ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ನ್ಯೂ ಇಯರ್ ಪಾರ್ಟಿ ಅವಾಂತರ – ಟೈಟ್ ಆಗಿ ಸ್ನೇಹಿತನ ಮೂಗು ಕಚ್ಚಿದ ರಾಕೇಶ್

Posted by Vidyamaana on 2024-01-01 17:51:25 |

Share: | | | | |


ನ್ಯೂ ಇಯರ್ ಪಾರ್ಟಿ ಅವಾಂತರ – ಟೈಟ್ ಆಗಿ ಸ್ನೇಹಿತನ ಮೂಗು ಕಚ್ಚಿದ ರಾಕೇಶ್

ಬೆಳ್ತಂಗಡಿ : ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ‌.


ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28) ಎಂಬ ಯುವಕ ಯುವಕ ಮೂಗು ತುಂಡರಿಸಿಕೊಂಡ ಯುವಕನಾಗಿದ್ದಾನೆ.ಮೂಗು ತುಂಡರಿಸಿದ ಆರೋಪಿ ಯುವಕ ರಾಕೇಶ್ ಎಂಬಾತ ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದು , ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು , ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಡಿಸೆಂಬರ್ 31 ರಂದು ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಕೇಶ್ ಎಂಬಾತ ದೀಕ್ಷಿತ್ ಎಂಬಾತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. 


ಘಟನೆಯಿಂದ ಗಂಭೀರ ಗಾಯಗೊಂಡ ದೀಕ್ಷಿತ್ ನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಈ ಪ್ರಕರಣ ಸಂಬಂಧ ವೇಣೂರು ಪೋಲಿಸರಿಗೆ ದೂರು ನೀಡಲಾಗಿದ್ದು , ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಹತ್ಯೆಗೀಡಾದ ದೀಪಕ್- ಫಾಝಿಲ್ ಸೇರಿ 6 ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ:ಸಿಎಂ

Posted by Vidyamaana on 2023-06-19 08:46:24 |

Share: | | | | |


ಹತ್ಯೆಗೀಡಾದ ದೀಪಕ್- ಫಾಝಿಲ್ ಸೇರಿ 6 ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ:ಸಿಎಂ

ಬೆಂಗಳೂರು, ಜೂನ್ 19: ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.


ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಹತ್ಯೆಗೀಡಾದ ಮಸೂದ್, ಮಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ ಹಾಗೂ ದೀಪಕ್ ರಾವ್, ಮಂಡ್ಯದ ಇದ್ರೀಸ್ ಪಾಶಾ, ನರಗುಂದದ ಶಮೀರ್ ಕುಟುಂಬದವರಿಗೆ 25 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿ ಮಾತನಾಡಿದರು.


ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್  ಕುಮಾರ್ ರೈ ಸಚಿವರಾದ ಚೆಲುವರಾಯಸ್ವಾಮಿ, ಝಮೀರ್ ಅಹಮದ್ ಖಾನ್, ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದರಾಜು ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.

ಪ್ರವೀಣ್ ನೆಟ್ಟಾರು ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Posted by Vidyamaana on 2023-05-12 10:23:34 |

Share: | | | | |


ಪ್ರವೀಣ್ ನೆಟ್ಟಾರು ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಪುತ್ತೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ, ಪ್ರವೀಣ್ ಹೆತ್ತವರೊಂದಿಗೆ ಮಾತನಾಡಿದರು.

ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Posted by Vidyamaana on 2024-01-14 08:28:15 |

Share: | | | | |


ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಹೈದರಾಬಾದ್: ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ಕ್ (11) ಮೃತಪಟ್ಟಿರುವ ಘಟನೆ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ.


ತನಿಷ್ಕ್ ತಮ್ಮ ಮನೆಯ ಮಹಡಿ ಮೇಲೆ ನಿಂತು ಗಾಳಿ ಪಟ ಹಾರಿಸುವ ವೇಳೆ ಗಾಳಿ ಪಟದ ದಾರ ವಿದ್ಯುತ್​ ತಂತಿಗೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಹೋದಾಗ ದೇಹಕ್ಕೆ ವಿದ್ಯುತ್​ ಪ್ರವಹಿಸಿದೆ.


ತಕ್ಷಣ ಬಾಲಕ ಕಿರುಚಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ. ಪೋಷಕರ ರೋದನ ಮುಗಿಳುಮುಟ್ಟಿದ್ದು, ಮಕ್ಕಳ ಚಲನವಲನ ಬಗ್ಗೆ ಹೆಚ್ಚಿನ ನಿಗಾ ಅಗತ್ಯ ಎಂದು ಪೊಲೀಸರು ನಾಗರಿಕರಿಗೆ ಸಲಹೆ ನೀಡಿದ್ದಾರೆ.

ಬೆಂಗಳೂರು ಕಂಬಳಕ್ಕೆ ಸಿಕ್ತು ರಾಜ್ಯ ಸರಕಾರದಿಂದ ಧನ ಬಲ

Posted by Vidyamaana on 2023-11-04 21:32:04 |

Share: | | | | |


ಬೆಂಗಳೂರು ಕಂಬಳಕ್ಕೆ ಸಿಕ್ತು ರಾಜ್ಯ ಸರಕಾರದಿಂದ ಧನ ಬಲ

ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರು‌ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ರೂ ಒಂದು ಕೋಟಿ ಘೋಷಣೆ ಮಾಡಿದ್ದಾರೆ ಎಂದು ಅಶೋಕ್ ರೈ ತಿಳಿಸಿದ್ದಾರೆ 

ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಈಗಾಗಲೇ ಕಂಬಳಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕಂಬಳ ಸಮಿತಿ ನೇಮಕ ಮಾಡಿದೆ. ಕರೆ ಮುಹೂರ್ಥದ ಬಳಿಕ ಅನೇಕ ಸಚಿವರು ಕಂಬಳ ನಡೆಯುವ ಅರಮನೆ ಮೈದಾ‌ನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸರಕಾರದಿಂದ ಸರ್ವ ರೀತಿಯ ಸಹಕಾರವನ್ನು ನೀಡುವುದಾಗಿ ಈ ಹಿಂದೆ ಘೋಷಣೆಯನ್ನು ಮಾಡಿದ್ದರು.


ಬೆಂಗಳೂರು ಕಂಬಳಕ್ಕೆ ಖ್ಯಾತ ಬಾಲಿಹುಡ್ ನಟಿಯರು, ಸೆಲೆಬ್ರಿಟಿಗಳು ಆಗಮಿಸಲಿದ್ದು ಸುಮಾರು 8 ಲಕ್ಷ ಮಂದಿ ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದರು.

ಇದೀಗ ಕಂಬಳಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಕಂಬಳ ಸಮಿತಿಯವರ ಉತ್ಸಾಹವನ್ನು ಕಂಡ ಸಿ ಎಂ ರವರು ಕಂಬಳಕ್ಕೆ ಸರಕಾರದಿಂದ ಒಂದು ಕೋಟಿ ರೂ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದು ಕಂಬಳದ ಮೆರುಗನ್ನು ಹೆಚ್ಚಿಸಿದೆ. 


ಕಂಬಳದಲ್ಲಿ ಸುಮಾರು 150 ಕ್ಕೂ‌ಮಿಕ್ಕಿ ಜೋಡಿ ಕಂಬಳ ಕೋಣಗಳು ಭಾಗವಹಿಸಲಿದ್ದು ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಕೋಣಗಳನ್ನು ಕರೆದೊಯ್ಯಲಾಗುತ್ತದೆ. ಕಂಬಳ ಕೋಣಗಳಿಗೆ ಬೇಕಾದ ಆಹಾರ ಮತ್ತು ನೀರನ್ನು ಕೂಡಾ ಮಂಗಳೂರಿನಿಂದಲೇ ವ್ಯವಸ್ಥೆ ಮಾಡಲಾಗುತ್ತಿದೆ.

ಖ್ಯಾತ ಸೆಲೆಬ್ರಿಟಿಗಳಾದ ಐಶ್ವರ್ಯಾ ರೈ, ಅನುಷ್ಕಾ ಶೆಟ್ಡಿ, ರಜನಿಕಾಂತ್ ಸೇರಿದಂತೆ ರಾಷ್ಡ್ರಿಯ ಮತ್ತು ಅಂತರ ರಾಷ್ಡ್ರೀಯ ಖ್ಯಾತಿಯ ಘಟಾನುಘಟಿ ಪ್ರಮುಖರು ಭಾಗವಹಿಸಿ ಕಂಬಳಕ್ಕೆ ತಾರಾ ಮೆರುಗನ್ನು ನೀಡಲಿದ್ದಾರೆ. ಕಂಬಳ ಕರೆ‌ಮುಹೂರ್ತ ನಡೆಸಲಾಗಿದ್ದು ಕರೆ ನಿರ್ಮಾಣವೂ ಭರದಿಂದ ಸಾಗುತ್ತಿದೆ. ಕಂಬಳಕ್ಕೆ ಸರಕಾರದ ಸಹಾಯ ಹಸ್ತ ದೊರೆಯುವುದರೊಂದಿಗೆ ಬೆಂಗಳೂರು‌ ಕಂಬಳ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ.


ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ನೀಡುವುದಾಗಿ ಘೋಷಣೆ ಮಾಡಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಬೆಂಗಳೂರು ಕಂಬಳ ಹೊಸ ಇತಿಹಾಸವನ್ನು ನಿರ್ಮಿಸಲಿದ್ದು ಅಂತರ ರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿಯನ್ನು ಪಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಕಂಬಳಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ಭರದಿಂದ ಸಾಗುತ್ತಿದ್ದು ವಿವಿಧ ತುಳು ಸಂಘಟನೆಗಳು ಮತ್ತು ಕರಾವಳಿಯ ವಿವಿಧ ಸಂಘಟನೆಗಳ ಸಹಕಾರದಿಂದ ಎಲ್ಲಾ ಕೆಲಸಗಳು ಸುಸೂತ್ರವಾಗಿ ನಡೆಯುತ್ತಿದೆ.


ಅಶೋಕ್ ರೈ ಶಾಸಕರು ಪುತ್ತೂರು

ಅಧ್ಯಕ್ಷರು ಬೆಂಗಳೂರು‌ಕಂಬಳ ಸಮಿತಿ

ಬಿಜೆಪಿ - ಜೆಡಿಎಸ್ ಪಾದಯಾತ್ರೆ :ಎಚ್ ಡಿಕೆ ತೆರಳಿದ ಬಳಿಕ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿ

Posted by Vidyamaana on 2024-08-04 06:18:29 |

Share: | | | | |


ಬಿಜೆಪಿ - ಜೆಡಿಎಸ್ ಪಾದಯಾತ್ರೆ :ಎಚ್ ಡಿಕೆ ತೆರಳಿದ ಬಳಿಕ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿ

ರಾಮನಗರ : ಮುಡಾ ಪ್ರಕರಣ ವಿರೋಧಿಸಿ ನಡೆಯುತ್ತಿರುವ ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಬಿಜೆಪಿಯ ಮಾಜಿ ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಪಾದಯಾತ್ರೆಯಲ್ಲಿ ಹಾಜರಾಗಿ ಹೆಜ್ಜೆ ಹಾಕಿದ್ದಾರೆ.ಪ್ರಜ್ವಲ್​​ ರೇವಣ್ಣ ಪೆನ್​​​​​​​​ಡ್ರೈವ್​​​​ ವಿಚಾರ ಮುಂದಿಟ್ಟು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರೀತಂಗೌಡ ವಿರುದ್ಧ ಆಕ್ರೋಶ ಹೊರಹಾಕಿ ಪಾದಯಾತ್ರೆಗೆ ಬರುವುದನ್ನು ವಿರೋಧಿಸಿದ್ದರು.

Recent News


Leave a Comment: