ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಸುಳ್ಯ : ಬಸ್‌ ಬೈಕ್ ಅಪಘಾತ ಪ್ರಕರಣ

Posted by Vidyamaana on 2024-03-01 15:38:44 |

Share: | | | | |


ಸುಳ್ಯ : ಬಸ್‌ ಬೈಕ್ ಅಪಘಾತ ಪ್ರಕರಣ

ಸುಳ್ಯ :ಇಲ್ಲಿನ ಅರಂಬೂರು ಪಾಲಡ್ಕ ಎಂಬಲ್ಲಿ ಸಂಭವಿಸಿದ ಬಸ್ - ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ, ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇಂದು ಮಾ 01 ರಂದು ಬೆಳಿಗ್ಗೆ ಪಾಲಡ್ಕದಲ್ಲಿ ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತರ ಪತ್ನಿ ಸುಳ್ಯ ಸಿ ಎ ಬ್ಯಾಂಕ್ ಸಿಬ್ಬಂದಿ ಚಂದ್ರಿಕಾ ಮಗಳು ಮನ್ವಿತ ರವರನ್ನು ಅಗಲಿದ್ದಾರೆ


ಪುತ್ತೂರಿನಲ್ಲಿ ನಾಳೆ ರಮ್ಯ-ನಿಕೇತ್ ರಾಜ್ ಜೋಡಿ ಮಾಡಲಿದೆ ಮೋಡಿ -ಅಶೋಕ್ ರೈ ಪರ ಮತಯಾಚನೆ

Posted by Vidyamaana on 2023-05-07 09:17:33 |

Share: | | | | |


ಪುತ್ತೂರಿನಲ್ಲಿ ನಾಳೆ ರಮ್ಯ-ನಿಕೇತ್ ರಾಜ್ ಜೋಡಿ ಮಾಡಲಿದೆ ಮೋಡಿ -ಅಶೋಕ್ ರೈ ಪರ ಮತಯಾಚನೆ

ಪುತ್ತೂರು: ಖ್ಯಾತ ಚಲನಚಿತ್ರ ನಟಿ ರಮ್ಯ ಮತ್ತು ನಿಕೇತ್ ರಾಜ್ ಮೌರ್ಯ ಅವರು ನಾಳೆ ನಡೆಯುವ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರ ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ಬೋಳುವಾರು ವೃತ್ತದಿಂದ ಆರಂಭಗೊಂಡು ದರ್ಬೆ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಯಲಿದೆ. ಖ್ಯಾತ ಚಲನಚಿತ್ರ ನಟಿ, ರಮ್ಯಾ ಮತ್ತು ಖ್ಯಾತ ವಾಗಿ ನಿಕೇತ್ ರಾಜ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಅಶೋಕ್ ಕುಮಾರ್ ರೈ ಪರ ಮತ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು ಈಗಾಗಲೇ ಕ್ಷೇತ್ರದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ ಸಾಧ್ಯತೆ : ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

Posted by Vidyamaana on 2023-08-29 11:09:32 |

Share: | | | | |


ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಕಡಿತ ಸಾಧ್ಯತೆ : ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ.



ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ. ಬದಲಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌, ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಷನ್‌ ಮತ್ತು ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಕಂಪನಿಗಳಿಗೆ ಸಬ್ಸಿಡಿ ಹಣ ಸಿಗಲಿದೆ.


ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್‌ಪಿಜಿಗೆ 1100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್‌ ಸಿಗಲಿದೆ.


ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

Posted by Vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

ನಕ್ಷಲ್ ಬಾಧಿತ ಕುತ್ಲೂರಿನಲ್ಲಿ ರಾತ್ರೋ ರಾತ್ರಿ ಮನೆ ಬಾಗಿಲು ಬಡಿದ ಪ್ರಕರಣಕ್ಕೆ ರೋಚಕ ಟ್ವಿಸ್ಟ್

Posted by Vidyamaana on 2023-11-22 22:05:09 |

Share: | | | | |


ನಕ್ಷಲ್ ಬಾಧಿತ ಕುತ್ಲೂರಿನಲ್ಲಿ ರಾತ್ರೋ ರಾತ್ರಿ ಮನೆ ಬಾಗಿಲು ಬಡಿದ ಪ್ರಕರಣಕ್ಕೆ ರೋಚಕ ಟ್ವಿಸ್ಟ್


ಬೆಳ್ತಂಗಡಿ : ನಕ್ಸಲ್ ಪೀಡಿತ ಪ್ರದೇಶದಲ್ಲಿ ರಾತ್ರಿ ಐದು ಜ‌ನ ಅಪರಿಚಿತರ ತಂಡವೊಂದು ಬಾಗಿಲು ಬಡಿದು ವಿಚಾರಿಸಿರುವ ಘಟನೆ ನ. 21 ರಂದು ರಾತ್ರಿ ಕುತ್ಲೂರಿನಲ್ಲಿ ನಡೆದಿರುವ ಘಟನೆಗೆ ಇದೀಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಮನೆಗೆ ಬಂದಿರುವುದು ನಕ್ಸಲ್ ಅಲ್ಲ ವಂಚನೆ ಪ್ರಕರಣದಲ್ಲಿ ಹಗಲು ಹೊತ್ತು ಜೋಸಿ ಆಂಟೋನಿ ಸಿಕ್ಕಿಲ್ಲ ಎಂದು ರಾತ್ರಿ ಹೊತ್ತು ಮಂಗಳೂರು ಕಮೀಷನರ್ ರೇಟ್ ವ್ಯಾಪ್ತಿಯ ಮೂಡಬಿದರೆ ಪೊಲೀಸ್ ಠಾಣೆಯ ಪೊಲೀಸರು ಹೋಗಿದ್ದರು ಈ ಬಗ್ಗೆ ವೇಣೂರು ಮತ್ತು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ಇರಲ್ಲಿಲ್ಲ ಎಂದು ‌ನ.22 ರಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ರಿಷ್ಯಂತ್ ಸ್ವಷ್ಟಪಡಿಸಿದ್ದಾರೆ.


 

*ಘಟನೆ ವಿವರ:* ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಪೂಂಕಾಜೆ ಮನೆಗೆ ನ.21 ರಂದು ರಾತ್ರಿ ಅಪರಿಚಿತರ ಐದು ಜನರ ತಂಡವೊಂದು ಎಂಟ್ರಿಯಾಗಿ ಬಾಗಿಲು ಓಪನ್ ಮಾಡಲು ಪ್ರಯತ್ನ ಪಟ್ಟಿದ್ದು ಬಾಗಿಲು ತೆರೆಯದೆ ಇದ್ದಾಗ ರಾಡ್ ನಿಂದ ಬಾಗಿಲು ತೆರೆಯಲು ಬಡಿದ್ದಾರೆ ತಕ್ಷಣ 112 ಕಂಟ್ರೋಲ್ ರೂಂ ಹಾಗೂ ವೇಣೂರು ಪೊಲೀಸರಿಗೆ ಮಾಹಿತಿ ನೀಡಿದ್ದರು‌. ನಂತರ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ,ವೇಣೂರು ಪೊಲೀಸರು, 112 ಸಿಬ್ಬಂದಿಗಳು ಮನೆಗೆ ದೌಡಾಯಿಸಿ ಮಾಹಿತಿ ಪಡೆದುಕೊಂಡು ಹೋಗಿದ್ದರು.


*ಪೊಲೀಸರ ಬಗ್ಗೆ ನಾಟಕವಾಡಿದ್ದ ಜೋಸಿ:* ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ಪೂಂಜಾಜೆ ಮನೆಯ ನಿವಾಸಿ ಜೋಸಿ ಆಂಟೋನಿ ಮತ್ತು ಮಂಜುಳಾ ದಂಪತಿಗಳ ಮನೆಗೆ  ನ.21 ರಂದು ರಾತ್ರಿ 9:30 ರ ಸಮಯಕ್ಕೆ ಬ್ಲೂ ಬಣ್ಣದ ಡ್ರೆಸ್ ಹಾಕಿದ ನಾಲ್ಕು ಮಂದಿ ಪುರುಷರು ಮತ್ತು ಪೊಲೀಸ್ ಡ್ರೆಸ್ ಹಾಕಿದ ಒಬ್ಬರು ಮಹಿಳೆ ಮನೆಗೆ ಎಂಟ್ರಿಯಾಗಿ ಬಾಗಿಲು ಬಡಿದ್ದಾರೆ. ಯಾರು ಅಂತ ಕೇಳಿದಾಗ ವೇಣೂರು ಪೊಲೀಸರು ಜೋಸಿ ಬಾಗಿಲು ತೆಗೆಯಿರಿ ಮಾತನಾಡಲು ಇದೆ ಅಂದಿದ್ದಾರೆ‌. ಆದ್ರೆ ದಂಪತಿಗಳು ಬಾಗಿಲು ತೆಗೆಯದೆ ವೇಣೂರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ಕೇಳಿದ್ದಾರೆ ಆಗ ವೇಣೂರು ಪೊಲೀಸರು ನಮ್ಮ ಪೊಲೀಸರು ಬಂದಿಲ್ಲ ಎಂದಿದ್ದಾರೆ. ತಕ್ಷಣ 112 ಕಂಟ್ರೋಲ್ ರೂಂಗೆ ಕರೆ ಮಾಹಿತಿ ವಿಚಾರ ತಿಳಿಸಿದ್ದಾರೆ‌. ಕರೆ ಮಾಡುವ ಬಗ್ಗೆ ಐದು ಜನರಿಗೆ ಕೇಳಿಸಿದ್ದು. ತಕ್ಷಣ ಸ್ಥಳದಿಂದ ವಾಪಸ್ ಹೋಗಿದ್ದಾರೆ ನಂತರ 112 ಸಿಬ್ಬಂದಿಗಳು ,ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಹಾಗೂ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಶೈಲಾ ಮತ್ತು ತಂಡದ ಪೊಲೀಸರು ಮನೆಗೆ ಬಂದು ಮಾಹಿತಿ ಪಡೆದುಕೊಂಡು ರಾತ್ರಿ 2 ಗಂಟೆಗೆ ವಾಪಸ್ ಹೋಗಿದ್ದಾರೆ. ಐದು ಜನ ಮನೆಗೆ ಬಂದವರು ಪೊಲೀಸ್ ರೀತಿಯಲ್ಲಿ ಇರಲ್ಲಿಲ್ಲ ನಮಗೆ ಅನುಮಾನ ಇದೆ ಈ ಐದು ಜನರ ವಿಚಾರದಲ್ಲಿ ,ಅದಲ್ಲದೆ ನಕ್ಸಲ್ ಬಂದಿರುವ ಅನುಮಾನ ಕೂಡ ಇದೆ ಎಂದು ಮನೆಯ ಯಜಮಾನ ಜೋಸಿ ಆಂಟೋನಿ ಸುಳ್ಳು ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿದ್ದರು. 


*ಜಾಗದ ವಿಚಾರದಲ್ಲಿ ದೂರು ಅರ್ಜಿ:* ಜೋಸಿ ಆಂಟೋನಿ ಒಂದೇ ಜಾಗವನ್ನು ಬೆಂಗಳೂರಿನ ಸುಹನಾ ಎಂಬವರು 45 ಲಕ್ಷಕ್ಕೆ ಅಗ್ರಿಮೆಂಟ್ ಮಾಡಿದ್ದು ಇದರಲ್ಲಿ 24 ಲಕ್ಷ ಚೆಕ್ ನೀಡಿದ್ದರು ಹಾಗೂ ಬೆಂಗಳೂರಿನ ಶರತ್ ಎಂಬವರಿಗೆ 48 ಲಕ್ಷಕ್ಕೆ ಅಗ್ರಿಮೆಂಟ್ ಮಾಡಿ 19 ಲಕ್ಷದ ಚೆಕ್ ನೀಡಿದ್ದರು ಇಬ್ಬರಿಗೂ ಜೋಸಿ ಆಂಟೋನಿ ವಂಚನೆ ಮಾಡಿದ್ದ ಈ ಪ್ರಕರಣದ ಬಗ್ಗೆ ಎರಡು ನೊಂದ ವ್ಯಕ್ತಿಗಳು ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಗೆ ದೂರು ಅರ್ಜಿ ನೀಡಿದ್ದರು ಈ ಸಂಬಂಧ  ಕಳ್ಳಾಟ ಮಾಡಿದ್ದರಿಂದ ತಪ್ಪಿಸಿಕೊಳ್ಳಲು ಮೂಡಬಿದರೆ ಪೊಲೀಸರನ್ನು ನಕ್ಸಲರು ಎಂದು ಬಿಂಬಿಸಿ ವೇಣೂರು, 112 ಪೊಲೀಸರಿಗೆ ಕರೆ ಮಾಡಿ ನಾಟಕವಾಡಿರುವುದು ಇದೀಗ ಬೆಳಕಿಗೆ ಬಂದಿದೆ. ಈ ಪ್ರಕರಣದ ಬಗ್ಗೆ ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಕೂಡ ಸ್ವಷ್ಟಪಡಿಸಿದ್ದಾರೆ‌.

ದ ಕ ಲೋಕ ಸಭಾ ಕ್ಷೇತ್ರದ ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿ ಯಾಗಿ ಮಹಮ್ಮದ್ ಬಡಗನ್ನೂರು ನೇಮಕ

Posted by Vidyamaana on 2024-04-11 15:29:45 |

Share: | | | | |


ದ ಕ ಲೋಕ ಸಭಾ ಕ್ಷೇತ್ರದ ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿ ಯಾಗಿ ಮಹಮ್ಮದ್ ಬಡಗನ್ನೂರು ನೇಮಕ

ಪುತ್ತೂರು :ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕೆಪಿಸಿಸಿ ಯಿಂದ ದ ಕ ಲೋಕ ಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ರಮಾನಾಥ ರೈ ಯವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿಯನ್ನು ರಚಿಸಲಾಗಿದ್ದು, ಮಹಮ್ಮದ್ ಬಡಗನ್ನೂರು  ರವರನ್ನು ಜಿಲ್ಲಾ ಪ್ರಚಾರ ಸಮಿತಿಯ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.



Leave a Comment: