ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಉದ್ಘಾಟನೆಗೆ ಸಿದ್ಧಗೊಳ್ಳುತ್ತಿದೆ ಉಭಯ ತಾಲೂಕುಗಳ ಏಕೈಕ ಡಯಾಲಿಸಿಸ್ ಕೇಂದ್ರ

Posted by Vidyamaana on 2022-11-29 16:47:29 |

Share: | | | | |


ಉದ್ಘಾಟನೆಗೆ ಸಿದ್ಧಗೊಳ್ಳುತ್ತಿದೆ ಉಭಯ ತಾಲೂಕುಗಳ ಏಕೈಕ ಡಯಾಲಿಸಿಸ್ ಕೇಂದ್ರ

 ಇನ್ನೂ ೬ ಡಯಾಲಿಸಿಸ್ ಯಂತ್ರಗಳ ಅವಶ್ಯಕತೆ 

ದಾನಿಗಳ ನೆರವು ಪಡೆಯಲು ಆರೋಗ್ಯ ರಕ್ಷಾ ಸಮಿತಿ ತೀರ್ಮಾನ


ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆ ಸಂದರ್ಭದಲ್ಲಿ ಅವಶ್ಯಕತೆ ಇರುವ ಇನ್ನೂ ೬ ಡಯಾಲಿಸಿಸ್ ಯಂತ್ರಗಳನ್ನು ದಾನಿಗಳ ನೆರವಿನಿಂದ ಹೊಂದಿಸಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಸಮಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಆರೋಗ್ಯ ರಕ್ಷಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುತ್ತೂರು ಹಾಗೂ ಕಡಬ ತಾಲೂಕಿಗೆ ಏಕೈಕ ಡಯಾಲಿಸಿಸ್ ಕೇಂದ್ರ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿದೆ. ಇದು ಸಾಕಾಗುತ್ತಿಲ್ಲ. ಆದ್ದರಿಂದ ಮಂಗಳೂರು ಸೇರಿದಂತೆ ಇತರ ಕಡೆಗಳಿಗೆ ಜನರು ಹೋಗಬೇಕಾದ ಪರಿಸ್ಥಿತಿ ಇದೆ. ಆದ್ದರಿಂದ ಉದ್ಘಾಟನೆಗೆ ಸಿದ್ಧವಾಗಿರುವ ಡಯಾಲಿಸಿಸ್ ಕೇಂದ್ರದ ಕಟ್ಟಡವನ್ನು ಸಾರ್ವಜನಿಕ ಬಳಕೆಗೆ ಮುಕ್ತವಾಗುವಂತೆ ಮಾಡಲು ಒತ್ತಡ ಬರುತ್ತಿದೆ. ಉದ್ಘಾಟನೆಯ ಸಂದರ್ಭದಲ್ಲಿ ಅವಶ್ಯಕತೆ ಇರುವ ಇನ್ನೂ ೬ ಡಯಾಲಿಸಿಸ್ ಮೆಷಿನ್‌ಗಳನ್ನು ಹೊಂದಿಸಿಕೊಳ್ಳುವ ಅಗತ್ಯವಿದೆ. ಇದಕ್ಕಾಗಿ ರೋಟರಿ ಮೊದಲಾದ ಸಂಸ್ಥೆ ಹಾಗೂ ದಾನಿಗಳ ಸಹಾಯ ಪಡೆದುಕೊಳ್ಳಬೇಕಾಗಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳ ವತಿಯಿಂದ ೪ ಡಯಾಲಿಸಿಸ್ ಮೆಷಿನ್ ಕೊಡಿಸುವುದಾಗಿ ಹಿಂದಿನ ಜಿಲ್ಲಾಧಿಕಾರಿಗಳು ತಿಳಿಸಿದ್ದರು ಎಂದು ನೆನಪಿಸಿದ ಅವರು, ಆರ್.ಓ. ಪ್ಲಾಂಟ್‌ಗೆ ಅಗತ್ಯವಿರುವ ೧೦ ಲಕ್ಷ ರೂ.ವನ್ನು ಸರಕಾರದಿಂದ ಮಂಜೂರುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಆಸ್ಪತ್ರೆ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಮಾಹಿತಿ ನೀಡಿ, ಈಗಾಗಲೇ ಪುತ್ತೂರು ಡಯಾಲಿಸಿಸ್ ಕೇಂದ್ರದಲ್ಲಿ ೫೪ ಮಂದಿಗೆ ನಿರಂತರವಾಗಿ ಡಯಾಲಿಸಿಸ್ ನೀಡಲಾಗುತ್ತಿದೆ. ೪೮ ಮಂದಿ ಇನ್ನೂ ವೈಟಿಂಗ್‌ನಲ್ಲಿದ್ದಾರೆ. ಆದ್ದರಿಂದ ಈ ಬೇಡಿಕೆಯನ್ನು ಪೂರೈಸಲು ಒಟ್ಟು ೧೨ ಡಯಾಲಿಸಿಸ್ ಯಂತ್ರಗಳ ಅಗತ್ಯವಿದೆ. ಆದರೆ ಆಸ್ಪತ್ರೆಯಲ್ಲಿ ಇರುವುದು ೬ ಡಯಾಲಿಸಿಸ್ ಯಂತ್ರಗಳು ಮಾತ್ರ. ಆದ್ದರಿಂದ ಉಳಿದ ೬ ಯಂತ್ರಗಳನ್ನು ಜೋಡಿಸಿಕೊಳ್ಳಬೇಕಾದ ಅಗತ್ಯವಿದೆ. ಇದಕ್ಕೆ ಅಗತ್ಯವಿರುವ ಡಯಾಲಿಸಿಸ್ ಕೇಂದ್ರದ ಕಾಮಗಾರಿಯನ್ನು ಸುಮಾರು ೬೦ ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆಲುಕ್ಕಾಸ್ ಸ್ವರ್ಣ ಮಳಿಗೆಯವರು ಒಂದು ಯಂತ್ರವನ್ನು ಕೊಡುಗೆಯಾಗಿ ನೀಡುವುದಾಗಿ ತಿಳಿಸಿದ್ದಾರೆ. ಹೊಸ ಯಂತ್ರದ ಕೇಂದ್ರಕ್ಕೆ ಹೊಸದಾಗಿ ಆರ್.ಓ. ಪ್ಲಾಂಟ್ ನಿರ್ಮಿಸಲು ೧೦ ಲಕ್ಷ ರೂ. ಅಗತ್ಯವಿದೆ. ಇದರೊಂದಿಗೆ ಕೊಠಡಿಗೆ ಹವಾನಿಯಂತ್ರಿಣ ಅಳವಡಿಸಲು ೩ ಲಕ್ಷ ರೂ. ಬೇಕಾಗಿದೆ. ೬ ಡಯಾಲಿಸಿಸ್ ಯಂತ್ರ ಖರೀದಿಗೆ ಒಟ್ಟು ೬೦ ಲಕ್ಷ ರೂ. ವೆಚ್ಚ ತಗುಲಲಿದೆ ಎಂದು ಮಾಹಿತಿ ನೀಡಿದರು.

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿರುವಂತೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿಯೂ ಬ್ಲಡ್ ಬ್ಯಾಂಕ್ ತೆರೆಯುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಆಸ್ಪತ್ರೆಯಲ್ಲಿ ರಕ್ತ ಸಂಗ್ರಹಣಾ ವ್ಯವಸ್ಥೆಯಿದೆ. ಬ್ಲಡ್ ಬ್ಯಾಂಕ್ ಮಾಡುವುದಾದಲ್ಲಿ ಅದಕ್ಕೆ ಬೇಕಾದಂತೆ ಕೊಠಡಿ ಸೇರಿದಂತೆ ಎಲ್ಲಾ ವ್ಯವಸ್ಥೆಗಳಿವೆ. ಅದರೆ ಬ್ಲಡ್ ಬ್ಯಾಂಕ್ ಮಾಡಿದಲ್ಲಿ ಅದಕ್ಕೆ ಸಿಬ್ಬಂದಿಗಳ ನೇಮಕಗೊಳಿಸಬೇಕು. ಇದಕ್ಕೂ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಗೆ ಈ ಬಗ್ಗೆ ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದರು.  

ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಒಂದು ವರ್ಷಗಳಾಗಿದೆ. ಅದಕ್ಕೆ ಪೂರಕವಾಗಿ ೫.೧೬ ಎಕ್ರೆ ಜಮೀನು ಮೀಸಲಿಟ್ಟು, ಆಸ್ಪತ್ರೆಯ ಹೆಸರಿನಲ್ಲಿ ಪಹಣಿ ಪತ್ರವನ್ನು ಮಾಡಲಾಗಿದೆ. ಈ ಬಗ್ಗೆ ತಾಂತ್ರಿಕ ವರದಿಯನ್ನು ನೀಡುವಂತೆ ಇಂಜಿನಿಯರ್ ಅವರಿಗೆ ಶಾಸಕರು ಸೂಚನೆ ನೀಡಿದರು.

ಸಭೆಯಲ್ಲಿ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಪೌರಾಯುಕ್ತ ಮಧು ಎಸ್. ಮನೋಹರ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಫೀಕ್ ದರ್ಬೆ, ಡಾ. ಕೃಷ್ಣ ಪ್ರಸನ್ನ, ದಿನೇಶ್ ಜೈನ್, ಕೃಷ್ಣ ನಾಯ್ಕ ಉಪಸ್ಥಿತರಿದ್ದರು. ಡಾ. ಜಯದೀಪ್ ಸ್ವಾಗತಿಸಿದರು.


ಬೆಳ್ತಂಗಡಿ: ನದಿಯಲ್ಲಿ ಒಡೆದ ರೀತಿಯಲ್ಲಿ ಕಾಣಿಕೆ ಡಬ್ಬಿಗಳು ಪತ್ತೆ

Posted by Vidyamaana on 2023-06-10 10:49:46 |

Share: | | | | |


ಬೆಳ್ತಂಗಡಿ: ನದಿಯಲ್ಲಿ ಒಡೆದ ರೀತಿಯಲ್ಲಿ  ಕಾಣಿಕೆ ಡಬ್ಬಿಗಳು ಪತ್ತೆ

ಬೆಳ್ತಂಗಡಿ:  ಎರಡು  ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ  ಬಜಕ್ರೆಸಾಲು ಸೇತುವೆ ಅಡಿಯಲ್ಲಿ ಪತ್ತೆಯಾಗಿದೆ. 

ಬೆಳ್ತಂಗಡಿ ತಾಲೂಕಿನ ಲಾಯಿಲದಿಂದ ಮುಂಡೂರು ಸಂಪರ್ಕಿಸುವ ಸೋಮವತಿ ನದಿಗೆ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಅಡಿ ಭಾಗದಲ್ಲಿ (ಇಂದು) ಜೂ 10 ರಂದು  ಮಧ್ಯಾಹ್ನ  ಸ್ಥಳೀಯ ನಿವಾಸಿ ರಾಜು ಅವರು  ಕಲ್ಲಿನ ಮೇಲೆ ಇರುವ ಪ್ಲಾಸ್ಟಿಕ್ ಗೋಣಿಗಳನ್ನು ಗಮನಿಸಿ ಹತ್ತಿರ ಹೋಗಿ ನೋಡಿದಾಗ ಎರಡು ಸ್ಟೀಲ್ ಡಬ್ಬಗಳು ಪತ್ತೆಯಾಗಿವೆ. ಈ ಬಗ್ಗೆ ಅವರು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಅವರ ಗಮನಕ್ಕೆ ತಂದಾಗ ಅವರು ಪೊಲೀಸ್ ಅವರಿಗೆ ಮಾಹಿತಿ ನೀಡಿದ್ದಾರೆ. ಯಾರೋ ಕಳ್ಳರು ಕಳೆದ ರಾತ್ರಿ ಎಲ್ಲಿಂದಲೂ ಕಳ್ಳತನ ಎಸಗಿ ಗೋಣಿಗಳಲ್ಲಿ ತುಂಬಿಸಿಕೊಂಡು ಬಂದು ಸೇತುವೆ ಅಡಿಯಲ್ಲಿ ಇದನ್ನು ಒಡೆದು ಹಣ ಕಳವು ಗೈದಿರುವ ಶಂಕೆ ಮೂಡಿದೆ. 

ಬೆಳ್ತಂಗಡಿ ಪೊಲೀಸ್ ಠಾಣೆಯ ಎಎಸ್ಐ ದೇವಪ್ಪ , ಕ್ರೈಂ ಪಿಸಿಗಳಾದ ಚರಣ್ ರಾಜ್ , ಅಶೋಕ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಡಬ್ಬದೊಳಗೆ ಬೀಗ ಮತ್ತು ಕೀ ಪತ್ತೆಯಾಗಿದ್ದು . ತನಿಖೆಗಾಗಿ ಎರಡು ಕಾಣಿಕೆ ಡಬ್ಬಿಯನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಕೆ ಡಬ್ಬಿಗಳು ಎಲ್ಲಿಂದ ಕಳ್ಳತನವಾಗಿದೆ. ಎಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಸ್ಥಳ ಪತ್ತೆಹಚ್ಚಿದ ಬೆಂಗಳೂರು ಪೊಲೀಸರು

Posted by Vidyamaana on 2023-11-26 22:18:38 |

Share: | | | | |


ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಸ್ಥಳ ಪತ್ತೆಹಚ್ಚಿದ ಬೆಂಗಳೂರು ಪೊಲೀಸರು

ಮಂಡ್ಯ, ನ.26: ಬೆಂಗಳೂರು ನಗರದ ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಮಂಡ್ಯ ತಾಲೂಕಿನ ಹುಲ್ಲೇನಹಳ್ಳಿ ಹಾಡ್ಯದಲ್ಲಿ ಪತ್ತೆಹಚ್ಚಿದ ಆಲೆಮನೆಯಲ್ಲಿ ಲಿಂಗ ಪತ್ತೆ ಮಾತ್ರವಲ್ಲ, ಅಲ್ಲಿ ಹೆಣ್ಣು ಭ್ರೂಣ ಹತ್ಯೆ(Female Feticide) ಕೂಡ ಮಾಡಲಾಗುತ್ತಿತ್ತು ಎಂಬ ವಿಚಾರ ಬಯಲಿಗೆ ಬಂದಿದೆ.


ಅಲೆಮನೆ ಸುತ್ತಲೂ ಕಬ್ಬಿನಗದ್ದೆಗಳು, ಓಡಾಡಲು ಬಂಡಿಜಾಡು. ಆರೋಪಿ ನವೀನ್​ಗೆ ಸಂಬಂಧಿ ಜಾಗ ಇದಾಗಿದೆ. ಕಬ್ಬಿನಗದ್ದರೆ ಒಳಭಾಗದ ಅಲೆಮನೆ ಪಕ್ಕಸಲ್ಲಿ ಭ್ರೂಣ ಪತ್ತೆ ಜೊತೆ ಹೆಣ್ಣು ಭ್ರೂಣ ಹತ್ಯೆ ಕೂಡ ನಡೆಯುತ್ತಿತ್ತು. ಸಣ್ಣ ಸುಳಿವೂ ಬಿಡದೆ ಆಲೆಮನೆಯಲ್ಲಿ ಕಳೆದ 2 ವರ್ಷಗಳಿಂದ ಭ್ರೂಣ ಲಿಂಗ ಪತ್ತೆ ದಂಧೆ ನಡೆಯುತ್ತಿತ್ತು.ಆರೋಪಿಗಳು ಮಧ್ಯವರ್ತಿಗಳಿಂದ ಗರ್ಭಿಣಿಯರ ಸಂಪರ್ಕ‌ ಮಾಡುತ್ತಿದ್ದರು. ಆಲೆಮನೆ ಕೊಠಡಿವೊಂದರಲ್ಲಿ ಸ್ಕ್ಯಾನಿಂಗ್ ಮಷಿನ್ ಇಡಲಾಗಿತ್ತು. ತಮ್ಮ ಸ್ವಂತ ವಾಹನದಲ್ಲಿ ಆಲೆಮನೆಗೆ ಕರೆತಂದು ಸ್ಕ್ಯಾನಿಂಗ್ ನಡೆಸುತ್ತಿದ್ದರು. ಸ್ಕ್ಯಾನಿಂಗ್ ವೇಳೆ ಹೆಣ್ಣು ಭ್ರೂಣ ಎಂದು ತಿಳಿದಾಕ್ಷಣವೇ ಅಬಾರ್ಷನ್ ಮಾಡಲಾಗುತ್ತದೆ.


ಈ ಬಗ್ಗೆ ಆರೋಪಿಗಳು ತನಿಖೆ ವೇಳೆ ಭಯಾನಕ ಸಂಗತಿ ಬಾಯಿ ಬಿಟ್ಟಿದ್ದಾರೆ. ಪೊಲೀಸರು ಈಗಾಗಲೇ ಮಂಡ್ಯದ‌ ನಯನ್, ನವೀನ್ ಹಾಗೂ ಶಿವನಂಜೇಗೌಡ, ವಿರೇಶ್ ಎಂಬವರನ್ನು ಬಂಧಿಸಿದ್ದು, ತನಿಖೆ ಮುಂದುವರಿದಂತೆ ಇಬ್ಬರು ವೈದ್ಯರು ಸೇರಿದಂತೆ ಐವರು ಅರೆಸ್ಟ್ ಆಗಿದ್ದಾರೆ. ಚೆನೈ ಮೂಲದ ಡಾ ತುಳಸಿರಾಮ್, ಮೈಸೂರಿನ ಡಾ. ಚಂದನ್ ಬಲ್ಲಾಳ್, ಚಂದನ್ ಪತ್ನಿ ಮೀನಾ, ಲ್ಯಾಬ್ ಟೆಕ್ನಿಶಿಯನ್ ನಿಸ್ಸಾರ್, ರಿಸಪ್ಷನಿಸ್ಟ್ ರಿಜ್ಮಾ ಬಂಧಿತರಾಗಿದ್ದಾರೆ.

ನೋ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ದಂಡ

Posted by Vidyamaana on 2023-08-01 09:37:27 |

Share: | | | | |


ನೋ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ದಂಡ

ಪುತ್ತೂರು: ಇಲ್ಲಿನ ksrtc ಬಸ್ ನಿಲ್ದಾಣ ಮುಂಭಾಗ ನಿಲ್ಲಿಸುತ್ತಿದ್ದ ವಾಹನಗಳಿಗೆ‌ ಸಂಚಾರಿ ಠಾಣೆ ಎಸ್.ಐ. ಉದಯರವಿ ನೇತೃತ್ವದ ಪೊಲೀಸರು ಕಾರ್ಯಾಚರಣೆ ನಡೆಸಿ, ದಂಡ ವಿಧಿಸಿದ್ದಾರೆ.

ಬಸ್ ನಿಲ್ದಾಣಕ್ಕೆ ಕೋಟಿ - ಚೆನ್ನಯ ಹೆಸರು ನಾಮಕರಣ ಮಾಡುವ ದಿನದಂದು ಬಸ್ ನಿಲ್ದಾಣ ಮುಂಭಾಗ ಬ್ಯಾರಿಕೇಡ್ ಹಾಕಲಾಗಿತ್ತು. ಇದರಿಂದಾಗಿ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನು ಕರೆತರುವ ವಾಹನಗಳು ರಸ್ತೆಯಲ್ಲೇ ನಿಲ್ಲಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು. ಇದರ ಜೊತೆಗೆ ಬಸ್ ನಿಲ್ದಾಣದ ಮುಂಭಾಗದ ನೋ ಪಾರ್ಕಿಂಗ್ ಜಾಗದಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ, ತೆರಳುತ್ತಿದ್ದರು. ಇದು ಸಂಚಾರ ದಟ್ಟಣೆಗೆ ಕಾರಣವಾಗಿದ್ದು, ಬಸ್ ನಿಲ್ದಾಣ ಮುಂಭಾಗ ಪ್ರತಿದಿನ ಸಮಸ್ಯೆಗೆ ಕಾರಣವಾಗಿತ್ತು. ಕೆಲ ದಿನಗಳ ಹಿಂದೆ ಅಪಘಾತ ಸಂಭವಿಸಿದ ನಿದರ್ಶನವೂ ಇದೆ.

ಈ ಎಲ್ಲಾ ಕಾರಣಗಳಿಂದ ಕಾರ್ಯಾಚರಣೆ ನಡೆಸಿದ ಸಂಚಾರಿ ಠಾಣೆ ಪೊಲೀಸರು, ನಿಲ್ದಾಣದ ಮಿಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಮೇಲೆ ದಂಡ ವಿಧಿಸಿದ್ದಾರೆ.

Ksrtc ಬಸ್ ನಿಲ್ದಾಣ ಮುಂಭಾಗ ನಿರಂತರವಾಗಿ ಟ್ರಾಫಿಕ್ ದಟ್ಟಣೆ ಉಂಟಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಆಗುತ್ತಿತ್ತು. ಇದನ್ನು ವಿದ್ಯಮಾನ ಹಲವು ಬಾರಿ ವರದಿ ಮಾಡಿ, ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿತ್ತು. ಜೊತೆಗೆ, ವಾಣಿಜ್ಯ ಕೈಗಾರಿಕಾ ಸಂಘವೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿತ್ತು.

ನೋ ಪಾರ್ಕಿಂಗ್ ಪ್ರದೇಶ:

ಬಸ್ ನಿಲ್ದಾಣ ಮುಂಭಾಗದ ಪ್ರದೇಶ ನೋ ಪಾರ್ಕಿಂಗ್‌ ಏರಿಯಾ. ಇಲ್ಲಿ ಯಾವುದೇ ವಾಹನಗಳನ್ನು ನಿಲ್ಲಿಸುವಂತಿಲ್ಲ. ಮುಂದಿನ ದಿನಗಳಲ್ಲಿ ಇದು ಮುಂದುವರಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

Posted by Vidyamaana on 2023-06-16 08:23:17 |

Share: | | | | |


ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

ಕಾಸರಗೋಡು; ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ, ಕಾಸರಗೋಡಿನ ಮದ್ರಸಾದಲ್ಲಿ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು

ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿ ಎಲ್ಲವನ್ನೂ ಕಳೆದುಕೊಂಡ ಬನ್ನೂರಿನ ಮಹಿಳೆ...

Posted by Vidyamaana on 2023-04-27 08:55:55 |

Share: | | | | |


ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿ ಎಲ್ಲವನ್ನೂ ಕಳೆದುಕೊಂಡ ಬನ್ನೂರಿನ ಮಹಿಳೆ...

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಅಕ್ರಮಸಕ್ರಮಕ್ಕೆ ಅರ್ಜಿ ಸಲ್ಲಿಸಿದ ಮಹಿಳೆಯೋರ್ವರು ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಲಂಚ ನೀಡಿ ತನ್ನ ಸಂಪತ್ತೆಲ್ಲವನ್ನೂ ಕಳೇದುಕೊಂಡಿದ್ದಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಸುಳ್ಯಪದವಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಆರೋಪಿಸಿದ್ದಾರೆ.

ತನ್ನ ಸ್ವಾಧೀನದಲ್ಲಿರುವ ಒಂದು ಎಕ್ರೆ ಜಾಗವನ್ನು ಸಕ್ರಮ ಮಾಡಿಕೊಡುವಂತೆ ಪುತ್ತೂರು ಹೊರವಲಯದ ಬನ್ನೂರು ನಿವಾಸಿ ಮಹಿಳೆಯೋರ್ವರು ಅರ್ಜಿ ಹಾಕಿದ್ದರು. ಇವರು ಸಲ್ಲಿಸಿದ ಅರ್ಜಿ ತಾಲೂಕು ಕಚೇರಿಗೆ ತಲುಪಿದಾಗ ಇವರಿಗೆ ಕರೆ ಬರುತ್ತದೆ. ಕಚೇರಿಗೆ ತೆರಳಿದಾಗ ಇವರ ಬಳಿ ಹಣ ಕೇಳುತ್ತಾರೆ. ಒಂದು ಎಕ್ರೆಗೆ ಎರಡು ಲಕ್ಷ ನೀಡಿದರೆ ಮಾತ್ರ ನಿಮ್ಮದು ಸಕ್ರಮವಾಗುತ್ತದೆ ಎಂದು ತಿಳಿಸಿದ್ದಾರೆ. ವಿದಿ ಇಲ್ಲದೆ ಮಹಿಳೆ ತನ್ನ ಮನೆಯಲ್ಲಿದ್ದ ಎರಡು ಸಾಕು ದನಗಳನ್ನು ಮಾರಿದ ಹಣ ಸೇರಿಸಿ ಒಟ್ಟು ೬೦ ಸಾವಿರ ಸಂಬಂಧಪಟ್ಟವರ ಕೈಗೆ ನೀಡಿದ್ದು ಆಬಳಿಕ ಉಳಿದ ಮೊತ್ತವನ್ನು ನೋಡುವಂತೆ ಮತ್ತು ಬಾಕಿ ಮೊತ್ತವನ್ನು ನೀಡದೇ ಇದ್ದಲ್ಲಿ ನಿಮ್ಮ ಫೈಲು ಮುಂದೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ. ಆರ್ಥಿಕವಾಗಿ ಬಡತನದಲ್ಲಿರುವ ಮಹಿಳೆ ಹಣ ನೀಡದ ಕಾರಣಕ್ಕೆ ಅವರ ಫೈಲು ಪೆಂಡಿಂಗ್ ಆಗಿದೆ. ಆಬಳಿಕ ಮಹಿಳೆ ತನ್ನ ಕಚೇರಿಗೆ ಬಂದು ವಿಷಯ ತಿಳಿಸಿದ್ದಾರೆ. ಎಲ್ಲವನ್ನೂ ಕಳೆದುಕೊಂಡ ಮಹಿಳೆ ಕಚೇರಿಯಲ್ಲಿ ಬಂದು ಕಣ್ಣೀರು ಹಾಕಿ ಸಂಬಂಧಿಸಿದವರಿಗೆ ಹಿಡಿಶಾಪ ಹಾಕುತ್ತಿದ್ದರು. ಅವರನ್ನು ಸಮಾಧಾನಿಸಿ ದನ ಖರೀದಿ ಮಾಡುವಂತೆ ಆರ್ಥಿಕವಾಗಿ ನೆರವು ನೀಡಿದ್ದು ಮಾತ್ರವಲ್ಲದೆ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿ ನಿಮ್ಮ ಅಕ್ರಮ ಸಕ್ರಮ ಫೈಲನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸುವುದಾಗಿ ಭರವಸೆ ನೀಡಿದ್ದೇನೆ. ಇಂಥಹ ಸಾವಿರಾರು ಫೈಲುಗಳು ತಾಲೂಕು ಕಚೇರಿಯಲ್ಲಿದ್ದು ಎಲ್ಲವೂ ಮೈ ಕೊಡವಿ ಮೇಲೆ ಬರಲು ಜನರ ಆಶೀರ್ವಾದ ಬೇಕು ಎಂದು  ಎಂದು ಸಭೆಯಲ್ಲಿ ಅಶೋಕ್ ರೈ ಮನವಿ ಮಾಡಿದರು.



Leave a Comment: