ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಇಷ್ಟು ದಿನ ಪಾಸಾಗ್ತಿತ್ತು ಇನ್ನು ಕಷ್ಟ - ವಿಧಾನಸೌಧದಲ್ಲಿ ನಕಲಿ ಪಾಸ್ ಗಳದ್ದೇ ಕಾರುಬಾರು

Posted by Vidyamaana on 2023-07-15 10:49:03 |

Share: | | | | |


ಇಷ್ಟು ದಿನ ಪಾಸಾಗ್ತಿತ್ತು ಇನ್ನು ಕಷ್ಟ - ವಿಧಾನಸೌಧದಲ್ಲಿ ನಕಲಿ ಪಾಸ್ ಗಳದ್ದೇ ಕಾರುಬಾರು

ಬೆಂಗಳೂರು: ಇತ್ತೀಚೆಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸಭೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಕುರ್ಚಿಯಲ್ಲಿ ಕುಳಿತ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿಧಾನಸೌಧ ಪ್ರವೇಶ ದ್ವಾರದಲ್ಲಿ ಪೊಲೀಸರು ತಪಾಸಣೆ ಚುರುಕುಗೊಳಿಸಿದ್ದು, ಕಳೆದ ನಾಲ್ಕೈದು ದಿನಗಳಲ್ಲಿ 250ಕ್ಕೂ ಹೆಚ್ಚು ನಕಲಿ ಪಾಸ್‌ ಗಳು ಪತ್ತೆಯಾಗಿವೆ. ಅಲ್ಲದೆ, ಶಾಸಕರು, ಸಚಿವರ ಹೆಸರಿನ ಪಾಸ್‌ಗಳನ್ನು ಕಲರ್‌ ಜೆರಾಕ್ಸ್‌ ಮಾಡಿಸಿ ಭದ್ರತಾ ಸಿಬ್ಬಂದಿಗೆ ಯಾಮಾರಿಸುತ್ತಿದ್ದ ಸಂಚು ಬಹಿರಂಗಗೊಂಡಿದೆ.ವಿಧಾನಸೌಧ ಪ್ರವೇಶಕ್ಕೆ ಶಾಸಕರು, ಸಚಿವರಿಗೆ ಗುರುತಿನ ಚೀಟಿ ನೀಡಲಾಗುತ್ತದೆ. ಅದೇ ರೀತಿ ಅವರ ಸಿಬ್ಬಂದಿ ಮತ್ತು ವಾಹನಗಳಿಗೂ ಅಧಿಕೃತ ಪಾಸ್‌ ನೀಡಲಾಗುತ್ತದೆ. ಅದನ್ನು ದುರ್ಬಳಕೆ ಮಾಡಿಕೊಳ್ಳುವ ವಂಚಕರು, ಈ ಪಾಸ್‌ಗಳನ್ನು ದುರ್ಬಳಕೆ ಮಾಡಿಕೊಂಡು ಕಲರ್‌ ಜೆರಾಕ್ಸ್‌ ಮಾಡಿ ಒಳ ಪ್ರವೇಶಿಸುತ್ತಿರುವುದು ಪತ್ತೆಯಾಗಿದೆ. ಹೀಗೆ ಕಳೆದ 4-5 ದಿನಗಳಲ್ಲಿ ಸುಮಾರು 300 ಮಂದಿ ಈ ರೀತಿ ನಕಲಿ ಪಾಸ್‌ಗಳನ್ನು ಬಳಸಿಕೊಂಡು ವಿಧಾನಸೌಧ ಪ್ರವೇಶಿಸಿರುವುದು ಪತ್ತೆಯಾಗಿದೆ.ನಕಲಿ ಪಾಸ್‌ಗಳು ಮಾತ್ರವಲ್ಲ, ಅವಧಿ ಮೀರಿದ ಪಾಸ್‌ಗಳು ತಪಾಸಣೆ ವೇಳೆ ಸಿಕ್ಕಿವೆ. ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದ್ದು, ಜನಪ್ರತಿನಿಧಿಗಳು ಮತ್ತು ಅವರ ಸಿಬ್ಬಂದಿಗೂ ಮಾಹಿತಿ ನೀಡಿ ನಕಲಿ ಪಾಸ್‌ಗಳ ಕಡಿವಾಣಕ್ಕೆ ಸಹಾಯ ನೀಡುವಂತೆ ಕೋರಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.


ಜುಲೈ 10ರಂದು ಬಜೆಟ್‌ ಮಂಡನೆ ವೇಳೆ ತಿಪ್ಪೇರುದ್ರಸ್ವಾಮಿ ಎಂಬಾತ ದೇವದುರ್ಗ ಶಾಸಕಿ ಕೆರೆಮ್ಮ ಸ್ಥಾನದಲ್ಲಿ ಕೆಲ ಹೊತ್ತು ಕುಳಿತುಕೊಂಡಿರುವುದು ಪತ್ತೆಯಾಗಿತ್ತು. ಹೀಗಾಗಿ ವಿಧಾನಸೌಧ ಭದ್ರತಾ ಉಸ್ತುವಾರಿ ವಹಿಸಿಕೊಂಡಿದ್ದ ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಡಾ ಎಸ್‌ .ಡಿ.ಶರಣಪ್ಪ, ಎಲ್ಲ ಪ್ರವೇಶ ದ್ವಾರದಲ್ಲಿ ತಪಾಸಣೆ ಬಿಗಿಗೊಳಿಸಿದರು.



ಮತ್ತೂಂದೆಡೆ ಅದೇ ದಿನ ಜು. 10ರಂದು ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಉದ್ಯೋಗಿ ಬ್ಯಾಗಿನಲ್ಲಿ ಚಾಕು ಇರುವುದು ಪತ್ತೆಯಾಗಿದ್ದು, ಪೊಲೀಸ್‌ ವಿಚಾರಣೆ ವೇಳೆ ಕ್ರಿಮಿನಲ್‌ ಉದ್ದೇಶವಿಲ್ಲದಿರುವುದು ಕಂಡು ಬಂದಿದ್ದರಿಂದ ಮುಚ್ಚಳಿಕೆ ಪತ್ರ ಬರೆಸಿ ಪೊಲೀಸರು ಬಿಟ್ಟು ಕಳುಹಿಸಿದ್ದರು. ಹೀಗಾಗಿ ವಿಧಾನಸೌಧಕ್ಕೆ ಪ್ರವೇಶಿಸುವ ಎಲ್ಲಾ ಗೇಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ತಪಾಸಣೆ ಬಿಗಿಗೊಳಿಸುವಂತೆ ಸೂಚಿಸಲಾಗಿದೆ.ಅಲ್ಲದೆ, ಬ್ಯಾಗ್‌ ಸೇರಿ ಇತರೆ ವಸ್ತುಗಳನ್ನು ಇಟ್ಟುಕೊಂಡು ಅನುಮಾನಸ್ಪದವಾಗಿ ಬರುವ ಎಲ್ಲರನ್ನು ಲೋಹಪರಿಶೋಧಕ ಯಂತ್ರಗಳ ಪರೀಕ್ಷೆ ಒಳಪಡಿಸಬೇಕು. ಅಲ್ಲದೆ, ಬ್ಯಾಗ್‌ಗಳನ್ನು ಕಡ್ಡಾಯವಾಗಿ ಸ್ಕಾನಿಂಗ್‌ಗೆ ಒಳಪಡಿಸಬೇಕು. ಅಧಿಕೃತ ಗುರುತಿನ ಚೀಟಿ ಅಥವಾ ಪಾಸ್‌ ಇದ್ದರೆ ಮಾತ್ರ ಒಳಪ್ರವೇಶಿಸಲು ಬಿಡಬೇಕು ಎಂದು ಮಾರ್ಷಲ್‌ಗ‌ಳಿಗೂ ಖಡಕ್‌ ಎಚ್ಚರಿಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.


ಈ ಕುರಿತು ಮಾಹಿತಿ ನೀಡಿದ ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಡಾ ಎಸ್‌.ಡಿ.ಶರಣಪ್ಪ, ಮುಂದಿನ ದಿನಗಳಲ್ಲಿ ನಕಲಿ ಪಾಸ್‌ ಬಳಸಿದರೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಇದು ಕಾರ್ತಿಕ್ – ಶರಣ್ಯ ದುರಂತ ಪ್ರೇಮ ಕಥೆ! ಪ್ರೇಯಸಿ ಸಾವಿನ ಸುದ್ದಿ ಕೇಳಿ ಊರಿಗೆ ಬಂದು ರೈಲಿಗೆ ತಲೆಕೊಟ್ಟ ಪ್ರೇಮಿ

Posted by Vidyamaana on 2024-05-20 14:36:57 |

Share: | | | | |


ಇದು ಕಾರ್ತಿಕ್ – ಶರಣ್ಯ ದುರಂತ ಪ್ರೇಮ ಕಥೆ! ಪ್ರೇಯಸಿ ಸಾವಿನ ಸುದ್ದಿ ಕೇಳಿ ಊರಿಗೆ ಬಂದು ರೈಲಿಗೆ ತಲೆಕೊಟ್ಟ ಪ್ರೇಮಿ

ಮಂಗಳೂರು, ಮೇ.20: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ತಿಳಿದ ಯುವಕನೊಬ್ಬ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದುದನ್ನು ಬಿಟ್ಟು ಬಂದು ತನ್ನ ಊರಿನಲ್ಲೇ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಬಳಿ ನಡೆದಿದೆ.

ಮೂಡುಬಿದಿರೆ ಸಮೀಪದ ಮಾರ್ಪಾಡಿ ಗ್ರಾಮದ ನಾಗರಕಟ್ಟೆ ಅಬ್ಬಕ್ಕ ನಗರದ ನಿವಾಸಿ ಹರೀಶ್ ಕೋಟ್ಯಾನ್ ಎಂಬವರ ಪುತ್ರಿ ಶರಣ್ಯ(19) ಮತ್ತು ಮೂಲ್ಕಿಯ ಅತಿಕಾರಿಬೆಟ್ಟು ಮೈಲೊಟ್ಟು ನಿವಾಸಿ ಕಾರ್ತಿಕ್ ಪೂಜಾರಿ (20) ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರು ಮೂಲ್ಕಿಯ ಕಾಲೇಜು ಒಂದರಲ್ಲಿ ಸಹಪಾಠಿಗಳಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಸಣ್ಣ ವಯಸ್ಸಿನವರಾದ ಕಾರಣ ಮದುವೆಗೆ ಮನೆಯವರ ಒಪ್ಪಿಗೆ ಇರಲಿಲ್ಲ.

ಚಿಕಿತ್ಸೆ ಫಲಕಾರಿಯಾಗದೆ ಮರೀಲ್ ನಿವಾಸಿ ರಫೀಕ್ ನಿಧನ

Posted by Vidyamaana on 2024-03-03 04:55:55 |

Share: | | | | |


ಚಿಕಿತ್ಸೆ ಫಲಕಾರಿಯಾಗದೆ ಮರೀಲ್ ನಿವಾಸಿ ರಫೀಕ್ ನಿಧನ

ನಿಂತಿದ್ದ ರಿಕ್ಷಾ ಹಿಮ್ಮುಖವಾಗಿ ಚಲಿಸಿ ಆಪಘಾತಗೊಂಡು, ಗಂಭೀರ ಗಾಯಗೊಂಡಿದ್ದ ರಫೀಕ್ ಮೃತ್ಯು!!

ಭಾನುವಾರ ಮಧ್ಯಾಹ್ನ ನಗುವಿನ ಮೋಡಿಗಾರ ರಫೀಕ್ ಅಂತಿಮ ನಮನ 

ಪುತ್ತೂರು: ರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕೂರ್ನಡ್ಕ ಮರೀಲ್  ಐ.ಕೆ.ಕಂಫೌಂಡ್ ನಿವಾಸಿ ದಿ.ಇಬ್ರಾಹಿಂ ರವರ ಮಗ ರಫೀಕ್  ರವರು ಮಾ. 2ರಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.


ksrtc ಬಸ್ ನಿಲ್ದಾಣದ ಅಂದಿನ A M ಕಾಂಪ್ಲೆಕ್ಸ್ ನಲ್ಲಿ SKY ಮೊಬೈಲ್ ಅಂಗಡಿ ಯನ್ನು ಹೊಂದ್ದಿದ್ದ ಇವರು, ನಂತರ ರಿಕ್ಷಾ ಚಾಲಕರಾಗಿ ದುಡಿಯುತಿದ್ದರು.


ಕೆಲ ದಿನಗಳ ಹಿಂದೆ ಸಾಮೆತ್ತಡ್ಕದ ತನ್ನ ಅಣ್ಣನ ಮನೆಗೆ ರಿಕ್ಷಾದಲ್ಲಿ ತೆರಳಿದ್ದ ರಫೀಕ್ ಅವರು, ರಿಕ್ಷಾವನ್ನು ಶೆಡ್ ನಲ್ಲಿ ಪಾರ್ಕ್ ಮಾಡಿ ಗೇಟ್ ಹಾಕಲೆಂದು ತೆರಳಿದ್ದರು. ಅಷ್ಟರಲ್ಲಿ ನಿಲ್ಲಿಸಿದ್ದ ರಿಕ್ಷಾ ಹಠಾತ್ ಹಿಮ್ಮುಖವಾಗಿ ಚಲಿಸಿ, ಗೇಟ್ ಹಾಕುತ್ತಿದ್ದ ರಫೀಕ್ ಅವರಿಗೆ ಢಿಕ್ಕಿ‌ ಹೊಡೆದಿದೆ. ಗೇಟ್ ಹಾಗೂ ರಿಕ್ಷಾ ನಡುವೆ ಸಿಲುಕಿದ ರಫೀಕ್ ಅವರು, ಗಂಭೀರ ಗಾಯಗೊಂಡಿದ್ದರು.


ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಾ. 2ರಂದು ರಾತ್ರಿ ಕೊನೆಯುಸಿರೆಳೆದಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸದಾ ನಗುಮೊಗದ ರಫೀಕ್ ಅವರು, ಎಲ್ಲರನ್ನು ನಗಿಸುತ್ತಾ, ಅವರ ನಗುವಲ್ಲೇ ಖುಷಿ ಕಂಡವರು. ಎಲ್ಲರೊಂದಿಗೆ ಸಮಾನವಾಗಿ ಬೆರೆಯುತ್ತಿದ್ದ ರಫೀಕ್, ಕೊನೆಯುಸಿರೆಳೆದಿದ್ದಾರೆ. ಅವರ ಮೃತದೇಹವನ್ನು ಭಾನುವಾರ ಮಧ್ಯಾಹ್ನ ಮರೀಲಿನ ತಮ್ಮ ಸ್ವಗೃಹಕ್ಕೆ ತರಲಾಗುವುದು ಎಂದು ಕುಟುಂಭಿಕರು ತಿಳಿಸಿದ್ದಾರೆ. 


ಮೃತರು ಪತ್ನಿ, ಮೂವರು ಗಂಡು ಮಕ್ಕಳು ಮತ್ತು ಸಹೋದರರಾದ ಅಬ್ದುಲ್ ಅಝೀಝ್, ಅಬ್ದುಲ್ ರಝಾಕ್, ಅಕಾಶ್ ಪೂಟ್ ವೇರ್ ಮಾಲಕ ಲತೀಫ್ ಮತ್ತು ಝೀಯಾದ್ ಅವರನ್ನು ಅಗಲಿದ್ದಾರೆ.

Miss World 2024; ಜೆಕ್‌ ಗಣರಾಜ್ಯದ ಚೆಲುವೆ ಕ್ರಿಸ್ಟಿನಾ ಸಿಸ್ಕೋವಾಗೆ ಪ್ರಶಸ್ತಿ ಮಂಗಳೂರು ಮೂಲದ ಸಿನಿ ಶೆಟ್ಟಿಗೆ ತಪ್ಪಿದ ಪಟ್ಟ

Posted by Vidyamaana on 2024-03-10 08:38:57 |

Share: | | | | |


Miss World 2024; ಜೆಕ್‌ ಗಣರಾಜ್ಯದ ಚೆಲುವೆ ಕ್ರಿಸ್ಟಿನಾ ಸಿಸ್ಕೋವಾಗೆ ಪ್ರಶಸ್ತಿ ಮಂಗಳೂರು ಮೂಲದ ಸಿನಿ ಶೆಟ್ಟಿಗೆ ತಪ್ಪಿದ ಪಟ್ಟ

ಮುಂಬೈ: ಮುಂಬೈನಲ್ಲಿ ಶನಿವಾರ ನಡೆದ 71ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಜೆಕ್‌ ಗಣರಾಜ್ಯದ ಕ್ರಿಸ್ಟಿನಾ ಸಿಸ್ಕೋವಾ ಪಟ್ಟ ಗೆದ್ದುಕೊಂಡರು.


28 ವರ್ಷಗಳ ನಂತರ ಭಾರತದಲ್ಲಿ ಈ ಸ್ಪರ್ಧೆ ನಡೆದಿದ್ದು, ಕ್ರಿಸ್ಟಿನಾ 111 ಸ್ಪರ್ಧಿಗಳನ್ನು ಹಿಮ್ಮೆಟ್ಟಿಸಿ ಗೆಲುವು ಸಾಧಿಸಿದ್ದಾರೆ. ಪೊಲೆಂಡ್‌ ಮೂಲದ 2022ನೇ ಸಾಲಿನ ವಿಶ್ವ ಸುಂದರಿ ಕರೋಲಿನಾ ಬಿಲಾವೆಸ್ಕಾ ಅವರು ಕ್ರಿಸ್ಟಿನಾಗೆ ವಿಶ್ವ ಸುಂದರಿ ಕಿರೀಟವನ್ನು ತೊಡಿಸಿದ್ದಾರೆ.

ಈ ಸಂದರ್ಭದಲ್ಲಿ ಜೆಕ್‌ ಸುಂದರಿ ಕ್ರಿಸ್ಟಿನಾ ಸಿಸ್ಕೋವಾ ಸಂತಸದ ಕಂಬನಿಗರೆದು ಹರ್ಷ ವ್ಯಕ್ತ ಪಡಿಸಿದ್ದಾರೆ.

ಸಿನಿ ಶೆಟ್ಟಿಗೆ ತಪ್ಪಿದ ಪಟ್ಟ:

ಪ್ರಶಸ್ತಿ ಗೆಲ್ಲಲು ಕರ್ನಾಟಕ ಮೂಲದ ಸಿನಿ ಶೆಟ್ಟಿ ವಿಫ‌ಲರಾಗಿದ್ದಾರೆ. ಅಂತಿಮ ಸುತ್ತಿನವರೆಗೂ ತೇರ್ಗಡೆಯಾಗುತ್ತಾ ಬಂದ ಅವರು, ಅಗ್ರ 8ರ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಕೊನೆಗೆ ನಾಲ್ವರ ಆಯ್ಕೆ ವೇಳೆ ಸಿನಿ ಶೆಟ್ಟಿ ಸ್ಪರ್ಧೆಯಿಂದ ಹೊರಗುಳಿಯಬೇಕಾಯಿತು.

5 ದಿನ ಒಳಗಡೆ ದೇಶ ತೊರೆಯಿರಿ – ಕೆನಡಾ ರಾಯಭಾರಿಗೆ ಭಾರತ ಕಟು ಸಂದೇಶ

Posted by Vidyamaana on 2023-09-19 16:29:41 |

Share: | | | | |


5 ದಿನ ಒಳಗಡೆ ದೇಶ ತೊರೆಯಿರಿ – ಕೆನಡಾ ರಾಯಭಾರಿಗೆ ಭಾರತ ಕಟು ಸಂದೇಶ

ನವದೆಹಲಿ: ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬಂತೆ 5 ದಿನಗಳ ಒಳಗಡೆ ದೇಶವನ್ನು ತೊರೆಯುವಂತೆ ಕೆನಡಾ ರಾಯಭಾರಿಗೆ (Can

non

ian Diplomat) ಭಾರತ ಸೂಚಿಸಿದೆ.ಕೆನಡಾ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಪಾತ್ರವಿದೆ ಎಂದು ಆರೋಪಿಸಿ ಕೆನಡಾದಲ್ಲಿರುವ ಭಾರತೀಯ ರಾಯಭಾರಿಯನ್ನು ಉಚ್ಚಾಟಿಸಿದ ಬೆನ್ನಲ್ಲೇ ಭಾರತ ಸರ್ಕಾರ ಕೆನಡಾ ರಾಯಭಾರಿಗೆ ಸಮನ್ಸ್‌ ಜಾರಿ ಮಾಡಿದೆ.

Re

non

more.....

ರೌಡಿಯ ಹತ್ಯೆಗೆ ಪ್ರೇಮದ ಬಲೆ: ನಂಬಿಸಿ ಕೊಂದ ಸುಂದರಿ ಮಾಡೆಲ್ ಅಂದರ್‌


ಜಿ20 ಶೃಂಗಸಭೆಯ (G20 Summit) ಸಂದರ್ಭದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಖಲಿಸ್ತಾನಿಗಳ ಹಿಂಸಾಚಾರ ಹಾಗೂ ವಿದೇಶಿ ಹಸ್ತಕ್ಷೇಪದ ಕುರಿತು ಮಾತನಾಡಿದ್ದರು. ಈ ಮಾತುಕತೆಯ ಬಳಿಕ ಭಾರತ ಮತ್ತು ಕೆನಡಾದ ಸಂಬಂಧ ಹಳಸಿದೆಸಂಬಂದ ಹಳಸಿದ ಬೆನ್ನಲ್ಲೇ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆಯ ಹಿಂದೆ ಭಾರತ ಕೈವಾಡವಿದೆ ಎಂಬ ಕೆನಡಾ ಆರೋಪವನ್ನು ಭಾರತ ತಿರಸ್ಕರಿಸಿದೆ.


ಈ ಸಂಬಂಧ ಭಾರತದ ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಕೆನಡಾದ ಆರೋಪಗಳು “ಅಸಂಬದ್ಧ ಮತ್ತು ಪ್ರೇರಿತ” ಎಂದು ಬಣ್ಣಿಸಿದೆ. ಇಂತಹ ಆರೋಪಗಳು ನಮ್ಮ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರುತ್ತಿರುವ ಖಲಿಸ್ತಾನಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗುತ್ತವೆ ಎಂದು ಹೇಳಿದೆ.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 6

Posted by Vidyamaana on 2023-09-06 04:26:21 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 6

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 6 ರಂದು

ಬೆಳಿಗ್ಗೆ 10 ಗಂಟೆಗೆ ಯಾದವ ಸಮಾಜ ಪಾಣಾಜೆ ಅಷ್ಟಮಿ

10.30 ಕ್ಕೆ  ಇರ್ದೆ ದೂಮಡ್ಕ ಅಷ್ಟಮಿ

11.30 ಕ್ಕೆ ದರ್ಬೆತ್ತಡ್ಕ‌ಅಷ್ಟಮಿ

  12.30ಕುಂಡಡ್ಕ‌ವಿಷ್ಣುಮೂರ್ತಿ ದೇವಸ್ಥಾನ ಅಷ್ಟಮಿ

1.00 ಕ್ಕೆ ಫ್ರೆಂಡ್ಸ್ ಕ್ಲಬ್ ಮಿತ್ತೂರು‌ಅಷ್ಟಮಿ

ಬಳಿಕ ಬೆಂಗಳೂರು ಪ್ರಯಾಣ



Leave a Comment: