ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಕಾಸರಗೋಡು: ಮನೆಯಲ್ಲಿ ಸಿಕ್ತು 2000 ಮುಖಬೆಲೆಯ ಬರೋಬ್ಬರಿ 7 ಕೋಟಿ ರೂ. ನಗದು; ವ್ಯಕ್ತಿ ವಶಕ್ಕೆ

Posted by Vidyamaana on 2024-03-22 11:25:12 |

Share: | | | | |


ಕಾಸರಗೋಡು: ಮನೆಯಲ್ಲಿ ಸಿಕ್ತು 2000 ಮುಖಬೆಲೆಯ ಬರೋಬ್ಬರಿ 7 ಕೋಟಿ ರೂ. ನಗದು; ವ್ಯಕ್ತಿ ವಶಕ್ಕೆ

ಕಾಸರಗೋಡು: ಜಿಲ್ಲೆಯ ಗುರಪುರದ ಅಂಬಲತ್ತರ ಎಂಬಲ್ಲಿನ ಮನೆಯೊಂದರಿಂದ 7 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಖಚಿತ ಮಾಹಿತಿ ಪಡೆದ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿದ್ದರು. 2000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಕೇಂದ್ರ ಸರ್ಕಾರ ಕಳೆದ ವರ್ಷದ ಆರಂಭದಲ್ಲಿ ಚಲಾವಣೆಯಿಂದ ಹಿಂಪಡೆದಿತ್ತು. ನೋಟುಗಳು ಪತ್ತೆಯಾಗಿರುವುದು ಗಲ್ಫ್ ಉದ್ಯೋಗಿ ಕೆಪಿ ಬಾಬು ರಾಜ್ ಅವರ ಮಾಲೀಕತ್ವದ ಮನೆಯಲ್ಲಿ ಎಂದು ಪೊಲೀಸರು ತಿಳಿಸಿದ್ದಾರೆ. ಬಾಬು ರಾಜ್ ಅವರು ಪಾಣತ್ತೂರು ನಿವಾಸಿ ಅಬ್ದುಲ್ ರಜಾಕ್ ಎಂಬುವವರಿಗೆ ಮನೆ ಬಾಡಿಗೆಗೆ ನೀಡಿದ್ದರು

ಪತ್ನಿಯ ಖಾಸಗಿ ವಿಡಿಯೋ ತೋರಿಸಿ ವೇತನ ನೀಡಲು ಪತ್ನಿಗೆ ಪೀಡಿಸಿದ ಪತಿ!

Posted by Vidyamaana on 2023-10-07 18:09:45 |

Share: | | | | |


ಪತ್ನಿಯ ಖಾಸಗಿ ವಿಡಿಯೋ ತೋರಿಸಿ ವೇತನ ನೀಡಲು ಪತ್ನಿಗೆ ಪೀಡಿಸಿದ ಪತಿ!

ಬೆಂಗಳೂರು: ತನ್ನ ಪತ್ನಿಯ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಪತಿ ಮಹಾಶಯನೊಬ್ಬ ಪತ್ನಿಯ ಬಳಿ 10 ಲಕ್ಷ ರೂ. ಮತ್ತು ವೇತನವನ್ನು ತನಗೆ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ನಡೆದಿದೆ. 28 ವರ್ಷದ ಮಹಿಳೆ ಈ ಸಂಬಂಧ ಬಸವನಗುಡಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪತಿ ಸ್ವರೂಪ್ ಎಂಬಾತನ ವಿರುದ್ಧ ದೂರು ನೀಡಿದ್ದು, ಎಫ್ ಐಆರ್ ದಾಖಲಾಗಿದೆ. ಕಳೆದ ವರ್ಷ ನವಂಬರ್ ನಲ್ಲಷ್ಟೇ ಇಬ್ಬರ ಮದುವೆಯಾಗಿತ್ತು.


ಹನಿಮೂನ್ ಗೆಂದು ಥೈಲ್ಯಾಂಡ್ ಹೋಗಿದ್ದಾಗ ಪತ್ನಿಯ ಖಾಸಗಿ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದ. ಬೆಂಗಳೂರಿಗೆ ವಾಪಸ್ ಆದ ಮೇಲೆ ಪತಿ ನಿರುದ್ಯೋಗಿಯಾಗಿರುವ ವಿಚಾರ ಪತ್ನಿಗೆ ತಿಳಿದುಬಂದಿತ್ತು. ಈ ಬಗ್ಗೆ ಪ್ರಶ್ನಿಸಿದಾಗ ಸರಿಯಾಗಿ ಉತ್ತರ ನೀಡಿರಲಿಲ್ಲ. ಬಳಿಕ ಖಾಸಗಿ ವಿಡಿಯೋ ತೋರಿಸಿ ವೇತನ ಮತ್ತು ತವರು ಮನೆಯಿಂದ 10 ಲಕ್ಷ ರೂ. ತಂದು ಕೊಡದೇ ಇದ್ದರೆ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುತ್ತಿದ್ದ. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೇರಳದಲ್ಲಿ ನಿಫಾ ಕಾಟ – ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

Posted by Vidyamaana on 2023-09-12 21:35:12 |

Share: | | | | |


ಕೇರಳದಲ್ಲಿ ನಿಫಾ ಕಾಟ – ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

 ಕೋಝಿಕ್ಕೋಡ್: ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಜ್ವರಕ್ಕೆ ಸಂಬಂಧಿಸಿದ ಎರಡು ಅಸ್ವಾಭಾವಿಕ ಸಾವುಗಳು ದಾಖಲಾದ ನಂತರ, ಕೇರಳ ಆರೋಗ್ಯ ಇಲಾಖೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಎಚ್ಚರಿಕೆ ನೀಡಿದೆ.ಎರಡು ಸಾವುಗಳು ನಿಪಾ ವೈರಸ್‌ನಿಂದ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಮೃತರೊಬ್ಬರ ಸಂಬಂಧಿಕರು ತೀವ್ರ ನಿಗಾ ಘಟಕದಲ್ಲಿ(ಐಸಿಯು) ಇದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.ಕೇರಳದಲ್ಲಿ ನಿಪಾ ಹಾವಳಿ


ಈ ನಿಟ್ಟಿನಲ್ಲಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಈ ಹಿಂದೆ 2018 ರಲ್ಲಿ ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ನಿಪಾ ಏಕಾಏಕಿ ಸಂಭವಿಸಿತ್ತು. ನಂತರ 2021 ರಲ್ಲಿ ಸಹ ಕೋಝಿಕೋಡ್ನಲ್ಲಿ ನಿಪಾ ಪ್ರಕರಣ ವರದಿಯಾಗಿತ್ತು. ದಕ್ಷಿಣ ಭಾರತದಲ್ಲಿ ಮೊದಲ ನಿಪಾ ವೈರಸ್ ಹರಡುವಿಕೆಯು ಮೇ 19, 2018 ರಂದು ಕೋಝಿಕ್ಕೋಡ್‌ನಲ್ಲಿ ವರದಿಯಾಗಿದೆ.

ವಿವಿಧ ಕಾಯಿಲೆಗಳಿಗೆ ಕಾರಣವಾಗುತ್ತೆ ನಿಪಾ

ವಿಶ್ವ ಆರೋಗ್ಯ ಸಂಸ್ಥೆ(WHO) ಪ್ರಕಾರ, ನಿಪಾ ವೈರಸ್ ಸೋಂಕು ಪ್ರಾಣಿಗಳಿಂದ ಜನರಿಗೆ ಹರಡುವ ಝೂನೋಟಿಕ್ ಕಾಯಿಲೆಯಾಗಿದೆ ಮತ್ತು ಕಲುಷಿತ ಆಹಾರದ ಮೂಲಕ ಅಥವಾ ನೇರವಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಸೋಂಕಿತ ಜನರಲ್ಲಿ, ಇದು ಲಕ್ಷಣರಹಿತ(ಸಬ್‌ಕ್ಲಿನಿಕಲ್) ಸೋಂಕಿನಿಂದ ತೀವ್ರವಾದ ಉಸಿರಾಟದ ಕಾಯಿಲೆ ಮತ್ತು ಮಾರಣಾಂತಿಕ ಎನ್ಸೆಫಾಲಿಟಿಸ್ವರೆಗೆ ಹಲವಾರು ಕಾಯಿಲೆಗಳನ್ನು ಉಂಟುಮಾಡುತ್ತದೆ.

ನಿಪಾ ವೈರಸ್ ಬಗ್ಗೆ ಮಾಹಿತಿ

ತಜ್ಞರ ಪ್ರಕಾರ ನಿಪಾ ಒಂದು ಪ್ಯಾರಾಮಿಕ್ಸೊವೈರಸ್. ಇದು ಸಾಮಾನ್ಯ ಶೀತವನ್ನು ಉಂಟುಮಾಡುವ ಬೆರಳೆಣಿಕೆಯ ವೈರಸ್‌ಗಳಲ್ಲಿ ಒಂದಾದ ಹ್ಯೂಮನ್ ಪ್ಯಾರೆನ್‌ಫ್ಲುಯೆಂಜಾ ವೈರಸ್‌ಗೆ ಸಂಬಂಧಿಸಿದೆ. ಇದರ ನೈಸರ್ಗಿಕ ಆತಿಥೇಯವೆಂದರೆ ಹಣ್ಣಿನ ಬಾವಲಿ, ದೊಡ್ಡ ಮತ್ತು ಸಣ್ಣ ಹಾರುವ ನರಿಗಳು ದಕ್ಷಿಣ ಮತ್ತು ಆಗ್ನೇಯ ಏಷ್ಯಾದಾದ್ಯಂತ ವಿತರಿಸಲ್ಪಡುತ್ತವೆ. ಇಲ್ಲಿಯವರೆಗೆ ನಿಪಾ ವೈರಸ್‌ನ ಮಾನವ ಸೋಂಕಿನ ಎಲ್ಲಾ ಪ್ರಕರಣಗಳು ಸೋಂಕಿತ ಬಾವಲಿಗಳೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕದ ಕಾರಣದಿಂದಾಗಿವೆ.ಬಾವಲಿ ಮೂತ್ರದಿಂದ ಕಲುಷಿತಗೊಂಡ ಹಣ್ಣು ಅಥವಾ ಹಣ್ಣಿನ ರಸವು ಜನರಿಗೆ ವೈರಸ್ ಹರಡುವ ಪ್ರಮುಖ ಮಾರ್ಗವಾಗಿದೆ. ಮಾನವ ಸೋಂಕಿನ ಪ್ರಕರಣಗಳಲ್ಲಿ, ಇಲ್ಲಿಯವರೆಗೆ, ಪ್ರಾಥಮಿಕ ಸೋಂಕಿತ ವ್ಯಕ್ತಿಯ ನಿಕಟ ಸಂಪರ್ಕಗಳಾದ ಕುಟುಂಬ ಸದಸ್ಯರು ಅಥವಾ ವ್ಯಕ್ತಿಯು ಆಸ್ಪತ್ರೆಗೆ ದಾಖಲಾಗಿದ್ದರೆ, ಆಸ್ಪತ್ರೆಯ ಸಿಬ್ಬಂದಿಗೆ ಮಾತ್ರ ಸೀಮಿತವಾಗಿ ಹರಡಿದೆ.


ಮುಖ್ಯವಾಗಿ ನಿಪಾ ವೈರಸ್ ಜೀವಕೋಶಗಳನ್ನು ಪ್ರವೇಶಿಸಲು ಬಳಸುವ ಪ್ರೋಟೀನ್ಗಳು, ಮೆದುಳು ಮತ್ತು ಕೇಂದ್ರ ನರ ಅಂಗಾಂಶಗಳಲ್ಲಿ ಕೇಂದ್ರೀಕೃತವಾಗಿರುತ್ತವೆ. ನಿಪಾ ಸೋಂಕು ಹೆಚ್ಚಿನ ಸಂದರ್ಭಗಳಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ನಿಂದ ಸಾವಿಗೆ ಕಾರಣವಾಗುತ್ತದೆ, ಏಕೆಂದರೆ ವೈರಸ್ ಜೀವಕೋಶಗಳಿಗೆ ಪ್ರವೇಶಿಸಲು ಸುಲಭವಾದ ಅಂಗಾಂಶಗಳಲ್ಲಿ ವೈರಸ್ ಉತ್ತಮವಾಗಿ ಪುನರಾವರ್ತಿಸುತ್ತದೆ.

ನವೆಂಬರ್ 25– 26ರಂದು ಬೆಂಗಳೂರು ಕಂಬಳ: 125ಕ್ಕೂ ಅಧಿಕ ಜೋಡಿ ಕೋಣಗಳು ಭಾಗಿ:ಅಶೋಕ್ ಕುಮಾರ್ ರೈ

Posted by Vidyamaana on 2023-10-01 07:48:11 |

Share: | | | | |


ನವೆಂಬರ್ 25– 26ರಂದು ಬೆಂಗಳೂರು ಕಂಬಳ: 125ಕ್ಕೂ ಅಧಿಕ ಜೋಡಿ ಕೋಣಗಳು ಭಾಗಿ:ಅಶೋಕ್ ಕುಮಾರ್ ರೈ

ಮಂಗಳೂರು: ‘ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂಬರುವ ನ.25 ಮತ್ತು 26ರಂದು ನಡೆಯಲಿರುವ ಕಂಬಳದಲ್ಲಿ 125 ಜೋಡಿಯಿಂದ 130 ಜೋಡಿ ಕೋಣಗಳು ಭಾಗವಹಿಸಲಿವೆ. ಈ ಕೋಣಗಳನ್ನು ನ. 23ರಂದು ಇಲ್ಲಿಂದ ಬೆಂಗಳೂರಿಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ’ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ ಕುಮಾರ್‌ ರೈ ತಿಳಿಸಿದರು.


ಬೆಂಗಳೂರು ಕಂಬಳಕ್ಕೆ ಕೋಣಗಳನ್ನು ಕೊಂಡೊಯ್ಯುವ ಕುರಿತು ಅವುಗಳನ್ನು ಸಾಕುವ ಯಜಮಾನರ ಜೊತೆ ಇಲ್ಲಿ ಶನಿವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.ಕಂಬಳ ಕೋಣಗಳನ್ನು ಸಾಕುವ 130 ಯಜಮಾನರು ಬೆಂಗಳೂರು ಕಂಬಳದಲ್ಲಿ ಭಾಗವಹಿಸಲು ಸಮ್ಮತಿಸಿದ್ದಾರೆ. ಕೋಣಗಳನ್ನು ಲಾರಿಗಳಲ್ಲಿ ಕೊಂಡೊಯ್ಯಲಾಗುತ್ತದೆ. ಪಶು ಆಂಬುಲೆನ್ಸ್‌ಗಳು ಹಾಗೂ ಪಶುವೈದ್ಯರು ಜೊತೆಯಲ್ಲೇ ಇರುತ್ತಾರೆ. ಬೆಂಗಾವಲು ವಾಹನಗಳನ್ನೂ ಒದಗಿಸಲಿದ್ದೇವೆ. ಮೆರವಣಿಗೆ ಮೂಲಕ ಸಾಗುವ ಈ ಕೋಣಗಳಿಗೆ ಹಾಸನದಲ್ಲಿ ಎರಡು ಗಂಟೆ ವಿಶ್ರಾಂತಿ ಒದಗಿಸಲಾಗುತ್ತದೆ. ಅಲ್ಲಿ ತುಳುಕೂಟದವರು ಈ ಕೋಣಗಳನ್ನು ಬರಮಾಡಿಕೊಳ್ಳಲಿದ್ದಾರೆ’ ಎಂದರು.


‘ಕೋಣಗಳಿಗೆ ಕಂಬಳಕ್ಕೆ ಮುನ್ನ ಒಂದು ದಿನದ ವಿಶ್ರಾಂತಿ ಸಿಗಲಿದೆ. ಕೋಣಗಳು ಹಾಗೂ ಅವುಗಳ ಯಜಮಾನರು ಉಳಿದುಕೊಳ್ಳುವುದಕ್ಕೆ ಬೆಂಗಳೂರಿನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಕೋಣಗಳಿಗೆ ಕುಡಿಯುವ ನೀರು ಹಾಗೂ ಮೇವುಗಳನ್ನೂ ಇಲ್ಲಿಂದಲೇ ಕೊಂಡೊಯ್ಯಲಾಗುತ್ತದೆ. ಕಂಬಳಕ್ಕೂ ನಾಲ್ಕೈದು ದಿನ ಮುನ್ನವೇ ತಜ್ಞರು ಕರೆ ಯೋಗ್ಯವಾಗಿದೆಯೇ ಎಂಬುದನ್ನು ಪರಿಕ್ಷಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.


ತಾರಾ ಮೆರುಗು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬಳವನ್ನು ಉದ್ಘಾಟಿಸಲು ಒಪ್ಪಿದ್ದಾರೆ. ಬೆಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹಿತ ಅನೇಕ ಸಚಿವರು, ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಬೆಂಗಳೂರು ಕಂಬಳದಲ್ಲಿ ತಾರಾ ಮೆರುಗು ಇರಲಿದೆ. ನಟಿ ಐಶ್ವರ್ಯ ರೈ ಹಾಗೂ ನಟ ರಜನಿಕಾಂತ್‌ ಅವರನ್ನು ಸಂಪರ್ಕಿಸಲಾಗಿದ್ದು, ಅವರೂ ಭಾಗವಹಿಸುವ ನಿರೀಕ್ಷೆ ಇದೆ.ಬಾಲಿವುಡ್‌ ಹಾಗೂ ಸ್ಯಾಂಡರ್‌ವುಡ್‌ನ ಖ್ಯಾತ ತಾರೆಯರು ಭಾಗವಹಿಸಲಿದ್ದಾರೆ. ನಟ ರಿಷಬ್‌ ಶೆಟ್ಟಿ, ಅನುಷ್ಕಾ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್‌ ಭಾಗವಹಿಸಲು ಒಪ್ಪಿದ್ದಾರೆ. ಈ ಕಂಬಳದ ನೇರ ಪ್ರಸಾರಕ್ಕೆ ಸ್ಪೋರ್ಟ್ಸ್ ಚಾನೆಲ್‌ಗಳು ಸಂಪರ್ಕಿಸಿವೆ’ ಎಂದರು.


‘ತಮ್ಮ ಹೆಸರಿನಲ್ಲಿ ಕಂಬಳ ಕೋಣ ಓಡಿಸುವಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌, ಸಚಿವ ಡಾ.ಎಂ.ಸಿ.ಸುಧಾಕರ್‌ ಕೋರಿದ್ದರೆ. ಸಾಮಾನ್ಯವಾಗಿ ಕಂಬಳ ಕೋಣಗಳ ಮಾಲೀಕರು ತಮ್ಮ ಕೋಣಗಳನ್ನು ಬೇರೆಯವರ ಹೆಸರಿನಲ್ಲಿ ಒಡಿಸುವುದನ್ನು ಇಷ್ಟಪಡುವುದಿಲ್ಲ. ಅವರು ಒಪ್ಪಿದರೆ ಅವಕಾಶ ಕಲ್ಪಿಸುತ್ತೇವೆ’ ಎಂದು ತಿಳಿಸಿದರು.


‘ಕಂಬಳವನ್ನು 7 ಲಕ್ಷದಿಂದ 9 ಲಕ್ಷ ಮಂದಿ ವೀಕ್ಷಿಸುವ ನಿರೀಕ್ಷೆ ಇದೆ. ಅದಕ್ಕೆ ಪೂರಕ ಸೌಕರ್ಯಗಳನ್ನು ಕಲ್ಪಿಸುತ್ತಿದ್ದೇವೆ. 2 ಸಾವಿರ ಅತಿಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 145 ಮೀ ಉದ್ದದ ಕಂಬಳದ ಕರೆ ನಿರ್ಮಿಸಲಾಗುತ್ತದೆ. ಸುಮಾರು 15 ಸಾವಿರ ಆಸನಗಳ ಗ್ಯಾಲರಿನಿರ್ಮಾಣವಾಗಲಿದೆ. 6 ಸಾವಿರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಕರಾವಳಿಯ ಸೊಗಡನ್ನು ಬಿಂಬಿಸುವ 150ಕ್ಕೂ ಹೆಚ್ಚು ಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಲಾಗುತ್ತದೆ. ಅವುಗಳಲ್ಲಿ ಕರಾವಳಿ ಶೈಲಿಯ ಆಹಾರಗಳು, ಇಲ್ಲಿನ ಕರಕುಶಲ ಪರಿಕರಗಳು, ಇಲ್ಲಿನ ಆಹಾರ ಸಿದ್ಧ ತಿನಿಸುಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ’ ಎಂದರು.


‘ಕಾನೂನು ಚೌಕಟ್ಟಿನಡಿಯಲ್ಲೇ ಕಂಬಳ ನಡೆಯಲಿದ್ದು, ಈ ಕುರಿತ ಸುಪ್ರೀಂ ಕೋರ್ಟ್ ಆದೇಶ ಪಾಲನೆಗೂ ಆದ್ಯತೆ ನೀಡಲಿದ್ದೇವೆ. ಈ ಕಂಬಳಕ್ಕೆ ₹ 6 ಕೋಟಿ ವೆಚ್ಚವಾಗುವ ನಿರೀಕ್ಷೆ ಇದೆ. ಸರ್ಕಾರದಿಂದಲೂ ನೆರವು ಕೋರುತ್ತೇವೆ. ಕರಾವಳಿಯ ಈ ಕ್ರೀಡೆಗೆ ಜಗದ್ವಿಖ್ಯಾತವಾಗದಬೇಕು ಎಂಬ ಆಶಯ ನಮ್ಮದು. ಬೆಂಗಳೂರಿನಲ್ಲಿ 1 ಎಕರೆ ವಿಶಾಲ ಪ್ರದೇಶದಲ್ಲಿ ತುಳುಭವನ, ಪಿಲಿಕುಳದಲ್ಲಿ ಕಂಬಳ ಭವನ ನಿರ್ಮಿಸುವ ಉದ್ದೇಶವಿದ್ದು, ಈ ಕುರಿತು ಸರ್ಕಾರಕ್ಕೆ ಬೇಡಿಕೆ ಸಲ್ಲಿಸುತ್ತೇವೆ’ ಎಂದರು.


ತುಳು ಮತ್ತು ಕನ್ನಡ ಭಾಷೆಗಳೆರಡರಲ್ಲೂ ಕಂಬಳದ ಧಾಟಿಯಲ್ಲೇ ವೀಕ್ಷಕ ವಿವರಣೆ ನೀಡಲಾಗುತ್ತದೆ. ಭಾಗವಹಿಸುವ ಎಲ್ಲ ಕೋಣಗಳಿಗೂ ಮೆಡಲ್, ಅವುಗಳನ್ನು ಓಡಿಸಿದವರಿಗೆ ಪ್ರಮಾಣಪತ್ರ ನೀಡಲಿದ್ದೇವೆ. ಮೊದಲ ಬಹುಮಾನ ಗೆದ್ದ ಕೋಣಗಳಿಗೆ ಎರಡು ಪವನ್‌ (16 ಗ್ರಾಂ) ಚಿನ್ನ, ದ್ವಿತೀಯ ಸ್ಥಾನ ಪಡೆದ ಕೋಣಗಳಿಗೆ ಒಂದು ಪವನ್ (8 ಗ್ರಾಂ) ಚಿನ್ನ ನೀಡಲಿದ್ದೇವೆ’ ಎಂದು ಮಾಹಿತಿ ನೀಡಿದರು.


ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ‘ಯಜಮಾನರು ಕೋಣಗಳನ್ನು ಬಹಳ ಜತನವಾಗಿ ಸಾಕಿರುತ್ತಾರೆ. ಹಾಗಾಗಿ ಬೆಂಗಳೂರಿಗೆ ಅವುಗಳನ್ನು ಕೊಂಡೊಯ್ಯುವಾಗ ಸಮಸ್ಯೆ ಆಗದಂತೆ ನೋಡಿಕೊಳ್ಳುವಂತೆ ಕೋರಿದ್ದಾರೆ. ಸಮಿತಿ ವ್ಯವಸ್ಥೆ ಕಲ್ಪಿಸಲಿದೆ’ ಎಂದರು.


ದ.ಕ. ಜಿಲ್ಲಾ ಕಂಬಳ ಸಮಿತಿಯ ಗೌರವಾಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ, ಪದಾಧಿಕಾರಿಗಳಾದ ಚಂದ್ರಹಾಸಸಾಧು ಸನಿಲ್, ವಿಜಯ ಕುಮಾರ್ ಜೈನ್‌, ಮುರಳೀಧರ ರೈ, ರೋಹಿತ್‌ ಹೆಗ್ಡೆ, ಲೋಕೇಶ್‌ ಶೆಟ್ಟಿ ಮುಚ್ಚೂರು ಮತ್ತಿತರರು ಇದ್ದರು.

BIG BREAKING: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

Posted by Vidyamaana on 2024-07-11 23:05:09 |

Share: | | | | |


BIG BREAKING: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಬೆಂಗಳೂರು : ಕನ್ನಡದ ಕಿರುತೆರೆಯಲ್ಲಿ ನಿರೂಪಕಿಯಾಗಿ ಜನಪ್ರಿಯವಾಗಿದ್ದಂತ ಅಪರ್ಣಾ ಅವರು ಇನ್ನಿಲ್ಲವಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅವರು ಬೆಂಗಳೂರಿನ ಬನಶಂಕರಿಯಲ್ಲಿನ ನಿವಾಸದಲ್ಲಿ ಕೊನೆಯುಸಿರು ಎಳೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಮಸಣದ ಹೂ, ಇನ್ಸ್ ಪೆಕ್ಟರ್ ವಿಕ್ರಂ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಂತ ಅಪರ್ಣಾ, ಆ ಬಳಿಕ ಕಿರುತೆರೆಯ ಧಾರವಾಹಿಗಳು, ರಿಯಾಲಿಟಿ ಶೋ ಗಳಲ್ಲಿ ನಿರೂಪಕಿಯಾಗಿ ತೊಡಗಿಸಿಕೊಂಡು, ಖ್ಯಾತಿಯನ್ನು ಪಡೆದಿದ್ದರು.

ಹಿಂದುತ್ವದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್: ನಟ ಚೇತನ್ ಅರೆಸ್ಟ್.14 ದಿನಗಳ ಕಾಲ ನ್ಯಾಯಾಂಗ ಬಂಧನ

Posted by Vidyamaana on 2023-03-21 09:33:25 |

Share: | | | | |


ಹಿಂದುತ್ವದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್: ನಟ ಚೇತನ್ ಅರೆಸ್ಟ್.14 ದಿನಗಳ ಕಾಲ ನ್ಯಾಯಾಂಗ ಬಂಧನ

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಹಿಂದುತ್ವದ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲಿಸಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ನಟ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Recent News


Leave a Comment: