ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಬಂಟ್ವಾಳ: ಓಮ್ನಿ-ಸ್ವಿಫ್ಟ್ ಕಾರು ನಡುವೆ ಅಪಘಾತ: ಹಲವರಿಗೆ ಗಂಭೀರ ಗಾಯ

Posted by Vidyamaana on 2023-07-09 03:49:17 |

Share: | | | | |


ಬಂಟ್ವಾಳ: ಓಮ್ನಿ-ಸ್ವಿಫ್ಟ್ ಕಾರು ನಡುವೆ ಅಪಘಾತ: ಹಲವರಿಗೆ ಗಂಭೀರ ಗಾಯ

ಬಂಟ್ವಾಳ: ಚರ್ಚ್ ಗೆ ಪೂಜೆಗೆಂದು ಬರುವ ಓಮ್ನಿ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿ ಓಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಜುಲೈ 9 ರಂದು ಬೆಳಿಗ್ಗೆ ಬಿ.ಸಿ.ರೋಡು-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆಓಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ ಗಾಯವಾಗಿದೆ.


ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಓಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಹಿಂಬದಿಯಿಂದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಓಮ್ನಿ ಕಾರನ್ನು ಸುಮಾರು ದೂರು ದೂಡಿಕೊಂಡು ಹೋಗಿದ್ದಲ್ಲದೆ ಕಾರು ಪಲ್ಟಿಯಾಗಿದೆ. ಕಾರಿನೊಳಗಿದ್ದ ಪ್ರಯಾಣಿಕರನ್ನು ಹಿಂಬದಿಯ ಗಾಜು ಒಡೆದು ಹೊರಕ್ಕೆ ತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸರು ಭೇಟಿ ನೀಡಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರಿಗೆ Z ಶ್ರೇಣಿಯ ಭದ್ರತೆ

Posted by Vidyamaana on 2024-04-10 06:19:14 |

Share: | | | | |


ಮುಖ್ಯ ಚುನಾವಣಾ ಆಯುಕ್ತರಿಗೆ Z ಶ್ರೇಣಿಯ ಭದ್ರತೆ

ನವದೆಹಲಿ :ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ.ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಭದ್ರತೆ ನೀಡಿದೆ

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ 2.50 ಲಕ್ಷ ರೂ. ಕಳ್ಳತನ

Posted by Vidyamaana on 2024-01-10 10:28:41 |

Share: | | | | |


ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ 2.50 ಲಕ್ಷ ರೂ. ಕಳ್ಳತನ

ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತವಾದ ಘಟನೆ ಬೆಳಕಿಗೆ ಬಂದಿದ್ದು, ಖದೀಮರು 2.50 ಲಕ್ಷ ಹಣ ಕದ್ದೊಯ್ದಿದ್ದಾರೆ.ಬೆಂಗಳೂರಿನ ಗುರುಕಿರಣ್ ನಿವಾಸದಲ್ಲಿ ಅವರ ಅತ್ತೆ ಇಟ್ಟಿದ್ದ 2.50 ಲಕ್ಷ ಹಣವನ್ನು ಜ.5 ರಂದು ಖದೀಮರು ಕಳ್ಳತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅವರ ಮನೆಕೆಲದಾಕೆ ಯ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

BREAKING: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ

Posted by Vidyamaana on 2024-06-09 19:02:49 |

Share: | | | | |


BREAKING: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ

ನವದೆಹಲಿ: ಎನ್ ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಇಂದು ಬರಲಿದೆ. ಮೋದಿ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಹೊತ್ತಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ ನಡ್ಡಾ ರಾಜೀನಾಮೆ ನೀಡಿದ್ದಾರೆ.

ಸಾಲುಮರದ ತಿಮ್ಮಕ್ಕ ನಿಧನದ ಸುದ್ದಿ ಸುಳ್ಳು: ದತ್ತುಪುತ್ರ ವನಸಿರಿ ಸ್ಪಷ್ಟನೆ

Posted by Vidyamaana on 2023-10-05 12:12:10 |

Share: | | | | |


ಸಾಲುಮರದ ತಿಮ್ಮಕ್ಕ ನಿಧನದ ಸುದ್ದಿ ಸುಳ್ಳು: ದತ್ತುಪುತ್ರ ವನಸಿರಿ ಸ್ಪಷ್ಟನೆ

ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರು ಅನಾರೋಗ್ಯದ ಹಿನ್ನೆಲೆ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಧನದ ಸುದ್ದಿ ಹಾಕಲಾಗಿದೆ.

ಈ ಬಗ್ಗೆ ತಿಮ್ಮಕ್ಕ ಅವರ ದತ್ತುಪುತ್ರ ವನಸಿರಿ ಮಾಹಿತಿ ನೀಡಿದ್ದು, ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.

ಬಡ ವಿದ್ಯಾರ್ಥಿನಿಯ ಶುಲ್ಕ ಪಾವತಿಸಿದ ಶಾಸಕರು

Posted by Vidyamaana on 2024-01-19 22:22:22 |

Share: | | | | |


ಬಡ ವಿದ್ಯಾರ್ಥಿನಿಯ ಶುಲ್ಕ ಪಾವತಿಸಿದ ಶಾಸಕರು

ಪುತ್ತೂರು: ಕೊಡಿಪ್ಪಾಡಿ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಪುತ್ತೂರು ಶಾಸಕರು ಆರ್ಥಿಕ ನೆರವು ನೀಡಿದರು.


ಬಡ ವಿದ್ಯಾರ್ಥಿನಿಯಾದ ಈಕೆಯ ತಂದೆ ಇತ್ತೀಚೆಗೆ ನಿಧನರಾಗಿದ್ದರು. ಆರ್ಥಿಕ ಸಂಕಷ್ಟದಿಂದ ಆಕೆಯ ಶಿಕ್ಷಣಕ್ಕೆ ಅಡಚಣೆಯಗಿತ್ತು. ಈ ಬಗ್ಗೆ ಕುಟುಂಬ ನೆರವು ನೀಡುವಂತೆ ಶಾಸಕರಿಗೆ ಮನವಿ ಮಾಡಿದ್ದರು. ವಿದ್ಯಾರ್ಥಿನಿಯ ಶಾಲೆಯ ಶುಲ್ಕವನ್ನು ಪೂರ್ತಿಯಾಗಿ ಪಾವತಿಸುವ ಮೂಲಕ ಬಡ ಕುಟುಂಬಕ್ಕೆ ಶಾಸಕರು ಆಸರೆಯಾಗಿದ್ದಾರೆ.

Recent News


Leave a Comment: