ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಜು..16ರಂದೂ ಅಂಗನವಾಡಿ,ಶಾಲೆ,ಪ.ಪೂ. ಕಾಲೇಜುಗಳಿಗೆ ರಜೆ

Posted by Vidyamaana on 2024-07-15 22:06:20 |

Share: | | | | |


ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಜು..16ರಂದೂ ಅಂಗನವಾಡಿ,ಶಾಲೆ,ಪ.ಪೂ. ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ರಂದು ರೆಡ್ ಅಲರ್ಟ್ ಘೋಷಣೆ ಮತ್ತು ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ (ಜು.16)ಎಲ್ಲಾ ಶಾಲೆಗಳು,ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

BMTC ಯಲ್ಲಿ 17 ಕೋಟಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಶ್ರೀರಾಮ್ ಮುಲ್ಕವನ ಬಂಧನ

Posted by Vidyamaana on 2023-10-04 19:35:09 |

Share: | | | | |


BMTC ಯಲ್ಲಿ 17 ಕೋಟಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಶ್ರೀರಾಮ್ ಮುಲ್ಕವನ ಬಂಧನ

ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆಯ(BMTC) ಮಾಜಿ ಮುಖ್ಯ ಟ್ರಾಫಿಕ್ ಮ್ಯಾನೇಜರ್ ಒಬ್ಬರನ್ನು ಹಿರಿಯ ಅಧಿಕಾರಿಗಳ ನಕಲಿ ಸಹಿ ಮತ್ತು ಕಳೆದ ಮೂರು ವರ್ಷಗಳಲ್ಲಿ ಅನರ್ಹ ಸಂಸ್ಥೆಗಳಿಗೆ ಗುತ್ತಿಗೆ ನೀಡಿ ಬಿಎಂಟಿಸಿಗೆ 17 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟುಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.


💥 *ವಿದ್ಯಮಾನ Youtube Channel* *Subscribe ಆಗಿಲ್ವಾ..?*

ಬಂಧಿತ ಆರೋಪಿ ಶ್ರೀರಾಮ್ ಮುಲ್ಕವನ ಎನ್ನುವವರಾಗಿದ್ದು, ಆಪಾದಿತ ವಂಚನೆಗೆ ಸಂಬಂಧಿಸಿದಂತೆ ಬಿಎಂಟಿಸಿ ನಡೆಸಿದ ಆಂತರಿಕ ತನಿಖೆಯ ಸಮಯದಲ್ಲಿ ಹೆಸರು ಹೊರಬಂದ ನಂತರ ಬಿಎಂಟಿಸಿಯ ವಾಣಿಜ್ಯ ವಿಭಾಗದಲ್ಲಿ ಕೆಲಸ ಮಾಡಿದ ಶ್ರೀರಾಮ್ ಸೇರಿ ಇತರ ಆರು ಸಹೋದ್ಯೋಗಿಗಳನ್ನು ಅಮಾನತುಗೊಳಿಸಲಾಗಿತ್ತು.


ಅಸಿಸ್ಟೆಂಟ್ ಸೆಕ್ಯುರಿಟಿ ಮತ್ತು ವಿಜಿಲೆನ್ಸ್ ಅಧಿಕಾರಿ ರಮ್ಯಾ ಸಿ.ಕೆ. ಗಂಭೀರ ವಂಚನೆಯನ್ನು ಪತ್ತೆ ಹಚ್ಚಿದ ನಂತರ ಅಕ್ಟೋಬರ್ 2 ರಂದು ಅಮಾನತುಗೊಂಡ ಏಳು ಬಿಎಂಟಿಸಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ದೂರುದಾರರ ಪ್ರಕಾರ, ಆಪಾದಿತ ವಂಚನೆಯಿಂದಾಗಿ ನಿಗಮವು ಒಟ್ಟು 17 ಕೋಟಿ ರೂ.ಗೂ ಹೆಚ್ಚು ನಷ್ಟವನ್ನು ಅನುಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಎಫ್‌ಐಆರ್‌ನಲ್ಲಿ ಮಾರ್ಚ್ 2020 ರಿಂದ ಸೆಪ್ಟೆಂಬರ್ 2023 ರ ನಡುವೆ ವಂಚನೆ ನಡೆದಿದೆ ಎಂದು ಹೇಳಲಾಗಿದೆ, ಇದರಿಂದಾಗಿ ನಿಗಮವು ಎರಡು ವಿಭಿನ್ನ ಪ್ರಕರಣಗಳಲ್ಲಿ 10.5 ಕೋಟಿ ರೂ. ಮತ್ತು 6.91 ಕೋಟಿ ರೂ. ನಷ್ಟವನ್ನು ಅನುಭವಿಸಿದೆ.

ಫೆ 06:ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋಸ್ಕ್ಯಾನ್, ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆ

Posted by Vidyamaana on 2024-02-05 22:07:35 |

Share: | | | | |


ಫೆ 06:ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋಸ್ಕ್ಯಾನ್, ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆ

ಪುತ್ತೂರು:ಇಲ್ಲಿನ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ಫೆ.6 ರಂದು ಫ್ಯಾಟಿ ಲಿವರ್(ಲಿವರ್ ನ ಕೊಬ್ಬು) ಇರುವವರಿಗೆ ವಿಶೇಷ  ಫೈಬ್ರೋಸ್ಕ್ಯಾನ್ ಹಾಗೂ ಲಿವರ್ ಫಂಕ್ಷನ್ ಟೆಸ್ಟ್  ತಪಾಸಣೆಯನ್ನು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮಾಡಲಾಗುವುದು. ಈ ಪರೀಕ್ಷೆಯು ಉಚಿತವಾಗಿದ್ದು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿದೆ. ತಪಾಸಣೆ ಮಾಡಲಿಚ್ಛಿಸುವವರು 08251-231901/23902/231247, ಮೊ:8123276901 ನಂಬರಿಗೆ ಕರೆ ಮಾಡಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Posted by Vidyamaana on 2023-07-24 09:25:11 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಬಿರುಗಾಳಿ, ಗುಡುಗು ಸಹಿತ ನಾಳೆ ಮಳೆಯ ಪ್ರಮಾಣ ಇನ್ನೂ ಹೆಚ್ಚಾಗಲಿರುವ ಕಾರಣ ಹವಾಮಾನ ಇಲಾಖೆ ಬೆಂಗಳೂರು, ರೆಡ್ ಅಲರ್ಟ್ ಘೋಷಿಸಿದೆಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಜುಲೈ 25 ರಂದು, 204.5 ಮಿ.ಮೀ ಗಿಂತಲೂ ಹೆಚ್ಚು ಅತೀ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಈ ಮೂರೂ ಜಿಲ್ಲೆಗಳಿಗೂ ಬುಧವಾರ ಹಾಗೂ ಗುರುವಾರವೂ ಭಾರೀ ಮಳೆ ಮುಂದುವರಿಯಲಿರುವ ಕಾರಣ ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 28 ಹಾಗೂ 29 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಒಳನಾಡಿಗೂ ಆರೆಂಜ್ ಅಲರ್ಟ್ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಂಗಳವಾರ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೆ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 26, 27, 28 ರಂದು ಎಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ . ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಮಾತ್ರ ಎಲ್ಲೋ ಅಲರ್ಟ್ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮಳೆ ಪ್ರಮಾಣ 64 ಮಿ.ಮೀ ನಿಂದ 115 ಮಿಮೀ ವರೆಗೂ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 25, 26, 27 ರ ವರೆಗೂ ಉತ್ತಮ ಮಳೆಯಾಗಲಿದ್ದು, ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

Posted by Vidyamaana on 2023-08-15 03:26:47 |

Share: | | | | |


77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

ಹೊಸದಿಲ್ಲಿ: ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ಇಂದು (ಮಂಗಳವಾರ) ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.


77ನೇ ಸ್ವಾತಂತ್ರ್ಯ ದಿನದಂದು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು.


ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು. ಬಳಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಐಎಎಫ್ ಹೆಲಿಕಾಪ್ಟರ್ ತ್ರಿವರ್ಣ ಧ್ವಜಕ್ಕೆ ಪುಷ್ಪವೃಷ್ಟಿ ಮಾಡಿತು.


ಹಿಂದಿನ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ದೇಶಾದ್ಯಂತ ವಿವಿಧ ವೃತ್ತಿಗೆ ಸೇರಿದ 1800 ಮಂದಿಯನ್ನು ತಮ್ಮ ಸಂಗಾತಿಯ ಜೊತೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಅಸ್ಮಾ ಬಾನು ನಾಪತ್ತೆ

Posted by Vidyamaana on 2023-05-20 08:03:28 |

Share: | | | | |


ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಅಸ್ಮಾ ಬಾನು ನಾಪತ್ತೆ

ಮಂಗಳೂರು: ಇಲ್ಲಿನ ಆಸ್ಪತ್ರೆಯೊಂದರಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಸೋಮವಾರ ನಡೆದಿದೆ.

ಕೊಲಾಸೋ ಆಸ್ಪತ್ರೆಯ ಪ್ರಥಮ ವರ್ಷದ ವಿದ್ಯಾರ್ಥಿನಿ ಅಸ್ಮಾ ಬಾನು(18) ಎಂದು ಗುರುತಿಸಲಾಗಿದೆ.

    ಅಸ್ಮಾ ಬಾನು ಅವರು ಮೇ 15ರಂದು ಬೆಳಗ್ಗೆ ಮನೆಯಿಂದ ಕೊಲಾಸೋ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು. ಅನಂತರ ಮನೆಗೆ ಬರಲಿಲ್ಲ. ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಮಾತನಾಡಬಲ್ಲರು. ಅಸ್ಮಾ ತಂದೆ ಮಹಮ್ಮದ್ ಖಾಲಿಕ್ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಣೆಯಾದವರ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0824-2220520 ಅಥವಾ ಜಿಲ್ಲಾ ಕಂಟ್ರೋಲ್ ರೂಂ 2220800, 2220801 ಅನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Recent News


Leave a Comment: