ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ನಿಫಾ ವೈರಸ್ ಎಂದರೇನು? ಲಕ್ಷಣಗಳೇನು ಗೊತ್ತಾ? ಈ ಸೋಂಕಿಗೆ ಚಿಕಿತ್ಸೆ ಇಲ್ಲವೇ?

Posted by Vidyamaana on 2023-09-14 16:49:44 |

Share: | | | | |


ನಿಫಾ ವೈರಸ್ ಎಂದರೇನು? ಲಕ್ಷಣಗಳೇನು ಗೊತ್ತಾ? ಈ ಸೋಂಕಿಗೆ ಚಿಕಿತ್ಸೆ ಇಲ್ಲವೇ?

1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಫಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಫಾ ವೈರಸ್ ಎಂದು ಕರೆಯುತ್ತಾರೆ. ನಿಫಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಫಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ.ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ


ವೈರಸ್ ಹೇಗೆ ಹರಡುತ್ತದೆ?: ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನವುದರಿಂದ ವೈರಸ್‌ ಹರಡುವ ಸಾಧ್ಯತೆಗಳಿವೆ. ಅಲ್ಲದೆ ಇದೊಂದು ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.


ನಿಫಾ ವೈರಸ್ ಲಕ್ಷಣಗಳೇನು?

* ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ

* ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ

* ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ

* ಬಳಿಕ ಪ್ರಜ್ಞಾಹೀನರಾಗುತ್ತಾರೆ

* ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ

* ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು

ನಿಫಾ ವೈರಸ್ ವಿಶ್ವದ ಯಾವೆಲ್ಲಾ ಭಾಗಗಳಲ್ಲಿ

ಹರಡಿತ್ತು?

ನಿಫಾ ವೈರಸ್ ಮೊದಲು ಕಾಣಿಸಿಕೊಂಡಿದ್ದು, 1998ರಲ್ಲಿ.. ಮಲೇಷ್ಯಾ ಹಾಗೂ ಸಿಂಗಪುರ ದೇಶಗಳಲ್ಲಿ ನೂರಾರು ಜನರನ್ನು ಈ ಮಹಾಮಾರಿ ಬಲಿ ತೆಗೆದಿಕೊಂಡಿತ್ತು. 300ಕ್ಕೂ ಹೆಚ್ಚು ಮಂದಿ ಸೋಂಕಿತರಾಗಿದ್ದರು. ಒಟ್ಟು ಸೋಂಕಿತರ ಪೈಕಿ ಶೇ. 70 ರಿಂದ 86ರಷ್ಟು ಮಂದಿ ಸಾವನ್ನಪ್ಪಿದ್ದರು. 1998 ರಿಂದ 2015ರವರೆಗೆ ವಿಶ್ವಾದ್ಯಂತ ಒಟ್ಟು 600ಕ್ಕೂ ಹೆಚ್ಚು ನಿಫಾ ಪ್ರಕರಣಗಳು ವರದಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ತೆ ಹೇಳಿದೆ. 2001ರಲ್ಲಿ ಭಾರತ ಹಾಗೂ ಬಾಂಗ್ಲಾ ದೇಶಗಳಲ್ಲಿ ಒಟ್ಟು 91 ಮಂದಿ ನಿಫಾ ವೈರಸ್ ಸೋಂಕಿಗೆ ತುತ್ತಾಗಿದ್ದರು. ಈ ಪೈಕಿ 62 ಮಂದಿ ಸಾವನ್ನಪ್ಪಿದ್ದರು. 2018ರಲ್ಲಿ


ಕೇರಳದಲ್ಲಿ 21 ಮಂದಿ ನಿಫಾ ಮಾರಿಗೆ600ಕ್ಕೂ ಹೆಚ್ಚು ನಿಫಾ ಪ್ರಕರಣಗಳು ವರದಿಯಾಗಿವ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. 2001ರಲ್ಲಿ ಭಾರತ ಹಾಗೂ ಬಾಂಗ್ಲಾ ದೇಶಗಳಲ್ಲಿ ಒಟ್ಟು 91 ಮಂದಿ ನಿಫಾ ವೈರಸ್ ಸೋಂಕಿಗೆ ತುತ್ತಾಗಿದ್ದರು. ಈ ಪೈಕಿ 62 ಮಂದಿ ಸಾವನ್ನಪ್ಪಿದ್ದರು. 2018ರಲ್ಲಿ ಕೇರಳದಲ್ಲಿ 21 ಮಂದಿ ನಿಫಾ ಮಾರಿಗೆ ಬಲಿಯಾಗಿದ್ದರು. 2019 ಹಾಗೂ 2021ರಲ್ಲೂ ಕೇರಳದಲ್ಲಿ ಕಾಣಿಸಿಕೊಂಡಿದ್ದ ನಿಫಾ, ಇದೀಗ ಮತ್ತೆ ಕೇರಳದಲ್ಲಿ ತಲೆ ಎತ್ತಿದೆ.

ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

Posted by Vidyamaana on 2024-07-03 18:55:10 |

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಉಡುಪಿ ವಿಶಾಲ ಗಾಣಿಗ ಕೊಲೆ ಕೇಸ್

Posted by Vidyamaana on 2024-02-03 17:52:10 |

Share: | | | | |


ಉಡುಪಿ ವಿಶಾಲ ಗಾಣಿಗ ಕೊಲೆ ಕೇಸ್

ಉಡುಪಿ, ಫೆ 03: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.


ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.

2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.




ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್ 


ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್‌ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

Posted by Vidyamaana on 2023-10-12 01:26:40 |

Share: | | | | |


ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

ಬೆಂಗಳೂರು: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್‌) ಸೆಲ್‌ ಬ್ರಾಡ್‌ ಕಾಸ್ಟಿಂಗ್‌ ಮೂಲಕ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್‌ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್‌ ಶಬ್ದದೊಂದಿಗೆ ಸಂದೇಶ ಫ್ಲಾಶ್‌ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.

ಸಂದೇಶದಲ್ಲಿ ಏನಿರಲಿದೆ?

ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಸೆಲ್‌ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್‌ ಮೂಲಕ ಕಳುಹಿಸಿದ ಸ್ಯಾಂಪಲ್‌ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ. ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್‌ – ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.


ಪ್ರಯೋಜನ ಏನು?

ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್‌ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್‌ ಬಳಕೆದಾರರಿಗೆ ಈ ಫ್ಲಾಶ್‌ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ.


ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ. 12ರಂದು ರಾಜ್ಯದಲ್ಲಿ ನಡೆಯಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.

– ರಾಜಕುಮಾರ್‌, ಸಹಾಯಕ ನಿರ್ದೇಶಕ (ಟೆಕ್ನಾಲಜಿ), ದೂರಸಂಪರ್ಕ ಇಲಾಖೆ.

ಕದ್ದ ಮೊಬೈಲ್‌ಗಳಿಗೆ ಫ್ಲ್ಯಾಶ್ ಮಾಡಿಕೊಡಲು ನಿರಾಕರಿಸಿದ ಯುವಕನಿಗೆ ಹಲ್ಲೆ: ಸಾದಿಯ ಯ ಗ್ಯಾಂಗ್ ಅರೆಸ್ಟ್

Posted by Vidyamaana on 2023-10-04 15:48:47 |

Share: | | | | |


ಕದ್ದ ಮೊಬೈಲ್‌ಗಳಿಗೆ ಫ್ಲ್ಯಾಶ್ ಮಾಡಿಕೊಡಲು ನಿರಾಕರಿಸಿದ ಯುವಕನಿಗೆ ಹಲ್ಲೆ: ಸಾದಿಯ ಯ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಕದ್ದ ಮೊಬೈಲ್​​ಗಳಿಗೆ ಫ್ಲ್ಯಾಶ್ ಮಾಡಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ಆರೋಪದಡಿ ಯುವತಿ ಸೇರಿದಂತೆ ಮೂವರು ಆರೋಪಿಗಳನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಗ್ಗಡೆ ನಗರದ ನಿವಾಸಿ ಇಮ್ರಾನ್ ಉಲ್ಲಾಖಾನ್ ಎಂಬಾತ ಹಲ್ಲೆಗೊಳಗಾಗಿದ್ದಾನೆ. ಈತ ನೀಡಿದ ದೂರಿನ ಮೇರೆಗೆ ಸಾದಿಯಾ, ಸೊಹೈಲ್ ಹಾಗೂ ಉಮರ್ ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ‌.‌ ಈತನ ಪತ್ತೆ ಕೆಲಸ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಹಲ್ಲೆಗೊಳಗಾದ ಇಮ್ರಾನ್, ಫೋನ್ ಪೇ ಕ್ಯೂ ಆರ್ ಕೋಡ್ ಬೋರ್ಡ್ ಹಾಕುವ ಕೆಲಸ ಮಾಡಿಕೊಂಡಿದ್ದರು. ಮೊಬೈಲ್ ಫ್ಲ್ಯಾಶ್ ಮಾಡುವ ಬಗ್ಗೆ ಅರಿತುಕೊಂಡಿದ್ದರು. ಈ ಮಧ್ಯೆ ತಲೆಮರೆಸಿಕೊಂಡಿರುವ ಶಾಹಿದ್​​​ಗೆ‌ ಇಮ್ರಾನ್ ಪರಿಚಯವಾಗಿತ್ತು. ಫ್ಲ್ಯಾಶ್ ಮಾಡುವ ಕಲೆ ಅರಿತಿದ್ದ ಇಮ್ರಾನ್​ಗೆ ಶಾಹಿದ್ ಕದ್ದ ಮೊಬೈಲ್‌ ನೀಡಿ ಪ್ಲ್ಯಾಶ್ಮಾಡಿಸಿಕೊಂಡಿದ್ದರು. ಅದೇ ರೀತಿ ಸಾದಿಯಾ ಸಹ ತಮ್ಮ ಮೊಬೈಲ್ ನೀಡಿ ರೀ ಸೆಟ್​ ಮಾಡಿಸಿಕೊಂಡಿದ್ದಳು.


ಪ್ರತಿನಿತ್ಯ ಮೊಬೈಲ್ ಫ್ಲ್ಯಾಶ್ ಮಾಡಿಸಿಕೊಳ್ಳುವಂತೆ ಆರೋಪಿಗಳು ನೀಡುತ್ತಿರುವುದನ್ನು ಇಮ್ರಾನ್ ಕಂಡು ಅನುಮಾನಗೊಂಡಿದ್ದನು.‌ ಕಳ್ಳತನ ಮಾಡಿದ ಮೊಬೈಲ್‌ಗಳನ್ನು ನೀಡುತ್ತಿರುವ ಬಗ್ಗೆ ಅರಿತು ಮೊಬೈಲ್‌ಗಳನ್ನ ಪ್ಲ್ಯಾಶ್ ಮಾಡಿಸಲು ನಿರಾಕರಿಸಿದ್ದನು. ಅಲ್ಲದೇ ಆರೋಪಿಗಳ ಮೊಬೈಲ್ ‌ಕರೆ ಸ್ವೀಕರಿಸುವುದನ್ನೇ ಬಿಟ್ಟಿದ್ದ. ಇದರಿಂದ ಕೆಂಡಾಮಂಡಲವಾದ ಆರೋಪಿ ಸಾದಿಯಾ ನಿರಂತರ ಪೋನ್ ಮಾಡಿ ಕೊನೆಗೆ ಇಮ್ರಾನ್​ನನ್ನು ಸಂಪರ್ಕಿಸಿ ಭೇಟಿಯಾಗುವಂತೆ ಹೇಳಿದ್ದಳು.


ಹೆಗಡೆನಗರದ ಟೀ ಅಂಗಡಿ ಬಳಿ ಬರುವಂತೆ ಇಮ್ರಾನ್ ಹೇಳಿದ್ದರು. ಕೆಲ ಹೊತ್ತಿನ ಬಳಿಕ ಸಾದಿಯಾ ತನ್ನ ಜೊತೆಗಿದ್ದ‌ ಸಹಚರರನ್ನು ಕಳುಹಿಸಿದ್ದಾಳೆ. ಭೇಟಿಯಾದ ಇಮ್ರಾನ್‌ನನ್ನು ನೋಡುತ್ತಿದ್ದಂತೆ ಲಾಂಗ್​ಗಳಿಂದ ಹಲ್ಲೆಗೆ ಮುಂದಾಗಿದ್ದಾರೆ. ತಪ್ಪಿಸಿಕೊಳ್ಳುಲು ಯತ್ನಿಸಿದ್ದಇಮ್ರಾನ್‌ನ ಬೆನ್ನು, ಬಲಗೈ ಮಣಿಕಟ್ಟಿಗೆ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಖಾಸಗಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇಮ್ರಾನ್ ನೀಡಿದ ದೂರಿನ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಪ್ರಸಾದ್ ತಿಳಿಸಿದರು.


ಆರೋಪಿ ಸಾದಿಯಾ ಹುಡುಗರನ್ನು ಸಂಘಟಿಸಿ ಮೊಬೈಲ್ ಕಳ್ಳತನ ಮಾಡಿಸುತ್ತಿದ್ದಳು. ಈ ಹಿಂದೆ ಜಾಮೀನುಸಹಿತ ಪ್ರಕರಣಗಳಲ್ಲಿ ಭಾಗಿಯಾಗಿದ್ದಳು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪುತ್ತೂರು: ಹಿಂದೂ ಸಂಘಟನೆಯ ನಾಲ್ವರು ಕಾರ್ಯಕರ್ತರ ಗಡಿಪಾರು

Posted by Vidyamaana on 2023-05-08 17:31:02 |

Share: | | | | |


ಪುತ್ತೂರು: ಹಿಂದೂ ಸಂಘಟನೆಯ ನಾಲ್ವರು ಕಾರ್ಯಕರ್ತರ ಗಡಿಪಾರು

ಪುತ್ತೂರು: ಕ್ರಿಮಿನಲ್ ಹಿನ್ನೆಲೆಯುಳ್ಳ ನಾಲ್ಕು ಮಂದಿಯನ್ನು ಪುತ್ತೂರಿನಿಂದ ಗಡಿಪಾರು ಮಾಡಲಾಗಿದೆ.ಹಿಂದೂ ಸಂಘಟನೆ ಕಾರ್ಯಕರ್ತರಾಗಿರುವ ಬನ್ನೂರು ಮೂಲದ ಪ್ರಜ್ವಲ್, ಪ್ರತಾಪ್, ಜಗ್ಗ ಯಾನೆ ಅಚ್ಚು, ಅವಿನಾಶ್ ಅವರು ಗಡಿಪಾರುಆಗಿದ್ದಾರೆ.ಇವರು ಚುನಾವಣೆಯ ಸಂದರ್ಭ ಶಾಂತಿ ಭಂಗ ಮಾಡಬಹುದೆಂಬ ನಿಟ್ಟಿನಲ್ಲಿ ನಗರ ಠಾಣೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

Recent News


Leave a Comment: