ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ ಅತ್ತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Posted by Vidyamaana on 2023-05-30 11:49:38 |

Share: | | | | |


ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ ಅತ್ತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು :  ಕಾಂಗ್ರೇಸ್  ನೀಡಿದ್ದ  ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಬೆಳಗಾವಿ: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ.ಇದೀಗ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದಕ್ಕೆ ಕಾರಣ ಅವಿಭಕ್ತ ಕುಟುಂಬಗಳು. ಹೌದು ಅವಿಭಕ್ತ ಕುಟುಂಬಗಳಲ್ಲಿ 2000 ಸಾವಿರ ರೂಪಾಯಿಯನ್ನು ಅತ್ತೆಗೆ ಕೊಡಬೇಕಾ ಅಥವಾ ಸೊಸೆಗೆ ಕೊಡಬೇಕಾ ಎನ್ನುವುದು ಗೊಂದಲ ಸೃಷ್ಟಿಸಿತ್ತು.ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ನಮ್ಮ ಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ ಆಗುತ್ತಾರೆ.ಹೀಗಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅತ್ತೆಗೆ ನೀಡುತ್ತೇವೆ ಎಂದರು. ಇನ್ನು ನಾಳೆ ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಅನುಷ್ಠಾನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದರು. ಈ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಗೃಹಲಕ್ಷ್ಮೀ ಯೋಜನೆ ಸೊಸೆಗೆ ಸಿಗುವುದಿಲ್ಲ ಎನ್ನುವ ಸುಳಿವು ನೀಡಿದ್ದಾರೆ.

ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

Posted by Vidyamaana on 2024-05-24 08:11:35 |

Share: | | | | |


ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ

ಗದಗ: ಪತ್ನಿಯನ್ನು ತವರಿಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಶಪ್ಪ ಕಟ್ಟಿಮನಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.ನನ್ನ ಸಾವಿಗೆ ಅಳಿಯಂದಿರು ಕಾರಣ ಎಂದು ವಿಡಿಯೋ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೃದ್ದೆಯ ಮನೆಯಲ್ಲಿದ್ದ ಚಿನ್ನ ದಿಡೀರನೆ ನಾಪತ್ತೆ ಪೊಲೀಸರಿಗೆ ಕರೆ ಮಾಡಿದಾಗ ತಲೆದಿಂಬಿನಡಿಯಲ್ಲಿ ಪತ್ತೆ

Posted by Vidyamaana on 2023-06-14 12:18:39 |

Share: | | | | |


ವೃದ್ದೆಯ ಮನೆಯಲ್ಲಿದ್ದ ಚಿನ್ನ ದಿಡೀರನೆ ನಾಪತ್ತೆ ಪೊಲೀಸರಿಗೆ ಕರೆ ಮಾಡಿದಾಗ ತಲೆದಿಂಬಿನಡಿಯಲ್ಲಿ ಪತ್ತೆ

ಪುತ್ತೂರು: ವೃದ್ದೆಯರಿಬ್ಬರೇ ವಾಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣ ದಿಡೀರನೆ ನಾಪತ್ತೆಯಾಗಿದ್ದು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ ಕೊನೆಗೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಲಗಿದ್ದು ಪೊಲೀಸರು ಬರುವುದರೊಳಗೆ ಬೆಡ್‌ನ ತಲೆದಿಂಬಿನಡಿಯಲ್ಲಿ ಪತ್ತೆಯಾದ ಘಟನೆ ನಗರದ ದರ್ಬೆಯಲ್ಲಿ ನಡೆದಿದೆ.

