ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಕೊಳ್ತಿಗೆ ವಲಯ ಕಾಂಗ್ರೆಸ್‌ಕಾರ್ಯಕರ್ತರ ಸಭೆ ಶಾಸಕರಿಗೆ ಸನ್ಮಾನ

Posted by Vidyamaana on 2023-09-27 12:27:06 |

Share: | | | | |


ಕೊಳ್ತಿಗೆ ವಲಯ ಕಾಂಗ್ರೆಸ್‌ಕಾರ್ಯಕರ್ತರ ಸಭೆ ಶಾಸಕರಿಗೆ ಸನ್ಮಾನ

ಪುತ್ತೂರು; ನಾವು ಅಧಿಕಾರಕ್ಕೆ ಬಂದರೆ ದೇಶದಲ್ಲಿ ಅಚ್ಚೇದಿನ್ ಕೊಡುತ್ತೇವೆ, ಜನರಿಗೆ ನೆಮ್ಮದಿಯ ಜೀವನ ಕೊಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ಜನರ ಖಾತೆಗೆ ನಯಾ ಪೈಸೆ ನೀಡಿಲ್ಲ ಮತ್ತು ನೆಮ್ಮದಿಯ ಜೀವನವನ್ನೂ ನೀಡಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಆರೋಪಿಸಿದರು.

ಕೊಳ್ತಿಗೆ ವಲಯ ಕಾಂಗ್ರೆಸ್ ವತಿಯಿಂದ ಕೊಳ್ತಿಗೆ ಅಂಭೇಡ್ಕರ್ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಚುನಾವಣೆಯ ಸಂದರ್ಬದಲ್ಲಿ ರಾಜ್ಯದ ಜನತೆಗೆ ಕೊಟ್ಟಿದ್ದ ಗ್ಯಾರಂಟಿಯನ್ನು ಕಾಂಗ್ರೆಸ್ ಈಡೇರಿಸಿದೆ. ಜನರ ಖಾತೆಗೆ ಹಣವನ್ನು ನೀಡಿದ್ದೇವೆ, ಅಕ್ಕಿಯನ್ನು ನೀಡಿದ್ದೇವೆ, ಉಚಿತ ಕರೆಂಟ್ , ಮತ್ತು ಗೃಹಲಕ್ಷಿ ಯೋಜನೆಯ ೨ ಸಾವಿರ ಹಣ ಮತ್ತು ಉಚಿತ ಬಸ್ ಪ್ರಯಾಣವನ್ನು ಮಾಡಿದ್ದೇವೆ ಇ|ಂಥಹ ಒಂದೇ ಒಂದು ಕಾರ್ಯಕ್ರಮ ಬಿಜೆಪಿ ನೀಡಿದೆಯಾ? ಎಂದು ಪ್ರಶ್ನಿಸಿದರು. ಬಡವರು ನೆಮ್ಮದಿಯ ಜೀವನ ನಡೆಸಬೇಕಾದರೆ ಕಾಂಗ್ರೆಸ್ ಅಧಿಕಾರದಲ್ಲಿರಬೇಕು ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ಚುನಾವಣೆಯ ಸಂದರ್ಬದಲ್ಲಿ ಜನರಲ್ಲಿ ಕೋಮು ಭಾವನೆಯನ್ನು ಬಿತ್ತಿ ಧರ್ಮದ ಆಧಾರದಲ್ಲಿ ಮತ ಪಡೆದು ಅಧಿಕಾರಕ್ಕೇರುವ ಬಿಜೆಪಿ ಬಳಿಕ ಜನರನ್ನು ಮರೆಯುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಜನ ನೆಮ್ಮದಿಯ ನಿಟ್ಟುಸಿರುವ ಬಿಟ್ಟಿದ್ದಾರೆ, ಗ್ಯಾರಂಟಿ ಯೋಜನೆಯನ್ನು ಟೀಕಿಸುತ್ತಲೇ ಬಿಜೆಪಿ ಗರು ಅದರ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಎಲ್ಲರನ್ನೂ ಸಮಾನ ರೀತಿಯಲ್ಲಿ ಕಾಣುತ್ತದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಸಾಕಷ್ಟು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಿಕೊಳ್ಳಲಿದ್ದಾರೆ ಎಂದು ಶಾಸಕರು ತಿಳಿಸಿದರು.


ಎದೆಹುಬ್ಬಿಸಿ ನಡೆಯಿರಿ ಸರಕಾರ ನಮ್ಮದೇ: ಎಂ ಬಿ ವಿಶ್ವನಾಥ ರೈ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾಕಿತ್ತು ಎನ್ನುವಷ್ಟರ ಮಟ್ಟಿಗೆ ರಾಜ್ಯದ ಬಿಜೆಪಿ ಅಡಳಿತ ಜನರಿಗೆ ಬೇಡವಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಜನ ಸಮಾಧಾನಪಡುವಂತಾಯಿತು, ಪುತ್ತೂರಿನಲ್ಲಿ ನಮ್ಮದೇ ಶಾಸಕರಿದ್ದು ರಾಜ್ಯದಲ್ಲಿ ನಮ್ಮದೇ ಸರಕಾರ ಇದೆ ಇಷ್ಟು ದಿನ ತಲೆಬಾಗಿದ್ದು ಸಾಕು ಇನ್ನು ಎದೆ ಹುಬ್ಬಿಸಿ ನಡೆಯಿರಿ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಹೇಳಿದರು.

ಪುತ್ತೂರು ಶಾಸಕರಾದ ಅಶೋಕ್ ರೈಯವರು ಪುತ್ತೂರಿನಲ್ಲಿ ಉತ್ತಮ ರೀತಿಯಲ್ಲಿ ಕೆಲಸವನ್ನು ಮಾಡುತ್ತಿದ್ದಾರೆ. ಶಾಸಕರ ಕಚೇರಿಗೆ ಬಂದು ಸಾವಿರಾರು ಮಂದಿ ಕೆಲಸ ಮಾಡಿಸಿಕೊಂಡು ಹೋಗುತ್ತಿದ್ದಾರೆ, ಭರವಸೆ ಮಾತ್ರ ನೀಡದೆ ಕೆಲಸ ಮಾಡಿ ತೋರಿಸುವ ತಾಕತ್ತು ನಮ್ಮ ಶಾಸಕರಿಗೆ ಇದೆ ಎಂಬುದು ಜನರಿಗೆ ಗೊತ್ತಾಗಿದೆ, ಮುಂದಿನ ಐದು ವರ್ಷದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪುತ್ತೂರು ಅಭಿವೃದ್ದಿ ಹೊಂದಲಿದೆ ಎಂದು ಹೇಳಿದರು.


ಪುತ್ತೂರಿಗೂ ಐದು ಗ್ಯಾರಂಟಿ : ಹೇಮನಾಥ ಶೆಟ್ಟಿ

ರಾಜ್ಯದಲ್ಲಿ ಕಾಂಗ್ರೆಸ್ ಜನತೆಗೆ ಐದು ಗ್ಯಾರಂಟಿ ಕೊಟ್ಟಿದ್ದರೆ ಪುತ್ತೂರು ಶಾಸಕರು ಕ್ಷೇತ್ರಕ್ಕೆ ಐದು ಗ್ಯಾರಂಟಿಯನ್ನು ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಕಾಯಾಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿಯವರು ಹೇಳಿದರು. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಕೆಎಂಎಫ್ ಸ್ಥಳಾಂತರ, ಕೊಯಿಲ ಜಾನುವಾರು ಕೇಂದ್ರದ ಅಭಿವೃದ್ದಿ ಮತ್ತು ಪುತ್ತೂರು ನಗರದಲ್ಲಿ ಸಮಗ್ರ ಅಭಿವೃದ್ದಿ ಈ ಐದು ಗ್ಯಾರಂಟಿಯನ್ನು ಶಾಸಕರು ನೀಡಿದ್ದಾರೆ. ಇವುಗಳ ಪೈಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ೯೬೦ ಕೋಟಿ ಬಿಡುಗಡೆಯಾಗಿದೆ, ನಗರದ ಚರಂಡಿ ಕಾಮಗಾರಿಗೂ ೫೦೦ ಕೋಟಿ ಬಿಡುಗಡೆಯಾಗಿದೆ, ಕೆಎಂಎಫ್ ಸ್ಥಳಾಂತರಕ್ಕೆ ಜಾಗ ನಿಗಧಿಪಡಿಸಲಾಗಿದೆ, ಜಾನುವಾರು ಕೆಂದ್ರಕ್ಕೂ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದ ಅವರು ಈ ಐದು ಗ್ಯಾರಂಟಿಗಳು ಜಾರಿಯಾದ ಬಳಿಕ ಪುತ್ತೂರಿನ ಚಿತ್ರಣವೇ ಬದಲಾಗಲಿದೆ. ಇಲ್ಲಿನ ಸಾವಿರಾರು ಯುವಕರಿಗೆ ಉದ್ಯೋಗ ದೊರೆಯಲಿದೆ, ಜನರ ಓಡಾಟ ಹೆಚ್ಚಾಗಿ ಪುತ್ತೂರಿನಲ್ಲಿ ವ್ಯಾಪಾರ, ವ್ಯವಹಾರ ಜಾಸ್ತಿಯಗಲಿದ್ದು ಒಟ್ಟಿನಲ್ಲಿ ಮುಂದೆ ಪುತ್ತೂರು ಜನತೆಗೆ ನೆಮ್ಮದಿಯ ದಿನಗಳು ಖಂಡಿತವಾಗಿಯೂ ಬರುತ್ತದೆ ಎಂದು ಹೇಳಿದರು.



ಶಾಸಕರಿಗೆ ಗಟ್ಸ್ ಇದೆ ಎಂಬುದು ಜನತೆಗೆ ಗೊತ್ತಾಗಿದೆ: ಬಡಗನ್ನೂರು

ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಮಾತನಾಡಿ ಶಾಸಕ ಅಶೋಕ್ ರೈ ಯವರಿಗೆ ಗಟ್ಸ್ ಇದೆ ಎಂಬುದು ಜನರಿಗೆ ಗೊತ್ತಾಗಿದೆ ಈ ಕಾರಣಕ್ಕೆ ಅವರು ಹೋದಲ್ಲೆಲ್ಲಾ ಜನ ಸುತ್ತುವರಿಯುತ್ತಾರೆ ಎಂದು ಹೇಳಿದರು. ನುಡಿದಂತೆ ನಡೆಯುವ ಮೂಲಕ ಶಾಸಕರು ಜನ ಮೆಚ್ಚುಗೆ ಗಳಿಸಿದ್ದಾರೆ.ಬಡವರ ಪರ ಅಪಾರ ಕಾಳಜಿ ಇರುವ ಶಾಸಕ ರೈಗಳ ಬಳಿ ನಿತ್ಯವೂ ನೂರಾರು ಸಮಸ್ಯೆಗಳನ್ನು ಹೊತ್ತ ಬಡವರು ಭೇಟಿಯಗಿ ಸಮಸ್ಯೆ ಇತ್ಯರ್ಥಮಾಡಿಕೊಳ್ಳುತ್ತಿದ್ದಾರೆ , ಈ ಹಿಂದೆ ಈ ಪರಿಪಾಟ ಇರಲಿಲ್ಲ ಶಾಸಕರು ಏನೆಲ್ಲಾ ಮಾಡಬಹುದು ಎಂಬುದನ್ನು ಅಶೋಕ್ ರೈ ತೋರಿಸಿಕೊಟ್ಟಿದ್ದಾರೆ. ಜನರ ಪರ ಕೆಲಸ ಮಾಡಲು ಶಾಸಕರಾದವರಿಗೆ ಗಟ್ಸ್ ಬೇಕು ಎಂಬುದು ಜನ ಮಾತನಾಡತೊಡಗಿದ್ದಾರೆ ಎಂದು ಬಡಗನ್ನೂರುರವರು ಹೇಳಿದರು. ಭೃಷ್ಟಾಚಾರ ಮುಕ್ತ ಪುತ್ತೂರನ್ನಾಗಿ ಮಾಡುವಲ್ಲಿ ಅವರ ಶ್ರಮ ಸಫಲವಾಗಲಿದೆ ಎಂದು ಹೇಳಿದರು.



ಕಾಂಗ್ರೆಸ್ಸನ್ನು ಮರೆಯದಿರಿ: ಅಮಲರಾಮಚಂದ್ರ

ಕಳೆದ ಮೂರು ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಜನತೆಗೆ ನೆಮ್ಮದಿಯ ಜೀವನವನ್ನು ನೀಡಿದೆ, ಎಲ್ಲರ ಖಾತೆಗೂ ಹಣ ಬಂದಿದೆ, ನಾವು ಸುಳ್ಳು ಹೇಳಿ ಮೋಸ ಮಾಡುವವರಲ್ಲ ನಮ್ಮದೇನಿದ್ದರೂ ನುಡಿದಂತೆ ನಡೆಯುವ ಜಾಯಾಮಾನವಾಗಿದ್ದು ನೆಮ್ಮದಿಯ ಬದುಕು ನೀಡಿದ ಕಾಂಗ್ರೆಸ್ಸನ್ನು ಯಾರೂ ಮರೆಯಬಾರದು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತದಾನ ಮಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ ಅಮಲರಾಮಚಂದ್ರ ಮನವಿ ಮಾಡಿದರು. ಕೊಳ್ತಿಗೆಯಲ್ಲಿ ಕಾಂಗ್ರೆಸ್ ಭದ್ರವಾಗಿದೆ. ಕೊಳ್ತಿಗೆಯ ಬಿಜೆಪಿಗರು ಇಲ್ಲಿನ ತಮಿಳು ನಿವಾಸಿಗಳಿಗೆ ತೊಂದರೆ ನೀಡಿದ್ದಾರೆ, ಅವರು ಮನೆ ನಿರ್ಮಾಣ ಮಾಡಲು ಸರಕಾರ ಜಾಗ ಕೊಟ್ಟರೂ ಅಲ್ಲಿ ಮನೆ ನಿರ್ಮಾಣ ಮಾಡಲು ಬಿಜೆಪಿ ಅಡ್ಡಿಪಡಿಸಿತ್ತು, ಶಾಸಕರಾದ ಅಶೋಕ್ ರೈ ಆ ಕುಟುಂಬಗಳಿಗೆ ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದರು.


 ನಿಗಮ ಕೊಡಿ

ಸಭೆಯಲ್ಲಿ ಮಾತನಾಡಿದ ಕೊಳ್ತಿಗೆ ಗ್ರಾಪಂ ಉಪಾಧ್ಯಕ್ಷರಾದ ಕೆ ಎಸ್ ಪ್ರಮೋದ್‌ರವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಾವು ಹೇಮನಾಥ ಶೆಟ್ಟಿಯವರು ಪಕ್ಷಕ್ಕಾಗಿ ದೊಡ್ಡ ಮಟ್ಟದಲ್ಲಿ ಕೆಲಸ ಮಾಡಿದವರು ಅವರಿಗೆ ಸರಕಾರ ಉನ್ನತ ಹುದ್ದೆಯನ್ನು ನೀಡಬೇಕು. ಅರಣ್ಯ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಬೇಕು ಎಂದು ಸಭೆಯಲ್ಲಿ ಹೇಳಿದಾಗ ಸಭೆಯಲ್ಲಿದ್ದ ಕಾರ್ಯಕರ್ತರು ಒಕ್ಕೊರಳನಿಂದ ಅನುಮೋದನೆ ಮಾಡಿದರು.

ಶಾಸಕರು ಈ ವಿಚಾರವನ್ನು ಸರಕಾರದ ಗಮನಕ್ಕೆ ತರಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಹೇಮನಾಥ ಶೆಟ್ಟಿಯವರು ಹಿರಿಯರು ಅವರನ್ನು ಬಿಟ್ಟು ಹಾಕುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ವೇದಿಕೆಯಲ್ಲಿ ವಲಯಾಧ್ಯಕ್ಷರಾದ ವೆಂಕಟ್ರಮಣ ಗೌಡ, ಮಾಜಿ ಜಿಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಲರಾಮಚಂದ್ರ, ಪ್ರದೀಪ್‌ಕುಮಾರ್ ಪಾಂಬಾರು,  ಕೊಳ್ತಿಗೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಧರ್ ಪೂಜಾರಿ , ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಮುರಳೀದರ ಎಸ್ ಪಿ, ಗ್ರಾಪಂ ಸದಸ್ಯರುಗಳಖಾದ ಪವನ್ ಡಿ ಜಿ, ಕೊಳ್ತಿಗೆ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ವಸಂತಕುಮಾರ ರೈ ದುಗ್ಗಳ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶಾರದಾ, ಉಪಾಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಸಾಮಾಜಿಕ ಜಾಲತಾಣದ ಸಿದ್ದಿಕ್ ಸುಲ್ತಾನ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಪಾಣಜೆ, ಗ್ರಾಪಂ ಅಧ್ಯಕ್ಷರಾದ ಅಕ್ಕಮ್ಮ, ಕೊಳ್ತಿಗೆ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷೆ ಲಕ್ಷ್ಮಿ ಕೆ ಜಿ

ಗ್ರಾಪಂ ಸದಸ್ಯರು, ಸಹಕಾರಿ ಸಂಘದ ನಿರ್ದೇಶಕರು, ಹಾಲು ಉತ್ಪಾದಕರ ಸಂಘದ ನಿರ್ದೇಶಕರು, ಕಾಂಗ್ರೆಸ್ ಕಾರ್ಯಕರ್ತರು, ಊರವರು, ಅಭಿಮಾನಿಗಳು

ಕೊಳ್ತಿಗೆ ಗ್ರಾಪಂ ಉಪಾಧ್ಯಕ್ಷರಾದ ಪ್ರಮೋದ್ ಕೆ ಎಸ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಸಭೆಯಲ್ಲಿ ಶಾಸಕರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ವಿನೋದ್ ರೈ ಕೆಳಗಿನ ಮನೆ ಕಾರ್ಯಕ್ರಮ ನಿರೂಪಿಸಿದರು.

ಉಪ್ಪಿನಂಗಡಿ ಅಪ್ರಾಪ್ತ ಬಾಲಕರು ಚಲಾಯಿಸುತ್ತಿದ್ದ ಡಿಯೋ ಅಪಘಾತ ಕುಪ್ಪೆಟ್ಟಿ ಅಬೂಬಕ್ಕರ್ ಸಿದ್ದೀಕ್ ಮೃತ್ಯು ಸವಾರ ಗಂಭೀರ ನಕಲಿ ನಂಬರ್ ಪ್ಲೇಟ್ ಪತ್ತೆ.

Posted by Vidyamaana on 2023-02-10 03:26:59 |

Share: | | | | |


ಉಪ್ಪಿನಂಗಡಿ ಅಪ್ರಾಪ್ತ ಬಾಲಕರು ಚಲಾಯಿಸುತ್ತಿದ್ದ ಡಿಯೋ ಅಪಘಾತ ಕುಪ್ಪೆಟ್ಟಿ ಅಬೂಬಕ್ಕರ್ ಸಿದ್ದೀಕ್  ಮೃತ್ಯು ಸವಾರ ಗಂಭೀರ ನಕಲಿ ನಂಬರ್ ಪ್ಲೇಟ್ ಪತ್ತೆ.

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಶಾಲೆಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಡಿಯೋ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ದುರ್ಘಟನೆ ಕಲ್ಲೇರಿ ಸಮೀಪದ ಶಿವಗಿರಿ ಎಂಬಲ್ಲಿ ಫೆ. 1 ರಂದು ಸಂಭವಿಸಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಓರ್ವ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಪ್ಪೆಟ್ಟಿಯ ಅಬೂಬಕ್ಕರ್ ಸಿದ್ದೀಕ್ ಎಂಬಾತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಫೆಬ್ರವರಿ 1 ರಂದು ಕಲ್ಲೇರಿ ಸಮೀಪದ ಶಿವಗಿರಿ ಎಂಬಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯ ದಿಂದ ಉಪ್ಪಿನಂಗಡಿಯಿಂದ ಕುಪ್ಪೆಟ್ಟಿ ಕಡೆಗೆ ಅತೀ ವೇಗದಿಂದ ಚಲಾಯಿಸಿಕೊಂಡು ಬಂದ ಡಿಯೋ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಉಪ್ಪಿನಂಗಡಿಯಿಂದ ಕಲ್ಲೇಗಿ ಕಡೆಗೆ ಚಲಿಸುತ್ತಿದ್ದ ಜೀತೋ ಟೆಂಪೊಗೆ ಹಿಂಬದಿಯಿಂದ ಡಿಕಿ ಹೊಡೆದಿದೆ ಎನಲಾಗಿದೆ. ಆದರೆ ಸ್ಕೂಟರ್ ಜೀತೋ ಟೆಂಪೊಗೆ ಡಿಕ್ಕಿ ಹೊಡೆದಿರುವ ಬಗ್ಗೆ ಜೀತೋ ಟೆಂಪೋದಲ್ಲಿ ಯಾವುದೇ ಕುರುಹುಗಳು ಪತ್ತೆ ಆಗಿಲ್ಲ ಎನ್ನಲಾಗಿದೆ.ಅಪ್ರಾಪ್ತ ಸ್ಕೂಟರ್ ಸವಾರರು ಹೆಲ್ಮಟ್ ಧರಿಸದ ಕಾರಣ ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಸಂದರ್ಭದಲ್ಲಿ ಸವಾರ ಮತ್ತು ಸಹ ಸವಾರನ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಸಹ ಸವಾರ ಕುಪ್ಪೆಟ್ಟಿಯ ಅಬೂಬಕ್ಕರ್ ಸಿದ್ದೀಕ್ ಎಂಬಾತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅಪ್ರಾಪ್ತ ಬಾಲಕರು ಚಲಾಯಿಸುತ್ತಿದ್ದ KA 53 ER 6958 ಡಿಯೋ ಸ್ಕೂಟರಿನ ನಂಬರ್ ಪ್ಲೇಟ್ ನಕಲಿಯಾಗಿದ್ದು, ಈ ಬಗ್ಗೆ ಬಂಟ್ವಾಳದ ಸಾರಿಗೆ ಅಧಿಕಾರಿಗಳು ಪೊಲೀಸರಿಗೆ ದೂರನ್ನು ನೀಡಿದ್ದು, ಅಪ್ರಾಪ್ತ ಬಾಲಕರು ಚಲಾಯಿಸುತ್ತಿದ್ದಡಿಯೋ ಸ್ಕೂಟರಿನ ಅಸಲಿ ಮಾಲಕನ ಮೇಲೆ ಪ್ರಕರಣ ದಾಖಲಿಸಿದ್ದಾರೆ.

       ಅಜಾಗರೂಕತೆ ಮತ್ತು ನಿರ್ಲಕ್ಷ್ಯತನ, ಹೆಲ್ಮಟ್ ಧರಿಸದೆ, ಇನ್ಸುರೆನ್ಸ್ ಇಲ್ಲದೆ,ಡ್ರೈವಿಂಗ್ ಲೈಸನ್ಸ್ ಇಲ್ಲದ ಅಪ್ರಾಪ್ತ ಮಕ್ಕಳಿಂದ ಸ್ಕೂಟರ್ ಚಲಾವಣೆ ಎಂಬ ಕಾರಣದಿಂದ ಪುತ್ತೂರು ಸಂಚಾರಿ  ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇಂದು ಅಂತಾರಾಷ್ಟ್ರೀಯ ಖ್ಯಾತಿಯ ಪ್ರಭಾಷಣಗಾರ ವಿದ್ವಾಂಸ ಎ.ಎಂ.ನೌಶಾದ್ ಬಾಖವಿ ಮುಕ್ವೆಗೆ

Posted by Vidyamaana on 2023-12-31 12:00:21 |

Share: | | | | |


ಇಂದು ಅಂತಾರಾಷ್ಟ್ರೀಯ ಖ್ಯಾತಿಯ ಪ್ರಭಾಷಣಗಾರ ವಿದ್ವಾಂಸ ಎ.ಎಂ.ನೌಶಾದ್ ಬಾಖವಿ ಮುಕ್ವೆಗೆ

ಪುತ್ತೂರು: ರಹ್ಮಾನಿಯಾ ಜುಮಾ ಮಸ್ಜಿದ್    ಮುಕ್ವೆ ಇಲ್ಲಿ ನೂತನ ಮದ್ರಸ ಕಟ್ಟಡ ನಿರ್ಮಾಣದ ಅಂಗವಾಗಿ 3 ದಿವಸಗಳ ಧಾರ್ಮಿಕ ಮತ ಪ್ರವಚನ ಕಾರ್ಯಕ್ರಮದ ಸಮಾರೋಪ ದಿನವಾದ ಡಿ.31ರಂದು ಅಂತರ್ರಾಷ್ಟ್ರೀಯ ಖ್ಯಾತಿಯ ಪ್ರಭಾಷಣಗಾರ ಎ.ಎಂ ನೌಶಾದ್ ಬಾಖವಿ ತಿರುವನಂತಪುರಂ, ಕೇರಳರವರು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಸ್ವಾಗತ ಸಮಿತಿ ಅಧ್ಯಕ್ಷ ಅಶ್ರಫ್ ಗ್ಯಾಲಕ್ಸಿ ಚಿಕ್ಕಾಲ ಅವರು ಅಧ್ಯಕ್ಷತೆ ವಹಿಸಲಿದ್ದು ಮುಕ್ವೆ  ಖತೀಬ್ ಅನ್ವರ್ ಅಲಿ ದಾರಿಮಿ ಅಜ್ಜಾವರ ದುವಾ ನೆರವೇರಿಸಲಿದ್ದು ಹಲವು ಗಣ್ಯರು ಅತಿಥಿಗಳಾಗಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಭಾಗವಹಿಸಲಿದ್ದಾರೆ  ಎಂದು ಸಂಘಟಕರು ತಿಳಿಸಿದ್ದಾರೆ

ಡಾ.ಸುರೇಶ್ ಪುತ್ತೂರಾಯರಿಗೆ ಅರುಣ್ ಕುಮಾ‌ರ್ ಪುತ್ತಿಲ ಚುನಾವಣಾ ಕಚೇರಿಯಲ್ಲಿ ಅದ್ದೂರಿ ಸ್ವಾಗತ.

Posted by Vidyamaana on 2023-04-26 00:55:19 |

Share: | | | | |


ಡಾ.ಸುರೇಶ್ ಪುತ್ತೂರಾಯರಿಗೆ ಅರುಣ್ ಕುಮಾ‌ರ್ ಪುತ್ತಿಲ ಚುನಾವಣಾ ಕಚೇರಿಯಲ್ಲಿ ಅದ್ದೂರಿ ಸ್ವಾಗತ.

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ. ಅವರನ್ನು ಬೆಂಬಲಿಸುವಂತೆ ಹೇಳಿಕೆ ನೀಡಿದ್ದ. ಪುತ್ತೂರಿನ ಜನಪ್ರಿಯ ವೈದ್ಯ ಡಾ.ಸುರೇಶ್ ಪುತ್ತೂರಾಯರವರು ಏ.25ರಂದು ಸಂಜೆ ಅರುಣ್ ಕುಮಾರ್ ಪುತ್ತಿಲರವರ ಚುನಾವಣಾ ಕಚೇರಿಗೆ ಭೇಟಿ ನೀಡಿದಾಗ ಅವರನ್ನು ಹೂ ಹಾರ ಹಾಕಿ ಸ್ವಾಗತಿಸಲಾಯಿತು.

ಶ್ರೀ ಕೃಷ್ಣ ಉಪಾಧ್ಯಾಯ, ಪ್ರಸನ್ನ ಕುಮಾರ್ ಮಾರ್ತ, ಮನೀಷ್ ಕುಲಾಲ್, ಕೃಷ್ಣ ಪ್ರಸಾದ್ ಶೆಟ್ಟಿ, ಗೋಪಾಲ್ ಎಂ.ಯು., ರೂಪೇಶ್ ನ್ಯಾಕ್ ಮೊದಲಾದವರು ಡಾ.ಸುರೇಶ್ ಪುತ್ತೂರಾಯರವರನ್ನು ಹೂ ಹಾರ ಹಾಕಿ ಸ್ವಾಗತಿಸಿದರು.

6 ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಿದ ಸಲಿಂಗ ಜೋಡಿ

Posted by Vidyamaana on 2023-09-15 21:51:08 |

Share: | | | | |


6 ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಿದ ಸಲಿಂಗ ಜೋಡಿ


 ಮಹಾರಾಷ್ಟ್ರ :ಪ್ರೀತಿಗೆ ಯಾವುದೇ ಧರ್ಮ, ವಯಸ್ಸು, ಬಣ್ಣ, ಸೌಂದರ್ಯ ಮುಖ್ಯವಲ್ಲ ಅಂತಾ ಹೇಳುವ ಒಂದು ಕಾಲವಿತ್ತು. ಆದರೆ ಇದೀಗ ಪ್ರೀತಿಗೆ ಲಿಂಗವೂ ಮುಖ್ಯವಲ್ಲ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೊರದೇಶದಲ್ಲಿ ಆಗುತ್ತಿದ್ದ ಸಲಿಂಗಕಾಮಿಗಳ ಮದುವೆ ಇದೀಗ ನಮ್ಮ ಭಾರತ ದೇಶದಲ್ಲೂ ನಡೆಯುತ್ತಿದೆ. ಅನೇಕ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಉಂಟು. ಇದಕ್ಕೆ ಉದಾಹರಣೆ ಮಹಾರಾಷ್ಟ್ರದ ಅವಿನಾಶ್ ಹಾಗೂ ವರುಣ್ ದಂಪತಿ.


6 ವರ್ಷಗಳ ಕಾಲ ಪ್ರೀತಿ ಮಾಡಿದ ಇವರು ಕುಟುಂಬದ ಒಪ್ಪಿಗೆ ಮೇರೆಗೆ ಲೋನಾವಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.


ತಮ್ಮ ಸಂಬಂಧ ಬಗೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಾಕಿ ವರುಣ ಪೋಸ್ಟ್ ಮಾಡಿದ್ದಾರೆ. 6 ವರ್ಷಗಳ ದೀರ್ಘ ಪ್ರೇಮ ಸಂಬಂಧ ಮುಗ್ಗರಿಸಿದ್ದರಿಂದ ನಾನು ತೀವ್ರ ಬೇಸರದಲ್ಲಿದ್ದೆ. 2021ರಲ್ಲಿ ಪೋಷಕರನ್ನು ನೋಡಲು ಆಗಷ್ಟೇ ಭಾರತಕ್ಕೆ ಬಂದಿದ್ದ ನಾನು ಅವಿನಾಶ್ ಅವರನ್ನು ಭೇಟಿಮಾಡಿದೆ. ನಾನು ಗಂಭೀರವಾಗಿ ಸಂಗಾತಿಯ ಹುಡುಕಾಟದಲ್ಲಿದ್ದೆ.


ನಾನು ಮತ್ತು 37 ವರ್ಷದ ಅವಿನಾಶ್ ಪರಸ್ಪರ ಪ್ರೀತಿಯಲ್ಲಿ ಬಿದ್ದೆವು.ಆದರೆ ನಮ್ಮ ಸಂಬಂಧವನ್ನು ಮೊದಮೊದಲು ಎರಡೂ ಕಡೆಯ ಪೋಷಕರು ಒಪ್ಪಲಿಲ್ಲ. ಕೊನೆಗೆ ಒಪ್ಪಿಕೊಂಡರು. ಸಾಕಷ್ಟು ಕಲ್ಯಾಣಮಂಟಪಗಳು ಬಾಡಿಗೆ ಕೊಡಲು ನಿರಾಕರಿಸಿದವು. ಕೊನೆಗೆ ಲೋನಾವಾಲದಲ್ಲಿ ಸಪ್ತಪದಿಯನ್ನು ತುಳಿದೆವು.

150 ಜನರು ಅತಿಥಿಗಳು ನಮ್ಮ ಮದುವೆಗೆ ಬಂದು ಹಾರೈಸಿದರು. ಪೋಷಕರು ಮನದುಂಬಿ ಹಾರೈಸಿದರು. ಸಿಯಾರಾ (ನಾಯಿ)ಳೊಂದಿಗೆ ನಮ್ಮ ಪುಟ್ಟ ಸಂಸಾರ ನೌಕೆ ಸಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ

ಸಿಎಂ ಯೋಗಿ ಸರ್ಕಾರದ ಮೊದಲ ವಿಕೆಟ್ ಪತನ

Posted by Vidyamaana on 2024-07-21 09:30:08 |

Share: | | | | |


ಸಿಎಂ ಯೋಗಿ ಸರ್ಕಾರದ ಮೊದಲ ವಿಕೆಟ್ ಪತನ

ಉತ್ತರಪ್ರದೇಶ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ ಒಂದೂವರೆ ತಿಂಗಳಲ್ಲಿ ಉತ್ತರ ಪ್ರದೇಶ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ. ಸಿಎಂ ಯೋಗಿ ಆದಿತ್ಯನಾಥ್‌ ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ ಭಿನ್ನಮತ ಸ್ಪೋಟಗೊಂಡ ಬೆನ್ನಲ್ಲೇ ಉತ್ತರಪ್ರದೇಶ ಮಂಗಳಮುಖಿಯರ ಕಲ್ಯಾಣ ಮಂಡಳಿಯ ಉಪಾಧ್ಯಕ್ಷೆ, ಯೋಗಿ ಸರ್ಕಾರದ ಸಚಿವೆ ಸೋನಮ್‌ ಚಿಶ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Recent News


Leave a Comment: