ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಸುದ್ದಿಗಳು News

Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ

ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

 Share: | | | | |


ಗುರು-ಶಿಷ್ಯರ ಸಮಾಗಮ; ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಭೇಟಿ

Posted by Vidyamaana on 2023-10-09 07:21:55 |

Share: | | | | |


ಗುರು-ಶಿಷ್ಯರ ಸಮಾಗಮ; ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು : ಬಿಜೆಪಿ- ಜೆಡಿಎಸ್​ ಮೈತ್ರಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿರೀಕ್ಷಿತವಾಗಿ ಭೇಟಿಯಾದರು.ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ , ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು.ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.‌ ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು. ಕೆಲ ಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು.

70 ನೂತನ ಶಾಸಕರಿಗೆ ನೆಲಮಂಗಲದ ಕ್ಷೇಮವನದಲ್ಲಿ ತರಬೇತಿ

Posted by Vidyamaana on 2023-06-27 05:38:42 |

Share: | | | | |


70 ನೂತನ ಶಾಸಕರಿಗೆ ನೆಲಮಂಗಲದ ಕ್ಷೇಮವನದಲ್ಲಿ ತರಬೇತಿ

ಬೆಂಗಳೂರು: ಇದೇ ಮೊದಲ ಬಾರಿಗೆ ಆಯ್ಕೆಗೊಂಡ 70 ಶಾಸಕರಿಗೆ ಸಂಸದೀಯ ಕಲಾಪದ ಬಗ್ಗೆ ಅರಿವು ಮೂಡಿಸಲು ನೆಲಮಂಗಲದ ಧರ್ಮಸ್ಥಳ ಕ್ಷೇಮವನದಲ್ಲಿ ಜೂ.26ರಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರ ಆರಂಭಗೊಂಡಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗಿಯಾದರು.

ಸದನದಲ್ಲಿ ಸದಾ ಹಾಜರಿ, ಪೂರ್ವತಯಾರಿ, ಭಾಷೆ ಮೇಲೆ ಹಿಡಿತ, ಜನಪರ ವಿಷಯದ ಮಂಡನೆ, ವಿಷಯ ತಜ್ಞರ ಜತೆ ಚರ್ಚೆ, ಅಧ್ಯಯನಶೀಲತೆ, ಜನರ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕ ಕಾಳಜಿ, ಜನರ ಬಗ್ಗೆ ಗೌರವ, ಸಂವಿಧಾನದ 51ನೇ ವಿಧಿವರೆಗಿನ ಅರಿವು, ಸದನದ ನಿಯಮಗಳ ಮಾಹಿತಿ ಮತ್ತು ಸಂವಿಧಾನಕ್ಕೆ ಬದ್ಧತೆ ಮುಂತಾದ ಅಂಶಗಳನ್ನು ರೂಡಿಸಿಕೊಂಡು ಉತ್ತಮ ಸಂಸದೀಯ ಪಟುಗಳಾಗಿ ಬೆಳೆಯಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಯಯ್ಯ ಅವರು ಹೊಸದಾಗಿ ಆಯ್ಕೆಯಾಗಿರುವ ಶಾಸಕರಿಗೆ ಕಿವಿ ಮಾತು ಹೇಳಿದರು.

ನೆಲಮಂಗಲದ ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ ಆ್ಯಂಡ್‌ ಯೋಗಿಕ್‌ ಸೈನ್ಸಸ್‌ ಕ್ಷೇಮವನದಲ್ಲಿ ಆಯೋಜಿಸಲಾಗಿರುವ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಸದನ ನಡೆಸುವ ನಿಯಮಾವಳಿಗಳನ್ನು ಓದಬೇಕು. ಇಲ್ಲವಾದರೆ ಏನು ಪ್ರಶ್ನೆ ಕೇಳಬೇಕು, ಯಾವ ನಿಯಮದಡಿ ಏನು ಮಾಡಬೇಕು ಎಂದು ಗೊತ್ತಾಗುವುದಿಲ್ಲ. ನಾವು ಏನೇ ಕಾನೂನು, ತಿದ್ದುಪಡಿ ಮಾಡಿದರೂ ಅದು ಸಂವಿಧಾನದ ಆಶಯಕ್ಕೆ ಬದ್ಧವಾಗಿರಲೇಬೇಕು. ಆದ್ದರಿಂದ ಸಂವಿಧಾನದ ಅರಿವು ಇರಬೇಕು. ಜನರಿಗೆ ಪೂರಕವಾದ ಕಾನೂನು ರೂಪಿಸುವ ಸಿದ್ಧತೆ ಮತ್ತು ಬದ್ಧತೆ ಹೊಂದಿರಬೇಕು. ಬಜೆಟ್‌ ಅನ್ನು ಅರ್ಥಮಾಡಿಕೊಳ್ಳುವ ಶಕ್ತಿ ರೂಡಿಸಿಕೊಳ್ಳಿ. ಗ್ರಂಥಾಲಯ ಬಳಸಿಕೊಳ್ಳಿ. ಕಲಾಪ ನಡೆಯುವ ದಿನಗಳಲ್ಲಿ ಬೇರೆ ಯಾವುದೇ ಕಾರ್ಯಕ್ರಮ, ಭೇಟಿಗಳನ್ನು ಇಟ್ಟುಕೊಳ್ಳಬೇಡಿ. ಕೋರ್ಟ್‌ ನಿಮ್ಮನ್ನು ಪ್ರಶ್ನೆ ಮಾಡದಿರಬಹುದು. ಆದರೆ ಜನತಾ ಕೋರ್ಟ್‌ ಪ್ರಶ್ನೆ ಮಾಡುತ್ತದೆ ಎಂದರು.

ಮತದಾರ ಕೈಬಿಡಲ್ಲ

ಜನರ ಧ್ವನಿಯಾಗಿ ಕೆಲಸ ಮಾಡಿದರೆ ಮಾತ್ರ ರಾಜಕಾರಣದಲ್ಲಿ ಉಳಿದು ಮುಂದಿನ ಚುನಾವಣೆಯನ್ನು ಗೆಲ್ಲಲು ಸಾಧ್ಯ. ಜನಪರ ಕಾಳಜಿ ಇಲ್ಲದವರು ಒಂದು ಚುನಾವಣೆ ಮಾತ್ರ ಗೆಲ್ಲಬಹುದು. ಬೆವರಿನ ಶ್ರಮ, ಸಂಸ್ಕೃತಿಗೆ ಅಸಹ್ಯ ಪಡದವರನ್ನು, ಜನರ ಜತೆ ಬೆರೆತು ಗೌರವ ವಿಶ್ವಾಸದಿಂದ ನಡೆದುಕೊಳ್ಳುವವರನ್ನು, ಜನಸೇವೆಗಾಗಿ ರಾಜಕಾರಣ ಮಾಡುವವರನ್ನು ಮತದಾರರು ಕೈ ಬಿಡುವುದಿಲ್ಲ ಎಂದು ಹೇಳಿದರು.ಸದನದಲ್ಲಿ ಇರಬೇಕು

ಬಹಳ ಜನ ಒಮ್ಮೆಯಾದರೂ ವಿಧಾನಸಭೆ ಮೆಟ್ಟಿಲು ಹತ್ತಬೇಕೆಂದು ಬಯಸುತ್ತಾರೆ. ಮೆಟ್ಟಿಲು ಹತ್ತಿದ ಬಳಿಕ ಸದನದ ಒಳಗಡೆ ಬರಲ್ಲ. ಈ ಧೋರಣೆಯನ್ನು ಬಿಡಬೇಕು. ಶಾಸಕರು ಎಲ್ಲ ಸಮಯದಲ್ಲೂ ವಿಧಾನಸಭೆಯಲ್ಲಿ ಇರಬೇಕು. ಬಹಳ ಜನ ಮಂತ್ರಿಗಳೇ ವಿಧಾನಸಭೆಗೆ ಬರುವುದಿಲ್ಲ. ವಿಧಾನಸಭೆಗೆ ಬರುವುದರಿಂದ ಹಿರಿಯರು ಏನು ಮಾತನಾಡುತ್ತಾರೆ, ಸಂಸದೀಯ ಮಾತುಗಳು ಏನು ಎಂಬುದು ಅರ್ಥ ಆಗುತ್ತದೆ ಎಂದು ಸಲಹೆ ನೀಡಿದರು.ವರ್ಗಾವಣೆ ಕಡತ ಇಟ್ಟುಕೊಂಡು ಕಾರ್ಯದರ್ಶಿ ಬಳಿ ಹೋಗಬೇಡಿ

ಕಾನೂನು ಮತ್ತು ಸಂಸದೀಯ ಸಚಿವ ಎಚ್‌. ಕೆ. ಪಾಟೀಲ್‌ ಮಾತನಾಡಿ, ಶಾಸಕರು ಗೌರವಯುತ ಮತ್ತು ಗಂಭೀರ ನಡವಳಿಕೆ ರೂಡಿಸಿಕೊಂಡಾಗ ಜನರು ಮತ್ತು ಅಧಿಕಾರಿಗಳು ಗೌರವಿಸುತ್ತಾರೆ. ಸದನ ಎಂಬುದು ಸಂತೆಯಲ್ಲ ಎಂಬುದನ್ನು ಅರಿತು ಗೌರವಯುತವಾಗಿ ವರ್ತಿಸಿ. ನೀವು ವರ್ಗಾವಣೆ ಕಡತ ಹಿಡಿದುಕೊಂಡು ಕಾರ್ಯದರ್ಶಿ ಹತ್ತಿರ ಹೋದರೆ ನಿಮ್ಮ ಗಂಭೀರತೆ ಕಡಿಮೆ ಆಗುತ್ತದೆ ಎಂದು ಕಿವಿಮಾತು ಹೇಳಿದರು. ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮಾತನಾಡಿದರು.

ವಾಟಾಳ್‌ ನಾಗರಾಜ್‌ ಮಾದರಿ ಶಾಸಕ

ವಾಟಾಳ್‌ ನಾಗರಾಜ್‌ ಅವರು ಮಾದರಿ ಶಾಸಕರಾಗಿದ್ದರು. ಅಧಿವೇಶನದ ಬೆಲ್‌ ಆಗುತ್ತಿದ್ದಂತೆ ಸದನದ ಒಳಗೆ ಬಂದು ಕೂರುತ್ತಿದ್ದರು. ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದರು. ಅವರು ಕಲಾಪದ ಒಂದು ಕ್ಷಣವನ್ನೂತಪ್ಪಿಸಿಕೊಂಡಿರಲಾರರು. ನಾನು ಆ ತರಹದ ವ್ಯಕ್ತಿಯನ್ನು ಈವರೆಗೂ ನೋಡಿಲ್ಲ. ನಾನಾದರೂ ಈವರೆಗೆ ನಾಲ್ಕೈದು ದಿನ ಗೈರು ಹಾಜರಾಗಿರಬಹುದು. ನಾನು 1994ರಲ್ಲಿ ಹಣಕಾಸು ಸಚಿವನಾಗಿದ್ದಾಗ ಆಗ ಶಾಸಕರಾಗಿದ್ದ ಜಯಪ್ರಕಾಶ್‌ ಹೆಗ್ಡೆ, ಮಾಧುಸ್ವಾಮಿ, ಶ್ರೀರಾಮ ರೆಡ್ಡಿ, ರಾಜೇಂದ್ರ ಅವರು ಏನು ಪ್ರಶ್ನೆ ಕೇಳುತ್ತಾರೋ ಎಂಬ ಆತಂಕದಿಂದ ಅಧಿವೇಶನದ ಒಂದು ಕ್ಷಣವನ್ನು ತಪ್ಪಿಸಿಕೊಳ್ಳುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು.


ಪಕ್ಷಾಂತರ ನಿಷೇಧವಾಗಬೇಕು

ನಾನು ರಾಜಕಾರಣ ಆರಂಭಿಸಿದಾಗ ಹಣದ ಪ್ರಭಾವ ಕಡಿಮೆ ಇತ್ತು. ನಾನು 1983ರಲ್ಲಿ ಮೊದಲ ಚುನಾವಣೆ ಗೆದ್ದಾಗ 63 ಸಾವಿರ ರೂ. ಖರ್ಚು ಮಾಡಿದ್ದೆ. ಆಗ ಎರಡೇ ಕಾರು ಬಳಸಿದ್ದೆ. ಆದರೆ ಈಗ ಚುನಾವಣೆ ದುಬಾರಿ ಆಗಿದೆ. ಹಾಗೆಯೇ ಆಗ ಜಾತಿ ಇಷ್ಟೊಂದು ಪ್ರಬಲವಾಗಿರಲಿಲ್ಲ. ಊರಿನ ಮುಖ್ಯಸ್ಥರು ತೀರ್ಮಾನಿಸಿದವರಿಗೆ ಜನ ಮತ ಹಾಕುತ್ತಿದ್ದರು. ಆದರೆ ಈಗ ಯುವಕರು, ಮಹಿಳೆಯರು ತಮಗಿಷ್ಟದಂತೆ ಮತ ಹಾಕುತ್ತಿದ್ದಾರೆ. ಪಕ್ಷಾಂತರ, ಆಪರೇಷನ್‌ ಕಮಲ, ಆಪರೇಷನ್‌ ಹಸ್ತ, ಆಪರೇಷನ್‌ ಜೆಡಿಎಸ್‌ ಹೆಚ್ಚಾಗಿದೆ. ಪಕ್ಷಾಂತರವನ್ನು ನಿರ್ಬಂಧಿಸುವಂತೆ ಸಂವಿಧಾನ ತಿದ್ದುಪಡಿ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.


ಬಜೆಟ್‌ ಎಂದರೆ ಕಾಯಕ ದಾಸೋಹ

ಶಾಸಕರು, ಸಂಸದರು ಬಜೆಟ್‌ ಅಂದರೆ ಏನೆಂದು ಅರ್ಥ ಮಾಡಿಕೊಳ್ಳಬೇಕು. 12ನೇ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರು ಬಜೆಟ್‌ ಬಗ್ಗೆ ಹೇಳಿ¨ªಾರೆ. ಕಾಯಕ ಮತ್ತು ದಾಸೋಹ ಬಜೆಟ್‌ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ. ಬಜೆಟ್‌ ಅಂದರೆ ಇಷ್ಟೆ, ಎಲ್ಲಿಂದ ಉತ್ಪಾದನೆ ಬರುತ್ತದೆ ಅದನ್ನು ಸಮಾಜದ ಯಾರಿಗೆ ಹಂಚುತ್ತೇವೆ ಎನ್ನುವುದೇ ಬಜೆಟ್‌ನ ಮೌಲ್ಯ. ಶ್ರೀಮಂತರಿಗೆ ತೆರಿಗೆ ಹಾಕಬೇಕೇ ಹೋರತು ಬಡವರಿಗಲ್ಲ ಎಂದು ವಿವರಿಸಿದರು.



ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯು ವಿಶ್ವ ಶಾಂತಿ ನೆಮ್ಮದಿಯನ್ನು ಎಲ್ಲೆಡೆ ಕರುಣಿಸಲಿ: ಶಾಸಕ ಅಶೋಕ್ ರೈಯವರಿಂದ ವಿಶೇಷ ಪ್ರಾರ್ಥನೆ

Posted by Vidyamaana on 2024-01-22 13:34:20 |

Share: | | | | |


ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯು ವಿಶ್ವ ಶಾಂತಿ ನೆಮ್ಮದಿಯನ್ನು ಎಲ್ಲೆಡೆ ಕರುಣಿಸಲಿ: ಶಾಸಕ ಅಶೋಕ್ ರೈಯವರಿಂದ ವಿಶೇಷ ಪ್ರಾರ್ಥನೆ

ಉಪ್ಪಿನಂಗಡಿ : ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕೋಡಿಂಬಾಡಿ ಗ್ರಾಮಸ್ಥರ ಹಾಗೂ ಪುತ್ತೂರಿನ ಸಮಸ್ತ ನಾಗರಿಕರ ಪರವಾಗಿ ತನ್ನ ಸ್ವ ಗ್ರಾಮ ಕೋಡಿಂಬಾಡಿ ಮಠಂತಬೆಟ್ಟು‌ಶ್ರೀ ಮಹಿಷ‌ಮರ್ಧಿನಿ ದೇವಿಗೆ ಪುಷ್ಪ ವನ್ನು ಸಮರ್ಪಿಸುತ್ತಾ ರಾಜ್ಯ ,ದೇಶ ಮತ್ತು ವಿಶ್ವಕ್ಕೆ ಸನ್ಮಂಗಳವನ್ನು ಉಂಟು ಮಾಡಲಿ ಎಂದು ಪ್ರಾರ್ತಿಸಿದರು. ಈ ದೇಶದಲ್ಲಿ ಎಲ್ಲಾ ಧರ್ಮಿಯರು ಪರಸ್ಪರ ಸಹೋದರತೆಯಿಂದ ಬಾಳ್ವೆ ನಡೆಸುವ ಮೂಲಕ ದೇಶ ,ಜಗತ್ತಿನಲ್ಲಿ‌ ಶಾಂತಿ ನೆಲಸುವಂತಾಗಲಿ‌ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರಾದ ನಿರಂಜನ್ ರೈ ರೈ ಮಠಂತಬೆಟ್ಡು, ಮುರಳೀಧರ್ ರೈ ಮಠಂತಬೆಟ್ಟು, ಯೋಗೀಶ್ ಸಾಮಾನಿ, ನಿಹಾಲ್ ಶೆಟ್ಟಿ ಕಲ್ಲಾರೆ ,ದೇವಸ್ಥಾನದ ವ್ಯವಸ್ಥಾಪಕರಾದ ಸಂತೋಷ್ ರೈ ,ವಾರಿಸೇನ ಜೈನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಶಾಸಕರ ಇಂದಿನ ಕಾರ್ಯಕ್ರಮ ಆ 7

Posted by Vidyamaana on 2023-08-06 23:16:09 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 7

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 7 ರಂದು

ಮಧ್ಯಾಹ್ನ 2.30ಪೆರುವಾಯಿಯಲ್ಲಿ ಕಾರ್ಯಕರ್ತರ ಸಭೆ


ಸಂಜೆ 4 ಗಂಟೆಗೆ ಕೊಡಿಪ್ಪಾಡಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ

ವಿಟ್ಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Posted by Vidyamaana on 2023-07-30 02:11:27 |

Share: | | | | |


ವಿಟ್ಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನ ನೆಮ್ಮದಿಯಲ್ಲಿದ್ದಾರೆ, ಸರಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ದೊರೆಯುತ್ತಿದೆ, ಈ ಯೋಜನೆಗಳು ಜನರಿಗೆ ಪ್ರಯೋಜನವಾಗಿದ್ದು ಜನ ಸರಕರದ ಯೋಜನೆಗೆ ಬೆಂಬಲ ನೀಡುತ್ತಿದ್ದಾರೆ, ಕಾರ್ಯಕರ್ತರು ಪ್ರತೀ ಮನೆಗೆ ತೆರಳಿ ಕಾಂಗ್ರೆಸ್ ಸಾಧನೆಯನ್ನು ತಿಳಿಸಿ ಅದನ್ನು ಮತವಾಗಿ ಪರಿವರ್ತನೆ ಮಾಡಬೇಕಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜು.೨೯ ರಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರು ಈಗ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಮುಂದಿನ ತಿಂಗಳು ಪ್ರತೀ ಮನೆ ಯಜಮನಿಯ ಖಾತೆಗೆ ೨ ಸಾವಿರ ಜಮೆಯಾಗಲಿದೆ, ವಿದ್ಯುತ್ ಉಚಿತವಾಗಲಿದೆ, ೫ ಕೆ ಜಿ ಅಕ್ಕಿ ಮತ್ತು ೫ ಕೆ ಜಿ ಅಕ್ಕಿಯ ಹಣ ಖಾತೆಗೆ ಜಮಾವಣೆಯಗಿದೆ. ಉಚಿತವಾಗಿ ಸರಕಾರಿ ಬಸ್ಸುಗಳಲ್ಲಿ ಮಹಿಳೆಯರು ಸಂಚಾರ ಮಾಡುತ್ತಿದ್ದಾರೆ ಇದೆಲ್ಲವೂ ಕಾಂಗ್ರೆಸ್ ಬಡವರಿಗಾಗಿ ಮಾಡಿದ ಯೋಜನೆಗಳಾಗಿದೆ ಎಂದು ಶಾಸಕರು ಹೇಳಿದರು. ಸರಕಾರ ಒಳ್ಳೆಯ ಯೋಜನೆಗಳನ್ನು ಇನ್ನೂ ಜಾರಿ ಮಾಡಲಿದ್ದು ಪ್ರತೀಯೊಬ್ಬ ಕಾರ್ಯಕರ್ತನೂ ಪಕ್ಷ ಕಟ್ಟುವಲ್ಲಿ ಮುತವರ್ಜಿವಹಿಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.


ನಾನು ಯಾಕೆ ಕಾರ್ಯಕ್ರಮಕ್ಕೆ ತಡವಾಗಿ ಬರುತ್ತೇನೆ ಗೊತ್ತುಂಟಾ?

ಶಾಸಕರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಗಳಿಗೆ ಬರುತ್ತಿಲ್ಲ, ಒಂದು ಗಂಟೆ ಎರಡು ಗಂಟೆ ತಡವಾಗಿ ಬರುತ್ತಿದ್ದಾರೆ ಎಂದು ಕಾರ್ಯಕರ್ತರು ಶಾಸಕರಲ್ಲಿ ಹೇಳಿದರು. ಇದಕ್ಕೆ ಉತ್ತರಿಸಿದ ಶಾಸಕರು ನಾನು ಕಾರ್ಯಕ್ರಮಕ್ಕೆ ತಡವಾಗಿ ಬರುವುದು ಸತ್ಯ ಯಾಕೆಂಧರೆ ನಾನು ಒಂದು ಕಾರ್ಯಕ್ರಮಕ್ಕೆ ಹೋದಾಗ ಕಾರ್ಯಕ್ರಮ ಮುಗಿಸಿ ಹೊರಡುವ ವೇಳೆ ಒಂದಷ್ಟು ಮಂದಿ ನನ್ನ ಕ್ಷೇತ್ರದ ಮತದಾರರು ಅರ್ಜಿ ಹಿಡಿದುಕೊಂಡು ಅಥವಾ ತಮ್ಮ ಸಂಕಷ್ಟವನ್ನು ಹೇಳಲು ಕಾಯುತ್ತಿರುತ್ತಾರೆ ಅವರನ್ನು ಬಿಟ್ಟು ಬರುವುದು ಹೇಗೆ? ನನಗೆ ಜನ ಮತ ಹಾಕಿದ್ದು ಅವರ ಸಂಕಷ್ಟಗಳಿಗೆ, ನೋವುಗಳಿಗೆ ಸ್ಪಂದಿಸಲು, ನಾನು ಅವರ ನೋವಿಗೆ ಸ್ಪಂದಿಸದೇ ಇದ್ದರೆ ಅದು ನಾನು ಮಾಡುವ ದೊಡ್ಡ ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು. ತನ್ನ ಕ್ಷೇತ್ರದ ಯಾವುದೇ ಒಬ್ಬ ವ್ಯಕ್ತಿ ನನ್ನನ್ನು ಹುಡುಕಿಕೊಂಡು ಸಂಕಷ್ಟ ಹೇಳಲು ಬಂದಲ್ಲಿ ನಾನು ಅವರಿಗೆ ಸಮಾಧಾನ ಹೇಳಿಯೇ ಬರುತ್ತೇನೆ ಅದು ನನ್ನ ಕರ್ತವ್ಯವಾಗಿದೆ. ತಡವಾಗಿ ಬಂದರೆ ಕ್ಷಮೆ ಇರಲಿ ನಾನು ಜನರಿಗೋಸ್ಕರ ಇರುವವನಾಗಿದ್ದೇನೆ, ಅವರಿಗೋಸ್ಕರ ಕೆಲಸವನ್ನು ಮಾಡುತ್ತೇನೆ ಎಂದು ಶಾಸಕರು ಹೇಳಿದರು.


ಕಚೇರಿ ಆದ ಮೇಲೆ ಎಲ್ಲಾ ಸಮಸ್ಯೆ ಇತ್ಯರ್ಥ

ಶಾಸಕರ ನೂತನ ಕಚೇರಿ ಕೆಲಸ ಪ್ರಾರಂಭವಾಗಿದ್ದು ಕಚೇರಿ ಆದ ಮೇಲೆ ಎಲ್ಲವೂ ಪರಿಹಾರವಾಗಲಿದೆ. ಕಚೇರಿ ಆರಂಭವಾದ ಬಳಿಕ ವಿವಿಧ ಸೆಕ್ಷನ್‌ಗಳನ್ನು ತೆರೆಯುತ್ತೇನೆ. ಫಲಾನುಭವಿಗಳು ಕಚೇರಿಗೆ ತೆರಳಿ ಅಲ್ಲಿ ಅರ್ಜಿ ನೀಡಬಹುದಾಗಿದ್ದು ನಿಮ್ಮ ಕೆಲವೊಂದು ಸಮಸ್ಯೆಗಳಿಗೆ ಕಚೇರಿಯಲ್ಲೇ ಪರಿಹಾರವೂ ದೊರೆಯಲಿದೆ ಎಂದು ಶಾಸಕರು ಹೇಳಿದರು. ಕಾಮಗಾರಿಗೆ ಸಂಬಂಧಪಟ್ಟ ಅರ್ಜಿಗಳನ್ನು ವಲಯ ಮತ್ತು ಬೂತ್ ಅಧ್ಯಕ್ಷರ ಮೂಲಕ ನನ್ನಲ್ಲಿ ನೀಡಬಹುದಾಗಿದೆ ಎಂದು ಹೇಳಿದರು.

ವಲಯ, ಬೂತ್ ಅಧ್ಯಕ್ಷರೇ ಮುಖ್ಯ

ಪ್ರತೀ ಗ್ರಾಮಮಟ್ಟದಲ್ಲಿ ವಲಯ ಮತ್ತು ಬೂತ್ ಅಧ್ಯಕ್ಷರಿದ್ದಾರೆ. ಕಟ್ಟಕಡೇಯ ಕಾರ್ಯಕರ್ತರ ಸಂಪರ್ಕ ಇರುವುದು ಅವರಿಗೆ ಯಾವುದೇ ಅರ್ಜಿಗಳನ್ನು ನೀಡುವಾಗ ವಲಯ ಮತ್ತು ಬೂತ್ ಅಧ್ಯಕ್ಷರನ್ನು ಸಂಪರ್ಕಿಸಿಯೇ ಬರಬೇಕು. ನೀವು ಅರ್ಜಿ ನೀಡಿ ಹೋದರೆ ಅದನ್ನು ಗ್ರಾಮದ ಅಧ್ಯಕ್ಷರುಗಳಿಗೆ ಮಾಹಿತಿ ನೀಡಲಾಗುತ್ತದೆ. ವಲಯ , ಬೂತ್ ಮತ್ತು ಕಾರ್ಯಕರ್ತರನ್ನು ಕಡೆಗಣಿಸಿ ಯಾವುದೇ ಕೆಲಸ ಕಾರ್ಯಗಳು ನಡೆಯವುದೇ ಇಲ್ಲ ಎಂದು ಶಾಸಕರು ಹೇಳಿದರು.

ಎರಡೇ ತಿಂಗಳಲ್ಲಿ ೯೬೦ ಕೋಟಿ ತಂದಿದ್ದೇನೆ

ಶಾಸಕನಾಗಿ ಎರಡೇ ತಿಂಗಳಲ್ಲಿ ೯೬೦ ಕೋಟಿ ತಂದಿದ್ದೇನೆ. ಕ್ಷೇತ್ರ ವ್ಯಾಪ್ತಿಯಲ್ಲಿ ೨೪ ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಯೋಜನೆಗೆ ಸರಕಾರದಿಂದ ೯೬೦ ಕೋಟಿ ಮಂಜೂರು ಮಾಡಿಸಿದ್ದು ಟೆಂಡರ್ ಕರೆದ ಬಳಿಕ ಕಾಮಗಾರಿ ಆರಂಭವಾಗಲಿದೆ. ಪುತ್ತೂರು ತಾಲೂಕು ಮತ್ತು ಸುಳ್ಯದ ೩೦ ಗ್ರಾಮಗಳನ್ನು ಈ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಶಾಸಕರು ಹೇಳಿದರು.


೧೪ ದಿನದ ಅಧಿವೇಶನದಲ್ಲಿ ೧೧ ಪ್ರಶ್ನೆ ಹಾಕಿದ್ದೇನೆ

ಶಾಸಕನಗಿ ಚೊಚ್ಚಲ ಅಧಿವೆಶನದಲ್ಲಿ ಭಾಗವಹಿಸಿದ್ದೇನೆ. ೧೪ ದಿನಗಳ ಅಧಿವೇಶನದಲ್ಲಿ ೧೧ ಪ್ರಶ್ನೆಗಳನ್ನು ಕೇಳಿದ್ದೇನೆ. ಕರಾವಳಿಯ ಕೃಷಿಕರಿಗೆ, ಬಡವರಿಗೆ, ನಿರುದ್ಯೋಗಿಗಳಿಗೆ, ತುಳುಭಾಷೆಗೆ, ತುಳಿತಕ್ಕೊಳಗಾದವರ ಪರ ಮಾತನಾಡಿದ್ದೇನೆ. ಮುಂದೆಯೂ ಮತನಾಡುತ್ತೇನೆ. ತನ್ನ ಕ್ಷೇತ್ರದ ಜನರಿಗಾಗಿ ತಾನು ಸರಕಾರದ ಜೊತೆ ಗಲಾಟೆ ಮಾಡಿಯಾದರೂ ಅನುದಾನವನ್ನು ತರುತ್ತೇನೆ, ಕೊಟ್ಟ ಮಾತನ್ನು ಉಳಿಸಿಯೇ ಉಳಿಸುತ್ತೇನೆ.



ಮಲಗಿದ್ದಲ್ಲೇ ಇರುವವರಿಗೆ ಮಸಾಶನ ಕೊಡಿಸುವೆ

ಮರದಿಂದ ಬಿದ್ದು, ಪಾರ್ಶ್ವವಾಯು ಪೀಡಿತರಾಗಿ, ಅಪಘಾತದಿಂದ ಅಥವ ಇನ್ನಾವುದಾದರೂ ಕಾಯಿಲೆಯಿಂದ ಮನೆಯಲ್ಲೇ ಮಲಗಿದ ಸ್ಥಿತಿಯಲ್ಲಿ ಇರುವವರಿಗೆ ಸರಕಾರದಿಂದ ತಿಂಗಳಿಗೆ ೫ ಸಾವಿರ ಮಾಸಾಶನ ನೀಡುವಂತೆ ಮನವಿ ಮಾಡಿದ್ದೇನೆ. ಅದನ್ನು ನೀಡುವವರೆಗೂ ನಾನು ಸುಮ್ಮನಿರುವುದಿಲ್ಲ ಹೋರಾಟ ಮಾಡಿಯಾದರೂ ತಂದೇ ತರುತ್ತೇನೆ. ಬಡವರ ಕಣ್ಣೀರೊರೆಸಲು ಶಾಸಕನಾಗಿದ್ದೇನೆ ಆ ಕೆಲಸವನ್ನು ಮಾಡಿಯೇ ಮಾಡುತ್ತೇನೆ ಎಂದು ಶಾಸಕರು ಹೇಳಿದರು.


ಮಹಿಳಾ ತಂಡವನ್ನು ಕಟ್ಟಬೇಕಿದೆ

ಪಕ್ಷವನ್ನು ಕಟ್ಟಲು ಮಹಿಳೆಯರ ತಂಡವನ್ನು ಕಾರ್ಯಕರ್ತರು ಕಟ್ಟಬೇಕು. ಈಗಾಗಲೇ ಸರಕರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಪರವಾಗಿದ್ದು ಇದನ್ನು ಬಳಸಿಕೊಂಡು ಪ್ರತೀ ಬೂತ್‌ನಲ್ಲಿ ಮಹಿಳೆಯರ ತಂಡವನ್ನು ಕಟ್ಟುವ ಮೂಲಕ ಪಕ್ಷದ ಪರ ಪ್ರಚಾರವನ್ನು ನಡೆಸಬೇಕು. ಮುಂದಿನ ದಿನಗಳಲ್ಲಿ ಮಹಿಳಾ ಕಾಂಗ್ರೆಸ್ ಸಮಾವೇಶವನ್ನು ನಡೆಸಬೇಕಾಗಿದ್ದು ಇದಕ್ಕಾಗಿ ಈಗಿಂದಲೇ ಎಲ್ಲರೂ ಸಜ್ಜಾಗಬೇಕು ಎಂದು ಶಾಸಕರು ಹೇಳಿದರು.



ಅಧ್ಯಕ್ಷರುಗಳಿಗೆ ಪವರ್ ಇದೆ

ಸಣ್ಣ ವಿಚಾರಗಳನ್ನು ತನ್ನ ಬಳಿ ಹೇಳಬೇಡಿ ಅದನ್ನು ಪಕ್ಷದ ವಿವಿಧ ವಲಯಗಳ ಅಧ್ಯಕ್ಷರುಗಳೇ ಪರಿಹರಿಸಬೇಕು. ನಿಮ್ಮಿಂದ ಪರಿಹಾರ ಮಾಡಲು ಸಾಧ್ಯವಾಗುವ ಜನರ ಸಮಸ್ಯೆಗಳನ್ನು ನೀವೇ ಪರಿಹಾರ ಮಾಡಬೇಕು ಕಾಂಗ್ರೆಸ್ ಶಾಸಕ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವ ಕಾರಣ ಅಧ್ಯಕ್ಷರುಗಳಿಗೆ ಪವರ್ ಇದೆ ಅದನ್ನು ಪಕ್ಷಕ್ಕಾಗಿ , ಜನರಿಗಾಗಿ ಬಳಸಿಕೊಳ್ಳಿ. ನಿಮ್ಮಿಂದ ಸಾಧ್ಯವೇ ಇಲ್ಲವಾದರೆ ಮಾತ್ರ ನನ್ನ ಗಮನಕ್ಕೆ ತನ್ನಿ ಎಂದು ಸಭೆಯಲ್ಲಿ ಶಾಸಕರು ತಿಳಿಸಿದರು.


ಮೂರು ತಿಂಗಳ ಬಳಿಕ ಹೊಸ ಪಡಿತರ ಕಾರ್ಡು

ಹೊಸ ಪಡಿತರ ಚೀಟಿ ಸಿಗುತ್ತಿಲ್ಲ ಎಂಬ ದೂರುಗಳಿವೆ ಎಂದು ಶಾಸಕರ ಗಮನಕ್ಕೆ ತಂದಾಗ ಹೊಸ ಪಡಿತರ ಚೀಟಿಯನ್ನು ಮೂರು ತಿಂಗಳ ಬಳಿಕ ನೀಡಲಾಗುತ್ತದೆ. ಸುಮಾರು ೧ ಕೋಟಿ ಅರ್ಜಿಗಳು ಬಾಕಿ ಇದೆ. ಆರೋಗ್ಯ ಸಮಸ್ಯೆಗಳಿದ್ದವರು ಆಸ್ಪತ್ರೆಗೆ ಅಥವಾ ವಿಮೆ ಪಡೆದುಕೊಳ್ಳಲು ರೇಶನ್ ಕಾರ್ಡು ಬೇಕಾದಲ್ಲಿ ಅದನ್ನು ಸಂಬಂದಿಸಿದವರ ಗಮನಕ್ಕೆ ತಂದರೆ ತುರ್ತು ಪರಿಗಣಿಸಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಶಾಸಕರು ಹೇಳಿದರು.

ವೇದಿಕೆಯಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ, ಜಿಪಂ ಮಾಜಿ ಸದಸ್ಯ ಎಂ ಎಸ್ ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷರಾದ ಪ್ರವೀಣ್ ಚಂದ್ರ ಆಳ್ವ, ಮುರಳೀಧರ್ ರೈ ಮಠಂತಬೆಟ್ಟು, ಪಟ್ಟಣ ಪಂಚಾಯತ್ ಸದಸ್ಯ ವಿಕೆಎಂ ಅಶ್ರಫ್, ಬ್ಲಾಕ್ ಅಲ್ಪಸಂಖ್ಯತ ಘಟಕದ ಅಧ್ಯಕ್ಷರಾದ ಅಬ್ದುಲ್ ಕರೀಂ ಕುದ್ದುಪದವು, ವಿಟ್ಲ ಬ್ಲಾಕ್ ಸಂಘಟನಾ ಕಾರ್ಯದರ್ಶಿ ರಮಾನಾಥ ವಿಟ್ಲ, ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಪ್ರಹ್ಲಾದ್ ಉಪ್ಪಿನಂಗಡಿ, ಬ್ಲಾಕ್ ಉಪಾಧ್ಯಕ್ಷರಾದ ಜಯರಾಂ ಬಳ್ಳಾಲ್ ಬೀಡು, ಬ್ಲಾಕ್ ಪ್ರಧಾನ ಕಾರ್ಯದರ್ಶಿ ರಶೀದ್ ವಿ ಎಂ, ಕಾರ್ಯದರ್ಶಿ ಸುನಿತಾ ಕೋಟ್ಯಾನ್, ಬ್ಲಾಕ್ ಕಾರ್ಯದರ್ಶಿ ಅಬ್ದುಲ್‌ರಹಿಮಾನ್ ಯುನಿಕ್, ಎಸ್ ಸಿ ಘಟಕದ ಅಧ್ಯಕ್ಷ ರಾಮಣ್ಣ ಪಿಲಿಂಜ, ಮಾಜಿ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಯೂತ್ ಬ್ಲಾಕ್ ಅಧ್ಯಕ್ಷರಾದ ಫಾರೂಕ್ ಪೆರ್ನೆ ಮೊದಲಾದವರು ಉಪಸ್ಥಿತರಿದ್ದರು.


ಸುಳ್ಯ: ಬಿಜೆಪಿ ಮುಖಂಡ, ಜಿಪಂ ಮಾಜಿ ಸದಸ್ಯನ ಶವ ಹೊಳೆಯಲ್ಲಿ ಪತ್ತೆ

Posted by Vidyamaana on 2023-05-18 10:21:58 |

Share: | | | | |


ಸುಳ್ಯ: ಬಿಜೆಪಿ ಮುಖಂಡ, ಜಿಪಂ ಮಾಜಿ ಸದಸ್ಯನ ಶವ ಹೊಳೆಯಲ್ಲಿ ಪತ್ತೆ

ಸುಳ್ಯ: ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತಿಯ ಮಾಜಿ ಸದಸ್ಯ ನವೀನ್ ರೈ ಮೇನಾಲ ಅವರ ಮೃತದೇಹ ಸುಳ್ಯದ ಹೊಳೆಯಲ್ಲಿ ಪತ್ತೆಯಾಗಿದೆ.

ಪಯಸ್ವಿನಿ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ಪತ್ತೆಯಾಗಿಲ್ಲ.

Recent News


Leave a Comment: