ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಪುತ್ತೂರು : ಶ್ರೀಧರ್ ಭಟ್ ಮುಂಭಾಗ ಅನಧಿಕೃತ ಬಸ್ ನಿಲ್ದಾಣ

Posted by Vidyamaana on 2023-06-22 07:55:19 |

Share: | | | | |


ಪುತ್ತೂರು : ಶ್ರೀಧರ್ ಭಟ್ ಮುಂಭಾಗ ಅನಧಿಕೃತ ಬಸ್ ನಿಲ್ದಾಣ

ಪುತ್ತೂರು: ನಗರದ ಮುಖ್ಯರಸ್ತೆಯಲ್ಲಿ‌ ಪ್ರತಿದಿನ ಟ್ರಾಫಿಕ್ ಜಾಮ್. ಇದಕ್ಕೊಂದು ಶಾಶ್ವತ ಪರಿಹಾರ ನೀಡಲು ಸಾಧ್ಯವೇ ಇಲ್ಲವೇ ಎಂಬ ಪ್ರಶ್ನೆ ಆಗಾಗ ಸಾರ್ವಜನಿಕರಿಂದ ವ್ಯಕ್ತವಾಗುತ್ತಲೇ ಇದೆ. ಕನಿಷ್ಠ ಪಕ್ಷ, ಟ್ರಾಫಿಕ್ ದಟ್ಟಣೆಗೆ ಕಾರಣವಾಗುವ ತಡೆಗಳನ್ನಾದರೂ ನಿವಾರಿಸಿ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.

ಟ್ರಾಫಿಕ್ ದಟ್ಟಣೆಗೆ ಕಾರಣವಾಗುವ ಹಲವು ಅಡೆ - ತಡೆಗಳಲ್ಲಿ ಅನಧಿಕೃತ ಬಸ್ ನಿಲ್ದಾಣದ ಪಾತ್ರವೂ ದೊಡ್ಡದಿದೆ. ಬಸ್ ನಿಲ್ದಾಣ ಇಲ್ಲದೇ ಇರುವ ಕೆಲ ಆಯಕಟ್ಟಿನ‌ ಪ್ರದೇಶಗಳಲ್ಲಿ ಪ್ರಯಾಣಿಕರನ್ನು ಹತ್ತಿಸಲು ಬಸ್ ನಿಲ್ಲಿಸುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಟ್ರಾಫಿಕ್ ದಟ್ಟಣೆ ಉಂಟಾಗಿ ಸಾರ್ವಜನಿಕರು ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿದ್ದಾರೆ.

ಪುತ್ತೂರು ಮುಖ್ಯರಸ್ತೆಯ ಹಲವು ಕಡೆಗಳಲ್ಲಿ ಬಸ್ ಗಳನ್ನು ಹೀಗೆ ಅನಧಿಕೃತವಾಗಿ ನಿಲ್ಲಿಸುವ ಪರಿಪಾಠ ಬೆಳೆಸಿಕೊಂಡು ಬರಲಾಗುತ್ತಿದೆ. ಇದರಲ್ಲಿ ಪ್ರಮುಖವಾಗಿ ಪೊಲೀಸ್ ಸ್ಟೇಷನ್ ಪಕ್ಕದಲ್ಲೇ ಇರುವ ಶ್ರೀಧರ್ ಭಟ್ ಬ್ರದರ್ಸ್ ಮಳಿಗೆ ಮುಂಭಾಗ.

ಇದು ಮೂರು ರಸ್ತೆ ಸೇರುವ ಪಟ್ಟಣದ ಆಯಕಟ್ಟಿನ ಪ್ರದೇಶ. ದಿನವಿಡೀ ಜನನಿಬಿಡ, ವಾಹನ ದಟ್ಟಣೆಯ ರಸ್ತೆ. ಪುತ್ತೂರು - ಮಂಗಳೂರು, ಪುತ್ತೂರು - ವಿಟ್ಲ, ಪುತ್ತೂರು - ಉಪ್ಪಿನಂಗಡಿ, ಧರ್ಮಸ್ಥಳ ಹೀಗೆ ನಾನಾ ಕಡೆಗಳಿಗೆ ಹೋಗುವ ವಾಹನಗಳು ಈ ರಸ್ತೆಯಾಗಿ ಚಲಿಸುತ್ತಿರುತ್ತವೆ. ಇನ್ನೊಂದೆಡೆ ಬೈಪಾಸ್ ರಸ್ತೆಯಾಗಿ ಬರುವ ವಾಹನಗಳು ಪೇಟೆಯನ್ನು ಸಂಪರ್ಕಿಸುವುದು ಇದೇ ರಸ್ತೆಯಿಂದಾಗಿ. ಪರ್ಲಡ್ಕ ರಸ್ತೆಯಾಗಿ ಬರುವ ಬಸ್, ವಾಹನಗಳಿಗೂ ಇದೇ ರಸ್ತೆ ಅನಿವಾರ್ಯ. ಇಷ್ಟು ವಾಹನ ದಟ್ಟಣೆಯಿರುವ ರಸ್ತೆಯಲ್ಲಿ ಬಸ್ಸೊಂದು ಕೆಲ ನಿಮಿಷ ಪ್ರಯಾಣಿಕರನ್ನು‌ ಹತ್ತಿಸಿಕೊಳ್ಳಲು ನಿಲ್ಲಿಸಿದರೆ ಟ್ರಾಫಿಕ್ ಸಮಸ್ಯೆ ಹೇಗೆ ಬಿಗಡಾಯಿಸಬಹುದು ನೀವೇ ಊಹಿಸಿ.

ಪ್ರತಿದಿನ ಈ ಪ್ರದೇಶದಲ್ಲಿ ಬಸ್ ನಿಲ್ಲಿಸುತ್ತಿರುವುದರಿಂದ, ಈಗ ಜನರು ಇದೇ ಜಾಗದಲ್ಲಿ ಬಸ್ ಕಾಯುತ್ತಿರುವ ದೃಶ್ಯ ದಿನನಿತ್ಯ ಕಾಣಲು ಸಾಧ್ಯ. ಸ್ವಲ್ಪವೇ ಸ್ವಲ್ಪ ಮುಂದೆ ಹೋದರೂ, ಅಧಿಕೃತವಾದ ಬಸ್ ನಿಲ್ದಾಣ ಇದೆ. ಇದನ್ನು ಬಿಟ್ಟು ಸಂಚಾರ ದಟ್ಟಣೆಗೆ ಸಮಸ್ಯೆ ಉಂಟು ಮಾಡುವುದು ಎಷ್ಟು ಸರಿ? ಸಂಬಂಧಪಟ್ಟವರು ಗಮನ ಹರಿಸಬೇಕು.

ಬೈಕ್ ಗಳ ನಡುವೆ ಭೀಕರ ಅಪಘಾತ: ಬ್ಯಾಂಕ್ ಉದ್ಯೋಗಿ ಅಮೃತ ಮೃತ್ಯು

Posted by Vidyamaana on 2023-08-19 07:11:04 |

Share: | | | | |


ಬೈಕ್ ಗಳ ನಡುವೆ ಭೀಕರ ಅಪಘಾತ: ಬ್ಯಾಂಕ್ ಉದ್ಯೋಗಿ ಅಮೃತ ಮೃತ್ಯು

ಕೊಡಗು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ.

ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮ ಅಪಘಾತ ಸಂಭವಿಸಿದ್ದು, ಅಮೃತ (24) ಹೆಸರಿನ ಬ್ಯಾಂಕ್ ಉದ್ಯೋಗಿ ಮೃತಪಟ್ಟಿದ್ದಾರೆ.

ಮೂಲತಃ ಕೇರಳದ ತ್ರಿಶೂರ್ ಮೂಲದ ಅಮೃತ, ಅಮ್ಮತಿ ಕೆನರಾ ಬ್ಯಾಂಕ್ ಉದ್ಯೋಗಿ ಆಗಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ಅಮೃತಾಳನ್ನು ಮೈಸೂರು ಅಪೊಲೋ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಮೃತ ಕೊನೆಯುಸಿರೆಳೆದಿದ್ದಾರೆ.

ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕಬ್ಬಡಿ ಸ್ಪರ್ಧಿಗಳ ನಡುವೆ ಮಾರಾಮಾರಿ: ಬೆಚ್ಚಿಬೀಳಿಸುವ ವಿಡಿಯೋ ವೈರಲ್!

Posted by Vidyamaana on 2023-10-09 12:10:54 |

Share: | | | | |


ಕಬ್ಬಡಿ ಸ್ಪರ್ಧಿಗಳ ನಡುವೆ ಮಾರಾಮಾರಿ: ಬೆಚ್ಚಿಬೀಳಿಸುವ ವಿಡಿಯೋ ವೈರಲ್!

ಲಕ್ನೋ ಅಕ್ಟೋಬರ್ 9: ಕಾನ್ಪುರದಲ್ಲಿ ಕಬ್ಬಡಿ ಆಡುವ ಸ್ಪರ್ಧಿಗಳ ನಡುವೆ ಭಯಾನಕವಾಗಿ ಘರ್ಷಣೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೋಡುಗರನ್ನು ಬೆಚ್ಚಿ ಬೀಳಿಸಿದೆ.ಕಾನ್ಪುರದಲ್ಲಿ ನಡೆದ ಕಬಡ್ಡಿ ಪಂದ್ಯವು ತೀವ್ರ ಹಿಂಸಾಚಾರಕ್ಕೆ ತಿರುಗಿದ್ದು ಕಂಡು ಬಂದಿದೆ.ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ವಿದ್ಯಾರ್ಥಿಗಳು ಕುರ್ಚಿಗಳನ್ನು ಎಸೆಯುವ ಮೂಲಕ ಪರಸ್ಪರ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ.


ವಿಡಿಯೋ ನೋಡಲು ಕ್ಲಿಕ್ ಮಾಡಿ

ಬೆಚ್ಚಿಬೀಳಿಸುವ ವಿಡಿಯೋ ವೈರಲ್!


ಈ ವಿಡಿಯೋ ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸೆರೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ.ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಘರ್ಷಣೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಹಿಂಸಾಚಾರದಿಂದಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹೋರಾಟವನ್ನು ನಿಲ್ಲಿಸಲು ಯಾವುದೇ ಭದ್ರತೆಯಿಲ್ಲದೆ, ಅದು ಅನಿಯಂತ್ರಿತವಾಗಿ ಬೆಳೆದಿದೆ.


ಕೆಂಪು ಆಟದ ಉಡುಪು ಧರಿಸಿದ ಸ್ಪರ್ಧಿಗಳು ಪರಸ್ಪರ ಖುರ್ಚಿಗಳಿಂದ ಬಲವಾಗಿ ದಾಳಿ ಮಾಡಿದ್ದಾರೆ. ಕೆಲ ಸ್ಪರ್ಧಿಗಳು ಆತಂಕದಲ್ಲಿ ಸ್ಥಳದಿಂದ ಓಡಿಹೋಗುತ್ತಿರುವುದು ದೃಶ್ಯದಲ್ಲಿ ಕಂಡು ಬಂದಿದೆ. ಸ್ಥಳಿಯರು ವಿಡಿಯೋವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ವ್ಲಾಗರ್‌ ಸ್ವಾತಿಕೃಷ್ಣ ಅರೆಸ್ಟ್

Posted by Vidyamaana on 2024-01-13 04:46:08 |

Share: | | | | |


ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ ವ್ಲಾಗರ್‌ ಸ್ವಾತಿಕೃಷ್ಣ ಅರೆಸ್ಟ್

ಕೊಚ್ಚಿ : ಕೇರಳದ ಎರ್ನಾಕುಲಂ ಕಾಲಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ವ್ಲಾಗರ್ ರನ್ನು ಬಂಧಿಸಿದ್ದಾರೆ.ಕುನ್ನತ್ತುನಾಡು ಮೂಲದ ಸ್ವಾತಿ ಕೃಷ್ಣ (28) ಬಂಧಿತ ಆರೋಪಿಯಾಗಿದ್ದು ಅಬಕಾರಿ ವಿಶೇಷ ತಂಡ ಬಂಧಿಸಿದೆ.ಆಕೆಯಿಂದ 2.78 ಗ್ರಾಂ ಎಂಡಿಎಂಎ ಹಾಗೂ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕಾಲಡಿ ಅಬಕಾರಿ ನಿರೀಕ್ಷಕ ಸಿಜೋ ವರ್ಗೀಸ್ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ.ಪೊಲೀಸರ ಪ್ರಕಾರ ಸ್ವಾತಿ ಕೃಷ್ಣ ಕಾಲೇಜು ವಿದ್ಯಾರ್ಥಿಗಳಿಗೆ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದಳು. ಕಳೆದ ಕೆಲ ದಿನಗಳಿಂದ ಅಬಕಾರಿ ಇಲಾಖೆ ನಿಗಾದಲ್ಲಿದ್ದಳು.

ಕ್ರಿಕೆಟ್ ಜಗತ್ತಿನ ಆಲ್ ರೌಂಡರ್ ಹೀತ್ ಸ್ಟ್ರೀಕ್ ಇನ್ನಿಲ್ಲ

Posted by Vidyamaana on 2023-09-03 09:58:29 |

Share: | | | | |


ಕ್ರಿಕೆಟ್ ಜಗತ್ತಿನ ಆಲ್ ರೌಂಡರ್ ಹೀತ್ ಸ್ಟ್ರೀಕ್ ಇನ್ನಿಲ್ಲ

ಹರಾರೆ: ಜಿಂಬಾಬ್ವೆ ತಂಡದ ಮಾಜಿ ನಾಯಕ, ದಿಗ್ಗಜ ಆಲೌ ರೌಂಡರ್ ಹೀತ್ ಸ್ಟ್ರೀಕ್ ಅವರು ಇಂದು (ಸೆ.03) ಕೊನೆಯುಸಿರೆಳೆದಿದ್ದಾರೆ. ಹಲವು ಕಾಲದಿಂದ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸುತ್ತಿದ್ದ ಸ್ಟ್ರೀಕ್ ಇಂದು ಅಸುನೀಗಿದ್ದಾರೆ ಎಂದು ವರದಿ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಹೀತ್ ಸ್ಟ್ರೀಕ್ ಅವರು ನಿಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ ಹರಿದಾಡಿತ್ತು. ಬಳಿಕ ಮಾಜಿ ಜಿಂಬಾಬ್ವೆ ಆಟಗಾರ ಹೆನ್ರಿ ಒಲಾಂಗ ಅವರು ಸ್ಪಷ್ಟನೆ ನೀಡಿ ಸುದ್ದಿಯನ್ನು ಅಲ್ಲಗಳೆದಿದ್ದರು. ಆದರೆ ಇದೀಗ ಸ್ಟ್ರೀಕ್ ನಿಧನದ ಸುದ್ದಿಯನ್ನು ಅವರ ಪತ್ನಿಯೇ ಖಚಿತಪಡಿಸಿದ್ದಾರೆ.


ಈ ಸುದ್ದಿಯನ್ನು ಖಚಿತಪಡಿಸಲು ಪತ್ನಿ ನಾಡಿನ್ ಸ್ಟ್ರೀಕ್ ತಮ್ಮ ಫೇಸ್‌ಬುಕ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.


“ಈ ಮುಂಜಾನೆ, 3 ನೇ ಸೆಪ್ಟೆಂಬರ್ 2023 ರ ಭಾನುವಾರದಂದು, ನನ್ನ ಜೀವನದ ಅತ್ಯಂತ ದೊಡ್ಡ ಪ್ರೀತಿ ಮತ್ತು ನನ್ನ ಸುಂದರ ಮಕ್ಕಳ ತಂದೆ, ತಮ್ಮ ಮನೆಯಿಂದ ದೇವತೆಗಳ ಜೊತೆಯಲ್ಲಿರಲು ಕೊಂಡೊಯ್ಯಲ್ಪಟ್ಟರು. ಅಲ್ಲಿ ಅವರು ತಮ್ಮ ಕೊನೆಯ ದಿನಗಳನ್ನು ಕಳೆಯಲು ಬಯಸಿದ್ದರು. ಅವರು ಏಕಾಂಗಿಯಾಗಿ ಹೋಗಲಿಲ್ಲ, ಅವರು ಪ್ರೀತಿ ಮತ್ತು ಶಾಂತಿಯಿಂದ ಆವರಿಸಿದದ್ದರು” ಎಂದು ಅವರು ಬರೆದಿದ್ದಾರೆ

.ಸ್ಟ್ರೀಕ್ ಜಿಂಬಾಬ್ವೆ ಅವರ ಆಡಿದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. 65 ಟೆಸ್ಟ್‌ಗಳು ಮತ್ತು 189 ಏಕದಿನ ಪಂದ್ಯಗಳಲ್ಲಿ, ಸ್ಟ್ರೀಕ್ 455 ವಿಕೆಟ್‌ ಗಳನ್ನು ಪಡೆದಿದ್ದಾರೆ. 23 ಬಾರಿ ನಾಲ್ಕು-ವಿಕೆಟ್‌ ಗಳ ಮತ್ತು ಎಂಟು ಐದು-ವಿಕೆಟ್‌ ಗಳ ಗೊಂಚಲು ಪಡೆದ ಸಾಧನೆ ಅವರದ್ದು.


ಬ್ಯಾಟಿಂಗ್ ನಲ್ಲೂ ಪ್ರದರ್ಶನ ತೋರಿದ್ದ ಸ್ಟ್ರೀಕ್ ಟೆಸ್ಟ್ ಮತ್ತು ಏಕದಿನಗಳಲ್ಲಿ ಕ್ರಮವಾಗಿ 1990 ಮತ್ತು 2943 ರನ್ ಗಳಿಸಿದರು. ಅವರು ಒಂದು ಶತಕ ಮತ್ತು 24 ಅರ್ಧ ಶತಕಗಳನ್ನು ಬಾರಿಸಿದ್ದಾರೆ.


1993 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಸ್ಟ್ರೀಕ್ ಅವರು 2005 ರವರೆಗೆ ಆಡಿದರು. ಜಿಂಬಾಬ್ವೆಗಾಗಿ ಅವರ ಕೊನೆಯ ಮತ್ತು ಅಂತಿಮ ಅಂತಾರಾಷ್ಟ್ರೀಯ ಪ್ರದರ್ಶನವು ಸೆಪ್ಟೆಂಬರ್ 2005 ರಲ್ಲಿ ಹರಾರೆ ಸ್ಪೋರ್ಟ್ಸ್ ಕ್ಲಬ್‌ ನಲ್ಲಿ ಭಾರತದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನಡೆದಿತ್ತು.

ಸುಳ್ಯ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಳೆಯಲ್ಲಿ ಪತ್ತೆ

Posted by Vidyamaana on 2024-08-07 22:05:24 |

Share: | | | | |


ಸುಳ್ಯ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಳೆಯಲ್ಲಿ ಪತ್ತೆ

ಸುಳ್ಯ: ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.

ಕಡಬ ತಾಲೂಕಿನ ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33) ಮೃತರು. ಅಶೋಕ್ ಆ.4ರಂದು ಮನೆಯಿಂದ ನಾಪತ್ತೆಯಾಗಿದ್ದರು. ಯುವಕನಿಗಾಗಿ ಮೂರು ದಿನಗಳಿಂದ ತೀವ್ರ ಹುಡುಕಾಟ ನಡೆಸಲಾಗಿತ್ತು, ಹೊಳೆಗೆ ಬಿದ್ದಿರುವ ಶಂಕೆ ಹಿನ್ನೆಲೆಯಲ್ಲಿ ಪಂಜ ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದ ವೇಳೆ ಪಲ್ಲೋಡಿ ಅಡ್ಕ ಎಂಬಲ್ಲಿ ಯುವಕನ ಮೃತದೇಹ ಬುಧವಾರ ಪತ್ತೆಯಾಗಿದೆ

Recent News


Leave a Comment: