ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ವಾಟ್ಸಾಪ್ ಚಾನೆಲ್ ಸೇರಿದ ಪ್ರಧಾನಿ ಮೋದಿ : ನಮೋ ಸಂಪರ್ಕಿಸೋದು ಈಗ ಇನ್ನಷ್ಟು ಸುಲಭ

Posted by Vidyamaana on 2023-09-20 08:20:04 |

Share: | | | | |


ವಾಟ್ಸಾಪ್ ಚಾನೆಲ್ ಸೇರಿದ ಪ್ರಧಾನಿ ಮೋದಿ : ನಮೋ ಸಂಪರ್ಕಿಸೋದು ಈಗ ಇನ್ನಷ್ಟು ಸುಲಭ

ನವದೆಹಲಿ: ಬುಧವಾರವಷ್ಟೇ ಮೆಟಾ ಕಂಪನಿ(Meta) ಲಾಂಚ್ ಮಾಡಿದ್ದ ವಾಟ್ಸಾಪ್‌ನ ಹೊಸ ಫೀಚರ್ ‘ಚಾನೆಲ್’ (WhatsApp Channel) ಈಗ ಜನಪ್ರಿಯವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೂ ಈಗ ವಾಟ್ಸಾಪ್‌ ಚಾನೆಲ್ ಆರಂಭಿಸಿದ್ದಾರೆ. ವಾಟ್ಸಾಪ್‌ ಚಾನೆಲ್‌ನಲ್ಲಿ ಅಡ್ಮಿನ್‌ಗಳು (WhatsApp Channel Admin), ತಮ್ಮ ಫಾಲೋವರ್ಸ್‌ಗೆ ಪಠ್ಯ, ಟೆಕ್ಸ್ಟ್, ಫೋಟೋ, ವಿಡಿಯೋ, ಸ್ಟಿಕರ್ಸ್ ಷೇರ್ ಮಾಡಬಹುದು. ಜತೆಗೆ ಸಮೀಕ್ಷೆ ಕೂಡ ಕೈಗೊಳ್ಳಬಹುದು.

Read more.....

ಜನ ಸಂಪರ್ಕಕ್ಕೆ ವಾಟ್ಸಪ್ ಚಾನೆಲ್ ಆರಂಭಿಸಿದ ದೇಶದ ಮೊಟ್ಟ ಮೊದಲ ಸಿಎಂ ಸಿದ್ದರಾಮಯ್ಯ


ಏನಿದು ವಾಟ್ಸಾಪ್ ಚಾನೆಲ್?

ವಾಟ್ಸಾಪ್ ಚಾನೆಲ್, ಇದು ಒನ್‌ ವೇ ಬ್ರಾಡಕಾಸ್ಟರ್ ಸಾಧನವಾಗಿದೆ. ಅಡ್ಮಿನ್‌ಗಳು ಫಾಲೋವರ್ಸ್‌ಗಳೊಂದಿಗೆ ಪಠ್ಯದಿಂದ ಮಲ್ಟಿಮೀಡಿಯಾ ಮತ್ತು ಸಮೀಕ್ಷೆಗಳವರೆಗೆ ವಿವಿಧ ರೀತಿಯ ವಿಷಯವನ್ನು ಹಂಚಿಕೊಳ್ಳಲು ಇದು ಅನುಮತಿಸುತ್ತದೆ. ವ್ಯಕ್ತಿಗತ ಬಳಕೆದಾರರು ತಮ್ಮ ನೆಚ್ಚಿನ ವ್ಯಕ್ತಿಗಳು ಮತ್ತು ಸಂಸ್ಥೆಗಳ ಚಟುವಟಿಕೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿ ಇರಲು ಇದರಿಂದ ಸಾಧ್ಯವಾಗಲಿದೆ. ಕುಟುಂಬ, ಸ್ನೇಹಿತರು ಮತ್ತು ಸಮುದಾಯಗಳೊಂದಿಗೆ ನಿಮ್ಮ ನಿಯಮಿತ ಚಾಟ್‌ಗಳಿಂದ ಭಿನ್ನವಾಗಿರುವ “ಅಪ್‌ಡೇಟ್‌ಗಳು” ಹೆಸರಿನ ಮೀಸಲಾದ ಟ್ಯಾಬ್ ಮೂಲಕ ವಾಟ್ಸಾಪ್ ಚಾನೆಲ್‌ ಪ್ರವೇಶಿಸಬಹುದಾಗಿದೆ.


ವಾಟ್ಸಾಪ್ ಚಾನೆಲ್ ಕಾರ್ಯ ಹೇಗೆ?

ಚಾನೆಲ್‌ಗಳು ಒನ್‌ವೇ ಬ್ರಾಡ್‌ಕಾಸ್ಟ್ ಆಗಿರುವುದರಿಂದ ಅಡ್ಮಿನ್‌ಗೆ ಮಾತ್ರ ಷೇರ್ ಮಾಡುವ ಹಕ್ಕಿರುತ್ತದೆ. ಬಳಕೆದಾರರು ಎಮೋಜಿಗಳ ಮೂಲಕ ಮಾತ್ರವೇ ಪ್ರತಿಕ್ರಿಯೆ ನೀಡಬಹುದು. ಹಾಗೆಯೇ, ಚಾನೆಲ್ ಪೋಸ್ಟ್‌ಗೆ ಎಷ್ಟು ರಿಯಾಕ್ಷನ್‌ಗಳು ಬಂದಿವೆ ಎಂಬುದನ್ನು ಲೆಕ್ಕ ಹಾಕಬಹುದು.


30 ದಿನಗಳವರೆಗೆ ಮಾತ್ರ ಅಡ್ಮಿನ್‌ಗಳಿಗೆ ತಮ್ಮ ಕಂಟೆಂಟ್ ಅಪ್‌ಡೇಟ್ ಮಾಡುವ ಇಲ್ಲವೇ ಬದಲಾವಣೆ ಮಾಡುವ ಅವಕಾಶವನ್ನು ಈ ಹೊಸ ಫೀಚರ್ ಒದಗಿಸುತ್ತದೆ. ಅದರ ವಾಟ್ಸಾಪ್, ತನ್ನ ಪ್ಲಾಟ್‌ಫಾರ್ಮ್ ಸರ್ವರ್‌ಗಳಿಂದ ಹಳೆಯ ಅಪ್‌ಡೇಟ್‌ಗಳನ್ನು ಸ್ವಯಂಚಾಲಿತವಾಗಿ ಡಿಲಿಟ್ ಮಾಡುತ್ತದೆ.ಇದಲ್ಲದೆ, ನೀವು ಚಾಟ್‌ಗಳು ಅಥವಾ ಗ್ರೂಪ್‌ಗಳಿಗೆ ಅಪ್‌ಡೇಟ್ಸ್ ಫಾರ್ವರ್ಡ್ ಮಾಡಿದಾಗ, ಅದು ಸ್ವಯಂಚಾಲಿತವಾಗಿ ಮೂಲ ಚಾನಲ್‌ಗೆ ಲಿಂಕ್ ಒಳಗೊಂಡಿರುತ್ತದೆ. ಇದರಿಂದಾಗಿ ಚಾನೆಲ್‌ನ ಕಂಟೆಂಟ್ ಹುಡುಕುವ ಇತರರಿಗೆ ಸುಲಭ ಪ್ರವೇಶ ಒದಗಿಸಲು ಸಾಧ್ಯವಾಗುತ್ತದೆ.


ನರೇಂದ್ರ ಮೋದಿ ವಾಟ್ಸಾಪ್ ಚಾನೆಲ್‌ ಫಾಲೋ ಮಾಡುವುದು ಹೇಗೆ?

ಮೊದಲಿಗೆ ನಿಮ್ಮ ವಾಟ್ಸಾಪ್‌ ಅಪ್‌ಡೇಟ್ ಆಗಿದೆಯಾ ಚೆಕ್ ಮಾಡಿಕೊಳ್ಳಿ. ಒಂದೊಮ್ಮೆ ಆಗಿರದಿದ್ದರೆ ಗೂಗಲ್ ಪ್ಲೇಸ್ಟೋರ್‌ಗೆ ಹೋಗಿ, ವಾಟ್ಸಾಪ್ ಅಪ್‌ಡೇಟ್ ಮಾಡಿಕೊಳ್ಳಿ. ಇಷ್ಟಾದ ಮೇಲೆ ಮೊದಲಿಗೆ ವಾಟ್ಸಾಪ್ ತೆರೆಯಿರಿ ಮತ್ತು ಅಪ್‌ಡೇಟ್‌ಗೆ ನ್ಯಾವಿಗೇಟ್ ಮಾಡಿ. ಬಳಿಕ, ನಿಮ್ಮ ಸ್ಕ್ರೀನ್‌ನ ಕೆಳಭಾಗದಲ್ಲಿ, ನೀವು “Find Channels” ಆಯ್ಕೆಯನ್ನು ಕಾಣುತ್ತೀರಿ. ಅದರ ಮೇಲೆ ಟ್ಯಾಪ್ ಮಾಡಿ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಲಭ್ಯವಿರುವ ಚಾನೆಲ್‌ಗಳ ಪಟ್ಟಿ ನಿಮ್ಮ ಮುಂದೆ ಗೋಚರವಾಗುತ್ತದೆ. ಚಾನೆಲ್‌ ಸೇರಲು, ಚಾನೆಲ್ ಮುಂದೆ ಇರುವ plus icon ಮೇಲೆ ಟ್ಯಾಪ್ ಮಾಡಿ. ಮತ್ತೊಂದು ರೀತಿಯಲ್ಲೂ ನೀವು ಚಾನೆಲ್ ಜಾಯಿನ್ ಆಗಬಹುದು. ಇದಕ್ಕಾಗಿ ನೀವು, ನಿಮ್ಮ ಪರದೆಯ ಮೇಲಿನ ಬಲ ಮೂಲೆಯಲ್ಲಿರುವ ಹುಡುಕಾಟ ಐಕಾನ್ ಅನ್ನು ನೀವು ಬಳಸಬಹುದು ಅಥವಾ ಕ್ಲಿಕ್ ಮಾಡಿ ಮತ್ತು ಹುಡುಕಬಹುದು.

ನಿವೃತ್ತ ಶಿಕ್ಷಕ ಚಂದ್ರಶೇಖರ ಕುಂಜತ್ತಾಯ ನಿಧನ

Posted by Vidyamaana on 2024-05-23 09:53:42 |

Share: | | | | |


ನಿವೃತ್ತ ಶಿಕ್ಷಕ  ಚಂದ್ರಶೇಖರ ಕುಂಜತ್ತಾಯ ನಿಧನ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಚಂದ್ರಶೇಖರ ಕುಂಜತ್ತಾಯ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ - ನೊಂದು ಯುವಕ ಆತ್ಮಹತ್ಯೆ

Posted by Vidyamaana on 2024-02-09 07:27:56 |

Share: | | | | |


ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ - ನೊಂದು ಯುವಕ ಆತ್ಮಹತ್ಯೆ

ಬೆಂಗಳೂರು :ಪ್ರೀತಿಸಿದ ಯುವಕನೋರ್ವ ತಾನು ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧವಿದೆ ಎಂದು ತಿಳಿದು ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಈ ಘಟನೆ ಕುರಿತು ಮೃತನ ಕುಟುಂಬಸ್ಥರು ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.


ಅನ್ಬರಾಸನ್‌ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದ್ಯಾ ಎಂಬಾಕೆಗೆ ಈ ಹಿಂದೆ ಮದುವೆಯಾಗಿದ್ದು, ವಿಚ್ಛೇದನ ಪಡೆದಿದ್ದು. ನಂತರ ಅನ್ಬರಾಸನ್‌ ಜೊತೆ ಪ್ರೀತಿಯಾಗಿತ್ತು. ಇಬ್ಬರೂ ಆರು ತಿಂಗಳಿನಿಂದ ಲಿವಿಂಗ್‌ ರಿಲೇಷನ್‌ಶಿಪ್‌ನಲ್ಲಿದ್ದರು. ಇಬ್ಬರೂ ತಾವು ಪತಿ ಪತ್ನಿ ಎಂದು ಹೇಳಿ ಚಿಕ್ಕನಾಗಮಂಗಲದ ಬಾಡಿಗೆ ಮನೆಯಲ್ಲಿದ್ದರು.ವಿದ್ಯಾ ಐಟಿ ಕಂಪನಿ ಉದ್ಯೋಗಿ. ಅನ್ಬರಾಸನ್‌ ಪ್ಲಿಪ್‌ ಕಾರ್ಟ್‌ನಲ್ಲಿ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ. ಆದರೆ ವಿದ್ಯಾ ಅನ್ಬರಾಸನ್‌ ಜೊತೆ ಪ್ರೀತಿಯಲ್ಲಿರುವಾಗಲೇ ಇನ್ನೋರ್ವನ ಸಹವಾಸಕ್ಕೆ ಬಿದ್ದಿದ್ದಾಳೆ. ಸಂತೋಷ್‌ ಎಂಬಾತನ ಜೊತೆ ವಿದ್ಯಾ ಅಕ್ರಮ ಸಂಬಂಧ ಹೊಂದಿದ್ದಳು. ಅನ್ಬರಾಸನ್‌ ತನ್ನ ಕಣ್ಣಾರೆ ಸಂತೋಷ್‌ ಮತ್ತು ವಿದ್ಯಾ ಜೊತೆಯಲ್ಲಿರುವುದನ್ನು ಕಂಡಿದ್ದ. ಇದರಿಂದ ನೊಂದ ಅನ್ಬರಾಸನ್‌ ವಿದ್ಯಾಗೆ ಬುದ್ಧಿವಾದ ಹೇಳಿದರೂ ಕ್ಯಾರೆ ಎನ್ನದ ವಿದ್ಯಾ ತನ್ನ ಚಾಳಿ ಮುಂದುವರಿಸಿದ್ದಾಳೆ. ಇದರಿಂದ ನೊಂದ ಅನ್ಬರಸನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪ ಮಾಡಿದ್ದಾರೆ.


ಅನ್ಬರಸನ್‌ ತಂದೆ ತಾಯಿ ಯುಡಿಆರ್‌ ಪ್ರಕರಣವನ್ನು ದಾಖಲು ಮಾಡಿದ್ದರು. ಆದರೆ ವಿದ್ಯಾ ಜೊತೆ ಮಾತನಾಡಿರುವ ಕಾಲ್‌ರೆಕಾರ್ಡ್‌ ಲಭ್ಯವಾಗಿದ್ದು, ಅದರ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂದು ಪ್ರಕರಣ ದಾಖಲು ಮಾಡಿದ್ದು, ವಿದ್ಯಾ, ಸಂತೋಷ್‌ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು KSRTCಗೆ ನವ ಚೈತನ್ಯ ನೀಡಿದ ಶಕ್ತಿ ಯೋಜನೆ

Posted by Vidyamaana on 2023-07-11 16:05:00 |

Share: | | | | |


ಪುತ್ತೂರು KSRTCಗೆ ನವ ಚೈತನ್ಯ ನೀಡಿದ ಶಕ್ತಿ ಯೋಜನೆ

ಪುತ್ತೂರು: ಶಕ್ತಿ ಯೋಜನೆ ಕಾರ್ಯರೂಪಕ್ಕೆ ಬಂದ ಮಹಿಳಾ ಪ್ರಯಾಣಿಕರ ಸಂಖ್ಯೆಯಷ್ಟೇ ಹೆಚ್ಚಳಗೊಂಡದ್ದು ಅಲ್ಲ, ಕೆ.ಎಸ್.ಆರ್.ಟಿ.ಸಿ.ಯ ಆದಾಯವೂ ಹೆಚ್ಚಳಗೊಂಡಿದೆ. ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗವೂ ಹಿಂದಿನ ತನ್ನ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಕಳೆದೊಂದು ತಿಂಗಳಿನಲ್ಲಿ ಪಡೆದುಕೊಂಡಿದೆ.

ಸಾವಿರಾರು ಬಸ್ ಪಾಸ್ ನೀಡಿದರೂ, ಲಕ್ಷಾಂತರ ಪ್ರಯಾಣಿಕರು ಓಡಾಡಿದರೂ ಕೆ.ಎಸ್.ಆರ್.ಟಿ.ಸಿ. ಪ್ರತಿವರ್ಷ ನಷ್ಟದಲ್ಲಿಯೇ ಕಾರ್ಯನಿರ್ವಹಿಸುತ್ತಿತ್ತು. ಹಾಗಾಗಿ ಪ್ರತಿವರ್ಷ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳ ಮೇಲೆ ಖರ್ಚು ಸರಿದೂಗಿಸುವ ಒತ್ತಡವೂ ಇತ್ತು. ಆದರೆ ರಾಜ್ಯ ಸರ್ಕಾರ ಚುನಾವಣೆಗೆ ಮೊದಲು ನೀಡಿದ ಭರವಸೆಯಂತೆ, ಶಕ್ತಿ ಯೋಜನೆಯನ್ನು ಜಾರಿಗೆ ತಂದ ಬಳಿಕ ಹಲವು ಬದಲಾವಣೆಗಳಿಗೆ ಕಾರಣವಾಗಿದೆ.

ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಬಸ್ ಟಿಕೇಟ್ ಉಚಿತವಾಗಿ ನೀಡಿದ್ದು, ಇದು ಮಹಿಳಾ ಪ್ರಯಾಣಿಕರು ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿಯೇ ಓಡಾಡುವಂತೆ ಮಾಡಿದೆ. ಈ ಹಿಂದೆ ಓಡಾಡುತ್ತಿದ್ದ ಮಹಿಳಾ ಪ್ರಯಾಣಿಕರಿಗಿಂತಲೂ ಹೆಚ್ಚಿನ ಸಂಖ್ಯೆಯ ಮಹಿಳೆಯರು ಬಸ್ ಪ್ರಯಾಣವನ್ನು ಅವಲಂಭಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ. ಲೆಕ್ಕಾಚಾರದ ಪ್ರಕಾರ ದಿನಕ್ಕೆ ಸರಾಸರಿ 30 ಸಾವಿರದಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.


ಶಕ್ತಿ ಯೋಜನೆ ಮೊದಲು – ನಂತರ:

ಶಕ್ತಿ ಯೋಜನೆಯನ್ನು ಜಾರಿಗೆ ತರುವ ಮೊದಲು ದಿನವೊಂದಕ್ಕೆ ಸರಾಸರಿ 1 ಲಕ್ಷದ 60 ಸಾವಿರದಷ್ಟು ಮಂದಿ ಪ್ರಯಾಣಿಸುತ್ತಿದ್ದರು. ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಈ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ದಿನವೊಂದಕ್ಕೆ 30 ಸಾವಿರದಷ್ಟು ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, 1 ಲಕ್ಷದ 90 ಸಾವಿರದಷ್ಟು ಪ್ರಯಾಣಿಕರು ಈಗ ದಿನನಿತ್ಯ ಪ್ರಯಾಣಿಸುತ್ತಿದ್ದಾರೆ. ಅಂದರೆ ದಿನವೊಂದಕ್ಕೆ ಸುಮಾರು 10ರಿಂದ 12 ಲಕ್ಷ ರೂ.ನಷ್ಟು ಆದಾಯ ಹೆಚ್ಚಳಗೊಂಡಿದೆ.


5 ಡಿಪೋ:

ಕೆ.ಎಸ್.ಆರ್.ಟಿ.ಸಿ. ಪುತ್ತೂರು ವಿಭಾಗದ ಅಡಿಯಲ್ಲಿ 5 ಡಿಪೋಗಳು ಬರುತ್ತವೆ. ಇದರಲ್ಲಿ ಪುತ್ತೂರು ಸೇರಿದಂತೆ, ಬಿ.ಸಿ.ರೋಡ್, ಧರ್ಮಸ್ಥಳ, ಸುಳ್ಯ, ಮಡಿಕೇರಿ ಡಿಪೋಗಳು ಒಳಗೊಂಡಿವೆ. ಈ 5 ಡಿಪೋಗಳಲ್ಲಿಯೂ ಪ್ರಯಾಣಿಕರ ಸಂಖ್ಯೆ ಹೆಚ್ಚಳಗೊಂಡಿದ್ದು, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಕೊಂಚ ನಿಟ್ಟುಸಿರುಬಿಡುವಂತೆ ಮಾಡಿದೆ.


ಒಂದು ತಿಂಗಳ ಲೆಕ್ಕಾಚಾರ:

ಶಕ್ತಿ ಯೋಜನೆಯನ್ನು ಜಾರಿಗೆ ತಂದು ಹೆಚ್ಚು – ಕಡಿಮೆ ಒಂದು ತಿಂಗಳಾಗಿದೆ. ಈ ಒಂದು ತಿಂಗಳ ಲೆಕ್ಕಾಚಾರ ಹೀಗಿತ್ತು. ಮುಂದೆ ಹೇಗಿರಬಹುದು ಎನ್ನುವ ಊಹೆ ಇಲ್ಲ. ಆದರೆ ಸಂಸ್ಥೆ ಹೆಚ್ಚಿನ ಆದಾಯವನ್ನು ಪಡೆಯುವಂತಾಗಿರುವುದು ಅಧಿಕಾರಿಗಳಿಗೆ ಸಮಾಧಾನದ ಸಂಗತಿ.


ಕೇಂದ್ರ ಕಚೇರಿಯಿಂದ ಕ್ಲೈಮ್:

ಪ್ರತಿ ತಿಂಗಳ ಲೆಕ್ಕಾಚಾರವನ್ನು ಪುತ್ತೂರು ವಿಭಾಗದಿಂದ ಕೇಂದ್ರ ಕಚೇರಿಗೆ ಕಳುಹಿಸಿಕೊಡಲಾಗುತ್ತದೆ. ಕೇಂದ್ರ ಕಚೇರಿಯ ಅಧಿಕಾರಿಗಳು ರಾಜ್ಯದ ಒಟ್ಟು ಲೆಕ್ಕಾಚಾರವನ್ನು ತೆಗೆದುಕೊಂಡು, ರಾಜ್ಯ ಸರಕಾರಕ್ಕೆ ಸಲ್ಲಿಸುತ್ತಾರೆ. ಬಳಿಕ ರಾಜ್ಯ ಸರ್ಕಾರ ಆ ಅನುದಾನವನ್ನು ಬಿಡುಗಡೆ ಮಾಡುತ್ತದೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ, ಪ್ರತಿ ತಿಂಗಳಿಗೊಮ್ಮೆಯಂತೆ ರಾಜ್ಯ ಸರ್ಕಾರಕ್ಕೆ ಕೆ.ಎಸ್.ಆರ್.ಟಿ.ಸಿ. ಕ್ಲೈಮ್ ಮಾಡಬೇಕಾಗುತ್ತದೆ.


ಲಾಭದಾಯಕವೇ?

ಶಕ್ತಿ ಯೋಜನೆಯನ್ನು ಜಾರಿಗೆ ತಂದ ಬಳಿಕ ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯ ಆದಾಯ ಹೆಚ್ಚಳಗೊಂಡಿದ್ದು ನಿಜ. ಆದರೆ ಸಂಸ್ಥೆ ಎಷ್ಟರಮಟ್ಟಿಗೆ ಲಾಭದಾಯಕ ಎನ್ನುವ ಮಾಹಿತಿ ಇನ್ನು ಲಭ್ಯವಾಗಿಲ್ಲ. ಶಕ್ತಿ ಯೋಜನೆಯ ಜಾರಿಯ ಬಳಿಕ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್ಸಿನಲ್ಲಿಯೇ ಪ್ರಯಾಣಿಸಲು ಮುಂದೆ ಬಂದಿದ್ದಾರೆ. ಇದು ಒಂದು ರೀತಿಯಲ್ಲಿ ಸಾರಿಗೆ ಬಸ್’ಗಳ ಪ್ರಯಾಣಕ್ಕೆ ಉತ್ತೇಜನ ನೀಡಿದಂತಾಗಿದೆ.


ತಿಂಗಳಿಗೊಮ್ಮೆ ಮಾಹಿತಿ: ಡಿಸಿ ಜಯಕರ ಶೆಟ್ಟಿ

ಶಕ್ತಿ ಯೋಜನೆಯನ್ನು ಜಾರಿಗೆ ತಂದ ಬಳಿಕ ಕೆ.ಎಸ್.ಆರ್.ಟಿ.ಸಿ. ಆದಾಯ ಹೆಚ್ಚಳಗೊಂಡಿದೆ. ಪ್ರತಿ ತಿಂಗಳಿಗೊಮ್ಮೆ ರಾಜ್ಯದ ಪ್ರತಿ ವಿಭಾಗದ ಮಾಹಿತಿಯನ್ನು ಕೇಂದ್ರ ಕಚೇರಿಗೆ ಕಳುಹಿಸಿಕೊಡಬೇಕು. ಮುಂದಿನ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ಇಲ್ಲ.

ಜಯಕರ ಶೆಟ್ಟಿ, ವಿಭಾಗೀಯ ನಿಯಂತ್ರಣಾಧಿಕಾರಿ, ಪುತ್ತೂರು ವಿಭಾಗ, ಕೆ.ಎಸ್.ಆರ್.ಟಿ.ಸಿ.

ರಾಜ್ಯಾದ್ಯಂತ ಬಜರಂಗದಳದಿಂದ ಶೌರ್ಯ ಜಾಗರಣ ರಥಯಾತ್ರೆ

Posted by Vidyamaana on 2023-09-22 12:39:54 |

Share: | | | | |


ರಾಜ್ಯಾದ್ಯಂತ ಬಜರಂಗದಳದಿಂದ ಶೌರ್ಯ ಜಾಗರಣ ರಥಯಾತ್ರೆ

ಮಂಗಳೂರು: ಯುವ ಪೀಳಿಗೆಯಲ್ಲಿ ರಾಷ್ಟ್ರ ಜಾಗೃತಿ, ಪೂರ್ವಜರ ಬಲಿದಾನಗಳನ್ನು ನೆನಪಿಸಿ ದೇಶ, ಧರ್ಮಕ್ಕಾಗಿ ಜಾಗೃತ ಬದುಕಿನತ್ತ ಸಂಕಲ್ಪ ಮಾಡಿಸುವ ಉದ್ದೇಶದಿಂದ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ರಾಜ್ಯದಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ಹಮ್ಮಿಕೊಂಡಿದೆ. ಸೆ.25ರಂದು ವೀರ ಮದಕರಿ ನಾಯಕನ ಊರು ಚಿತ್ರದುರ್ಗದಲ್ಲಿ ರಥಯಾತ್ರೆಗೆ ಚಾಲನೆ ಸಿಗಲಿದ್ದು, ಅಕ್ಟೋಬರ್ 10ರ ವರೆಗೆ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಸಂಚರಿಸಲಿದೆ ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ. 


ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಶರಣ್ ಪಂಪ್ವೆಲ್, ಈಗಾಗಲೇ ರಾಜ್ಯದಲ್ಲಿ ಎರಡು ಸಾವಿರ ಬಜರಂಗದಳ ಘಟಕಗಳನ್ನು ಹೊಂದಿದ್ದೇವೆ. ಮುಂದಿನ ಒಂದು ವರ್ಷದಲ್ಲಿ ಐದು ಸಾವಿರ ಘಟಕಗಳನ್ನು ಸ್ಥಾಪಿಸುವ ಗುರಿಯಿದೆಯ ಉತ್ತರ ಕರ್ನಾಟಕ ಭಾಗದಲ್ಲಿ ಬಜರಂಗದಳ ವಿಸ್ತರಣೆಯಾಗಲಿದೆ. 1964ರಲ್ಲಿ ಸ್ಥಾಪನೆಯಾದ ವಿಶ್ವ ಹಿಂದು ಪರಿಷತ್ 2024ರಲ್ಲಿ 60 ವರ್ಷ ಪೂರೈಸಲಿದ್ದು, ಈ ವೇಳೆ ದೇಶಾದ್ಯಂತ ಜಾಗೃತ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಪ್ರತಿ ಜಿಲ್ಲೆಯಲ್ಲಿ ಬೃಹತ್ ಸಮಾವೇಶದ ಬಳಿಕ ಕೊನೆಗೆ ಅ.10ರಂದು ಉಡುಪಿಯಲ್ಲಿ ಸಮಾರೋಪ ಆಗಲಿದೆ. ದಿಕ್ಸೂಚಿ ಭಾಷಣಕ್ಕೆ ಚಕ್ರವರ್ತಿ ಸೂಲಿಬೆಲೆ ಬರಲಿದ್ದಾರೆ ಎಂದರು. 


ರಾಜ್ಯದ ಕಾಂಗ್ರೆಸ್ ಸರಕಾರ ಬಜರಂಗದಳ ನಿಷೇಧ ಪ್ರಸ್ತಾಪ ಇಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಯಾವುದೇ ಕಾರಣಕ್ಕೂ ಬಜರಂಗದಳ ನಿಷೇಧ ಸಾಧ್ಯವಿಲ್ಲ. ಬಜರಂಗದಳ ದೇಶ ವಿರೋಧಿ ಕೃತ್ಯ ಮಾಡಿಲ್ಲ. ದೇಶದ ಭವ್ಯ ಪರಂಪರೆ ಮುಂದಿಟ್ಟು ರಾಷ್ಟ್ರ ಜಾಗೃತಿಗಾಗಿ ಹೋರಾಟ ನಡೆಸುತ್ತಿರುವ ಸಂಘಟನೆ ಎಂದು ಹೇಳಿದರು. ನಿಮ್ಮ ರಥಯಾತ್ರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲಾಭ ಮಾಡುವ ಉದ್ದೇಶವೇ ಎಂದು ಕೇಳಿದ ಪ್ರಶ್ನೆಗೆ, ನಾವು ಯಾರ ಲಾಭದ ಬಗ್ಗೆಯೂ ಯೋಚನೆ ಮಾಡಿಲ್ಲ. ಬಿಜೆಪಿ ರಾಜಕೀಯ ಪಕ್ಷ. ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದರು. ಬಿಜೆಪಿ ಸರಕಾರ ಇದ್ದಾಗಲೇ ಗೋಹತ್ಯೆ ಅಥವಾ ಇನ್ನಾವುದೇ ವಿಚಾರ ಕಟ್ಟುನಿಟ್ಟಾಗಿ ಪಾಲನೆ ಆಗಿಲ್ಲ ಎಂದು ಕೇಳಿದ್ದಕ್ಕೆ, ಬಿಜೆಪಿ ನಮ್ಮದೇ ರೀತಿಯ ಚಿಂತನೆ ಇರುವ ಪಕ್ಷ ಅಷ್ಟೇ. ಹಾಗಂತ, ಅವರಿಗೂ ನಮಗೂ ಸಂಬಂಧ ಇಲ್ಲ ಎಂದರು. 

ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ :

ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ನಿಮ್ಮ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಇದರಿಂದ ನಿಮಗೆ ತೊಂದರೆ ಆಗಲ್ಲವೇ ಎಂದು ಕೇಳಿದ ಪ್ರಶ್ನೆಗೆ, ಚೈತ್ರಾಗೂ ನಮಗೂ ಯಾವುದೇ ಸಂಬಂಧ ಇಲ್ಲ. ನಮ್ಮ ಸಂಘಟನೆಯಲ್ಲಿ ಯಾವುದೇ ಪದಾಧಿಕಾರ ಹೊಂದಿಲ್ಲ. ಆಕೆ ಉತ್ತಮ ಭಾಷಣಕಾರ್ತಿ ಎಂಬ ಕಾರಣಕ್ಕೆ ಕಾರ್ಯಕ್ರಮಗಳಿಗೆ ಕರೆಸಿಕೊಳ್ಳುವುದು ಬಿಟ್ಟರೆ, ಬೇರಾವುದೇ ಸಂಬಂಧ ಇಲ್ಲ. ಗುರುಪುರ ಸ್ವಾಮೀಜಿಯವರು ಹೇಳಿದಂತೆ, ಎರಡು ತಿಂಗಳ ಹಿಂದೆಯೇ ಈ ಬಗ್ಗೆ ತಿಳಿದಿತ್ತು. ನಾವೇನೂ ಅದರಲ್ಲಿ ಪಾತ್ರ ಇಲ್ಲ ಎಂದ ಮೇಲೆ ಚಿಂತೆ ಯಾಕೆ. ಯಾರು ತಪ್ಪು ಮಾಡಿದ್ದಾರೋ ಶಿಕ್ಷೆಯಾಗಲಿ. ಈಗ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಶವ ಪತ್ತೆ

Posted by Vidyamaana on 2023-12-04 16:58:53 |

Share: | | | | |


ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಶವ ಪತ್ತೆ

ಚಾಮರಾಜನಗರ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ.


ಇಂದು ಬೆಳಗ್ಗೆ ಅವರ ಕಾರು ಪತ್ತೆಯಾಗಿದ್ದು, ಅದರಲ್ಲಿ ರಕ್ತದ ಕಲೆಗಳು ಇರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಮಹದೇವಯ್ಯ ಅವರು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಇದೀಗ ಚಾಮರಾಜನಗರದ ರಾಮಾಪುರದ ನಿರ್ಜನ ಪ್ರದೇಶವೊಂದರಲ್ಲಿ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ಡಿಸೆಂಬರ್ 1ರ ರಾತ್ರಿ ಮಹದೇವಯ್ಯ ಅವರು ಚನ್ನಪಟ್ಟಣ ತೋಟದ ಮನೆಯಲ್ಲಿದ್ದರು. ಮಧ್ಯರಾತ್ರಿ 12 ಗಂಟೆಗೆ ತೋಟದ ಮನೆಗೆ ನುಗ್ಗಿದ ಮೂವರು ಅಪರಿಚಿತರು, ಬಳಿಕ ಮನೆಯಲ್ಲಿ ಲಾಕರ್ ಓಪನ್ ಮಾಡಿಸಿ ಪತ್ರ ದುಡ್ಡು ಕೊಂಡೊಯ್ದಿರುವ ಶಂಕೆ ವ್ಯಕ್ತವಾಗಿತ್ತು.

Recent News


Leave a Comment: