ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


ಪಡುವನ್ನೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-04-27 12:24:40 |

Share: | | | | |


ಪಡುವನ್ನೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು; ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆ ದಿನೇ ದಿನೇ ಏರುತ್ತಲೇ ಇದು ಜನ ಸಾಮಾನ್ಯರನ್ನು ತತ್ತರಿಸುವಂತೆ ಮಾಡಿದ್ದು ಜನ ಏನೂ ಮಾಡಲಾಗದ ಸ್ಥಿತಿಯಲ್ಲಿ ಕಣ್ಣೀರು ಹಾಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ

Posted by Vidyamaana on 2023-08-29 07:34:23 |

Share: | | | | |


ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಶೇರು ಪ್ರಮಾಣ ಪತ್ರ ವಿತರಣಾ ಸಮಾರಂಭ

ಪುತ್ತೂರು: ತೆಂಗು ಕೃಷಿಯನ್ನು ವೈಜ್ಞಾನಿಕ ಪದ್ಧತಿಯಲ್ಲಿ ನಡೆಸಿದಾಗ ಅಧಿಕ ಇಳುವರಿ ಪಡೆಯಲು ಸಾಧ್ಯ. ಉಪಬೆಳೆ ಎನ್ನುವ ಮನಸ್ಥಿತಿಯಿಂದ ಹೊರಬರಬೇಕು ಎಂದು ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಡಾ.ರಶ್ಮಿ ಆರ್. ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿ ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇದರ ಜಂಟಿ ಸಹಯೋಗದಲ್ಲಿ ಆ. 28ರಂದು ಜೈನ ಭವನದಲ್ಲಿ ನಡೆದ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ಶೇರು ಪ್ರಮಾಣ ಪತ್ರ ವಿತರಣೆ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ತೆಂಗಿಗೆ ವಿಶೇಷ ಆಶಕ್ತಿ ನೀಡದೇ ಇರುವುದರಿಂದ ಇಂದು ಇಳುವರಿ ಕಡಿಮೆಯಾಗಿದೆ. ಜೊತೆಗೆ ಸಮಗ್ರ ಪೋಷಕಾಂಶಗಳ ಕೊರತೆಯಿಂದ ನುಸಿ ರೋಗಗಳಂತ ಕಾಯಿಲೆಗಳು ಬಾಧಿಸುತ್ತಿವೆ. ಆದ್ದರಿಂದ ಕರಾವಳಿಯ ಈ ಭಾಗದಲ್ಲಿ ಮಣ್ಣಿಗೆ ಆವಶ್ಯಕವಾದ ಸಾರಜನಕ, ರಂಜಕ, ಪೊಟ್ಯಾಶ್ಗಳಂತ ಪ್ರಧಾನ ಪೋಷಕಾಂಶ ನೀಡಬೇಕು. ಮಣ್ಣು ಪರೀಕ್ಷೆಯೂ ಅಗತ್ಯವಾಗಿದ್ದು, ಕನಿಷ್ಠ 2 ವರ್ಷಕ್ಕೊಮ್ಮೆ ಮಣ್ಣು ಪರೀಕ್ಷೆ ಮಾಡುವ ಸಂಪ್ರದಾಯ ರೂಢಿಸಿಕೊಳ್ಳಬೇಕು. ಹೀಗೆ ಪ್ರತಿ ಹಂತದಲ್ಲೂ ತೆಂಗಿಗೆ ವಿಶೇಷ ಆಸಕ್ತಿ ವಹಿಸಿ ಕೆಲಸ ಮಾಡಿದಾಗ ಪ್ರಧಾನ ಬೆಳೆಯಾಗಿ, ಉತ್ತಮ ಇಳುವರಿ ಪಡೆಯಲು ಸಾಧ್ಯ ಎಂದರು.

ಬೆಂಬಲ ಬೆಲೆಗೆ ಆಗ್ರಹಿಸಿ ಅ. 2ರಂದು ರಾಜಭವನ ಚಲೋ: ರವಿಕಿರಣ್ ಪುಣಚ

ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಿ, ತೆಂಗಿನಕಾಯಿಯ ಮೌಲ್ಯವರ್ಧನೆಯ ಗುಟ್ಟು ಎಲ್ಲರಿಗೂ ತಿಳಿದಿದೆ. ಆದರೆ ಇದರಿಂದ ಎಷ್ಟು ಆದಾಯ ಬರಬಹುದು ಎನ್ನುವ ಆಲೋಚನೆ ಯಾರಿಗೂ ಇಲ್ಲ. ಒಂದು ಮರದಿಂದ 3 ಸಾವಿರ ರೂ.ದಿಂದ 5 ಸಾವಿರ ರೂ.ವರೆಗೆ ಆದಾಯ ಪಡೆಯಬಹುದು. ಆದ್ದರಿಂದ ರೈತರು ಈ ದಿಶೆಯಲ್ಲಿ ಆಲೋಚನೆ ಮಾಡಬೇಕು. ಇಷ್ಟೆಲ್ಲಾ ಇದ್ದರೂ, ರಾಜಕೀಯದ ಇಚ್ಚಾಶಕ್ತಿಯ ಕೊರತೆಯಿಂದಾಗಿ ತೆಂಗಿನಕಾಯಿಯನ್ನು ಖರೀದಿಸಲು ಸರಕಾರಿ ವ್ಯವಸ್ಥೆಗಳು ಇಲ್ಲ ಎನ್ನುವುದು ಬೇಸರದ ಸಂಗತಿ. ಆದ್ದರಿಂದ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 20 ಸಾವಿರ ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರಕಾರ ನಿಗದಿಪಡಿಸಬೇಕು ಹಾಗೂ ರಾಜ್ಯ ಸರಕಾರ 5 ಸಾವಿರ ರೂ. ಪ್ರೋತ್ಸಾಹ ಧನ ನೀಡಬೇಕು ಎಂಬ ಆಗ್ರಹವನ್ನು ಮುಂದಿಟ್ಟುಕೊಂಡು ಅಕ್ಟೋಬರ್ 2ರಂದು ತಿಪಟೂರಿನಿಂದ ರಾಜಭವನ ಚಲೋ ಪಾದಯಾತ್ರೆ ನಡೆಯಲಿದೆ. ಅಕ್ಟೋಬರ್ 9ರಂದು ಫ್ರೀಡಂ ಪಾರ್ಕಿನಲ್ಲಿ ಬೃಹತ್ ಕಲ್ಮಿನೇಷನ್ ನಡೆಯಲಿದೆ ಎಂದರು.

ರೈತರೇ ವಿಜ್ಞಾನಿಗಳಾಗಬೇಕು: ಕಡಮಜಲು ಸುಭಾಷ್ ರೈ

ವಿಜಯ ಕರ್ನಾಟಕ ಸೂಪರ್ ಸ್ಟಾರ್ ಪ್ರಶಸ್ತಿ ಪುರಸ್ಕೃತ ಕೃಷಿಕ ಕಡಮಜಲು ಸುಭಾಸ್ ರೈ ಮಾತನಾಡಿ, ಉಪಬೆಳೆಯಾಗಿರುವ ತೆಂಗಿಗೆ ವೈಜ್ಞಾನಿಕ ವಿಧಾನ ಅಳವಡಿಸಿಕೊಳ್ಳಬೇಕು. ಇದರಿಂದ ಅಧಿಕ ಲಾಭ ಗಳಿಸಲು ಸಾಧ್ಯ. ಬದುಕಿಗೆ ಪೂರಕವಾಗಿ ಸಮಗ್ರ ಕೃಷಿ ಮಾಡಿದಾಗ ಆರ್ಥಿಕ ಅಭಿವೃದ್ಧಿ ಸಾಧ್ಯ. ಇದಕ್ಕಾಗಿ ಲ್ಯಾಬಿನಲ್ಲಿ ಆಗುವ ಪ್ರಯೋಗಗಳನ್ನು ಮಣ್ಣಿಗೆ ತರುವ ಕೆಲಸ ಆಗಬೇಕು. ಈ ಕೆಲಸವನ್ನು ಕೃಷಿಕರೇ ಮಾಡಬೇಕಾಗಿದೆ ಎಂದರು.

ಕ್ಷಿಪ್ರಸಾಲಕ್ಕಾಗಿ ಒಡಂಬಡಿಕೆ: ಪೂರ್ಣಿಮಾ ಎನ್.

ಮಾನಸಗಂಗಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಎನ್. ಮಾತನಾಡಿ, ರೈತರಿಗೆ ಅಗತ್ಯವಿರುವ ಕೃಷಿ ಸಲಕರಣೆ, ರಸಗೊಬ್ಬರಗಳನ್ನು ಪೂರೈಸುವ ದೃಷ್ಟಿಯಿಂದ ಕ್ಷಿಪ್ರ ಗತಿಯಲ್ಲಿ ಸಾಲ ಸೌಲಭ್ಯ ನೀಡಲು ನಮ್ಮ ಸಂಘ ಮುಂದೆ ಬಂದಿದೆ. ಈ ನಿಟ್ಟಿನಲ್ಲಿ ತೆಂಗು ಉತ್ಪಾದಕರ ಕಂಪೆನಿ ಹಾಗೂ ಮಾನಸಗಂಗಾಗ ಸಹಕಾರ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡಿದೆ ಎಂದರು.

ಗಣೇಶ ಚತುರ್ಥಿ ಬಳಿಕ ತೆಂಗು ಖರೀದಿ: ಕುಸುಮಾಧರ ಎಸ್.ಕೆ.

ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿ ಅಧ್ಯಕ್ಷ ಕುಸುಮಾಧರ ಎಸ್.ಕೆ. ಮಾತನಾಡಿ, ತೆಂಗಿಗೆ ಮೌಲ್ಯವರ್ಧನೆ ಮಾಡಿ, ಉತ್ತಮ ಬೆಲೆ ಒದಗಿಸುವುದೇ ನಮ್ಮ ಉದ್ದೇಶ. ಇದಕ್ಕಾಗಿ ಬೇರೆ ಬೇರೆ ಯೋಜನೆಗಳನ್ನು ಅಳವಡಿಸಿಕೊಳ್ಳಲಾಗಿದೆ. ಕಲ್ಪರಸ ಯೋಜನೆಯ ಜಾರಿಗಾಗಿ ದೊಡ್ಡತೋಟದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಗಣೇಶ ಚತುರ್ಥಿ ಬಳಿಕ ಅಲ್ಲಿ ತೆಂಗಿನಕಾಯಿ ಖರೀದಿಸಲಾಗುವುದು. ತೆಂಗಿನಕಾಯಿ ಕೀಳಲು ಜನರ ಸಮಸ್ಯೆ ಇದೆ ಎನ್ನುವ ಕಾರಣಕ್ಕಾಗಿ, ಟೋಲ್ ಫ್ರೀ ಸಹಾಯವಾಣಿಯನ್ನು ನೀಡಲಾಗಿದೆ. ಸದಸ್ಯರ ಉತ್ತಮ ಯೋಜನೆಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ 100 ಕೋಟಿ ರೂ.ವರೆಗೆ ಸಾಲ ಒದಗಿಸುವ ಯೋಜನೆಯೂ ಇದೆ. ಮಾತ್ರವಲ್ಲ, ಕಲ್ಪ ಸಮೃದ್ಧಿ ಯೋಜನೆಯಡಿ ಠೇವಣಿ ಇಟ್ಟರೆ ಶೇ. 12ರವರೆಗೆ ಬಡ್ಡಿ ನೀಡಲಾಗುವುದು ಎಂದು ಮಾಹಿತಿ ನೀಡಿದ ಅವರು, ಸಂಸ್ಥೆ ಪ್ರಾರಂಭಗೊಂಡು 2 ವರ್ಷ ಪೂರೈಸಿದೆ. ಈ 2 ವರ್ಷದಲ್ಲಿ 14 ಸಾವಿರ ರೈತರನ್ನು ಹೊಂದಿದ್ದು, ದೇಶದಲ್ಲೇ ಪ್ರಥಮ ಸಂಸ್ಥೆ ಎನ್ನುವ ಹಿರಿಮೆಗೂ ಪಾತ್ರವಾಗಿದೆ ಎಂದರು.

ನಿರ್ದೇಶಕಿ ಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಸ್ಯ ರೈತರಾದ ಎ. ಜತೀಂದ್ರ ಶೆಟ್ಟಿ, ಜಗನ್ನಾಥ ರೈ ಡಿ, ಐತ್ತಪ್ಪ ನಾಯ್ಕ್, ಆಯಿಷಾ, ದುಗ್ಗಪ್ಪ ಗೌಡ, ಐತ್ತಪ್ಪ ರೈ ಅವರಿಗೆ ಇದೇ ಸಂದರ್ಭ ಶೇರು ಪ್ರಮಾಣ ಪತ್ರ ವಿತರಿಸಲಾಯಿತು.

ನಿಶ್ಮಿತಾ ಪ್ರಾರ್ಥಿಸಿದರು. ನಿರ್ದೇಶಕ ಗಿರಿಧರ್ ಸ್ವಾಗತಿಸಿದರು. ನಿರ್ದೇಶಕಿ ಲತಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಳ್ಯ ಕಚೇರಿ ಮೇಲ್ವಿಚಾರಕಿ ಅಪರ್ಣಾ ವಂದಿಸಿದರು. ಡಾ.ರಾಜೇಶ್ ಬೆಜ್ಜಂಗಳ ಕಾರ್ಯಕ್ರಮ ನಿರೂಪಿಸಿದರು.

ಸ್ಟೂಡೆಂಟ್ ವೀಕ್ಷಿತ್ ಸೂಸೈಡ್ ಪ್ರಕರಣ – ತಂದೆ ಕೊಟ್ಟ ದೂರಿನಲ್ಲೇನಿದೆ

Posted by Vidyamaana on 2023-10-10 21:21:15 |

Share: | | | | |


ಸ್ಟೂಡೆಂಟ್ ವೀಕ್ಷಿತ್ ಸೂಸೈಡ್ ಪ್ರಕರಣ – ತಂದೆ ಕೊಟ್ಟ ದೂರಿನಲ್ಲೇನಿದೆ

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮೃತ ವೀಕ್ಷಿತ್ ರವರ ತಂದೆ ಚೆನ್ನಪ್ಪ ಗೌಡ ರವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.


ಕುರಿಯ ಗಡಾಜೆ ನಿವಾಸಿ ಚೆನ್ನಪ್ಪ ಗೌಡ ರವರು ಲಾರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಚೆನ್ನಪ್ಪ ಗೌಡ ರವರಿಗೆ ಇಬ್ಬರು ಗಂಡು ಮಕ್ಕಳಿದ್ದು, ಹಿರಿಯ ಮಗ ಬೆಂಗಳೂರಿನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಮಾಡಿಕೊಂಡಿದ್ದು, ಕಿರಿಯ ಮಗ ವೀಕ್ಷಿತ್ ಪುತ್ತೂರಿನ ಫಿಲೋಮಿನ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅ.9 ರಂದು ತನ್ನ ಪತ್ನಿ ಮತ್ತು ಮಗನೊಂದಿಗೆ ಊಟ ಮಾಡಿ ಮಲಗಿದ್ದು, ಮಗ ವೀಕ್ಷಿತ್ ಆತನ ಬೆಡ್ ರೂಮಿನಲ್ಲಿ ಮಲಗಿರುತ್ತಾನೆ.


ಅ.10 ರಂದು ಬೆಳಿಗ್ಗೆ ವೀಕ್ಷಿತ್ ರವರ ರೂಮಿನ ಬಾಗಿಲು ಬಡಿದಾಗ ವೀಕ್ಷಿತ್ ರವರಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದ ಕಾರಣ ಪತ್ನಿಯನ್ನು ಕರೆದು ಇಬ್ಬರು ಸೇರಿ ಜೋರಾಗಿ ಕರೆದಿದರೂ ವೀಕ್ಷಿತ್ ರವರಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದ ಕಾರಣ ಸಂಶಯಗೊಂಡು ಒಂದು ಪಿಕಾಸಿನಲ್ಲಿ ಬಾಗಿಲನ್ನು ಮೀಟಿ ಬಾಗಿಲನ್ನು ತೆಗೆದು ನೋಡಿದಾಗ ರೂಮಿನಲ್ಲಿರುವ ಫ್ಯಾನಿಗೆ

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿರುತ್ತದೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ UDR .No: 36/2023 ಕಲo: 174 CRPC ರಂತೆ ಪ್ರಕರಣ ದಾಖಲಾಗಿದೆ.

ಮೃತ ವೀಕ್ಷಿತ್ ತಂದೆ ನೀಡಿದ ದೂರಿನಲ್ಲಿ ಮಗ ಯಾವುದೋ ವಿಚಾರಕ್ಕೆ ಮನಸಿನಲ್ಲಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉಲ್ಲೇಖಿಸಿದ್ದು, ಮರಣದ ಮೇಲೆ ಯಾವುದೇ ಸಂಶಯವಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ವೀಕ್ಷಿತ್ ರಾತ್ರಿ ಇನ್ಸ್ಟಾಗ್ರಾಮ್ ನಲ್ಲಿ ಸ್ನೇಹಿತೆಯ ಫೋಟೋ ಸ್ಟೋರಿ ಹಾಕಿದ್ದ ಎಂಬ ಮಾಹಿತಿ ಆತನ ಆಪ್ತ ವಲಯದಿಂದ ತಿಳಿದು ಬಂದಿದೆ.

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್

Posted by Vidyamaana on 2024-03-01 12:20:35 |

Share: | | | | |


ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್

ಬೆಂಗಳೂರು : ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್ ಲೀಸ್ಗೆ ಪಡೆದಿದ್ದರು. ಮೂರು ತಿಂಗಳು ಕಳೆಯುತ್ತಿದ್ದಂತೆ ಅವ್ರಿಗೆ ಕಾದಿತ್ತು ಮುಂದೆ ಶಾಕ್. ಬಾಗಿಲಿಗೆ ಬಂದ ಬ್ಯಾಂಕಿ ನೋಟಿಸ್ ನೋಡಿ ಶಾಕ್ ಆಗಿದ್ರು.ಏಕಾಏಕಿ ಬ್ಯಾಂಕಿನವರು ಮನೆಗೆ ಬೀಗ ಜಡಿದಿದ್ದು, ಪ್ಲಾಟ್ ಲೀಸ್ಗೆ ಪಡೆದವರು ಅತ್ತ ಇರಲು ಮನೆ ಇಲ್ಲದೆ, ಇತ್ತ ಕೊಟ್ಟ ಹಣವು ಇಲ್ಲದ ಬೀದಿ ಪಾಲಾಗಿದ್ದಾರೆ.. ಅಷ್ಟಕ್ಕೂ ಈ ಘಟನೆ ನಡೆದಿದಾದ್ರು ಎಲ್ಲಿ ಅಂತೀರಾ ನೋಡಿ ಈ ರಿಪೋರ್ಟ್ ನಲ್ಲಿ..


ಹೀಗೆ ಫೋಟೋದಲ್ಲಿ ಪೋಸ್ ಕೋಡುತ್ತಿರುವ ಇವ್ರು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ನಿವಾಸಿಗಳಾದ ಅಜಿತ್ ಕುಮಾರ್ ಮತ್ತು ಸುಜತಾ. ವಂಚನೆಯನ್ನೆ ಕಾಯಕ ಮಾಡಿಕೊಂಡಿರುವ ಇವ್ರು ಆನೇಕಲ್ ಪೊಲೀಸರ ಅತಿಥಿಯಾಗಿದ್ದಾರೆ. ಹೌದು ಚಂದಾಪುರ ರಸ್ತೆಯಲ್ಲಿನ ಯುಬಿಎಚ್ಸಿ ಅಪಾರ್ಟ್ಮೆಂಟ್ನಲ್ಲಿನ ತಮ್ಮ ಎರಡು ಪ್ಲಾಟ್ಗಳ ಮೇಲೆ ಬರೋಬ್ಬರಿ ಐವತ್ತು ಲಕ್ಷ ಲೋನ್ ಪಡೆದ ಅಸಾಮಿಗಳು ಅದೇ ಪ್ಲಾಟ್ ಗಳನ್ನು ಲೀಜ್ಗೆ ನೀಡಿ ಲಕ್ಷ ಲಕ್ಷ ವಸೂಲಿ ಮಾಡಿದ್ದಾರೆ. ಬಳಿಕ ಬ್ಯಾಂಕ್ ಲೋನ್ ಕಟ್ಟದೇ ಎಸ್ಕೇಪ್ ಆಗಿದ್ದಾರೆ. ಮೂರ್ನಾಲ್ಕು ನೋಟಿಸ್ ಕೊಟ್ಟ ಬ್ಯಾಂಕಿನವರು ಪ್ಲಾಟ್ ವಾಸಿಗಳನ್ನು ಉಟ್ಟಬಟ್ಟೆಯಲ್ಲಿ ಹೊರ ಹಾಕಿ ಬೀಗ ಜಡಿದಿದ್ದಾರೆ.ಇನ್ನೂ ರಿಯಲ್ ಎಸ್ಟೇಟ್ ಹೆಸರಲ್ಲಿ ರೀಲ್ ಬಿಟ್ಟು ಯಾಮಾರಿಸುವ ಅಜಿತ್ ಮತ್ತು ಸುಜತಾ ದಂಪತಿ ತಾವು ರಿಯಲ್ ಎಸ್ಟೇಟ್ ನಲ್ಲಿ ಒಳ್ಳೆಯ ಬಿಸಿನೆಸ್ ಮಾಡುತ್ತಿದ್ದೆವೆ. ತಮ್ಮದು ಸಾಕಷ್ಟು ಪ್ಲಾಟ್, ವಿಲ್ಲಾ ಮತ್ತು ನಿವೇಶನಗಳಿದ್ದು, ಕಡಿಮೆ ಬೆಲೆಗೆ ಲೀಜ್ ಮತ್ತು ಮಾರಾಟ ಮಾಡುತ್ತೆವೆ ಎಂದು ಜಾಹಿರಾತು ನೀಡುತ್ತಾರೆ. ಇವರ ಬಿಲ್ಡ್ ಅಪ್ ಕಂಡು ಇಂದು ಪ್ಲಾಟ್ ಲೀಜ್ ಪಡೆದವರು ಅಕ್ಷರಶಃ ಹಣ ಮತ್ತು ಮನೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಇನ್ನೂ ಸಾಕಷ್ಟು ಮಂದಿಗೆ ಅಜಿತ್ ದಂಪತಿ ಮಕ್ಮಲ್ ಟೋಪಿ ಹಾಕಿದ್ದು, ನಮಗೆ ನ್ಯಾಯ ಕೊಡಿಸಿ ಎಂದು ವಂಚನೆಗಳೊಗಾದ ಗ್ರಾಹಕರು ಆನೇಕಲ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.


ಇನ್ನೂ ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಂಚಕ ದಂಪತಿಯನ್ನ ಬಂಧಿಸಿ ಜೈಲಿಗೆ ಕಳುಹಿಸಿದ್ದು, ಲಕ್ಷಾಂತರ ರೂಪಾಯಿ ಹಣ ನೀಡಿ ಮನೆ ಲೀಸ್ಗೆ ಪಡೆದಿದ್ದ ಗ್ರಾಹಕರು ಅತ್ತ ನೀಡಿದ ಹಣವೂ ಕೈ ಸೇರದೆ ಇತ್ತ ಇರಲು ಮನೆಯು ಸಹ ಇಲ್ಲದೆ ಬೀದಿಗೆ ಬೀಳುವಂತಾಗಿದ್ದು ಮಾತ್ರ ವಿಪರ್ಯಾಸ ಸಂಗತಿ.

ಪುತ್ತೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಅಪ್ರಾಪ್ತ ಮೇಲೆ ಅತ್ಯಾಚಾರ- ಆರೋಪಿ ನವೀನ್ ಮಾಡವು ಬಂಧನ.

Posted by Vidyamaana on 2023-04-25 07:27:36 |

Share: | | | | |


ಪುತ್ತೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಅಪ್ರಾಪ್ತ ಮೇಲೆ ಅತ್ಯಾಚಾರ- ಆರೋಪಿ ನವೀನ್ ಮಾಡವು ಬಂಧನ.

ಪುತ್ತೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಅಪ್ರಾಪ್ತಯನ್ನು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿ ಆಕೆಯನ್ನು ಪುಸಲಾಯಿಸಿ ಅಂಗನವಾಡಿ ಶಾಲೆಯ ವರಾಂಡಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಬಗ್ಗೆ ಅಪ್ರಾಪ್ತಯೋರ್ವಳು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ನವೀನ್ ಫೇಸ್‌ಬುಕ್‌ನಲ್ಲಿ ಪರಿಚಯವಾದಕಾಸರಗೋಡು ಮೂಲದ ಅಪ್ರಾಪ್ತಯನ್ನು ಎ.16ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿದ್ದ. ಬಳಿಕ ಆಕೆಯನ್ನು ಪುಸಲಾಯಿಸಿ ರಾತ್ರಿ ಸ್ಕೂಟರ್‌ನಲ್ಲಿ ಕೆಯೂರಿನ ಮಾಡಾವು ಅಂಗನವಾಡಿ ಬಳಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಆರೋಪಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ರೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಕೆಯ್ಯರು ಗ್ರಾಮದ ಮಾಡವು ನಿವಾಸಿ ನವೀನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಚಾರ ಸಭೆ ಬಳಿಕ ಭಾವುಕರಾದ ಅಶೋಕ್ ರೈ

Posted by Vidyamaana on 2023-05-02 11:29:28 |

Share: | | | | |


ಪ್ರಚಾರ ಸಭೆ ಬಳಿಕ ಭಾವುಕರಾದ ಅಶೋಕ್ ರೈ

ಪುತ್ತೂರು: ಈರ್ ಎಂಕ್ಲೆಗ್ ಸಹಾಯ ಮಲ್ತರ್ ಎಂಕ್ಲೆನ ವೋಟು ಇರೆಗೇ.... ( ನೀವು ನಮಗೆ ಸಹಾಯ ಮಾಡಿದ್ದೀರಿ ನಮ್ಮ ವೋಟು ನಿಮಗೆ) ಇದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಸಾರ್ವಜನಿಕ ಚುನಾವಣಾ ಪ್ರಚಾರ ಸಭೆ ಮುಗಿಸಿ ವೇದಿಕೆಯಿಂದ ಇಳಿಯುತ್ತಿದ್ದಂತೆಯೇ ಹಲವಾರು ಮಹಿಳೆಯರು ಬಂದು ಅಭ್ಯರ್ಥಿ ಅಶೋಕ್ ರೈಯವರನ್ನು ಮಾತನಾಡಿಸಿ ಆಶೀರ್ವಾದ ಮಾಡುತ್ತಿದ ಸಂದರ್ಭ.

New Categories
Recent News
Popular News


Leave a Comment: