ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಸುದ್ದಿಗಳು News

Posted by vidyamaana on 2024-07-24 22:11:50 |

Share: | | | | |


ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

‌ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.


ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ ಎಂದು ಬೆನ್ನುತಟ್ಟಿದರು. ಅಲ್ಲದೇ ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು

 Share: | | | | |


ನೂತನ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ

Posted by Vidyamaana on 2024-06-06 18:58:41 |

Share: | | | | |


ನೂತನ ಸಂಸದೆ ಕಂಗನಾ ರಣಾವತ್ ಗೆ ಕಪಾಳಮೋಕ್ಷ

ಚಂಡೀಗಢ: ನೂತನ ಸಂಸದೆಯಾದ ಕಂಗನಾ ರಾಣಾವತ್ ಅವರು ಭದ್ರತೆಯನ್ನು ಮೀರಿ ಮೊಬೈಲ್ ಕೈಯಲ್ಲೇ ಹಿಡಿದು ತೆರಳೋದಕ್ಕೆ ವಿಮಾನ ನಿಲ್ದಾಣದಲ್ಲಿ ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಪೇದೆಯೊಂದಿಗೆ ಕಿರಿಕ್ ತೆಗೆದಿದ್ದಾರೆ. ಆ ಬಳಿಕ ವಾಗ್ವಾದ ನಡೆದಿದೆ. ಈ ವೇಳೆಯಲ್ಲಿ ನೂತನ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆ ಕಪಾಳ ಮೋಕ್ಷ ಮಾಡಿರೋದಾಗಿ ತಿಳಿದು ಬಂದಿದೆ.

ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಸೇರಿದ ಮಹಿಳಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿಮ್ಮ ಫ್ರೀ ಯುನಿಟ್ ಲೆಕ್ಕಾಚಾರ ಹೇಗೆ? – ಇಲ್ಲಿದೆ ಮಾಹಿತಿ

Posted by Vidyamaana on 2023-06-03 06:25:59 |

Share: | | | | |


ನಿಮ್ಮ ಫ್ರೀ ಯುನಿಟ್ ಲೆಕ್ಕಾಚಾರ ಹೇಗೆ? – ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಇದೀಗ ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ನೀಡಿದ್ದ ‘ಗ್ಯಾರಂಟಿ’ ಆಶ್ವಾಸನೆಗಳನ್ನು ಹಂತಹಂತವಾಗಿ ಜಾರಿಗೊಳಿಸುವ ನಿರ್ಧಾರವನ್ನು ಮಾಡಿದೆ. ಈ ಐದು ಗ್ಯಾರಂಟಿಗಳ ಪೈಕಿ ಇದೀಗ ಹೆಚ್ಚು ಚರ್ಚೆಗೆ ಒಳಗಾಗಿರುವುದು 200 ಯುನಿಟ್ ಉಚಿತ ವಿದ್ಯುತ್ ಸೌಲಭ್ಯ. ಇದರ ಲೆಕ್ಕಾಚಾರ ಇನ್ನೂ ಸ್ಪಷ್ಟವಾಗಿಲ್ಲದ ಕಾರಣ ಈ ವಿಚಾರದಲ್ಲಿ ಜನಸಾಮಾನ್ಯರಲ್ಲಿ ಗೊಂದಲ ಮುಂದುವರೆದಿದೆ.


ಆದರೆ ನಿನ್ನೆ (ಜೂ.03) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿರುವ ಪ್ರಕಾರ, ಪ್ರತೀ ತಿಂಗಳು ವಿದ್ಯುತ್ ಬಳಕೆದಾರರು 200 ಯುನಿಟ್ ವರೆಗೆ ಬಳಸುವ ವಿದ್ಯುತ್ ಗೆ ಬಿಲ್ ಕಟ್ಟಬೇಕಾಗಿಲ್ಲ ಎನ್ನುವುದು ಸಂಪೂರ್ಣ ಸತ್ಯವಲ್ಲ! ಆದರೆ ಇದು ಪೂರ್ತಿ ಸುಳ್ಳೂ ಅಲ್ಲ! ಇಲ್ಲಿ ಸರಕಾರ ಒಂದು ಬುದ್ದಿವಂತಿಕೆಯನ್ನು ಬಳಸಿದೆ. ಒಂದು ಕುಟುಂಬ ಕಳೆದ 12 ತಿಂಗಳಿನಲ್ಲಿ ಎಷ್ಟು ವಿದ್ಯುತ್ ಬಳಸಿದೆ ಎಂದು ಸರಾಸರಿ ಲೆಕ್ಕ ತೆಗೆದು ಅವರ ಮೇಲೆ 10% ಯುನಿಟ್ ಸೇರಿಸಿ ಆ ಕುಟುಂಬದ ಕಟ್ ಆಫ್ ಯುನಿಟನ್ನು ಫಿಕ್ಸ್ ಮಾಡಲಾಗುತ್ತದೆ. ಆ ಯುನಿಟ್ ಆಧಾರದಲ್ಲಿ ಆ ಕುಟುಂಬಕ್ಕೆ ಜುಲೈ ತಿಂಗಳ ಬಿಲ್ಲಿನಿಂದ ಪ್ರಾರಂಭಗೊಳ್ಳುವಂತೆ ಆಗಸ್ಟ್ ತಿಂಗಳಿನಿಂದ ಉಚಿತ ವಿದ್ಯುತ್ ಸೌಲಭ್ಯವನ್ನು ನೀಡಲಾಗುತ್ತದೆ.

*ಇದಕ್ಕೊಂದು ಉದಾಹರಣೆ ಲೆಕ್ಕ ಇಲ್ಲಿದೆ ನೋಡಿ..*

ಈ ಹಿಂದಿನ 12 ತಿಂಗಳ ವಿದ್ಯುತ್ ಬಳಕೆಯ ಯೂನಿಟ್ ಗಳನ್ನು ಒಟ್ಟಾಗಿ ಕೂಡಿಸಿ, ಅದನ್ನು 12 ರಿಂದ ಬಾಗಿಸಿ ಮತ್ತೆ 1.1 ರಿಂದ ಗುಣಿಸಿದಾಗ ಬರುವ ಮೊತ್ತದ ಒಳಗೆ ಈಗಿನ ನಿಮ್ಮ ಉಚಿತ ವಿದ್ಯುತ್ ಬಳಕೆಯ ಯೂನಿಟ್ ಇರತಕ್ಕದ್ದು. ಮತ್ತೆ ಅದು 200 ಯೂನಿಟ್ ಗಳನ್ನು ಮೀರಿರಬಾರದು.


*ಇದನ್ನು ಈ ಕೆಳಗಿನ ಉದಾಹರಣೆ ಮೂಲಕ ವಿವರಿಸಲಾಗಿದೆ:*

 ಸಾಮಾನ್ಯ ಮಧ್ಯಮ ಕುಟುಂಬದ ಉದಾಹರಣೆ 

ತಿಂಗಳು 1 -  180 ಯೂನಿಟ್ 

ತಿಂಗಳು 2 -  185 ಯೂನಿಟ್

ತಿಂಗಳು 3 -  185 ಯೂನಿಟ್

ತಿಂಗಳು 4 -  180 ಯೂನಿಟ್

ತಿಂಗಳು 5 -  185 ಯೂನಿಟ್

ತಿಂಗಳು 6 -  175 ಯೂನಿಟ್

ತಿಂಗಳು 7 -  180 ಯೂನಿಟ್ 

ತಿಂಗಳು 8 -  185 ಯೂನಿಟ್

ತಿಂಗಳು 9 -  185 ಯೂನಿಟ್

ತಿಂಗಳು 10 - 178 ಯೂನಿಟ್

ತಿಂಗಳು 11 - 180 ಯೂನಿಟ್

ತಿಂಗಳು 12 - 175 ಯೂನಿಟ್

ಒಟ್ಟು 2173 ಯೂನಿಟ್ಗಳು.

ಸರಾಸರಿ ಅಂದರೆ 2173/12= 181 ಯೂನಿಟ್ಗಳು. 10% ಹೆಚ್ಚವರಿ ಅಂದರೆ 181*1.1= 191 ಯೂನಿಟ್ಗಳು. ಹೀಗಿದ್ದಲ್ಲಿ ನೀವು 200 ಯೂನಿಟ್ ಉಚಿತ ವಿದ್ಯುತ್ ಬಳಸಲು ಅರ್ಹರು..

ಬಡ ಕುಟುಂಬದ ಉದಾಹರಣೆ

ತಿಂಗಳು 1 -  70 ಯೂನಿಟ್ 

ತಿಂಗಳು 2 -  80 ಯೂನಿಟ್

ತಿಂಗಳು 3 -  60 ಯೂನಿಟ್

ತಿಂಗಳು 4 -  55 ಯೂನಿಟ್

ತಿಂಗಳು 5 -  65 ಯೂನಿಟ್

ತಿಂಗಳು 6 -  70 ಯೂನಿಟ್

ತಿಂಗಳು 7 -  85 ಯೂನಿಟ್ 

ತಿಂಗಳು 8 -  55 ಯೂನಿಟ್

ತಿಂಗಳು 9 -  70 ಯೂನಿಟ್

ತಿಂಗಳು 10 - 75 ಯೂನಿಟ್

ತಿಂಗಳು 11 - 80 ಯೂನಿಟ್

ತಿಂಗಳು 12 - 55 ಯೂನಿಟ್

ಒಟ್ಟು 820 ಯೂನಿಟ್ಗಳು.

ಸರಾಸರಿ ಅಂದರೆ 820/12= 68.3 ಯೂನಿಟ್ಗಳು. 10% ಹೆಚ್ಚವರಿ ಅಂದರೆ 68.3*1.1= 75 ಯೂನಿಟ್ಗಳು. ಹೀಗಿದ್ದಲ್ಲಿ ನೀವು 75 ಯೂನಿಟ್ ಉಚಿತ ವಿದ್ಯುತ್ ಬಳಸಲು ಮಾತ್ರ ಅರ್ಹರು. ನೀವು 200 ಯೂನಿಟ್ ಬಳಸುವಂತಿಲ್ಲ. 75 ಯೂನಿಟ್ ಗಿಂತ ಜಾಸ್ತಿ ಬಳಸಿದ್ದಲ್ಲಿ ಬಿಲ್ ಕಟ್ಟತಕ್ಕದ್ದು.

ಇದನ್ನು ಕ್ರಿಕೆಟ್ ನಲ್ಲಿ ಬಳಸುವ ಡಕ್ ವರ್ತ್ ಲೂಯಿಸ್ ನಿಯಮಕ್ಕೆ ಅನ್ವಯಿಸಿಕೊಳ್ಳಬಹುದೇನೋ. ಒಟ್ಟಿನಲ್ಲಿ ಈ ಲೆಕ್ಕಾಚಾರವವನ್ನು ಅರ್ಥಮಾಡಿಕೊಳ್ಳದೇ, ನಮಗೆ 200 ಯುನಿಟ್ ಫ್ರೀ ಎಂದು ಒಟ್ರಾಶಿ ಕರೆಂಟ್ ಯೂಸ್ ಮಾಡಿದ್ರೆ ನಿಮ್ಗೆ ‘ಶಾಕ್’ ಹೊಡೆಯೋದಂತೂ ಗ್ಯಾರಂಟಿ!

ಎನ್ ಆರ್ ಸಿ ಸಿ- ಅಮ್ಮುಂಜ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Posted by Vidyamaana on 2024-06-16 17:20:11 |

Share: | | | | |


ಎನ್ ಆರ್ ಸಿ ಸಿ- ಅಮ್ಮುಂಜ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಪುತ್ತೂರು: ಕಳೆದ ಲೋಕಸಭಾ ಚುನಾವಣೆಯ ಮೊದಲು ಶಿಲಾನ್ಯಾಸಗೈದ ಕಾಮಗಾರಿಗಳು ಆರಂಭಗೊಂಡಿದೆ, ಶೀಘ್ರದಲ್ಲೇ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ಕುರಿಯ ಗ್ರಾಮದ ಎನ್ ಆರ್ ಸಿ ಸಿ - ಅಮ್ಮುಂಜ ರಸ್ತೆಯು ರೂ ೧೦ ಲಕ್ಷದಲ್ಲಿ ಕಾಂಕ್ರೀಟ್ ಆಗಿದ್ದು ಇದರ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಅಧ್ಯತೆ ಮೇರೆಗೆ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು. ರಸ್ತೆ ಕಾಂಕ್ರೀಟ್ ಆಗಿಲ್ಲವೆಂದು ಬೇಜಾರುಮಾಡಬೇಡಿ ಮುಂದಿನ ದಿನಗಳಲ್ಲಿ ಅಗತ್ಯ ಬೇಡಿಕೆ ಇರುವ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಮಾಡಲಾಗುವುದು ಎಂದು ಹೇಳಿದರು. ಪಾಲಿಂಜೆ ಶ್ರೀ ಮಹಾವಿಷ್ಣು ದೇವಸ್ಥಾನದ ಅಭಿವೃದ್ದಿಗೆ ೧೦ ಲಕ್ಷ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಯಿಂದ ಪ್ರತಿಭಟನೆ

Posted by Vidyamaana on 2023-09-13 20:30:37 |

Share: | | | | |


ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಯಿಂದ  ಪ್ರತಿಭಟನೆ

ಪುತ್ತೂರು: ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.  ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು.


ಪುತ್ತೂರು ಅಮರ ಜವಾನ್ ಸ್ಮಾರಕದ ಬಳಿ ಬುಧವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.


ಕೃಷಿ ಹಾಗೂ ಕೃಷಿ ಕ್ಷೇತ್ರಕ್ಕೆ 1.50 ಲಕ್ಷ ಕೋಟಿ ರೂಪಾಯಿಯನ್ನು ಬಿಜೆಪಿ ಸರ್ಕಾರ ನೀಡಿದೆ. ಇಂತಹ ಕೊಡುಗೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಎಲ್ಲಾ ರೀತಿಯಲ್ಲೂ ರೈತರನ್ನು ವಿರೋಧಿಸುವ ಕಾರ್ಯವನ್ನೇ ಮಾಡುತ್ತಿದ್ದು, ಬರವನ್ನು ನಿಭಾಯಿಸುವ ಸಾಮಾನ್ಯ ಜ್ಞಾನವೂ ಇಲ್ಲದಂತಾಗಿದೆ ಎಂದು ಕುಟುಕಿದರು.


ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು, ರೈತ ವಿರೋಧಿ ನೀತಿಯನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ 312 ತಾಲೂಕುಗಳಲ್ಲಿ ಹೋರಾಟ ನಡೆಸಲಾಗುತ್ತಿದೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ರಾಜ್ಯದ ಸುಮಾರು 190 ತಾಲೂಕುಗಳು ಬರಪೀಡಿತವಾಗಿದೆ. ಬರ ಪೀಡಿತ ಪ್ರದೇಶಗಳ ಅಧ್ಯಯನವನ್ನು ಮಾಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಿಂದ ಹೊರ ಬರುತ್ತಿಲ್ಲ. ತನ್ನ ಹುದ್ದೆಯ ನಾಲ್ಕು ಕಾಲುಗಳು ಯಾವಾಗ ಅಲುಗಾಡುತ್ತದೋ ಎಂದು ತಿಳಿಯದೆ, ಮುಖ್ಯಮಂತ್ರಿಗಳು ಕುರ್ಚಿ ಬಿಟ್ಟು ಏಳುತ್ತಿಲ್ಲ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದ ಬಳಿಕ ಇದುವರೆಗೆ ದಿನಕ್ಕೆ ಇಬ್ಬರಂತೆ 170 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಗಂಭೀರ ವಿಚಾರವನ್ನು ಸರ್ಕಾರ ಗಣನೆಗೇ ತೆಗೆದುಕೊಂಡಿರದೇ ಇರುವುದು ವಿಪರ್ಯಾಸ. ವಿದ್ಯುತ್ ಖರೀದಿಯಿಂದ ರಾಜ್ಯ ಸರ್ಕಾರದ ಭ್ರಷ್ಟಾಚಾರ ಪ್ರಾರಂಭವಾಗಿದೆ. ರೈತರ ಕೃಷಿ ಸಾಲಗಳ ಬಗ್ಗೆ ಮಾಡಿದ ಘೋಷಣೆ ಇನ್ನೂ ಜಾರಿಯಾಗಿಲ್ಲ. ಕರ್ನಾಟಕ ಜನರನ್ನು ಕತ್ತಲೆಯಲ್ಲಿ ಹಾಕಿದ ಕಾಂಗ್ರೆಸ್ ಗೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಜನರಿಗೂ ಈಗ ಮನವರಿಕೆ ಆಗುತ್ತಿದೆ – ಕಾಂಗ್ರೆಸ್ ಅಂದರೆ ಬರ, ಬಿಜೆಪಿ ಅಂದರೆ ಸಮೃದ್ಧಿ ಎಂದು ಹೇಳಿದರು.


ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಮುಖಂಡರಾದ ಆಶಾ ತಿಮ್ಮಪ್ಪ ಗೌಡ, ಪಿ.ಜಿ. ಜಗನ್ನಿವಾಸ ರಾವ್, ಚನಿಲ ತಿಮ್ಮಪ್ಪ ಶೆಟ್ಟಿ, ಆರ್.ಸಿ. ನಾರಾಯಣ, ಮಹೇಶ್ ಮೇನಾಲ ಮೊದಲಾದವರು ಉಪಸ್ಥಿತರಿದ್ದರು.


ಉಷಾ ಮುಳಿಯ ಪ್ರಾರ್ಥಿಸಿದರು. ರೈತ ಮೂರ್ಚಾ ಅಧ್ಯಕ್ಷ ಸುರೇಶ್ ಕಣ್ಣಾರಾಯ ಸ್ವಾಗತಿಸಿದರು. ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.

ಶಾಸಕರ ಇಂದಿನ ಕಾರ್ಯಕ್ರಮ ಆ 27

Posted by Vidyamaana on 2023-08-26 23:18:35 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 27

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 27 ರಂದು

ಬೆಳಿಗ್ಗೆ 10 ಕ್ಕೆತುಳು ಅಪ್ಪೆ ಕೂಟದ ವತಿಯಿಂದ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ತುಳು ಕಾರ್ಯಕ್ರಮ

11 ಗಂಟೆಗೆ ಮುರದಲ್ಲಿ‌ಶಿವ ಸದನ‌ಲೋಕಾರ್ಪಣೆ

12 ಗಂಟೆಗೆ ಬಿರ್ವೆರ್ ಸಂಘದಿಂದ ಕೆಸರುಗೊಬ್ಬು‌ ಮಂಜಲ್ಪಡ್ಪುವಿನಲ್ಲಿ

ಕೃಷ್ಣನಗರ ಗೇರು ಸಂಸ್ಕರಣಾ ಘಟಕಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ - ಮತಯಾಚನೆ

Posted by Vidyamaana on 2023-04-25 16:13:28 |

Share: | | | | |


ಕೃಷ್ಣನಗರ ಗೇರು ಸಂಸ್ಕರಣಾ ಘಟಕಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ - ಮತಯಾಚನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪುತ್ತೂರಿನ ಕೃಷ್ಣನಗರದಲ್ಲಿರುವ ಗೇರು ಸಂಸ್ಕರಣಾ ಘಟಕಕ್ಕೆ ಮಂಗಳವಾರ ಭೇಟಿ ನೀಡಿದರು.

ಭೇಟಿ ನೀಡಿದ ಅವರು ಸಭೆ ನಡೆಸಿ ಅಲ್ಲಿನ ಸಿಬ್ಬಂದಿಗಳೊಂದಿಗೆ ಮಾತನಾಡಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Recent News


Leave a Comment: