Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.
*💥Whats App Group ಗೆ ಸೇರಲು ಕ್ಲಿಕ್ ಮಾಡಿ
*ಹಣ ತೆಗೆದುಕೊಂಡು ಹೋದ ವಿಚಾರ*: ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.
ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Posted by Vidyamaana on 2023-04-17 19:03:28 |
ಮೈಸೂರು: ಕೆ.ಆರ್. ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಕಾರಣ ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ಆಕ್ರೋಶಗೊಂಡಿದ್ದು ಸೋಮವಾರ ರಾತ್ರಿ ಮನೆಗೆ ಭೇಟಿ ನೀಡಿದ ಸಂಸದ ಪ್ರತಾಪ್ ಸಿಂಹ ಮತ್ತು ಅಭ್ಯರ್ಥಿ ಶ್ರೀವತ್ಸ ಅವರ ಭೇಟಿ ನಿರಾಕರಿಸಿ ಆಕ್ರೋಶ ಹೊರ ಹಾಕಿದ್ದಾರೆ.ಟಿಕೆಟ್ ಕೈ ತಪ್ಪಿದ ಬಳಿಕ ಮನೆಯ ಒಂದು ಹಾಲ್ ನಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದ ರಾಮದಾಸ್ ಅವರು ಇಬ್ಬರನ್ನು ಭೇಟಿಯಾಗಲು ನಿರಾಕರಿಸಿದ್ದಾರೆ. ಮನೆಯ ಮತ್ತೊಂದು ಬಾಗಿಲಿನಿಂದ ಹೊರನಡೆದಿದ್ದಾರೆ.ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಮದಾಸ್, 30 ವರ್ಷಗಳಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕೋ ಬೇಡವೋ ಎಂಬುದುನ್ನು ನಾಳೆ ಸಂಜೆ ತಿಳಿಸುತ್ತೇನೆ.ಯಾವ ನಿರ್ಧಾರ ಮಾಡಬೇಕು ಅಂತ ನಾಳೆ ಹೇಳುತ್ತೇನೆ.ನಾನು ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಸಂಸದ ಪ್ರತಾಪ್ ಸಿಂಹ ಮಾತನಾಡಿ, ಆಶೀರ್ವಾದ ಪಡೆಯಲು ಮನೆಗೆ ಬಂದಿದ್ದೇವು. ಟಿಕೆಟ್ ತಪ್ಪಿರುವ ಕಾರಣ ರಾಮದಾಸ್ ಅವರಿಗೆ ನೋವಾಗಿದೆ.30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರೋದು ಸಹಜ. ನಾಳೆ ನಿಮ್ಮನ್ನು ಭೇಟಿ ಮಾಡುತ್ತೇನೆ. ಪಕ್ಷದ ಜೊತೆ ಇರುತ್ತೇನೆ ಎಂದು ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ ಎಂದಿದ್ದಾರೆ.ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಮಾತನಾಡಿ, ಪಕ್ಷವನ್ನು ತಾಯಿ ಎಂದು ಭಾವಿಸಿರುವವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ. 30 ವರ್ಷದಿಂದ ಜತೆ ಇದ್ದೇವು. ಅವರು ನನ್ನ ವಿರುದ್ದ ಕೆಲಸ ಮಾಡಲ್ಲ.ಆ ವಿಶ್ವಾಸ ನನಗೆ ಇದೆ ಎಂದರು.
Posted by Vidyamaana on 2023-08-02 23:19:34 |
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಲ್ಲಿ ಆ.3ರಂದು ಗುರುವಾರ ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಪ್ರೈವೇಟ್ ಬಸ್ ಸ್ಟಾಂಡ್, ಕೆಎಸ್ಆರ್ಟಿಸಿ ಬಸ್ ಸ್ಟಾಂಡ್, ನೆಲ್ಲಿಕಟ್ಟೆ, ಎಳ್ಳುಡಿ ಮತ್ತು ಕಲ್ಲಾರೆ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Posted by Vidyamaana on 2024-07-17 16:19:56 |
ಬೆಂಗಳೂರು : ನಟಿ ಉರ್ಫಿ ಜಾವೇದ್ (Urfi Javed) ಮತ್ತೆ ಕುಡಿದು ತೇಲಾಡಿರುವ ವಿಡಿಯೊ ವೈರಲ್ ಆಗಿದೆ. ಮೂರನೇ ಬಾರಿಗೆ ಉರ್ಫಿ ಈ ರೀತಿ ಕಂಡು ಬಂದಿದ್ದಾರೆ. ಕಾರಿನ ಬಳಿ ಹೋಗಲಾರದೇ ಸ್ನೇಹಿತರ ಸಹಾಯದಿಂದ ನಟಿ ಹೋಗುವುದು ಕಂಡು ಬಂತು. ಹಳದಿ ಬಣ್ಣದ ಮಿನಿ ಡ್ರೆಸ್ ಧರಿಸಿದ್ದರು ಉರ್ಫಿ ಪಬ್ನಿಂದ ಹೊರಬಂದ ತಕ್ಷಣ, ಪಾಪರಾಜಿಗಳು ಮತ್ತು ಸ್ಥಳೀಯರು ಉರ್ಫಿಯನ್ನು ಗುಂಪುಗೂಡಿದರು. ಕಾರಿನವರೆಗೆ ನಡೆಯಲು ಪ್ರಯಾಸಪಡುತ್ತಿದ್ದಾಗ, ಅವರ ಸಹೋದರಿ ಉರ್ಫಿಯನ್ನು ಬಿಗಿಯಾಗಿ ಹಿಡಿದುಕೊಂಡು ಜನರಿಗೆ ದಾರಿ ಮಾಡಿಕೊಡುವಂತೆ ಕೇಳುತ್ತಿದ್ದರು. ತುಂಬ ಕುಡಿದ್ದಿದ್ದೇನೆ ಎಂದು ಉರ್ಫಿ ಕೂಡ ಹೋಗಲು ದಾರಿ ಮಾಡಿಕೊಂಡಿ ಎಂದು ವಿನಂತಿಸಿದ್ದಾರೆ.
Posted by Vidyamaana on 2023-06-22 06:15:32 |
ಮೂಡಿಗೆರೆ : ಬಂಟ್ವಾಳದ ಸವಾದ್ ಎಂಬಾತನನ್ನು ಕೊಲೆ ಮಾಡಿ ಮೂಡಿಗೆರೆ ಪ್ರವಾಸಿ ತಾಣ ದೇವರಮನೆ ಗಡ್ಡೆಯ ಬಳಿ ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝನುಲ್ಲಾ ಎಂದು ಗುರುತಿಸಲಾಗಿದೆ.
ಪ್ರಕರಣದಲ್ಲಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಮೃತದೇಹದ ಪತ್ತೆಯ ಬಳಿಕ ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡವು ಆರೋಪಿಗಳನ್ನು ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿ ಸವಾದ್ ನನ್ನು ಬೆಂಗ್ರೆ ಎಂಬಲ್ಲಿ ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದು ಬಂದಿದೆ. ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಬಳಿಕ ಬಂಟ್ವಾಳ ಮೂಲದ ಸವಾದ್ ಕುಟುಂಬ ಮಗನ ಮೃತದೇಹದ ಗುರುತು ಪತ್ತೆ ಮಾಡಿತ್ತು.
Posted by Vidyamaana on 2024-02-29 04:44:20 |
ಪುತ್ತೂರು: ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್ಪ್ರೆಸ್, ಉಪ್ಪಿನಂಗಡಿ ವಾಟರ್ಸಪ್ಪೆ ಮತ್ತು ಕಾಂಚನ ಮತ್ತು 110/33/11 ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕಮ್ಮಾರ ಫೀಡರ್ನಲ್ಲಿ ಫೆ.29 ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರ ಮತ್ತು 110/33/11ಕೆವಿ ಕಣ್ಣೀರಿ ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ, ಕ್ಯೂಲ, ನೆಕ್ಕಿಲಾಡಿ ಬಜತ್ತೂರು ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Posted by Vidyamaana on 2023-11-22 15:47:10 |
ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ಯನ್ನು ಉಡುಪಿ ಕೋರ್ಟಿಗೆ ಬುಧವಾರ ಹಾಜರುಪಡಿಸಲಾಯಿತು. ಆತನಿಗೆ ಡಿಸೆಂಬರ್ 5 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಆದೇಶಿಸಿದೆ.
ವಿಚಾರಣೆ ಮುಗಿಸಿ ಆರೋಪಿಯನ್ನು ಮಲ್ಪೆ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದರು. ಈ ಮೊದಲು ಪೊಲೀಸರು ನವೆಂಬರ್ 28 ರವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರೂ ಮಹಜರು ಪ್ರಕ್ರಿಕೆ ಪೂರ್ಣಗೊಂಡಿರುವ ಕಾರಣ ಮುಂಚಿತವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಘಟನೆಯ ವಿವರ: ನವೆಂಬರ್ 12ರಂದು ನೇಜಾರಿನ ತೃಪ್ತಿ ಲೇಔಟ್ ನಲ್ಲಿರುವ ಮನೆಗೆ ಬಂದು ತಾಯಿ ಮೂವರು ಮಕ್ಕಳನ್ನು ಕೊಲೆ ಮಾಡಿದ್ದ.ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿರುವ ನೂರ್ ಮೊಹಮ್ಮದ್ ಅವರ ಪತ್ನಿ ಹಸೀನಾ (48), ಪುತ್ರಿಯರಾದ ಅಫ್ನಾನ್ (23), ಅಯ್ನಾಝ್ (21), ಪುತ್ರ ಅಸೀಮ್ (14) ಹತ್ಯೆಗೀಡಾಗಿದ್ದರು.