ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಸುದ್ದಿಗಳು News

Posted by vidyamaana on 2024-07-23 21:30:52 |

Share: | | | | |


ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.

Additional Image

ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು. 

Additional Image


Additional Image

ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.

 Share: | | | | |


ಕಾರಿನ ಮೇಲೆ ಮರ, ವಿದ್ಯುತ್‌ ತಂತಿ ಬಿದ್ದು ಜಖಂ..ಇಬ್ಬರಿಗೆ ಗಾಯ

Posted by Vidyamaana on 2024-05-21 21:04:10 |

Share: | | | | |


ಕಾರಿನ ಮೇಲೆ ಮರ, ವಿದ್ಯುತ್‌ ತಂತಿ ಬಿದ್ದು ಜಖಂ..ಇಬ್ಬರಿಗೆ ಗಾಯ

ವಿಟ್ಲ : ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ.ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಇತರ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಒಂದನೇ ತರಗತಿಗೆ ಪ್ರವೇಶ ಪಡೆಯಲು 6 ವರ್ಷ ತುಂಬಿರಬೇಕು: ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿಹಿಡಿದ ಹೈಕೋರ್ಟ್

Posted by Vidyamaana on 2023-08-10 02:52:36 |

Share: | | | | |


ಒಂದನೇ ತರಗತಿಗೆ ಪ್ರವೇಶ ಪಡೆಯಲು 6 ವರ್ಷ ತುಂಬಿರಬೇಕು: ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಕೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿಹಿಡಿದಿದೆ.


2025-26ನೇ ಸಾಲಿಗೆ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನಿಕೇತ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಪುತ್ರಿಗೆ ಎಲ್‌ಕೆಜಿಗೆ ದಾಖಲಿಸಲು ಅನುಮತಿ ನೀಡಬೇಕೆಂದು ಕೋರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ, ಸರ್ಕಾರದ ಅಧಿಸೂಚನೆ ರಾಷ್ಟ್ರೀಯ ಶಿಕ್ಷಣ ನೀತಿಗೆ (NEP) ಅನುಗುಣವಾಗಿದೆ. ಇದರ ಹಿಂದೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ. ತಜ್ಞರ ವರದಿ ಆಧರಿಸಿದ ನೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.


ರಸ್ತೆ ಅಪಘಾತ ಪ್ರಕರಣಗಳ ಶೀಘ್ರ ವಿಲೇವಾರಿ ಮಾಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಇದಕ್ಕಾಗಿ ಇನ್ಸೂರೆನ್ಸ್ ಡಿಪಾರ್ಟ್ಮೆಂಟ್ ಮತ್ತು ಫಾರೆನ್ಸಿಕ್  ಪ್ರಯೋಗಾಲಯಗಳನ್ನು ಪೊಲೀಸ್ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಜೊತೆಗೆ ಸಂಯೋಜನೆಗೊಳಿಸಬೇಕು ಎಂದು ಕೋರ್ಟ್ ಹೇಳಿದೆ. ಪರಿಹಾರ ಕೋರಿ ಅರ್ಜಿ ಸಲ್ಲಿಕೆ ವಿಳಂಬವಾಗಿದೆ ಎಂದು ಆಕ್ಷೇಪಿಸಿ ಇನ್ಸೂರೆನ್ಸ್ ಕಂಪನಿಯೊಂದು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ನಿರ್ದೇಶನ ನೀಡಿದೆ

5 ವರ್ಷದಿಂದ ವಿಟ್ಲದ ಬಾಲಕಿಗೆ ಲೈಂಗಿಕ ಕಿರುಕುಳ- ಕೇರಳದ ಯುವಕರ ಮೇಲೆ ಕೇಸ್

Posted by Vidyamaana on 2023-07-30 12:11:11 |

Share: | | | | |


5 ವರ್ಷದಿಂದ ವಿಟ್ಲದ ಬಾಲಕಿಗೆ ಲೈಂಗಿಕ ಕಿರುಕುಳ- ಕೇರಳದ ಯುವಕರ ಮೇಲೆ ಕೇಸ್

ವಿಟ್ಲ: ಬಾಲಕಿ ಮೇಲೆ, ಬೇರೆ ಬೇರೆ ಯುವಕರು ಬೇರೆ ಬೇರೆ ಸಂದರ್ಭದಲ್ಲಿ ಲೈಂಗಿಕ ಅಪರಾಧ ನಡೆಸಿದ್ದಾರೆ ಎಂದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪರಿಶಿಷ್ಟ ಪಂಗಡಕ್ಕೆ ಸೇರಿದ 16 ವರ್ಷದ ಬಾಲಕಿ ಮೇಲೆ ಕೇರಳ ಭಾಗದ ಕೆಲವು ಯುವಕರು ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಅಪರಾಧ ನಡೆಸಿದ್ದರು.ಬಾಲಕಿ ಮನೆಗೆ ಈಚೆಗೆ ಒಂದು ದಿನ ಬರುವಾಗ


ತಡವಾದ ಬಗ್ಗೆ ವಿಚಾರಿಸಿದಾಗ ಆಕೆ ಈ ಬಗ್ಗೆ ಮಾಹಿತಿ ನೀಡಿದ್ದಳು. ಐವರು ಆರೋಪಿಗಳು ಲೈಂಗಿಕ ಅಪರಾಧ ನಡೆಸಿದ್ದಾರೆ. 2019ರಿಂದಲೂ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆರೋಪಿಗಳಲ್ಲಿ ಒಬ್ಬಾತ ಬಾಲಕಿಯ ಬಂಧು. ಉಳಿದವರು ಕೇರಳದವರು ಎಂದು ಪೋಷಕರು ತಿಳಿಸಿದ್ದಾರೆದೂರಿನಲ್ಲಿ ಆರೋಪಿಗಳ ವಿರುದ್ಧ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸ್‌) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ

ಬೆಂಗಳೂರು: ಬಿಜೆಪಿ ಕಾರ್ಯಕರ್ತೆಯ ಕೈ ಕಾಲು ಕತ್ತರಿಸಿ ಹತ್ಯೆ! ಇಬ್ಬರು ಪೊಲೀಸರ ವಶಕ್ಕೆ

Posted by Vidyamaana on 2024-02-26 21:08:26 |

Share: | | | | |


ಬೆಂಗಳೂರು: ಬಿಜೆಪಿ ಕಾರ್ಯಕರ್ತೆಯ ಕೈ ಕಾಲು ಕತ್ತರಿಸಿ ಹತ್ಯೆ! ಇಬ್ಬರು ಪೊಲೀಸರ ವಶಕ್ಕೆ

ಬೆಂಗಳೂರು (ಫೆ.26): ಹಣಕ್ಕಾಗಿ ವೃದ್ಧೆಯೊಬ್ಬರ ಕೈ, ಕಾಲು ಕತ್ತರಿಸಿ ಭೀಕರವಾಗಿ ಕೊಂದು ಬಳಿಕ ಡ್ರಮ್‌ನಲ್ಲಿ ಮೃತದೇಹವನ್ನು ತುಂಬಿ ಬೀದಿಗೆ ಬಿಸಾಡಿ ಮೃತರ ಪರಿಚಿತರೇ ಪರಾರಿ ಆಗಿರುವ ಘಟನೆ ಕೆ.ಆರ್‌.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೆ.ಆರ್‌.ಪುರ ಸಮೀಪದ ನಿಸರ್ಗ ಲೇಔಟ್‌ ನಿವಾಸಿ ಸುಶೀಲಮ್ಮ (76) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತಳ ಪರಿಚಿತ ದಿನೇಶ್ ಹಾಗೂ ಆತನ ಸಹಚರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.ನಿಸರ್ಗ ಲೇಔಟ್‌ನ ಮನೆಗಳ ಓಣಿಯಲ್ಲಿ ಎರಡು ದಿನಗಳಿಂದ ಅನಾಥವಾಗಿ 10 ಲೀಟರ್‌ ಸಾಮರ್ಥ್ಯದ ಡ್ರಮ್‌ ಇಟ್ಟಿರುವುದನ್ನು ಭಾನುವಾರ ಗಮನಿಸಿದ ಸ್ಥಳೀಯರು, ಶಂಕೆ ಮೇರೆಗೆ ಆ ಡ್ರಮ್‌ ಅನ್ನು ಬಳಿ ತೆರಳಿ ನೋಡಿದಾಗ ಅದರೊಳಗೆ ಸುಶೀಲಮ್ಮ ಅವರ ಮೃತದೇಹ ಕಂಡು ಬಂದಿದೆ. ಕೂಡಲೇ ಪೊಲೀಸ್‌ ನಿಯಂತ್ರಣ ಕೊಠಡಿಗೆ ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿದಾಗ ಕೊಲೆ ಹಿಂದೆ ಪರಿಚಿತರ ಕೈವಾಡ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಬಿಜೆಪಿ ಕಾರ್ಯಕರ್ತೆ:


ಚಿಕ್ಕಬಳ್ಳಾಪುರ ಜಿಲ್ಲೆಯ ಮೃತ ಸುಶೀಲಮ್ಮ ಅವರು, ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದು ನೆಲೆಸಿದ್ದರು. ಮೃತರಿಗೆ ಓರ್ವ ಗಂಡು ಮಗ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆಸ್ತಿ ಮಾರಾಟದಲ್ಲಿ ಬಂದ ಹಣದಲ್ಲಿ ಮನೆ ಬೋಗ್ಯಕ್ಕೆ ಪಡೆದು ಮಕ್ಕಳಿಂದ ಪ್ರತ್ಯೇಕವಾಗಿ ಅಜ್ಜಿ ವಾಸವಾಗಿದ್ದರು. ಅದೇ ಕಟ್ಟಡದಲ್ಲಿ ಅವರ ಕಿರಿಯ ಪುತ್ರಿ ಮತ್ತು ಮಗಳು ಹಾಗೂ ಅಜ್ಜಿ ಮನೆ ಸಮೀಪದಲ್ಲೇ ಅವರ ಮಗ ಕೂಡ ವಾಸವಾಗಿದ್ದರು. ಪ್ರತಿ ತಿಂಗಳು ತಾಯಿಗೆ ₹2-3 ಸಾವಿರವನ್ನು ಪುತ್ರ ನೀಡುತ್ತಿದ್ದರು.


ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತೆಯಾಗಿದ್ದ ಸುಶೀಲಮ್ಮ ಅವರು, ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದರು. ಆಗ ಅವರಿಗೆ ದಿನೇಶ್ ಎಂಬಾತನ ಪರಿಚಯವಾಗಿದ್ದು, ಆಗಾಗ್ಗೆ ಅಜ್ಜಿಗೆ ಮನೆಗೆ ಬಂದು ಹೋಗುವುದನ್ನು ಆತ ಮಾಡುತ್ತಿದ್ದ ಎಂದು ಮೂಲಗಳು ಹೇಳಿವೆ.ಈ ಹತ್ಯೆಗೆ ನಿಖರವಾಗಿ ಕಾರಣ ಗೊತ್ತಾಗಿಲ್ಲ. ಹಣಕ್ಕಾಗಿ ದಿನೇಶ್ ಕೃತ್ಯ ಎಸಗಿರಬಹುದು ಎಂದು ಶಂಕೆ ಇದೆ. ಮನೆಯಲ್ಲಿ ಅಜ್ಜಿ ಜತೆ ದಿನೇಶ್ ಮಾತನಾಡುತ್ತ ನಿಂತಿರುವುದನ್ನು ಮೃತರ ಮೊಮ್ಮಗಳು ನೋಡಿದ್ದಳು. ಇದಾದ ಬಳಿಕ ಅಜ್ಜಿ ಹತ್ಯೆಯಾಗಿದೆ. ಹೀಗಾಗಿ ದಿನೇಶ್ ಮೇಲೆ ಅನುಮಾನ ಹೆಚ್ಚಿದ್ದು, ಕೃತ್ಯ ಬೆಳಕಿಗೆ ಬಂದ ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.


ಮನೆ ಹಿಂಬದಿ ಓಣಿಯಲ್ಲಿ ಶವವಿದ್ದ ಡ್ರಮ್‌ ಪತ್ತೆಮನೆಯಲ್ಲಿ ಹತ್ಯೆ ಮಾಡಿದ ಬಳಿಕ ಮೃತದೇಹವನ್ನು ಮನೆಯಲ್ಲಿದ್ದ ಡ್ರಮ್‌ನಲ್ಲಿ ತುಂಬಿ ಮನೆ ಹಿಂಬದಿಯ ಓಣಿಯಲ್ಲಿ ಮೃತದೇಹ ತುಂಬಿದ್ದ ಡ್ರಮ್ಮನ್ನು ಇಟ್ಟು ಪರಾರಿಯಾಗಿದ್ದರು. ಈ ಹತ್ಯೆ ಕೃತ್ಯ ಶುಕ್ರವಾರ ರಾತ್ರಿ ನಡೆದಿರಬಹುದು. ಕೆಲವು ಬಾರಿ ಎರಡ್ಮೂರು ದಿನಗಳು ಅಜ್ಜಿ ಯಾರಿಗೂ ತಿಳಿಸದೆ ಹೊರ ಹೋಗುತ್ತಿದ್ದರು. ಹೀಗಾಗಿ ಎರಡು ದಿನಗಳಿಂದ ಮನೆ ಬಳಿ ಕಾಣದೆ ಹೋದಾಗ ಮೃತರ ಮಗಳು ಹಾಗೂ ಮೊಮ್ಮಗಳಿಗೆ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಆದ್ದರಿಂದ ಹತ್ಯೆಕೃತ್ಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನಾನಕ್ಕೆ ತೆರಳಿದ್ದ ಯುವಕ ದುರ್ಮರಣ ವಿಟ್ಲ ಸಮೀಪದ ಕುದ್ದುಪದವಿನಲ್ಲಿ ದುರ್ಘಟನೆ

Posted by Vidyamaana on 2023-12-12 20:36:18 |

Share: | | | | |


ಸ್ನಾನಕ್ಕೆ ತೆರಳಿದ್ದ ಯುವಕ ದುರ್ಮರಣ ವಿಟ್ಲ ಸಮೀಪದ ಕುದ್ದುಪದವಿನಲ್ಲಿ ದುರ್ಘಟನೆ

ವಿಟ್ಲ : ಸ್ನಾನಕ್ಕೆ ತೆರಳಿದ ವೇಳೆ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.


ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್ (24) ಮೃತ ಯುವಕ.

ಕಾರ್ತಿಕ್ ಕುದ್ದುಪದವು ಬಳಿಯಲ್ಲಿರುವ ಕೋರೆಯಲ್ಲಿ ಕೆಲಸ ಮುಗಿಸಿ ಸ್ನಾನಕ್ಕೆ ಬಂದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆಂದು ವರದಿಯಾಗಿದೆ.

ರಾಜ್ಯ ಸರ್ಕಾರ ದಿಂದ ಕೋವಿಡ್ ಸೋಂಕಿ ನಿಂದ ಮೃತಪಟ್ಟವರ ಅಂತ್ಯ ಕ್ರಿಯೆ ಬಗ್ಗೆ ಮಹತ್ವದ ಆದೇಶ

Posted by Vidyamaana on 2024-01-11 16:45:44 |

Share: | | | | |


ರಾಜ್ಯ ಸರ್ಕಾರ ದಿಂದ ಕೋವಿಡ್ ಸೋಂಕಿ ನಿಂದ ಮೃತಪಟ್ಟವರ ಅಂತ್ಯ ಕ್ರಿಯೆ ಬಗ್ಗೆ ಮಹತ್ವದ ಆದೇಶ

ಬೆಂಗಳೂರು : ಕೋವಿಡ್-19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆ ನಡೆಸುವ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವನ್ನು ಹೊರಡಿಸಿದೆ.ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಗಳ ಅನ್ವಯ ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಬಿ ಬಿ ಎಂ ಪಿ ವ್ಯಾಪ್ತಿಯಲ್ಲಿ ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ಸಾಮಾನ್ಯ ಚಿತಾಗಾರ / ಸ್ಮಶಾನ/ ರುದ್ರಭೂಮಿಯಲ್ಲಿ ನಡೆಸುವಂತೆ ಸೂಚಿಸಿದೆ.ಮುಂದುವರೆದು, ಕೋವಿಡ್ 19 ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಯನ್ನು ನಡೆಸಲು ಬಿ ಬಿ ಎಂ ಪಿ ವ್ಯಾಪ್ತಿಯಲ್ಲಿ ಹಾಗೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಚಿತಾಗಾರ / ಸ್ಮಶಾನ/ ರುದ್ರಭೂಮಿಗಳಲ್ಲಿ ಅಂತ್ಯಕ್ರಿಯೆಗೆ ತರುವ ಮೃತದೇಹಗಳನ್ನು ಚಿತಾಗಾರ / ಸ್ಮಶಾನದ ಸಿಬ್ಬಂದಿಯು ನಿರಾಕರಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು (N -95 ಮಾಸ್ಕ್, ಗೊವ್ ಹಾಗೂ ಪಿಪಿಇ ಕಿಟ್ ಧರಿಸುವುದು ಮತ್ತು ಅಂತ್ಯಕ್ರಿಯೆ ನಡೆಸಿದ ನಂತರ ಅವುಗಳನ್ನು ಮಾರ್ಗಸೂಚಿಯಂತೆ ವಿಲೇವಾರಿ ಮಾಡುವುದು) ಅಂತ್ಯಕ್ರಿಯೆಯನ್ನು ನಡೆಸಲು ತಿಳಿಸುವಂತೆ ಈ ಮೂಲಕ ಸೂಚಿಸಿದೆ.


ಈ ನಿಟ್ಟಿನಲ್ಲಿ, ಬಿ, ಬಿ.ಎಂ.ಪಿ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲಾಡಳಿತಗಳು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದೆ.

Recent News


Leave a Comment: