Posted by vidyamaana on 2024-07-24 17:19:41 |
ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.
ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.
ಜ್ಞಾಪನಾ ಪತ್ರದಲ್ಲಿ ಏನಿದೆ?
ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ಬಿಜೆಪಿಯಿಂದ ಹೋರಾಟ :
ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.
ಬಿಜೆಪಿ ಸರಕಾರದಲ್ಲೇ ಆದೇಶ :
2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.
Posted by Vidyamaana on 2023-09-06 07:05:24 |
ಪುತ್ತೂರು : ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜಿಲ್ಲಾವಾರು ಬದಲಾವಣೆ ಮಾಡಿ ಆಹಾರ ಇಲಾಖೆ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸಹಿತ ವಿವಿಧ ಜಿಲ್ಲೆಗಳಲ್ಲಿ ಸೆ. 12ರಿಂದ ಸೆ. 14ರ ವರೆಗೆ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಸೆ.1 ರಿಂದ ಸೆ. 10ರ ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ನಿಗದಿಪಡಿಸಿದ್ದ ಆದೇಶವನ್ನು ಇಲಾಖೆ ಹಿಂಪಡೆದಿದೆ. ಪಡಿತರ ಚೀಟಿ ತಿದ್ದುಪಡಿಗೆ ಭರಪೂರ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಆಹಾರ ಇಲಾಖೆಯ ಸರ್ವ್ರನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ 1 ಗಂಟೆಯಲ್ಲಿ ಸುಮಾರು 500ಕ್ಕೂ ಅಧಿಕ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಸರ್ವರ್ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ ಜನರು ಪಡಿತರ ಚೀಟಿ ತಿದ್ದುಪಡಿಗೆ ವಿವಿಧ ಕೇಂದ್ರಗಳನ್ನು ಸಂಪರ್ಕಿಸಿದರೂ ತಿದ್ದುಪಡಿ ಆಗುತ್ತಿರಲಿಲ್ಲ. ಈ ಸಮಸ್ಯೆಯನ್ನು ಗಮನಿಸಿದ ಆಹಾರ ಇಲಾಖೆ ಸರ್ವರ್ ನಿಭಾಯಿಸಲು ಇದೀಗ ಜಿಲ್ಲಾವಾರು ದಿನಾಂಕವನ್ನು ನಿಗದಿಪಡಿಸಿದೆ. ಅದರಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸಹಿತ ವಿವಿಧ ಜಿಲ್ಲೆಗಳಲ್ಲಿ ಸೆ. 12ರಿಂದ ಸೆ. 14ರ ವರೆಗೆ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಅವಕಾಶ ಮಾಡಲಾಗಿದೆ.
Posted by Vidyamaana on 2023-12-22 20:07:40 |
ಬಿಲಾಸ್ ಪುರ: ಛತ್ತೀಸ್ ಗಢ ಹೈಕೋರ್ಟ್ (Chattisgath hight court) ಮಹತ್ವದ ತೀರ್ಪು ನೀಡಿದ್ದು, ಬಣ್ಣದ ಆಧಾರದ ಮೇಲೆ ವಿವಾಹಿತ ಸಂಗಾತಿಯನ್ನು ಬಿಡುವ ಸ್ವಾತಂತ್ರ್ಯ ಯಾರಿಗೂ ಇಲ್ಲ ಎಂದು ಆದೇಶಿಸಿದೆ.ಪತಿ-ಪತ್ನಿಯರ ವಿಚ್ಛೇದನ ಪ್ರಕರಣದ ವಿಚಾರಣೆ ವೇಳೆ ಛತ್ತೀಸ್ ಗಢ ಹೈಕೋರ್ಟ್ ಈ ತೀರ್ಪು ನೀಡಿದ್ದು, ಪತಿಗೆ ಖಡಕ್ ಎಚ್ಚರಿಕೆ ನೀಡಿತಲ್ಲದೆ, ಫೇರ್ನೆಸ್ ಕ್ರೀಮ್ ಉದ್ಯಮದ ಬಗ್ಗೆಯೂ ತಮ್ಮ ಅಸಮಾಧಾನವನ್ನು ಹೊರಹಾಕಿದೆ.ನ್ಯಾಯಮೂರ್ತಿ ಗೌತಮ್ ಭಾದುರಿ (Goutam B
non
huri) ಮತ್ತು ನ್ಯಾಯಮೂರ್ತಿ ದೀಪಕ್ ಕುಮಾರ್ ತಿವಾರಿ (Deepak Kumar tiwari) ಅವರಿದ್ದ ಪೀಠವು ವಿಚಾರಣೆ ವೇಳೆ, ಯಾವುದೇ ಕಾರಣಕ್ಕೆ ಪತಿ-ಪತ್ನಿಯರ ಬಣ್ಣದ ಆಧಾರದ ಮೇಲೆ ವಿಚ್ಛೇದನ ನೀಡಲು ಸಾಧ್ಯ ಇಲ್ಲ ಎಂದು ಹೇಳಿದೆ.ವ್ಯಕ್ತಿಯೊಬ್ಬರು ತನ್ನ ಪತ್ನಿಯಿಂದ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ತನ್ನ ಹೆಂಡತಿ ತನ್ನನ್ನು ತೊರೆದಿದ್ದಾರೆ ಮತ್ತು ಎಷ್ಟು ಪ್ರಯತ್ನ ಮಾಡಿದರೂ ಅವರು ಮನೆಗೆ ಮರಳಲು ನಿರಾಕರಿಸುತ್ತಿದ್ದರು ಎಂದು ಪತಿ ಹೇಳಿಕೊಂಡಿದ್ದಾರೆ. ಆದರೆ, ಪತಿ ತನ್ನೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು ಎಂಬುದು ಪತ್ನಿಯ ವಾದವಾಗಿತ್ತು. ತನ್ನ ಚರ್ಮದ ಬಣ್ಣವನ್ನು ಗೇಲಿ ಮಾಡುವ ಮೂಲಕ ನಿಂದನೆ ಮತ್ತು ನಿಂದನೀಯ ಪದಗಳನ್ನು ಪತಿ ಬಳಸುತ್ತಿದ್ದರು. ಗರ್ಭಾವಸ್ಥೆಯಲ್ಲಿ ಪತಿ ತನಗೆ ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಪತ್ನಿ ಆರೋಪಿಸಿದ್ದರು. ತನ್ನ ಕಪ್ಪನೆಯ ಚರ್ಮದಿಂದಾಗಿ ಬೇರೆ ಮಹಿಳೆಯನ್ನು ಮದುವೆಯಾಗುವುದಾಗಿ ಪದೇ ಪದೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪತ್ನಿ ತನ್ನ ಪತಿ ವಿರುದ್ಧ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು. ಎರಡೂ ಕಕ್ಷಿದಾರರ ವಾದ ಆಲಿಸಿದ ಛತ್ತೀಸ್ ಗಢ ಹೈಕೋರ್ಟ್, ಪತ್ನಿಯ ಆರೋಪಗಳನ್ನು ಹೆಚ್ಚು ದೃಢವಾಗಿ ಪರಿಗಣಿಸಿ, ಪತಿಯ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಿತು.
ಅಲ್ಲದೇ, ಕೇವಲ ಚರ್ಮದ ಬಣ್ಣದ ಆಧಾರದ ಮೇಲೆ ವಿವಾಹಿತ ಸಂಗಾತಿಯನ್ನು ಬಿಡುವ ಸ್ವಾತಂತ್ರ್ಯ ಯಾರಿಗೂ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿತು. ಚರ್ಮದ ಬಣ್ಣದ ಆಧಾರದ ಮೇಲೆ ತಾರತಮ್ಯ ತೊಡೆದುಹಾಕಲು ಸಾಮಾಜಿಕ ಬದಲಾವಣೆಯ ಅಗತ್ಯವನ್ನು ನ್ಯಾಯಾಲಯ ಒತ್ತಿ ಹೇಳಿದೆ. ಕಾಸ್ಕೆಟಿಕ್ಸ್ ಉದ್ಯಮವು ಚರ್ಮವನ್ನು ಹೊಳಪುಗೊಳಿಸುವ ಉತ್ಪನ್ನಗಳೊಂದಿಗೆ ಕಪ್ಪು ತ್ವಚೆಯ ಜನರನ್ನು ಗುರಿಯಾಗಿರಿಸಿಕೊಳ್ಳುತ್ತದೆ ಎಂದು ಹೈಕೋರ್ಟ್ಅಸಮಾಧಾನ ವ್ಯಕ್ತಪಡಿಸಿತು.
ಜಾಹೀರಾತುಗಳಲ್ಲಿ ಅವರನ್ನು ಕಡಿಮೆ ಆತ್ಮವಿಶ್ವಾಸ ಮತ್ತು ಅಸುರಕ್ಷಿತ ಎಂದು ತೋರಿಸಲಾಗುತ್ತಿದೆ. ಅದು ತಪ್ಪು. ಈ ತಾರತಮ್ಯ ಹೋಗಲಾಡಿಸುವಲ್ಲಿ ಸಾಮಾಜಿಕ ಬದಲಾವಣೆಯ ಅಗತ್ಯವಿದೆ ಎಂದು ನ್ಯಾಯಾಲಯ ಇದೇ ವೇಳೆ ಅಭಿಪ್ರಾಯಪಟ್ಟಿತು.
Posted by Vidyamaana on 2023-02-09 16:57:54 |
ಪುತ್ತೂರು: ಬಹುನಿರೀಕ್ಷಿತ ತುಳು ಚಲನಚಿತ್ರ ಪಿಲಿ ಇನ್ನೇನು ತೆರೆ ಕಾಣಬೇಕು ಎನ್ನುವಾಗಲೇ, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಸಿನಿಮಾ ವೀಕ್ಷಣೆಗೆ ಕಾದು ಕುಳಿತಿದ್ದ ತುಳು ಸಿನಿ ರಸಿಕರು ಭ್ರಮನಿರಸನಗೊಂಡಿದ್ದಾರೆ.ಕರಾವಳಿಯಾದ್ಯಂತ ನಾಳೆ ಬಿಡುಗಡೆಗೆ ಸಿದ್ಧವಾಗಿರುವ ಪಿಲಿ ತುಳು ಚಿತ್ರ ಥಿಯೇಟರ್ಗಳಲ್ಲಿ ಪ್ರದರ್ಶನ ಕಾಣದಂತೆ ನ್ಯಾಯಾಲಯದಿಂದ ತಡೆ ನೀಡಲಾಗಿದೆ.
ಮಂಜೀತ್ ನಾಗರಾಜ್ ಎಂಬವರು ಚಿತ್ರ ಮಂದಿರಗಳಲ್ಲಿ 3 ಕೋರಿ ಪ್ರದರ್ಶನ ಕಾಣಲು ತಡೆಯನ್ನು ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಮಂಜೀತ್ ನಾಗರಾಜ್ ಪ್ರಕಾರ ಈ ಚಿತ್ರಕ್ಕೆ 40 ಲಕ್ಷ ಬಂಡವಾಳ ಹೂಡಿದ್ದಾರೆ. ಆದರೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರನ್ನು ಕಡೆಗಣಿಸಿ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಸಿದ್ಧತೆ
ಇದೀಗ ನಿರ್ಮಾಪಕ ಮಂಜೀಪ್ ಅವರ ಮನವಿ
ಪುರಸ್ಕರಿಸಿದ ನ್ಯಾಯಾಲಯವು
ನಾಳೆ ಬಿಡುಗಡೆಗೊಳ್ಳಲಿರುವ "ಪಿಲಿ" ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.ಈ ಬಗ್ಗೆ ಮಾಧ್ಯಮೊಂದಕ್ಕೆ ಪ್ರತಿಕ್ರಿಯೆ ನೀಡಿದ ನಿರ್ಮಾಪಕ ಮಂಜೀತ್ ನಾಗರಾಜ್ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಭರತ್ ಭಂಡಾರಿ ಎಂಬಾತ ಚಿತ್ರದ ನಿರ್ಮಾಣಕ್ಕಾಗಿ ನನ್ನಿಂದ 40 ಲಕ್ಷ ಬಂಡವಾಳ ಪಡೆದು ಮೊದಲ ಹಂತದ ಚಿತ್ರೀಕರಣ ಮುಗಿದ ಬಳಿಕ ಹಣ ಪಡೆದು ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು.
ಆದರೀಗ ಬೇರೆ ಯಾವುದೋ ನಿರ್ಮಾಪಕರ ಹೆಸರು ಹಾಕಿಕೊಂಡು ಚಿತ್ರ ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ನನಗೂ ಹಾಗೂ ಹಣ ಪಡೆದ ಇತರ ಸಹನಿರ್ಮಾಪಕರಿಗೂ ವಂಚಿಸಿದ್ದಾರೆ ಎಂದು ಮಂಜೀತ್ ನಾಗರಾಜ್ ಅವರು ಆರೋಪಿಸಿದ್ದಾರೆ. ಹಾಗೂ ಕೋರ್ಟ್ ನಲ್ಲಿ ಭರತ್ ಭಂಡಾರಿ ವಿರುದ್ಧ ಮತ್ತು ಚಿತ್ರ ಪ್ರದರ್ಶನ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಾಗಿ ತಿಳಿಸಿದ್ದಾರೆ.
Posted by Vidyamaana on 2024-05-25 09:44:52 |
ಮಂಗಳೂರು, ಮೇ 24: ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರ ಹಿರಿಯ ಸೋದರನ ಮಗಳ ಮದುವೆಯ ಅದ್ದೂರಿ ರಿಸೆಪ್ಶನ್ ಸಮಾರಂಭವನ್ನು ಮಂಗಳೂರಿನ ಟಿಎಂಎ ಪೈ ಹಾಲ್ ನಲ್ಲಿ ಮೇ 25 ಮತ್ತು 26ರಂದು ಆಯೋಜಿಸಲಾಗಿದ್ದು ವಿವಿಧ ರಾಜ್ಯಗಳ ರಾಜ್ಯಪಾಲರು, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಕೇರಳ ಸರ್ಕಾರದ ಸಚಿವರು ಆಗಮಿಸಲಿದ್ದಾರೆ.
ಪ್ರಮುಖ ವಿವಿಐಪಿಗಳು ಮಂಗಳೂರು ನಗರಕ್ಕೆ ಆಗಮಿಸಿ, ನಗರದ PVS ಹಾಗೂ ಲಾಲ್ಬಾಗ್ ಜಂಕ್ಷನ್ಗಳ ನಡುವೆ ಇರುವ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುತ್ತಾರೆ. ಈ ಹಿನ್ನೆಲೆಯಲ್ಲಿ ಸದ್ರಿ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ನವಭಾರತ ಸರ್ಕಲ್ನಿಂದ ಪಿವಿಎಸ್ ಮೂಲಕ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ ರಸ್ತೆಯಲ್ಲಿನ ಎಲ್ಲಾ ಸಂಪರ್ಕಗಳನ್ನು ಮುಚ್ಚಬೇಕಾಗುತ್ತದೆ. ಬೆಸೆಂಟ್ ಜಂಕ್ಷನ್, ಕೋಡಿಯಾಲ್ಗುತ್ತು ಕ್ರಾಸ್, ಬಲ್ಲಾಳ್ಬಾಗ್ ಜಂಕ್ಷನ್, ನೆಹರೂ ಅವೆನ್ಯೂ ಜಂಕ್ಷನ್ ಸಂಪರ್ಕವೂ ಬಂದ್ ಆಗಲಿದೆ. ಸದ್ರಿ ರಸ್ತೆಯನ್ನು ಬಳಸುವ ಎಲ್ಲ ವಾಹನ ಚಾಲಕರಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಪೊಲೀಸರು ಸೂಚಿಸಿದ್ದಾರೆ.
ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿರುವ ಸ್ಥಳಗಳು
ಕೊಟ್ಟಾರ ಚೌಕಿ, ಕುಂಟಿಕಾನ, ಕೆ.ಪಿ.ಟಿ, ನಂತೂರು, ಕೆ.ಎಸ್.ಆರ್.ಟಿ.ಸಿ., ಬಂಟ್ಸ್ ಹಾಸ್ಟೆಲ್, ಡಾ. ಅಂಬೇಡ್ಕರ್ ಸರ್ಕಲ್, ಹಾರ್ಟಿಕಲ್ಚರ್ ಜಂಕ್ಷನ್, ಬಲ್ಮಠ, ಹಂಪನಕಟ್ಟೆ, ಕರಾವಳಿ ಸರ್ಕಲ್, ಕಂಕನಾಡಿ, ಪಂಪ್ವೆಲ್, ತೊಕ್ಕೊಟ್ಟು.
Posted by Vidyamaana on 2024-03-23 06:09:56 |
ತುಮಕೂರು, ಮಾ.22: ಸಾವು ಯಾವ ರೂಪದಲ್ಲಿ ಬರುತ್ತದೆಯೋ ಹೇಳಲು ಅಸಾಧ್ಯ. ಅದರಂತೆ ತುಮಕೂರು(Tumakuru) ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಯಮನ ರೂಪದಲ್ಲಿ ಬಂದ ಕೇಬಲ್ ವೈರ್ , ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟೆ ಮೂಲದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ವೊಬ್ಬರನ್ನ ಬಲಿ ಪಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36), ಮೃತ ದುರ್ದೈವಿ.ಘಟನೆ ವಿವರ
ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಇಂದು ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಬೈಕ್ ಸವಾರ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಣ್ಮಣ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಲಕ್ಷ್ಮೀ ಬಾಯಿ ಅವರ ಮೃತದೇಹವನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
Posted by Vidyamaana on 2023-08-15 14:44:58 |
ಪುತ್ತೂರು; ಕುಂಬ್ರ ಬದ್ರಿಯಾ ನಗರ ಬದ್ರಿಯಾ ಜುಮಾ ಮಸ್ಜಿದ್ ಹಾಗೂ ಮದ್ರಸ ವಠಾರದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಮಾತ್ ಅಧ್ಯಕ್ಷ ಉಸ್ಮಾನ್ ಮುಸ್ಲಿಯಾರ್ ದ್ವಜಾರೀಹಣಗೈದರು.ಖತೀಬರಾದ ಇಸ್ಮಾಯಿಲ್ ಸ ಅದಿ ದುವಾ ನೆರವೇರಿಸಿದರು.ಜಮಾತ್ ಕಾರ್ಯದರ್ಶಿ ಅದ್ರಾಮ ಕೊಯಿಲ, ಕೋಶಾಧಿಕಾರಿ ಇಸ್ಮಾಯಿಲ್ ಬದ್ರಿಯಾನಗರ, ಜಮಾತ್ ಮಾಜಿ ಕಾರ್ಯದರ್ಶಿ ಇಸ್ಮಾಯಿಲ್ ಕೋಳಿಗದ್ದೆ, ಫಾರೂಕ್ ಮಗಿರೆ, ಆದು ಕೊಯಿಲ, ಸಿಎಂಅಬ್ದುಲ್ ರಹಿಮಾನ್, ರಝಾಕ್ ಆಟೋ ಸಾಂತಿಯಡಿ,ಸಿರಾಜ್ ಬದ್ರಿಯಾನಗರ ,ಸಾದಿಕ್ ಮಗಿರೆ ಮತ್ತಿತರರು ಉಪಸ್ಥಿತರಿದ್ದರು. ಉಸ್ತಾದ್ ಖಲೀಲ್ ಸ ಅದಿ ಸ್ವಾಗತಿಸಿ, ಮುಅಲ್ಲಿಂ ವಂದಿಸಿದರು.