ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ದೀಪಾವಳಿಗೆ ಮೈಸೂರು – ಮಂಗಳೂರು ನಡುವೆ ಓಡಲಿದೆ ವಿಶೇಷ ರೈಲು

Posted by Vidyamaana on 2023-11-10 07:26:53 |

Share: | | | | |


ದೀಪಾವಳಿಗೆ ಮೈಸೂರು – ಮಂಗಳೂರು ನಡುವೆ ಓಡಲಿದೆ ವಿಶೇಷ ರೈಲು

ಮಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದೆ ಊರಿಗೆ ಬರಲು ಬಸ್ಸು, ರೈಲುಗಳಲ್ಲಿ ಟಿಕೆಟು ಸಿಗುತ್ತಿಲ್ಲ ಎಂದು ಟೆನ್ಷನ್ ಮಾಡುತ್ತಿರುವವರಿಗೆ ರೈಲ್ವೇ ಇಲಾಖೆ ಒಂದು ಗುಡ್ ನ್ಯೂಸ್ ನೀಡಿದೆ. ಹಬ್ಬದ ಪ್ರಯುಕ್ತ ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲೊಂದನ್ನು ಇಲಾಖೆ ಬಿಟ್ಟಿದ್ದು ಅದರ ವೇಳಾಪಟ್ಟಿ ಇಂತಿದೆ.


ಬೆಳಕಿನ ಹಬ್ಬದ ಈ ವಿಶೇಷ ರೈಲು ಓಡಾಟದ ವೇಳಾಪಟ್ಟಿ ಇಂತಿದೆ.

ದಿನಾಂಕ 10/11/2023 ಶುಕ್ರವಾರ ರೈಲು ಸಂಖ್ಯೆ 07303 ಮೈಸೂರು ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲು ಮೈಸೂರಿನಿಂದ ರಾತ್ರಿ 8:30ಕ್ಕೆ ಹೊರಟು ರಾತ್ರಿ 11:25ಕ್ಕೆ ಬೆಂಗಳೂರು ತಲುಪಲಿದೆ. ಅಲ್ಲಿಂದ ರಾತ್ರಿ 11:30ಕ್ಕೆ ಹೊರಟು ಮರುದಿನ ಅಂದರೆ ದಿನಾಂಕ 11/11/2023 ಶನಿವಾರದಂದು ಬೆಳಗ್ಗೆ 9:40ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.


ದಿನಾಂಕ 14/11/2023 ಬುಧವಾರ ರೈಲು ಸಂಖ್ಯೆ 07304 ಮಂಗಳೂರು ಜಂಕ್ಷನ್-ಮೈಸೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ರೈಲು ಮಂಗಳೂರು ಜಂಕ್ಷನ್ನಿಂದ ಸಂಜೆ 5:15ಕ್ಕೆ ಹೊರಟು ಮರುದಿನ ಬೆಳಗ್ಗೆ 3:45ಕ್ಕೆ ಬೆಂಗಳೂರು ತಲುಪಲಿದೆ. ಅಲ್ಲಿಂದ ಬೆಳಗ್ಗೆ 3:50ಕ್ಕೆ ಹೊರಡುವ ರೈಲು ಬೆಳಗ್ಗೆ 7:30ಕ್ಕೆ ಹುಬ್ಬಳ್ಳಿ ತಲುಪಲಿದೆ. 


ಈ ರೈಲಿಗೆ ಬಂಟ್ವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯರೋಡ್, ಸಕಲೇಶಪುರ, ಹಾಸನ ಜಂಕ್ಷನ್, ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಕುಣಿಗಲ್, ನೆಲಮಂಗಲ, ಯಶವಂತಪುರ, ಬೆಂಗಳೂರು, ಕೆಂಗೇರಿ, ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ.


ಈ ರೈಲಿನಲ್ಲಿ ಜನರಲ್, ಸ್ಲೀಪರ್ ಕ್ಲಾಸ್, 3 ಟೈರ್ ಎಸಿ, 2 ಟೈರ್ ಎಸಿ ಹಾಗೂ ಪ್ರಥಮ ದರ್ಜೆಯ ಕ್ಯಾಬಿನ್ ಕೋಚ್ಗಳು ಇರಲಿದೆ. ತಮ್ಮ ಕುಟುಂಬ ಸದಸ್ಯರೊಂದಿಗೆ ಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳಲು ಬಯಸುವವರು ಈ ವಿಶೇಷ ರೈಲಿನ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿರುತ್ತದೆ.

ಬಿಗ್​ಬಾಸ್​ನಲ್ಲಿ ಮತ್ತೊಂದು ಅವಾಂತರ;​ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-11-15 05:58:49 |

Share: | | | | |


ಬಿಗ್​ಬಾಸ್​ನಲ್ಲಿ ಮತ್ತೊಂದು ಅವಾಂತರ;​ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​-10 ಈ ಬಾರಿ ಒಂದಿಲ್ಲೊಂದು ವಿಚಾರಕ್ಕೆ ಹೆಚ್ಚು ಸದ್ದು ಮಾಡುತ್ತಿದ್ದು, ಇದೀಗ ಬಿಗ್ ಬಾಸ್​ ಮನೆಯ ಸ್ಪರ್ಧಿ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ. ಈ ಹಿಂದೆ ಹುಲಿ ಉಗುರು ಧರಿಸಿದ್ದರೆಂಬ ಕಾರಣಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ ಅವರನ್ನು ಬಂಧಿಸಲಾಗಿತ್ತು.ಇದೀಗ ಬಿಗ್​ಬಾಸ್​ ಸ್ಪರ್ಧಿ, ನಟಿ ತನಿಷಾ ಕುಪ್ಪಂಡ ಅವಹೇಳನಕಾರಿಯಾಗಿ ಮಾತನಾಡಿದ್ದಾರ ಎಂದು ಆರೋಪಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ನಟಿ ತನಿಷಾ ವಿರುದ್ಧ ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


ತನಿಷಾ, ವಡ್ಡ ಎಂಬ ಪದ ಬಳಸೂವ ಮೂಲಕ ಭೋವಿ ಸಮುದಾಯಕ್ಕೆ ಅಪಮಾನ ಎಸಗಿದ್ದಾರೆ. ಭೋವಿ ಸಮುದಾಯವು ಪರಿಶಿಷ್ಟ ಜಾತಿಗೆ ಸೇರಿದೆ ಎಂದು ತಿಳಿದೂ ಸಹ ಅಪಮಾನ ಮಾಡಲಾಗಿದೆ. ತನಿಷಾ ಅವರನ್ನು ಈ ಕೂಡಲೇ ಬಿಗ್​ಬಾಸ್ ಮನೆಯಿಂದ ಹೊರಗೆ ಕಳಿಸಬೇಕು, ಪೊಲೀಸರು ತನಿಷಾರನ್ನು ಬಂಧಿಸಬೇಕು. ಭೋವಿ ಸಮುದಾಯಕ್ಕೆ ಮಾಡಲಾದ ಅಪಮಾನದ ವಿರುದ್ಧ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಭೋವಿ ಸಮುದಾಯವು ಪ್ರತಿಭಟನೆ ನಡೆಸಲಿದೆ ಎಂದು ಉಲ್ಲೇಖಿಸಲಾಗಿದೆ. ಇತ್ತೀಚಿನ ಸಂಚಿಕೆಯೊಂದರಲ್ಲಿ ನಟಿ ತನಿಷಾ ಡ್ರೋನ್​ ಪ್ರತಪಾ​ ಅವರೊಂದಿಗೆ ಮಾತನಾಡುವ ವೇಳೆ ಬೋವಿ ಜನಾಂಗದ ಬಗ್ಗೆ ಅವಮಾನಕರ ಪದ ಬಳಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವವರು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಜಾತಿ ನಿಂದನೆ (Atrocity), ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. 


ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪ ಮಾಡಲಾಗಿದೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನ ಪೋಸ್ಟ್ , ಬೆಳ್ತಂಗಡಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲು

Posted by Vidyamaana on 2023-10-27 16:43:17 |

Share: | | | | |


ಮುಖ್ಯಮಂತ್ರಿ  ಸಿದ್ದರಾಮಯ್ಯ ಬಗ್ಗೆ ಅವಹೇಳನ ಪೋಸ್ಟ್ , ಬೆಳ್ತಂಗಡಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು, ಅ.27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 


"ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ" ಎಂದು ಬರೆದು ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರಿನ ಸಿಎಂ ನಿವಾಸದ ಫೋಟೊ ಪೋಸ್ಟ್ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ರಾಜ್ಯದ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ನೀಡಿದ್ದು ಇದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 


ಇತ್ತೀಚೆಗೆ ಅರಣ್ಯ ಅಧಿಕಾರಿಗಳನ್ನು ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಒಂದು ವಾರದ ಅಂತರದಲ್ಲಿ ಮತ್ತೊಂದು ಎಫ್ಐಆರ್ ಆಗಿದೆ.‌

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

Posted by Vidyamaana on 2023-10-17 13:16:40 |

Share: | | | | |


ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ.


ಭಾರತದಲ್ಲಿ ಮದುವೆಯಾಗುವ ಸಲಿಂಗ ದಂಪತಿಗಳ ಹಕ್ಕಿನ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಐವರು ನ್ಯಾಯಾಧೀಶರ ಪೀಠವು ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನುಬದ್ಧವಾಗಿ ಗುರುತಿಸಲು ನಿರಾಕರಿಸಿತು. ಅದರ ಬಗ್ಗೆ ಶಾಸನವನ್ನು ರೂಪಿಸಲು ಸಂಸತ್ತಿಗೆ ಸೂಚಿಸಿತು. ನ್ಯಾಯಾಧೀಶರು ದತ್ತು ಹಕ್ಕುಗಳು ಅಥವಾ ನಾಗರಿಕ ಒಕ್ಕೂಟದ ಮಾನ್ಯತೆಯಂತಹ ವಿಷಯಗಳ ಬಗ್ಗೆ ಒಮ್ಮತದ ತೀರ್ಪಿಗೆ ಬರಲಿಲ್ಲ, ಆದರೆ ಮದುವೆಯಾಗಲು ಯಾವುದೇ ಅನರ್ಹ ಹಕ್ಕು ಇಲ್ಲ ಎಂದು ಸರ್ವಾನುಮತದಿಂದ ಒಪ್ಪಿಕೊಂಡರು.

ಸಂವಿಧಾನದ ಅಡಿಯಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಗಳ ಸರಣಿಯ ಮೇಲೆ ನ್ಯಾಯಾಲಯ ತೀರ್ಪು ನೀಡಿದೆ.

‘ಮದುವೆಯಾಗುವ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸರ್ವಾನುಮತದಿಂದ ಅಭಿಪ್ರಾಯಪಟ್ಟರು.

ಮಂಗಳೂರಿನಲ್ಲಿ ಫೆ.17ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Posted by Vidyamaana on 2024-01-31 14:06:35 |

Share: | | | | |


ಮಂಗಳೂರಿನಲ್ಲಿ ಫೆ.17ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಬೆಂಗಳೂರು: ಮಂಗಳೂರಿನಲ್ಲಿ ಫೆ. 17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ಕಳೆದ ತಿಂಗಳಲ್ಲೆ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ ಕಾರಣಾಂತರದಿಂದ ಅದನ್ನು ಮುಂದೂಡಲಾಗಿತ್ತು. ಫೆ.17ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ರಾಮ ನಾಯ್ಕ ಅವರಿಗೆ ಸೇವಾ ನಿವೃತ್ತಿ

Posted by Vidyamaana on 2023-08-31 10:03:19 |

Share: | | | | |


ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ರಾಮ ನಾಯ್ಕ ಅವರಿಗೆ ಸೇವಾ ನಿವೃತ್ತಿ

ಪುತ್ತೂರು:ಪುತ್ತೂರು ನಗರ ಪೊಲೀಸ್ ಠಾಣೆ ಎಸ್ ಐ ರಾಮ ನಾಯ್ಕ ಅವರು ಆ.31ರಂದು ನಿವೃತ್ತಿ ಹೊಂದಲಿದ್ದಾರೆ.


1989ರಲ್ಲಿ ಪಾಂಡೇಶ್ವರ ಠಾಣೆಯಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಅವರು ಬಳಿಕ ಬಂದಾರು, ಅರಣ್ಯ ಸಂಚಾರಿ ದಳ, ಪುತ್ತೂರು ನಗರ ಪೊಲೀಸ್‌ ಠಾಣೆ, ಬಂಟಾಳ್ವ ಪೊಲೀಸ್‌ ಠಾಣೆ, ಪುಂಜಾಲಕಟ್ಟೆ, ಧರ್ಮಸ್ಥಳ, ಕೊಲ್ಲೂರು, ಬಂಟ್ವಾಳ ಮತ್ತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದುತ್ತಿದ್ದಾರೆ

Recent News


Leave a Comment: