ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ: HDKಗೆ ಕಾಂಗ್ರೆಸ್ ಪ್ರಶ್ನೆ

Posted by Vidyamaana on 2024-04-25 22:52:33 |

Share: | | | | |


ಹಾಸನದಲ್ಲಿ ಚೆಲ್ಲಾಡುತ್ತಿರುವ ಪೆನ್‌ಡ್ರೈವ್ ನಿಮ್ಮದೇ: HDKಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್‌ ಡ್ರೈವ್‌ ನಿಮ್ಮದೇ ಎಂದು ರಾಜ್ಯ ಕಾಂಗ್ರೆಸ್ ಘಟಕ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದೆ.


ಪತ್ರಕರ್ತರೊಂದಿಗೆ ಮಾತನಾಡುವ ವೇಳೆ ಪೆನ್‌ ಡ್ರೈವ್‌ ತೋರಿಸುವ ಕುಮಾರಸ್ವಾಮಿ ಅವರ ಹಳೆಯ ವಿಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌, ಈ ಪ್ರಶ್ನೆ ಕೇಳಿದೆ.ರಾಜ್ಯದ ಮಹಿಳೆಯರ ಬಗ್ಗೆ ನಾಲಿಗೆ ಹರಿಬಿಟ್ಟು ದಾರಿ ತಪ್ಪಿದ್ದಾರೆ ಎಂದಿದ್ದ ನೀವು ಯಾಕೆ ಈಗ ಗಾಢ ಮೌನ ವಹಿಸಿದ್ದೀರಿ? ದಾರಿ ತಪ್ಪಿ ನಡೆದವರು ಯಾರು ಎನ್ನುವ ಸಂಗತಿ ಬಟಾಬಯಲಾಗಿರುವಾಗ ರಾಜ್ಯದ ಜನರಿಗೆ ಮುಖ ತೋರಿಸಲಾಗುತ್ತಿಲ್ಲವೇ ಎಂದು ಕಾಂಗ್ರೆಸ್‌ ಎಕ್ಸ್‌ನಲ್ಲಿ ಪ್ರಶ್ನೆ ಮಾಡಿದೆ.

ಮಾ 10 ಡಿವೈಎಸ್ಪಿ ನೇತೃತ್ವದಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ ಜಾಥಾ

Posted by Vidyamaana on 2024-03-07 21:26:06 |

Share: | | | | |


ಮಾ 10  ಡಿವೈಎಸ್ಪಿ ನೇತೃತ್ವದಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ಜಾಗೃತಿ ಜಾಥಾ

ಪುತ್ತೂರು: ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಪೊಲೀಸ್ ರನ್ 2024 ಮಾರ್ಚ್ 10ರಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ.

ಸೇ ಯಸ್ ಟು ಲೈಫ್, ನೋ ಟು ಡ್ರಗ್ಸ್ ಎಂಬ ಹೆಸರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಜಾಗೃತಿ ಜಾಥಾ ಹಮ್ಮಿಕೊಂಡಿದೆ.

ದರ್ಬೆ ಫಾ. ಪತ್ರಾವೋ ವೃತ್ತದಿಂದ ಆರಂಭಗೊಳ್ಳುವ ಕರ್ನಾಟಕ ಪೊಲೀಸ್ ರನ್ 2024 ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸಮಾಪನಗೊಳ್ಳಲಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರು ನೇತೃತ್ವ ವಹಿಸಲಿದ್ದು, ಅಡಿಷನಲ್ ಎಸ್ ಪಿ, ಹಾಗೂ ,ಡಿವೈಎಸ್ಪಿ ಅರುಣ್ ನಾಗೇಗೌಡ  ಉಪಸ್ಥಿತರಿರುವರು. ಪುತ್ತೂರು ನಗರ ಪೊಲೀಸ್ ಠಾಣೆ, ಟ್ರಾಫಿಕ್ ಠಾಣೆ, ಮಹಿಳಾ ಪೊಲೀಸ್ ಠಾಣೆಯ ಪೊಲೀಸರ ಜೊತೆಗೆ ವಿವೇಕಾನಂದ ಕಾಲೇಜು, ಸಂತ ಫಿಲೋಮಿನಾ, ಉಪ್ಪಿನಂಗಡಿ ಕಾಲೇಜು, ಸಂಪ್ಯ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳು ಪೊಲೀಸ್ ರನ್ನಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪುತ್ತೂರು: ಅಧಿಕಾರ ಸ್ವೀಕರಿಸಿದ ನೂತನ ತಹಸೀಲ್ದಾರ್ ಕುಂಞ ಅಹಮದ್

Posted by Vidyamaana on 2024-03-18 18:45:00 |

Share: | | | | |


ಪುತ್ತೂರು: ಅಧಿಕಾರ ಸ್ವೀಕರಿಸಿದ ನೂತನ ತಹಸೀಲ್ದಾರ್ ಕುಂಞ ಅಹಮದ್

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ನೂತನ ತಹಸೀಲ್ದಾರ್ ಕುಂಞ ಅಹಮದ್ ಸೋಮವಾರ ಸಂಜೆ (ಮಾ.18) ಅಧಿಕಾರ ಸ್ವೀಕರಿಸಿದರು.

ತಹಸೀಲ್ದಾರ್ ಆಗಿದ್ದ ಪುರಂದರ ಹೆಗಡೆ ಅವರು ಅಧಿಕಾರ ಹಸ್ತಾಂತರಿಸಿದರು.ಪುತ್ತೂರು ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ: ಸಿಎಂಗೆ ಅಕ್ಕಾತಾಯಿಯ ಹಾರೈಕೆ

Posted by Vidyamaana on 2024-08-27 01:30:16 |

Share: | | | | |


ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ: ಸಿಎಂಗೆ ಅಕ್ಕಾತಾಯಿಯ ಹಾರೈಕೆ

ಬೆಳಗಾವಿ: ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ ಎಂದು ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಮುಖ್ಯಮಂತ್ರಿಗಳಿಗೆ ಆಶೀರ್ವಾದ ಮಾಡಿದರು.ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ‌ ನಿಲ್ದಾಣದಲ್ಲಿ‌ ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿದ ಬಳಿಕ‌ ಅಕ್ಕಾತಾಯಿ ಸಿಎಂಗೆ ಆಶೀರ್ವದಿಸಿದರು.

ಕೈ ಮೇಲಾಗ್ಲಿ-ದೇಶ ಆಳು ದೊರೆಯೇ. ನಾಡಿಗೆ ಅನ್ನ ಕೊಡೋ ದೊರೆ ನೀನು. ನಿಮ್ಮ ಕೈ ಇನ್ನೂ ಮೇಲಾಗ್ಲಿ. ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದರು.

ಅಕ್ಕಾತಾಯಿ ಜೊತೆ ಬಂದಿದ್ದ ಮುತ್ತೈದೆಯರು ಒಟ್ಟಾಗಿ ಮುಖ್ಯಮಂತ್ರಿಗಳಿಗೆ, ನಾವು ಲಕ್ಷ್ಮೀದೇವಿಗೆ ಪೂಜೆ ಮಾಡೀವಿ. ಕಂಟಕ ನಾಶ ಆಗ್ಲಿ ಅಂತ ದೇವಿಗೆ ಕೈಮುಗಿದೀವಿ ಎಂದು ಹಾರೈಸಿದರು.

ಪುತ್ತೂರು : ನಳಿನ್ ಹಾಗೂ ಡಿವಿ ಕುರಿತು ಅವಹೇಳನಕಾರಿ ಬ್ಯಾನರ್ ಅಳವಡಿಸಿದ ಪ್ರಕರಣ. –ವಿಶ್ವನಾಥ್- ಮಾಧವ ಪೊಲೀಸ್ ವಶಕ್ಕೆ

Posted by Vidyamaana on 2023-05-15 13:48:30 |

Share: | | | | |


ಪುತ್ತೂರು : ನಳಿನ್ ಹಾಗೂ ಡಿವಿ ಕುರಿತು ಅವಹೇಳನಕಾರಿ ಬ್ಯಾನರ್ ಅಳವಡಿಸಿದ ಪ್ರಕರಣ. –ವಿಶ್ವನಾಥ್- ಮಾಧವ ಪೊಲೀಸ್ ವಶಕ್ಕೆ

ಪುತ್ತೂರು : ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ವಿರುದ್ಧ ಅವಹೇಳನಕಾರಿ ಬರಹದೊಂದಿಗೆ  ಭಾವಚಿತ್ರ ಲಗತ್ತಿಸಿ ಬ್ಯಾನರ್‌ ಅಳವಡಿಸಿದ ಪುತ್ತೂರು ಬಸ್ಸು ನಿಲ್ದಾಣದ ಬಳಿ ಪ್ರಕರಣದಲ್ಲಿ ಇಬ್ಬರನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನರಿಮೊಗರು ಗ್ರಾಮದ ಸಹೋದರರಾದ ವಿಶ್ವನಾಥ್‌ ಹಾಗೂ ಮಾಧವ ಪೊಲೀಸ್‌ ವಶದಲ್ಲಿರುವವರು. ಪುತ್ತೂರು ಕೆ.ಎಸ್ಆರ್.ಟಿಸಿ ಬಸ್ಸು ನಿಲ್ದಾಣದ ಎದುರು ಅರಣ್ಯ ಇಲಾಖೆಯ ಆವರಣ ಗೋಡೆ ಬಳಿ ಅವಹೇಳನಕಾರಿ ಬ್ಯಾನರ್ ಅಳವಡಿಸಲಾಗಿತ್ತು.

ಪುತ್ತೂರು ನಗರಸಭಾ ಆಯುಕ್ತ ಮಧು ಎಸ್‌ ಮನೋಹರ್‌  ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 ಅದರಲ್ಲಿ   “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರಧ್ಧಾಂಜಲಿ “ ಎಂದು ನಳಿನ್‌ ಕುಮಾರ್‌ ಕಟೀಲು ಹಾಗೂ  ಡಿ.ವಿ ಸದಾನಂದ ಗೌಡ ಎಂದು ಬರೆಯಲಾಗಿತ್ತು.  ಆ ಬ್ಯಾನರ್‌ ಗೆ  ಚಪ್ಪಲಿ ಹಾರವನ್ನು ಹಾಕಿರುವ ಬಗ್ಗೆಯೂ  ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಲಾಗಿತ್ತು.

ಬೋಳಿಯಾ‌ರ್: ಇಬ್ಬರಿಗೆ ಚೂರಿ ಇರಿತ

Posted by Vidyamaana on 2024-06-10 05:17:29 |

Share: | | | | |


ಬೋಳಿಯಾ‌ರ್: ಇಬ್ಬರಿಗೆ ಚೂರಿ ಇರಿತ

ಕೊಣಾಜೆ : ಮುಡಿಪು ಸಮೀಪದ ಬೋಳಿಯಾರು ಬಳಿ ತಂಡವೊಂದು ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದ್ದು, ಗಾಯಾಳುಗಳನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Recent News


Leave a Comment: