Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23
ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”
ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.
ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.
ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.
ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!
ಡಾ. ಶಿವರಾಮ ಭಟ್ ಗುರು:
ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ. ಶಿವರಾಮ ಭಟ್ ಎಂದು ನಂಬಿದ್ದರು.
ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!
ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.
Posted by Vidyamaana on 2023-05-03 07:27:07 |
ಪುತ್ತೂರು: ಪುತ್ತೂರು ಕೋರ್ಟುಆವರಣದಲ್ಲಿರುವ ವಕೀಲರ ಸಂಘದ ಕಚೇರಿಗೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತಯಾಚನೆ ನಡೆಸಿದರು.
ವಕೀಲರ ಜೊತೆ ಮಾತುಕತೆ ನಡೆಸಿದ ಅಶೋಕ್ ರೈಯವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೇಳಿಕೊಂಡರು. ಈ ಸಂದರ್ಬದಲ್ಲಿ ವಕೀಲರು ಆನಾಜೆಯಲ್ಲಿರುವ ನ್ಯಾಯಾಲಯ ಸಂಕೀರ್ಣದವರೆಗೆ ಸಿಟಿ ಬಸ್ ಸೌಕರ್ಯ ಕಲ್ಪಿಸಿದರೆ ಕಕ್ಷಿದಾರರಿಗೆ ಪ್ರಯೋಜನವಾಗಲಿದೆ.ಆನಾಜೆ ಕೋರ್ಟಿಗೆ ತೆರಳುವ ರಸ್ತೆಯನ್ನು ಅಗಲೀಕರಣ ಮಾಡಬೇಕು ಮತ್ತು ಸೋಲಾರ್ ಅಳವಡಿಕೆಯ ಕುರಿತು ಚರ್ಚಿಸಿದರು. ಶಾಸಕನಾಗಿ ಆಯ್ಕೆಯಾದಲ್ಲಿ ತಮ್ಮ ಬೇಡಿಕೆಗಳ ಕಡೆ ಹೆಚ್ಚು ಒತ್ತು ನೀಡಲಾಗುವುದು ಎಂದು ಅಶೋಕ್ ರೈ ತಿಳಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಈ ಸಂದರ್ಬದಲ್ಲಿ ಅನಿತಾಹೇಮನಾಥ ಶೆಟ್ಟಿ, ಕುಂಬ್ರ ದುರ್ಗಾಪ್ರಸಾದ್ ರೈ,ಭಾಸ್ಕರ ಗೌಡ ಕೋಡಿಂಬಾಳ ಸೇರಿದಂತೆ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು. ಬಳಿಕ ನ್ಯಾಯಾಲು ಸಿಬಂದಿಗಳು, ಪುತ್ತೂರು ತಾಲೂಕು ಕಚೇರಿಯ ಸಿಬಂದಿಗಳಲ್ಲಿಮತಯಾಚನೆ ನಡೆಸಿದರು.
Posted by Vidyamaana on 2023-04-02 10:46:05 |
ಪುತ್ತೂರು : ಕರ್ನಾಟಕ ಮುಸ್ಲಿಂ ಜಮಾತ್ ಹಾಗೂ ಎಸ್ ವೈ ಎಸ್ ಪಡೀಲ್ ಯೂನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಿ ಕಾರ್ಯಕ್ರಮವು ಮಾ 31ರಂದು ಪಡೀಲ್ ನಲ್ಲಿ ನಡೆಯಿತ್ತು. ಅಬ್ದುಲ್ ರಝಾಕ್ ಖಾಸಿಮಿ ಕೂರ್ನಡ್ಕ ದುವಾ ನೆರವೇರಿಸಿದರು.
Posted by Vidyamaana on 2023-11-05 21:30:11 |
ಬಾಗಲಕೋಟೆ (ನ.5): ಕಾಂಗ್ರೆಸ್ ಸರ್ಕಾರ ತಾನಾಗೇ ಬೀಳುತ್ತೆ ಎಂಬ ಬಿಜೆಪಿಯವರ ಹೇಳಿಕೆ ಸನ್ನಿವೇಶವನ್ನು ಬೀ*ದ ಹೋರಿಗೆ ಹೋಲಿಕೆ ಮಾಡಿ ಬಾಗಲಕೋಟೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ತಿರುಗೇಟು ನೀಡಿದರು.
ಆಪರೇಷನ್ ಕಮಲ ಮಾಡುವ ಅಗತ್ಯವಿಲ್ಲ, ತಾನಾಗೇ ಕಾಂಗ್ರೆಸ್ ಸರ್ಕಾರ ಬಿದ್ದುಹೋಗುತ್ತೆ ಎನ್ನುತ್ತಿರುವ ಬಿಜೆಪಿ ನಾಯಕರು.
ಆ ಕುರಿತು ಮಾದ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬೀ*ದ ಹೋರಿ ನಡೆಯುವಾಗ ಅದರ ಬೀ* ಅಲುಗಾಡುತ್ತಿರುತ್ತೆ. ಹೋರಿ ಬೀ* ಅಲುಗಾಡುತ್ತೆ ಅಂದ್ರೆ ಅದು ಕೆಳಗೆ ಬೀಳಲ್ಲ. ಅದು ಹತ್ತು ಕಿ.ಮೀ ಹೋದರು ಹಾಗೆಯೇ ಅಲುಗಾಡುತ್ತಿರುತ್ತದೆ. ಅಲುಗಾಡುವ ಹೋರಿ ಬೀ* ತಿನ್ನಬೇಕು ಅಂತಾ 10 ನಾಯಿ ಬೆನ್ನು ಹತ್ತುತ್ತವೆ. ಅಲುಗಾಡುತ್ತೆ ಅಂದ್ರೆ ಬಿದ್ದೆ ಬೀಳುತ್ತೆ ನಾವು ತಿನಲೇಬೇಕು ಅಂತಾ ನಾಯಿಗಳು ಅನ್ಕೊಂತಾವೆ. ಬೀ* ಕೆಳಗೆ ಬೀಳಲ್ಲ, ಇವರು ಬೆನ್ನು ಹತ್ತುವುದನ್ನು ಬಿಡಲ್ಲ. ಬಿಜೆಪಿಗರ ಸದ್ಯದ ಪರಿಸ್ಥಿತಿ ಹಿಂಗಾಗಿದೆ ಎಂದು ವ್ಯಂಗ್ಯ ಮಾಡುವ ಮೂಲಕ ಟಾಂಗ್ ಕೊಟ್ಟ ನಂಜಯ್ಯನಮಠ.
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಪತನ: ಸಂಸದ ಬಿ.ವೈ.ರಾಘವೇಂದ್ರ
ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಈಗಾಗಲೇ ಸಿಎಂ ಸ್ಥಾನ ವಿಚಾರವಾಗಿ ಮೂರು ಬಣಗಳಾಗಿ ಆಂತರಿಕ ಕಚ್ಚಾಟ ಶುರುವಾಗಿದೆ. ಕೆಲವು ತಿಂಗಳಲ್ಲೇ ಕಾಂಗ್ರೆಸ್ ಸರ್ಕಾರ ಬಿದ್ದೊಗುತ್ತೆ. ಈ ಸರ್ಕಾರ ಬಿಳಿಸಲು ಯಾವುದೇ ಬಿಜೆಪಿ ಆಪರೇಷನ್ ಬೇಕಿಲ್ಲ. ತಾನಾಗೆ ಬೀಳುತ್ತದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆ ಅವರ ಹೇಳಿಕೆಯನ್ನು ಬೀ*ದ ಹೋರಿಗೆ ಹೋಲಿಕೆ ಮಾಡಿದ ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ.
Posted by Vidyamaana on 2023-06-23 04:48:48 |
ಮಂಗಳೂರು; ವಿವಿ ಕಾಲೇಜು ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿಂದೂ ಮುಖಂಡ ಅತಿಥಿಯಾಗಿದ್ದಕ್ಕೆ ಅಪಸ್ವರ ಕೇಳಿಬಂದ ಹಿನ್ನೆಲೆಯಲ್ಲಿ ಕಾಲೇಜಿನ ಪ್ರತಿಭಾ ದಿನಾಚರಣೆ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎನ್ನಲಾಗಿದೆ.
ಮಂಗಳೂರಿನ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಜೂ.23 ರಂದು ಪ್ರತಿಭಾ ದಿನಾಚರಣೆ ಹಾಗೂ ಜೂ.24ರಂದು ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಪ್ರತಿಭಾ ದಿನಾಚರಣೆ ಕಾರ್ಯಕ್ರಮಕ್ಕೆ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮುಖ್ಯ ಅತಿಥಿಯಾಗಿ ಆಗಮಿಸುವವರಿದ್ದರು. ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು.
ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಿದ್ದಕ್ಕೆ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಲೇಜಿನಲ್ಲಿ ಕೋಮು ವಿಷಬೀಜ ಭಿತ್ತಲು ಯತ್ನ ಎಂದು ಆರೋಪಿಸಿ ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಎಂದು ಎಬಿವಿಪಿಗೆ ಎಚ್ಚರಿಕೆ ನೀಡಿದೆ. ಅಲ್ಲದೇ ಮಂಗಳೂರು ಕಮಿಷನರ್ ಹಾಗೂ ಕಾಲೇಜು ಪ್ರಾಂಶುಪಾಲರಿಗೂ ಎನ್ಎಸ್ ಯುಐ ದೂರು ನೀಡಿದ್ದು, ಶ್ರೀಕಾಂತ್ ಶೆಟ್ಟಿ ಅತಿಥಿಯಾದ್ರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿತ್ತು.ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವನಿಯೋಗ ಮಂಗಳೂರು ಕಮಿಷನರ್ ಭೇಟಿಯಾಗಿ ಮನವಿ ಸಲ್ಲಿಸಿತ್ತು. ಕೋಮು ಭಾವನೆ ಕೆರಳಿಸುವ ವ್ಯಕ್ತಿಗಳಿಗೆ ಸರ್ಕಾರಿ ಕಾಲೇಜು ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಕೋಮು ಭಾವನೆ ಕೆರಳಿಸುವ ಕಾರ್ಯ ಇವರಿಂದ ಆಗುತ್ತದೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತರಲಾಗಿದೆ ಎಂದಿತ್ತು. ಆದರೆ ಕಾಲೇಜು ಆಡಳಿತ ಕಾರ್ಯಕ್ರಮ ಮುಂದೂಡಿದೆ.
ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಆಡಳಿತ ಕಾರ್ಯಕ್ರಮ ಮುಂದೂಡಿದೆ. ನಾಳೆ ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಹಾಗೂ ಶನಿವಾರದ ಕಾಲೇಜು ವಾರ್ಷಿಕೋತ್ಸವ ಮುಂದೂಡಿಕೆ ಮಾಡಿದೆ. ನಾಳೆ ಎಂದಿನಂತೆ ತರಗತಿ ನಡೆಯಲಿದೆ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.
Posted by Vidyamaana on 2024-02-29 04:26:07 |
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಧಾನಸಭಾ ಕಲಾಪದಲ್ಲೂ ಭಾಗವಹಿಸಲು ಸಾಧ್ಯವಾಗದೆ ಅವರು ಇಂದು ಜಯನಗರದ ಅಫೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.ವಿಧಾನಸಭಾ ಕಲಾಪದಲ್ಲಿ ಪಾಲ್ಗೊಳ್ಳಲು ಅವರು ಇಂದು ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ್ದರು ಈ ವೇಳೆ ಅವರಿಗೆ ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ತಕ್ಷಣ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ರಾಜ್ಯಸಭಾ ಚುನಾವಣೆ ಮುಕ್ತಾಯದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದ್ದ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದೆ. ಇದಕ್ಕೂ ಮುನ್ನ ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ಗಂಟಲು ಇನ್ಫೆಕ್ಷನ್ನಿಂದ ಬಳಲುತ್ತಿದ್ದರು. ಇನ್ನು ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದಾರೆ.
Posted by Vidyamaana on 2023-12-13 21:05:17 |
ಪುತ್ತೂರು: ಮಾಧಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯವು ಪೀಳಿಗೆ ಮಾಧಕ ವ್ಯಸನಕ್ಕೆ ಬಲಿಯಾಗುತ್ತಿದೆ, ಇದು ಅತ್ಯಂತ ಗಂಭೀರ ವಿಚಾರವಾಗಿದ್ದು ಇದು ಹೀಗೇ ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು, ಸಮಾಜವನ್ನು ಹಾಳು ಮಾಡುತ್ತಿರುವ ಇಂತವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಮಾಧಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೧೪೭ ಪೆಡ್ಲರ್ಗಳ ವಿರುದ್ದ ಪ್ರಕರಣ ದಾಖಲಾಗಿದೆ, ೫೨೮ ಮಂದಿ ಮಾದಕ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಾಗಿದೆ, ಪುತ್ತೂರಿನಲ್ಲಿ ೨೬ ಪ್ರಕರಣಗಳು ದಾಖಲಾಗಿದೆ. ಇದನ್ನು ನಿಯಂತ್ರಣ ಮಾಡಲು ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.
ವ್ಯಸನ ಮುಕ್ತ ಕೇಂದ್ರಗಳನ್ನು ಆರಂಭಿಸಿ
ರಾಜ್ಯದ ಪ್ರತೀ ತಾಲೂಕುಗಳಲ್ಲಿ ಡಿ ಎಡಿಕ್ಸನ್ ಸೆಂಟರ್ಗಳನ್ನು ಆರಂಭಿಸಬೇಕು. ಈ ಕೇಂದ್ರಗಳಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಬೇಕಿದೆ. ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಿರ್ಜನ ಪ್ರದೇಶಗಳ ಬಗ್ಗೆ ಪೊಲೀಸರು ಹೆಚ್ಚು ನಿಗಾ ಇಡಬೇಕು, ಕೆಲವು ಕಡೆಗಳಲ್ಲಿ ವೆಂಟೆಡ್ ಡ್ಯಾಮ್ಗಳ ಬಳಿ ಈ ವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿದೆ. ಇದೆಲ್ಲವನ್ನೂ ತಡೆಗಟ್ಟುವ ಮೂಲಕ ಪೊಲೀಸ್ ಇಲಾಖೆ ಮಾಧಕ ವ್ಯಸನಿಗಳ ಭೇಟೆಯಾಡಬೇಕು ಎಂದು ಶಾಸಕರು ಆಗ್ರಹಿಸಿದರು.
ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಮಾಡಿ
ಪ್ರತೀ ಶಾಲಾ ಕಾಲೇಜುಗಳಲ್ಲಿ ಮಾಧಕ ದ್ರವ್ಯ ವ್ಯಸನದಿಂದ ಅಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಬೇಕು. ಈ ರೀತಿಯ ಕಾರ್ಯಕ್ರಮವನ್ನು ಮಾಡುವ ಮೂಲಕ ಯುವ ಸಮೂಹ ಮತ್ತು ಯುವ ವಿದ್ಯಾರ್ಥಿ ಸಮೂಹ ಈ ಚಟಗಳಿಗೆ ಬಲಿಯಾಗದಂತೆ ಎಚ್ಚರಿಕಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಶಾಸಕರು ಸರಕಾರವನ್ನು ಆಗ್ರಹಿಸಿದರು.
ಪುತ್ತೂರಿನಲ್ಲಿ ಡಿಎಡಿಕ್ಸನ್ ಸೆಂಟರ್ ಗೆ ಮನವಿ
ಪುತ್ತೂರಿನಲ್ಲಿ ಡಿ ಎಡಿಕ್ಸನ್ ಸೆಂಟರ್ ಪ್ರಾರಂಭ ಮಾಡುವಂತೆ ಶಾಸಕರು ಗೃಹ ಸಚಿವರಾದ ಡಾ. ಎಚ್ ಜಿ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದರು. ಈ ವಿಚಾರವನ್ನು ಪರಿಶೀಲನೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು. ದ ಕ ಜಿಲ್ಲೆಯಲ್ಲಿ ಮಂಗಳೂರಿನಲ್ಲಿ ಮಾತ್ರ ಡಿ ಎಡಿಕ್ಸನ್ ಕೇಂದ್ರವಿದ್ದು ಉಪ ವಿಭಾಗವಾದ ಪುತ್ತೂರಿನಲ್ಲಿ ವ್ಯಸನ ಮುಕ್ತ ಕೇಂದ್ರವನ್ನು ಆರಂಭಿಸಬೇಕು ಎಂದು ಶಾಸಕರು ಮನವಿ ಮಾಡಿದರು.
ಮಾಧಕ ವ್ಯಸನಿಗಳ ವಿರುದ್ದ ಯುದ್ದ ಸಾರಿದ್ದೇವೆ: ಗೃಹ ಸಚಿವರು
ಮಾಧಕ ವ್ಯಸನಿಗಳಿಂದ ಸಮಾಜಕ್ಕೆ ಕಂಠಕ ಉಂಟಾಗುತ್ತಿದೆ. ಇಂಥವರ ವಿರುದ್ದ ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವ್ಯಸನಿಗಳ ಭೇಟೆಯಾಡುತ್ತಿದ್ದೇವೆ. ಈಗಾಗಲೇ ರಾಜ್ಯಾದ್ಯಂತ ಕಾರ್ಯಾಚರಣೆ ಪ್ರಾರಂಭವಾಗಿದೆ. ನೂರಾರು ಕೋಟಿ ರೂ ಬೆಲೆ ಬಾಳುವ ಮಾಧಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯದಲ್ಲೇ ಅತೀ ಹೆಚ್ಚು ಅಂದರೆ ಸುಮಾರು ೨೧ ಕೋಟಿ ರೂ ಮೌಲ್ಯದ ಮಾಧಕ ವಸ್ತುಗಳನ್ನು ಒಂದೇ ದಿನದಲ್ಲಿ ವಶಕ್ಕೆ ಪಡೆಯಲಾಗಿದೆ. ದ ಕ ಜಿಲ್ಲೆಯನ್ನು ಒಂದು ವರ್ಷದೊಳಗೆ ವ್ಯಸನ ಮುಕ್ತ ಅಥವಾ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವುದಾಗಿ ಪೊಲೀಸರು ಒಪ್ಪಿಕೊಂಡಿದ್ದು ಅದನ್ನು ಚಾಲೆಂಜಗಿ ಸ್ವೀಕರಿಸಿದ್ದಾರೆ. ಮಾಧಕ ವ್ಯಸನಿಗಳ ಮತ್ತು ಅದನ್ನು ಮರಾಟ ಮಾಡುವ ದುಷ್ಕರ್ಮಿಗಳ ವಿರುದ್ದ ನಾವು ಈಗಾಗಲೇ ಯುದ್ದವನ್ನೇ ಸಾರಿದ್ದು , ಈಗಾಗಲೇ ರಾಜ್ಯದಲ್ಲಿ ೪೬ ಕಡೆಗಳಲ್ಲಿ ವಿಶೇಷ ಠಾಣೆಗಳನ್ನು ತೆರೆಯಲಾಗಿದೆ,ಇದರಲ್ಲಿ ಯವುದೇ ರಾಜಿಯಿಲ್ಲ ಎಂದು ಗೃಹ ಸಚಿವ ಡಾ. ಎಚ್ ಜಿ ಪರಮೇಶ್ವರ್ ಅವರು ಸಭೆಯಲ್ಲಿ ಸಪಷ್ಟಪಡಿಸಿದರು.