Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29
ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.
ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.
ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.
ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.
Posted by Vidyamaana on 2024-03-10 15:42:26 |
ಪುತ್ತೂರು:ಸಂಬಂಧಿಸಿದ ಯಾರೂ ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಹೆಂಚಿನ ಮಾಡಿನ ಮನೆಯೊಂದನ್ನು ಕೆಡವಿ ನಷ್ಟ ಉಂಟು ಮಾಡಿದ ಘಟನೆ ಮಾ.9ರ ಮಧ್ಯಾಹ್ನ ಕುರಿಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಪುತ್ತೂರು ಆದರ್ಶ ಆಸ್ಪತ್ರೆ ಬಳಿಯಿರುವ ಹೊಟೇಲ್ ಶ್ರೀಲಕ್ಷ್ಮೀ ಇದರ ಮಾಲಕ, ಕುರಿಯ ಹೊಸಮಾರು ನಿವಾಸಿ ವಸಂತ ಪೂಜಾರಿ ಎಂಬವರು ಘಟನೆ ಕುರಿತು ಸಂಪ್ಯ ಪೊಲೀಸರಿಗೆ ದೂರು ನೀಡಿ. ನಮ್ಮ ಸ್ವಾಧೀನದಲ್ಲಿರುವ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆಯೊಳಗೆ ಜೆಸಿಬಿ ನುಗ್ಗಿಸಿ ಮನೆಯನ್ನು ಕೆಡವಿ ಮನೆಯ ವಸ್ತುಗಳನ್ನೆಲ್ಲಾ ನಾಶ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.ಶಶಿಕಲಾ ರೈ,ಮತ್ತವರ ಮಗ ಉಜ್ವಲ್ ರೈ ಹಾಗೂ ಜೆಸಿಬಿ ಆಪರೇಟರ್ ವಿರುದ್ಧ ಅವರು ದೂರು ನೀಡಿದ್ದಾರೆ.ಪೊಲೀಸರು ಕಲಂ 447,448,427,34 ಐಪಿಸಿಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Posted by Vidyamaana on 2024-08-29 05:52:22 |
ಪುತ್ತೂರು: ಭ್ರಷ್ಟಾಚಾರ, ಅಧಿಕಾರ ದುರ್ಬಳಕೆಯಂತಹ ಕೆಟ್ಟ ಆಡಳಿತವನ್ನು ನೀಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಸಂಘರ್ಷದಿಂದಲೇ ಹುಟ್ಟಿದ ಬಿಜೆಪಿ ಪಕ್ಷ ಸಂಘರ್ಷಕ್ಕೆ ಇಳಿದರೆ ಏನಾಗಬಹುದು ಎನ್ನುವುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಳ್ಳಲಿ ಎಂದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಹೇಳಿದರು.
ಭ್ರಷ್ಟ ರಾಜ್ಯ ಸರಕಾರ ಹಾಗೂ ರಾಜಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಪುತ್ತೂರು ಬಿಜೆಪಿ ನಗರ, ಪುತ್ತೂರು ಬಿಜೆಪಿ ಯುವ ಮೋರ್ಚಾ ಹಾಗೂ ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ದರ್ಬೆ ವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.
ನಮ್ಮ ಪ್ರತಿಭಟನೆ ಕಾಂಗ್ರೆಸ್ ನ ಅಧಿಕಾರ ದುರುಪಯೋಗ, ದರ್ಪದ ವಿರುದ್ಧ. ಮೂಡದಲ್ಲಿ ಸೈಟ್ ಸಿದ್ದಣ್ಣಬಹು ದೊಡ್ಡ ಭ್ರಷ್ಟಾಚಾರ ಮಾಡಿದ್ದಾರೆ. ನಾವು ಏನು ಮಾಡಿದ್ರು ನಡೀತದೆ ಎನ್ನುವ ಮನೋಸ್ಥಿತಿ ಇವರದು. ಐವನ್, ಜಮೀರ್, ಕ್ರಷ್ಣ ಬೈರೇಗೌಡ ಅವರು ರಾಜ್ಯಪಾಲರ ವಿರುದ್ಧ ಕೆಟ್ಟ ಭಾಷೆ ಬಳಕೆ ಮಾಡಿರುವುದನ್ನು ನಾವು ಖಂಡಿಸುತ್ತೇವೆ ಎಂದರು.
ಯಡಿಯೂರಪ್ಪ ನಿರಪರಾಧಿತನ ಸಾಬೀತಾದ ಬಳಿಕ ಅಧಿಕಾರ ವಹಿಸಿಕೊಂಡಿ ದ್ದರು. ತಾಕತ್ತಿದ್ದಾರೆ ಅಧಿವೇಶನದಲ್ಲಿ ಮಾತನಾಡಿ ಎಂದು ಸಿದ್ದರಾಮಯ್ಯಗೆ ನಾವು ಚಾಲೆಂಜ್ ಮಾಡಿದ್ದೆವು. ಆದರೆ ಅವರು ಪಲಾಯನ ಮಾಡಿದರು ಎಂದು ವ್ಯಂಗ್ಯವಾಡಿದರು.
ಅಧಿಕಾರ ದುರ್ಬಳಕೆಗೆ ಸರಕಾರ ತಕ್ಕ ಪಾಠ ಎದುರಿಸಲಿದೆ. ಪುನಃ ನಮ್ಮ ಸರಕಾರ ಬರ್ತದೆ. ಅಧಿಕಾರಿಗಳು ಯೋಚನೆ ಮಾಡಿ. ಈ ರೀತಿಯ ವರ್ತನೆಗೆ ಅರ್ಥ ಆಗುವ ಹಾಗೆ ಉತ್ತರ ಕೊಡ್ತೇವೆ ಎಂದರು.
ಸಿದ್ದರಾಮಯ್ಯ ಬಳಿ ಭಿಕ್ಷೆ ಪಾತ್ರೆ ಹಿಡಿದು ಐವನ್ಗೆ ಸ್ಥಾನ ಲಭಿಸಿದೆ. ರಾಜ್ಯಪಾಲರ ವಿರುದ್ಧ ಮಾತನಾಡಿದ ಐವನ್ ಮೇಲೆ ಪ್ರಕರಣ ದಾಖಲಿಸಲು ನಾನೇ ಪೊಲೀಸ್ ಕಮಿಷನರಿಗೆ
ಸೆಕ್ಷನ್ ಕಳುಹಿಸಿದ್ದೆ. ಹಿಂದೆ ನಾನು ಸ್ಥಳದಲ್ಲಿ ಇಲ್ಲದಿದ್ದರೂ ಕೇಸ್ ಹಾಕಿದ್ರು. ನಿಮ್ಮ ಕೇಸ್ ನಮಗೆ ಲೆಕ್ಕ ಅಲ್ಲ. ಇದು ಟ್ರೈಲರ್ ಹೋರಾಟ ಮಾತ್ರ. ಮುಂದೆ ತೀವ್ರ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ ಎಂದರು.
Posted by Vidyamaana on 2023-06-03 00:44:08 |
ಒಡಿಶಾ: ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ ವರದಿಯಾಗಿದೆ.ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಒಡಿಶಾ ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ಸುಧಾಂಶು ಸಾರಂಗಿ, ರಕ್ಷಣಾ ತಂಡಗಳು 200 ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಅಪಘಾತ ಸಂಭವಿಸಿದ್ದು, ಬಾಲಸೋರ್ ಜಿಲ್ಲೆಯಲ್ಲಿ ಹಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.
ಬೆಂಗಳೂರು ಬೈಯಪ್ಪನಹಳ್ಳಿ ನಿಲ್ದಾಣದಿಂದ 1,294 ಪ್ರಯಾಣಿಕರು ಅಪಘಾತಕೀಡಾದ ಯಶವಂತಪುರ -ಹೌರಾ ರೈಲಿನಲ್ಲಿ ತೆರಳುತ್ತಿದ್ದರು. ಯಶವಂತಪುರದಿಂದ ಪಶ್ಚಿಮ ಬಂಗಾಳದ ಹೌರಾಗೆ ರೈಲು ತೆರಳುವಾಗ 1,294 ಪ್ರಯಾಣಿಕರ ಬಗ್ಗೆ 994 ಮಂದಿ ಬುಕ್ ಮಾಡಿದ್ದರು.ಬಹುನಾಗ ನಿಲ್ದಾಣದ ಬಳಿ ಮೂರು ರೈಲುಗಳು ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಸ್ಥಳಕ್ಕೆ ಇಂದು ಸಿಎಂ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ.
ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 207ಕ್ಕೆ ಏರಿಕೆಯಾಗಿದ್ದು, 900ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
Posted by Vidyamaana on 2024-01-14 04:01:25 |
ಹರಿಯಾಣ, ಜ 14: ಹರಿಯಾಣದ ಗುರುಗ್ರಾಮ್ನ ಹೋಟೆಲ್ವೊಂದರಲ್ಲಿ ಹತ್ಯೆಗೀಡಾದ ಮಾಜಿ ಮಾಡೆಲ್ ದಿವ್ಯಾ ಪಹುಜಾ ಮೃತದೇಹವು ಫತೇಹಾಬಾದ್ ಜಿಲ್ಲೆಯ ಕಾಲುವೆಯಲ್ಲಿ ಪತ್ತೆಯಾಗಿದೆ. ಇಲ್ಲಿನ ತೋಹಾನಾದಲ್ಲಿರುವ ಭಾಕ್ರಾ ಕಾಲುವೆಯಿಂದ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಗುರುಗ್ರಾಮ್ ಅಪರಾಧ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ವರುಣ್ ಕುಮಾರ್ ದಹಿಯಾ ತಿಳಿಸಿದ್ದಾರೆ.
ಜನವರಿ 2ರಂದು ಗುರುಗ್ರಾಮ್ನ ಹೋಟೆಲ್ ಕೊಠಡಿಯಲ್ಲಿ 27 ವರ್ಷದ ದಿವ್ಯಾ ಪಹುಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಅಶ್ಲೀಲ ಚಿತ್ರಗಳನ್ನಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಹೋಟೆಲ್ ಮಾಲೀಕರಿಂದ ಹಣ ವಸೂಲಿ ಮಾಡಿದ್ದ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ, ದಿವ್ಯಾ ವಿರುದ್ಧ ಕೇಳಿ ಬಂದ ವಂಚನೆಯ ಆರೋಪವನ್ನು ಈಗಾಗಲೇ ಸಂತ್ರಸ್ತೆಯ ಕುಟುಂಬವು ತಳ್ಳಿಹಾಕಿದೆ.ಮತ್ತೊಂದೆಡೆ, ಹೋಟೆಲ್ನಲ್ಲಿ ದಿವ್ಯಾ ಪಹುಜಾ ಅವರನ್ನು ಕೊಲೆ ಮಾಡಿ ಮೃತದೇಹವನ್ನು ಅಲ್ಲಿಂದ ಸಾಗಿಸಲಾಗಿತ್ತು. ಶವ ಸಾಗಿಸುವ ದೃಶ್ಯಗಳು ಸಿಸಿಟಿವಿಯಲ್ಲೂ ಸೆರೆಯಾಗಿದ್ದವು. ಇದರ ಆಧಾರದ ಮೇಲೆ ಐವರು ಆರೋಪಿಗಳು ಈ ಹತ್ಯೆಯಲ್ಲಿ ಭಾಗಿಯಾಗಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ಪೈಕಿ ಹೋಟೆಲ್ ಮಾಲೀಕ ಅಭಿಜೀತ್ ಸಿಂಗ್, ನೇಪಾಳ ಮೂಲದ ಹೇಮರಾಜ್ ಮತ್ತು ಪಶ್ಚಿಮ ಬಂಗಾಳದ ಓಂಪ್ರಕಾಶ್ ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಇದೀಗ ಸುಮಾರು 10 ದಿನಗಳ ಬಳಿಕ ದಿವ್ಯಾ ಪಹುಜಾ ಮೃತದೇಹ ಪತ್ತೆಯಾಗಿದೆ.ದಿವ್ಯಾ ಪಹುಜಾ ಜನವರಿ 1ರ ನಂತರ ಕುಟುಂಬಸ್ಥರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಆ ದಿನ ಹೋಟೆಲ್ ಮಾಲೀಕ ಅಭಿಜೀತ್ ಭೇಟಿಯಾಗಲು ದಿವ್ಯಾ ಹೋಗಿದ್ದರು. ಮರು ದಿನ ಎಂದರೆ, ಜನವರಿ 2ರಂದು ಬೆಳಗ್ಗೆ 11.50ರ ಸುಮಾರಿಗೆ ಅವರೊಂದಿಗೆ ನಾನು ಕೊನೆಯದಾಗಿ ಮಾತನಾಡಿರುವುದಾಗಿ ಸಹೋದರಿ ನೈನಾ ಪಹುಜಾ ಹೇಳಿದ್ದರು. ಇದಾದ ಬಳಿಕ ಜನವರಿ 5ರಂದು ಹೋಟೆಲ್ನ ಕೊಠಡಿಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇದರಿಂದ ಅನುಮಾನಗೊಂಡ ಪರಿಶೀಲಿಸಿದಾಗ ಹೋಟೆಲ್ನಲ್ಲಿ ದಿವ್ಯಾರ ಉಂಗುರ, ಬೂಟು ಮತ್ತು ಇತರ ವಸ್ತುಗಳು ಪತ್ತೆಯಾಗಿದ್ದವು ಎಂದು ಪೊಲೀಸರಿಗೆ ನೈನಾ ದೂರು ಕೊಟ್ಟಿದ್ದರು.
ಅಲ್ಲದೇ, ಗ್ಯಾಂಗ್ಸ್ಟರ್ ಸಂದೀಪ್ ಗಡೋಲಿ ಎಂಬಾತನ ಕೊಲೆ ಪ್ರಕರಣದಲ್ಲಿ ದಿವ್ಯಾ ಪ್ರಮುಖ ಸಾಕ್ಷಿಯಾಗಿದ್ದರು. ಈ ಪ್ರಕರಣದಲ್ಲಿ ದಿವ್ಯಾ ಅವರಿಗೆ ಜೀವ ಬೆದರಿಕೆ ಇತ್ತು. ಗ್ಯಾಂಗ್ಸ್ಟರ್ನ ಸಂಬಂಧಿಕರು ದಿವ್ಯಾ ಅವರನ್ನು ಕೊಲೆ ಮಾಡಲು ಅಭಿಜೀತ್ಗೆ ಹಣ ಕೊಟ್ಟು ಸುಪಾರಿ ನೀಡಿದ್ದಾರೆ ಎಂದು ನೈನಾ ಪಹುಜಾ ತನ್ನ ದೂರಿನಲ್ಲಿ ತಿಳಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು.
ಆಗ ದಿವ್ಯಾ ಅವರನ್ನು ಕೊಂದ ನಂತರ ಅಭಿಜೀತ್ ಆಕೆಯ ಶವವನ್ನು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಅಲ್ಲದೇ, ಶವವನ್ನು ನೀಲಿ ಬಿಎಂಡಬ್ಲ್ಯು ಕಾರಿನಲ್ಲಿ ಸಾಗಿಸುತ್ತಿರುವ ದೃಶ್ಯಗಳು ದಾಖಲಾಗಿದ್ದವು. ಇದನ್ನು ಆಧರಿಸಿ ಪೊಲೀಸರು ಹೋಟೆಲ್ ಮಾಲೀಕ ಅಭಿಜೀತ್ ಸೇರಿ ಮೂವರನ್ನು ಬಂಧಿಸಿದ್ದರು.
2016ರ ಫೆಬ್ರವರಿ 6ರಂದು ಮುಂಬೈನಲ್ಲಿ ಗ್ಯಾಂಗ್ಸ್ಟರ್ ಸಂದೀಪ್ ಗಡೋಲಿಯನ್ನು ಹರಿಯಾಣ ಪೊಲೀಸರು ಶೂಟೌಟ್ ಮಾಡಿದ್ದರು. ಆದರೆ, ಇದೊಂದು ನಕಲಿ ಎನ್ಕೌಂಟರ್ ಎಂದು ಹೇಳಲಾಗಿದೆ. ಎದುರಾಳಿ ಗುಂಪಿನ ವೀರೇಂದ್ರ ಕುಮಾರ್ ಅಲಿಯಾಸ್ ಬಿಂದರ್ ಗುಜ್ಜರ್ ಹರಿಯಾಣ ಪೊಲೀಸ್ ಅಧಿಕಾರಿಗಳೊಂದಿಗೆ ಸೇರಿಕೊಂಡು ಗಡೋಲಿಯನ್ನು ಕೊಲೆ ಮಾಡುವ ಸಂಚು ರೂಪಿಸಿದ್ದರು ಎಂಬ ಆರೋಪವಿತ್ತು.
ಇದಕ್ಕಾಗಿ ದಿವ್ಯಾ ಪಹುಜಾ ಮೂಲಕ ಸಂದೀಪ್ ಗಡೋಲಿಯನ್ನು ಹನಿ ಟ್ರ್ಯಾಪ್ ಮಾಡಲಾಗಿತ್ತು ಎಂಬ ಆರೋಪದ ಇತ್ತು. ಈ ಸಂಬಂಧ ಮುಂಬೈ ಪೊಲೀಸರು ದಿವ್ಯಾ, ಆಕೆಯ ತಾಯಿ ಮತ್ತು ಐವರು ಪೊಲೀಸ್ ಸಿಬ್ಬಂದಿ ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಅಲ್ಲದೇ, ದಿವ್ಯಾರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ಸುಮಾರು ಏಳು ವರ್ಷಗಳ ನಂತರ ಎಂದರೆ, 2023ರ ಜೂನ್ನಲ್ಲಿ ಬಾಂಬೆ ಹೈಕೋರ್ಟ್ ದಿವ್ಯಾ ಅವರಿಗೆ ಜಾಮೀನು ನೀಡಿತ್ತು.
Posted by Vidyamaana on 2024-01-15 16:57:42 |
ಪುತ್ತೂರು: ರೋಡ್ ರೋಲರ್ ಬಳಸದೆ ರಸ್ತೆಗೆ ಜಲ್ಲಿ ಹಾಕಿ ಚಪ್ ಡಿ ( ತೇಪೆ ) ಕಾಮಗಾರಿ ನಡೆಸುತ್ತಿದ್ದ ವೇಳೆ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕರು ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಘಟನೆ ವಿಟ್ಲ ಬೊಬ್ಬೆಕೇರಿಯಲ್ಲಿ ನಡೆದಿದೆ.
ಮಂಗಳೂರಿನಿಂದವಿಟ್ಲಕ್ಕೆ ತೆರಳುತ್ತಿದ್ದ ವೇಳೆ ಕಾರ್ಮಿಕರು ಹಾರೆಯ ಮೂಲಕ ರಸ್ತೆ ಹೊಂಡಗಳಿಗೆ ಜಲ್ಲಿಮಿಶ್ರಣವನ್ನು ಕೈಯಿಂದ ಗಟ್ಟಿ ಮಾಡುತ್ತಿದ್ದರು. ಇದನ್ನು ನೋಡಿದ ಶಾಸಕರು ಕಾರು ನಿಲ್ಲಿಸಿ ಕಾಮಗಾರಿ ಮಾಹಿತಿ ಪಡೆದರು. ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಪ್ರೀತಮ್ ರಿಗೆ ಕರೆ ಮಾಡಿ ಕಳಪೆ ಕಾಮಗಾರಿ ಅಥವಾ ಚಪ್ಪ್ ಡಿ ಕೆಲಸಮಾಡುವುದು ಬೇಡ. ರೋಡ್ ರೋಲರ್ ಬಳಸಿ ಗುಣಮಟ್ಟದ ಜಲ್ಲಿ ಡಾಮಾರು ಬಳಸಿ ಕಾಮಗಾರಿ ನಡೆಸಿ ಎಂದು ಸೂಚನೆ ನೀಡಿದರು.ಶಾಸಕರ ಎಚ್ಚರಿಕೆಯ ಬಳಿಕಕಾಮಗಾರಿ ಸ್ಥಗಿತಗೊಳಿಸಲಾಗಿದೆ
Posted by Vidyamaana on 2024-08-15 23:20:49 |
ಪುತ್ತೂರು: ಪುತ್ತೂರಿನ ಸುದಾನ ವಸತಿ ಶಾಲೆ ಮತ್ತು ಪದವಿಪೂರ್ವ ವಿಭಾಗವು ಜೊತೆಗೂಡಿ ಆಗಸ್ಟ್ 15ರಂದು ಸ್ವಾತಂತ್ರೋತ್ಸವವನ್ನು ಅದ್ದೂರಿಯಾಗಿ ಆಚರಿಸಿತು. ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಉಜಿರೆ ಎಸ್.ಡಿ.ಎಂ ಕಾಲೇಜಿನ ಉಪನ್ಯಾಸಕಿ ಹರಿಣಿ ಪುತ್ತೂರಾಯ ಧ್ವಜಾರೋಹಣವನ್ನು ಮಾಡಿ ಮಾತನಾಡಿ ಭಾರತದ ಸ್ವಾತಂತ್ರ್ಯಕ್ಕೋಸ್ಕರ ಹುತಾತ್ಮರಾದ ದೇಶಪ್ರೇಮಿಗಳಿಗೆ
ಗೌರವ ನಮನವನ್ನು ಸಲ್ಲಿಸುವುದರ ಜೊತೆಗೆ ಈ ದೇಶದ ಏಕತೆ ಮತ್ತು ರಕ್ಷಣೆಯನ್ನು ಕಾಪಾಡುವಲ್ಲಿ ನಮಗಿರುವ ಹೊಣೆಗಾರಿಕೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು.ಮುಂದಿನ ಪ್ರಜೆಗಳಾಗಿ ಬೆಳೆವ ಮಕ್ಕಳು ವಿಕಸಿತ ಭಾರತವನ್ನು ನಿರ್ಮಿಸುವುದಕ್ಕೆ ಪ್ರತಿಜ್ಞಾಬದ್ಧರಾಗಬೇಕು ಎಂದು ನುಡಿದರು. 78ನೇ ವರ್ಷದ ಸ್ವಾತಂತ್ರೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಈ ಹೊತ್ತಿನಲ್ಲಿ ಭಾರತಕ್ಕಾಗಿ ನಾವೇನು ಮಾಡಬೇಕು ಎನ್ನುವುದರ ಬಗ್ಗೆ ಯೋಚಿಸಬೇಕು.ಪ್ರತಿಯೊಬ್ಬ ಪ್ರಜೆಯೂ ಪ್ರಜ್ಞಾವಂತನಾಗುವ ಮೂಲಕದೇಶಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದು Banks ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುಪ್ರೀತ್ ಅವರು ಕರೆ ನೀಡಿದರು