ಮಂಗಳೂರು ಪೊಲೀಸರು ಮಿಂಚಿನ ಕಾರ್ಯಾಚರಣೆ: ಸಕಲೇಶಪುರದಲ್ಲಿ ಚಡ್ಡಿ ಗ್ಯಾಂಗ್ ಪೊಲೀಸ್ ಬಲೆಗೆ

ಸುದ್ದಿಗಳು News

Posted by vidyamaana on 2024-07-10 06:18:20 |

Share: | | | | |


ಮಂಗಳೂರು ಪೊಲೀಸರು ಮಿಂಚಿನ ಕಾರ್ಯಾಚರಣೆ: ಸಕಲೇಶಪುರದಲ್ಲಿ ಚಡ್ಡಿ ಗ್ಯಾಂಗ್ ಪೊಲೀಸ್ ಬಲೆಗೆ

ಮಂಗಳೂರು: ಉರ್ವಾದಲ್ಲಿ ವೃದ್ಧ ದಂಪತಿಯ ಮೇಲೆ ಹಲ್ಲೆಗೈದು ಚಿನ್ನಾಭರಣ ದರೋಡೆ ಮಾಡಿದ್ದ ಮಧ್ಯಪ್ರದೇಶ ಮೂಲದ ಚಡ್ಡಿ ಬನಿಯಾನ್ ಗ್ಯಾಂಗ್ ಸದಸ್ಯರನ್ನು ಮಂಗಳೂರು ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಸಕಲೇಶಪುರದಲ್ಲಿ ಬಂಧಿಸಿದ್ದಾರೆ. 


ಮಧ್ಯಪ್ರದೇಶ ಗುಣಾ ಜಿಲ್ಲೆಯ ರಗೋಗರ್ ತಾಲೂಕಿನ ವಿಶ್ವನಗರ ನಿವಾಸಿ ರಾಜು ಸಿಂಗ್ವಾನಿಯ (24), ಭೋಪಾಲ್ ಜಿಲ್ಲೆಯ ಗುಲಾಬ್ಗಂಜ್ ನಿವಾಸಿ ಮಯೂರ್ (30), ಮಾಧವ್ಗಡ್ ಅಶೋಕನಗರ ನಿವಾಸಿ ಬಾಲಿ (22), ಗುಣಾ ಜಿಲ್ಲೆಯ ಕೋತ್ವಾಲಿ ನಿವಾಸಿ ವಿಕ್ಕಿ (21) ಬಂಧಿತರು.‌ 


ಇಂದು ನಸುಕಿನ ಜಾವ ಸುಮಾರು 4 ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ಉರ್ವಾ ಬಳಿಯ ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ಸ್ ತುಂಡರಿಸಿ ಒಳನುಗ್ಗಿದ್ದು ವೃದ್ಧ ದಂಪತಿಗೆ ಹಲ್ಲೆಗೈದು ಬೆದರಿಸಿ, ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಕಪಾಟಿನ ಲಾಕರ್ ಒಳಗೆ ಇರಿಸಿದ್ದ 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು ರೂ 1 ಲಕ್ಷ ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ. 3000 ನಗದು ಹಣವನ್ನು ಸುಲಿಗೆ ಮಾಡಿ, ಸದ್ರಿ ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದರು. ಈ ಬಗ್ಗೆ ವಿಕ್ಟರ್ ಅವರ ಪತ್ನಿ ಪ್ಯಾಟ್ರಿಸಿಯಾ ಮೆಂಡೊನ್ಸಾ ನೀಡಿದ ದೂರಿನಂತೆ ಉರ್ವಾ ಠಾಣೆಯಲ್ಲಿ ಅ.ಕ್ರ 69/2024 ಕಲಂ 309(6), 331(7), 311, 305, 3(5) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು‌.

ಪ್ರಕರಣ ನಡೆದ ಬೆನ್ನಲ್ಲೇ ಪೊಲೀಸರು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಎಲ್ಲ ಠಾಣೆಯ ಪೊಲೀಸರಿಗೆ ಅಲರ್ಟ್ ಸೂಚನೆ ಹೋಗಿತ್ತು. ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆ ಮಾಡಿ ಆಸುಪಾಸಿನಲ್ಲಿದ್ದ  ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಶಂಕಿತ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡುಬಂದಿತ್ತು.   

ಕೂಡಲೇ ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಮಾಹಿತಿ ಪಡೆದಿದ್ದು ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು  ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿದ್ದರು. ಸದರಿ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ನಿರ್ವಾಹಕರನ್ನು ಸಂಪರ್ಕಿಸಿ ಅವರ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಗಿತ್ತು. ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಸದರಿ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ದರೋಡೆ ಕೃತ್ಯದ ಬಗ್ಗೆ ಒಪ್ಪಿಕೊಂಡಿದ್ದಾರೆ. ಅವರ ಬಳಿಯಲ್ಲಿದ್ದ ಮಂಗಳೂರಿನಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಹಾಗೂ ಹಣವನ್ನು ವಶಪಡಿಸಿ ಉರ್ವಾ ಪೊಲೀಸರಿಗೆ ನೀಡಿರುತ್ತಾರೆ. 

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಸುಳಿವೇ ಇಲ್ಲದ ಕೃತ್ಯದ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ತೋರಟ್,  ಉರ್ವಾ ಠಾಣೆಯ ನಿರೀಕ್ಷಕರಾದ ಭಾರತೀ ಜಿ. ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ಕಾರ್ಯಾಚರಣೆ ನಡೆಸಿದ್ದಾರೆ. ಶೀಘ್ರ ಪತ್ತೆ ಕಾರ್ಯಕ್ಕೆ  ಹಾಸನ ಜಿಲ್ಲೆಯ ಎಸ್ಪಿ ಮಹಮ್ಮದ್ ಸುಜೀತಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಮ್ಮಯ್ಯ ಎಂ.ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ,  ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ ಸಹಕರಿಸಿರುತ್ತಾರೆ.

 Share: | | | | |


ಮೊಬೈಲ್ ನಲ್ಲಿ ಹೊಡೆದು ಅತ್ತೆಯನ್ನು ಕೊಂದ ಪಾಪಿ ಸೊಸೆ

Posted by Vidyamaana on 2024-05-03 22:21:22 |

Share: | | | | |


ಮೊಬೈಲ್ ನಲ್ಲಿ ಹೊಡೆದು ಅತ್ತೆಯನ್ನು ಕೊಂದ ಪಾಪಿ ಸೊಸೆ

ಮಡಿಕೇರಿ: ಅತ್ತೆಯನ್ನು ಸೊಸೆಯೇ ಹತ್ಯೆ ಮಾಡಿದ ನಿಗೂಢ ರಹಸ್ಯಕಾರಿ ಸಿನಿಮಾ ಮಾದರಿ ಘಟನೆ ಮಡಿಕೇರಿಯಲ್ಲಿ ನಡೆದಿದ್ದು, ಸಹಜ ಸಾವು ಎಂದು ನಂಬಲಾಗಿದ್ದ ಪ್ರಕರಣ ತಿರುವು ಪಡೆದುಕೊಂಡು ಕೊಲೆ ಎಂಬುದು ಬಯಲಾಗಿ ಆರೋಪಿತೆಯನ್ನು ಪೊಲೀಸರು ಬಂಧಿಸಿದ್ದಾರೆ.


ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಪೂವಮ್ಮ (73) ಎಂಬವರನ್ನು ಹತ್ಯೆ ಮಾಡಲಾಗಿದ್ದು, ಕೊಲೆ ಆರೋಪದಲ್ಲಿ ಸೊಸೆ ಬಿಂದು (26) ಎಂಬಾಕೆಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬೆಳಕಿಗೆ ಬಂದಿದ್ದು ಹೇಗೆ?

ಪೂವಮ್ಮ ಅವರ ಪುತ್ರ ಶಿಕ್ಷಕರಾಗಿರುವ ಪ್ರಸನ್ನ, ಪತ್ನಿ ಬಿಂದು ಮತ್ತು ಒಂದು ವರ್ಷದ ಪುತ್ರಿಯೊಂದಿಗೆ ವಾಸವಾಗಿದ್ದರು. ಅತ್ತೆ ಮತ್ತು ಸೊಸೆ ನಡುವೆ ತೀವ್ರ ಮನಸ್ತಾಪ ಇತ್ತು ಎಂದು ತಿಳಿದು ಬಂದಿದೆ.

ಪಾಣೆಮಂಗಳೂರು ಹಳೆ ನೇತ್ರಾವತಿ ಸೇತುವೆಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ಕಂಡು ಬಂದ ದ್ವಿಚಕ್ರ ವಾಹನ, ನದಿ ನೀರಿನಲ್ಲಿ ಮೃತದೇಹ ಪತ್ತೆ : ಘಟನೆ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸ್ ದೂರು ನೀಡಿದ ಸಂಬಂಧಿಕರು.

Posted by Vidyamaana on 2023-01-13 02:20:08 |

Share: | | | | |


ಪಾಣೆಮಂಗಳೂರು ಹಳೆ ನೇತ್ರಾವತಿ ಸೇತುವೆಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ಕಂಡು ಬಂದ ದ್ವಿಚಕ್ರ ವಾಹನ, ನದಿ ನೀರಿನಲ್ಲಿ ಮೃತದೇಹ ಪತ್ತೆ : ಘಟನೆ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸ್ ದೂರು ನೀಡಿದ ಸಂಬಂಧಿಕರು.

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಹಳೇ ಸೇತುವೆಯಲ್ಲಿ ಬುಧವಾರ ಮಧ್ಯರಾತ್ರಿ ವೇಳೆಗೆ ದ್ವಿಚಕ್ರ ವಾಹನ ಸೇತುವೆಯ ಗೇಡರಿಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ಕಂಡು ಬಂದ  ಬಳಿಕ ನೇತ್ರಾವತಿ ನೀರಿನಲ್ಲಿ ಮೃತದೇಹ ಪತ್ತೆಯಾದ ಘಟನೆ ಸಂಭವಿಸಿದ್ದು, ಮರಣದ ಬಗ್ಗೆ ಸಂಶಯ ವ್ಯಕ್ತಪಡಿಸಿ ಮೃತನ ಕುಟುಂಬಸ್ಥರು ಗುರುವಾರ ಬೆಳಿಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. 

ನವದೆಹಲಿಯಲ್ಲಿ ಬಿಜೆಪಿ ಹಿರಿಯ ಮುಖಂಡರನ್ನು ಭೇಟಿ ಮಾಡಿದ ಸಂಸದ ಬ್ರಿಜೇಶ್ ಚೌಟ

Posted by Vidyamaana on 2024-06-09 16:20:13 |

Share: | | | | |


ನವದೆಹಲಿಯಲ್ಲಿ ಬಿಜೆಪಿ ಹಿರಿಯ ಮುಖಂಡರನ್ನು ಭೇಟಿ ಮಾಡಿದ ಸಂಸದ ಬ್ರಿಜೇಶ್ ಚೌಟ

ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನವದೆಹಲಿಯಲ್ಲಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ.

ಮಾಜಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಜನರಲ್ ವಿ.ಕೆ. ಸಿಂಗ್ ಅವರನ್ನು ಸೌಹಾರ್ದ ಭೇಟಿ ಮಾಡಿದ ಬ್ರಿಜೇಶ್ ಚೌಟ ಕೆಲವು ಹೊತ್ತು ಮಾತುಕತೆ ನಡೆಸಿದ್ದಾರೆ.

ವಿದ್ಯುತ್‌ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ;ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿ ಮೃತ್ಯು ಹಲವರಿಗೆ ಗಾಯ

Posted by Vidyamaana on 2023-09-18 09:15:17 |

Share: | | | | |


ವಿದ್ಯುತ್‌ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ;ವಿವಾಹ ನಿಶ್ಚಿತಾರ್ಥವಾಗಿದ್ದ   ಯುವತಿ ಮೃತ್ಯು ಹಲವರಿಗೆ ಗಾಯ

ಬಜಪೆ: ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ಬಂಗ್ಲೆಗುಡ್ಡೆಯಿಂದ ಗುರುಪುರ ಪೇಟೆಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರಣ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ರವಿವಾರ ಮಧ್ಯಾಹ್ನ 2 ಗಂಟೆಗೆ ಸಂಭವಿಸಿದೆ.ಅರ್ಕುಳ ತುಪ್ಪೆಕಲ್ಲಿನ ಕುಟುಂಬವೊಂದು ಆಟೋ ರಿಕ್ಷಾ ಮೂಲಕ ಅದ್ಯಪಾಡಿ ದೇವಸ್ಥಾನಕ್ಕೆ ತೆರಳಿ ಹಿಂದಿರುತ್ತಿದ್ದ ವೇಳೆ ಗುರುಪುರ ಬಂಗ್ಲೆಗುಡ್ಡೆ ಇಳಿಜಾರು ರಸ್ತೆಯಾಗಿ ಅಣೆಬಳಿಯ ತಿರುವಿನಲ್ಲಿ ಆಟೋ ರಿಕ್ಷಾ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿತ್ತು. ಯುವತಿ ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತಪಟ್ಟು, ಚಾಲಕ ಸಹಿತ 5 ಮಂದಿ ಗಾಯಗೊಂಡಿದ್ದಾರೆ.ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ. ಪ್ರಸ್ತುತ ಮೀನಾಕ್ಷಿ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಬಜಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.ವಿವಾಹ ನಿಶ್ಚಿತಾರ್ಥವಾಗಿತ್ತು

ಮೃತ ಯುವತಿ ಪ್ರಿಯಾ ಅವರಿಗೆ ವಿವಾಹ ನಿಶ್ಚಿತಾರ್ಥವಾಗಿದ್ದು, ಮುಂದಿನ ವರ್ಷ ಜ. 4ರಂದು ಮದುವೆಗೆ ದಿನ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಮಂದಿ ಮದುವೆಯ ಸಿದ್ಧತೆಗಳನ್ನು ಕೂಡ ಮಾಡಿಕೊಂಡಿದ್ದರು. ಈ ನಡುವೆ ದುರ್ಘ‌ಟನೆ ಸಂಭವಿಸಿದೆ.

ಜೂ 13 : ವಿಟ್ಲ : The Knowledge Hub ಟ್ಯೂಷನ್ ಸೆಂಟರ್ ಶುಭಾರಂಭ

Posted by Vidyamaana on 2024-06-12 17:22:09 |

Share: | | | | |


ಜೂ 13 : ವಿಟ್ಲ : The Knowledge Hub ಟ್ಯೂಷನ್ ಸೆಂಟರ್ ಶುಭಾರಂಭ

ವಿಟ್ಲ: The Knowledge Hub ಟ್ಯೂಷನ್ ಸೆಂಟರ್ ಜೂನ್ 13 ರಂದು ಗುರುವಾರ 10 ಘಂಟೆಗೆ ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿ ಬಿಲ್ಡಿಂಗ್ ನಲ್ಲಿ ಶುಭಾರಂಭಗೊಳ್ಳಲಿದೆ. 

ಇಲ್ಲಿ ಎಲ್ ಕೆ ಜಿ ಯಿಂದ ಪಿಯುಸಿ ವರೆಗಿನ ಮಕ್ಕಳಿಗೆ ಎಲ್ಲಾ ವಿಷಯದ ಬಗ್ಗೆ ಟ್ಯೂಶನ್ ನೀಡಲಾಗುತ್ತದೆ. ಸಂಜೆ 5 ಗಂಟೆಯಿಂದ 7.30 ವರೆಗೆ ಟ್ಯೂಶನ್ ನೀಡಲಾಗುತ್ತದೆ. ವಿವಿಧ ಕಾಲೇಜ್ ಗಳಲ್ಲಿ ವ್ಯಾಸಂಗ ಮಾಡಿ ಅನುಭವ ಇರುವ ಶಿಕ್ಷಕರು ತರಬೇತಿ ನೀಡಲಿದ್ದಾರೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ, ವಿಶೇಷ ಹೆಚ್ಚಿನ ಶಿಕ್ಷಕರನ್ನು ನಿಯೋಜಿಸಿ ತರಬೇತಿ ನೀಡಲಾಗುತ್ತದೆ. ಟ್ಯೂಶನ್ ಜತೆಯಲ್ಲಿ ಸ್ಕಿಲ್ ಡೆವಲಂಪ್ ಮೆಂಟ್ ಸೇರಿದಂತೆ  ವಿದ್ಯಾರ್ಥಿಗಳಿಗೆ  ಕಲಿಕೆಗೆ ಪೂರಕವಾಗುವ ವಿಷಯಗಳನ್ನು ತಿಳಿಸಿ ಕೊಡಲಾಗುತ್ತದೆ. 

ಉದ್ಯೋಗ ಮಾಹಿತಿ : 3500 ಅಗ್ನಿವೀರರ ನೇಮಕಾತಿಗೆ ಅರ್ಜಿ ಆಹ್ವಾನ ಇಲ್ಲಿದೆ ಮಾಹಿತಿ

Posted by Vidyamaana on 2023-07-29 07:37:54 |

Share: | | | | |


ಉದ್ಯೋಗ ಮಾಹಿತಿ : 3500 ಅಗ್ನಿವೀರರ ನೇಮಕಾತಿಗೆ ಅರ್ಜಿ ಆಹ್ವಾನ ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ವಾಯುಪಡೆಯು ಅಗ್ನಿಪಥ್ ಯೋಜನೆಯಡಿ ಅಗ್ನಿವೀರವಾಯು ಪ್ರವೇಶಕ್ಕಾಗಿ ಆಯ್ಕೆ ಪರೀಕ್ಷೆಗೆ ಅವಿವಾಹಿತ ಭಾರತೀಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆಆಸಕ್ತ ಅಭ್ಯರ್ಥಿಗಳು agnipathvayu.cdac.in ಗಂಟೆಗೆ ಐಎಎಫ್ ಅಗ್ನಿವೀರವಾಯು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.ನೋಂದಣಿ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನಾಂಕವಾಗಿದೆ.


ವಯಸ್ಸಿನ ಮಿತಿ : ಅಭ್ಯರ್ಥಿಗಳು ಜೂನ್ 27, 2003 ರಿಂದ ಡಿಸೆಂಬರ್ 27, 2006 ರ ನಡುವೆ ಜನಿಸಿರಬೇಕು. ಒಂದು ವೇಳೆ, ಅಭ್ಯರ್ಥಿಯು ಆಯ್ಕೆ ಪ್ರಕ್ರಿಯೆಯ ಎಲ್ಲಾ ಹಂತಗಳನ್ನು ತೇರ್ಗಡೆಯಾದರೆ, ದಾಖಲಾತಿಯ ದಿನಾಂಕದಂದು ಗರಿಷ್ಠ ವಯಸ್ಸಿನ ಮಿತಿ 21 ವರ್ಷಗಳು ಆಗಿರಬೇಕು.


ಶೈಕ್ಷಣಿಕ ಅರ್ಹತೆ ವಿಜ್ಞಾನ ವಿಷಯಗಳು : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಗಳಿಂದ ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ನೊಂದಿಗೆ ಇಂಟರ್ ಮೀಡಿಯೇಟ್ / 10 + 2 / ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ಇಂಗ್ಲಿಷ್ ನಲ್ಲಿ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.ಅಥವಾ


ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಸಂಸ್ಥೆಯಿಂದ ಎಂಜಿನಿಯರಿಂಗ್ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ (ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್ / ಆಟೋಮೊಬೈಲ್ / ಕಂಪ್ಯೂಟರ್ ಸೈನ್ಸ್ / ಇನ್ಸ್ಟ್ರುಮೆಂಟೇಶನ್ ಟೆಕ್ನಾಲಜಿ / ಇನ್ಫರ್ಮೇಷನ್ ಟೆಕ್ನಾಲಜಿ) ಅನ್ನು ಒಟ್ಟು 50% ಅಂಕಗಳೊಂದಿಗೆ ಮತ್ತು ಡಿಪ್ಲೊಮಾ ಕೋರ್ಸ್ನಲ್ಲಿ ಇಂಗ್ಲಿಷ್ನಲ್ಲಿ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು (ಅಥವಾ ಡಿಪ್ಲೊಮಾ ಕೋರ್ಸ್ನಲ್ಲಿ ಇಂಗ್ಲಿಷ್ ಒಂದು ವಿಷಯವಲ್ಲದಿದ್ದರೆ ಇಂಟರ್ಮೀಡಿಯೆಟ್ / ಮೆಟ್ರಿಕ್ಯುಲೇಷನ್ನಲ್ಲಿ).ಅಥವಾ


ವೃತ್ತಿಪರವಲ್ಲದ ವಿಷಯದೊಂದಿಗೆ ಎರಡು ವರ್ಷಗಳ ವೃತ್ತಿಪರ ಕೋರ್ಸ್ ಅನ್ನು ಉತ್ತೀರ್ಣರಾಗಿರಬೇಕು. ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಗಳಿಂದ ಭೌತಶಾಸ್ತ್ರ ಮತ್ತು ಗಣಿತವನ್ನು ಒಟ್ಟು 50% ಅಂಕಗಳೊಂದಿಗೆ ಮತ್ತು ವೃತ್ತಿಪರ ಕೋರ್ಸ್ನಲ್ಲಿ ಇಂಗ್ಲಿಷ್ನಲ್ಲಿ 50% ಅಂಕಗಳೊಂದಿಗೆ (ಅಥವಾ ವೃತ್ತಿಪರ ಕೋರ್ಸ್ನಲ್ಲಿ ಇಂಗ್ಲಿಷ್ ಒಂದು ವಿಷಯವಲ್ಲದಿದ್ದರೆ ಇಂಟರ್ಮೀಡಿಯೆಟ್ / ಮೆಟ್ರಿಕ್ಯುಲೇಷನ್ನಲ್ಲಿ) ಪಡೆದಿರಬೇಕು.


ವಿಜ್ಞಾನ ವಿಷಯಗಳನ್ನು ಹೊರತುಪಡಿಸಿ ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಗಳಿಂದ ಯಾವುದೇ ಸ್ಟ್ರೀಮ್ / ವಿಷಯಗಳಲ್ಲಿ ಇಂಟರ್ಮೀಡಿಯೇಟ್ / 10 + 2 / ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಮತ್ತು ಇಂಗ್ಲಿಷ್ನಲ್ಲಿ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಅಥವಾ ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಗಳಿಂದ ಕನಿಷ್ಠ 50% ಅಂಕಗಳೊಂದಿಗೆ ಎರಡು ವರ್ಷಗಳ ವೃತ್ತಿಪರ ಕೋರ್ಸ್ ಅನ್ನು ಉತ್ತೀರ್ಣರಾಗಿರಬೇಕು ಮತ್ತು ವೃತ್ತಿಪರ ಕೋರ್ಸ್ನಲ್ಲಿ ಇಂಗ್ಲಿಷ್ನಲ್ಲಿ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು (ಅಥವಾ ವೃತ್ತಿಪರ ಕೋರ್ಸ್ನಲ್ಲಿ ಇಂಗ್ಲಿಷ್ ಒಂದು ವಿಷಯವಲ್ಲದಿದ್ದರೆ ಇಂಟರ್ಮೀಡಿಯೆಟ್ / ಮೆಟ್ರಿಕ್ಯುಲೇಷನ್ನಲ್ಲಿ).


ವೈದ್ಯಕೀಯ ಮಾನದಂಡಗಳು : ಅಗ್ನಿವೀರವಾಯು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಸಾಮಾನ್ಯ ವೈದ್ಯಕೀಯ ಮಾನದಂಡಗಳು ಈ ಕೆಳಗಿನಂತಿವೆ.


ಎತ್ತರ ಪುರುಷ ಅಭ್ಯರ್ಥಿಗಳಿಗೆ: ಕನಿಷ್ಠ ಎತ್ತರ 152.5 ಸೆಂ.ಮೀ. ಮಹಿಳಾ ಅಭ್ಯರ್ಥಿಗಳಿಗೆ: ಕನಿಷ್ಠ ಎತ್ತರ 152 ಸೆಂ.ಮೀ. ಉತ್ತರಾಖಂಡದ ಈಶಾನ್ಯ ಅಥವಾ ಗುಡ್ಡಗಾಡು ಪ್ರದೇಶಗಳಿಗೆ ಸೇರಿದ ಅಭ್ಯರ್ಥಿಗಳಿಗೆ, ಕನಿಷ್ಠ ಎತ್ತರ 147 ಸೆಂ.ಮೀ. ಲಕ್ಷದ್ವೀಪದ ಅಭ್ಯರ್ಥಿಗಳ ವಿಷಯದಲ್ಲಿ, ಕನಿಷ್ಠ ಎತ್ತರ 150 ಸೆಂ.ಮೀ.


ತೂಕ: ಎತ್ತರ ಮತ್ತು ವಯಸ್ಸಿಗೆ ಅನುಗುಣವಾಗಿ.


ಎದೆ: ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ಎದೆಯ ಗೋಡೆಯು ಕನಿಷ್ಠ 5 ಸೆಂ.ಮೀ ವಿಸ್ತರಣೆಯೊಂದಿಗೆ ಉತ್ತಮ ಅನುಪಾತದಲ್ಲಿರಬೇಕು.


ಶ್ರವಣ: ಅಭ್ಯರ್ಥಿಯು ಸಾಮಾನ್ಯ ಶ್ರವಣವನ್ನು ಹೊಂದಿರಬೇಕು, ಅಂದರೆ ಪ್ರತಿ ಕಿವಿಯಿಂದ 6 ಮೀಟರ್ ದೂರದಿಂದ ಬಲವಂತದ ಪಿಸುಗುಟ್ಟುವಿಕೆಯನ್ನು ಪ್ರತ್ಯೇಕವಾಗಿ ಕೇಳಲು ಸಾಧ್ಯವಾಗುತ್ತದೆ.


ದಂತ: ಆರೋಗ್ಯಕರ ಒಸಡುಗಳು, ಉತ್ತಮ ಹಲ್ಲುಗಳು ಮತ್ತು ಕನಿಷ್ಠ 14 ಹಲ್ಲಿನ ಅಂಕಗಳನ್ನು ಹೊಂದಿರಬೇಕು.


ವೇತನ ಶ್ರೇಣಿ : ಅಗ್ನಿವೀರವಾಯು ಅವರಿಗೆ ಅವರ ಮಾಸಿಕ ಕೊಡುಗೆ ಮತ್ತು ಅವರ ನಿಶ್ಚಿತಾರ್ಥದ ಅವಧಿ ಪೂರ್ಣಗೊಂಡ ನಂತರ ಸರ್ಕಾರದಿಂದ ಸಮಾನ ಕೊಡುಗೆಯನ್ನು ಒಳಗೊಂಡ ಒಂದು ಬಾರಿಯ ಸೇವಾ ನಿಧಿ ಪ್ಯಾಕೇಜ್ ಅನ್ನು ಈ ಕೆಳಗಿನಂತೆ ನೀಡಲಾಗುವುದು:ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ: https://agnipathvayu.cdac.in/AV/img/upcoming/AGNIVEER_VAYU_01-2024.pdf



Leave a Comment: