ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 1

Posted by Vidyamaana on 2023-07-31 23:20:31 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 1

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 1 ರಂದು

 ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ದ ಕ ಮತ್ತು ಉಡುಪಿ ಜಿಲ್ಲೆಯ ಭೇಟಿ ಹಿನ್ನೆಲೆಯಲ್ಲಿ ಸಿ ಎಂ ಜೊತೆ ಉಭಯ ಜಿಲ್ಲೆಗಳ ಭೇಟಿ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ

ಉಡುಪಿಯಲ್ಲಿ ತಾಯಿ ಮಕ್ಕಳ ಕಗ್ಗೋಲೆ ಪ್ರಕರಣ:

Posted by Vidyamaana on 2023-11-18 22:02:36 |

Share: | | | | |


ಉಡುಪಿಯಲ್ಲಿ ತಾಯಿ ಮಕ್ಕಳ ಕಗ್ಗೋಲೆ  ಪ್ರಕರಣ:

ಉಡುಪಿ, ನ.18: ನೇಜಾರಿನ ತಾಯಿ, ಮಕ್ಕಳ ಕೊಲೆಗಾರ ಪ್ರವೀಣ್ ಚೌಗುಲೆ(39) ತನ್ನ ಕೃತ್ಯಕ್ಕಾಗಿ ಸಾಕಷ್ಟು ಮುಂಜಾಗ್ರತೆ ವಹಿಸಿದ್ದು ಮತ್ತು ಕ್ರಿಮಿನಲ್ ಮೈಂಡ್ ಉಪಯೋಗಿಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಯಾವುದೇ ಸಾಕ್ಷ್ಯ ಅಥವಾ ಮುಖ ಪರಿಚಯವೂ ಸಿಸಿಟಿವಿಯಲ್ಲಿ ದಾಖಲಾಗಬಾರದೆಂದು ಮುಖಕ್ಕೆ ಮಾಸ್ಕ್ ಹಾಕ್ಕೊಂಡಿದ್ದ. ಅಷ್ಟೇ ಅಲ್ಲ, ಪ್ರಯಾಣದ ಉದ್ದಕ್ಕೂ ವಾಹನ ಬದಲಿಸುತ್ತಾ ಸಾಗಿದ್ದ. ಹಲವು ಬಾರಿ ಆಟೋ ಬದಲಿಸಿದ್ದಾನೆ, ಕೆಲವು ಕಡೆ ದಾರಿಯಲ್ಲಿ ಸಿಕ್ಕಿದ್ದ ಬಸ್, ಬೈಕ್ ಗಳನ್ನೂ ಪ್ರಯಾಣಕ್ಕೆ ಬಳಸಿದ್ದಾನೆ.

ಅದೇ ರೀತಿ ಬ್ಯಾಗ್ ಮತ್ತು ಬ್ಯಾಗ್ ಒಳಗೆ ಹರಿತವಾದ ಚೂರಿ ಹಾಗೂ ಬಟ್ಟೆಗಳನ್ನು ಇಟ್ಟುಕೊಂಡಿದ್ದನು. ಏರ್ ಇಂಡಿಯಾದಲ್ಲಿ ಉದ್ಯೋಗಿ ಆಗೋದಕ್ಕೂ ಮುನ್ನ ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿ ಕೆಲ ತಿಂಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಪ್ರವೀಣ್ ಕೃತ್ಯಕ್ಕಾಗಿ ಕ್ರಿಮಿನಲ್ ಮೈಂಡ್ ಬಳಸಿಕೊಂಡಿದ್ದು ತನಿಖೆಯಲ್ಲಿ ಪತ್ತೆಯಾಗಿದೆ. ನ.12ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಆರೋಪಿ ಪ್ರವೀಣ್ ಚೌಗುಲೆ, ಮಂಗಳೂರಿನ ಮನೆಯಿಂದ ತನ್ನ ಕಾರಿನಲ್ಲೇ  ಹೊರಟಿದ್ದರೂ ಅದನ್ನು ಹೆಜಮಾಡಿ ಟೋಲ್ ಗೇಟ್ ದಾಟೋದಕ್ಕೂ ಮೊದಲೇ ಪಾರ್ಕ್ ಮಾಡಿದ್ದ. ಅಲ್ಲಿನ ಸಿಸಿಟಿವಿಯಲ್ಲಿ ದಾಖಲಾಗುತ್ತೆ ಮತ್ತು ತನ್ನ ಜಾಡನ್ನು ಪೊಲೀಸರು ಪತ್ತೆ ಮಾಡಬಾರದು ಎನ್ನುವ ನೆಲೆಯಲ್ಲಿ ಹೀಗೆ ಮಾಡಿದ್ದಾನೆ.  

ತಾನು ಉಡುಪಿಗೆ ಬಂದಿರುವ ಸುಳಿವು ಸಿಗಬಾರದೆಂಬ ಉದ್ದೇಶದಿಂದ ಕಾರನ್ನು ಹೆಜಮಾಡಿ ಟೋಲ್‌ಗೇಟ್‌ಗಿಂತ ಮೊದಲೇ ರಸ್ತೆ ಬದಿ ಪಾರ್ಕ್ ಮಾಡಿದ್ದ. ಅಲ್ಲಿಂದ ಬೈಕ್, ಬಸ್ ಹಿಡಿದು ಉಡುಪಿಗೆ ಆಗಮಿಸಿದ್ದ ಪ್ರವೀಣ್, ಸಂತೆಕಟ್ಟೆಯಿಂದ ಆಟೊ ರಿಕ್ಷಾದಲ್ಲಿ ತೆರಳಿದ್ದ. ಈ ವೇಳೆ, ಮುಖಕ್ಕೆ ತಿಳಿ ನೀಲಿ ಬಣ್ಣದ ಮಾಸ್ಕ್ ಹಾಕ್ಕೊಂಡೇ ಇದ್ದ. ನೇಜಾರಿನ ಮನೆಗೆ ನುಗ್ಗಿ ನಾಲ್ವರನ್ನು ಕಗ್ಗೊಲೆ ಮಾಡಿದ್ದು ಅಲ್ಲಿಂದ ಏನೂ ಆಗಿಯೇ ಇಲ್ಲವೆಂಬಂತೆ ಹಿಂತಿರುಗಿದ್ದ. ಬಳಿಕ ದಾರಿ ಹೋಕರ ಬೈಕಿನಲ್ಲಿ ಬಂದು ಸಂತೆಕಟ್ಟೆಯಲ್ಲಿ ಬೇರೊಂದು ರಿಕ್ಷಾ ಹಿಡಿದಿದ್ದ. ಉಡುಪಿ ಕರಾವಳಿ ಬೈಪಾಸ್‌ ವರೆಗೆ ಆ ರಿಕ್ಷಾದಲ್ಲಿ ತೆರಳಿ, ಅಲ್ಲಿಂದ ಬೈಕ್ ಏರಿ ಕಿನ್ನಿಮೂಲ್ಕಿಗೆ ಬಂದಿದ್ದ. ಅಲ್ಲಿಂದ ಮುಂದಕ್ಕೆ ನಡೆದುಕೊಂಡು ಹೋಗಿ ಬಸ್ ಹತ್ತಿದ್ದ. ಹೆಜಮಾಡಿ ಟೋಲ್ ಗೇಟ್ ಸಮೀಪ ಬಸ್‌ನಿಂದ ಇಳಿದು ಅಲ್ಲಿಂದ ತನ್ನ ಕಾರಿನಲ್ಲಿ ನೇರವಾಗಿ ತನ್ನ ಸುರತ್ಕಲ್ ನಲ್ಲಿರುವ ಮನೆಗೆ ಹೋಗಿದ್ದ ಎನ್ನಲಾಗಿದೆ.

 

ಗಾಯಕ್ಕೆ ಚಿಕಿತ್ಸೆ, ಪಶ್ಚಾತ್ತಾಪ ಇಲ್ಲದೆ ಸುತ್ತಾಟ

 

ಕೃತ್ಯದ ಬಳಿಕ ಮನೆಗೆ ಬಂದಿದ್ದ ಆರೋಪಿ ಪ್ರವೀಣ್, ತನ್ನ ಬಟ್ಟೆಯಲ್ಲಾಗಿದ್ದ ರಕ್ತದ ಕಲೆಗಳನ್ನು ತೊಳೆದಿದ್ದ. 10 ನಿಮಿಷ ಕಾಲ ಮನೆಯಲ್ಲಿದ್ದು, ಕೃತ್ಯದ ವೇಳೆ ಕೈ ಬೆರಳಿಗೆ ಆಗಿದ್ದ ಗಾಯಕ್ಕೆ ಚಿಕಿತ್ಸೆ ಪಡೆಯಲು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದ ಎನ್ನಲಾಗಿದೆ. ಬಳಿಕ ಮನೆಗೆ ಬಂದು ತನ್ನ ಪತ್ನಿ ಮತ್ತು ಮಕ್ಕಳನ್ನು ಕಾರಿನಲ್ಲಿ ಹೊರಗೆ ವಿಹಾರಕ್ಕೆ ಕರೆದುಕೊಂಡು ಹೋಗಿ, ಸುತ್ತಾಡಿ ಸಂಜೆ ವೇಳೆಗೆ ಮನೆಗೆ ಬಂದಿದ್ದ. ನಾಲ್ಕು ಮಂದಿಯನ್ನು ಭೀಕರವಾಗಿ ಕೊಲೆಗೈದಿದ್ದರೂ ಯಾವುದೇ ಪಶ್ಚತ್ತಾಪ ಇಲ್ಲದೆ ಮಾಮೂಲಿಯಂತೆ ಮನೆಯವರೊಂದಿಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಕಾರಿನಲ್ಲಿ ಬೆಳಗಾವಿ ತೆರಳಿ ದೀಪಾವಳಿ ಆಚರಣೆ  

 

ಮರುದಿನ ನ.13ರಂದು ಬೆಳಗ್ಗೆ ಹಬ್ಬದ ಪ್ರಯುಕ್ತ ಎರಡು ದಿನ ರಜೆ ಇದೆ ಎಂದು ಹೇಳಿ ಪತ್ನಿ, ಮಕ್ಕಳೊಂದಿಗೆ ತನ್ನ ಕಾರಿನಲ್ಲಿಯೇ ಬೆಳಗಾವಿಗೆ ಹೊರಟಿದ್ದ. ಕುಡಚಿಯಲ್ಲಿ ತನ್ನ ಸಂಬಂಧಿ ತೋಟಗಾರಿಕೆ ಇಲಾಖೆಯ ನಿವೃತ್ತ ಅಧಿಕಾರಿ ಮನೆಯಲ್ಲಿ ದೀಪಾವಳಿಯನ್ನೂ ಆಚರಿಸಿದ್ದ. ಇತ್ತ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಏರ್ಪೋರ್ಟ್ ನಲ್ಲಿ ನಾಪತ್ತೆಯಾಗಿದ್ದರಿಂದ ಈತನೇ ಕೃತ್ಯ ಎಸಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿತ್ತು. ಅದೇ ಸಮಯಕ್ಕೆ ಕುಡಚಿಯಲ್ಲಿದ್ದಾಗಲೇ ಮೊಬೈಲ್ ಸ್ವಿಚ್ ಆನ್ ಮಾಡಿದ್ದು ಅಲರ್ಟ್ ಆಗಿದ್ದ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದರು.


ಆರೋಪಿ ಪ್ರವೀಣ್ ಮನೆಯಿಂದ ಕೃತ್ಯಕ್ಕೆ ಬಳಸಿದ ಚೂರಿ ವಶ

ಮನೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಆಯುಧಕ್ಕಾಗಿ ತೀವ್ರ ಶೋಧ ನಡೆಸಿದಾಗ, ಆತನ ಬಿಜೈ ಫ್ಲಾಟ್‌ನಲ್ಲಿ ಕೃತ್ಯಕ್ಕೆ ಬಳಸಿಕ ಚೂರಿ ಪತ್ತೆಯಾಗಿತ್ತು. ಅದಲ್ಲದೆ ಕೃತ್ಯಕ್ಕೆ ಬಳಸಿದ ಮಾಸ್ಕ್ ರಕ್ತಸಿಕ್ಕ ಬಟ್ಟೆ, ಕೃತ್ಯಕ್ಕೆ ಬಳಸಿದ ಕಾರು ಸೇರಿದಂತೆ ಎಲ್ಲ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.


ಆರೋಪಿ ಪ್ರವೀಣ್‌ ಚೌಗುಲೆ ಅಪರಾಧ ಕೃತ್ಯ ಎಸಗುವ ಸಂದರ್ಭದಲ್ಲಿ ಬಳಸಿದ ಚೂರಿ ಮತ್ತು ಇತರ ವಸ್ತುಗಳನ್ನು ನಿನ್ನೆ ಮತ್ತು ಇಂದು ವಶಕ್ಕೆ ಪಡೆದುಕೊಳ್ಳಲಾಗಿದೆ. ಉಳಿದ ಮಾಹಿತಿಗಳನ್ನು ತನಿಖೆ ಸಂಪೂರ್ಣಗೊಂಡ ಬಳಿಕ ನೀಡಲಾಗುವುದು


-ಡಾ.ಕೆ.ಅರುಣ್, ಎಸ್ಟಿ ಉಡುಪಿ

 

ರಕ್ತದ ಕಲೆಗಳಿದ್ದ ಬಟ್ಟೆಯನ್ನೇ ಬದಲಿಸಿರಲಿಲ್ಲ


ನಾಲ್ಕು ಮಂದಿಯನ್ನು ಕೊಲೆಗೈದ ಬಳಿಕ ಆರೋಪಿ ತನ್ನ ಬಟ್ಟೆಯನ್ನು ಬದಲಾಯಿಸಿದ್ದಾನೆ ಎನ್ನಲಾಗಿತ್ತು. ಆದರೆ ತನಿಖೆಯ ವೇಳೆ ರಕ್ತ ಸಿಕ್ತವಾಗಿದ್ದ ಬಟ್ಟೆಯನ್ನು ಬದಲಾಯಿಸಿಯೇ ಇರಲಿಲ್ಲ ಎನ್ನುವ ಮಾಹಿತಿ ತಿಳಿದುಬಂದಿದೆ. ನಾಲ್ವರ ಹತ್ಯೆಯಿಂದ ಇಡೀ ಮನೆ ರಕ್ತಸಿಕ್ತವಾಗಿತ್ತು. ನಾಲ್ವರು ಕೂಡ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆದರೂ ಆತನ ಬಟ್ಟೆಗೆ ಅಲ್ಪಸ್ವಲ್ಪ ಮಾತ್ರವೇ ರಕ್ತದ ಕಲೆಗಳು ಅಂಟಿದ್ದವು. ಇದನ್ನು ಆತ ಬೈಕು, ರಿಕ್ಷಾ, ಬಸ್‌ನಲ್ಲಿ ಹೋಗುವಾಗ ತನ್ನ ಕೈಯಲ್ಲಿದ್ದ ಬ್ಯಾಗ್‌ನಿಂದ ಮರೆಯಾಗಿಸಿದ್ದು ರಕ್ತದ ಕಲೆಗಳು ಬೇರೆಯವರಿಗೆ ಕಾಣದಂತೆ ನೋಡಿಕೊಂಡಿದ್ದ ಎಂದು ಪೊಲೀಸ್ ವಿಚಾರಣೆಯಲ್ಲಿ ತಿಳಿದುಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕಲ್ಸಂಕ ರಿಕ್ಷಾ ಚಾಲಕ, ಬಟ್ಟೆಯಲ್ಲಿ ಗುರುತು ಹಿಡಿದಿದ್ದೆ ಎಂದು ಹೇಳಿಕೆ ನೀಡಿದ್ದರು.

 

ಮಂಗಳೂರಿನಲ್ಲಿ ಮಹಜರು ಪ್ರಕ್ರಿಯೆ

 

ಬಂಧಿತ ಆರೋಪಿ ಪ್ರವೀಣ್ ಚೌಗುಲೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕೃತ್ಯದ ಬಗ್ಗೆ ಸಾಕ್ಷ್ಯ ಕಲೆ ಹಾಕುತ್ತಿದ್ದಾರೆ. ನೇಜಾರಿನ ಮನೆಗೆ ಹಾಗೂ ಮಂಗಳೂರಿನ ಆತನ ಮನೆಗೆ ಕರೆದೊಯ್ದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಮಂಗಳೂರಿಗೆ ಕರೆದೊಯ್ದು ಮಹಜರು ಪ್ರಕ್ರಿಯೆ ಮುಗಿಸಿದ್ದಾರೆ. ಮುಂದೆ ಹೆಚ್ಚಿನ ತನಿಖೆಗಾಗಿ ಆತನನ್ನು ಬೆಳಗಾವಿ, ಮಹಾರಾಷ್ಟ್ರಕ್ಕೂ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.

ಆ. 29 : ಪುತ್ತೂರು ಎಸ್‌ಡಿಪಿಐ ಆಂತರಿಕ ಚುನಾವಣಾ ಸಭೆ

Posted by Vidyamaana on 2024-08-28 21:00:35 |

Share: | | | | |


ಆ. 29 : ಪುತ್ತೂರು ಎಸ್‌ಡಿಪಿಐ ಆಂತರಿಕ ಚುನಾವಣಾ ಸಭೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 2024-2027ರ ಅವಧಿಯ ಆಂತರಿಕ ಚುನಾವಣೆಯು ರಾಷ್ಟ್ರವ್ಯಾಪಿಯಾಗಿ ನಡೆಯುತ್ತಿದ್ದು ಅದರ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಆಂತರಿಕ ಚುನಾವಣೆಯು ಆ.29ರಂದು ಪಡೀಲಿನ ಟ್ರಿನಿಟಿ ಹಾಲ್‌ನಲ್ಲಿ ನಡೆಯಲಿದೆ.

ಸುಳ್ಯದಲ್ಲಿ ರಾಮ ಮಂದಿರ ಬ್ಯಾನರ್ ಹರಿದ ಪ್ರಕರಣ ಮಾನಸಿಕ ಅಸ್ವಸ್ಥ ವ್ಯಕ್ತಿಯ ಕೃತ್ಯ ಗೊಂದಲಕ್ಕೆ ತೆರೆ

Posted by Vidyamaana on 2024-01-07 22:15:59 |

Share: | | | | |


ಸುಳ್ಯದಲ್ಲಿ ರಾಮ ಮಂದಿರ ಬ್ಯಾನರ್ ಹರಿದ ಪ್ರಕರಣ  ಮಾನಸಿಕ ಅಸ್ವಸ್ಥ ವ್ಯಕ್ತಿಯ ಕೃತ್ಯ ಗೊಂದಲಕ್ಕೆ ತೆರೆ

ಸುಳ್ಯ , ಜ.7: ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಕುರಿತಾಗಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದು, ಮಧ್ಯರಾತ್ರಿ ಮಾನಸಿಕ ಅಸ್ವಸ್ಥ ವ್ಯಕ್ತಿ ಎಸಗಿರುವ ಕೃತ್ಯ ಎಂದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.


ಜ.5ರಂದು ರಾತ್ರಿ ವೇಳೆ ಬ್ಯಾನರನ್ನು ಹರಿದು ಹಾಕಿದ ಬಗ್ಗೆ ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು ಸುಳ್ಯ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದರು. ಶ್ರೀರಾಮ ಮಂದಿರದ ಬ್ಯಾನರ್ ಹರಿದ ಬಗ್ಗೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹ ಮಾಡಿತ್ತು.ಪೊಲೀಸರು ಸುಳ್ಯ ಪೇಟೆಯ ಆಸುಪಾಸಿನಲ್ಲಿ 40 ಕಡೆಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ. ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುವ ವಯಸ್ಸಾದ ವ್ಯಕ್ತಿಯೊಬ್ಬ ಆ ಬ್ಯಾನರನ್ನು ಹರಿದು ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ಕಂಡುಬಂದಿದೆ. ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಹರಿದ ಬ್ಯಾನರ್ ತುಂಡನ್ನು ಇಟ್ಟು ರಾಮನ ಜಪ ಮಾಡಿರುವುದನ್ನು ಸಾರ್ವಜನಿಕರು ನೋಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.


ಹರಿದ ಬ್ಯಾನರ್ ತುಂಡನ್ನು ಪರಿಶೀಲಿಸಿದಾಗ ಶ್ರೀರಾಮನ ಫೋಟೊಗೆ ಯಾವುದೇ ಹಾನಿ ಮಾಡಿರುವುದು ಕಂಡುಬಂದಿಲ್ಲ. ಹರಿದ ಬ್ಯಾನರ್ ತುಂಡನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಯಾರೋ ಕಿಡಿಗೇಡಿಗಳು ಕೋಮು ದ್ವೇಷ ಹರಡಿಸುವುದಕ್ಕಾಗಿ ಇಂತಹ ಕೃತ್ಯ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ತನಿಖೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಎನ್ನುವುದು ತಿಳಿಯುತ್ತಲೇ ವಾತಾವರಣ ತಿಳಿಯಾಗಿದೆ.

ಅಮೆರಿಕದಲ್ಲಿ ಕಾರು ಅಪಘಾತ: ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತ್ಯು

Posted by Vidyamaana on 2024-05-22 14:53:49 |

Share: | | | | |


ಅಮೆರಿಕದಲ್ಲಿ ಕಾರು ಅಪಘಾತ: ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತ್ಯು

ಜಾರ್ಜಿಯಾ: ಕಾರು ಅಪಘಾತದಲ್ಲಿ ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಮೆರಿಕಾದ ಜಾರ್ಜಿಯಾದಲ್ಲಿ ನಡೆದಿದೆ.

ಈ ಅಪಘಾತದಲ್ಲಿ ಆರ್ಯನ್ ಜೋಶಿ ಹಾಗೂ ಶ್ರೀಯಾ ಅವಸರಲ ಎಂಬ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಅನ್ವಿ ಶರ್ಮ ಎಂಬ ವಿದ್ಯಾರ್ಥಿಯು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ

ಶಾಸಕರ ಇಂದಿನ ಕಾರ್ಯಕ್ರಮ ಜೂ 24

Posted by Vidyamaana on 2023-06-23 23:29:33 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜೂ 24


ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜೂ 24 ರಂದು

ಬೆಳಿಗ್ಗೆ 10.30 ಬೆಟ್ಟಂಪಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಸಂಜೆ ಪುತ್ತೂರು ಪುರಭವನದಲ್ಲಿ ಮುಸ್ಲಿಂ ಒಕ್ಕೂಟದಿಂದ ಸನ್ಮಾನ ಸಮಾರಂಭ ಭಾಗವಹಿಸಲಿದ್ದಾರೆ.

Recent News


Leave a Comment: