ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ಬಾಡಿಗೆ ಕಾರು ಚಾಲಕನ ಖಾತೆಗೆ ಬ್ಯಾಂಕ್​ನಿಂದ ಕ್ರೆಡಿಟ್​ ಆಯ್ತು 9 ಸಾವಿರ ಕೋಟಿ ರೂ! ಮುಂದೇನಾಯ್ತು ಗೊತ್ತಾ?

Posted by Vidyamaana on 2023-09-21 14:48:10 |

Share: | | | | |


ಬಾಡಿಗೆ ಕಾರು ಚಾಲಕನ ಖಾತೆಗೆ ಬ್ಯಾಂಕ್​ನಿಂದ ಕ್ರೆಡಿಟ್​ ಆಯ್ತು 9 ಸಾವಿರ ಕೋಟಿ ರೂ! ಮುಂದೇನಾಯ್ತು ಗೊತ್ತಾ?

ಚೆನ್ನೈ: ಬಾಡಿಗೆ ಚಾಲಕನೋರ್ವನ ಬ್ಯಾಂಕ್​ ಖಾತೆಗೆ ತಮಿಳುನಾಡು ಮರ್ಕೆಂಟೈಲ್​ ಬ್ಯಾಂಕ್​ನಿಂದ 9 ಸಾವಿರ ಕೋಟಿ ರೂಪಾಯಿ ಜಮಾ ಆಗಿರುವ ಘಟನೆ ಇದೀಗ ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿದೆ. ಈ ಬಗ್ಗೆ ಕಾರು ಚಾಲಕ ಹಾಗೂ ಬ್ಯಾಂಕ್​ ಕಡೆಯಿಂದ ಲಾಯರ್​ಗಳು ಮಧ್ಯಸ್ಥಿಕೆವಹಿಸಿ ರಾಜಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.


ಪಳನಿ ನೇಯ್ಕಪಟ್ಟಿ ನಿವಾಸಿ ರಾಜಕುಮಾರ್​, ಕೋಡಂಬಾಕ್ಕಂನಲ್ಲಿ ಸ್ನೇಹಿತರೊಬ್ಬರ ರೂಂನಲ್ಲಿದ್ದು, ಬಾಡಿಗೆ ಬಾಡಿಗೆ ಕಾರು ಓಡಿಸುತ್ತಿದ್ದಾರೆ. ಸೆ. 9 ರಂದು ಮಧ್ಯಾಹ್ನ 3 ಗಂಟೆ ಹೊತ್ತಿಗೆ ರಾಜಕುಮಾರ್​ ಅವರು ತಮ್ಮ ಕಾರಿನಲ್ಲಿ ಮಲಗಿದ್ದಾಗ ಮೊಬೈಲ್​ಗೆ ಮೆಸೇಜ್​ ಬಂದಿದೆ. ರಾಜಕುಮಾರ್​ ಅವರ ಬ್ಯಾಂಕ್​ ಖಾತೆಗೆ ಮರ್ಕೆಂಟೈಲ್​ ಬ್ಯಾಂಕ್​ನಿಂದ 9 ಸಾವಿರ ಕೋಟಿ ರೂಪಾಯಿ ಜಮಾ ಆಗಿದೆ ಎಂದು ಮೆಸೇಜ್​ ಮೂಲಕ ತಿಳಿಸಲಾಗಿತ್ತು. ಅದರಲ್ಲಿದ್ದ ಸೊನ್ನೆಗಳನ್ನು ಲೆಕ್ಕ ಹಾಕಲಾಗದೆ ಎಷ್ಟು ಹಣ ಬಂದಿದೆ ಎಂದು ಗೊಂದಲದಲ್ಲಿದ್ದ ರಾಜಕುಮಾರ್,​ ಯಾರೋ ಮೋಸ ಮಾಡಲೆಂದೇ ಈ ರೀತಿಯ ಮೆಸೇಜ್​ ಕಳುಹಿಸಿದ್ದಾರೆ, ತಮ್ಮ ಖಾತೆಯಲ್ಲಿ 15 ರೂಪಾಯಿ ಮಾತ್ರ ಇದೆ ಎಂದುಕೊಂಡಿದ್ದರು. ಆದರೂ ಒಂದು ಬಾರಿ ನೋಡೋಣ ಎಂದು ತಮ್ಮ ಸ್ನೇಹಿತರೊಬ್ಬರಿಗೆ 21 ಸಾವಿರ ರೂಪಾಯಿ ಕಳುಹಿಸಿದ್ದಾರೆ. ಆಗ ನಿಜವಾಗಿಯೂ ಅವರ ಖಾತೆಗೆ 9 ಸಾವಿರ ಕೋಟಿ ರೂಪಾಯಿ ಹಣ ಬಂದಿರುವುದು ನಿಜ ಎಂದು ನಂಬಿ ಖುಷಿಯಾಗಿದ್ದಾರೆ.


ಆದರೆ ಅಷ್ಟರಲ್ಲಿ ತಮಿಳುನಾಡು ಮರ್ಕೆಂಟೈಲ್​ ಬ್ಯಾಂಕ್​ನ ಕೇಂದ್ರ ಕಚೇರಿ ತೂತುಕುಡಿಯಿಂದ ರಾಜಕುಮಾರ್​ ಅವರಿಗೆ ದೂರವಾಣಿ ಕರೆ ಬಂದಿದೆ. ಫೋನ್​ ಮಾಡಿದವರು ತಪ್ಪಾಗಿ ನಿಮ್ಮ ಖಾತೆಗೆ 9 ಸಾವಿ ಕೋಟಿ ಹಣ ಜಮೆಯಾಗಿದೆ. ಬ್ಯಾಂಕ್​ನಿಂದ ಜಮೆ ಆಗಿರುವ ಹಣವನ್ನು ಖರ್ಚು ಮಾಡದಂತೆ ಬ್ಯಾಂಕ್​ ಆಡಳಿತ ಮಂಡಳಿ ರಾಜಕುಮಾರ್​ ಅವರಿಗೆ ತಿಳಿಸಿದೆರಾಜಕುಮಾರ್​ ಅವರು ಸ್ನೇಹಿತನಿಗೆ ಕಳುಹಿಸಿದ 21 ಸಾವಿರ ಹೊರತುಪಡಿಸಿ, ಉಳಿದ ಎಲ್ಲಾ ಹಣವನ್ನು ತಕ್ಷಣವೇ ಹಿಂಪಡೆದಿದೆ. ಇದಾದ ನಂತರ ಬ್ಯಾಂಕ್​ನವರು ಉಳಿದ 21 ಸಾವಿರ ರೂಪಾಯಿಯನ್ನು ಹಿಂತಿರುಗಿಸುವಂತೆ ರಾಜಕುಮಾರ್​ ಅವರಿಗೆ ಬೆದರಿಕೆ ಹಾಕಲು ಆರಂಭಿಸಿತ್ತು ಎನ್ನಲಾಗಿದೆ. ರಾಜಕುಮಾರ್​ ಅವರು ಹತ್ತಿರದ ಪೊಲೀಸ್​ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದಾರೆ. ಆದರೆ ನಂತರ ತಮಿಳುನಾಡು ಮರ್ಕೆಂಟೈಲ್​ ಬ್ಯಾಂಕ್​ನ ಕಡೆಯಿಂದ ಹಾಗೂ ಕಾರು ಚಾಲಕ ರಾಜಕುಮಾರ್​ ಕಡೆಯಿಂದ ವಕೀಲರು ಚೆನ್ನೈನ ತ್ಯಾಗರಾಯನಗರದಲ್ಲಿರುವ ಶಾಖೆಗೆ ತೆರಳಿ ಸಂಧಾನ ಮಾತುಕತೆ ನಡೆಸಿದ್ದಾರೆ.ಸಂಧಾನ ಮಾತುಕತೆಯಲ್ಲಿ ಬ್ಯಾಂಕ್​ನವರು ರಾಜಕುಮಾರ್​ ಅವರು ಈಗಾಗಲೇ 9 ಸಾವಿರ ಕೋಟಿ ರೂಪಾಯಿಯಲ್ಲಿ ಸ್ನೇಹಿತನಿಗೆ ನೀಡಿದ 21 ಸಾವಿರ ರೂಪಾಯಿಯನ್ನು ಹಿಂತಿರುಗಿಸುವುದು ಬೇಡ ಎನ್ನುವುದರ ಜೊತೆಗೆ ಅವರಿಗೆ ವಾಹನ ಸಾಲವನ್ನು ನೀಡುವುದಾಗಿಯೂ ಹೇಳಿದ್ದಾರೆ. ಆದರೆ ರಾಜಕುಮಾರ್​ ಆ ಆಫರ್​ ಅನ್ನು ಸ್ವೀಕರಿಸಿಲ್ಲ ಎಂದು ವರದಿಯಾಗಿದೆ. ಒಬ್ಬ ಕಾರು ಚಾಲಕನ ಖಾತೆಗೆ ಏಕಾಏಕಿ 9 ಸಾವಿರ ಕೋಟಿ ಹಣ ಜಮೆ ಆಗಿರುವುದು ಭಾರಿ ಸಂಚಲನ ಮೂಡಿಸಿದೆ.

ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ

Posted by Vidyamaana on 2024-03-17 07:53:06 |

Share: | | | | |


ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ

ಚಾಮರಾಜನಗರ, ಮಾ.17: ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ ಹೊಡೆದ ಘಟನೆ ಹನೂರು ತಾಲೂಕಿನ ಗಡಿ ಭಾಗವಾದ ಗರಿಕೆಕಿಂಡಿ ಸಮೀಪ ಇಂದು ಮುಂಜಾನೆ ನಡೆದಿದೆ.ಚಾಮರಾಜನಗರದಿಂದ ತಮಿಳುನಾಡಿಗೆ ತೆರುಳುತ್ತಿದ್ದ ಲಾರಿಯೊಂದು ಕೆಟ್ಟು ರಸ್ತೆಯ ಪಕ್ಕದಲ್ಲಿ ನಿಂತಿತ್ತು.ವೇಳೆ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುತ್ತಿದ್ದಂತಹ ಲಾರಿಯೊಂದು ಢಿಕ್ಕಿ ಹೊಡೆದು ರಸ್ತೆಯ ಪಕ್ಕದ ಗೋಡೆಗೂ ಸಹ ಗುದ್ದಿದೆ. ಇದರ ಪರಿಣಾಮ ಲಾರಿಗಳೆರಡು ಜಖಂಗೊಂಡು ಚಾಲಕನಿಗೆ ಗಾಯಗಳಾಗಿವೆ. 


ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಅವಘಡ ಶನಿವಾರ ಮುಂಜಾನೆ 5 ಗಂಟೆಯಲ್ಲಿ ಸಂಭವಿಸಿದೆ ಹಾಗೂ ಕೆಲ ಕಾಲ ರಸ್ತೆ ಅಡಚಣೆ ಉಂಟಾಗಿತ್ತು ಎಂದು ತಿಳಿದುಬಂದಿದೆ.

ಬಡಗನ್ನೂರು: ದರೋಡೆಗೊಳಗಾದ ಮನೆಗೆ ಅರುಣ್ ಪುತ್ತಿಲ ಭೇಟಿ

Posted by Vidyamaana on 2023-09-08 12:50:48 |

Share: | | | | |


ಬಡಗನ್ನೂರು: ದರೋಡೆಗೊಳಗಾದ ಮನೆಗೆ ಅರುಣ್ ಪುತ್ತಿಲ ಭೇಟಿ

ಪುತ್ತೂರು: ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡ ಬಡಗನ್ನೂರು ಕುದ್ಕಾಡಿ ಗುರುಪ್ರಸಾದ್ ರೈ ಯವರ ಮನೆಗೆ ಸೆ.07ರ ಮುಂಜಾನೆ ನುಗ್ಗಿದ ಮುಸುಕುಧಾರಿ ದರೋಡೆಕೋರರ ಗುಂಪು ಮನೆಯಲ್ಲಿದ್ದವರನ್ನು ಕಟ್ಟಿಹಾಕಿ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಘಟನೆ ನಡೆದ ಮನೆಗೆ ನಿನ್ನೆ ರಾತ್ರಿ (ಸೆ.07) ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.

ಈ ಸಂದರ್ಭದಲ್ಲಿಗುರುಪ್ರಸಾದ್ ರೈ ಮತ್ತು ಅವರ ತಾಯಿಯೊಂದಿಗೆ ಮಾತನಾಡಿದ ಪುತ್ತಿಲ ಅವರು ಮನೆಮಂದಿಗೆ ಧೈರ್ಯ ತುಂಬಿದರು. 

ಪುತ್ತೂರಿನ ಗ್ರಾಮಾಂತರ ಭಾಗದ ಹಲವು ಕಡೆಗಳಲ್ಲಿ ರಾತ್ರಿ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಪೊಲೀಸರು ಗ್ರಾಮಾಂತರ ಭಾಗದಲ್ಲಿರಾತ್ರಿ ಬೀಟ್ ವ್ಯವಸ್ಥೆ ಮಾಡಿ ಜನಸಾಮಾನ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು ಮತ್ತು ಈ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಇದೇ ಸಂದರ್ಭದಲ್ಲಿ ಪುತ್ತಿಲ ಪರಿವಾರ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ತರಬೇತಿ ಪಡೆದ ಹೃದಯಾಂಶು ಸೈನಿಕ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆ

Posted by Vidyamaana on 2024-03-22 16:54:49 |

Share: | | | | |


ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ತರಬೇತಿ ಪಡೆದ ಹೃದಯಾಂಶು ಸೈನಿಕ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆ

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 9ನೇ ತರಗತಿಯ ಸೈನಿಕ ಶಾಲೆ ಪ್ರವೇಶ ಪರೀಕ್ಷೆಗೆ ತರಬೇತಿ ಪಡೆದುಕೊಂಡ ವಿದ್ಯಾರ್ಥಿ ಹೃದಯಾಂಶು ತೇರ್ಗಡೆ ಹೊಂದಿರುತ್ತಾರೆ.

ಬೆಂಜನಪದವು ಕೊರಗಜ್ಜನ ಕಟ್ಟೆ ನಿವಾಸಿಗಳಾದ ರಶ್ಮಿ ಹಾಗೂ ಸುರೇಂದ್ರ ಶೆಟ್ಟಿ ದಂಪತಿಯ ಪುತ್ರನಾಗಿರುವ ಇವರು ಪ್ರಸ್ತುತ ಬಡಕಬೈಲು ಪೊಳಲಿಯ ಸೈಂಟ್ ಡೋಮೆನಿಕ್ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಾರೆ. ಇವರ ಸಾಧನೆಗೆ ಸಂಸ್ಥೆಯ ಸಂಚಾಲಕ ಗೋಕುಲ್‌ನಾಥ್ ಪಿ. ವಿ. ಹಾಗೂ ಪ್ರಾಂಶುಪಾಲೆ ಹೇಮಲತಾ ಗೋಕುಲ್‌ನಾಥ್ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ಬಜ್ಪೆ: ಫಲ್ಗುಣಿ ನದಿಗೆ ಬಿದ್ದು ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

Posted by Vidyamaana on 2023-11-23 12:49:32 |

Share: | | | | |


ಬಜ್ಪೆ: ಫಲ್ಗುಣಿ ನದಿಗೆ ಬಿದ್ದು ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

ಬಜ್ಪೆ: ಫಲ್ಗುಣಿ ನದಿಗೆ ಬಿದ್ದು ನೀರು ಪಾಲಾಗಿದ್ದ ಕಾವೂರು ಆಕಾಶಭವನ ನಿವಾಸಿ ಪ್ರಭಾಕರ ಆಚಾರಿ ಎಂಬವರ ಪುತ್ರ ಪ್ರಶಾಂತ್ ಕುಮಾರ್ ಅವರ ಮೃತದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ.ಮಂಗಳವಾರ ಬೆಳಗ್ಗೆ ತನ್ನ ಗೆಳೆಯರೊಂದಿಗೆ ಪೊಳಲಿ ದೇವಸ್ಥಾನಕ್ಕೆ ತೆರಳಿದ್ದ ಪ್ರಶಾಂತ್‌ ಆಚಾರಿ, ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನದಿಗೆ ಇಳಿದು ಸ್ನಾನ ಮಾಡಿದ್ದರು.ಬಳಿಕ ಅವರ ಶೂವೊಂದರ ದಾರ ನೀರಿನಲ್ಲಿ ಹೋಗಿದೆ ಎಂದು ಅದನ್ನು ಹುಡುಕಿ ನೀರಿಗೆ ಇಳಿದಿದ್ದ ವೇಳೆ ಅವರು ನದಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು ಎಂದು ಅವರ ಸ್ನೇಹಿತರು ನೀಡಿದ್ದ ದೂರಿನಲ್ಲಿ ತಿಳಿಸಿದ್ದಾರೆ.


ನಾಪತ್ತೆಯಾದ ಕುರಿತು ಮಾಹಿತಿ ತಿಳಿದೊಡನೆ ಬಜ್ಪೆ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಶಾಂತ್‌ ಆಚಾರಿ ಅವರಿಗಾಗಿ ಶೋಧಕಾರ್ಯ ಆರಂಭಿಸಿದ್ದರು.


ಬುಧವಾರ ಸಂಜೆ 3 ಗಂಟೆಯ ಸುಮಾರಿಗೆ ಪ್ರಶಾಂತ್‌ ಆಚಾರಿ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು:ಅಪಾಯ ಸಂಭವಿಸುವ ಮೊದಲು ಈ ಎರಡು ಕಡೆಯ ಹೊಂಡ ಮುಚ್ಚಿ!!

Posted by Vidyamaana on 2024-08-02 19:20:36 |

Share: | | | | |


ಪುತ್ತೂರು:ಅಪಾಯ ಸಂಭವಿಸುವ ಮೊದಲು ಈ ಎರಡು ಕಡೆಯ ಹೊಂಡ ಮುಚ್ಚಿ!!

ಪುತ್ತೂರು: ಮಳೆ ಕಾರಣಕ್ಕೆ ರಸ್ತೆಗಳು ಹೊಂಡ ಬಿದ್ದಿವೆ ನಿಜ. ಆದರೆ ವಾಹನಗಳು ನಲುಗಿ ಹೋಗುತ್ತಿವೆ, ಸಂಚಾರ ದಟ್ಟಣೆಗೆ ಎಡೆ ನೀಡಿದೆ, ಪ್ರಯಾಣಿಕರು ರೋಸಿ ಹೋಗಿದ್ದಾರೆ.

ಇದು ದರ್ಬೆ ಜಂಕ್ಷನ್ ಹಾಗೂ ಹರ್ಷ ಮಳಿಗೆಯ ಮುಂದಿನ ಮರಣ ಗುಂಡಿಗಳಿಂದ ಅಗಿರುವ ಸಮಸ್ಯೆ

Recent News


Leave a Comment: