ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ರೈಲು ಇದು ಇತಿಹಾಸದಲ್ಲೇ ಮೊದಲು ಎಲ್ಲಿ? ಇಲ್ಲಿದೆ ಮಾಹಿತಿ

Posted by Vidyamaana on 2023-09-28 20:36:20 |

Share: | | | | |


ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ರೈಲು ಇದು ಇತಿಹಾಸದಲ್ಲೇ ಮೊದಲು ಎಲ್ಲಿ? ಇಲ್ಲಿದೆ ಮಾಹಿತಿ

ಮಥುರಾ: ಸೆ 28: ರೈಲೊಂದು ತಡರಾತ್ರಿ ಟ್ರ್ಯಾಕ್‌ ಬಿಟ್ಟು ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಉತ್ತರ ಪ್ರದೇಶದ ಮಥುರಾ ರೈಲು ನಿಲ್ದಾಣದಲ್ಲಿ ನಡೆದಿದೆ.ಎಲೆಕ್ಟ್ರಿಕ್‌ ಮಲ್ಟಿಪಲ್‌ ಯೂನಿಟ್‌ ರೈಲೊಂದು ಏಕಾಏಕಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಘಟನೆ ಮಥುರಾ ಜಂಕ್ಷನ್‌ನಲ್ಲಿ ತಡರಾತ್ರಿ ನಡೆದಿದೆ.ರೈಲು ಶಕುರ್ ಬಸ್ತಿಯಿಂದ ಮಂಗಳವಾರ ರಾತ್ರಿ 10:49ಕ್ಕೆ ಮಥುರಾ ನಿಲ್ದಾಣಕ್ಕೆ ಬಂದಿದ್ದು, ಎಲ್ಲಾ ಪ್ರಯಾಣಿಕರು ರೈಲಿನಿಂದ ಇಳಿದ ಕೆಲವೇ ಕ್ಷಣಗಳಲ್ಲಿ ಇದ್ದಕ್ಕಿದ್ದಂತೆ ರೈಲು ಪ್ಲಾಟ್‌ಫಾರ್ಮ್‌ಗೆ ನುಗ್ಗಿದೆ. ಈ ವೇಳೆ ತಕ್ಷಣ ಪ್ರಯಾಣಿಕರು ರೈಲಿನಿಂದ ಇಳಿದಿದ್ದರಿಂದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ಇನ್ನು ಘಟನೆ ಸಂಬಂಧ ಪ್ರತಿಕ್ರಿಯಿಸಿದ ಮಥುರಾ ರೈಲು ನಿಲ್ದಾಣದ ನಿರ್ದೇಶಕ ಎಸ್‌.ಕೆ ಶ್ರೀವಾಸ್ತವ, "ಮಹಿಳೆಯೊಬ್ಬರು ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ. ಇದನ್ನು ಬಿಟ್ಟರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ. ಇತರೆ ರೈಲುಗಳ ಸಂಚಾರಕ್ಕೆ ಅಡಚಣೆ ಆಗಿದೆ" ಎಂದು ತಿಳಿಸಿದ್ದಾರೆ ಅಂತಾ ಪಿಟಿಐ ವರದಿ ಮಾಡಿದೆ. ಮತ್ತೊಂದೆಡೆ ರೈಲು ಅಪಘಾತದ ವಿಡಿಯೋ ಎನ್‌ಎನ್‌ಐ ಟ್ವೀಟ್‌ನಲ್ಲಿ ಹಂಚಿಕೆಯಾಗಿದೆ.

ಮಹಿಳೆಗೆ ಸಣ್ಣಪುಟ್ಟ ಗಾಯ

ಮಥುರಾ ಜಂಕ್ಷನ್ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲು ಪ್ಲಾಟ್‌ಫಾರ್ಮ್‌ಗೆ ಹತ್ತಿದ ಪರಿಣಾಮ ಝಾನ್ಸಿ ಮೂಲದ ಉಷಾದೇವಿ (39) ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಆಕೆಯನ್ನು ಝಾನ್ಸಿಗೆ ಕಳುಹಿಸಲಾಯಿತು ಎಂದು ಹೇಳಿದರು. ಅಲ್ಲದೆ ಈ ಕುರಿತು ಉನ್ನತ ಮಟ್ಟದ ತನಿಖೆಗೆ ರೈಲ್ವೇ ಇಲಾಖೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ಆಗ್ರಾ ವಿಭಾಗದ ಅಧಿಕಾರಿಯ ಪ್ರಕಾರ, ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ ರೈಲು ಮಂಗಳವಾರ ರಾತ್ರಿ 10.50ಕ್ಕೆ ಶಕುರ್ ಬಸ್ತಿಯಿಂದ ಪ್ಲಾಟ್‌ಫಾರ್ಮ್ 2ಎಗೆ ಆಗಮಿಸಿತು. ಸಿಬ್ಬಂದಿ ಸೇರಿದಂತೆ ಎಲ್ಲಾ ಪ್ರಯಾಣಿಕರು ಡಿಬೋರ್ಡ್ ಮಾಡಿದ ನಂತರ, ರೈಲು ಹಳಿ ತಪ್ಪಿದೆ. ನಂತರ ನಿಲ್ದಾಣಕ್ಕೆ ಬರುವ ಮೊದಲು ರೈಲು ಪ್ಲಾಟ್‌ಫಾರ್ಮ್‌ಗೆ ನುಗ್ಗಿತು ಎನ್ನುವ ಮಾಹಿತಿಯನ್ನು ನೀಡಿದ್ದಾರೆ. ಇನ್ನು 2ಎ ಹೊರತುಪಡಿಸಿ ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ ರೈಲುಗಳ ಸಂಚಾರ ಸಾಮಾನ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಕಾಪು : ಪಿಲಿ ಕೋಲ ಸಂಪನ್ನ ಓರ್ವನನ್ನು ಸ್ಪರ್ಶಿಸಿದ ಪಿಲಿ!

Posted by Vidyamaana on 2024-05-05 17:20:58 |

Share: | | | | |


ಕಾಪು : ಪಿಲಿ ಕೋಲ ಸಂಪನ್ನ ಓರ್ವನನ್ನು ಸ್ಪರ್ಶಿಸಿದ ಪಿಲಿ!

ಕಾಪು: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾಗಿರುವ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ-ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ ಮೇ 4ರಂದು ಸಂಪನ್ನಗೊಂಡಿತು.2 ಗಂಟೆಯ ಬಣ್ಣಗಾರಿಕೆಯ ಬಳಿಕ ಅಬ್ಬರದೊಂದಿಗೆ ಪಂಜರದೊಳಗಿಂದ ಹೊರಗೆ ಬಂದ ಹುಲಿಚಂಡಿ ದೈವವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದು, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿ ನೆಡಲಾಗಿದ್ದ ಬಂಟ ಕಂಬವನ್ನೇರಿ ಜೀವಂತ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಮುಂದೆ ಗ್ರಾಮ ಭೇಟಿಗೆ ತೆರಳುವುದು ಸಂಪ್ರದಾಯವಾಗಿದೆ.

ಉಡುಪಿಯ ಗ್ಯಾಂಗ್‌ವಾರ್ ಪ್ರಕರಣ; ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ FIR

Posted by Vidyamaana on 2024-05-29 05:40:08 |

Share: | | | | |


ಉಡುಪಿಯ ಗ್ಯಾಂಗ್‌ವಾರ್ ಪ್ರಕರಣ; ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ FIR

ಉಡುಪಿಯ ಗ್ಯಾಂಗ್‌ವಾ‌ರ್ ಪ್ರಕರಣದಲ್ಲಿ ಗಾಯಗೊಂಡ ಗಾಯಾಳು ಆರೋಪಿಗೆ ಚಿಕಿತ್ಸೆ ನೀಡಿದ ಡಾಕ್ಟರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮೇ 18ರಂದು ನಸುಕಿನ ವೇಳೆ ನಡೆದ ಗ್ಯಾಂಗ್‌ವಾರ್‌ನಲ್ಲಿ ಕಾರು ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಶರೀಫ್‌ನ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿದ್ದರು.ಇದರಿಂದ ಶರೀಫ್‌ನ ಎಡಕಾಲು, ಬಲ ಕಿವಿ ಹಿಂಬದಿ, ಬಲಕೈಗೆ ಗಾಯವಾಗಿತ್ತು.ನಂತರ ಶರೀಫ್‌ನನ್ನು ಇತರೆ ಆರೋಪಿಗಳಾದ ಅಲ್ಪಾಝ್, ಮಜೀದ್ ಚಿಕಿತ್ಸೆಗಾಗಿ ಪಡುಬಿದ್ರಿಯಲ್ಲಿರುವ ಸಿದ್ದಿ ವಿನಾಯಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ : ಮಧು ಬಂಗಾರಪ್ಪ

Posted by Vidyamaana on 2023-09-24 14:23:52 |

Share: | | | | |


ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ : ಮಧು ಬಂಗಾರಪ್ಪ

ಮಂಗಳೂರು: ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ ಎಂದು ಕರ್ನಾಟಕ ಸರಕಾರದ ಶಿಕ್ಷಣ ಸಚಿವರು, ಮಂಗಳೂರು ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಉಸ್ತುವಾರಿಯಾದ ಮಧು ಬಂಗಾರಪ್ಪ ಹೇಳಿದರು.


ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಕರೆದಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.


ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್‌ ‌ನ ಕೈಹಿಡಿಯಲಿದ್ದಾರೆ. ಮತೀಯ ವಾದ ಕೋಮುವಾದದ ಭಾವನಾತ್ಮಕ ವಿಚಾರಗಳಿಂದ ಜನ ವಿಮುಖರಾಗುತ್ತಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರಕಾರ ಕೊಟ್ಟಿರುವ ಗ್ಯಾರೆಂಟಿಗಳು ಜನರ ಬದುಕನ್ನು ಬೆಳಗಿಸಿವೆ. ಇದರ ಪ್ರಭಾವ ಮುಂದಿನ ಚುನಾವಣೆಯಲ್ಲಿ ಪ್ರತಿಬಿಂಬಿತವಾಗಲಿದೆ ಎಂದು ಹೇಳಿದರು.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಕಾರ್ಯಕರ್ತರ, ಸಂಘ ಸಂಸ್ಥೆಗಳ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸರ್ವೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.


ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ವಿಧಾನ ಪರಿಷತ್ ಶಾಸಕರಾದ ಕೆ ಹರೀಶ್ ಕುಮಾರ್ ರವರು ಸಭೆಯ ಅಧ್ಯಕ್ಷತೆ ವಹಿಸಿದರು.

ಮಾಜಿ ಸಚಿವರಾದ ಬಿ ರಮಾನಾಥ್ ರೈ, ಅಭಯಚಂದ್ರ ಜೈನ್ ಮಾತನಾಡಿದರು.


ಬಿ ಇಬ್ರಾಹಿಂ, ಅಶೋಕ್ ಕುಮಾರ್ ರೈ, ಜೆ ಆರ್ ಲೋಬೊ, ಮಿಥುನ್ ರೈ, ಇಬ್ರಾಹಿಂ ಕೊಡಿಜಾಲ್, ಶಶಿದರ್ ಹೆಗ್ಡೆ, ಲುಕ್ಮನ್ ಬಂಟ್ವಾಳ್, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಕೃಪಾ ಆಳ್ವಾ, ಅಶ್ವಿನ್ ಕುಮಾರ್ ರೈ, ಪದ್ಮರಾಜ್ ಆರ್, ಇನಾಯತ್ ಅಲಿ, ಜಿ ಕೃಷ್ಣಪ್ಪ, ಬ್ಲಾಕ್ ಅಧ್ಯಕ್ಷರುಗಳು , ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ನಾಯಕರು, ಮನಪಾ ಸದಸ್ಯರು ಉಪಸ್ಥಿತರಿದ್ದರು

ಸುಳ್ಯ: ಪಿಕಪ್ ಮತ್ತು ಟಿಟಿ ವಾಹನ ನಡುವೆ ಅಪಘಾತ

Posted by Vidyamaana on 2023-06-25 08:20:50 |

Share: | | | | |


ಸುಳ್ಯ: ಪಿಕಪ್ ಮತ್ತು ಟಿಟಿ ವಾಹನ ನಡುವೆ ಅಪಘಾತ

ಸುಳ್ಯ: ತಾಲೂಕಿನ ಅರಂತೋಡು ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಿಕಪ್ ಮತ್ತು ಟಿಟಿ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿಗೆ ಗಂಭೀರ ಗಾಯಗೊಂಡಿದ್ದಾರೆ. ಟಿಟಿ 

ವಾಹನವು ಮಂಗಳೂರಿನಿಂದ ಮಡಿಕೇರಿಗೆ ಹಾಗೂ ಪಿಕಪ್ ಸುಳ್ಯ ಕಡೆಗೆ ಹೋಗುತ್ತಿದ್ದು, ತೆಕ್ಕಿಲ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.ಗಾಯಾಳು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಸಂಬಂಧ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಜುಲೈ 29: ಕೆನ್ನೆಡಿಗಳು ಒಂದು ಕಥಾನಕ ಕನ್ನಡ ಅನುವಾದ ಕೃತಿ ಬಿಡುಗಡೆ

Posted by Vidyamaana on 2023-07-28 10:14:00 |

Share: | | | | |


ಜುಲೈ 29: ಕೆನ್ನೆಡಿಗಳು ಒಂದು ಕಥಾನಕ ಕನ್ನಡ ಅನುವಾದ ಕೃತಿ ಬಿಡುಗಡೆ

ಪುತ್ತೂರು: ಆಂಗ್ಲ ಭಾಷೆಯ ಹೆಸರಾಂತ ಅಮೆರಿಕ ಲೇಖಕ ಪೀಟರ್ ಕೊಲ್ಲಿಯರ್ ಹಾಗೂ ಡೇವಿಡ್ ಹೊರೋವಿಟ್ಸ್ ಇವರಿಬ್ಬರು ಜಂಟಿಯಾಗಿ ರಚಿಸಿದ ‘ದಿ ಕೆನ್ನೆಡಿಸ್ ಏನ್ ಅಮೇರಿಕನ್ ಡ್ರಾಮಾ’ ಕೃತಿಯ ಕನ್ನಡ ಅನುವಾದ ‘ಕೆನ್ನೆಡಿಗಳು, ಒಂದು ಕಥಾನಕ’ ಕೃತಿ ಲೋಕಾರ್ಪಣೆ ಜುಲೈ 29 ಶನಿವಾರ ಮಧ್ಯಾಹ್ನ 2:30ಕ್ಕೆ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.

ಹಿರಿಯ ಸಾಹಿತಿ ಡಾ. ತಾಳ್ತಜೆ ವಸಂತ ಕುಮಾರ್ ಕೃತಿ ಲೊಕಾರ್ಪಣೆಗೊಳಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ಸಹಾಯಕ ಆಯುಕ್ತ ಗಿರೀಶ್ ನಂದನ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.‌, ಮಿತ್ರಂಪಾಡಿ ಜಯರಾಮ ರೈ, ಕಸಾಪ ಜಿಲ್ಲಾ ಕೋಶಾಧ್ಯಕ್ಷ ಐತಪ್ಪ ನಾಯ್ಕ್ ಭಾಗವಹಿಸಲಿದ್ದಾರೆ. ಕಸಾಪ ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.


ಕರ್ತೃ ಎಂ. ಶಾಂತರಾಮ್ ರಾವ್:

ಆಂಗ್ಲ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದವರು ಎಂ. ಶಾಂತರಾಮ್ ರಾವ್. ಇವರು ಭಾರತ ಸರಕಾರದ ವಾಣಿಜ್ಯ ಇಲಾಖೆಯ ಅಡಿಯ ಎಕ್ಸ್ಪೋರ್ಟ್ ಕ್ರೆಡಿಟ್ ಗ್ಯಾರೆಂಟ್ ಕಾರ್ಪೋರೇಷನ್ ಇಂಡಿಯಾ ಲಿ. (ಇಸಿಜಿಸಿ)ನ ನಿವೃತ್ತ ಅಧಿಕಾರಿ. ಕನ್ನಡದ ಪ್ರಸಿದ್ಧ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಶಿವರಾಮ ಕಾರಂತರ ಸಹೋದರಿ ಶ್ರೀದೇವಿ ಹಾಗೂ ಪುತ್ತೂರಿನ ಖ್ಯಾತ ವಕೀಲರಾಗಿದ್ದ ದಿ. ಸದಾಶಿವರಾಯರ 4ನೆಯ ಪುತ್ರ ಎಂ. ಶಾಂತರಾಮ್ ರಾವ್. ಪುತ್ತೂರಿನ ಹಿರಿಯ ವಕೀಲ ರಾಮ್ ಮೋಹನ್ ರಾವ್ ಅವರ ಸಹೋದರ.


ಕೃತಿ ಕುರಿತು:

ಅಮೆರಿಕ ದೇಶದಲ್ಲಿ ಅತಿ ಕಿರಿಯ ವಯಸ್ಸಿನಲ್ಲಿಯೇ ಚುನಾಯಿತ ಹಾಗೂ ಪ್ರಥಮ ಕೆಥೋಲಿಕ್ ಪಂಗಡದ ಅಧ್ಯಕ್ಷನೆಂಬ ಹೆಗ್ಗಳಿಕೆ ಹಾಗೂ ಪ್ರಸಿದ್ಧಿ ಪಡೆದ ಮಹಾನ್ ನಾಯಕ ಜಾನ್.ಎಫ್ ಕೆನ್ನಡಿ. ಇವರ ಕುಟುಂಬ ಅಮೆರಿಕಾದಲ್ಲಿ ನೆಲೆಯಾಗಿ ಯಶಸ್ಸನ್ನು ಕಂಡ  ರೋಚಕ ಕಥೆ ಈ ಕೃತಿಯಲ್ಲಿ ಸೊಗಸಾಗಿ ನಿರೂಪಣೆಗೊಂಡಿದೆ. ಅವರ ಕುಟುಂಬ ರಾಜಕೀಯವಾಗಿ ಹಾಗೂ ವ್ಯಾವಹಾರಿಕವಾಗಿ ಯಶಸ್ವಿಯಾದ ವಿವರ, ಅವರ ರಾಜಕೀಯದಲ್ಲಿನ ಏಳು ಬೀಳುಗಳು, ಕುಟುಂಬದಲ್ಲಿ ನಡೆದ ಅಚ್ಚರಿಯ ಘಟನೆಗಳು, ಅವರ ಯಶಸ್ಸು, ಅನುಭವಿಸಿದ ನೋವು - ನಲಿವು, ಅವರೊಳಗಿನ ಸ್ಪರ್ಧೆ, ಪ್ರಣಯ ಪ್ರಸಂಗಗಳು, ಭೂಗತ ಜಗತ್ತಿನೊಂದಿಗಿನ ಸಂಬಂಧಗಳು, ಮಾದಕ ವ್ಯಸನಕ್ಕೆ ದಾಸರಾದ ವಿಚಾರ, ಷೇರು ವ್ಯವಹಾರದಲ್ಲಿ ಜೋ. ಕೆನ್ನೆಡಿಯು (ಜಾನ್. ಎಫ್. ಕೆನ್ನಡಿಯ ತಂದೆ) ನಡೆಸಿದ ಅವ್ಯವಹಾರ, ಅವರ ಪ್ರತಿಷ್ಠೆಗಾಗಿ ಬುದ್ದಿಮಾಂದ್ಯ ಮಗುವನ್ನು  ಪ್ರಪಂಚದಿಂದ ದೂರವಿರಿಸಿದ ಮನಕಲುಕುವ ವಿಚಾರ, ಮುಂದಿನ ಜನಾಂಗವು ಪೇಚಿಗೆ ಸಿಲುಕಿದ ಘಟನೆಗಳ ವಿಸ್ತೃತ ವಿವರಣೆಯೇ ಈ ‘ಕೆನ್ನಡಿಗಳು ಒಂದು ಕಥಾನಕ’ ಕೃತಿಯ ಕಥಾ ವಸ್ತುವಾಗಿದೆ.

ಈ ಕೃತಿಯನ್ನು ಓದುತ್ತ ಹೋದಂತೆ ರೋಚಕತೆ ಹಾಗೂ ಓದುವ ಹಂಬಲ ಹೆಚ್ಚುತ್ತ ಹೋಗುತ್ತದೆ. ಕೆನ್ನಡಿ ಕುಟುಂಬವು ರಾಜಕೀಯವಾಗಿ ಬೆಳೆದು ಬಂದ ಪರಿ ಹೇಗೆ? ಇತ್ಯಾದಿಗಳು ಇದರಲ್ಲಿ ಸುಂದರವಾಗಿ ಬಿಂಬಿತವಾಗಿದೆ.

ಸುಮಾರು 771 ಪುಟ ಇರುವ ಈ ಕೃತಿಗೆ ಮುನ್ನುಡಿಯನ್ನು ಕ.ಸಾ.ಪ – ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಬರೆದಿದ್ದಾರೆ.

Recent News


Leave a Comment: