Posted by vidyamaana on 2023-08-18 08:29:00 |
ಬೆಳ್ತಂಗಡಿ: ರೋಗಿಯೊಬ್ಬರನ್ನು ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Posted by Vidyamaana on 2023-12-20 17:11:58 |
ಬೆಳ್ತಂಗಡಿ : ಮರ ಕಟ್ಟಿಂಗ್ ಮಾಡುವಾಗ ಮೆಷಿನ್ ಅಯತಪ್ಪಿ ಕೆಳಗೆ ಬುದ್ದಿದ್ದು.ಚಾಲನ ಸ್ಥಿತಿಯಲ್ಲಿದ್ದ ಮೆಷಿನಿನ ಗರಗಸ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ಡಿ. 20 ರಂದು ನಡೆದಿದೆ.
ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ಎಂಬಲ್ಲಿ ತನ್ನ ಮನೆಯ ಬಳಿ ಡಿ.19 ರಂದು ಬೆಳಗ್ಗೆ 11:30 ರ ಸಮಯಕ್ಕೆ ಕಟ್ಟಿಗೆ ಮಾಡುವ ಸಲುವಾಗಿ ಪ್ರಶಾಂತ್ ಪೂಜಾರಿ ಮತ್ತು ಸಹೋದರ ಪ್ರಮೋದ್ ಜೊತೆ ಮರ ಕಡಿಯುವ ಕಟ್ಟಿಂಗ್ ಮಿಷಿನ್ ಮೂಲಕ ಮರ ಕಡಿಯುವ ಸಮಯದಲ್ಲಿ ಪ್ರಶಾಂತ್ ಪೂಜಾರಿ ಕಟ್ಟಿಂಗ್ ಮಿಷಿನ್ ಜೊತೆಗೆ ಹಿಡಿತ ತಪ್ಪಿ ನೆಲಕ್ಕೆ ಬಿದ್ದಾಗ ಚಾಲನಾ ಸ್ಥಿತಿಯಲ್ಲಿದ್ದ ಕಟ್ಟಿಂಗ್ ಮೆಷಿನಿನ ಗರಗಸ ಆಕಸ್ಮಿಕವಾಗಿ ಕುತ್ತಿಗೆಯ ಬಳಿ ತಾಗಿ, ತೀವ್ರ ರಕ್ತ ಗಾಯಗಳಾಗಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ತಕ್ಷಣ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದಾಗ ಚಿಕಿತ್ಸೆ ಫಲಿಸದೆ ಪ್ರಶಾಂತ್ ಪೂಜಾರಿ (36) ಎಂಬವರು ಡಿ.20ರಂದು(ಇಂದು) ಬೆಳಗ್ಗಿನ ಜಾವ ಸುಮಾರು 2 ಗಂಟೆಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರಶಾಂತ್ ಸಹೋದರ ಪ್ರಮೋದ್ (33) ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Posted by Vidyamaana on 2023-04-30 13:36:11 |
ಪುತ್ತೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ದಿ. ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದರು.
ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಅವರು ಕೊಡಿಯಾಲ ಬೈಲಿನ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿ, ದಿ. ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಅವರಿಗೆ ಸಾಂತ್ವನ ಹೇಳಿದರು.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಈಗಾಗಲೇ
ಪಿ.ಎಫ್.ಐ.ಯನ್ನು ನಿಷೇಧಿಸಿದ್ದು, ಪ್ರವೀಣ್ ಕುಟುಂಬದೊಂದಿಗೆಬಿಜೆಪಿ ಸದಾ ಇರಲಿದೆ ಎಂದರು.ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಭ್ಯರ್ಥಿ ಭಾಗೀರಥಿ ಮುರುಳ್ಯ ಸೇರಿದಂತೆ ಸುಳ್ಯದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
Posted by Vidyamaana on 2024-04-21 20:43:32 |
ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವೈಭವದ ಬ್ರಹ್ಮಕಲಶೋತ್ಸವಕ್ಕೆ ಶನಿವಾರ ಸಂಜೆ ಹೊರೆ ಕಾಣಿಕೆ ಸಮರ್ಪಣೆ ಮೂಲಕ ಚಾಲನೆ ನೀಡಲಾಯಿತು.
ಶನಿವಾರ ಸಂಜೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೊರೆಕಾಣಿಕೆ ಮೆರವಣಿಗೆ ಶ್ರೀ ದೇವಸ್ಥಾನದಕ್ಕೆ ತೆರಳಿತು.
ಮಾಣಿಲ ಶ್ರೀಧಾಮ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ ತೆಂಗಿಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.
Posted by Vidyamaana on 2024-05-21 07:06:05 |
ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಇಂದು (ಮೇ 21) ಭಾರತದಲ್ಲಿ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಲಾಗಿದೆ.
ಗೃಹ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು,ಅಗಲಿದ ಗಣ್ಯರಿಗೆ ಗೌರವದ ಸಂಕೇತವಾಗಿ,
Posted by Vidyamaana on 2023-05-12 12:00:38 |
ಬೆಂಗಳೂರು: ವಿಧಾನಸಭಾ ಚುನಾವಣೆ ಮುಗಿದು ಇದೀಗ ಮತ ಎಣಿಕೆಗೆ ಕ್ಷಣಗಣನೆ ಪ್ರಾರಂಭಗೊಂಡಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣಗೊಳ್ಳಬಹುದೆಂಬ ಸೂಚನೆ ಸಿಕ್ಕಿರುವುದರಿಂದ ರಾಜ್ಯದಲ್ಲಿ ಮೂರೂ ಪಕ್ಷಗಳೂ ‘ಹೈ ಅಲರ್ಟ್’ನಲ್ಲಿವೆ.
ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರುವ ಸಾಧ್ಯತೆಗಳು ಕಡಿಮೆಯಿದ್ದು ಕಾಂಗ್ರೆಸ್ ಪಕ್ಷ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಗಳನ್ನು ಬಹುತೇಕ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ನೀಡಿರುವುದು ಆಡಳಿತಾರೂಢ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.
ಇದೀಗ ಫಲಿತಾಂಶದ ಬಳಿಕ ‘ಅಪರೇಷನ್ ಕಮಲ’ ನಡೆಯುವ ಸಾಧ್ಯತೆ ದಟ್ಟವಾಗಿರುವ ಕಾರಣ ತನ್ನ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಹೊಸ ಪ್ಲ್ಯಾನ್ ಹೆಣೆದಿದ್ದು, ಮೇ13ರಂದು ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಕಾಂಗ್ರೆಸ್ ಅಭ್ಯರ್ಥಿ ತನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಳ್ಳುತ್ತಿದ್ದಂತೆ ನೇರವಾಗಿ ಬೆಂಗಳೂರಿಗೆ ಬರುವಂತೆ ಪಕ್ಷದ ಹೈಕಮಾಂಡ್ ‘ಸ್ಟ್ರಿಕ್ಟ್ ಆದೇಶ’ ರವಾನಿಸಿದೆ.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳ ಜೊತೆ ವರ್ಚ್ಯವಲ್ ಮೀಟಿಂಗ್ ನಡೆಸಿದ್ದು ಈ ಸಂದರ್ಭದಲ್ಲಿ ಇಂತಹದ್ದೊಂದು ಸೂಚನೆಯನ್ನು ‘ಕೈ’ ಅಭ್ಯರ್ಥಿಗಳಿಗೆ ರವಾನಿಸಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.
Posted by Vidyamaana on 2024-03-18 10:13:07 |
ಪುತ್ತೂರು: ವಿಧಾನಸಭಾ ಕ್ಷೇತ್ರದಲ್ಲಿ ಅಶೋಕ್ ಕುಮಾರ್ ರೈಯವರು ಶಾಸಕರಾದ 10 ತಿಂಗಳಿನಲ್ಲಿ ಅಭಿವೃದ್ಧಿಯ ಪರ್ವವನ್ನೇ ನಡೆಸಿದ್ದಾರೆ... ಸುಮಾರು 1474.29 ಕೋಟಿ ರೂಪಾಯಿಗಳ ದಾಖಲೆಯ ಅನುದಾನವನ್ನು ಪುತ್ತೂರು ಕ್ಷೇತ್ರಕ್ಕೆ ಬಿಡುಗಡೆ ಮಾಡಿಸಿದ್ದಾರೆ.... ಈ ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ವ್ಯಕ್ತಪಡಿಸುವ ರೀತಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಪುತ್ತೂರಿನ ತಾರೀತ್ತಡಿ ನಿವಾಸಿ ಜಯಾನಂದ ಬಂಗೇರ ವ್ಯಂಗ್ಯರೀತಿಯಲ್ಲಿ ಬರಹಗಳನ್ನು ಬರೆದು ಅನುದಾನ ಬಿಡುಗಡೆ ಆಗಿಲ್ಲ....ಕಾಮಗಾರಿಗಳ ವಿವರ ಕೊಡಿ ಎಂಬುದಾಗಿ ಪೋಸ್ಟು ಗಳನ್ನು ಹಾಕುತ್ತಿದ್ದ.ಇದನ್ನು ಗಮನಿಸಿದ ಶಾಸಕರ ಅಭಿಮಾನಿ ಬಳಗದ ಸದಸ್ಯರು ಬ್ಯಾಂಡ್ ಮೂಲಕ ಜಯಾನಂದರ ಮನೆಗೆ ತೆರಳಿ ಕಾಮಗಾರಿಗಳ ವಿವರದ ಪ್ಲೆಕ್ಸ್ ಅನ್ನು ಓದಿಸಿ ಇನ್ನು ಮುಂದೆ ಅಪಪ್ರಚಾರ ಮಾಡಬಾರದು ಎಂಬುದಾಗಿ ಎಚ್ಚರಿಕೆ ನೀಡಿದ್ದರು.
ಚೆಂಡೆ – ಬ್ಯಾಂಡ್ ನೊಂದಿಗೆ ತೆರಳಿ ಬ್ಯಾನರ್ ಪ್ರದರ್ಶನ : ಅಕ್ರಮ ಪ್ರವೇಶ - ನಿಂದನೆ ಪ್ರಕರಣ ದಾಖಲು
ಸಾಮಾಜಿಕ ಜಾಲತಾಣದ ಬರವಣಿಗೆ ವಿಚಾರದಲ್ಲಿ 15 ಅಧಿಕ ಜನರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯವಾಗಿ ನಿಂಧಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಜ್ವಲ್ ರೈ, ಸನತ್ ರೈ ಸಹಿತ 15 ಮಂದಿಯ ಮೇಲೆ ಪ್ರಕರಣದಾಖಲಾಗಿದೆ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸದಸ್ಯ ತಾರಿಗುಣ್ಣ ನಿವಾಸಿ ಜಯಾನಂದ ಕೆ. (41) ದೂರು ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಬರೆದಿರುವ ಬ್ಯಾನರ್ ಪ್ರದರ್ಶಿಸಿಕೊಂಡು ಚೆಂಡೆಗಳನ್ನು ಜೋರಾಗಿ ಬಡಿಯುತ್ತಾ ಅಕ್ರಮವಾಗಿ ಪ್ರವೇಶ ಮಾಡಿ ತನಗೆ, ತಾಯಿಗೆ, ಪತ್ನಿ, ಮಕ್ಕಳಿಗೆ ಅವಾಚ್ಯವಾಗಿ ನಿಂಧಿಸಿದ್ದಾರೆ. ಗೋಡೆಗೆ ಕಾಲಿನಿಂದ ಒದ್ದು ಅಸಭ್ಯವಾಗಿ ವರ್ತನೆ ತೋರಿದ್ದಲ್ಲದೆ, ನೀನು ಬಾರಿ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬಗ್ಗೆ ಬರೆಯುತ್ತಿಯಾ ಎಂದು ಗದರಿಸಿ, ನಿನ್ನನ್ನು ನೋಡಿಕೊಳ್ಳುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
non
-wrap" class="left relative" style="margin: 0px; pnon
ding: 0px; border: 0px; vertical-align: baseline; position: relative; float: left; width: 360px;">