ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


ವಾಹನ ಸವಾರರೇ ಗಮನಿಸಿ : ರಿಯಾಯಿತಿ ದರದಲ್ಲಿ ಟ್ರಾಫಿಕ್ ದಂಡ ಪಾವತಿಗೆ ಇಂದೇ ಕೊನೆಯ ದಿನ

Posted by Vidyamaana on 2023-09-09 08:40:11 |

Share: | | | | |


ವಾಹನ ಸವಾರರೇ ಗಮನಿಸಿ : ರಿಯಾಯಿತಿ ದರದಲ್ಲಿ ಟ್ರಾಫಿಕ್ ದಂಡ  ಪಾವತಿಗೆ ಇಂದೇ ಕೊನೆಯ ದಿನ

ಗಳೂರು : ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮಾಡಲು ಶೇ. 50 ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಇಂದು ಕೊನೆಯ ದಿನಾಂಕವಾಗಿದ್ದು, ಇಂದು ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬೇಕು.ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.


ರಿಯಾಯಿತಿ ದರದಲ್ಲಿ ದಂಡ ಕಟ್ಟೋದು ಹೇಗೆ..?


1) ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮೂಲಕ ಪಾವತಿ ಮಾಡಬಹುದು.

2) ಪೇಟಿಎಂ ಅಪ್ಲಿಕೇಶನ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ.

3) ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ವೆಬ್ ಸೈಟ್ ಗೆ ಲಾಗ್ ಇನ್ ಆಗಿ ವಾಹನದ ನೋಂದಣಿ ಸಂಖ್ಯೆ ನಮೂದಿಸುವ ಮೂಲಕ ಬಾಕಿ ಪಾವತಿ ಮಾಡಬಹುದು.

4) ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲೂ ಸಹ ದಂಡ ಪಾವತಿಸಬಹುದಾಗಿದೆ.

5 ) ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ಪಡೆಯಬಹುದು. ದಂಡವನ್ನು ಮೊತ್ತವನ್ನು ಪಾವತಿಸಿ ರಶೀದಿ ಪಡೆಯಬಹುದು..

ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

Posted by Vidyamaana on 2024-06-26 19:19:30 |

Share: | | | | |


ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಮಂಗಳೂರು: ಜೂನ್ 27ರಂದು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇದರ ಪ್ರಕಟನೆ ಹೀಗಿದೆ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಜುಲೈನಿಂದ 200 ಯೂನಿಟ್ ವರೆಗೆ ಉಚಿತ ವಿದ್ಯುತ್

Posted by Vidyamaana on 2023-06-02 10:11:01 |

Share: | | | | |


ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಜುಲೈನಿಂದ 200 ಯೂನಿಟ್ ವರೆಗೆ ಉಚಿತ ವಿದ್ಯುತ್

ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು.

ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಸಂಪೂರ್ಣ ವಿವರ ನೀಡಿದರು.


ಮೊದಲ ಗ್ಯಾರಂಟಿ ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್​ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು.  12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು,  12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್​ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್​ ನೀಡುತ್ತೇವೆ. 200 ಯೂನಿಟ್​ ವಿದ್ಯುತ್​ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಜುಲೈ 1ರಿಂದ ಆಗಸ್ಟ್​ 1ರವರೆಗೆ ಬಳಸುವ ವಿದ್ಯುತ್​ ಬಳಕೆಗೆ ಬಿಲ್​  ಎಂದು ತಿಳಿಸಿದರು.

ಟ್ರಾಫಿಕ್ ಸಿಗ್ನಲ್ ಲೈಟ್‌ಗೆ ಸೇರ್ಪಡೆಯಾಗಲಿದೆ ನಾಲ್ಕನೇ ಬಣ್ಣ, ಆ ಬಣ್ಣ ಯಾವುದು ಗೊತ್ತಾ?

Posted by Vidyamaana on 2024-08-13 05:40:56 |

Share: | | | | |


ಟ್ರಾಫಿಕ್ ಸಿಗ್ನಲ್ ಲೈಟ್‌ಗೆ ಸೇರ್ಪಡೆಯಾಗಲಿದೆ ನಾಲ್ಕನೇ ಬಣ್ಣ, ಆ ಬಣ್ಣ ಯಾವುದು ಗೊತ್ತಾ?

ಟ್ರಾಫಿಕ್‌ ಸಮಸ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ರಸ್ತೆಗಳಲ್ಲಿ ಕೆಂಪು, ಹಸಿರು ಮತ್ತು ಹಳದಿ ಬಣ್ಣದ ಟ್ರಾಫಿಕ್‌ ಲೈಟ್‌ಗಳನ್ನು ಅಳವಡಿಸಿರುತ್ತಾರೆ. ವಿಶ್ವದ ಎಲ್ಲಾ ಕಡೆಯೂ ಇದೇ ಮೂರು ಬಣ್ಣದ ಲೈಟ್‌ಗಳಿರುತ್ತವೆ. ಆದ್ರೆ ಇನ್ಮುಂದೆ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ನಾಲ್ಕನೆಯ ಬಣ್ಣ ಬರಲಿದೆಯಂತೆ.ಅದು ಏಕೆ ಮತ್ತು ಆ ಬಣ್ಣ ಯಾವುದು ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ. 

ಟ್ರಾಫಿಕ್‌ ಸಿಗ್ನಲ್‌ ದೀಪಗಳು ಕೆಂಪು, ಹಸಿರು ಮತ್ತು ಹಳದಿ ಈ ಮೂರು ಬಣ್ಣದಲ್ಲಿರುತ್ತವೆ. ನಮ್ಮ ಭಾರತವಷ್ಟೇ ಅಲ್ಲ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಇದೇ ಬಣ್ಣದ ದೀಪಗಳಿರುತ್ತವೆ. ಟ್ರಾಫಿಕ್‌ ಸಮಸ್ಯೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಇವುಗಳನ್ನು ಅಳವಡಿಸಲಾಗುತ್ತದೆ. ಶತಮಾನಗಳಿಂದಲೂ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಈ ಮೂರು ಬಣ್ಣದ ಲೈಟ್‌ಗಳು ಮಾತ್ರ ಇವೆ. ಆದ್ರೆ ಇನ್ಮುಂದೆ ಟ್ರಾಫಿಕ್‌ ಸಿಗ್ನಲ್‌ ಲೈಟ್‌ಗೆ ನಾಲ್ಕನೆಯ ಬಣ್ಣ ಸೇರ್ಪಡೆಯಾಗಲಿದೆಯಂತೆ. ಅದು ಏಕೆ ಮತ್ತು ಆ ಬಣ್ಣ ಯಾವುದು ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ.

ಮಾದ್ಯಮಗಳನ್ನು ನಾಯಿಗೆ ಹೋಲಿಸಿದ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಹೈಕಮಾಂಡ್ ಗೆ KUWJ ದೂರು

Posted by Vidyamaana on 2024-03-12 20:36:12 |

Share: | | | | |


ಮಾದ್ಯಮಗಳನ್ನು ನಾಯಿಗೆ ಹೋಲಿಸಿದ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಹೈಕಮಾಂಡ್ ಗೆ  KUWJ ದೂರು

ಬೆಂಗಳೂರು : ಆನೆ ನಡೆದದ್ದೇ ದಾರಿ. ಮಾಧ್ಯಮದವರು ಏನು ಬರೆದುಕೊಂಡು ಅದು ನಡೆದು ಹೋಗುತ್ತೆ. ನಾಯಿ ಬೊಗಳುತ್ತೆ ಎಂಬುದಾಗಿ ಮಾದ್ಯಮದವರನ್ನು ನಾಯಿಗೆ ಹೋಲಿಕೆ ಮಾಡಿದಂತ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದೆ.ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರದ ಮೂಲಕ ಟ್ವಿಟ್ ಮಾಡಿ ದೂರು ನೀಡಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು, ಅದರಲ್ಲಿ ಉತ್ತರ ಕನ್ನಡದ ಸಂಸದ ಅನಂತ ಕುಮಾರ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನ್ನಾಡುತ್ತಾ ಆನೆ ಹೋಗಿದ್ದೇ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ. ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ ಎಂದು ಮಾಧ್ಯಮದವರನ್ನು ಹೀಯಾಳಿಸಿರುವುದು ಖಂಡನೀಯ. ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಯುಡಬ್ಲ್ಯು ಜೆ ಆಗ್ರಹಿಸಿದೆ.


ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಮಹತ್ವದ ಸ್ಥಾನವಿದೆ. ತಮಗೆ ಬೇಕಾದಾಗ ಮಾಧ್ಯಮವನ್ನು ಹೊಗಳುವುದು ಬೇಡವೆನಿಸಿದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ. ಅನಂತ ಕುಮಾರ ಹೆಗಡೆ ಅವರು ಜವಾಬ್ದಾರಿಯುತ ಸಂಸದರಾಗಿದ್ದು, ಆಗಿಂದ್ದಾಗೆ ಮನಸೋ ಇಚ್ಛೆ ಮಾತನಾಡುತ್ತಿರುವುದಲ್ಲದೆ ಮಾಧ್ಯಮವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿರುವುದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಮತ್ತು ನಾಲಿಗೆ ಹಿಡಿತವಿಲ್ಲದ ಇಂತವರನ್ನು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕೆಯುಡಬ್ಲ್ಯು ಜೆ ಒತ್ತಾಯಿಸಿದೆ.

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ: ಕಂಬಳಕ್ಕೆ ಆಹ್ವಾನ

Posted by Vidyamaana on 2023-11-02 17:05:39 |

Share: | | | | |


ರಾಜ್ಯಪಾಲರಿಗೆ ಕಂಬಳದ ಆಮಂತ್ರಣ: ಕಂಬಳಕ್ಕೆ ಆಹ್ವಾನ

ಪುತ್ತೂರು: ನ.24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರೂ ಆಗಿರುವ ಅಶೋಕ್ ರೈ ಅವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ಮಾಡಿದರು.‌ರಾಜಭಬನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿಯಾದ ಶಾಸಕರ ನೇತೃತ್ವದ ನಿಯೋಗ ಕಂಬಳದ ಬಗ್ಗೆ ಪೂರ್ಣ ವಿವರಣೆ ನೀಡಿದರು. ನಿಯೋಗದಲ್ಲಿ ತುಳು ಕೂಟದ ಅಧ್ಯಕ್ಷರಾದ ಸುಂದರ್ ರಾಜ್ ರೈ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಸೇರಿದಂತೆ ತುಳು ಕೂಟ ಹಾಗೂ ಕಂಬಳ ಸಮಿತಿ‌ಪ್ರಮುಖರು ಉಪಸ್ಥಿತರಿದ್ದರು.

Recent News


Leave a Comment: