Posted by vidyamaana on 2024-07-23 21:30:52 |
ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.
ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.
ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.
ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು.
ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.
Posted by Vidyamaana on 2024-01-30 10:03:18 |
ಪುತ್ತೂರು :ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಬರೋಬ್ಬರಿ 132 ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್)ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಪುತ್ತೂರು ನಗರ ಠಾಣಾ ಇನ್ಸೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುನಿಲ್ ಕುಮಾರ್ ಎಂ ಎಸ್ ಅವರನ್ನು ವರ್ಗಾವಣೆ ಮಾಡಿ ಪುತ್ತೂರು ಮಹಿಳಾ ಠಾಣಾ ಇನ್ಸೆಕ್ಟರ್ ಆಗಿ ನೇಮಕಗೊಳಿಸಿ ಆದೇಶಿಸಲಾಗಿದೆ.
ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ ಪೆಕ್ಟರ್ಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ
Posted by Vidyamaana on 2023-10-27 16:43:17 |
ಮಂಗಳೂರು, ಅ.27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
"ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ" ಎಂದು ಬರೆದು ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರಿನ ಸಿಎಂ ನಿವಾಸದ ಫೋಟೊ ಪೋಸ್ಟ್ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ರಾಜ್ಯದ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ನೀಡಿದ್ದು ಇದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇತ್ತೀಚೆಗೆ ಅರಣ್ಯ ಅಧಿಕಾರಿಗಳನ್ನು ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಒಂದು ವಾರದ ಅಂತರದಲ್ಲಿ ಮತ್ತೊಂದು ಎಫ್ಐಆರ್ ಆಗಿದೆ.
Posted by Vidyamaana on 2023-09-16 08:21:20 |
ದುಬೈ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಸೆ 15 ರಂದು ದುಬೈಗೆ ಭೇಟಿ ನೀಡಿದ್ದು, ಈ ಸಂದರ್ಭ ಅಲ್ಲಿರುವ ಪುತ್ತೂರಿನವರನ್ನು ಭೇಟಿಯಾದರು.
ದುಬೈಯ ಜುಮೈರಾ ತಾಜ್ ಹೊಟೇಲಿನಲ್ಲಿ ಶಾಸಕರಿಗೆ ಆತ್ಮೀಯ ಸ್ವಾಗತ ನೀಡಿ, ಅಭಿನಂದಿಸಿದರು.
ಬಳಿಕ ನಡೆದ ಸೌಹಾರ್ದ ಭೇಟಿಯಲ್ಲಿ ಮಾತನಾಡಿದ ಅಶೋಕ್ ರೈ, ಚುನಾವಣೆ ಸಂದರ್ಭ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ದುಬೈನಲ್ಲಿ ನೆಲೆಸಿರುವ ನಮ್ಮೂರಿನ ಯುವಕರ ಸಹಕಾರ ಅವಿಸ್ಮರಣೀಯ. ನಮ್ಮೂರಿನ ಜನಪರ ಕೆಲಸಗಳಿಗೆ ಸದಾ ನಿಮ್ಮ ಬೆಂಬಲ ಮುಂದೆಯೂ ಬೇಕು ಎಂದ ಅವರು, ದುಬೈಯ ಪುತ್ತೂರಿಗರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಸ್ತಾಫಾ ಕೋಡಿಂಬಾಡಿ, ಖಲೀಲ್ ಬಿ.ಎಚ್., ಅಜಿತ್ ಕೋಡಿಂಬಾಡಿ, ಅನ್ಸಾರ್ ಬಿ.ಎಚ್., ಸಿನಾನ್ ಮೊದಲಾದವರು ಉಪಸ್ಥಿತರಿದ್ದರು.
Posted by Vidyamaana on 2023-10-03 15:33:22 |
ತಮ್ಮ ಅದ್ಭುತ ಅಭಿನಯದ ಮೂಲಕ ರಂಜಿಸಿದ ಅತಿಲೋಕ ಸುಂದರಿ ಶ್ರೀದೇವಿ ಅವರು ಐದು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ಪತಿ ಜತೆ ದುಬೈಗೆ ತೆರಳಿದ್ದ ಶ್ರೀದೇವಿ ಅವರು ಆಕಸ್ಮಿಕವಾಗಿ ಬಾತ್ ಟಬ್ಗೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು ಎಂದು ಮರಣೋತ್ತರ ಪರೀಕ್ಷೆಯಲ್ಲಿ ಹೇಳಲಾಗಿತ್ತು.ಇನ್ನೂ ಶ್ರೀದೇವಿಯದ್ದು ಸಹಜ ಸಾವಲ್ಲ, ಅನುಮಾನಾಸ್ಪದವಾಗಿ ನಿಧನರಾಗಿದ್ದಾರೆ ಎಂದು ಕೆಲವರು ಪತಿ ಬೋನಿ ಕಪೂರ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲಿನ ಪೊಲೀಸರು ಕೂಡ ಬೋನಿ ಕಪೂರ್ ಮೇಲೆ ಅನುಮಾನಗೊಂಡು ಭಾರೀ ವಿಚಾರಣೆ ನಡೆಸಿದ್ದರು. ಇದೀಗ 5 ವರ್ಷಗಳ ಬಳಿಕ ಸಂದರ್ಶನವೊಂದರಲ್ಲಿ ಬೋನಿ ಕಪೂರ್ ಪತ್ನಿ ಶ್ರೀದೇವಿ ಸಾವಿನ ಬಗ್ಗೆ ಮಾತನಾಡಿದ್ದಾರೆ."ಶ್ರೀದೇವಿ ಸಾವಿನ ಬಗ್ಗೆ ಮಾತನಾಡದಿರಲು ನಿರ್ಧರಿಸಿದೆ. ಏಕೆಂದರೆ ಆಕೆ ಸಾವಿನ ಸಂಬಂಧ ನನ್ನನ್ನು 48 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಇಲ್ಲಿ ಯಾವುದೇ ಮೋಸದಾಟ ಇರಲಿಲ್ಲ. ನಾನು ಸುಳ್ಳು ಪತ್ತೆ ಪರೀಕ್ಷೆ ಸೇರಿದಂತೆ ಎಲ್ಲಾ ತರಹದ ವಿಚಾರಣೆ ಎದುರಿಸಿದೆ. ಕೊನೆಗೆ ಬಂದ ವರದಿಯಲ್ಲಿ ಶ್ರೀದೇವಿ ಸಾವು ಆಕಸ್ಮಿಕ ಎಂದು ಸ್ಪಷ್ಟವಾಯಿತು.ಇನ್ನೂ ಶ್ರೀದೇವಿ ಅವರಿಗೆ ಸೌಂದರ್ಯ ಮೇಲಿದ್ದ ಹೆಚ್ಚಿನ ಕಾಳಜಿ ಅವರ ಸಾವಿಗೆ ಕಾರಣವಾಯಿತು ಎಂದು ಬೋನಿ ಕಪೂರ್ ಹೇಳಿದರು..
ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!
ಉಪ್ಪು ಇಲ್ಲದ ಆಹಾರ ಸೇವನೆ ಮಾಡುತ್ತಿದ್ದ ಶ್ರೀದೇವಿ:
"ತೆರೆಮೇಲೆ ಅಂದವಾಗಿ ಕಾಣಿಸಬೇಕು ಎಂದು ಶ್ರೀದೇವಿ ಸ್ಟ್ರಿಕ್ಟ್ ಡಯೆಟ್ ಅನುಸರಿಸುತ್ತಿದ್ದಳು. ಮದುವೆ ನಂತರ ಈ ವಿಷಯ ನನಗೆ ತಿಳಿಯಿತು. ಉಪ್ಪು ಇಲ್ಲದೆ ಆಹಾರ ಸೇವನೆ ಮಾಡುತ್ತಿದ್ದರಿಂದ ಅನೇಕ ಬಾರಿ ಲೋ ಬಿಪಿಯಿಂದ ನಿತ್ರಾಣಗೊಳ್ಳುತ್ತಿದ್ದಳು. ವೈದ್ಯರು ಜಾಗೃತೆಯಿಂದ ಇರಲು ಹೇಳಿದ್ದರು. ಆದರೆ ಆಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. ಶ್ರೀದೇವಿಯದ್ದು ಸಹಜ ಸಾವಲ್ಲ. ಆಕಸ್ಮಿಕ ಸಾವು" ಎಂದಿದ್ದಾರೆ.
ಇನ್ನೂ ಶ್ರೀದೇವಿ ನಿಧನದ ಬಳಿಕ ನಟ ನಾಗಾರ್ಜುನ್ ಸಾಂತ್ವನ ಹೇಳಲು ಮನೆಗೆ ಬಂದಿದ್ದರು. ಈ ವೇಳೆ ತಮ್ಮ ಸಿನಿಮಾವೊಂದರ ಚಿತ್ರೀಕರಣದ ವೇಳೆಯೂ ಇದೇ ರೀತಿ ಶ್ರೀದೇವಿ ಡಯೆಟ್ ಮಾಡಿ ಬಾತ್ರೂಮ್ನಲ್ಲಿ ಬಿದ್ದು ಹಲ್ಲು ಮುರಿದುಕೊಂಡಿದ್ದಳು ಎಂದು ಅವರು ಹೇಳಿದ್ದರು" ಎಂದರು.ಇನ್ನೂ ವೈದ್ಯರ ಬಳಿ ನಾನು ಆಕೆಗೆ ಕೊಂಚ ಉಪ್ಪು ತಿನ್ನುವಂತೆ ಶಿಫಾರಸ್ಸು ಮಾಡುವಂತೆ ಮಾಡಿದ್ದೆ. ಊಟದ ಸಮಯದಲ್ಲಿ ನಾನು ಕೂಡ ಉಪ್ಪು ಬೆರಸಿ ಕೊಡುತ್ತಿದ್ದೆ. ಆದರೆ ಆಕೆ ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.
ದುಬೈನಲ್ಲಿ ಕೊನೆಯುಸಿರೆಳೆದ ಶ್ರೀದೇವಿ
ದುಬೈನ ಎಮಿರೇಟ್ಸ್ ಟವರ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದ ನಟಿ ಶ್ರೀದೇವಿ ಬಾತ್ರೂಮ್ಗೆ ತೆರಳಿದಾಗ ಹೃದಯ ಸ್ತಂಭನವಾಗಿದ್ದು, ಬಾತ್ಟಬ್ಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಫೋರೆನ್ಸಿಕ್ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ದುಬೈನ ಜನರಲ್ ಡಿಪಾರ್ಟ್ಮೆಂಟ್ ಆಫ್ ಫೋರೆನ್ಸಿಕ್ನಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪಾರ್ಥೀವ ಶರೀರವನ್ನು ಮುಂಬೈಗೆ ತಂದು ಅಂತ್ಯಕ್ರಿಯೆ ನಡೆಸಲಾಗಿತ್ತು.2018 ಫೆಬ್ರವರಿಯಲ್ಲಿ ಶ್ರೀದೇವಿ ಒಂದು ಮದುವೆಯಲ್ಲಿ ಭಾಗಿ ಆಗಲು ದುಬೈಗೆ ಹೋಗಿದ್ದರು. ಪತ್ನಿ ಶ್ರೀದೇವಿಗೆ ಸರ್ಪ್ರೈಸ್ ನೀಡಲು ಬಳಿಕ ಬೋನಿ ಕಪೂರ್ ಭಾರತದಿಂದ ದುಬೈಗೆ ತೆರಳಿದ್ದರು. ಇಬ್ಬರು ಹೊರಗೆ ಊಟಕ್ಕೆ ಹೋಗಲು ತಯಾರಾಗುತ್ತಿದ್ದರು. ಸ್ಥಳೀಯ ಕಾಲಮಾನ ಸಂಜೆ 5.30ರ ಸುಮಾರಿಗೆ, ತಯಾರಾಗಿ ಬರುತ್ತೇನೆಂದು ಶ್ರೀದೇವಿ ಬಾತ್ ರೂಮಿಗೆ ತೆರಳಿದ್ದಾರೆ.ಎಷ್ಟೆ ಹೊತ್ತು ಆದರೂ ಆಕೆ ಹೊರಗೆ ಬರದಿದ್ದಾಗ ಅನುಮಾನಗೊಂಡ ಬೋನಿ, ಬಲವಂತವಾಗಿ ಬಾಗಿಲು ತೆರೆದಾಗ ನಿಶ್ಚಲರಾಗಿ ನೀರು ತುಂಬಿದ್ದ ಬಾತ್ ಟಬ್ನಲ್ಲಿ ಬಿದ್ದಿದ್ದರು. ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಆಕೆಯ ಪ್ರಾಣ ಪಕ್ಷಿ ಹಾರಿಹೋಗಿತ್ತು.
Posted by Vidyamaana on 2023-11-29 11:45:47 |
ಪುತ್ತೂರು : ಪುತ್ತಿಲ ಪರಿವಾರದ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು ಪ್ರಪ್ರಥಮ ಬಾರಿಗೆ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.29ರಂದು ಬೆಳಿಗ್ಗೆ ನಡೆಯಿತು.
ಪ್ರಧಾನ ಅರ್ಚಕರಾದ ವಿಎಸ್ ಭಟ್ ಪ್ರಾರ್ಥನೆ ನೆರವೇರಿಸಿದರು. ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಶಶಾಂಕ್ ಕೋಟೇಚಾ, ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಸ್ವಾಗತ ಸಮಿತಿ ಅಧ್ಯಕ್ಷರು ಕಿರಣ್ ಗೌಡ, ಉಪಾಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೃಷ್ಣ ಪ್ರಸಾದ್ ಶೆಟ್ಟಿ,ಸ್ವಾಗತ ಸಮಿತಿ ಸಂಚಾಲಕರಾದ ಗಣೇಶ್ ಭಟ್ ಮಕರಂದ, ಮಹಿಳಾ ಘಟಕದ ಅಧ್ಯಕ್ಷರಾದ ಮಲ್ಲಿಕಾ ಪ್ರಸಾದ್, ಜಯಲಕ್ಷ್ಮೀ, ಅಶ್ವಿನಿ ಸಂಪ್ಯ, ಕಲ್ಯಾಣೋತ್ಸವ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ರವಿ ರೈ ಕೆದಂಬಾಡಿ ಮಠ, ಆರ್ಯಾಪು ಗ್ರಾ ಪಂ ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ, ದಿನೇಶ್ ಅಡ್ಕಾರ್
ಸುಧಾಕರ್ ಸುಳ್ಯ, ಗೋಪಾಲಕೃಷ್ಣ ಭಟ್,ಮಹೇಂದ್ರ ವರ್ಮ, ಲಕ್ಷ್ಮಣ ಬೈಲಾಡಿ, ಪ್ರಶಾಂತ್ ನೆಕ್ಕಿಲಾಡಿ , ಚಿನ್ಮಯ್ ರೈ ಈಶ್ವರಮಂಗಲ,ಗೀತೇಶ್ ರ್,ಚಂದ್ರಹಾಸ ಈಶ್ವರಮಂಗಲ, ಕಿಶೋರ್ ಜೋಗಿ, ಮಹೇಂದ್ರ ವರ್ಮ, ಅರುಣ್ ಭಟ್, ರಾಜೇಶ್ ಭಟ್ ಕುಳ, ರವಿಕೃಷ್ಣ ನಗರ, ಗೋಕುಲ್ ದಾಸ್ ಪ್ರಗತಿ, ಭೀಮಯ್ಯ ಭಟ್, ಪ್ರವೀಣ್ ಭಂಡಾರಿ, ಅನಿಲ್ ಮುಂಡೂರು, ಅಶೋಕ್ ಪುತ್ತಿಲ,ಪುರುಷೋತ್ತಮ ಕೋಲ್ಪೆ , ಜಯಪ್ರಕಾಶ್ , ರತ್ನಾಕರ್ ನಾಯಕ್ ಸಹಿತ ನೂರಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.
Posted by Vidyamaana on 2024-07-03 07:49:39 |
ಮೈಸೂರು: ಕೊಲೆಯಾಗಿ (Murder Case) ಹೋದ ಪುತ್ರನ (Son) ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು (Mother) ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ಮೈಸೂರಿನ (Mysore News) ಕೂರ್ಗಳ್ಳಿಯಲ್ಲಿ ನಡೆದಿದೆ.ಭಾಗ್ಯಮ್ಮ (46) ಪುತ್ರನ ಸಾವಿನ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡವರು.ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್ 9ರಂದು ನಡೆದಿತ್ತು.