ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ಮಹಿಳೆಯ ಚಿನ್ನದ ಸರ ಎಗರಿಸಿದ್ದ ಬಿಸಿರೋಡ್ ಮೂಲದ ಜುಬೈರ್ ಸಹಿತ ಕುಖ್ಯಾತ ಕಳ್ಳರಿಬ್ಬರ ಸೆರೆ

Posted by Vidyamaana on 2024-02-24 21:28:02 |

Share: | | | | |


ಮಹಿಳೆಯ ಚಿನ್ನದ ಸರ ಎಗರಿಸಿದ್ದ ಬಿಸಿರೋಡ್ ಮೂಲದ ಜುಬೈರ್ ಸಹಿತ  ಕುಖ್ಯಾತ ಕಳ್ಳರಿಬ್ಬರ ಸೆರೆ

ಮಂಗಳೂರು, ಫೆ.24: ಬಜಾಲ್ ಜೆಎಂ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೇರಳ ಮೂಲದ ಅಂತಾರಾಜ್ಯ ಸರಗಳ್ಳರನ್ನು ಬಂಧಿಸಿದ್ದಾರೆ.

ಮೂಲತಃ ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ, ಬಂಟ್ವಾಳದ ಮಿತ್ತಬೈಲ್ ಶಾಂತಿಯಂಗಡಿಯಲ್ಲಿ ನೆಲೆಸಿದ್ದ ಮೊಹಮ್ಮದ್ ಆಲಿ (32) ಮತ್ತು ಬಿಸಿ ರೋಡ್ ಶಾಂತಿಯಂಗಡಿ ನಿವಾಸಿ ಜುಬೈರ್ (32) ಬಂಧಿತರು.


ಇವರು ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ 16 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಆರೋಪಿಗಳನ್ನು ಬಂಧಿಸಿ, ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಹಮ್ಮದ್ ಆಲಿ ವಿರುದ್ಧ ಕಾಸರಗೋಡು ಜಿಲ್ಲೆಯ ಬದಿಯಡ್ಕ, ಮಂಜೇಶ್ವರ, ಬಂಟ್ವಾಳ, ವಿಟ್ಲ, ಮಂಗಳೂರಿನ ಬರ್ಕೆ ಠಾಣೆಗಳಲ್ಲಿ ಮನೆ ಕಳವು., ಸರ ಸುಲಿಗೆ, ಜೈಲಿನಲ್ಲಿ ಹೊಡೆದಾಟ ಸೇರಿ 15 ಪ್ರಕರಣ ದಾಖಲಾಗಿದೆ. ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಟಿಡಿ ನಾಗರಾಜ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆಂದು ಜಾಲತಾಣದಲ್ಲಿ ಸುಳ್ಳು ಸುದ್ದಿ

Posted by Vidyamaana on 2023-10-03 18:31:03 |

Share: | | | | |


ಶಿವಮೊಗ್ಗದಲ್ಲಿ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆಂದು ಜಾಲತಾಣದಲ್ಲಿ ಸುಳ್ಳು ಸುದ್ದಿ

ಶಿವಮೊಗ್ಗ, ಅ.3: ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂಬ ಸುಳ್ಳು ಸುದ್ಧಿ ಹರಡುತ್ತಿದೆ. ಈ ಸುದ್ಧಿ ಫಾರ್ವರ್ಡ್ ಮಾಡಿರುವ ಅಜ್ಗರ್ ಎಂಬಾತನ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಮಾಡಿರುವವರ ವಿರುದ್ಧವೂ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ‌

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!

ರಾಗುಗುಡ್ಡ ಘರ್ಷಣೆ ಹಿನ್ನೆಲೆಯಲ್ಲಿ ಬಿಗು ಬಂದೋಬಸ್ತ್ ಕೈಗೊಂಡಿರುವ ಎಸ್ಪಿ ಜಾಲತಾಣಗಳ ಮೇಲೆ ನಿಗಾ ಇಟ್ಟಿರುವುದನ್ನು ತಿಳಿಸಿದ್ದಾರೆ. ಪೊಲೀಸ್ ಎನ್ಕೌಂಟರ್ ಮಾಡಿದ್ದಾರೆಂದು ಫಾರ್ವರ್ಡ್ ಆಗಿದ್ದ ವಿಡಿಯೋ ಡಿಲಿಟ್ ಮಾಡಿಸಲಾಗಿದೆ. ಸುಳ್ಳು ಸುದ್ಧಿ ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.‌ ಬೇರೆ ರಾಜ್ಯದ, ಬೇರೆ ಜಿಲ್ಲೆಗಳ ವಿಡಿಯೋಗಳನ್ನು ಹರಡಲಾಗುತ್ತಿದೆ. ಅಂತಹವರ ವಿರುದ್ಧ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗುವುದು. 


ರಾಗಿಗುಡ್ಡದಲ್ಲಿ ಎರಡು ಮಾರುತಿ ವ್ಯಾನ್ ಬಂದಿರುವ ಬಗ್ಗೆ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಅವರು ನ್ಯಾಮತಿಯಿಂದ ಮೆರವಣಿಗೆ ನೋಡಲು ಬಂದಿದ್ದವರಾಗಿದ್ದರು. ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಕಾನೂನು ಕ್ರಮ ಜರುಗಿಸಲಾಗತ್ತೆ. ಅನೇಕರು ಸುಳ್ಳು ವಿಡಿಯೋಗಳನ್ನು ಹರಡುತ್ತಿದ್ದಾರೆ. ಮೆರವಣಿಗೆಯಲ್ಲಿ ಕತ್ತಿಗಳನ್ನು ಝಳಪಿಸಿರುವುದಕ್ಕೆ ಆಕ್ಷೇಪ ಮಾಡಲಾಗಿದೆ. ಆದರೆ, ಕೆಲವು ಕಡೆ ಆಟಿಕೆ ಕತ್ತಿಗಳನ್ನು ತರಲಾಗಿದೆ. ಇದು ಒರಿಜಿನಲ್ ಕತ್ತಿ ಅಲ್ಲ ಎಂಬುದು ತಿಳಿದುಬಂದಿದೆ. ಅಕಸ್ಮಾತ್ ಒರಿಜಿನಲ್ ಕತ್ತಿ ಎಂದು ಕಂಡು ಬಂದರೆ, ಅಂತಹ ವಿಡಿಯೋ ನನಗೆ ಕಳಿಸಿ. ನಾನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಸುಳ್ಳು ಸುದ್ಧಿ, ವಿಡಿಯೋಗಳನ್ನು ನಂಬಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ. 


ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ, 24 ಕೇಸುಗಳನ್ನು ದಾಖಲಿಸಿಕೊಳ್ಳಲಾಗಿದೆ. ಒಟ್ಟು 60 ಜನರನ್ನು ಬಂಧಿಸಲಾಗಿದೆ. ಸಾರ್ವಜನಿಕರು ಸುಳ್ಳು ಸುದ್ಧಿಗಳನ್ನು ನಂಬಬೇಡಿ. ಇನ್ನೂ ಹಲವರನ್ನು ಬಂಧಿಸಲಿದ್ದೆವೆ. ಘಟನೆಗೆ ಕಾರಣರಾದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಹೊರಗಿನಿಂದ ಬಂದವರು ಯಾರಿದ್ದಾರೆಂದು ತನಿಖೆ ಮಾಡುತ್ತಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಸಾಕ್ಷಿಗಳು ನಮಗೆ ಸಿಕ್ಕಿದೆ. ಯಾರು ಕಾರಣಕರ್ತರಿದ್ದಾರೆ, ಅವರ ಬಗ್ಗೆ ಸಿಸಿಟಿವಿಯಲ್ಲಿ ದಾಖಲಾಗಿದೆ. ಮೆರವಣಿಗೆಯಲ್ಲಿ ಮಚ್ಚು, ಲಾಂಗು ತೋರಿಸಿದವರ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ. ‌

ವಿಟ್ಲ‌ಮುಡ್ನೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ

Posted by Vidyamaana on 2024-04-07 14:05:49 |

Share: | | | | |


ವಿಟ್ಲ‌ಮುಡ್ನೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಯನ್ನು ನಿಮಗೆ ತಲುಪಿಸಿ, ನುಡಿದಂತೆ ನಡೆದು ಇದೀಗ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮನೆ ಬಾಗಿಲಿಗೆ ಬರುತ್ತಿದ್ದೇವೆ ಹರಸಿ ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ವಿಟ್ಲ ಮುಡ್ನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಜನ ನೆಮ್ಮದಿಯಿಂದ ಇರಲು ಸಾಧ್ಯ. ಗೃಹಲಕ್ಣ್ಮಿ ಯೋಜನೆಯ ಎರಡು ಸಾವಿರ ಹಣ ಎಲ್ಲರ ಮನೆ ಬೆಳಗಿಸಿದೆ.‌ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಕುಟುಂಬಕ್ಕೆ ವಾರ್ಷಿಕ ಒಂದು ಲಕ್ಷ ಹಣ ನೀಡಲಿದ್ದೇವೆ ಎಂದು ಹೇಳಿದರು. 

ಉಡುಪಿ ನೇಜಾರು ತಾಯಿಮಕ್ಕಳ ಹತ್ಯೆ ಪ್ರಕರಣ: ಕೋರ್ಟ್‌ನಲ್ಲಿ ಆರೋಪ ನಿರಾಕರಿಸಿದ ಪ್ರವೀಣ್‌ ಚೌಗುಲೆ

Posted by Vidyamaana on 2024-03-27 15:29:06 |

Share: | | | | |


ಉಡುಪಿ  ನೇಜಾರು ತಾಯಿಮಕ್ಕಳ ಹತ್ಯೆ ಪ್ರಕರಣ: ಕೋರ್ಟ್‌ನಲ್ಲಿ ಆರೋಪ ನಿರಾಕರಿಸಿದ ಪ್ರವೀಣ್‌ ಚೌಗುಲೆ

ಉಡುಪಿ, ಮಾ.27: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೋಲೆ ಪ್ರಕರಣದ ಆರೋಪಿ ಪ್ರವೀಣ್‌ ಚೌಗುಲೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುಂದೆ ತನ್ನ ಮೇಲಿನ ಆರೋಪವನ್ನು ನಿರಾಕರಿಸಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್‌ ಚೌಗುಲೆಯನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಪ್ರಕರಣದ ತನಿಖಾಧಿಕಾರಿ ಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಕೃಷ್ಣ ಎಸ್‌.ಕೆ. ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶ ದಿನೇಶ್ ಹೆಗ್ಡೆ ಆರೋಪಿ ಮೇಲಿನ ಆಪಾದನೆಯನ್ನು ವಾಚಿಸಿದರು. ಆದರೆ ಚೌಗುಲೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದಾನೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಈ ಗಂಭೀರ ಪ್ರಕರಣದ ವಿಚಾರಣೆಗೆ ಪೂರ್ವಭಾವಿಯಾಗಿ ಎ.5ರಂದು ಪ್ರಿ ಟ್ರಾಯಲ್ ಕಾನ್ಸರೆನ್ಸ್ ನಡೆಸಲು ಆದೇಶ ನೀಡಿದರು. ನ್ಯಾಯಾಧೀಶರ ಸಮಕ್ಷಮದಲ್ಲಿ ನಡೆಯುವ ಈ ಕಾನ್ಸರೆನ್ಸ್‌ನಲ್ಲಿ ಪ್ರಕರಣದ ತನಿಖಾಧಿಕಾರಿ, ವಿಶೇಷ ಪಿಪಿ, ಆರೋಪಿ ಪರ ವಕೀಲರು ಭಾಗವಹಿಸಿ, ಮುಂದಿನ ವಿಚಾರಣೆ ಯಾವ ರೀತಿ ನಡೆಸಬೇಕೆಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಯಾವ ವಿಚಾರಣೆ ಅಗತ್ಯ ಇದೆ ಎಂಬುದರ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಿ, ವಿಚಾರಣೆ ಆರಂಭಿಸಲು ಸಾಕ್ಷಿಗಳಿಗೆ ಸಮನ್ಸ್‌ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ರಿಕ್ಷಾ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಮಜೀದ್ ನಿಧನ

Posted by Vidyamaana on 2024-08-14 17:09:42 |

Share: | | | | |


ರಿಕ್ಷಾ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಮಜೀದ್ ನಿಧನ

ಮಂಗಳೂರು ಆ 14: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಕೋಟೆಕಾರಿನಲ್ಲಿ ನಡೆದಿದೆ.

ಮೃತರನ್ನು ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44) ಎಂದು ಗುರುತಿಸಲಾಗಿದೆ. ಮಜೀದ್ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ ಆಟೋ ರಿಕ್ಷಾದಲ್ಲಿ ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ.

ಗ್ರಾಹಕರ ಜವಾಬ್ದಾರಿ ನೆನಪಿಸಿದ ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ!!

Posted by Vidyamaana on 2024-02-12 07:42:40 |

Share: | | | | |


ಗ್ರಾಹಕರ ಜವಾಬ್ದಾರಿ ನೆನಪಿಸಿದ ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ!!

ವಿಟ್ಲ: ಜಿಲ್ಲೆ ಮಾತ್ರವಲ್ಲ ರಾಜ್ಯದ ಚಿತ್ತವನ್ನೇ ತನ್ನತ್ತ ಸೆಳೆದುಕೊಂಡ ಘಟನೆ ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ. ವಿರಳಾತೀವಿರಳ ಪ್ರಕರಣದಲ್ಲಷ್ಟೇ ಬ್ಯಾಂಕ್ ದರೋಡೆಯನ್ನು ದರೋಡೆಕೋರರು ಯಶಸ್ವಿಯಾಗಿ ನಡೆಸುತ್ತಾರೆ. ಅಂತಹ ಸಿನಿಮೀಯ ಘಟನೆ ಅಡ್ಯನಡ್ಕದಲ್ಲಿ ನಡೆದಿದ್ದು, ದರೋಡೆಕೋರರು ನಗ ಹಾಗೂ ನಗದಿನೊಂದಿಗೆ ಪರಾರಿಯಾಗಿದ್ದಾರೆ.

ಇದೀಗ ಆರೋಪಿಗಳಿಬ್ಬರ ಪತ್ತೆ ಆಗಿರಬಹುದು. ಪೊಲೀಸರು ತಮ್ಮ ಶ್ರಮದ ಎಲ್ಲೆ ಮೀರಿ ದರೋಡೆಕೋರರ ಹೆಡೆಮುರಿ ಕಟ್ಟಿರಬಹುದು. ಆದರೆ, ಈ ಪ್ರಕರಣ ಗ್ರಾಹಕರ ಜವಾಬ್ದಾರಿಯನ್ನು ನೆನಪಿಸಿದೆ ಎಂದು ಹೇಳಿದರೆ ತಪ್ಪಾಗದು.

ಹೌದು! ಎಚ್ಚರ ಗ್ರಾಹಕ ಎಚ್ಚರ!! ಶ್ಲೋಗನ್ ನೀವು ಎಲ್ಲಾ ಕಡೆಯೂ ಕೇಳಿರಬಹುದು. ಇದು ಬ್ಯಾಂಕಿಂಗ್ ಕ್ಷೇತ್ರಕ್ಕೂ ಅನ್ವಯಿಸುತ್ತದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಬ್ಯಾಂಕಿಂಗ್ ಕ್ಷೇತ್ರ ಅತೀ ಸೇಫ್ ಆಗಿದೆ, ಬ್ಯಾಂಕಿಂಗ್ ಉದ್ಯಮಿಗಳು ಹದ್ದಿನ ಕಣ್ಣಿನಿಂದ ನಮ್ಮ ಆಸ್ತಿಯನ್ನು ಕಾಪಾಡುತ್ತಾರೆ ಎಂಬ ಭ್ರಮೆಯಿಂದ ಈಗಲಾದರೂ ಸ್ವಲ್ಪ ಹೊರಬಂದು ನೋಡಿ. ಅಡ್ಯನಡ್ಕ ಕರ್ಣಾಟಕ ಬ್ಯಾಂಕನ್ನು ದರೋಡೆ ಮಾಡುವ ಹಿಂದೆ ಬ್ಯಾಂಕಿನಿಂದ ನಡೆದಿರಬಹುದಾದ ತಪ್ಪುಗಳನ್ನೇ ಗಮನಿಸಿದರೂ ಸಾಕು!!

1) ದರೋಡೆಕೋರರು ಬ್ಯಾಂಕ್ ಒಳನುಗ್ಗಲು ಬಳಸಿದ ಕಿಟಕಿಯನ್ನು ಇದೀಗ ಮುಚ್ಚಲಾಗಿದೆ. ಪೊಲೀಸ್ ಅಧಿಕಾರಿಗಳ ನಿರ್ದೇಶನದಂತೆ ಕಟ್ಟಡದಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿಕೊಳ್ಳಲಾಗುತ್ತಿದೆ.

2) ಸ್ಟ್ರಾಂಗ್ ರೂಮ್ ಅನ್ನು ಇದೀಗ ಮತ್ತಷ್ಟು ಭದ್ರ ಪಡಿಸಲಾಗುತ್ತಿದೆ. ಅದರ ಬಾಗಿಲುಗಳನ್ನು ಕ್ರೇನ್ ಸಹಾಯದಿಂದ ಅಳವಡಿಸಲಾಗುತ್ತಿದೆ.

ತಾವೇ ನಂಬರ್  ವನ್ ಎಂದು ಬಿಂಬಿಸಿಕೊಳ್ಳುತ್ತಾ, ಗ್ರಾಮ ಗ್ರಾಮದಲ್ಲೂ ತಲೆ ಎತ್ತುತ್ತಿರುವ ಬ್ಯಾಂಕಿಂಗ್ ಉದ್ಯಮ ಬರೀಯ ಉದ್ಯಮವಾಗಿದೆಯಷ್ಟೇ. ಗ್ರಾಹಕರು ಅಡ ಇಡುವ ಆಸ್ತಿಗಳ ಸೇಫ್ ಬಗ್ಗೆ ಗಮನ ಹರಿಸಿಯೇ ಇಲ್ಲ. ಗ್ರಾಹಕರು ತಾವು ಸ್ವತ್ತು ಅಡ ಇಡುವ ಮೊದಲು ಇವುಗಳನ್ನೆಲ್ಲಾ ಗಮನಿಸಿಕೊಳ್ಳುವುದು ಅನಿವಾರ್ಯ.

1) ತಮಗೆ ಸೇವೆ ನೀಡುತ್ತಿರುವ ಬ್ಯಾಂಕ್ ಅದೆಷ್ಟು ಸೇಫ್ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬೇಕು.

2) ಸ್ವತ್ತುಗಳಿಗೆ ಅವರೆಷ್ಟು ಭದ್ರತೆ ನೀಡುತ್ತಾರೆ ಎನ್ನುವ ಬಗ್ಗೆಯೂ ಖಾತ್ರಿ ಪಡಿಸಿಕೊಳ್ಳಬೇಕು.

3) ಲೋನ್ ನೀಡುವಾಗ ಬ್ಯಾಂಕುಗಳು ಪಡೆದುಕೊಳ್ಳುವ ದಾಖಲಾತಿ, ಪರಿಶೀಲನೆ ಇವುಗಳನ್ನು ಅಡ ಇಡುವ ಸಂದರ್ಭ ಅನುಸರಿಸುತ್ತಿವೆಯೇ? ಇಲ್ಲಾ ಎಂದಾದರೆ ಗ್ರಾಹಕರು ಇವನ್ನು ಮಾಡಲೇಬೇಕು ತಾನೇ?

ಪೊಲೀಸರ ಜವಾಬ್ದಾರಿ:

ಯಾವುದೇ ಅವಘಡ ನಡೆದಾಗಲೂ ಮೊದಲ ಬೈಗುಳ ಪೊಲೀಸರಿಗೆ. ಯಾಕೆ ಹೀಗೆ? ಕೃತ್ಯ ನಡೆದ ಬಳಿಕವಷ್ಟೇ ಪೊಲೀಸರ ಪ್ರವೇಶ ಆಗುತ್ತದೆ. ಅದಕ್ಕೆ ಮೊದಲು ಕೃತ್ಯವನ್ನು ತಡೆಯುವಲ್ಲಿ ಗ್ರಾಹಕರ ಪಾತ್ರ ಪ್ರಮುಖವಾದದ್ದು. ತನಗೇಕೆ ಬೇಕು? ತನಗೇನು ಪ್ರಯೋಜನ? ಎಂಬಿತ್ಯಾದಿ ಧೋರಣೆ ಬಿಟ್ಟು ಪ್ರತಿಯೊಬ್ಬರು  ನಮ್ಮ ಕರ್ತವ್ಯ, ಜವಾಬ್ದಾರಿಯನ್ನು ನೆನಪಿಸಿಕೊಳ್ಳಬೇಕು.

ಬ್ಯಾಂಕ್ ದರೋಡೆ ಪ್ರಕರಣವನ್ನೇ ನೋಡಿದರೂ, ದರೋಡೆಕೋರರು ಎಷ್ಟು ಚಾಲಕಿಗಳು ಎನ್ನುವುದನ್ನು ಅರಿತುಕೊಳ್ಳಬಹುದು. ಆಧುನಿಕ ತಂತ್ರಜ್ಞಾನಗಳನ್ನು ಕಳ್ಳರು ಅಥವಾ ದರೋಡೆಕೋರರು ಬಳಸಿಕೊಳ್ಳುವ ರೀತಿಗೆ ಆಶ್ಚರ್ಯಪಡಲೇಬೇಕು. ಹೀಗಿದ್ದರೂ ಕೃತ್ಯವನ್ನು ಬೇಧಿಸಿದರೆ ಪೊಲೀಸರಿಗೆ ಶಹಬ್ಬಾಶ್, ಬೇಧಿಸದೇ ಇದ್ದರೆ ಮತ್ತದೇ ಬೈಗುಳಗಳ ಸುರಿಮಳೆ. ಇದರಿಂದ ಹೊರಬಂದು ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳುವ ಅಗತ್ಯ ತುಂಬಾ ಇದೆ.

Recent News


Leave a Comment: