ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಬೆಳ್ಳಾರೆ :ಎನ್‌ಐಎ ಅಧಿಕಾರಿಗಳ ತಂಡ ಮನೆಯೊಂದಕ್ಕೆ ದಿಢೀ‌ರ್ ದಾಳಿ

Posted by Vidyamaana on 2024-03-05 10:14:24 |

Share: | | | | |


ಬೆಳ್ಳಾರೆ :ಎನ್‌ಐಎ ಅಧಿಕಾರಿಗಳ ತಂಡ ಮನೆಯೊಂದಕ್ಕೆ ದಿಢೀ‌ರ್ ದಾಳಿ

ಬೆಳ್ಳಾರೆ, ಮಾ. 05. ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ.ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, . ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Posted by Vidyamaana on 2024-06-18 10:05:12 |

Share: | | | | |


ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ  ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಇಂದು (ಜೂ.18) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಬೆಳ್ತಂಗಡಿ: SDPI ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Posted by Vidyamaana on 2023-05-01 11:09:01 |

Share: | | | | |


ಬೆಳ್ತಂಗಡಿ: SDPI ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

.

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಬೆಳ್ತಂಗಡಿ ತಾಲೂಕಿನ ಲಾಯಿಲ, ಗುರುವಾಯನಕೆರೆ, ಪಡಂಗಡಿ, ಕಲ್ಲೇರಿ, ಕುಪ್ಪೆಟ್ಟಿ, ಸುನ್ನತ್ ಕೆರೆ, ಚಾರ್ಮಾಡಿ, ಕಕ್ಕಿಂಜೆ, ಪುಂಜಾಲಕಟ್ಟೆ, ಕಟ್ಟೆ, ಕಾಜೂರು ಪ್ರದೇಶಗಳಲ್ಲಿ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. 

ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ : ಇಬ್ಬರು ವಿದ್ಯಾರ್ಥಿಗಳ ಬಂಧನ

Posted by Vidyamaana on 2023-08-12 11:14:48 |

Share: | | | | |


ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ : ಇಬ್ಬರು ವಿದ್ಯಾರ್ಥಿಗಳ ಬಂಧನ

ಹುಬ್ಬಳ್ಳಿ: ಖಾಸಗಿ ಕಾಲೇಜುವೊಂದರ ವಿದ್ಯಾರ್ಥಿನಿಯ ಹೆಸರಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ತಿರುವು ಪಡೆದಿದ್ದು, ಮೂಲ ಆರೋಪಿಗಳಿಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಏಳು ದಿನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಶಂಕಿತ ಆರೋಪಿ ಹಾಗೂ ಖಾಸಗಿ ಕಾಲೇಜಿನ ಹಳೇ ವಿದ್ಯಾರ್ಥಿ ರಜನಿಕಾಂತ್ ತಳವಾರ ಎಂಬಾತನನ್ನು ಸಂಶಯದ ಮೇಲೆ ಬಂಧಿಸಿ ಏಳು ದಿನ ವಿಚಾರಣೆಗೆ ಒಳಪಡಿಸಿದ್ದರು. ಅಷ್ಟೇ ಅಲ್ಲದೆ ಈ ಪ್ರಕರಣದ ಹಿಂದೆ ಇನ್ನೂ ಕೆಲವರು ಇದ್ದಾರೆ ಎಂಬ ಸಂಶಯದ ಮೇರೆಗೆ ತನಿಖೆ ಮುಂದುವರಿಸಿದ್ದರು.


ಜಾಲತಾಣದ ಅಧಿಕೃತ ಮಾಹಿತಿಯ ಹಿಂದೆ ಬಿದ್ದಾಗ ರಜನಿಕಾಂತ್ ಆರೋಪಿ ಅಲ್ಲ ಎಂಬುದು ಪೊಲೀಸರಿಗೆ ಸ್ಪಷ್ಟವಾಗಿದೆ. ಶಂಕಿತ ಆರೋಪಿಯಾಗಿದ್ದ ರಜನಿಕಾಂತ್‌ನ ಇನ್‌ಸ್ಟಾಗ್ರಾಂ ಖಾತೆ, ಇ-ಮೇಲ್ ಐಡಿ ಹಾಗೂ ಸಾಮಾಜಿಕ ಜಾಲತಾಣದ ವಿವವರಗಳನ್ನು ಪೊಲೀಸರು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆದರೆ ಈ ವರದಿ ಬರುವವರೆಗೂ ಉಳಿದ ಆರೋಪಿಗಳನ್ನು ಪತ್ತೆ ಮಾಡುವುದು ಪೊಲೀಸರಿಗೆ ಕಷ್ಟವಾಗಿತ್ತು. ಪ್ರಕರಣ ಗಂಭೀರವಾಗಿದ್ದರಿಂದ ಸೈಬರ್ ಠಾಣಾ ಪೊಲೀಸರು ಹ್ಯಾಕ್ ಮಾಡಲಾದ ವಿದ್ಯಾರ್ಥಿನಿಯರ ಇನ್‌ಸ್ಟಾಗ್ರಾಂ ಖಾತೆ ವಿವರ ಸಂಗ್ರಹಿಸಿ ಫೇಸ್‌ಬುಕ್ ಸಂಸ್ಥೆಗೆ ಮಾಹಿತಿ ನೀಡಲು ಪತ್ರ ಬರೆದಿದ್ದರು.


ಅಲ್ಲಿಂದ ದೊರೆತ ಅಧಿಕೃತ ಮಾಹಿತಿಯೇ ಆರೋಪಿಗಳ ಪತ್ತೆಗೆ ಸಹಕಾರಿಯಾಗಿದೆ. ಬಂಧನಕ್ಕೆ ಒಳಗಾದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಓದುತ್ತಿರುವ ಕಾಲೇಜಿನಲ್ಲಿಯೇ ಅಧ್ಯಯನ ಮಾಡುತ್ತಿದ್ದು, ಒಬ್ಬ ವಿದ್ಯಾರ್ಥಿನಿ ಇನ್ನೊಬ್ಬ ವಿದ್ಯಾರ್ಥಿಯ ಜೊತೆ ಸಲುಗೆಯಿಂದ ಇದ್ದಳು. ಅದನ್ನು ಸಹಿಸದ ಆರೋಪಿ ತಮ್ಮ ಊರಿನ ಮತ್ತೊಂದು ಕಾಲೇಜಿನಲ್ಲಿ ಓದುತ್ತಿದ್ದ ಸ್ನೇಹಿತನ ಸಹಾಯ ಪಡೆದು, ಆ ವಿದ್ಯಾರ್ಥಿನಿಯ ಇನ್‌ಸ್ಟಾಗ್ರಾಂ ಖಾತೆ ಹ್ಯಾಕ್ ಮಾಡಿಸಿದ್ದಾನೆ. ತನ್ನ ಹೆಸರು ಎಲ್ಲಿಯೂ ಬರಬಾರದು ಎಂದು ದಿಕ್ಕು ತಪ್ಪಿಸಲು ಪೊಲೀಸ್ ಬಗ್ಗೆ ಅವಹೇಳನ ಪದ ಬಳಸಿ ಪೋಸ್ಟ್ ಮಾಡಿದ್ದ. ಎಲ್ಲಾ ವಿಚಾರ ತಿಳಿದ ಬೆನ್ನಲ್ಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Watch Video : ಸಿಎಂ ಯೋಗಿ ಭಾಷಣದ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದ ಭದ್ರತಾ ಕಮಾಂಡೋ ವಿಡಿಯೋ ವೈರಲ್

Posted by Vidyamaana on 2024-04-03 17:15:53 |

Share: | | | | |


Watch Video : ಸಿಎಂ ಯೋಗಿ ಭಾಷಣದ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದ ಭದ್ರತಾ ಕಮಾಂಡೋ ವಿಡಿಯೋ ವೈರಲ್

ನವದೆಹಲಿ : ನಿನ್ನೆ (ಏಪ್ರಿಲ್ 2)ರಂದು ಪಿಲಿಭಿತ್‌ನಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಭಾಷಣದ ಸಂದರ್ಭದಲ್ಲಿ ಅನಿರೀಕ್ಷಿತ ತಿರುವಿನಲ್ಲಿ, ಅವರ ಹಿಂದೆ ನಿಯೋಜಿಸಲಾಗಿದ್ದ ಭದ್ರತಾ ಕಮಾಂಡೋ ವೇದಿಕೆಯ ಮೇಲೆ ಹಠಾತ್ ಕುಸಿದುಬಿದ್ದರು. 2024ರ ಲೋಕಸಭೆ ಚುನಾವಣೆಗೆ ಮುನ್ನ ಸಿಎಂ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.


Watch Video : ಸಿಎಂ ಯೋಗಿ ಭಾಷಣದ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದ ಭದ್ರತಾ ಕಮಾಂಡೋ ವಿಡಿಯೋ ವೈರಲ್

ಈಶ್ವರಪ್ಪಗೆ ಬರೀ 30 ಸಾವಿರ ಮತ; ಠೇವಣಿ ನಷ್ಟ!

Posted by Vidyamaana on 2024-06-05 15:54:31 |

Share: | | | | |


ಈಶ್ವರಪ್ಪಗೆ ಬರೀ 30 ಸಾವಿರ ಮತ; ಠೇವಣಿ ನಷ್ಟ!

ಶಿವಮೊಗ್ಗ (ಜೂ.5) : ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕುಟುಂಬದ ವಿರುದ್ಧ ಬಂಡೆದ್ದು, ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ, ಬಿಜೆಪಿ ಅಭ್ಯರ್ಥಿ ಬಿ. ವೈ.ರಾಘವೇಂದ್ರ ಅವರ ವಿರುದ್ಧ ಸ್ಪರ್ಧಿಸಿ ಆತಂಕ ಮೂಡಿಸಿದ್ದ ಕೆ. ಎಸ್.ಈಶ್ವರಪ್ಪ ಅವರು ಚುನಾವಣೆಯಲ್ಲಿ ನಿರೀಕ್ಷಿತ ಮತ ಪಡೆಯದೆ ಠೇವಣಿ ಕಳೆದುಕೊಳ್ಳುವ ಮೂಲಕ ಹೀನಾಯ ಸೋಲು ಅನುಭವಿಸಿದ್ದಾರೆ.

ರಾಘವೇಂದ್ರ 778721 ಮತಗಳನ್ನು ಪಡೆದು ಜಯಭೇರಿ ಬಾರಿಸಿದರೆ, ಈಶ್ವರಪ್ಪ ಪರ ಕೇವಲ 30050 ಮತಗಳು ಚಲಾವಣೆಯಾಗಿವೆ.

Recent News


Leave a Comment: