸಿ ಗೌರವಿಸಿದರು.

ಬಿಜೆಪಿ ಆಡಳಿತದ ವೈಫಲ್ಯದಿಂದ ಕಾಂಗ್ರೆಸ್ ಸೇರಿದ್ದಾರೆ

ಹಿಂದಿನ ಅವಧಿಯಲ್ಲಿದ್ದ ಬಿಜೆಪಿ ಗ್ರಾಪಂ ಯಾವುದೇ ಅಭಿವೃದ್ದಿ ಕೆಲಸಗಳನ್ನು ಮಾಡದೇ ಇರುವ ಕಾರಣ ಬಿಜೆಪಿ ಬೆಂಬಲಿತರು ಅಭಿವೃದ್ದಿಯ ದೃಷ್ಟಿಯಿಂದ ಕಾಂಗ್ರೆಸ್ ಸೇರಿದ್ದಾರೆ. ಪಕ್ಷೇತರ ಅಭ್ಯರ್ಥಿ ಸಣ್ಣನ್ನ ಅವರು ಬೆಂಬಲ ನೀಡಿದ್ದಾರೆ. ಯಾವುದೇ ಫಲಾಪೇಕ್ಷೆಯಿಲ್ಲದೆ ಎಸ್‌ಡಿಪಿಐ ಯವರು ಕಾಂಗ್ರೆಸ್‌ಗೆ ಬೆಂಬಲವನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಉಪ್ಪಿನಂಘಡಿ ಬಿಜೆಪಿ ಮುಕ್ತವಾಗಲಿದೆ , ಜನರು ನಮಗೆ ಖಂಡಿತವಾಗಿಯೂ ಆಶೀರ್ವಾದ ಮಡಲಿದ್ದಾರೆ. ಇನ್ನಷ್ಟು ಬಿಜೆಪಿ ಬೆಂಬಲಿತ ಸದಸ್ಯರು ನಮ್ಮ ಶಾಸಕರ ಅಭಿವೃದ್ದಿ ಕೆಲಸವನ್ನು ಮನಗಂಡು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿಯವರು ಹೇಳಿದರು.

ವಿಟ್ಲ ಉಪ್ಪಿನಗಂಡಿ ಬ್ಲಾಕ್ ಮಾಜಿ ಅಧ್ಯಕ್ಷಮುರಳೀಧರ್ ರೈ ಮಠಂತಬೆಟ್ಟು ಮಾತನಾಡಿ ಗ್ರಾಪಂ ಉಪ್ಪಿನಂಗಡಿ ಗ್ರಾಪಂ ಚುನಾವಣೆಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಗ್ರಾಪಂ ಸದಸ್ಯರುಗಳಾದ ಯು ಟಿ ತೌಸೀಫ್, ಅಬ್ದುಲ್‌ರಹಿಮಾನ್ ಮಠ, ಇಬ್ರಾಹಿಂ ಪುಳಿತ್ತಡಿ, ವಿನಾಯಕ ಪೈ, ವಿಟ್ಲ ಉಪ್ಪಿನಂಗಡಿ ಮಾಜಿ ಬ್ಲಾಕ್ ಅಧ್ಯಕ್ಷರಾದ ಪ್ರವೀಣ್‌ಚಂಧ್ರ ಆಳ್ವ, ಡಿಸಿಸಿ ಕಾರ್ಯದರ್ಶಿ ಉಮಾನಾಥ ಶೆಟ್ವ ಪೆರ್ನೆ, ಮಹಮ್ಮದ್ ಕೆಂಪಿ, ಸಿದ್ದಿಕ್ ಕೆಂಪಿ, ಶಬ್ಬೀರ್ ಕೆಂಪಿ, ಸೋಮನಾಥ ರಾಮನಗರ, ವೆಂಕಪ್ಪ ಪೂಜಾರಿ, ಕೃಷ್ಣ ರಾವ್ ಅರ್ತಿಲ, ಅಝೀಝ್ ಬಸ್ತಿಕ್ಕಾರ್, ಉಮೇಶ್ ರಾಮನಗರ , ಮಜೀದ್ , ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಫಾರೂಕ್ ಪೆರ್ನೆ, ಪ್ರಹ್ಲಾದ್ ಬೆಳ್ಳಿಪ್ಪಾಡಿ, ಸುಶಾನ್ ಶೆಟ್ಟಿ, ಸುಮಿತ್ ಶೆಟ್ಟಿ, ದಾಮೋಧರ ಭಂಡಾರ್ಕರ್, ನಗರಸಭಾ ಸದಸ್ಯ ಶಕ್ತಿ ಸಿನ್ಹಾ, ನಝೀರ್ ಮಠ, ವಲಯಾಧ್ಯಕ್ಷ ಆದಂ ಮಠ, ಕೃಷ್ಣಪ್ಪ ಎನ್, ಇಬ್ರಾಹಿಂ ಆಚಿ ಕೆಂಪಿ, ಝಕರಿಯ್ಯಾ ಕೊಡಿಪ್ಪಾಡಿ, ಮುಸ್ತಫಾ, ಯು ಟಿ ಫೌಝರ್, ರಫೀಕ್ ಝೆನ್  ಮತ್ತಿತರರು ಉಪಸ್ಥಿತರಿದ್ದರು.

ಚಂದ್ರಯಾನ-3ರ ಲಾಂಚ್ ಪ್ಯಾಡ್ ನಿರ್ಮಿಸಿದ್ದ ಟೆಕ್ನಿಷಿಯನ್ ಗಳ ಬದುಕು ಕ್ರ್ಯಾಶ್ ಲ್ಯಾಂಡಿಂಗ್!

Posted by Vidyamaana on 2023-09-20 12:23:59 |

Share: | | | | |


ಚಂದ್ರಯಾನ-3ರ ಲಾಂಚ್ ಪ್ಯಾಡ್ ನಿರ್ಮಿಸಿದ್ದ ಟೆಕ್ನಿಷಿಯನ್ ಗಳ ಬದುಕು ಕ್ರ್ಯಾಶ್ ಲ್ಯಾಂಡಿಂಗ್!

ನವದೆಹಲಿ: ಚಂದ್ರಯಾನ -3ರ ಯೋಜನೆಯಲ್ಲಿ ತನ್ನ ಸೇವೆ ನೀಡಿದ್ದ ಟೆಕ್ನಿಶಿಯನ್‌ ಒಬ್ಬರಿಗೆ ಸೂಕ್ತ ಸಂಬಳ ಸಿಗದೆ  ರಸ್ತೆಬದಿ ಇಡ್ಲಿ ಮಾರುವ ಸ್ಥಿತಿಗೆ ತಲುಪಿದ್ದಾರೆ ಎಂದು ವರದಿ ಮಾಡಿದ್ದ ʼಬಿಬಿಸಿʼ ಸುದ್ದಿಯನ್ನು ಪತ್ರಿಕಾ ಮಾಹಿತಿ ಬ್ಯೂರೋ ಫ್ಯಾಕ್ಟ್‌ ಚೆಕ್‌ ಮಾಡಿದೆ.



ಯಾವ ಸುದ್ದಿಯಿದು?


ಇಸ್ರೋ ಚಂದ್ರಯಾನ-3ರ ಯಶಸ್ಸಿನಲ್ಲಿ  ತಂತ್ರಜ್ಞರಾಗಿ ಕೆಲಸ ಮಾಡಿದ್ದ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ದೀಪಕ್ ಕುಮಾರ್ ಉಪ್ರಾರಿಯಾ ಅವರಿಂದು ಜೀವನ ಸಾಗಿಸಲು ರಸ್ತೆಬದಿಯಲ್ಲಿ ಇಡ್ಲಿ ಮಾರುವ ಸ್ಥಿತಿಗೆ ತಲುಪಿದ್ದಾರೆ ಎಂದು ವರದಿ ತಿಳಿಸಿತ್ತು.


ಯಾರು ಈ ದೀಪಕ್ ಕುಮಾರ್?: 


ಉಪ್ರಾರಿಯಾ ಅವರು ಮಧ್ಯಪ್ರದೇಶದ ಹರ್ದಾ ಜಿಲ್ಲೆಯವರು. 2012ರಲ್ಲಿ ಖಾಸಗಿ ಕಂಪನಿಯೊಂದರ ಕೆಲಸ ಬಿಟ್ಟು ₹ 8,000 ಸಂಬಳಕ್ಕೆ ಎಚ್‌ಇಸಿ(ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್) ಕಂಪನಿಗೆ ಸೇರಿದ್ದರು ಎಂದು ವರದಿಯಲ್ಲಿ ಹೇಳಲಾಗಿತ್ತು.ಸರ್ಕಾರಿ ಕಂಪೆನಿಯಾದ ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್ ಇಸ್ರೋದ ಚಂದ್ರಯಾನ-3ರ  ಉಡಾವಣಾ ಪ್ಯಾಡ್ ನಿರ್ಮಿಸಿದೆ. ಈ ಲಾಂಚ್‌ ಪ್ಯಾಡ್‌ ನಿರ್ಮಿಸಲು ಸುಮಾರು 2,800 ಟೆಕ್ನಿಶಿಯನ್‌ ಗಳು ಹಗಲು ಇರುಳು ಶ್ರಮವಹಿಸಿದ್ದಾರೆ. ಇದರಲ್ಲಿ ದೀಪಕ್ ಕುಮಾರ್ ಅವರು ಕೂಡ ಒಬ್ಬರಾಗಿದ್ದರು ಎಂದು ʼಬಿಬಿಸಿ ಹಿಂದಿʼ ಫೋಟೋ ಸಹಿತ ವರದಿ ಮಾಡಿತ್ತು.



“ಇಸ್ರೋ ಲಾಂಚ್‌ಪ್ಯಾಡ್ ನಿರ್ಮಿಸುತ್ತಿರುವ ಎಚ್‌ಇಸಿ ಜನರು ಟೀ, ಇಡ್ಲಿ ಮಾರುತ್ತಿದ್ದಾರೆ, 18 ತಿಂಗಳಿಂದ ಸಂಬಳ ಬಂದಿಲ್ಲ: ಗ್ರೌಂಡ್ ರಿಪೋರ್ಟ್” ಹೆಡ್‌ ಲೈನ್‌ ಹಾಕಿ ವರದಿ ಮಾಡಿತ್ತು. ಈ ಕುರಿತು ಪತ್ರಿಕಾ ಮಾಹಿತಿ ಬ್ಯೂರೋ ಫ್ಯಾಕ್ಟ್‌ ಚೆಕ್ ಮಾಡಿದ್ದು, ಈ ಸುದ್ದಿಯ ಹೆಡ್‌ ಲೈನ್‌ ಗೊಂದಲಮಯವಾಗಿದೆʼ ಎಂದಿದೆ.‌


ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್ ಗೆ ಚಂದ್ರಯಾನ-3ರ ಯಾವುದೇ ಘಟಕಗಳ ತಯಾರಿಕೆಯನ್ನು ವಹಿಸಿಕೊಟ್ಟಿಲ್ಲ.


2003 ಮತ್ತು 2010 ರ ನಡುವೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಗೆ ಕೆಲವು ಮೂಲಸೌಕರ್ಯಗಳನ್ನು ಎಚ್‌ಇಸಿ ಪೂರೈಸಿದೆ ಎಂದು ಸರ್ಕಾರದ ಪಿಐಬಿ ಫ್ಯಾಕ್ಟ್‌ ಚೆಕ್‌ ಮಾಡಿ ಟ್ವೀಟ್‌ ಮಾಡಿದೆ.


ಕಂಪನಿಗಳ ಕಾಯಿದೆಯಡಿ ನೋಂದಾಯಿಸಲಾದ ಎಚ್‌ಇಸಿ, ಪ್ರತ್ಯೇಕ ಕಾನೂನು ಘಟಕವಾಗಿದೆ ಮತ್ತು BHEL ನಂತಹ ತನ್ನದೇ ಆದ ಸಂಪನ್ಮೂಲಗಳನ್ನು ಅದು ಉತ್ಪಾದಿಸುತ್ತದೆ ಎಂದು ಈ ಸಂಬಂಧ  ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ ಟ್ವೀಟ್‌ ಮಾಡಿದ್ದಾರೆ.


ಸಂಸತ್ತಿನಲ್ಲಿ ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜರ್ ಚಂದ್ರಯಾನ -3ಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಎಚ್‌ಇಸಿಗೆ ನಿಯೋಜಿಸಿಲ್ಲ ಎಂದಿರುವ ದಾಖಲೆಗಳ ಸ್ಕ್ರೀನ್‌ ಶಾಟ್‌ ಗಳನ್ನು ಕಾಂಚನ್ ಗುಪ್ತಾ ಹಂಚಿಕೊಂಡಿದ್ದಾರೆ.

ಬಿದ್ದು ಸಿಕ್ಕಿದ ಬ್ಯಾಗನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಭರತ್ ಚನಿಲ

Posted by Vidyamaana on 2024-03-21 13:48:33 |

Share: | | | | |


ಬಿದ್ದು ಸಿಕ್ಕಿದ ಬ್ಯಾಗನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಭರತ್ ಚನಿಲ

ಪುತ್ತೂರು : ಪರ್ಲಡ್ಕ ಶಾಲಾ ಬಳಿಯಲ್ಲಿ ಬಿದ್ದು ಸಿಕ್ಕಿದ ದಾಖಲೆ ಹಾಗೂ ನಗದು ಇರುವ ಬ್ಯಾಗ್ ನ್ನು ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.


ಬಲ್ನಾಡು ವಿನಾಯಕ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾಗಿರುವ ಭರತ್ ಚನಿಲ ಅವರಿಗೆ ಇಂದು ಪರ್ಲಡ್ಕ ಶಾಲಾ ಬಳಿಯಲ್ಲಿ ನೌಸೀನ ಎಂಬವರಿಗೆ ಸೇರಿದ ಕೈಚೀಲವು ಬಿದ್ದು ಸಿಕ್ಕಿದ್ದು, ಅದನ್ನು ಪರಿಶೀಲಿಸಿದಾಗ ಅದರಲ್ಲಿ ಕೆಲವು ಮುಖ್ಯ ದಾಖಲೆಗಳು ಹಾಗೂ 37150 ನಗದು ಪತ್ತೆಯಾಗಿದೆ.ಕೈಚೀಲದಲ್ಲಿ ಇದ್ದ ಆಧಾರ್ ಕಾರ್ಡ್ ನಲ್ಲಿರುವ ದೂರವಾಣಿಗೆ ಕರೆಮಾಡಿ, ದಾಖಲೆ ಹಾಗೂ ಹಣ ಕಳೆದುಕೊಂಡ ವಾರಸುದಾರರಿಗೆ ಕೈಚೀಲ ತಲುಪಿಸಿದ್ದಾರೆ.

ಸಂಪ್ಯ ಕಂಬಳತ್ತಡ್ಡ ಸೀತಾರಾಮ ಶೆಟ್ಟಿಯರಿಗೆ ಬಂಟರ ಭವನದಲ್ಲಿ ಶ್ರದ್ಧಾಂಜಲಿ ಸಭೆ

Posted by Vidyamaana on 2023-09-03 11:03:06 |

Share: | | | | |


ಸಂಪ್ಯ ಕಂಬಳತ್ತಡ್ಡ ಸೀತಾರಾಮ ಶೆಟ್ಟಿಯರಿಗೆ ಬಂಟರ ಭವನದಲ್ಲಿ ಶ್ರದ್ಧಾಂಜಲಿ ಸಭೆ

ಪುತ್ತೂರು:ಇತ್ತೀಚೆಗೆ ನಿಧನರಾದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಸಂಪ್ಯ ಕಂಬಳತ್ತಡ್ಡ ಸೀತಾರಾಮ ಶೆಟ್ಟಿಯರಿಗೆ ಶ್ರದ್ಧಾಂಜಲಿ ಸಭೆಯು ಸೆ.೨ರಂದು ಕೊಂಬೆಟ್ಟು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.

ನುಡಿ ನಮನದ ಸಲ್ಲಿಸಿದ ಪುತ್ತೂರಿನ ಖ್ಯಾತ ವೈದ್ಯರು, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿರುವ ಡಾ. ಸುರೇಶ್ ಪುತ್ತೂರಾಯ ಮಾತನಾಡಿ, ಹುಟ್ಟಿದ ಮನುಷ್ಯನಿಗೆ ಮರಣ ನಿಶ್ವಿತ. ಆದರೂ ಸೀತಾರಾಮ ಶೆಟ್ಟಿಯವರಿಗೆ ಸಣ್ಣ ವಯಸ್ಸಿನಲ್ಲಿಯೇ ವೇಗವಾಗಿ ಬಂದೊದಗಿದೆ. ಸದಾ ಸಮಾಜ ಮುಖಿ ವ್ಯಕ್ತಿತ್ವದ ಸೀತಾರಾಮ ಶೆಟ್ಟಿಯವರು ಸೀತಣ್ಣ ಎಂದೇ ಎಲ್ಲರೊಂದಿಗೆ ಗುರುತಿಸಿಕೊಂಡವರು. ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಎಲ್ಲಾ ಸಂದರ್ಭಗಳಲ್ಲಿಯೂ ಮುಂಚೂಣಿಯಲ್ಲಿ ನಿಂತು ಬಹಳಷ್ಟು ಉತ್ತಮ ಕೆಲಸ ಮಾಡಿದವರು. ಒಡನಾಡಿಯಾಗಿ ಸಂಪ್ಯದ ಜನತೆಯೊಂದಿಗೆ ಅನ್ಯೋನ್ಯತೆಯಿಂದಿದ್ದವರು ಎಂದರು.

ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಸದಾ ನಗುಮೊಗದಿಂದ ಎಲ್ಲರೊಂದಿಗೆ ಬೆರೆಯುತ್ತಿದ್ದ ಸೀತಾರಾಮ ಶೆಟ್ಟಿಯವರ ಮರಣ ವಾರ್ತೆ ಯಾರಿಗೂ ನಂಬಲು ಸಾಧ್ಯವಾಗಿಲ್ಲ. ಹಲವಾರು ಸಾಮಾಜಿಕ, ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಎಲ್ಲರೊಂದಿಗೆ ಪ್ರೀತಿಯಿಂದ ಇದ್ದವರು. ಯುವ ಬಂಟರ ಸಂಘದ ಅಧ್ಯಕ್ಷರಾಗಿಯೂ ಯಶಸ್ವಿಯಾಗಿ ನಿರ್ವಹಿಸಿದವರು. ತಾನು ಬಾಳಿ ಬೆಳಗಿನ ಅಲ್ಪ ಅವಧಿಯಲ್ಲಿಯೇ ಉತ್ತಮ ಸೇವೆ ನೀಡಿದವರು. ಸಹೋದರರು ಪರಸ್ಪರ ಅನ್ಯೋನ್ಯತೆಯಿಂದ ಇದ್ದ ಅವರ ಬದುಕು ನಾವು ಯಾವ ರೀತಿ ಬದುಕಬೇಕೆಂಬುದಕ್ಕೆ ಆದರ್ಶವಾಗಿದ್ದ ಅವರು ಸಮಾಜದ ಪ್ರೀತಿ ಗಳಿಸಿದವರು ಎಂದರು.

ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಮಾತನಾಡಿ, ಹಲವು ಸಮಾಜಮುಖಿ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಸೀತಾರಾಮ ಶೆಟ್ಟಿಯವರು ಎಲ್ಲರೊಂದಿಗೆ ಸಹೋದರೆತೆಯಿಂದ ಬೆರೆಯುತ್ತಿದ್ದವರು. ಎಲ್ಲರೊಂದಿಗೂ ಆದರದಿಂದ ಮಾತನಾಡಿಸುವವರು. ಸಂಪ್ಯ ನವಚೇತನ ಯುವಕ ಮಂಡಲ, ಕಂಬಳತ್ತಡ್ಡ ಶ್ರೀಕೃಷ್ಣ ಯುವಕ ಮಂಡಲ, ಜೇಸಿಐ, ಯುವ ಬಂಟರ ಸಂಘಗಳಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ಸಮಾಜಮುಖಿಯಾಗಿ ಸೇವೆ ಸಲ್ಲಿಸಿದ ಅವರು ಯುವಕರಿಗೆ ಅದರ್ಶಪ್ರಾಯರಾಗಿದ್ದರು ಎಂದರು.

ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಸವಣೂರು ವಿದ್ಯಾರಶ್ಮೀ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ಎಪಿಎಂಸಿ ಮಾಜಿ ಸದಸ್ಯ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಇಳಂತಾಜೆ, ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ನಾಥ ಶೆಟ್ಟಿ, ಮಾಜಿ ಸದಸ್ಯ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಅಕ್ಷಯ ಗ್ರೂಪ್‌ನ ಮ್ಹಾಲಕ ಜಯಂತ ನಡುಬೈಲು, ಉದ್ಯಮಿ ಪುರಂದರ ರೈ ಮಿತ್ರಂಪಾಡಿ, ಬಂಟರ ಸಂಘದ ಕೋಶಾಧಿಕಾರಿ ಕೃಷ್ಣ ಪ್ರಸಾದ್ ಆಳ್ವ, ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಪುರಸಭಾ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ರಾಕೇಶ್ ರೈ ಕೆಡೆಂಜಿ, ಬಿರುಮಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಜೆ ರೈ, ಗಣೇಶ್ ರೈ ಮೂಲೆ, ವಸಂತ ರೈ ದುಗ್ಗಳ, ಜಯರಾಮ ರೈ ನುಳಿಯಾಲು, ಮಹಾಬಲ ರೈ ವಳತ್ತಡ್ಕ, ಸೀತಾರಾಮ ಶೆಟ್ಟಿಯವರ ಸಹೋದರರಾದ ಜಯಂತ ಶೆಟ್ಟಿ, ರವೀಂದ್ರ ಶೆಟ್ಟಿ, ಕುಟುಂಬಸ್ಥರು ಸೇರಿದಂತೆ ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

70 ನೂತನ ಶಾಸಕರಿಗೆ ನೆಲಮಂಗಲದ ಕ್ಷೇಮವನದಲ್ಲಿ ತರಬೇತಿ

Posted by Vidyamaana on 2023-06-27 05:38:42 |

Share: | | | | |


70 ನೂತನ ಶಾಸಕರಿಗೆ ನೆಲಮಂಗಲದ ಕ್ಷೇಮವನದಲ್ಲಿ ತರಬೇತಿ

ಬೆಂಗಳೂರು: ಇದೇ ಮೊದಲ ಬಾರಿಗೆ ಆಯ್ಕೆಗೊಂಡ 70 ಶಾಸಕರಿಗೆ ಸಂಸದೀಯ ಕಲಾಪದ ಬಗ್ಗೆ ಅರಿವು ಮೂಡಿಸಲು ನೆಲಮಂಗಲದ ಧರ್ಮಸ್ಥಳ ಕ್ಷೇಮವನದಲ್ಲಿ ಜೂ.26ರಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರ ಆರಂಭಗೊಂಡಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗಿಯಾದರು.

ಸದನದಲ್ಲಿ ಸದಾ ಹಾಜರಿ, ಪೂರ್ವತಯಾರಿ, ಭಾಷೆ ಮೇಲೆ ಹಿಡಿತ, ಜನಪರ ವಿಷಯದ ಮಂಡನೆ, ವಿಷಯ ತಜ್ಞರ ಜತೆ ಚರ್ಚೆ, ಅಧ್ಯಯನಶೀಲತೆ, ಜನರ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕ ಕಾಳಜಿ, ಜನರ ಬಗ್ಗೆ ಗೌರವ, ಸಂವಿಧಾನದ 51ನೇ ವಿಧಿವರೆಗಿನ ಅರಿವು, ಸದನದ ನಿಯಮಗಳ ಮಾಹಿತಿ ಮತ್ತು ಸಂವಿಧಾನಕ್ಕೆ ಬದ್ಧತೆ ಮುಂತಾದ ಅಂಶಗಳನ್ನು ರೂಡಿಸಿಕೊಂಡು ಉತ್ತಮ ಸಂಸದೀಯ ಪಟುಗಳಾಗಿ ಬೆಳೆಯಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಯಯ್ಯ ಅವರು ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಕಿವಿ ಮಾತು ಹೇಳಿದರು.

ನೆಲಮಂಗಲದ ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ ಆ್ಯಂಡ್‌ ಯೋಗಿಕ್‌ ಸೈನ್ಸಸ್‌ ಕ್ಷೇಮವನದಲ್ಲಿ ಆಯೋಜಿಸಲಾಗಿರುವ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಸದನ ನಡೆಸುವ ನಿಯಮಾವಳಿಗಳನ್ನು ಓದಬೇಕು. ಇಲ್ಲವಾದರೆ ಏನು ಪ್ರಶ್ನೆ ಕೇಳಬೇಕು, ಯಾವ ನಿಯಮದಡಿ ಏನು ಮಾಡಬೇಕು ಎಂದು ಗೊತ್ತಾಗುವುದಿಲ್ಲ. ನಾವು ಏನೇ ಕಾನೂನು, ತಿದ್ದುಪಡಿ ಮಾಡಿದರೂ ಅದು ಸಂವಿಧಾನದ ಆಶಯಕ್ಕೆ ಬದ್ಧವಾಗಿರಲೇಬೇಕು. ಆದ್ದರಿಂದ ಸಂವಿಧಾನದ ಅರಿವು ಇರಬೇಕು. ಜನರಿಗೆ ಪೂರಕವಾದ ಕಾನೂನು ರೂಪಿಸುವ ಸಿದ್ಧತೆ ಮತ್ತು ಬದ್ಧತೆ ಹೊಂದಿರಬೇಕು. ಬಜೆಟ್‌ ಅನ್ನು ಅರ್ಥಮಾಡಿಕೊಳ್ಳುವ ಶಕ್ತಿ ರೂಡಿಸಿಕೊಳ್ಳಿ. ಗ್ರಂಥಾಲಯ ಬಳಸಿಕೊಳ್ಳಿ. ಕಲಾಪ ನಡೆಯುವ ದಿನಗಳಲ್ಲಿ ಬೇರೆ ಯಾವುದೇ ಕಾರ್ಯಕ್ರಮ, ಭೇಟಿಗಳನ್ನು ಇಟ್ಟುಕೊಳ್ಳಬೇಡಿ. ಕೋರ್ಟ್‌ ನಿಮ್ಮನ್ನು ಪ್ರಶ್ನೆ ಮಾಡದಿರಬಹುದು. ಆದರೆ ಜನತಾ ಕೋರ್ಟ್‌ ಪ್ರಶ್ನೆ ಮಾಡುತ್ತದೆ ಎಂದರು.

ಮತದಾರ ಕೈಬಿಡಲ್ಲ

ಜನರ ಧ್ವನಿಯಾಗಿ ಕೆಲಸ ಮಾಡಿದರೆ ಮಾತ್ರ ರಾಜಕಾರಣದಲ್ಲಿ ಉಳಿದು ಮುಂದಿನ ಚುನಾವಣೆಯನ್ನು ಗೆಲ್ಲಲು ಸಾಧ್ಯ. ಜನಪರ ಕಾಳಜಿ ಇಲ್ಲದವರು ಒಂದು ಚುನಾವಣೆ ಮಾತ್ರ ಗೆಲ್ಲಬಹುದು. ಬೆವರಿನ ಶ್ರಮ, ಸಂಸ್ಕೃತಿಗೆ ಅಸಹ್ಯ ಪಡದವರನ್ನು, ಜನರ ಜತೆ ಬೆರೆತು ಗೌರವ ವಿಶ್ವಾಸದಿಂದ ನಡೆದುಕೊಳ್ಳುವವರನ್ನು, ಜನಸೇವೆಗಾಗಿ ರಾಜಕಾರಣ ಮಾಡುವವರನ್ನು ಮತದಾರರು ಕೈ ಬಿಡುವುದಿಲ್ಲ ಎಂದು ಹೇಳಿದರು.ಸದನದಲ್ಲಿ ಇರಬೇಕು

ಬಹಳ ಜನ ಒಮ್ಮೆಯಾದರೂ ವಿಧಾನಸಭೆ ಮೆಟ್ಟಿಲು ಹತ್ತಬೇಕೆಂದು ಬಯಸುತ್ತಾರೆ. ಮೆಟ್ಟಿಲು ಹತ್ತಿದ ಬಳಿಕ ಸದನದ ಒಳಗಡೆ ಬರಲ್ಲ. ಈ ಧೋರಣೆಯನ್ನು ಬಿಡಬೇಕು. ಶಾಸಕರು ಎಲ್ಲ ಸಮಯದಲ್ಲೂ ವಿಧಾನಸಭೆಯಲ್ಲಿ ಇರಬೇಕು. ಬಹಳ ಜನ ಮಂತ್ರಿಗಳೇ ವಿಧಾನಸಭೆಗೆ ಬರುವುದಿಲ್ಲ. ವಿಧಾನಸಭೆಗೆ ಬರುವುದರಿಂದ ಹಿರಿಯರು ಏನು ಮಾತನಾಡುತ್ತಾರೆ, ಸಂಸದೀಯ ಮಾತುಗಳು ಏನು ಎಂಬುದು ಅರ್ಥ ಆಗುತ್ತದೆ ಎಂದು ಸಲಹೆ ನೀಡಿದರು.ವರ್ಗಾವಣೆ ಕಡತ ಇಟ್ಟುಕೊಂಡು ಕಾರ್ಯದರ್ಶಿ ಬಳಿ ಹೋಗಬೇಡಿ

ಕಾನೂನು ಮತ್ತು ಸಂಸದೀಯ ಸಚಿವ ಎಚ್‌. ಕೆ. ಪಾಟೀಲ್‌ ಮಾತನಾಡಿ, ಶಾಸಕರು ಗೌರವಯುತ ಮತ್ತು ಗಂಭೀರ ನಡವಳಿಕೆ ರೂಡಿಸಿಕೊಂಡಾಗ ಜನರು ಮತ್ತು ಅಧಿಕಾರಿಗಳು ಗೌರವಿಸುತ್ತಾರೆ. ಸದನ ಎಂಬುದು ಸಂತೆಯಲ್ಲ ಎಂಬುದನ್ನು ಅರಿತು ಗೌರವಯುತವಾಗಿ ವರ್ತಿಸಿ. ನೀವು ವರ್ಗಾವಣೆ ಕಡತ ಹಿಡಿದುಕೊಂಡು ಕಾರ್ಯದರ್ಶಿ ಹತ್ತಿರ ಹೋದರೆ ನಿಮ್ಮ ಗಂಭೀರತೆ ಕಡಿಮೆ ಆಗುತ್ತದೆ ಎಂದು ಕಿವಿಮಾತು ಹೇಳಿದರು. ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮಾತನಾಡಿದರು.

ವಾಟಾಳ್‌ ನಾಗರಾಜ್‌ ಮಾದರಿ ಶಾಸಕ

ವಾಟಾಳ್‌ ನಾಗರಾಜ್‌ ಅವರು ಮಾದರಿ ಶಾಸಕರಾಗಿದ್ದರು. ಅಧಿವೇಶನದ ಬೆಲ್‌ ಆಗುತ್ತಿದ್ದಂತೆ ಸದನದ ಒಳಗೆ ಬಂದು ಕೂರುತ್ತಿದ್ದರು. ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದರು. ಅವರು ಕಲಾಪದ ಒಂದು ಕ್ಷಣವನ್ನೂತಪ್ಪಿಸಿಕೊಂಡಿರಲಾರರು. ನಾನು ಆ ತರಹದ ವ್ಯಕ್ತಿಯನ್ನು ಈವರೆಗೂ ನೋಡಿಲ್ಲ. ನಾನಾದರೂ ಈವರೆಗೆ ನಾಲ್ಕೈದು ದಿನ ಗೈರು ಹಾಜರಾಗಿರಬಹುದು. ನಾನು 1994ರಲ್ಲಿ ಹಣಕಾಸು ಸಚಿವನಾಗಿದ್ದಾಗ ಆಗ ಶಾಸಕರಾಗಿದ್ದ ಜಯಪ್ರಕಾಶ್‌ ಹೆಗ್ಡೆ, ಮಾಧುಸ್ವಾಮಿ, ಶ್ರೀರಾಮ ರೆಡ್ಡಿ, ರಾಜೇಂದ್ರ ಅವರು ಏನು ಪ್ರಶ್ನೆ ಕೇಳುತ್ತಾರೋ ಎಂಬ ಆತಂಕದಿಂದ ಅಧಿವೇಶನದ ಒಂದು ಕ್ಷಣವನ್ನು ತಪ್ಪಿಸಿಕೊಳ್ಳುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು.


ಪಕ್ಷಾಂತರ ನಿಷೇಧವಾಗಬೇಕು

ನಾನು ರಾಜಕಾರಣ ಆರಂಭಿಸಿದಾಗ ಹಣದ ಪ್ರಭಾವ ಕಡಿಮೆ ಇತ್ತು. ನಾನು 1983ರಲ್ಲಿ ಮೊದಲ ಚುನಾವಣೆ ಗೆದ್ದಾಗ 63 ಸಾವಿರ ರೂ. ಖರ್ಚು ಮಾಡಿದ್ದೆ. ಆಗ ಎರಡೇ ಕಾರು ಬಳಸಿದ್ದೆ. ಆದರೆ ಈಗ ಚುನಾವಣೆ ದುಬಾರಿ ಆಗಿದೆ. ಹಾಗೆಯೇ ಆಗ ಜಾತಿ ಇಷ್ಟೊಂದು ಪ್ರಬಲವಾಗಿರಲಿಲ್ಲ. ಊರಿನ ಮುಖ್ಯಸ್ಥರು ತೀರ್ಮಾನಿಸಿದವರಿಗೆ ಜನ ಮತ ಹಾಕುತ್ತಿದ್ದರು. ಆದರೆ ಈಗ ಯುವಕರು, ಮಹಿಳೆಯರು ತಮಗಿಷ್ಟದಂತೆ ಮತ ಹಾಕುತ್ತಿದ್ದಾರೆ. ಪಕ್ಷಾಂತರ, ಆಪರೇಷನ್‌ ಕಮಲ, ಆಪರೇಷನ್‌ ಹಸ್ತ, ಆಪರೇಷನ್‌ ಜೆಡಿಎಸ್‌ ಹೆಚ್ಚಾಗಿದೆ. ಪಕ್ಷಾಂತರವನ್ನು ನಿರ್ಬಂಧಿಸುವಂತೆ ಸಂವಿಧಾನ ತಿದ್ದುಪಡಿ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.


ಬಜೆಟ್‌ ಎಂದರೆ ಕಾಯಕ ದಾಸೋಹ

ಶಾಸಕರು, ಸಂಸದರು ಬಜೆಟ್‌ ಅಂದರೆ ಏನೆಂದು ಅರ್ಥ ಮಾಡಿಕೊಳ್ಳಬೇಕು. 12ನೇ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರು ಬಜೆಟ್‌ ಬಗ್ಗೆ ಹೇಳಿ¨ªಾರೆ. ಕಾಯಕ ಮತ್ತು ದಾಸೋಹ ಬಜೆಟ್‌ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ. ಬಜೆಟ್‌ ಅಂದರೆ ಇಷ್ಟೆ, ಎಲ್ಲಿಂದ ಉತ್ಪಾದನೆ ಬರುತ್ತದೆ ಅದನ್ನು ಸಮಾಜದ ಯಾರಿಗೆ ಹಂಚುತ್ತೇವೆ ಎನ್ನುವುದೇ ಬಜೆಟ್‌ನ ಮೌಲ್ಯ. ಶ್ರೀಮಂತರಿಗೆ ತೆರಿಗೆ ಹಾಕಬೇಕೇ ಹೋರತು ಬಡವರಿಗಲ್ಲ ಎಂದು ವಿವರಿಸಿದರು.



Recent News


Leave a Comment: