ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ಅರಂತೋಡು : ತಡರಾತ್ರಿ ಭೀಕರ ಕಾರು ಅಪಘಾತ - ಓರ್ವನಿಗೆ ಗಂಭೀರ ಗಾಯ

Posted by Vidyamaana on 2024-06-23 11:03:07 |

Share: | | | | |


ಅರಂತೋಡು : ತಡರಾತ್ರಿ ಭೀಕರ ಕಾರು ಅಪಘಾತ - ಓರ್ವನಿಗೆ ಗಂಭೀರ ಗಾಯ

ಅರಂತೋಡು: ಭೀಕರ ಕಾರು ಅಪಘಾತ ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.

ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್‌ ಮಂಡ್ಯಕ್ಕೆ ಹೊರಟಿದ್ದರು.

ಉಡುಪಿಯಲ್ಲಿ ಪತ್ನಿಯನ್ನು ಕಡಿದು ಕೊಂದು ಹಾಕಿದ ಪತಿ!

Posted by Vidyamaana on 2024-08-23 14:49:57 |

Share: | | | | |


ಉಡುಪಿಯಲ್ಲಿ ಪತ್ನಿಯನ್ನು ಕಡಿದು ಕೊಂದು ಹಾಕಿದ ಪತಿ!

ಉಡುಪಿ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು (Murder Case ) ಹರಿದಿದೆ. ಪತಿಯೇ ತನ್ನ ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಶಂಕೆ ಇದೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ(30) ಕೊಲೆ ಆರೋಪಿಯಾಗಿದ್ದಾನೆ.ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ.

ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಮುಂಜಾನೆ ಪತ್ನಿಯನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದ ಎನ್ನುವ ಮಾಹಿತಿ ಇದೆ.

ಶಂಕೆ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು,ಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

Posted by Vidyamaana on 2023-12-24 12:17:35 |

Share: | | | | |


ಶೀಘ್ರದಲ್ಲೇ ಶಾಲೆಗಳಿಗೆ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ವಿಸ್ತರಣೆ: ಕೇಂದ್ರ ಮಾಹಿತಿ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ ಕಲ್ಪಿಸಿದಂತೆ ಉನ್ನತ ಶಿಕ್ಷಣದೊಂದಿಗೆ ತಡೆರಹಿತ ಏಕೀಕರಣವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತನ್ನ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ(1 nation, 1 student ID) ಉಪಕ್ರಮವನ್ನು ಶೀಘ್ರದಲ್ಲೇ ಶಾಲೆಗಳಿಗೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಉಪಕ್ರಮದ ಅಡಿಯಲ್ಲಿ, 12-ಅಂಕಿಯ ವಿಶಿಷ್ಟ ID ಯೊಂದಿಗೆ ಸ್ವಯಂಚಾಲಿತ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ (APAAR) ಕಾರ್ಡ್ ಅನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತದೆ. ಕೇಂದ್ರವು ಉನ್ನತ ಶಿಕ್ಷಣದಲ್ಲಿ ಈ ಉಪಕ್ರಮವನ್ನು ಪ್ರಾರಂಭಿಸಿದೆ ಮತ್ತು ಇದೀಗ 22 ಮಿಲಿಯನ್ ವಿದ್ಯಾರ್ಥಿಗಳಿಗೆ APAAR ID ಗಳನ್ನು ನೀಡಲಾಗುತ್ತಿದೆ.


APAAR, ಆಧಾರ್-ದೃಢೀಕರಿಸಿದ ಐಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಬ್ಯಾಂಕ್ ಆಫ್ ಕ್ರೆಡಿಟ್ (ABC) ಗೆ ಗೇಟ್‌ವೇ ಆಗಿದೆ. ಇದು ಕ್ರೆಡಿಟ್‌ಗಳ ಡಿಜಿಟಲ್ ರೆಪೊಸಿಟರಿಯಾಗಿದೆ. ಅಂಕಪಟ್ಟಿಗಳು ಮತ್ತು ಪ್ರಮಾಣಪತ್ರಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಬಹುದಾದ ಡಿಜಿಟಲ್ ಲಾಕರ್ ಡಿಜಿಲಾಕರ್ ಅನ್ನು ಪ್ರವೇಶಿಸಲು ಸಹ ಇದನ್ನು ಬಳಸಲಾಗುತ್ತದೆ. APAAR ಅಂತಿಮವಾಗಿ ಪೂರ್ವ ಪ್ರಾಥಮಿಕದಿಂದ PhD ವರೆಗಿನ ವಿದ್ಯಾರ್ಥಿಗಳಿಗೆ ಜೀವಮಾನದ ID ಆಗಿರುತ್ತದೆ.ಶಿಕ್ಷಣವು ರಾಜ್ಯದ ವಿಷಯವಾಗಿರುವುದರಿಂದ, NEP 2020 ರ ಅಡಿಯಲ್ಲಿ ರಾಜ್ಯಗಳು ಯಾವುದೇ ಉಪಕ್ರಮವನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಲ್ಲ.


ಶಾಲೆಗಳಲ್ಲಿ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ ಉಪಕ್ರಮದ ಅನುಷ್ಠಾನದ ಕುರಿತು ವಿವಿಧ ರಾಜ್ಯ ಸರ್ಕಾರಗಳೊಂದಿಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಶಿಕ್ಷಣ ಸಚಿವಾಲಯದ ಅಡಿಯಲ್ಲಿರುವ ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ವೇದಿಕೆಯ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಹೇಳಿದರು.


"ಇದು ವಿದ್ಯಾರ್ಥಿಗಳು, ಶಾಲೆಗಳು ಮತ್ತು ಸಂಪೂರ್ಣ ಶಿಕ್ಷಣ ವ್ಯವಸ್ಥೆಗೆ ವಿಷಯಗಳನ್ನು ಸುಲಭಗೊಳಿಸುತ್ತದೆ. ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪತ್ತೆಹಚ್ಚಲು ಇದು ಅವರಿಗೆ ಸಹಾಯ ಮಾಡುತ್ತದೆ. ಪೋಷಕರು ವರ್ಗಾವಣೆ ಮಾಡಬಹುದಾದ ಉದ್ಯೋಗದಲ್ಲಿರುವ ವಿದ್ಯಾರ್ಥಿಗಳಿಗೆ ಇದು ಸಹಾಯ ಮಾಡುತ್ತದೆ. ಅವರು ತಮ್ಮ ಶಾಲೆಗಳನ್ನು ಅಧಿವೇಶನದ ಮಧ್ಯದಲ್ಲಿ ಬದಲಾಯಿಸಿದರೆ, ಇತರ ಶಾಲೆಗಳು ತಮ್ಮ ABC ಖಾತೆಗೆ ಅನನ್ಯ ID ಯನ್ನು ಬಳಸಿಕೊಂಡು ಲಾಗ್ ಇನ್ ಮಾಡುವ ಮೂಲಕ ತಮ್ಮ ಪ್ರಗತಿಯನ್ನು ಪ್ರವೇಶಿಸಬಹುದು ಎಂದು ಹೇಳಿದರು.


ಈ ವರ್ಷ ಕೇಂದ್ರ ಸರ್ಕಾರವು ರಾಷ್ಟ್ರೀಯ ಸಾಲ ಚೌಕಟ್ಟನ್ನು (NCrF) ಪರಿಚಯಿಸಿದೆ. ಅದರಲ್ಲಿ ಶಾಲೆ ಮತ್ತು ವೃತ್ತಿಪರ ಶಿಕ್ಷಣವನ್ನು ಸೇರಿಸಲಾಗಿದೆ. NCrF ಅಡಿಯಲ್ಲಿ, ವಿದ್ಯಾರ್ಥಿಗಳು ಶಾಲೆಯಿಂದಲೇ ಕ್ರೆಡಿಟ್‌ಗಳನ್ನು ಗಳಿಸುತ್ತಾರೆ. ಅದನ್ನು ಅವರ ABC ಖಾತೆಗಳಲ್ಲಿ ಸಂಗ್ರಹಿಸಲಾಗುತ್ತದೆ.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 19

Posted by Vidyamaana on 2023-09-19 06:22:04 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 19

ಶಾಸಕರ ನಾಳಿನ ಕಾರ್ಯಕ್ರಮ

19 /9/2023


ಬೆಳಿಗ್ಗೆ 10 ಗಂಟೆಗೆ  ಪಾಣಾಜೆ ಆರ್ಲಪದವು ಗಣೇಶೋತ್ಸವ



11 ಗಂಟೆಗೆ ಬೆಟ್ಟಂಪಾಡಿ ಗಣೇಶೋತ್ಸವ


12 ಗಂಟೆಗೆ  ಸಂಪ್ಯ ಗಣೇಶೋತ್ಸವ


12 .30 ಕ್ಕೆ ಮುಂಡೂರು ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದಲ್ಲಿ ಗಣೇಶೋತ್ಸವ


ಮಧ್ಯಾಹ್ನ 1.30 ಮುಕ್ಕೂರು ಶಾಲೆಯಲ್ಲಿ ಚೌತಿ


2 ಗಂಟೆಗೆ ಪುತ್ತೂರು  ಪ್ರಗತಿ ಸ್ಟಡಿ ಸೆಂಟರ್ನಲ್ಲಿ ಗಣೇಶೋತ್ಸವ


3.30  ಗಂಟೆಗೆ ಮರಾಠಾ ಗಣೇಶೋತ್ಸವ ಪುತ್ತೂರು


ಸಂಜೆ 5 ,ಗಂಟೆಗೆ ಫಿಲೋಮಿನಾ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

ಸರಕಾರಿ ಕಚೇರಿ ಜಾಲಾಡಿದ ಕಳ್ಳರು

Posted by Vidyamaana on 2023-09-05 02:56:06 |

Share: | | | | |


ಸರಕಾರಿ ಕಚೇರಿ ಜಾಲಾಡಿದ ಕಳ್ಳರು

ಪುತ್ತೂರು: ಇಲ್ಲಿನ ಕುಂಬ್ರದಲ್ಲಿ ಸರಕಾರಿ ಕಚೇರಿಗಳನ್ನೇ ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಕುಂಬ್ರದಲ್ಲಿರುವ ಒಳಮೊಗ್ರು ಗ್ರಾಮ ಪಂಚಾಯತ್ ಕಚೇರಿ, ಗ್ರಾಮ ಕರಣಿಕರ ಕಚೇರಿ, ಕೆ.ಪಿ.ಎಸ್. ಸ್ಕೂಲಿಗೆ ಕಳ್ಳರು ನುಗ್ಗಿದ್ದಾರೆ. ಕಚೇರಿಗಳ ಬಾಗಿಲು ಮುರಿದು ಒಳ ನುಗ್ಗಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಬೈಕ್ ಸ್ಕಿಡ್ ನಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಸಾದ್ - ಚಿಕಿತ್ಸೆ ಫಲಕಾರಿಯಾಗದೆ ನಿಧನ

Posted by Vidyamaana on 2024-03-06 16:35:52 |

Share: | | | | |


ಬೈಕ್ ಸ್ಕಿಡ್ ನಲ್ಲಿ ಗಂಭೀರ   ಗಾಯಗೊಂಡಿದ್ದ ಪ್ರಸಾದ್ - ಚಿಕಿತ್ಸೆ ಫಲಕಾರಿಯಾಗದೆ ನಿಧನ

ಪುತ್ತೂರು : ಪರ್ಲಡ್ಕ ಬೈಪಾಸ್ ಬಳಿ ಫೆ.29 ರಂದು ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಮೆಕ್ಯಾನಿಕ್ ಶಾಂತಿಗೋಡಿನ ಯುವಕ ಪ್ರಸಾದ್ ಚಿಕಿತ್ಸೆ ಫಲಕಾರಿಯಾಗದೆ ಮಾ 06 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಶಾಂತಿಗೋಡು ಗ್ರಾಮದ ಬೀರ್ಮಕಜೆ ನಿವಾಸಿ ಪುತ್ತೂರು ಬೈಪಾಸ್‌ ರಸ್ತೆಯ ಗ್ಯಾರೆಜೊಂದರಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ (27) ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದರು.

Recent News


Leave a Comment: