Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2024-03-01 08:33:44 |
ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತದ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.
ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
Posted by Vidyamaana on 2023-08-29 07:34:23 |
ಪುತ್ತೂರು: ತೆಂಗು ಕೃಷಿಯನ್ನು ವೈಜ್ಞಾನಿಕ ಪದ್ಧತಿಯಲ್ಲಿ ನಡೆಸಿದಾಗ ಅಧಿಕ ಇಳುವರಿ ಪಡೆಯಲು ಸಾಧ್ಯ. ಉಪಬೆಳೆ ಎನ್ನುವ ಮನಸ್ಥಿತಿಯಿಂದ ಹೊರಬರಬೇಕು ಎಂದು ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಡಾ.ರಶ್ಮಿ ಆರ್. ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿ ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇದರ ಜಂಟಿ ಸಹಯೋಗದಲ್ಲಿ ಆ. 28ರಂದು ಜೈನ ಭವನದಲ್ಲಿ ನಡೆದ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ಶೇರು ಪ್ರಮಾಣ ಪತ್ರ ವಿತರಣೆ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ತೆಂಗಿಗೆ ವಿಶೇಷ ಆಶಕ್ತಿ ನೀಡದೇ ಇರುವುದರಿಂದ ಇಂದು ಇಳುವರಿ ಕಡಿಮೆಯಾಗಿದೆ. ಜೊತೆಗೆ ಸಮಗ್ರ ಪೋಷಕಾಂಶಗಳ ಕೊರತೆಯಿಂದ ನುಸಿ ರೋಗಗಳಂತ ಕಾಯಿಲೆಗಳು ಬಾಧಿಸುತ್ತಿವೆ. ಆದ್ದರಿಂದ ಕರಾವಳಿಯ ಈ ಭಾಗದಲ್ಲಿ ಮಣ್ಣಿಗೆ ಆವಶ್ಯಕವಾದ ಸಾರಜನಕ, ರಂಜಕ, ಪೊಟ್ಯಾಶ್ಗಳಂತ ಪ್ರಧಾನ ಪೋಷಕಾಂಶ ನೀಡಬೇಕು. ಮಣ್ಣು ಪರೀಕ್ಷೆಯೂ ಅಗತ್ಯವಾಗಿದ್ದು, ಕನಿಷ್ಠ 2 ವರ್ಷಕ್ಕೊಮ್ಮೆ ಮಣ್ಣು ಪರೀಕ್ಷೆ ಮಾಡುವ ಸಂಪ್ರದಾಯ ರೂಢಿಸಿಕೊಳ್ಳಬೇಕು. ಹೀಗೆ ಪ್ರತಿ ಹಂತದಲ್ಲೂ ತೆಂಗಿಗೆ ವಿಶೇಷ ಆಸಕ್ತಿ ವಹಿಸಿ ಕೆಲಸ ಮಾಡಿದಾಗ ಪ್ರಧಾನ ಬೆಳೆಯಾಗಿ, ಉತ್ತಮ ಇಳುವರಿ ಪಡೆಯಲು ಸಾಧ್ಯ ಎಂದರು.
ಬೆಂಬಲ ಬೆಲೆಗೆ ಆಗ್ರಹಿಸಿ ಅ. 2ರಂದು ರಾಜಭವನ ಚಲೋ: ರವಿಕಿರಣ್ ಪುಣಚ
ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಿ, ತೆಂಗಿನಕಾಯಿಯ ಮೌಲ್ಯವರ್ಧನೆಯ ಗುಟ್ಟು ಎಲ್ಲರಿಗೂ ತಿಳಿದಿದೆ. ಆದರೆ ಇದರಿಂದ ಎಷ್ಟು ಆದಾಯ ಬರಬಹುದು ಎನ್ನುವ ಆಲೋಚನೆ ಯಾರಿಗೂ ಇಲ್ಲ. ಒಂದು ಮರದಿಂದ 3 ಸಾವಿರ ರೂ.ದಿಂದ 5 ಸಾವಿರ ರೂ.ವರೆಗೆ ಆದಾಯ ಪಡೆಯಬಹುದು. ಆದ್ದರಿಂದ ರೈತರು ಈ ದಿಶೆಯಲ್ಲಿ ಆಲೋಚನೆ ಮಾಡಬೇಕು. ಇಷ್ಟೆಲ್ಲಾ ಇದ್ದರೂ, ರಾಜಕೀಯದ ಇಚ್ಚಾಶಕ್ತಿಯ ಕೊರತೆಯಿಂದಾಗಿ ತೆಂಗಿನಕಾಯಿಯನ್ನು ಖರೀದಿಸಲು ಸರಕಾರಿ ವ್ಯವಸ್ಥೆಗಳು ಇಲ್ಲ ಎನ್ನುವುದು ಬೇಸರದ ಸಂಗತಿ. ಆದ್ದರಿಂದ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 20 ಸಾವಿರ ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರಕಾರ ನಿಗದಿಪಡಿಸಬೇಕು ಹಾಗೂ ರಾಜ್ಯ ಸರಕಾರ 5 ಸಾವಿರ ರೂ. ಪ್ರೋತ್ಸಾಹ ಧನ ನೀಡಬೇಕು ಎಂಬ ಆಗ್ರಹವನ್ನು ಮುಂದಿಟ್ಟುಕೊಂಡು ಅಕ್ಟೋಬರ್ 2ರಂದು ತಿಪಟೂರಿನಿಂದ ರಾಜಭವನ ಚಲೋ ಪಾದಯಾತ್ರೆ ನಡೆಯಲಿದೆ. ಅಕ್ಟೋಬರ್ 9ರಂದು ಫ್ರೀಡಂ ಪಾರ್ಕಿನಲ್ಲಿ ಬೃಹತ್ ಕಲ್ಮಿನೇಷನ್ ನಡೆಯಲಿದೆ ಎಂದರು.
ರೈತರೇ ವಿಜ್ಞಾನಿಗಳಾಗಬೇಕು: ಕಡಮಜಲು ಸುಭಾಷ್ ರೈ
ವಿಜಯ ಕರ್ನಾಟಕ ಸೂಪರ್ ಸ್ಟಾರ್ ಪ್ರಶಸ್ತಿ ಪುರಸ್ಕೃತ ಕೃಷಿಕ ಕಡಮಜಲು ಸುಭಾಸ್ ರೈ ಮಾತನಾಡಿ, ಉಪಬೆಳೆಯಾಗಿರುವ ತೆಂಗಿಗೆ ವೈಜ್ಞಾನಿಕ ವಿಧಾನ ಅಳವಡಿಸಿಕೊಳ್ಳಬೇಕು. ಇದರಿಂದ ಅಧಿಕ ಲಾಭ ಗಳಿಸಲು ಸಾಧ್ಯ. ಬದುಕಿಗೆ ಪೂರಕವಾಗಿ ಸಮಗ್ರ ಕೃಷಿ ಮಾಡಿದಾಗ ಆರ್ಥಿಕ ಅಭಿವೃದ್ಧಿ ಸಾಧ್ಯ. ಇದಕ್ಕಾಗಿ ಲ್ಯಾಬಿನಲ್ಲಿ ಆಗುವ ಪ್ರಯೋಗಗಳನ್ನು ಮಣ್ಣಿಗೆ ತರುವ ಕೆಲಸ ಆಗಬೇಕು. ಈ ಕೆಲಸವನ್ನು ಕೃಷಿಕರೇ ಮಾಡಬೇಕಾಗಿದೆ ಎಂದರು.
ಕ್ಷಿಪ್ರಸಾಲಕ್ಕಾಗಿ ಒಡಂಬಡಿಕೆ: ಪೂರ್ಣಿಮಾ ಎನ್.
ಮಾನಸಗಂಗಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಎನ್. ಮಾತನಾಡಿ, ರೈತರಿಗೆ ಅಗತ್ಯವಿರುವ ಕೃಷಿ ಸಲಕರಣೆ, ರಸಗೊಬ್ಬರಗಳನ್ನು ಪೂರೈಸುವ ದೃಷ್ಟಿಯಿಂದ ಕ್ಷಿಪ್ರ ಗತಿಯಲ್ಲಿ ಸಾಲ ಸೌಲಭ್ಯ ನೀಡಲು ನಮ್ಮ ಸಂಘ ಮುಂದೆ ಬಂದಿದೆ. ಈ ನಿಟ್ಟಿನಲ್ಲಿ ತೆಂಗು ಉತ್ಪಾದಕರ ಕಂಪೆನಿ ಹಾಗೂ ಮಾನಸಗಂಗಾಗ ಸಹಕಾರ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡಿದೆ ಎಂದರು.
ಗಣೇಶ ಚತುರ್ಥಿ ಬಳಿಕ ತೆಂಗು ಖರೀದಿ: ಕುಸುಮಾಧರ ಎಸ್.ಕೆ.
ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿ ಅಧ್ಯಕ್ಷ ಕುಸುಮಾಧರ ಎಸ್.ಕೆ. ಮಾತನಾಡಿ, ತೆಂಗಿಗೆ ಮೌಲ್ಯವರ್ಧನೆ ಮಾಡಿ, ಉತ್ತಮ ಬೆಲೆ ಒದಗಿಸುವುದೇ ನಮ್ಮ ಉದ್ದೇಶ. ಇದಕ್ಕಾಗಿ ಬೇರೆ ಬೇರೆ ಯೋಜನೆಗಳನ್ನು ಅಳವಡಿಸಿಕೊಳ್ಳಲಾಗಿದೆ. ಕಲ್ಪರಸ ಯೋಜನೆಯ ಜಾರಿಗಾಗಿ ದೊಡ್ಡತೋಟದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಗಣೇಶ ಚತುರ್ಥಿ ಬಳಿಕ ಅಲ್ಲಿ ತೆಂಗಿನಕಾಯಿ ಖರೀದಿಸಲಾಗುವುದು. ತೆಂಗಿನಕಾಯಿ ಕೀಳಲು ಜನರ ಸಮಸ್ಯೆ ಇದೆ ಎನ್ನುವ ಕಾರಣಕ್ಕಾಗಿ, ಟೋಲ್ ಫ್ರೀ ಸಹಾಯವಾಣಿಯನ್ನು ನೀಡಲಾಗಿದೆ. ಸದಸ್ಯರ ಉತ್ತಮ ಯೋಜನೆಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ 100 ಕೋಟಿ ರೂ.ವರೆಗೆ ಸಾಲ ಒದಗಿಸುವ ಯೋಜನೆಯೂ ಇದೆ. ಮಾತ್ರವಲ್ಲ, ಕಲ್ಪ ಸಮೃದ್ಧಿ ಯೋಜನೆಯಡಿ ಠೇವಣಿ ಇಟ್ಟರೆ ಶೇ. 12ರವರೆಗೆ ಬಡ್ಡಿ ನೀಡಲಾಗುವುದು ಎಂದು ಮಾಹಿತಿ ನೀಡಿದ ಅವರು, ಸಂಸ್ಥೆ ಪ್ರಾರಂಭಗೊಂಡು 2 ವರ್ಷ ಪೂರೈಸಿದೆ. ಈ 2 ವರ್ಷದಲ್ಲಿ 14 ಸಾವಿರ ರೈತರನ್ನು ಹೊಂದಿದ್ದು, ದೇಶದಲ್ಲೇ ಪ್ರಥಮ ಸಂಸ್ಥೆ ಎನ್ನುವ ಹಿರಿಮೆಗೂ ಪಾತ್ರವಾಗಿದೆ ಎಂದರು.
ನಿರ್ದೇಶಕಿ ಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಸ್ಯ ರೈತರಾದ ಎ. ಜತೀಂದ್ರ ಶೆಟ್ಟಿ, ಜಗನ್ನಾಥ ರೈ ಡಿ, ಐತ್ತಪ್ಪ ನಾಯ್ಕ್, ಆಯಿಷಾ, ದುಗ್ಗಪ್ಪ ಗೌಡ, ಐತ್ತಪ್ಪ ರೈ ಅವರಿಗೆ ಇದೇ ಸಂದರ್ಭ ಶೇರು ಪ್ರಮಾಣ ಪತ್ರ ವಿತರಿಸಲಾಯಿತು.
ನಿಶ್ಮಿತಾ ಪ್ರಾರ್ಥಿಸಿದರು. ನಿರ್ದೇಶಕ ಗಿರಿಧರ್ ಸ್ವಾಗತಿಸಿದರು. ನಿರ್ದೇಶಕಿ ಲತಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಳ್ಯ ಕಚೇರಿ ಮೇಲ್ವಿಚಾರಕಿ ಅಪರ್ಣಾ ವಂದಿಸಿದರು. ಡಾ.ರಾಜೇಶ್ ಬೆಜ್ಜಂಗಳ ಕಾರ್ಯಕ್ರಮ ನಿರೂಪಿಸಿದರು.
Posted by Vidyamaana on 2023-05-24 15:27:22 |
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ಧ ಪ್ರಕರಣ ದಾಖಲಾಗಿದೆ.ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದರು.ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶ್ರೀಮತಿ ನಮಿತ ಕೆ ಪೂಜಾರಿ ನೀಡಿದ ದೂರಿನ ಮೇರೆಗೆ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 505 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2023-04-21 17:37:05 |
ಚಿಕ್ಕಮಗಳೂರು : ಮರಕ್ಕೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ನಡೆದಿದೆ. ಶ್ರೀನಿವಾಸ್ ಹಾಗೂ ಶ್ವೇತಾ ಮೃತ ದಂಪತಿ. ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ದಂಪತಿ ಮಕ್ಕಳೊಂದಿಗೆ ಬೆಂಗಳೂರಿನಿಂದ ಭದ್ರಾವತಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2024-07-20 07:09:13 |
ಹರ್ಯಾಣ: ಹಣಕಾಸಿನ ಸಮಸ್ಯೆಯಿಂದ ನೊಂದ 19 ವರ್ಷದ ವಿದ್ಯಾರ್ಥಿಯೊಬ್ಬ ಎತ್ತರದ ನೀರಿನ ಟ್ಯಾಂಕ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯ ವೀಡಿಯೊ ವೈರಲ್ ಆಗಿದೆ.
ಘಟನೆ ಹರ್ಯಾಣದ ಖರಾರ್ ನ ಖಾನ್ಪುರ್ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಈ ಭಯಾನಕ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.