ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಪುತ್ತೂರು : ಕರಾವಳಿಯಾದ್ಯಂತ ಕ್ರೈಸ್ತರಿಂದ ಇಂದು ಮೊಂತಿ ಹಬ್ಬ ಆಚರಣೆ

Posted by Vidyamaana on 2023-09-08 18:10:35 |

Share: | | | | |


ಪುತ್ತೂರು : ಕರಾವಳಿಯಾದ್ಯಂತ ಕ್ರೈಸ್ತರಿಂದ ಇಂದು ಮೊಂತಿ ಹಬ್ಬ ಆಚರಣೆ

ಪುತ್ತೂರು : ಕರಾವಳಿಯಾದ್ಯಂತ ಗುರುವಾರ ಕ್ರೈಸ್ತರು ಮೊಂತಿ ಹಬ್ಬವನ್ನು ಸಂಭ್ರಮೋಲ್ಲಾಸಗಳಿಂದ ಆಚರಿಸಲಾಗುತ್ತಿದೆ.

ತೆನೆ ಹಬ್ಬವೆಂದೂ ಕರೆಯಲ್ಪಡುವ ಮೊಂತಿ ಫೆಸ್ಟ್ ಪ್ರಯುಕ್ತ ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ, ಹೊಸ ತೆನೆಯ ಆಶೀರ್ವಚನ, ವಿತರಣೆ, ಮೆರವಣಿಗೆ, ಪುಷ್ಪಾರ್ಚನೆಯ ಮೂಲಕ ಮೇರಿ ಮಾತೆಗೆ ನಮನ, ಧರ್ಮ ಗುರುಗಳಿಂದ ಹಬ್ಬದ ಸಂದೇಶ, ಹಬ್ಬದ ಶುಭಾಶಯ ವಿನಿಮಯ, ಸಿಹಿ ತಿಂಡಿ ಮತ್ತು ಕಬ್ಬು ವಿತರಣೆ ಹಾಗೂ ಬಳಿಕ ಮನೆಗಳಲ್ಲಿ ಹಬ್ಬದ ಭೋಜನವನ್ನು ಮಾಡಲಾಗುತ್ತದೆ.

ಮೇರಿ ಮಾತೆಯ ಜನ್ಮದಿನವನ್ನು ಪ್ರಕೃತಿಯು ನೀಡಿರುವ ಕೊಡುಗೆಗಳಿಗಾಗಿ ಕೃತಜ್ಞತೆ ಸಲ್ಲಿಸುವ ದಿನವಾಗಿ ಮೊಂತಿ ಫೆಸ್ತ್ ಆಚರಿಸುವುದು ಈ ದಿನದ ವಿಶೇಷ. ಈ ಹಬ್ಬದಲ್ಲಿ ಹೊಸ ತೆನೆ, ನಾನಾ ಬಗೆಯ ಹೂವು, ಸಸ್ಯಹಾರಿ ಖಾದ್ಯಗಳಿಗೆ ವಿಶೇಷ ಆದ್ಯತೆ ಇರಲಿದೆ

ಬಪ್ಪಳಿಗೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವಿನ ರಕ್ಷಣೆ

Posted by Vidyamaana on 2023-09-26 21:54:16 |

Share: | | | | |


ಬಪ್ಪಳಿಗೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವಿನ ರಕ್ಷಣೆ

ಪುತ್ತೂರು: ಇಲ್ಲಿನ ಬಪ್ಪಳಿಗೆ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದನನ್ನ ಹಿಡಿದು ರಕ್ಷಣೆ ಮಾಡಲಾಗಿದೆ. ಬಪ್ಪಳಿಗೆ ಪರಿಸರದ ಜನನಿಬಿಡ ಪ್ರದೇಶ ರಸ್ತೆಯಲ್ಲಿ ಅಡ್ಡಲಾಗಿದ್ದ ಹೆಬ್ಬಾವನ್ನ ಕಂಡು ಯುವಕನೋರ್ವ ಬೆಚ್ಚಿ ಬಿದ್ದಿದ್ದಾನೆ.  ಬಳಿಕ ಸ್ನೇಕ್ ರಾಜೇಶ್ ನೂಜಿ ಅವರನ್ನ ಕರೆದು ಹೆಬ್ಬಾವನ್ನ ಹಿಡಿದು ರಕ್ಷಣೆ ಮಾಡಿ ಅರಣ್ಯವಲಯಕ್ಕೆ ಬಿಡಲಾಗಿದೆ.

ಅಂತ್ಯಕ್ರಿಯೆಗೆ ಬರುವಂತೆ ಪ್ರಿಯತಮೆಗೆ ಆಹ್ವಾನಿಸಿ ಲೈವ್ ವಿಡಿಯೋ ಮಾಡುತ್ತಲೇ ಪ್ರಾಣ ಬಿಟ್ಟ ಪ್ರೇಮಿ

Posted by Vidyamaana on 2023-08-13 08:58:35 |

Share: | | | | |


ಅಂತ್ಯಕ್ರಿಯೆಗೆ ಬರುವಂತೆ ಪ್ರಿಯತಮೆಗೆ ಆಹ್ವಾನಿಸಿ ಲೈವ್ ವಿಡಿಯೋ ಮಾಡುತ್ತಲೇ ಪ್ರಾಣ ಬಿಟ್ಟ ಪ್ರೇಮಿ

ಬೆಂಗಳೂರು: ಪ್ರೇಮಿಯೊಬ್ಬ ವಿಡಿಯೋ ರೆಕಾರ್ಡ್ ಮಾಡಿ ತನ್ನ ಅಂತ್ಯಕ್ರಿಯೆಗೆ ಪ್ರಿಯತಮೆಗೆ ಆಹ್ವಾನ ನೀಡಿ ಲೈವ್​ನಲ್ಲೇ ಪ್ರಾಣಬಿಟ್ಟಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಿರಣ್(22) ಎಂಬ ಯುವಕ ಲೈವ್ ವಿಡಿಯೋ ಮಾಡಿ ಪ್ರಾಣ ಬಿಟ್ಟಿದ್ದಾನೆ. ಆಗಸ್ಟ್​​​ 9 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯುವಕ ಕಿರಣ್ ತನ್ನ ಲೈವ್ ವಿಡಿಯೋದಲ್ಲಿ ತನ್ನ ಲವ್ವರ್​ಗೆ ತನ್ನ ಅಂತ್ಯಕ್ರಿಯೆಗೆ ಬರುವಂತೆ ಆಹ್ವಾನ ನೀಡಿದ್ದಾನೆ. ಹಾಗೂ ಅದೇ ಲೈವ್ ವಿಡಿಯೋದಲ್ಲಿ ಪ್ರಾಣಬಿಟ್ಟಿದ್ದಾನೆ. “ಹಾಯ್” ಬಂಗಾರಿ ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ ಕಣೆ, “ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಆಗು”. ನಿನಗೆ ಹುಟ್ಟಿದ ಮಗುವಿಗೆ ನನ್ನ ಹೆಸರೇ ಇಡಬೇಕು. ಇದು ನನ್ನ ಆಕಸ್ಮಿಕ ಸಾವು. ದಯವಿಟ್ಟು ಅಂತ್ಯಕ್ರಿಯೆಗೆ ಬಂದು ಹೋಗು. ನನ್ನ ಸಾವಿಗೆ ನಿನ್ನ ತಂಗಿಯನ್ನು ಕರೆದುಕೊಂಡು ಬಾ. ಒಳ್ಳೆಯದಾಗಲಿ ನಿಮ್ಮ ಕುಟುಂಬಕ್ಕೆ. ಹೀಗೆ ಚೆನ್ನಾಗಿರಿ ಎಂದು ಕಿರಣ್ ಲೈವ್​​ನಲ್ಲೇ ಕೈ ಮುಗಿದು ಪ್ರಾಣ ಬಿಟ್ಟಿದ್ದಾನೆ.ಮೃತ ಕಿರಣ್, ಆಗಸ್ಟ್ 3ರಂದು ತಾನು ಪ್ರೀತಿಸುತ್ತಿದ್ದ ಹುಡುಗಿಗೆ ರಿಂಗ್, ಕಾಲು ಚೈನ್ ಕೊಡಿಸಿದ್ದನಂತೆ. ಈ ವಿಷಯ ತಿಳಿದ ಯುವತಿಯ ತಂದೆ ಇವರಿಬ್ಬರ  ಪ್ರೀತಿಯನ್ನು       ನಿರಾಕರಿಸಿದ್ದರು. ಹೀಗಾಗಿ ಯುವತಿ ಮನೆಯವರೆ ಏನೋ ಮಾಡಿ ನನ್ನ ಮಗನ ಸಾವಿಗೆ ಕಾರಣರಾಗಿದ್ದಾರೆಂದು ಕಿರಣ್ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಇನ್ನು ರೇಬೀಸ್ ರೋಗ ಉಲ್ಬಣಗೊಂಡು ಯುವಕ ನಿಮಾನ್ಸ್ ಸೇರಿದ್ದ. ನಿಮಾನ್ಸ್ ಆಸ್ಪತ್ರೆಯ ಬೆಡ್ ಮೇಲೆಯೇ ವಿಡಿಯೋ ಮಾಡುತ್ತ ಕಿರಣ್ ಪ್ರಾಣಬಿಟ್ಟಿದ್ದಾನೆ.

142 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

Posted by Vidyamaana on 2023-04-19 08:33:01 |

Share: | | | | |


142 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

ಹೊಸದಿಲ್ಲಿ: ಭಾರತವು 142.86 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ ಎಂದು ವಿಶ್ವಸಂಸ್ಥೆ ಇಂದು ಬಿಡುಗಡೆ ಮಾಡಿರುವ  ಅಂಕಿ-ಅಂಶಗಳಿಂದ ತಿಳಿದುಬಂದಿದೆ.

1960ರಲ್ಲಿ ಮಾಜಿ ನಾಯಕ ಮಾವೋ ಝೆಡಾಂಗ್ ಅವರ ವಿನಾಶಕಾರಿ ಕೃಷಿ ನೀತಿಗಳ ಅಡಿಯಲ್ಲಿ ಲಕ್ಷಾಂತರ ಜನರು ಹಸಿವಿನಿಂದ ಸತ್ತ ನಂತರ ಮೊದಲ ಬಾರಿಗೆ ಚೀನಾದಲ್ಲಿ ಜನರ ಸಂಖ್ಯೆ ಕಳೆದ ವರ್ಷ ಕುಸಿತ ಕಂಡಿತ್ತು.

ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನೆ

Posted by Vidyamaana on 2023-10-09 08:56:05 |

Share: | | | | |


ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನೆ

ಪುತ್ತೂರು: ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ಭಾರತವಾಗಿದೆ, ದೇಶದ ಸ್ವಾತಂತ್ರ್ಯಕ್ಕೆ ಇಲ್ಲಿರುವ ಎಲ್ಲಾ ಧರ್ಮಗಳ ನೇತಾರರು ಹೋರಾಟ ಮಾಡಿದ್ದಾರೆ , ಪ್ರಾಣತ್ಯಾಗವನ್ನು ಮಾಡಿದ್ದಾರೆ. ನಮ್ಮ ದೇಶಕ್ಕೆ ಸುಲಭದಲ್ಲಿ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬುದು ನಮಗೆಲ್ಲರಿಗೂ ಗೊತ್ತಿದೆ ಆದರೆ ನಾವಿಂದು ದೇಶದ ಇತಿಹಾಸವನ್ನು ಮರೆತು ಧರ್ಮ, ಜಾತಿಯ ಹೆಸರಿನಲ್ಲಿ ಕಚ್ಚಾಟ ನಡೆಸಿ ಭಾರತದ ಸೌಂದರ್ಯವನ್ನೇ ಹಾಳುಮಾಡುತ್ತಿದ್ದೇವೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಬೆಟ್ಟಂಪಾಡಿ ಗ್ರಾಮದ ಇರ್ದೆ ಪೇರಲ್ತಡ್ಕ ನವೀಕೃತಗೊಂಡ ಮಸೀದಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲಾ ಧರ್ಮಗಳು ನ್ಯಾಯ, ಸತ್ಯ, ಅಹಿಂಸೆಯನ್ನೇ ಕಲಿಸುತ್ತದೆ, ಆದರೆ ಆ ಧರ್ಮವನ್ನು ನಂಬಿರುವ ನಾವು ನಾನು ಮೇಲು ಅವನು ಕೀಲು ಎಂಬ ದೃಷ್ಟಿಯಿಂದ ಕಚ್ಚಾಟ ಮಾಡುತ್ತಿದ್ದೇವೆ ಇದು ಸಲ್ಲದು, ಭಾರತ ವಿಶ್ವಗುರುವಾಗಬೇಕಾದರೆ ದೇಶದಲ್ಲಿ ಕೋಮು ಸೌಹಾರ್ಧತೆ ನೆಲೆಯೂರಬೇಕು, ಪ್ರತೀಯೊಬ್ಬ ಭಾರತೀಯರೂ ಒಂದೇ ತಾಯಿ ಮಕ್ಕಳಂತೆ ಬಾಳಿಬದುಕಬೇಕಾಗಿದೆ ಎಂದು ಹೇಳಿದರು.ನೊಂದವರಿಗೆ ನಾವು ಧರ್ಮ , ಜಾತಿ ನೋಡದೆ ಸಹಾಯ ಮಾಡುವ , ಕಷ್ಟಗಳಿಗೆ ಸ್ಪಂದಿಸುವ ಮನೋಭಾವ ಇದ್ದಲ್ಲಿ ಮಾತ್ರ ನಮ್ಮ ಊರು ಶಾಂತಿಯ ನೆಲೆ ಬೀಡಾಗಲು ಸಾಧ್ಯ ಎಂಬುದನ್ನು ಪ್ರತೀಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ ಅವರು ರಾಜಕೀಯ ಲಾಭಕ್ಕೋಸ್ಕರ ಕೆಲವೊಂದು ರಾಜಕೀಯ ಪಕ್ಷಗಳು ಇಲ್ಲಿ ಕೋಮು ವಿಷ ಬೀಜವನ್ನು ಬಿತ್ತುವ ಕೆಲಸ ಮಾಡುತ್ತಿದೆ ಇದರ ಬಗ್ಗೆ ಜನರಲ್ಲಿ ಜಾಗೃತಿಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಮಂಜೇಶ್ವರ ಸಾಸಕರಾದ ಎಂ ಕೆ ಎಂ ಅಶ್ರಫ್‌ರವರು ಮಾತನಾಡಿ ಭಾರತದ ಜಾತ್ಯಾತೀತ ತತ್ವ ಅದು ಎಂದೆಂದೂ ಇಲ್ಲಿ ನೆಲೆ ನಿಲ್ಲಿದೆ ಅದನ್ನು ತೊಡೆದು ಹಾಕಲು ಯಾವ ಕೋಮು ಶಕ್ತಿಗೂ ಸಾಧ್ಯವಿಲ್ಲ. ದೇಶದಲ್ಲಿ ೯೦ ಶೇ. ಜನರಲ್ಲಿ ಹರಿಯುವ ರಕ್ತ ಅದು ಸೌಹಾರ್ಧತೆಯ ರಕ್ತವಾಗಿದೆ. ದೇಶದ ಮೊದಲ ಸ್ವಾತಂತರ್‍ಯ ಹೋರಾಟವನ್ನು ಆರಂಭ ಮಾಡಿದ್ದು ಓರ್ವ ಮುಸ್ಲಿಂ ಧರ್ಮಗುರುವಾಗಿದ್ದರ ಅವರಿಗೆ ಇಲ್ಲಿನ ಶೇ.೧೦೦ ಹಿಂಧೂ ಬಂಧುಗಳು ಬೆಂಬಲ ನೀಡಿದ್ದರು ಎಂಬ ಇತಿಹಾಸವನ್ನು ನಾವು ಮರೆಯಬಾರದು. ದೇಶದ ಸೌಹಾರ್ಧತೆಯನ್ನು ಹಾಳು ಮಾಡುವ ಶಕ್ತಿಗಳ ವಿರುದ್ದ ನಾವು ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದರು. ಕೆಪಿಸಿಸಿ ಸಂಯೋಜಕರಾದ ಕವು ಹೇಮನಾಥ ಶೆಟ್ಟಿ ಮಾತನಾಡಿ ಸೌರ್ಹಾರ್ಧತೆ ಎಂಬುದು ಹೃದಯದಲ್ಲಿ ಹುಟ್ಟುವಂತದ್ದು ಕೋಮುವಾದ ಮೈಗೂಡಿಸಿಕೊಂಡಲ್ಲಿ ಈ ದೇಶದಲ್ಲಿ ಬದುಕುವುದು ಕಷ್ಟ ಸಾಧ್ಯವಾಗಿದೆ. ಕೋಮುವಾದವನ್ನು ಮಾಡಿ ಜನರ ನಡುವೆ ಕಲಹ ಸೃಷ್ಟಿಸಿದವರು ಯಾವ ಸಾಧನೆಯನ್ನು ಮಾಡಿಲ್ಲ, ಇನ್ನೂ ಮಾಡುವುದು ಇಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಹಾಗೂ ಮಂಜೇಶ್ವರ ಶಾಕರಾದ ಎಂ ಕೆ ಎಂ ಅಶ್ರಫ್‌ರವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಅಧ್ಯಕ್ಷರಾದ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಸ್ವಾಗತಿಸಿದರು. ಆಸಿಫ್ ಹಾಜಿ ತಂಬುತ್ತಡ್ಕ ವಂದಿಸಿದರು.

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಹಿನ್ನಲೆ :ಸಕಲೇಶಪುರ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆ ಬಳಸಲು ಸೂಚನೆ

Posted by Vidyamaana on 2024-07-18 14:11:37 |

Share: | | | | |


ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಹಿನ್ನಲೆ :ಸಕಲೇಶಪುರ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆ ಬಳಸಲು ಸೂಚನೆ

ಮಾಣಿ : ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಚಲಿಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸುವ ಮೂಲಕ ಪೊಲೀಸರು ಮಾಹಿತಿ ನೀಡುತ್ತಿದ್ದಾರೆ.

Recent News


Leave a Comment: