ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಪರ್ಲಡ್ಕ : ಮಿನಿ ಪಿಕಪ್ ಗೆ ಆಕ್ಟಿವಾ ಡಿಕ್ಕಿ

Posted by Vidyamaana on 2023-11-24 04:43:28 |

Share: | | | | |


ಪರ್ಲಡ್ಕ : ಮಿನಿ ಪಿಕಪ್ ಗೆ ಆಕ್ಟಿವಾ ಡಿಕ್ಕಿ

ಪುತ್ತೂರು: ಪರ್ಲಡ್ಕ ಜಂಕ್ಷನ್ ನಲ್ಲಿ ರಿಕ್ಷಾವನ್ನು ಹಿಂದಿಕ್ಕಲು ಹೋದ ದ್ವಿಚಕ್ರ ವಾಹನವೊಂದು ಪಿಕಪ್  ಗೆ ಡಿಕ್ಕಿಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಪರ್ಲಡ್ಕದಲ್ಲಿ ನ 23 ರಂದು ನಡೆದಿದೆ. ಡಿಕ್ಕಿಯಾದ ರಬಸಕ್ಕೆ   ದ್ವಿಚಕ್ರವಾಹನ ಛಿದ್ರವಾಗಿದ್ದು, ಸವಾರ ಅಪಾಯದಿಂದ ಪಾರಾಗಿದ್ದಾರೆ.


ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿ ಹೋದ ನಿಸಾನ್ ಕಾರಿಗೆ ಪೊಲೀಸರು ಲಾಕ್ ಹಾಕಿದ್ದು, ಇದನ್ನು ತಪ್ಪಿಸಲು ರಿಕ್ಷಾ ಹೋಗಿದ್ದು, ಈ ಸಂದರ್ಭ ಹಿಂಭಾಗದಿಂದ ಬರುತ್ತಿದ್ದ ದ್ವಿಚಕ್ರವಾಹನ ರಸ್ತೆಯ ಬಲ ಬದಿಗೆ ಬಂದಿದೆ. ಇದರಿಂದ ಮಡಿಕೇರಿ ಭಾಗದಿಂದ ಬರುತ್ತಿದ್ದ ಮಿನಿ ಪಿಕಪ್ ಗೆ ಡಿಕ್ಕಿಯಾಗಿದೆ.

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ಸಾಗಾಟದ ಲಾರಿ ಪಲ್ಟಿ

Posted by Vidyamaana on 2023-10-07 20:19:14 |

Share: | | | | |


ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ಸಾಗಾಟದ ಲಾರಿ  ಪಲ್ಟಿ

ಬಂಟ್ವಾಳ : ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಶನಿವಾರ ಮಧ್ಯಾಹ್ನದ ವೇಳೆ ನಡೆದಿದೆ.


    ಮಂಗಳೂರಿನಿಂದ ಬೆಳ್ತಂಗಡಿಗೆ ಅಕ್ಕಿ ಸಾಗಾಟದ ಈ ಲಾರಿ  ಬಡಗುಂಡಿ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನನ್ನು ಲಾರಿಯ ಗಾಜು ಪುಡಿ ಮಾಡಿ ಹೊರಕ್ಕೆ ತರಲಾಗಿದೆ. ಚಾಲಕ ಯಾವುದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


   ಲಾರಿ ಪಲ್ಟಿಯಾಗುವ ವೇಳೆ ರಸ್ತೆ ಬದಿಯ ವಿದ್ಯುತ್ ‌ಕಂಬಕ್ಕೆ ಡಿಕ್ಕಿಯಾಗಿ, ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಅಲ್ಲೇ ಸಮೀಪದಲ್ಲಿ ಹೈ ಟೆನ್ಸನ್ ವಿದ್ಯುತ್ ವಯರ್ ಗಳಿದ್ದು ಸ್ವಲ್ಪದರಲ್ಲೇ ದೊಡ್ಡ ಅನಾಹುತ ತಪ್ಪಿದೆ. 

ಘಟನೆಯ ವೇಳೆ ವಿದ್ಯುತ್ ತಂತಿಗೆ ತಾಗುತ್ತಿದ್ದರೆ, ಅನೇಕ ಜೀವಹಾನಿಯಾಗುವ ಬೀಕರ ದುರಂತಕ್ಕೆ ಕಾರಣವಾಗುತ್ತಿತ್ತು ಎಂದು ಸಾರ್ವಜನಿಕರು ತಿಳಿಸಿದ್ದಾರೆ.


ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡಿಪೋ ವ್ಯವಸ್ಥಾಪಕಿಯಿಂದ ಕಿರುಕುಳ ಆರೋಪ: ವಿಷ ಕುಡಿದು KSRTC ನೌಕರ ಅಭಿಷೇಕ್ ಆತ್ಮಹತ್ಯೆಗೆ ಯತ್ನ

Posted by Vidyamaana on 2023-08-30 02:16:35 |

Share: | | | | |


ಡಿಪೋ ವ್ಯವಸ್ಥಾಪಕಿಯಿಂದ ಕಿರುಕುಳ ಆರೋಪ: ವಿಷ ಕುಡಿದು KSRTC ನೌಕರ ಅಭಿಷೇಕ್ ಆತ್ಮಹತ್ಯೆಗೆ ಯತ್ನ

ಕೊಡಗು: ವಿಷ ಕುಡಿದು KSRTC ನೌಕರ ಅಭಿಷೇಕ್ ಎಂಬಾತ​ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಕೆಎಸ್​ಆರ್​ಟಿಸಿ ಡಿಪೋದಲ್ಲಿ‌ ನಡೆದಿದೆ.


ಅಸ್ವಸ್ಥಗೊಂಡ ನೌಕರ ಅಭಿಷೇಕ್​​ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡಿಪೋ ವ್ಯವಸ್ಥಾಪಕಿ ಗೀತಾ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಕುರಿತು ಮಡಿಕೇರಿ ಟೌನ್ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.​

ನೇಜಾರು ಹತ್ಯಾಕಾಂಡ ಪ್ರಕರಣ ಒಂದೊಂದಾಗಿ ಬಯಲಾಗುತ್ತಿದೆ ಸೈಕೋ ಕಿಲ್ಲರ್ ಪ್ರವೀಣ್ ಚೌಗುಲೆಯ ಸೀಕ್ರೆಟ್ಸ್!

Posted by Vidyamaana on 2023-11-17 20:12:33 |

Share: | | | | |


ನೇಜಾರು ಹತ್ಯಾಕಾಂಡ ಪ್ರಕರಣ  ಒಂದೊಂದಾಗಿ ಬಯಲಾಗುತ್ತಿದೆ ಸೈಕೋ ಕಿಲ್ಲರ್ ಪ್ರವೀಣ್ ಚೌಗುಲೆಯ ಸೀಕ್ರೆಟ್ಸ್!

ಮಂಗಳೂರು, ನ.17: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಪೈಶಾಚಿಕವಾಗಿ ಕೊಂದಿದ್ದ ಹಂತಕ ಪ್ರವೀಣ್ ಚೌಗುಲೆ ವಿಚಿತ್ರ ಮತ್ತು ವಿಕ್ಷಿಪ್ತ ಮನಸ್ಥಿತಿ ಹೊಂದಿದ್ದ ಅನ್ನೋ ವಿಚಾರ ಬಯಲಿಗೆ ಬಂದಿದೆ. ಅಂತಹ ವಿಕೃತ ಮನಸ್ಥಿತಿಯಿಂದಲೇ ಹಸೀನಾ ಅವರ ಕುಟುಂಬದ ಮೂವರು ಹೆಣ್ಮಕ್ಕಳನ್ನು ಮತ್ತು ಇನ್ನೊಬ್ಬ ಬಾಲಕನನ್ನು ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇದಲ್ಲದೆ, ಮಂಗಳೂರಿನಲ್ಲಿ ಐಷಾರಾಮಿ ಜೀವನ ಮಾಡಿಕೊಂಡಿದ್ದ ಅನ್ನೋ ವಿಚಾರವೂ ಸಾರ್ವಜನಿಕರಲ್ಲಿ ಚರ್ಚೆಯಾಗುತ್ತಿದೆ.


ಪ್ರವೀಣ್ ಚೌಗುಲೆಯ ವಿಕ್ಷಿಪ್ತ ಮನಸ್ಥಿತಿ ಎಷ್ಟಿತ್ತು ಅಂದರೆ, ಪತ್ನಿಯ ಬಗ್ಗೆಯೂ ತೀವ್ರ ಸಂಶಯ ಹೊಂದಿದ್ನಂತೆ. ಆಕೆಯನ್ನು ಒಬ್ಬಂಟಿಯಾಗಿ ಹೊರಗಡೆ ಹೋಗುವುದಕ್ಕೂ ಬಿಡುತ್ತಿರಲಿಲ್ವಂತೆ. ಮನೆಯಲ್ಲಿ ಅಗತ್ಯ ಸಾಮಗ್ರಿ ಮುಗಿದರೂ, ಆತನೇ ರಜೆಯಿದ್ದ ದಿವಸ ಅಂಗಡಿಯಿಂದ ಸಾಮಾನು ಖರೀದಿಸುತ್ತಿದ್ದ. ಸದಾ ಅನುಮಾನದ ದೃಷ್ಟಿಯಿಂದ ನೋಡುತ್ತಿದ್ದ ಮತ್ತು ಮಾನಸಿಕ ಹಿಂಸೆ ಕೊಡುತ್ತಿದ್ದ ಅನ್ನುವ ವಿಚಾರ ಆತನ ಸಹವರ್ತಿಗಳಿಂದ ತಿಳಿದುಬಂದಿದೆ. ಇದೇ ವಿಚಾರದಲ್ಲಿ ಪತ್ನಿಯೊಂದಿಗೆ ಜಗಳ ಮಾಡಿ ಆಕೆಯನ್ನು ಕೊಲ್ಲುವುದಕ್ಕೂ ಎರಡು ಬಾರಿ ಪ್ರಯತ್ನ ಪಟ್ಟಿದ್ದ.

ಮಂಗಳೂರಿನ ಕೆಪಿಟಿ ಬಳಿ ಫ್ಲಾಟ್ ಹೊಂದಿದ್ದ ಚೌಗುಲೆ ಆನಂತರ ಇತ್ತೀಚೆಗೆ ಸುರತ್ಕಲ್ ನಲ್ಲಿ ಇಂಡಿಪೆಂಡೆಂಟ್ ಮನೆಗೆ ಶಿಫ್ಟ್ ಆಗಿದ್ದ. ಇದಲ್ಲದೆ, ಕಳೆದ 2023ರ ಜನವರಿ 31ರಂದು ಹೊಸತಾಗಿ ಎಂಜಿ ಹೆಕ್ಟರ್ ಕಾರು ಖರೀದಿಸಿದ್ದ. ಇದೇ ವೇಳೆ, ಟ್ರೈನಿಯಾಗಿ ಏರ್ ಇಂಡಿಯಾ ಸಂಸ್ಥೆಗೆ ಸೇರಿದ್ದ ಅಯ್ನಾಜ್ ಜೊತೆಗೆ ಗೆಳೆತನ ಹೊಂದಿದ್ದ ಎನ್ನಲಾಗುತ್ತಿದ್ದು, ಆಕೆಯ ಮನೆಗೂ ಸಹೋದ್ಯೋಗಿ ಅನ್ನುವ ನೆಲೆಯಲ್ಲಿ ಬಂದು ಹೋಗಿರುವ ಅನುಮಾನವಿದೆ. ಅಯ್ನಾಜ್ ಳನ್ನು ಹೆಚ್ಚಾಗಿ ಹಚ್ಚಿಕೊಂಡಿದ್ದ ಆಕೆಯೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದ. ಆದರೆ ಇವರ ನಡುವೆ ಪ್ರೀತಿಯಿತ್ತೇ, ಈತನದ್ದು ಏಕಮುಖದ ಪ್ರೀತಿಯಾಗಿತ್ತೇ ಎನ್ನುವುದು ತಿಳಿದುಬಂದಿಲ್ಲ. ಆಕೆಯೊಂದಿಗಿದ್ದ ಅತಿಯಾದ ಮೋಹದಿಂದಲೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ


ಮೊನ್ನೆ ನ.12ರಂದು ಕೊಲೆಯಾದ ದಿನವೇ ಪ್ರವೀಣ್ ಚೌಗುಲೆ, ಉಡುಪಿಯಿಂದ ಮಂಗಳೂರಿಗೆ ಬಂದು ತನ್ನ ಕುಟುಂಬದ ಜೊತೆಗೆ ಕಾರಿನಲ್ಲಿ ಪ್ರವಾಸಕ್ಕೆಂದು ಹೊರಟಿದ್ದ. ಬೆಳಗಾವಿ ತಲುಪಿದ ಬಳಿಕ ಕುಡಚಿಯಲ್ಲಿದ್ದ ಸಂಬಂಧಿಕರ ಮನೆಗೆ ತೆರಳಿ ಉಳಿದುಕೊಂಡಿದ್ದ. ಅಲ್ಲಿರುವಾಗಲೇ ಮೊಬೈಲ್ ಆನ್ ಆಗಿದ್ದರಿಂದ ಬೆನ್ನು ಬಿದ್ದಿದ್ದ ಉಡುಪಿ ಪೊಲೀಸರು, ಬೆಳಗಾವಿ ಪೊಲೀಸರ ಮೂಲಕ ಹಿಡಿದಾಕಿದ್ದರು. ಪ್ರವೀಣ್ ಚೌಗುಲೆ ಐಷಾರಾಮಿ ಜೀವನ ಮಾಡುತ್ತಿದ್ದು ಕೇವಲ ಅಲ್ಲಿ ಸಿಗುತ್ತಿದ್ದ ಸಂಬಳದ ಹಣದಿಂದ ಇಷ್ಟೆಲ್ಲ ಮಾಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ, ಆತನನ್ನು ಬಲ್ಲವರು. ಮಂಗಳೂರಿನಲ್ಲಿ ಎರಡು ಫ್ಲಾಟ್, ಸುರತ್ಕಲ್ ನಲ್ಲಿ ಸ್ವಂತ ಮನೆ, ಮತ್ತೊಂದು ಕಡೆ ಖಾಲಿ ಜಾಗ ಖರೀದಿಸಿಟ್ಟಿದ್ದ ಚೌಗುಲೆಗೆ ಹಣ ಎಲ್ಲಿಂದ ಬಂದಿರುವುದು ಅನ್ನುವ ಶಂಕೆ ಇದೆ.


ಪ್ರವೀಣ್ ಚೌಗುಲೆ ಏಳೆಂಟು ವರ್ಷಗಳಿಂದ ಏರ್ ಇಂಡಿಯಾ ವಿಮಾನದಲ್ಲಿ ಸಿಬಂದಿಯಾಗಿದ್ದರಿಂದ ಮಾದಕ ವಸ್ತು ಅಥವಾ ಚಿನ್ನದ ಸ್ಮಗ್ಲಿಂಗ್ ಜಾಲದಲ್ಲಿ ಇದ್ದಾನೆಯೇ ಎಂಬ ಸಂಶಯಗಳಿವೆ. ದುಬೈ ವಿಮಾನದಲ್ಲಿ ಕೆಲಸಕ್ಕಿದ್ದರಿಂದ ಅಕ್ರಮ ಮಾಫಿಯಾಗಳ ನಂಟು ಇರಬಹುದು. ವಿಮಾನದ ಸಿಬಂದಿಗಳಿಗೆ ಏರ್ಪೋರ್ಟ್ ನಲ್ಲಿ ಚೆಕ್ಕಿಂಗ್ ಇಲ್ಲದೆ ನೇರವಾಗಿ ಬಂದು ಹೋಗುವ ವ್ಯವಸ್ಥೆ ಇರುವುದರಿಂದ ಇವರನ್ನು ಬಳಸಿಕೊಂಡು ಚಿನ್ನ, ಮಾದಕ ವಸ್ತು ಸಾಗಾಟ ನಡೆದಿರಬಹುದೇ ಅನ್ನುವ ಅನುಮಾನ ವ್ಯಕ್ತವಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಮಹಿಳೆಯನ್ನು ಮದುವೆಯಾಗಿದ್ದು, ಹತ್ತು ವರ್ಷದ ಮಗ ಮತ್ತು ಇನ್ನೊಂದು ಎರಡು ವರ್ಷದ ಮಗು ಹೊಂದಿದ್ದಾನೆ.

ಅತಿಯಾದ ವ್ಯಾಮೋಹಕ್ಕೆ ನಾಲ್ಕು ಜೀವ ಬಲಿ


ಆರೋಪಿ ಪ್ರವೀಣ್ ಚೌಗುಲೆಯದ್ದು ವಿಕ್ಷಿಪ್ತ ಮನಸ್ಥಿತಿ ಇತ್ತು ಅನ್ನುವ ನೆಲೆಯಲ್ಲಿ ಚರ್ಚೆಯಾಗುತ್ತಿರುವಾಗಲೇ ಮನಶಾಸ್ತ್ರಜ್ಞರು ಅತಿಯಾದ ಮೋಹವೂ (ಪೊಸೆಸಿವ್ ನೆಸ್) ಅಪರಾಧಕ್ಕೆ ಕಾರಣವಾಗಬಲ್ಲದು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಕೆಲವೊಂದು ವಸ್ತುಗಳ ಬಗ್ಗೆ, ಮನಸ್ಸಿಗೆ ಕಂಡಿದ್ದು, ತುಂಬ ಇಷ್ಟವಾದ ವಸ್ತುಗಳ ಬಗ್ಗೆ ಮನುಷ್ಯ ಅತಿಯಾದ ವ್ಯಾಮೋಹ ಇಟ್ಟುಕೊಂಡಿರುತ್ತಾನೆ. ಇದರಿಂದ ಆ ವಸ್ತು ತನಗೆ ಬಿಟ್ಟು ಬೇರೆ ಯಾರಿಗೂ ಸೇರಬಾರದು, ತನಗೆ ಮಾತ್ರ ಸೇರಬೇಕು ಎನ್ನುವ ಮತ್ಸರ ಸಹಿತ ವ್ಯಾಮೋಹ ಇರುತ್ತದೆ. ಪತ್ನಿಗೆ ಯಾರೊಂದಿಗೋ ಸಂಬಂಧವಿದೆ ಎನ್ನುವ ಶಂಕೆಯೂ ಇದೇ ತೆರನಾದದ್ದು ಎನ್ನುತ್ತಾರೆ, ತಜ್ಞರು. ಕೆಲವೊಬ್ಬರು ಗಣ್ಯರು, ಸೆಲೆಬ್ರಿಟಿಗಳ ಬಗ್ಗೆ ಅತಿಯಾದ ಹುಸಿ ಪ್ರೀತಿ, ವ್ಯಾಮೋಹ ಇಟ್ಟಿರುತ್ತಾರೆ. ಅಂಥವರು ಸತ್ತರೆ ತಾವೂ ಸಾಯುವ, ಆತ್ಮಹತ್ಯೆ ಮಾಡಿಕೊಳ್ಳುವ ಪ್ರವೃತ್ತಿ ಹೊಂದಿರುತ್ತಾರೆ. ಇಂಥವರು ಕೆಲವೊಮ್ಮೆ ವೃತ್ತಿ ಸಾಮೀಪ್ಯದಲ್ಲಿ ಹೆಣ್ಮಕ್ಕಳು ನಕ್ಕರೂ, ಆಕೆ ತನ್ನನ್ನು ಇಷ್ಟ ಪಡುತ್ತಾಳೆ ಎಂದು ಭ್ರಮೆಯಲ್ಲಿರುತ್ತಾರೆ. ಆದರೆ ಈ ರೀತಿಯ ಮಾನಸಿಕ ಸ್ಥಿತಿ ಅಪರಾಧಕ್ಕೆ ಕಾರಣವಾದೀತೆಂದು ಅದನ್ನು ಶಿಕ್ಷೆಯಿಂದ ಪಾರು ಮಾಡಲು ಮಾನಸಿಕ ಸಮಸ್ಯೆಯೆಂದು ಪರಿಗಣಿಸಲಾಗದು ಎಂದು ಹೇಳುತ್ತಾರೆ, ತಜ್ಞರು.

ದೆಹಲಿ ಮುಖ್ಯಮಂತ್ರಿ ಕೇಜ್ರವಾಲ್ ಬಂಧನದ ಬಗ್ಗೆ ಅಣ್ಣಾ ಹಜಾರೆ ಪ್ರತಿಕ್ರಿಯೆ

Posted by Vidyamaana on 2024-03-22 15:51:14 |

Share: | | | | |


ದೆಹಲಿ ಮುಖ್ಯಮಂತ್ರಿ ಕೇಜ್ರವಾಲ್ ಬಂಧನದ ಬಗ್ಗೆ ಅಣ್ಣಾ ಹಜಾರೆ ಪ್ರತಿಕ್ರಿಯೆ

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಅರವಿಂದ್ ಕೇಜ್ರಿವಾಲ್ ಅವರ "ಮದ್ಯದ ನೀತಿಗಳ" ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ದೆಹಲಿ ಮುಖ್ಯಮಂತ್ರಿಯ ಬಂಧನವು ಅವರ ಸ್ವಂತ ಕಾರ್ಯಗಳಿಂದಾಗಿ ಆಗಿದೆ" ಎಂದು ಹೇಳಿದ್ದಾರೆ.ಭ್ರಷ್ಟಾಚಾರ ವಿರೋಧಿ ಚಳವಳಿಯ ಮುಖಂಡ ಮಹಾರಾಷ್ಟ್ರದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅರವಿಂದ್ ಕೇಜ್ರಿವಾಲ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಅವರು ಮೊದಲು ಮದ್ಯದ ವಿರುದ್ಧ ಕೆಲಸ ಮಾಡುತ್ತಿದ್ದರು ಮತ್ತು ಈಗ ಅವರು ಅದಕ್ಕಾಗಿ ನೀತಿಯನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. "ನನ್ನೊಂದಿಗೆ ಕೆಲಸ ಮಾಡುತ್ತಿದ್ದ, ಮದ್ಯದ ವಿರುದ್ಧ ಧ್ವನಿ ಎತ್ತುತ್ತಿದ್ದ ಅರವಿಂದ್ ಕೇಜ್ರಿವಾಲ್ ಈಗ ಮದ್ಯದ ನೀತಿಗಳನ್ನು ರೂಪಿಸುತ್ತಿದ್ದಾರೆ ಎಂದು ನನಗೆ ತುಂಬಾ ಅಸಮಾಧಾನವಾಗಿದೆ. ಅವರ ಬಂಧನವು ಅವರ ಸ್ವಂತ ಕಾರ್ಯಗಳಿಂದಾಗಿದೆ" ಎಂದು ಅಣ್ಣಾ ಹಜಾರೆ ಅಹ್ಮದ್ ನಗರದಲ್ಲಿ ಹೇಳಿದರು.

ಸುಪ್ರೀಂ ಕೋರ್ಟ್ ನಿಂದ ಅರ್ಜಿ ಹಿಂಪಡೆದ ಕೇಜ್ರಿವಾಲ್

ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಕೇಜ್ರಿವಾಲ್ ಇಂದು ಸುಪ್ರೀಂ ಕೋರ್ಟ್ ನಿಂದ ಹಿಂತೆಗೆದುಕೊಂಡಿದ್ದಾರೆ. ವಿಚಾರಣಾ ನ್ಯಾಯಾಲಯದ ಮುಂದೆ ರಿಮಾಂಡ್ ವಿಚಾರಣೆಯನ್ನು ಪ್ರಶ್ನಿಸುವುದಾಗಿ ಮತ್ತು ನಂತರ ಮತ್ತೊಂದು ಅರ್ಜಿಯೊಂದಿಗೆ ಸುಪ್ರೀಂ ಕೋರ್ಟ್ಗೆ ಮರಳುವುದಾಗಿ ಕೇಜ್ರಿವಾಲ್ ಅವರ ವಕೀಲರು ಹೇಳಿದರು.

ಹಿರಿಯ ನಾಗರೀಕರಿಗೆ ಹಾಗೂ ಅಂಗವಿಕಲರಿಗೆ ನಡೆಯುವ ಮನೆ ಮತಧಾನದ ದಿನಾಂಕ ಬದಲು ಇಲ್ಲಿದೆ ಬದಲಾದ ದಿನಾಂಕ

Posted by Vidyamaana on 2024-04-13 13:43:08 |

Share: | | | | |


ಹಿರಿಯ ನಾಗರೀಕರಿಗೆ ಹಾಗೂ ಅಂಗವಿಕಲರಿಗೆ ನಡೆಯುವ ಮನೆ ಮತಧಾನದ ದಿನಾಂಕ ಬದಲು ಇಲ್ಲಿದೆ ಬದಲಾದ ದಿನಾಂಕ

ಪುತ್ತೂರು: ಹಿರಿಯ ನಾಗರೀಕರಿಗೆ ಹಾಗೂ ಅಂಗವಿಕಲರಿಗೆ ನಡೆಯುವ ಮನೆ ಮತಧಾನ ಪ್ರಕ್ರಿಯೆ ಏ.೧೪ರಂದು ಸೌರ ಯುಗಾದಿ (ವಿಷು ಹಬ್ಬ) ಇರುವ ಹಿನ್ನಲೆಯಲ್ಲಿ ಏ.೧೪ರ ಬದಲಾಗಿ ಏ.೧೫ರಂದು ಪ್ರಾರಂಭವಾಗಿ, ೧೭ರವರೆಗೆ ನಡೆಯಲಿದೆ. 



Leave a Comment: