Posted by vidyamaana on 2024-07-08 20:09:58 |
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ದ. ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 09/07/224 ರಂದು ರಜೆಯನ್ನು ಘೋಷಿಸಲಾಗಿದೆ.
Posted by Vidyamaana on 2023-12-16 07:34:09 |
ಕಡಬ : ಕುಟ್ರುಪ್ಪಾಡಿ ಗ್ರಾಮದ ಉಳಿಪ್ಪು ನಿವಾಸಿ ಶಿಬು ಎಂಬವರ ಪತ್ನಿ ಸೌಮ್ಯ ಅವರು ಅಕ್ರಮ ಸಕ್ರಮ ಕಡತ ವಿಲೇವಾರಿಯಲ್ಲಿ ಅಧಿಕಾರಿಗಳಿಂದ ಆಗಿರುವ ಅನ್ಯಾಯವನ್ನು ಲೋಕಾಯುಕ್ತ ಅಧಿಕಾರಿಗಳ ಮುಂದೆ ಹೇಳಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ.
ಇದರಿಂದ ಕೆಂಡಾಮಂಡಲರಾದ ಲೋಕಾಯುಕ್ತ ಎಸ್ಪಿ ಸೈಮನ್ ಅವರು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳಿಂದ ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ, ಸೌಮ್ಯ ಕಳೆದ ಎಂಟು ವರ್ಷಗಳಿಂದ ನಮ್ಮ ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡದೆ ವಿನಾಕಾರಣ ಸತಾಯಿಸುತ್ತಿದ್ದಾರೆ. ಕಳೆದ ವರ್ಷ ಕುಟ್ರುಪ್ಪಾಡಿಯಲ್ಲಿ ನಡೆದ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ನಾವು ದೂರು ನೀಡಿದಾಗ ಒಂದು ವಾರದೊಳಗೆ ಕಡತ ವಿಲೇವಾರಿ ಮಾಡಿ ಹಕ್ಕು ಪತ್ರ ನೀಡಬೇಕೆಂದು ಕಂದಾಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದರು.ಆದರೆ ಈವರೆಗೆ ಯಾವ ಪ್ರಕ್ರಿಯೆಯೂ ನಡೆದಿಲ್ಲ ಎಂದು ಅಳಲು ತೋಡಿಕೊಂಡರು.ತನಗೆ ಕಳೆದ ಎಂಟು ವರ್ಷಗಳಿಂದ ಅನ್ಯಾಯ ಮಾಡಲಾಗುತ್ತಿದೆ ಎಂದು ಲೋಕಾಯುಕ್ತ ಅಧಿಕಾರಿಗಳ ಎದುರು ಕಣ್ಣೀರಿಟ್ಟು ಸೌಮ್ಯ ತನ್ನ ಸಮಸ್ಯೆಯನ್ನು ಹೇಳಿಕೊಂಡರು.
ಇದರಿಂದ ಕೆಂಡಾಮಂಡಲರಾದ ಲೋಕಾಯುಕ್ತ ಅಧಿಕಾರಿಗಳು ಸ್ಥಳದಲ್ಲಿದ್ದ ತಹಶೀಲ್ದಾರ್, ಉಪತಹಶೀಲ್ದಾರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, 15 ದಿನಗಳ ಒಳಗೆ ಆ ಕಡತ ವಿಲೇವಾರಿ ಮಾಡಿಕೊಡುವಂತೆ ಸೂಚನೆ ನೀಡಿದರು. ಕಡತ ವಿಲೇವಾರಿ ಆಗದಿದ್ದರೆ ತಮ್ಮ ಗಮನಕ್ಕೆ ತರುವಂತೆ ಸೌಮ್ಯ ಅವರಿಗೆ ಅಭಯ ನೀಡಿದರು.ಇದೇ ಸಮಯದಲ್ಲಿ, ಸಾರ್ವಜನಿಕರಿಗೆ ಯಾವುದೇ ಅಧಿಕಾರಿಗಳು ಸರಿಯಾಗಿ ಸ್ಪಂದನೆ ನೀಡದೆ ಅಧಿಕಾರ ನಡೆಸಿದರೆ, ಸರ್ಕಾರಿ ಸವಲತ್ತುಗಳನ್ನು ದೊರಕಿಸಿಕೊಡುವಲ್ಲಿ ವಿನಕಾರಣ ತೊಂದರೆ ನೀಡಿದಲ್ಲಿ, ಅಧಿಕಾರಿಗಳು ಸಾರ್ವಜನಿಕರಿಗೆ ಸರ್ಕಾರಿ ಕೆಲಸದಲ್ಲಿ ತೊಂದರೆ ನೀಡಿದರೆ, ಲೋಕಾಯುಕ್ತಕ್ಕೆ ದೂರು ನೀಡಬಹುದು. ದೂರು ಯೋಗ್ಯವಾಗಿದ್ದಲ್ಲಿ ವಿಚಾರಣೆಗೆ ಒಳಪಡಿಸಲಗುವುದು ಎಂದು ಹೇಳಿದರು. ಅದೇ ರೀತಿ ಜನರು ಕೂಡಾ ಹೆಚ್ಚಿನ ಸ್ಪಂದನೆ ಕೊಡಬೇಕು. ಈ ಕಾರ್ಯಕ್ರಮದಲ್ಲಿ ಕೇವಲ ಐದು ದೂರುಗಳು ಮಾತ್ರ ಬಂದಿವೆ. ಅವುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ವರ್ಗಾಯಿಸಿ ಮುಂದಿನ ಕ್ರಮ ಕೈಗೊಳ್ಳಗಾವುದು ಎಂದು ಹೇಳಿದರು.ಇನ್ಮುಂದೆ ಯಾವುದೇ ಅಧಿಕಾರಿಯಿಂದ ತೊಂದರೆಯಾದರೆ ಸಾರ್ವಜನಿಕರು ತಕ್ಷಣ ಲೋಕಾಯುಕ್ತಕ್ಕೆ ನೇರವಾಗಿ ದೂರು ನೀಡಬಹುದು, ಎಲ್ಲಾ ದೂರುಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿ ಮುಂದೆ ಸೂಕ್ತ ಕ್ರಮ ಜರಗಿಸಲು ಲೋಕಾಯುಕ್ತ ಅಧಿಕಾರಿಗಳು ಬದ್ಧರಾಗಿದ್ದಾರೆ ಎಂದರು.
ಸೀತಾರಾಮ ನಾಯ್ಕ್ ಹಾಗೂ ವೆಂಕಟ್ರಾಜ್ ಕೋಡಿಬೈಲು ದೂರು ನೀಡಿ, ಕಡಬದಲ್ಲಿ ಕೆರೆ ಒತ್ತುವರಿ ಮಾಡಿಕೊಂಡು ಸಾರ್ವಜನಿಕರಿಗೆ ನಡೆದಾಡಲು ದಾರಿ ಇಲ್ಲದಂತೆ ಮಾಡಲಾಗಿದೆ. ನಮಗೆ ನ್ಯಾಯ ಒದಗಿಸಬೇಕೆಂದು ವಿನಂತಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಲೋಕಾಯುಕ್ತ ಅಧಿಕಾರಿಗಳು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿ ತಕ್ಷಣ ಕೆರೆ ಒತ್ತುವರಿ ತೆರವುಗೊಳಿಸಿ, ರಸ್ತೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕೆಂದರು.ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್ಪಿಗಳಾದ ಗಾನಾ ಪಿ.ಕುಮಾರ್, ಚೆಲುವರಾಜ್, ಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ, ಉಪತಹಶೀಲ್ದಾರ್ಗಳಾದ ಮನೋಹರ್ ಕೆ.ಟಿ, ಗೋಪಾಲ್ ಕಲ್ಲುಗುಡ್ಡೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಭವಾನಿಶಂಕರ್, ಕಡಬ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೀಲಾವತಿ, ಕಂದಾಯ ನಿರೀಕ್ಷಕ ಪೃಥ್ವಿರಾಜ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
Posted by Vidyamaana on 2023-09-08 22:22:32 |
ಪುತ್ತೂರು: ಬಡಗನ್ನೂರು ಗ್ರಾಮದ ಕುದ್ಕಾಡಿಯಲ್ಲಿ ತಾಯಿ,ಮಗನನ್ನು ಕಟ್ಟಿ ಹಾಕಿ ದರೋಡೆ ಮಾಡಿದ ಪ್ರಕರಣವನ್ನು ಬೇದಿಸಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಶಾಸಕರಾದ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.
ಒಂಟಿ ಮನೆ ಇರುವ ಕಡೆಗಳಲ್ಲಿ ಇಂಥಹ ಘಟನೆಗಳು ಹೆಚ್ಚು ನಡೆಯುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ದರೋಡೆ ತಂಡದವರನ್ನು ಪತ್ತೆ ಮಾಡುವ ಮೂಲಕ ಇಲಾಖೆ ಬಗ್ಗೆ ಜನರಿಗೆ ವಿಶ್ವಾಸ ಮತ್ತು ಧೈರ್ಯ ತುಂಬುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕು ಎಂದು ಪಶ್ಚಿಮ ವಲಯ ಐಜಿಯವರಿಗೆ ದೂರವಾಣಿ ಮೂಲಕ ಸೂಚನೆಯನ್ನು ನೀಡಿದ್ದಾರೆ. ಗ್ರಾಮಾಂತರ ಭಾಗದಲ್ಲಿ ಇಂಥಹ ಕೃತ್ಯಗಳು ನಡೆದಾಗ ಜನ ಭಯಭೀತರಾಗುತ್ತಾರೆ. ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಮಾಡುವ ಮೂಲಕ ಕ್ರಿಮಿನಲ್ ಗಳ ಹೆಡೆಮುರಿ ಕಟ್ಟುವ ಕೆಲಸವನ್ನು ಇಲಾಖೆ ಮಾಡಬೇಕಿದ್ದು ಇದಕ್ಕೆ ಬೇಕಾದ ಪೂರ್ಣ ಸಹಕಾರವನ್ನು ನೀಡುವುದಾಗಿ ಶಾಸಕರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ,ದರೋಡೆ ,ಕಳವು ಕೃತ್ಯಗಳು ನಡೆಯದಂತೆ ಇಲಾಖೆ ಕಟ್ಟೆಚ್ಚರ ವಹಿಸಬೇಕೆಂದು ಶಾಸಕರು ಸೂಚನೆ ನೀಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಕಾರಣ ಶಾಸಕರಯ ದೂರವಾಣಿ ಮೂಲಕ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆ ದೂರವಾಣಿ ಜೊತೆ ಸಂಪರ್ಕಿಸಿ ಖಡಕ್ ಸೂಚನೆಯನ್ನು ನೀಡಿದ್ದಾರೆ.
Posted by Vidyamaana on 2023-10-10 15:28:55 |
ವಿಟ್ಲ : ನಂದಿಕೂರಿನಿಂದ ಕಾಸರಗೋಡಿಗೆ ಹೋಗುವ 400ಕೆ.ವಿ ಹೈ ಟೆನ್ಶನ್ ಮಾರ್ಗವನ್ನು ಪುಣಚ ಗ್ರಾಮದ ಬೈರಿಕಟ್ಟೆಯಿಂದ ಕಾಮಗಾರಿ ಆರಂಭ ಮಾಡಲು ಯತ್ನಿಸಿದಾಗ ಪರಿಸರದ ರೈತ ವರ್ಗದವರು ಪ್ರತಿಭಟಿಸಿದ ಘಟನೆ ನಡೆದಿದೆ.
ಈ ಬಗ್ಗೆ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಹಿಂದೂ ಮುಖಂಡ ಭೇಟಿ ನೀಡಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.
ಈ ಬಗ್ಗೆ ಅಧಿಕಾರಿಗಳ ಜೊತೆ ಹಾಗೂ ರೈತ ವರ್ಗದವರ ಜೊತೆ ಚರ್ಚಿಸಿದರು.
ಯಾವುದೇ ಕಾರಣಕ್ಕೂ ಅನುಷ್ಠಾನ ಮಾಡೋದಕ್ಕೆ ಬಿಡೋದಿಲ್ಲ., ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗುವಂತೆ ಯಾವುದೇ ಆಸ್ಪಾದನೆ ಕೊಡಬೇಡಿ ಎಂದು ಅಧಿಕಾರಿಗಳ ಜೊತೆ ಮಾತನಾಡಿದರು.
ರೈತ ವರ್ಗದವರ ಜೊತೆ ಯಾವಾಗಲೂ ನಿಲ್ಲುವುದಾಗಿ., ರೈತರ ಪರ ಪುತ್ತಿಲ ಬ್ಯಾಟ್ ಬೀಸಿದ್ದು, ನಿಮ್ಮೊಂದಿಗೆ ನಾನಿದ್ದೇನೆ ಎಂಬ ಭರವಸೆಯನ್ನು ರೈತರಿಗೆ ನೀಡಿದರು.
400 ಕೆ.ವಿ. ವಿದ್ಯುತ್ ವಿರೋಧಿ ಹೋರಾಟ ಸಮಿತಿ ವಿಟ್ಲದ ಅಧ್ಯಕ್ಷರಾದ ರಾಜೀವ ಗೌಡ, ಸಂಜೀವ ಗೌಡ ಒಕ್ಕೆತ್ತೂರು, ಚಿತ್ರಾಂಜನ್ ಮಂಗಿಲಪದವು, ರೋಹಿತಾಶ್ವ ಮಂಗಿಲಪದವು, ದಾಮೋದರ ಗೌಡ ಒಕ್ಕೆತ್ತೂರು, ಅಬ್ಬಾಸ್ ಪುಣಚ, ಪುಣಚ ಪಂಚಾಯತ್ ಸದಸ್ಯ ಅಶೋಕ್, ಭಾಸ್ಕರ್ ಉಪಾಧ್ಯಾಯ ಪುಣಚ, ಪಾರ್ಥ ಸಾರಥಿ ವಾರಣಾಸಿ ಹಾಗೂ ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತ, ಸುಧೀರ್ ಕುಮಾರ್ ಶೆಟ್ಟಿ ಮೊಡಂಬೈಲ್, ಭೀಮ ಭಟ್, ರಘುರಾಮ್ ಶೆಟ್ಟಿ ವಿಟ್ಲ, ಶರತ್ ಎನ್.ಎಸ್, ನವೀನ್ ಕುಮಾರ್ ಕಾಶೀಮಠ ಮತ್ತು ಹಲವರು ಉಪಸ್ಥಿತರಿದ್ದರು
Posted by Vidyamaana on 2024-07-19 03:56:13 |
ಮಂಗಳೂರು: ಜಿಲ್ಲಾಧಿಕಾರಿಯೆಂದರೆ ಒಂದು ಜಿಲ್ಲೆಯ ಆಡಳಿತಾತ್ಮಕ ಆಗುಹೋಗುಗಳನ್ನು ಮಾನಿಟರ್ ಮಾಡುವ ಮತ್ತು ತನ್ನ ಅಧೀನದಲ್ಲಿರುವ ಇಲಾಖೆಗಳ ಅಧಿಕಾರಿಗಳಿ ಕಾಲ ಕಾಲಕ್ಕೆ ಸೂಕ್ತ ನಿರ್ದೇಶನವನ್ನು ನೀಡುವ ಮಹತ್ತರವಾದ ಜವಾಬ್ದಾರಿಯುತ ಹುದ್ದೆ.
ಆದರೆ, ಇತ್ತೀಚಿನ ಕೆಲ ದಿನಗಳಲ್ಲಿ ಈ ಮಳೆಗೆ ಸಂಬಂಧಿಸಿ ಶಾಲೆಗೆ ರಜೆ ನೀಡುವ ವಿಚಾರದಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಹೊಸದೊಂದ ಟ್ರೆಂಡ್ ಶುರುವಾಗಿದೆ, ಅದೇನೆಂದರೆ ನಾಳೆ ಶಾಲೆಗೆ ರಜೆ ಇದೆಯೇ ಎಂದು ಮಕ್ಕಳೇ ನೇರವಾಗಿ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಕೇಳುವ ಚಾಳಿ. ಇದನ್ನು ದಕ್ಷಿಣ ಕನ್ನಡದ ಈಗಿನ ಜಿಲ್ಲಾಧಿಕಾರಿಗಳಾಗಿರುವ ಮುಲ್ಲೈ ಮುಹಿಲನ್ ಅವರು ಒಂದು ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಸ್ನೇಹಿತರ ಮುಂದೆ ವಿಷಯ ಹಂಚಿಕೊಂಡು ತಮಾಷೆಯಾಗಿ ಹೇಳಿದ್ದರು.
ಆದರೆ, ಇದರಲ್ಲಿ ಎರಡು ವಿಚಾರಗಳನ್ನು ನಾವು ಯೋಚಿಸಬೇಕಾಗಿದೆ, ಒಂದು ಅದು ಮಕ್ಕಳು ತಾವೇ ಸ್ವತಃ ಜಿಲ್ಲಾಧಿಕಾರಿಯವರಿಗೆ ಕಾಲ್ ಮಾಡ್ತಾರೋ ಅಥವಾ ಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ನಂಬರ್ ನೀಡಿ ಹೀಗೆ ಮಾತನಾಡಬೇಕೆಂದು ತಿಳಿಸಿ ಕಾಲ್ ಮಾಡಿಸ್ತಾರೋ ಅನ್ನುವುದು. ಇನ್ನೊಂದು, ಜಿಲ್ಲಾಧಿಕಾರಿಯವರು ಸಾರ್ವಜನಿಕರ ತುರ್ತು ಸ್ಪಂದನೆಗೆಂದು ನೀಡಿರುವ ಸಂಪರ್ಕ ಸಂಖ್ಯೆಯನ್ನು ಕೆಲವರು ದುರುಪಯೋಗಪಡಿಸಿಕೊಳ್ತಿದ್ದಾರೆಯೇ ಎಂಬುದು ಇನ್ನೊಂದು ವಿಚಾರ.
ಯಾಕೆಂದರೆ ಒಂದು ಪಂಚಾಯತ್ ಮಟ್ಟದ ಅಧಿಕಾರಿಯನ್ನು ಭೇಟಿಯಾಗಿ ಮಾತನಾಡಿಸಬೇಕೆಂದರೂ ಅವರ ಕಾರ್ಯದೊತ್ತಡದ ನಡುವೆ ಅಷ್ಟೊಂದು ಸುಲಭದ ವಿಚಾರವಲ್ಲ. ಅಂತದ್ದರಲ್ಲಿ ಒಂದು ಜಿಲ್ಲೆಯ ಕಾರ್ಯಾಂಗದ ಮುಖ್ಯಸ್ಥರಾಗಿರುವ ಜಿಲ್ಲಾಧಿಕಾರಿವರಿಗೆ ಹೀಗೆ ಮಕ್ಕಳಿಂದ ಕರೆಗಳ ಮೇಲೆ ಕರೆಗಳು ಬರುತ್ತಿದ್ದರೆ ಅವರಿಗೆ ಜಿಲ್ಲೆಯ ಮೂಲೆ ಮೂಲೆಗಳಲ್ಲಿ ಮಳೆಗಾಲದಲ್ಲಿ ನಡೆಯಬಹುದಾದ ತುರ್ತು ವಿಚಾರಗಳಿಗೆ ಗಮನಕೊಡಲು ಕಷ್ಟವಾಗುವುದಿಲ್ಲವೇ? ಮಕ್ಕಳಿಗೆ ರಜೆ ಇದೆ ಎಂದಾದರೆ ಅದು ಜಿಲ್ಲಾಧಿಕಾರಿಗಳ ಮೂಲಕವೇ ಆದೇಶ ಬಂದು ಮಾಧ್ಯಮಗಳಲ್ಲಿ ತಕ್ಷಣವೇ ಪ್ರಸಾರಗೊಳ್ಳುತ್ತದೆ ಮಾತ್ರವಲ್ಲದೇ ಇದೀಗ ಎಲ್ಲಾ ಶಾಲೆಗಳಲ್ಲಿ ವಾಟ್ಸ್ಯಾಪ್ ಗ್ರೂಪ್ ಗಳ ಮೂಲಕ ಮಾಹಿತಿ ಹಂಚುವ ವ್ಯವಸ್ಥೆಯಿದ್ದು ಆ ಮೂಲಕ ಮಕ್ಕಳಿಗೆ ಮತ್ತು ಪೋಷಕರಿಗೆ ಮಾಹಿತಿ ಸಿಗುತ್ತದೆ ಅಲ್ಲವೇ?
ವಿಷಯ ಹೀಗಿರುವಾಗ ಜಿಲ್ಲಾಧಿಕಾರಿಯವರ ಅಮೂಲ್ಯ ಸಮಯವನ್ನು ಮಕ್ಕಳ ಮೂಲಕ ಫೋನ್ ಮಾಡಿಸಿ ರಜೆ ಕೇಳುವ ವಿಚಾರಕ್ಕೆ ಹಾಳು ಮಾಡುವುದು ಎಷ್ಟು ಸರಿ ಎಂಬುದು ಪ್ರಜ್ಞಾವಂತರಾಗಿರುವ ನಾವೆಲ್ಲರೂ ಯೋಚಿಸಬೇಕಾದ ವಿಚಾರವಲ್ಲವೇ?
ಈಗಿನ ಜಿಲ್ಲಾಧಿಕಾರಿಗಳಂತೂ ಮಗುವಿನಂತಹ ಮನಸ್ಸಿನವರು, ಸದಾ ನಗುನಗುತ್ತಲೇ ಜನರ ಸಮಸ್ಯೆಗೆ ಸ್ಪಂದಿಸುವಂತಹ ವ್ಯಕ್ತಿತ್ವದವರು ಎಂಬ ಮಾತು ಜಿಲ್ಲೆಯ ಜನರದ್ದಾಗಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿಗಳೂ ಜನಸ್ಪಂದನೆಯ ವಿಚಾರದಲ್ಲಿ ಪಾಸಿಟಿವ್ ಆಗಿಯೇ ಇರುತ್ತಿದ್ದರು. ಹೀಗಿರುವಾಗ ಅವರ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಳ್ಳುವುದು ಎಷ್ಟು ಸರಿ ಅಲ್ಲವೇ?
Posted by Vidyamaana on 2024-07-06 21:12:31 |
ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ಬಕಾರ್ಡು ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ ನಿಲ್ಲುವ ಅಗತ್ಯವಿಲ್ಲ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.
ಪುತ್ತೂರು ತಾಲೂಕು ಕಚೇರಿಯಲ್ಲಿ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೂತನ ಕೇಂದ್ರದಲ್ಲಿ 18 ವರ್ಷ ಪ್ರಾಯದವರೆಗಿನ ಮಕ್ಕಳಿಗೆ ಹೊಸ ಆಧಾರ್ ,18 ರ ನಂತರದವರ ಆದಾರ್ ತಿದ್ದುಪಡಿ. ನಂಬರ್
Posted by Vidyamaana on 2023-05-27 10:06:27 |
ಬಂಟ್ವಾಳ: ಬಸ್ಸಿನ ಎದುರು ಸೀಟಿನಲ್ಲಿ ಕುಳಿತಿದ್ದ ಹೆಂಗಸೊಬ್ಬರ ಜಡೆಯನ್ನು ಸವರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ನಾವೂರು ಸಮೀಪದ ಪಲ್ಲಿಗುಡ್ಡೆ ಮನೆ ನಿವಾಸಿ ಹಮೀದ್ ಆರೋಪಿ.
ಹಿಂದೂ ಜಾಗರಣ ವೇದಿಕೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.
ಮಂಗಳೂರಿನಿಂದ ಈ ಬಸ್ಸು ಹೊರಟ್ಟಿದ್ದು, ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ತಲುಪಿದಾಗ ಮಹಿಳೆಯ ಹಿಂಬದಿಯ ಸೀಟಿನಲ್ಲಿ ಕೂತಿದ್ದ ಹಮೀದ್ ಎಂಬಾತ ಮಹಿಳೆಯೋರ್ವರ ಜಡೆಯನ್ನು ಸವರುವ ಹಾಗೂ ಹಿಡಿದೆಳೆಯುವ ಕೃತ್ಯ ನಡೆಸಿದ್ದಾನೆ. ಇದನ್ನು ಗಮನಿಸಿದ ಸಹ ಪ್ರಯಾಣಿಕರು ವಿಡಿಯೋ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಮಾಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಲೇ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ವತಿಯಿಂದ ಬಂಟ್ವಾಳ ನಗರ ಠಾಣೆಗೆ ದೂರು ನೀಡಿ, ಆರೋಪಿಯನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಲಾಗಿತ್ತು.