ದರ್ಬೆ ಆಸ್ಪತ್ರೆಯ ಬಳಿ ಮನೆಯೊಂದರಲ್ಲಿ ನಿವೃತ್ತ ವೃದ್ದ ಶಿಕ್ಷಕಿಯರಿಬ್ಬರು ವಾಸ ಮಾಡುತ್ತಿದ್ದಾರೆ. ಇವರಿಬ್ಬರು ಮಾತ್ರ ಮನೆಯಲ್ಲಿದ್ದು ಮನೆಯಲ್ಲಿ ಬೇರೆ ಯಾರೂ ಇಲ್ಲ. ಕಳೆದ ಎರಡು ದಿನಗಳ ಹಿಂದೆ ಇವರು ಕಪಾಟಿನಲ್ಲಿಟ್ಟಿದ್ದ ಚಿನ್ನದ ಅರವೊಂದು ದಿಡೀರನೆ ನಾಪತ್ತೆಯಾಗಿತ್ತು. ಇಬ್ಬರು ವೃದ್ದೆ ಮತ್ತು ಕೆಲಸದಾಳು ಸೇರಿ ಮನೆಯಲ್ಲೆಲ್ಲಾ ಇಡೀ ದಿನ ಹುಡುಕಾಡಿದ್ದಾರೆ. ಎಲ್ಲಿ ಹುಡಕಿದರೂ ಚಿನ್ನದ ಸರ ಪತ್ತೆಯಾಗಲಿಲ್ಲ. ಮಾರನೇ ದಿನವೂ ಇಡೀ ಮನೆಯನ್ನೇ ಗುಡಿಸಿ ಹುಡುಕಿದ್ದಾರೆ ಆದರೂ ಪತ್ತೆಯಾಗಲಿಲ್ಲ. ಕೊನೆಗೆ ವೃದ್ದೆಯರಿಬ್ಬರು ಸಮಾಜ ಸೇವಕರೋರ್ವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅವರು ಮನೆಗೆ ಬಂದು ಹುಡುಕಾಟ ನಡೆಸಿದ್ದಾರೆ ಆದರೂ ಚಿನ್ನ ಸಿಗಲಿಲ್ಲ. ಕೊನೆಗೆ ಪೊಲಿಸರಿಗೆ ಕರೆ ಮಾಡಿ ವಿಷಯ ತಿಳಿಸಲಾಯ್ತು . ಪೊಲೀಸರು ಬರುವಿಕೆಯನ್ನು ಕಾಯುತ್ತಾ ಮನೆಯೊರಗೆ ವೃದ್ದೆಯರಿಬ್ಬರು ಕೂತಿದ್ದರು. ಆ ವೇಳೆ ಮನೆಯೊಳಗಿದ್ದ ಕೆಲಸದಾಳು ಚಿನ್ನ ಸಿಕ್ಕಿದೆ ಬೆಡ್‌ರೂಂನ ತಲೆದಿಂಬಿನಡಿಯಲ್ಲಿ ಇತ್ತು ಎಂದು ವೃದ್ದೆಯ ಕೈಗೆ ಕೊಟ್ಟರು. ಅಷ್ಟು ಹುಡುಕಾಡಿದರೂ ಸಿಗದ ಚಿನ್ನ ಏಕಾಏಕಿ ತಲೆದಿಂಬಿನಡಿಯಲ್ಲಿ ಹೇಗೆ ಬಂತು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿಯೂ ಇದೆ.

ಪುತ್ತೂರು: ಮಹಿಳೆಯ ಚಿನ್ನದ ಸರ ಕಸಿದು ಪರಾರಿ

Posted by Vidyamaana on 2023-10-15 04:56:34 |

Share: | | | | |


ಪುತ್ತೂರು: ಮಹಿಳೆಯ ಚಿನ್ನದ ಸರ ಕಸಿದು ಪರಾರಿ

ಪುತ್ತೂರು : ವೃದ್ಧ ಮಹಿಳೆಯ ಕುತ್ತಿಗೆಯಲ್ಲಿದ್ದ ಸರವನ್ನು ಕಳ್ಳಿಯರ ತಂಡವೊಂದು ಹಾಡುಹಗಲೇ ರಾಜರೋಷವಾಗಿ ಪುತ್ತೂರಿನ ಬಸ್ಸು ನಿಲ್ದಾಣದ ಅವರಣದಲ್ಲಿ ಎಗರಿಸಿಕೊಂಡು ಹೋದ ಘಟನೆಯೊಂದು ಅ 14 ರಂದು ಶನಿವಾರ ಸಂಜೆ ನಡೆದಿದೆ.ಬಂಟ್ವಾಳ ತಾಲೂಕಿನ ಕನ್ಯಾನ ಸಮೀಪದ ನಂದರಬೆಟ್ಟು ನಿವಾಸಿ ಸುಂದರಿ ಚಿನ್ನದ ಸರ ಕಳಕೊಂಡವರು. ಸುಂದರಿಯವರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ವಠಾರದ ಗಾಂಧೀಕಟ್ಟೆಯ ಬಳಿ ಇದ್ದಾಗ ಆಕೆಯಕುತ್ತಿಗೆಯಲ್ಲಿದ್ದ ಮೂರು ಪವನ್ ತೂಕದ ಚಿನ್ನದ ಸರವನ್ನು ಮಹಿಳೆಯರ

ತಂಡವೊಂದು ಕದ್ದಿದೆ.


ಸುಂದರಿ ಅವರು ಶನಿವಾರ ಸಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ವಾಣಿಜ್ಯ ಸಂಕೀರ್ಣದಲ್ಲಿ ಗಾಂಧೀಕಟ್ಟೆ ಪಕ್ಕದಲ್ಲಿರುವ ಬೇಕರಿಯಲ್ಲಿ ತಿಂಡಿಗಳನ್ನು ಖರೀದಿಸಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದಂತೆಯೇ ನಾಲ್ವರಿದ್ದ ಕಳ್ಳಿಯರ ತಂಡವೊಂದು ಏಕಾಏಕಿಯಾಗಿ ಅವರ ಕುತ್ತಿಗೆಯಲ್ಲಿದ್ದ 25 ಗ್ರಾಂ ತೂಕದ ಚಿನ್ನದ ಸರವನ್ನು ಎಗರಿಸಿ ಎಸ್ಕೆಪ್ ಆಗಿದೆ. ಈ ವೇಳೆ ಮಹಿಳೆ ಜೋರಾಗಿ ಬೊಬ್ಬೆ ಹೊಡೆದು, ಸರ ಎಗರಿಸಿರುವ ಬಗ್ಗೆ ಅಲ್ಲಿದ್ದ ಸ್ಥಳೀಯರಲ್ಲಿ ತಿಳಿಸಿದ್ದಾರೆ.ಚಿನ್ನದ ಸರ ಕಳಕೊಂಡ ಮಹಿಳೆ  ಪುತ್ತೂರು ನಗರ ಠಾಣೆಗೆ ತೆರಳಿ ದೂರುನೀಡಿರುವುದಾಗಿ ತಿಳಿದು ಬಂದಿದೆ

BREAKING : ಪ್ಯಾರಿಸ್ ಒಲಿಂಪಿಕ್ಸ್ ನಿಂದ ವಿನೇಶ್ ಫೋಗಟ್ ಅನರ್ಹ : IOA ನಿಂದ ಅಧಿಕೃತ ಹೇಳಿಕೆ ಬಿಡುಗಡೆ

Posted by Vidyamaana on 2024-08-07 13:07:16 |

Share: | | | | |


BREAKING : ಪ್ಯಾರಿಸ್ ಒಲಿಂಪಿಕ್ಸ್ ನಿಂದ ವಿನೇಶ್ ಫೋಗಟ್ ಅನರ್ಹ : IOA ನಿಂದ ಅಧಿಕೃತ ಹೇಳಿಕೆ ಬಿಡುಗಡೆ

ನವದೆಹಲಿ : ಇಂದು ಚಿನ್ನ ಗೆಲ್ಲುವ ಭಾರತದ ಕನಸು ಭಗ್ನಗೊಂಡಿದೆ. ಪ್ಯಾರಿಸ್: ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಫೈನಲ್ನಿಂದ ಅನರ್ಹಗೊಂಡಿದ್ದಾರೆ.50 ಕೆಜಿ ವಿಭಾಗದಲ್ಲಿ ಹೋರಾಡುವ ಕುಸ್ತಿಪಟು 100 ಗ್ರಾಂ ಅಧಿಕ ತೂಕ ಹೊಂದಿರುವುದು ಕಂಡುಬಂದಿದೆ.ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ವಿನೇಶ್ ಅವರ ಅನರ್ಹತೆಯ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

OK ಎಂಬ ಪದದ ಪೂರ್ಣ ರೂಪ ನಿಮಗೆ ತಿಳಿದಿದೆಯೇ? ಇಲ್ಲಿದೆ ನೋಡಿ ಮಾಹಿತಿ

Posted by Vidyamaana on 2023-10-11 16:02:52 |

Share: | | | | |


OK ಎಂಬ ಪದದ ಪೂರ್ಣ ರೂಪ ನಿಮಗೆ ತಿಳಿದಿದೆಯೇ? ಇಲ್ಲಿದೆ ನೋಡಿ ಮಾಹಿತಿ

     ನಮ್ಮ ದೈನಂದಿನ ಜೀವನದಲ್ಲಿ ನಾವು ಬಹಳಷ್ಟು ಪದಗಳನ್ನು ಬಳಸುತ್ತೇವೆ, ಅದು ಮಹತ್ವವನ್ನು ಹೊಂದಿರಬಹುದು ಆದರೆ ಅವುಗಳ ನಿಜವಾದ ಅರ್ಥದ ಬಗ್ಗೆ ನಮಗೆ ತಿಳಿದಿಲ್ಲದಿರಬಹುದು. ಇಂದು ನಾವು ಮಾತನಾಡುತ್ತಿರುವ ಈ ಒಂದು ನಿರ್ದಿಷ್ಟ ಪದವು ಪ್ರಪಂಚದಾದ್ಯಂತ ಸಾಮಾನ್ಯವಾಗಿ ಬಳಸುವ ಪದಗಳಲ್ಲಿ ಒಂದಾಗಿದೆ ಅದುವೆ ಒಕೆ ಎನ್ನುವುದು.ನಾವು OK ಎಂಬ ಪದದ ಬಗ್ಗೆ ಮಾತನಾಡುತ್ತಿದ್ದೇವೆ. ಈ ಪದದ ಹಿನ್ನೆಲೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳೋಣ.

ಮೊದಲನೆಯದಾಗಿ, OK ಎಂಬುದು ಒಂದು ಪದವಲ್ಲ ಆದರೆ ಎರಡು ಪದಗಳಿಗೆ ಸಂಕ್ಷಿಪ್ತ ರೂಪವಾಗಿದೆ. ಈಗ ಆ ಎರಡು ಪದಗಳು ಯಾವುವು? ಹೆಚ್ಚಿನ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಓಕೆಯ ಪೂರ್ಣ ರೂಪವೆಂದರೆ ಒಲ್ಲಾ ಕಲ್ಲಾ ಅಥವಾ ಓಲ್ ಕೊರೆಕ್ಟ್. ಓಲ್ಲಾ ಕಲ್ಲಾ ಎಂದರೆ ಗ್ರೀಕ್ ಭಾಷೆಯಲ್ಲಿ ಎಲ್ಲವೂ ಸರಿಯಾಗಿದೆ ಎಂದರ್ಥ.

ಈ ಪದದ ಮೂಲವು ಸ್ಪಷ್ಟವಾಗಿಲ್ಲ, ಆದರೆ ಇದು 1830 ರ ದಶಕದಲ್ಲಿ ಬೋಸ್ಟನ್ ನಿಂದ ಬಂದಿತು ಎಂದು ಹೇಳಲಾಗುತ್ತದೆ, ಮತ್ತು ಇದನ್ನು 1960 ರ ದಶಕದಲ್ಲಿ ಭಾಷಾಶಾಸ್ತ್ರಜ್ಞ ಅಲೆನ್ ವಾಕರ್ ರೀಡ್ ವಿವರಿಸಿದ್ದಾರೆ.ಅಂತೆಯೇ, ಸಾಮಾನ್ಯವಾಗಿ ಬಳಸಲಾಗುವ ಇತರ ಸಂಕ್ಷೇಪಣಗಳೂ ಇವೆ, ಅವುಗಳೆಂದರೆ - i.e ಮತ್ತು e.g. ಈ ಎರಡೂ ಸಂಕ್ಷೇಪಣಗಳು ಲ್ಯಾಟಿನ್ ಮೂಲದವು. ಇದರ ಪೂರ್ಣ ರೂಪವು ಲ್ಯಾಟಿನ್ ಭಾಷೆಯಲ್ಲಿ "ಅಂದರೆ" ("that is" ) ಎಂಬ ಅರ್ಥವನ್ನು ನೀಡುತ್ತದೆ, ಮತ್ತು ಉದಾ. ಲ್ಯಾಟಿನ್ ಭಾಷೆಯಲ್ಲಿ "ಉದಾಹರಣೆಗೆ" ಎಂದು ಭಾಷಾಂತರಿಸುವ ಎಕ್ಸೆಂಪ್ಲಿ ಗ್ರೇಟಿಯಾ ಆಗುತ್ತದೆ.

Recent News


Leave a Comment: